ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿದ ಹೆಸ್ಕಾಂ ಅಧ್ಯಕ್ಷ ಖಾದ್ರಿ. ಶಿಗ್ಗಾವಿ, ಪಟ್ಟಣದ ಹೆಸ್ಕಾಂ ಕಛೇರಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಹೆಸ್ಕಾಂ ನಿಗಮದ ಅಧ್ಯಕ್ಷ ಸೈಯದ್ ಅಜಿಮಪೀರ ಖಾದ್ರಿ ಯವರು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು, ಕಾರ್ಯಕ್ರಮದಲ್ಲಿ ಹೆಸ್ಕಾ ಅಧ್ಯಕ್ಷ ಖಾದ್ರಿಯವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯರಾದ ಜಾಕಿರ್ ಪರಾಷ್,ನಿಂಗಪ್ಪ ಹಳವಳ್ಳಿ, ರಮೇಶ ವನಹಳ್ಳಿ, ಮಂಜುನಾಥ ಮನ್ನಣ್ಣನವರ, ಶಿವಪ್ಪ ಗಂಜಿಗಟ್ಟಿ,ಗುಡ್ಡಪ್ಪ ಬಳ್ಳಾರಿ,ಪಕ್ಕಿರಪ್ಪ ಮಂಚಿನಕೊಪ್ಪ, ನಿಸ್ಸಾರಹ್ಮದ ಮುಲ್ಲಾನವರ, ಮುಸ್ತಾಕ ಅಹ್ಮದ ತಹಸಿಲ್ದಾರ್, ಅಣ್ಣಪ್ಪ ನಡಟ್ಟಿ,ರುದ್ರೇಶ ಗುಡಗೇರಿ, ಮಹೇಶ ಹುಲಸೋಗಿ, ಮಹಾಲಿಂಗಪ್ಪ ಕುಂಬಾರ,,ಸಂಜೀವ ಪಾಳೆದ, ರವಿ ಕೊಣಪ್ಪನವರ,ಇಸ್ಮಾಯಿಲ್ ಅಕ್ಕಿ, ಹೆಸ್ಕಾಂ ಇಲಾಖೆಯ ಅಧಿಕಾರಿಗಳಾದ ಸಿ ಬಿ ಹೋಸಮನಿ, ವಿ ಎಸ್ ಮರಿಗೌಡ್ರ, ಬೀರೆಶಕುಮಾರ ಜಟ್ಟೆಪ್ಪನವರ ಹಾಗೂ ಮುಖಂಡರು ಉಪಸ್ಥಿತರಿದ್ದರು.
ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿದ ಹೆಸ್ಕಾಂ ಅಧ್ಯಕ್ಷ ಖಾದ್ರಿ. ಶಿಗ್ಗಾವಿ, ಪಟ್ಟಣದ ಹೆಸ್ಕಾಂ ಕಛೇರಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಹೆಸ್ಕಾಂ ನಿಗಮದ ಅಧ್ಯಕ್ಷ ಸೈಯದ್ ಅಜಿಮಪೀರ ಖಾದ್ರಿ ಯವರು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು, ಕಾರ್ಯಕ್ರಮದಲ್ಲಿ ಹೆಸ್ಕಾ ಅಧ್ಯಕ್ಷ ಖಾದ್ರಿಯವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯರಾದ ಜಾಕಿರ್ ಪರಾಷ್,ನಿಂಗಪ್ಪ ಹಳವಳ್ಳಿ, ರಮೇಶ ವನಹಳ್ಳಿ, ಮಂಜುನಾಥ ಮನ್ನಣ್ಣನವರ, ಶಿವಪ್ಪ ಗಂಜಿಗಟ್ಟಿ,ಗುಡ್ಡಪ್ಪ ಬಳ್ಳಾರಿ,ಪಕ್ಕಿರಪ್ಪ ಮಂಚಿನಕೊಪ್ಪ, ನಿಸ್ಸಾರಹ್ಮದ ಮುಲ್ಲಾನವರ, ಮುಸ್ತಾಕ ಅಹ್ಮದ ತಹಸಿಲ್ದಾರ್, ಅಣ್ಣಪ್ಪ ನಡಟ್ಟಿ,ರುದ್ರೇಶ ಗುಡಗೇರಿ, ಮಹೇಶ ಹುಲಸೋಗಿ, ಮಹಾಲಿಂಗಪ್ಪ ಕುಂಬಾರ,,ಸಂಜೀವ ಪಾಳೆದ, ರವಿ ಕೊಣಪ್ಪನವರ,ಇಸ್ಮಾಯಿಲ್ ಅಕ್ಕಿ, ಹೆಸ್ಕಾಂ ಇಲಾಖೆಯ ಅಧಿಕಾರಿಗಳಾದ ಸಿ ಬಿ ಹೋಸಮನಿ, ವಿ ಎಸ್ ಮರಿಗೌಡ್ರ, ಬೀರೆಶಕುಮಾರ ಜಟ್ಟೆಪ್ಪನವರ ಹಾಗೂ ಮುಖಂಡರು ಉಪಸ್ಥಿತರಿದ್ದರು.
- ಶಿಗ್ಗಾವಿ ಸವಣೂರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ, ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ದಾವಣಗೆರೆ ಉಪ ಚನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಗೆಲುವು ನಿಶ್ಚಿತ ಎಂದು ಹೇಳಿದರು,1
- ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್ನವರು ಕೋರ್ಟ್ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.1
- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ1
- Post by Santa Dsouza2
- ಕೆ ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು ಈ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸ್ಡಿಎಂಸಿ ಅಧ್ಯಕ್ಷರು ,ಸರ್ವ ಸದಸ್ಯರು ಊರಿನ ಹಿರಿಯರು, ಶಿಕ್ಷಣ ಪ್ರೇಮಿಗಳು, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸರ್ಕಾರಿ ಪ್ರೌಢಶಾಲೆ ಹುಣಶೀಕಟ್ಟಿ1
- ರಾಜ್ಯದಲ್ಲಿ ಭಾರೀ ಬಿಸಿಗಾಳಿ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಏಪ್ರಿಲ್ 29 ರಿಂದ ಮೇ 12 ರವರೆಗೆ ತಾಪಮಾನವು 45°C ರಿಂದ 55°C ವರೆಗೆ ಏರಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಅತ್ಯಾವಶ್ಯಕವಲ್ಲದ ಹೊರಗಿನ ಚಟುವಟಿಕೆಗಳನ್ನು ತಪ್ಪಿಸಿ. ಮುಖ್ಯ ಎಚ್ಚರಿಕೆಗಳು: ಉಸಿರಾಟ ತೊಂದರೆ / ತಲೆ ಸುತ್ತು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಕಾರಿನಲ್ಲಿ ಲೈಟರ್, ಬ್ಯಾಟರಿ, ಪಾನೀಯಗಳು ಇಡಬೇಡಿ ಗ್ಯಾಸ್ ಸಿಲಿಂಡರ್ ಬಿಸಿಲಿನಲ್ಲಿ ಇರಿಸಬೇಡಿ ಸಾಕಷ್ಟು ನೀರು, ಮಜ್ಜಿಗೆ, ತಂಪು ಪಾನೀಯಗಳನ್ನು ಸೇವಿಸಿ ಹೆಚ್ಚುವರಿ ಎಚ್ಚರಿಕೆ: ಬಿಸಿಯಿಂದ ಹಾವು-ಚೇಳುಗಳು ಮನೆಗೆ ಬರಬಹುದಾದ ಸಾಧ್ಯತೆ ಇದೆ — ಜಾಗರೂಕರಾಗಿರಿ AC ಅನ್ನು 24–25°C ನಲ್ಲಿ ಇರಿಸಿ ಅಗತ್ಯವಿದ್ದರೆ ಮಾತ್ರ ಹೊರಗೆ ಹೋಗಿ ಈ ಮಾಹಿತಿ ಬಹಳ ಮುಖ್ಯ! ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ತಕ್ಷಣ ಹಂಚಿಕೊಳ್ಳಿ1
- ಇಳಕಲ್ಲ : ಗ್ಯಾಸ್ ಸಿಲಿಂಡರಗಾಗಿ ೧ ಮೀಟರ್ ಉದಕ್ಕೂ ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ನಗರದ ಎಚ್.ಪಿ.ಗ್ಯಾಸ್ ಗೋಡಾನ್ ಮುಂದೆ ಶನಿವಾರ ಕಂಡು ಬಂದಿತು. ಅಮೇರಿಕಾ , ಇರಾನ್ , ಇಸ್ರೇಲ್ ದೇಶದಲ್ಲಿ ನಡೆಯುತ್ತಿರುವ ಯುದ್ದದಿಂದಾಗಿ ಎಲ್ಪಿಜಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವದ್ದರಿAದ ರಾಜ್ಯದ ಜನರು ಹೈರಾಣಾಗಿದ್ದಾರೆ. ಎಲ್ಪಿಜಿ ಗ್ಯಾಸ್ ಅಭಾವದಿಂದಾಗಿ ಜನರು ಗ್ಯಾಸ್ ಗೋಡಾನ್ ಹತ್ತಿರ ದಿನನಿತ್ಯ ಸುಡುವ ಬಿಸಲಿನಲ್ಲಿ ನಿಂತು ಗ್ಯಾಸ್ ಗಾಗಿ ಕಾಯುತ್ತಿರುವ ಸನ್ನಿವೇಶ ನೋಡಿದರೇ ಹೃದಯ ಚುರು ಎನ್ನುತ್ತಿದೆ, ಸುಡುವ ಬಿಸಿನಲಿನಲ್ಲಿಯೇ ವಯೋವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಒಂದು ದಿನದ ಕೆಲಸವನ್ನು ಬಿಟ್ಟು ಸಿಲಿಂಡರ್ ಗಾಗಿಯೇ ಒಂದು ದಿನ ಕಾಯ್ದು ತೆಗೆದುಕೊಂಡು ಹೋಗುವಂತಹÀ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ಯಾಸ್ ಹೊಡೆತದಿಂದ ಮುಚ್ಚುತ್ತಿರುವ ಹೋಟೆಲ್: ನಗರದಲ್ಲಿನ ದೊಡ್ಡ ದೊಡ್ಡ ಹೋಟೆಲ್ಗಳಿಗು ಗ್ಯಾಸ್ ಬಿಸಿ ತಟ್ಟಿದ್ದರಿಂದ ಕೆಲವೊಂದಿಷ್ಟು ಹೋಟೇಲ್ಗಳಲ್ಲಿ ತಿಂಡಿಗಳು ಸಿಗುತ್ತಿಲ್ಲ, ಕೆಲವೊಂದಿಷ್ಟು ಹೋಟೆಲ್ ಗಳು ಬಂದಾದರೇ, ಇನ್ನೋ ಕೆಲವೊಂದಿಷ್ಟು ಹೋಟೆಲನಲ್ಲಿ ಗ್ಯಾಸ್ ತೆಗೆದು ಸೌದ ಒಲೆಯಿಂದ ಅಂಗಡಿಗಳನ್ನು ನಡೆಸುತ್ತಿದ್ದಾರೆ. * ಇಂತಹ ಸುಡುವ ಬಿಸಲಿನಲ್ಲಿಯೇ ಗ್ಯಾಸ್ ಗಾಗಿ ಕಾಯುತ್ತಿರುವ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಗ್ಯಾಸ್ ಏಜೆನ್ಸಿ ಮಾಲೀಕರು ಅಥವಾ ಸಿಬ್ಬಂದಿ ವರ್ಗದವರು ಮಾಡಿಲ್ಲ - ಮಹಾಂತೇಶ ವಕಲಕುಂಟಿ, ಕರವೇ ಗೌರವಾಧ್ಯಕ್ಷ ಇಳಕಲ್ಲ.1
- ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾಮಸ್ಥರು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ಕೀಲಿ ಮುರಿದು ಗುರುವಾರ ಆಕ್ರೋಶ ಹೊರಹಾಕಿದ್ದಾರೆ. ಮತ್ತಿಗಟ್ಟಿ ಗ್ರಾಮ ಪಂಚಾಯತಿಯಿಂದ ಯಾವುದೇ ಮೂಲಭೂತ ಸೌಕರ್ಯ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯಿತಿಯಿಂದ ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ, ಪಂಚಾಯತ ವತಿಯಿಂದ ಅನುದಾನ ಇಲ್ಲ, ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯ ಸಹ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ . ಮೂಲ ಭೂತ ಸೌಕರ್ಯಗಳನ್ನ ನೀಡದ ಪಂಚಾಯತ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ತಕ್ಷಣವೇ ಎಲ್ಲಾ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿದರು.1