ಕೆಟ್ಟ ವ್ಯಸನಗಳಿಗೆ ದಾಸರಾಗದಿರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಚಿಕ್ಕಬಳ್ಳಾಪುರ, ಆ.1: ಮದ್ಯಪಾನ, ತಂಬಾಕು ಹಾಗೂ ಮಾದಕ ವಸ್ತುಗಳಂತಹ ಕೆಟ್ಟ ವ್ಯಸನಗಳು ವ್ಯಕ್ತಿಯ ಆರೋಗ್ಯ, ಕುಟುಂಬ ಮತ್ತು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತವೆ. ಆದ್ದರಿಂದ ಯಾವುದೇ ದುಷ್ಟಚಟಗಳಿಗೆ ದಾಸರಾಗದೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು ಕರೆ ನೀಡಿದರು. ಚಿಕ್ಕಬಳ್ಳಾಪುರ ತಾಲ್ಲೂಕಿನ ಗುವ್ವಲಕಾನಹಳ್ಳಿಯ ಸೇಟ್ ದಿನ್ನೆ ಸಮೀಪದ ಶ್ರೀನಿವಾಸ್ ಸಪ್ಲೈ ಚೈನ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ “ವ್ಯಸನಮುಕ್ತ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ತಂಬಾಕು ಮತ್ತು ಮದ್ಯದ ಬೆಲೆಗಳು ಹೆಚ್ಚಾಗುತ್ತಿದ್ದರೂ ಅವುಗಳ ಬಳಕೆದಾರರ ಸಂಖ್ಯೆ ಕಡಿಮೆಯಾಗದೇ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸಿಗರೇಟ್ ಪ್ಯಾಕ್ ಮೇಲೆ ಕ್ಯಾನ್ಸರ್ ಕಾರಕಗಳು ಎನ್ನುವ ಹಾಗೆ ಚಿತ್ರಗಳನ್ನು ಹಾಗೂ ಅನಾರೋಗ್ಯಕರ ಎಂದು ಬರೆದಿರುತ್ತದೆ ಬಳಕೆದಾರರು ಇದರ ಬಗ್ಗೆ ವಿವೇಚಿಸಬೇಕು ಎಂದು ಕಿವಿ ಮಾತು ಹೇಳಿದರು. ಪ್ರತಿಯೊಬ್ಬ ವ್ಯಕ್ತಿಯೂ ಯಾವುದೋ ಒಂದು ವಿಷಯದ ಬಗ್ಗೆ ಆಸಕ್ತಿ ಅಥವಾ ವ್ಯಸನ ಹೊಂದಿರುತ್ತಾನೆ. ಕೆಲವರು ಕ್ರೀಡೆ, ಸಂಗೀತ, ಸಾಹಿತ್ಯ, ವ್ಯಾಯಾಮ ಮತ್ತು ಉದ್ಯೋಗದಂತಹ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಆದರೆ ಕೆಲವರು ಅನಿವಾರ್ಯ ಕಾರಣಗಳು ಹಾಗೂ ಕೆಟ್ಟ ಸಹವಾಸಗಳಿಂದ ಮದ್ಯಪಾನ, ತಂಬಾಕು ಮತ್ತು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಾರೆ ಎಂದು ವಿಷಾದಿಸಿದರು. ಡಾ. ಮಹಾಂತ ಶಿವಯೋಗಿಗಳು ಹಲವು ದಶಕಗಳ ಹಿಂದೆಯೇ ಸಮಾಜದಲ್ಲಿನ ದುಷ್ಟಚಟಗಳನ್ನು ನಿರ್ಮೂಲನೆಗೊಳಿಸುವ ಉದ್ದೇಶದಿಂದ ನಡೆಸಿದ ಜಾಗೃತಿ ಕಾರ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ಆದರ್ಶಗಳನ್ನು ಅನುಸರಿಸಿ ಪ್ರತಿಯೊಬ್ಬರೂ ಉತ್ತಮ ಅಭ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆರೋಗ್ಯಕರ ಜೀವನವೇ ವ್ಯಕ್ತಿಯ ಕೌಶಲ್ಯ, ದಕ್ಷತೆ ಮತ್ತು ವೃತ್ತಿಪರ ಯಶಸ್ಸಿಗೆ ಆಧಾರವಾಗಿದ್ದು, ಯುವಜನತೆ ತಮ್ಮ ಪ್ರತಿಭೆಯನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್ ಅವರು ಮಾತನಾಡಿ ಮಾನವ ಜೀವನ ಅಮೂಲ್ಯವಾದದ್ದು. ಅದನ್ನು ಮದ್ಯಪಾನ, ಮಾದಕ ವಸ್ತುಗಳು ಮತ್ತು ಇತರ ದುಷ್ಟಚಟಗಳಿಗೆ ಬಲಿಯಾಗಿ ಹಾಳುಮಾಡಿಕೊಳ್ಳಬಾರದು ವ್ಯಸನಗಳಿಗೆ ಯಾರೂ ಕಾರಣರಲ್ಲ, ವ್ಯಕ್ತಿಯ ಸ್ವಂತ ನಿರ್ಧಾರಗಳೇ ಮುಖ್ಯ ಕಾರಣವಾಗುತ್ತವೆ. ಕೆಟ್ಟ ಪ್ರಲೋಭನೆಗಳು, ಸಹವಾಸ ದೋಷ ಮತ್ತು ಅನಾರೋಗ್ಯಕರ ಕುತೂಹಲಗಳಿಂದ ಅನೇಕರು ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಇದರ ಪರಿಣಾಮವಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಟ್ಟು ಕೆಲವೊಮ್ಮೆ ಮಾರಣಾಂತಿಕ ಕಾಯಿಲೆಗಳಿಗೂ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು. ಕುಡಿತದ ಚಟದಿಂದ ಮೃತಪಟ್ಟ ಯುವಕನ ಕುಟುಂಬದ ದುಸ್ಥಿತಿಯನ್ನು ಕಂಡು ಮನನೊಂದ ಡಾ. ಮಹಾಂತ ಶಿವಯೋಗಿಗಳು “ಮಹಾಂತ ಜೋಳಿಗೆ” ಅಭಿಯಾನ ಆರಂಭಿಸಿ ಸಮಾಜದಲ್ಲಿನ ದುಷ್ಟಚಟಗಳನ್ನು ನಿವಾರಿಸುವ ಮಹತ್ವದ ಕಾರ್ಯ ಕೈಗೊಂಡರು. ಜನರು ತಮ್ಮ ಮದ್ಯ, ತಂಬಾಕು, ಪಾನ್ ಬೀಡಾ ಹಾಗೂ ಇತರ ವ್ಯಸನಕಾರಿ ವಸ್ತುಗಳನ್ನು ಜೋಳಿಗೆಗೆ ಹಾಕಿ ಇನ್ನು ಮುಂದೆ ಬಳಸುವುದಿಲ್ಲ ಎಂದು ಪ್ರತಿಜ್ಞೆ ಮಾಡುವ ಮೂಲಕ ವ್ಯಸನಮುಕ್ತ ಜೀವನಕ್ಕೆ ಪಾದಾರ್ಪಣೆ ಮಾಡುತ್ತಿದ್ದರು. ಜಾತಿ, ಮತ, ಧರ್ಮ ಮತ್ತು ಭಾಷೆಯ ಭೇದವಿಲ್ಲದೆ ಸುಮಾರು 42 ವರ್ಷಗಳ ಕಾಲ ದೇಶ-ವಿದೇಶಗಳಲ್ಲಿ ಸಂಚರಿಸಿ ವ್ಯಸನಗಳ ಮುಕ್ತಿಗೆ ಭಿಕ್ಷೆ ಬೇಡಿದ ಮಹಾಂತ ಶಿವಯೋಗಿಗಳ ಸೇವೆ ಅಪಾರವಾಗಿದೆ ಎಂದು ಅವರು ಹೇಳಿದರು. ಮನೋವೈದ್ಯೆ ಡಾ. ಲಾವಣ್ಯ ಅವರು ತಂಬಾಕು, ಮಾದಕ ವಸ್ತುಗಳು ಮತ್ತು ಮದ್ಯಪಾನದ ದುಷ್ಪರಿಣಾಮಗಳ ಕುರಿತು ಪವರ್ಪಾಯಿಂಟ್ ಪ್ರಾತ್ಯಕ್ಷಿಕೆ (ppt)ಮೂಲಕ ಕಾರ್ಮಿಕರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ವ್ಯಸನದಿಂದ ಬಳಲುತ್ತಿರುವವರು ಅಥವಾ ಅಂತಹ ಸಮಸ್ಯೆ ಎದುರಿಸುತ್ತಿರುವವರ ಬಗ್ಗೆ ಮಾಹಿತಿ ಹೊಂದಿರುವವರು ಟೆಲಿಮಾನಸ್ ಸಹಾಯವಾಣಿ 14416 ಅನ್ನು ಸಂಪರ್ಕಿಸಿ ಉಚಿತ ಸಮಾಲೋಚನೆ ಮತ್ತು ಚಿಕಿತ್ಸಾ ನೆರವು ಪಡೆಯಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಇಲಾಖೆ ವತಿಯಿಂದ 200ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ಮದ್ಯ, ತಂಬಾಕು ಹಾಗೂ ಮಾದಕ ವಸ್ತುಗಳ ಸೇವನೆಯಿಂದ ದೂರವಿರುವಂತೆ ವ್ಯಸನಮುಕ್ತ ಪ್ರತಿಜ್ಞೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಸಿ. ಚೇತನ್ ಅವರು ಬೋಧಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಸಿ. ಚೇತನ್, ಶ್ರೀನಿವಾಸ್ ಸಪ್ಲೈ ಚೈನ್ ಸಲ್ಯೂಷನ್ಸ್ ಸಂಸ್ಥೆಯ CFM HUL ಕರ್ನಾಟಕ CHKH ರಾಮು, DCSE HUL, ಕರ್ನಾಟಕ CHKH ಮಾದಪ್ಪ ಎಂ, ಪುರುಷೋತ್ತಮ್, ಪ್ರಧಾನ ವ್ಯವಸ್ಥಾಪಕ ಲೋಕೇಶ್, ಉಪ ವ್ಯವಸ್ಥಾಪಕ ವೀರೇಂದ್ರ ರೆಡ್ಡಿ ,ಸಿದ್ದಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಆರ್. ಮಂಜುನಾಥ್, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಶಿವಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕೃಷ್ಣ ಪ್ರಸಾದ್, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ. ಹರೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಂಜುಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.
ಕೆಟ್ಟ ವ್ಯಸನಗಳಿಗೆ ದಾಸರಾಗದಿರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಚಿಕ್ಕಬಳ್ಳಾಪುರ, ಆ.1: ಮದ್ಯಪಾನ, ತಂಬಾಕು ಹಾಗೂ ಮಾದಕ ವಸ್ತುಗಳಂತಹ ಕೆಟ್ಟ ವ್ಯಸನಗಳು ವ್ಯಕ್ತಿಯ ಆರೋಗ್ಯ, ಕುಟುಂಬ ಮತ್ತು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತವೆ. ಆದ್ದರಿಂದ ಯಾವುದೇ ದುಷ್ಟಚಟಗಳಿಗೆ ದಾಸರಾಗದೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು ಕರೆ ನೀಡಿದರು. ಚಿಕ್ಕಬಳ್ಳಾಪುರ ತಾಲ್ಲೂಕಿನ ಗುವ್ವಲಕಾನಹಳ್ಳಿಯ ಸೇಟ್ ದಿನ್ನೆ ಸಮೀಪದ ಶ್ರೀನಿವಾಸ್ ಸಪ್ಲೈ ಚೈನ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ “ವ್ಯಸನಮುಕ್ತ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ತಂಬಾಕು ಮತ್ತು ಮದ್ಯದ ಬೆಲೆಗಳು ಹೆಚ್ಚಾಗುತ್ತಿದ್ದರೂ ಅವುಗಳ ಬಳಕೆದಾರರ ಸಂಖ್ಯೆ ಕಡಿಮೆಯಾಗದೇ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸಿಗರೇಟ್ ಪ್ಯಾಕ್ ಮೇಲೆ ಕ್ಯಾನ್ಸರ್ ಕಾರಕಗಳು ಎನ್ನುವ ಹಾಗೆ ಚಿತ್ರಗಳನ್ನು ಹಾಗೂ ಅನಾರೋಗ್ಯಕರ ಎಂದು
ಬರೆದಿರುತ್ತದೆ ಬಳಕೆದಾರರು ಇದರ ಬಗ್ಗೆ ವಿವೇಚಿಸಬೇಕು ಎಂದು ಕಿವಿ ಮಾತು ಹೇಳಿದರು. ಪ್ರತಿಯೊಬ್ಬ ವ್ಯಕ್ತಿಯೂ ಯಾವುದೋ ಒಂದು ವಿಷಯದ ಬಗ್ಗೆ ಆಸಕ್ತಿ ಅಥವಾ ವ್ಯಸನ ಹೊಂದಿರುತ್ತಾನೆ. ಕೆಲವರು ಕ್ರೀಡೆ, ಸಂಗೀತ, ಸಾಹಿತ್ಯ, ವ್ಯಾಯಾಮ ಮತ್ತು ಉದ್ಯೋಗದಂತಹ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಆದರೆ ಕೆಲವರು ಅನಿವಾರ್ಯ ಕಾರಣಗಳು ಹಾಗೂ ಕೆಟ್ಟ ಸಹವಾಸಗಳಿಂದ ಮದ್ಯಪಾನ, ತಂಬಾಕು ಮತ್ತು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಾರೆ ಎಂದು ವಿಷಾದಿಸಿದರು. ಡಾ. ಮಹಾಂತ ಶಿವಯೋಗಿಗಳು ಹಲವು ದಶಕಗಳ ಹಿಂದೆಯೇ ಸಮಾಜದಲ್ಲಿನ ದುಷ್ಟಚಟಗಳನ್ನು ನಿರ್ಮೂಲನೆಗೊಳಿಸುವ ಉದ್ದೇಶದಿಂದ ನಡೆಸಿದ ಜಾಗೃತಿ ಕಾರ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ಆದರ್ಶಗಳನ್ನು ಅನುಸರಿಸಿ ಪ್ರತಿಯೊಬ್ಬರೂ ಉತ್ತಮ ಅಭ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆರೋಗ್ಯಕರ ಜೀವನವೇ ವ್ಯಕ್ತಿಯ ಕೌಶಲ್ಯ, ದಕ್ಷತೆ ಮತ್ತು ವೃತ್ತಿಪರ ಯಶಸ್ಸಿಗೆ ಆಧಾರವಾಗಿದ್ದು, ಯುವಜನತೆ ತಮ್ಮ ಪ್ರತಿಭೆಯನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್ ಅವರು ಮಾತನಾಡಿ ಮಾನವ ಜೀವನ ಅಮೂಲ್ಯವಾದದ್ದು. ಅದನ್ನು ಮದ್ಯಪಾನ, ಮಾದಕ ವಸ್ತುಗಳು ಮತ್ತು ಇತರ ದುಷ್ಟಚಟಗಳಿಗೆ ಬಲಿಯಾಗಿ ಹಾಳುಮಾಡಿಕೊಳ್ಳಬಾರದು ವ್ಯಸನಗಳಿಗೆ ಯಾರೂ ಕಾರಣರಲ್ಲ, ವ್ಯಕ್ತಿಯ ಸ್ವಂತ ನಿರ್ಧಾರಗಳೇ ಮುಖ್ಯ ಕಾರಣವಾಗುತ್ತವೆ. ಕೆಟ್ಟ ಪ್ರಲೋಭನೆಗಳು, ಸಹವಾಸ ದೋಷ ಮತ್ತು
ಅನಾರೋಗ್ಯಕರ ಕುತೂಹಲಗಳಿಂದ ಅನೇಕರು ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಇದರ ಪರಿಣಾಮವಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಟ್ಟು ಕೆಲವೊಮ್ಮೆ ಮಾರಣಾಂತಿಕ ಕಾಯಿಲೆಗಳಿಗೂ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು. ಕುಡಿತದ ಚಟದಿಂದ ಮೃತಪಟ್ಟ ಯುವಕನ ಕುಟುಂಬದ ದುಸ್ಥಿತಿಯನ್ನು ಕಂಡು ಮನನೊಂದ ಡಾ. ಮಹಾಂತ ಶಿವಯೋಗಿಗಳು “ಮಹಾಂತ ಜೋಳಿಗೆ” ಅಭಿಯಾನ ಆರಂಭಿಸಿ ಸಮಾಜದಲ್ಲಿನ ದುಷ್ಟಚಟಗಳನ್ನು ನಿವಾರಿಸುವ ಮಹತ್ವದ ಕಾರ್ಯ ಕೈಗೊಂಡರು. ಜನರು ತಮ್ಮ ಮದ್ಯ, ತಂಬಾಕು, ಪಾನ್ ಬೀಡಾ ಹಾಗೂ ಇತರ ವ್ಯಸನಕಾರಿ ವಸ್ತುಗಳನ್ನು ಜೋಳಿಗೆಗೆ ಹಾಕಿ ಇನ್ನು ಮುಂದೆ ಬಳಸುವುದಿಲ್ಲ ಎಂದು ಪ್ರತಿಜ್ಞೆ ಮಾಡುವ ಮೂಲಕ ವ್ಯಸನಮುಕ್ತ ಜೀವನಕ್ಕೆ ಪಾದಾರ್ಪಣೆ ಮಾಡುತ್ತಿದ್ದರು. ಜಾತಿ, ಮತ, ಧರ್ಮ ಮತ್ತು ಭಾಷೆಯ ಭೇದವಿಲ್ಲದೆ ಸುಮಾರು 42 ವರ್ಷಗಳ ಕಾಲ ದೇಶ-ವಿದೇಶಗಳಲ್ಲಿ ಸಂಚರಿಸಿ ವ್ಯಸನಗಳ ಮುಕ್ತಿಗೆ ಭಿಕ್ಷೆ ಬೇಡಿದ ಮಹಾಂತ ಶಿವಯೋಗಿಗಳ ಸೇವೆ ಅಪಾರವಾಗಿದೆ ಎಂದು ಅವರು ಹೇಳಿದರು. ಮನೋವೈದ್ಯೆ ಡಾ. ಲಾವಣ್ಯ ಅವರು ತಂಬಾಕು, ಮಾದಕ ವಸ್ತುಗಳು ಮತ್ತು ಮದ್ಯಪಾನದ ದುಷ್ಪರಿಣಾಮಗಳ ಕುರಿತು ಪವರ್ಪಾಯಿಂಟ್ ಪ್ರಾತ್ಯಕ್ಷಿಕೆ (ppt)ಮೂಲಕ ಕಾರ್ಮಿಕರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ವ್ಯಸನದಿಂದ ಬಳಲುತ್ತಿರುವವರು ಅಥವಾ ಅಂತಹ ಸಮಸ್ಯೆ ಎದುರಿಸುತ್ತಿರುವವರ ಬಗ್ಗೆ ಮಾಹಿತಿ ಹೊಂದಿರುವವರು ಟೆಲಿಮಾನಸ್
ಸಹಾಯವಾಣಿ 14416 ಅನ್ನು ಸಂಪರ್ಕಿಸಿ ಉಚಿತ ಸಮಾಲೋಚನೆ ಮತ್ತು ಚಿಕಿತ್ಸಾ ನೆರವು ಪಡೆಯಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಇಲಾಖೆ ವತಿಯಿಂದ 200ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ಮದ್ಯ, ತಂಬಾಕು ಹಾಗೂ ಮಾದಕ ವಸ್ತುಗಳ ಸೇವನೆಯಿಂದ ದೂರವಿರುವಂತೆ ವ್ಯಸನಮುಕ್ತ ಪ್ರತಿಜ್ಞೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಸಿ. ಚೇತನ್ ಅವರು ಬೋಧಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಸಿ. ಚೇತನ್, ಶ್ರೀನಿವಾಸ್ ಸಪ್ಲೈ ಚೈನ್ ಸಲ್ಯೂಷನ್ಸ್ ಸಂಸ್ಥೆಯ CFM HUL ಕರ್ನಾಟಕ CHKH ರಾಮು, DCSE HUL, ಕರ್ನಾಟಕ CHKH ಮಾದಪ್ಪ ಎಂ, ಪುರುಷೋತ್ತಮ್, ಪ್ರಧಾನ ವ್ಯವಸ್ಥಾಪಕ ಲೋಕೇಶ್, ಉಪ ವ್ಯವಸ್ಥಾಪಕ ವೀರೇಂದ್ರ ರೆಡ್ಡಿ ,ಸಿದ್ದಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಆರ್. ಮಂಜುನಾಥ್, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಶಿವಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕೃಷ್ಣ ಪ್ರಸಾದ್, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ. ಹರೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಂಜುಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.
- *ಅಭಿಮಾನಿಗಳಿಂದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಹುಟ್ಟುಹಬ್ಬದ ಪ್ರಯುಕ್ತ ಅನ್ನದಾನ ಮತ್ತು ಕ್ರೀಡಾಕೂಟ* *ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ-ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ* ಭಾಗ್ಯನಗರ: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು,ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದಢವಾಗಿರುತ್ತದೆ. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಹೇಳಿದರು. ಪಟ್ಟಣದ 12ನೇ ವಾರ್ಡಿನ ಹಿಂಭಾಗದ ಕೊರ್ಲಕುಂಟೆ ಕ್ರಿಕೆಟ್ ಮೈದಾನದಲ್ಲಿ ಸಚಿವ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಜನ್ಮದಿನದ ಅಂಗವಾಗಿ ಭಾಗ್ಯನಗರ ಬಿ.ಝೆಡ್ ಗ್ರೂಪ್ಸ್ ಹಾಗೂ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳ ಬಳಗವತಿಯಿಂದ ಸತತ ನೇ ವರ್ಷದ ಕ್ರಿಕೆಟ್ ಟೂರ್ನೀ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ,ಮನುಷ್ಯನಿಗೆ ಕ್ರೀಡೆ ದೈಹಿಕ ಚಟುವಟಿಕೆ ಅಥವಾ ಮಾನಸಿಕ ಚಟುವಟಿಕೆ, ಸ್ಪರ್ಧೆ, ಮನರಂಜನೆ ಅಥವಾ ವ್ಯಾಯಾಮಕ್ಕಾಗಿ ನಡೆಸಲಾಗುತ್ತದೆ. ಕ್ರೀಡೆಯ ಮಹತ್ವವೆಂದರೆ ಅದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ, ಜೀವನ ಕೌಶಲ್ಯಗಳನ್ನು ಕಲಿಸುತ್ತದೆ ಮತ್ತು ಸಮಾಜದಲ್ಲಿ ಏಕತೆಯನ್ನು ತರುತ್ತದೆ,ಮುಖ್ಯವಾಗಿ ಯುವಕರು ದುಶ್ಚಟಗಳನ್ನು ತ್ಯಜಿಸಿ ಸದೃಢ ದೇಹ ಹೊಂದಲು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕಿದೆ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮಾಜಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಾಗೇಪಲ್ಲಿ ಬಿ ಜೆಡ್ ಗ್ರೂಪ್ ಮತ್ತು ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳಿಂದ ಅನ್ನದಾನ ಮತ್ತು ಕ್ರೀಡಾಕೂಟ ಹಾಗೂ ಸೇವಾ ಕಾರ್ಯಗಳು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪುರಸಭೆ ನಾಮ ನಿರ್ದೇಶನ ಸದಸ್ಯ ಹಾಗೂ ಬಿ ಜೆಡ್ ಗ್ರೂಪ್ ಅಧ್ಯಕ್ಷ ಅನ್ಸರ್ ಮಾತನಾಡಿ,ನಮ್ಮ ಅಲ್ಪಸಂಖ್ಯಾತರ ನಾಯಕರು ಹಾಗೂ ನಮ್ಮ ರಾಜ್ಯದ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಪಟ್ಟಣದ ಗೂಳೂರು ವೃತ್ತದಲ್ಲಿ ಪ್ರೀತಿಯಿಂದ ವಿಶೇಷ ಅನ್ನದಾನ ಹಾಗೂ ಸಿಹಿ ವಿತರಿಸುವ ಮೂಲಕ ಬಾಗೇಪಲ್ಲಿ ಝೆಡ್ ಗ್ರೂಪ್ ವತಿಯಿಂದ ಸೇವಾ ಕಾರ್ಯಗಳು ಮಾಡಲಾಗುತ್ತಿದೆ, ಅವರಿಗೆ ಸದಾ ದೇವರ ಅನುಗ್ರಹ ಮತ್ತು ದೇವರ ಆಶೀರ್ವಾದ ಇರಬೇಕು ಎಂದು ಶುಭಹಾರೈಸುತ್ತೇನೆ ಎಂದರು. ಪಟ್ಟಣದ ವಿವಿಧ ವಾರ್ಡ್ ಗಳಿಂದ ಆಗಮಿಸಿದ್ದ ಸುಮಾರು 5 ಕ್ಕೂ ಹೆಚ್ಚು ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಪ್ರಥಮ ಬಹುಮಾನ 10,000 ಸಾವಿರ ರೂ.ನಗದು, ಟ್ರೋಫಿ, ದ್ವಿತೀಯ ಬಹುಮಾನ 5,000 ರೂಪಾಯಿ ನಗದು ಮತ್ತು ಟ್ರೋಫಿ ಹಾಗೂ ಪಾದ್ಯವಳಿಯಲ್ಲಿ ಭಾಗವಹಿಸಿದ ಆಟಗಾರರಿಗೆ ಕುಡಿಯುವ ನೀರು,ಉಟೋಪಚಾರ,ನೆನಪಿನ ಕಾಣಿಕೆ ನೀಡಲಾಗುವುದು ಎಂದು ಬಿ ಝೆಡ್ ಗ್ರೂಪ್ ಕ್ರಿಕೆಟ್ ಟೂರ್ನೀಮೆಂಟ್ ಆಯೋಜಕರು ತಿಳಿಸಿದ್ದಾರೆ. ಈ ಸಂಧರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಜಯಪ್ರಕಾಶ್,ಅಲ್ಪಸಂಖ್ಯಾತರ ಅಧ್ಯಕ್ಷ ವಸೀo,ಜುಬೇದ ಟ್ರಾನ್ಸ್ಪೋರ್ಟ್ ಆಸೀಫ್, ಅಬ್ಜಲ್,ಫೈರೋಜ್,ಜಾವಿದ್ ಕಾಯುo,ಪೀರ್,ಪರ್ವಿಜ್, ಮೂರ್ತಿ ಆಝಾಮ್,ಮಕ್ಕ ಮಸೀದಿ ಅಧ್ಯಕ್ಷ ಮನೋಹರ್ ರಫೀಕ್ ಸೇರಿದಂತೆ ವಿವಿಧ ತಂಡಗಳ ಕ್ರೀಡಾಪಟುಗಳು ಇದ್ದರು.4
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ತಾಲ್ಲೂಕು ಆಡಳಿತದ ವತಿಯಿಂದ"ವ್ಯಸನಮುಕ್ತ ದಿನಾಚರಣೆ"ಯನ್ನು ಸಲುವಾಗಿ ಆಚೆರಿಸಿದರು1
- ಕಾವೇರಿ ನೀರಿನ ವಿಚಾರದಲ್ಲಿ ಸಿಎಂ ಡಿಕೆ ಹೇಳಿಕೆ ಕುರಿತು ಏಕವಚನದಲ್ಲೇ ಮಹಿಳೆ ಟಾಕ್ | Veega News Kannada ಕಾವೇರಿ ನೀರಿನ ವಿಚಾರದಲ್ಲಿ ಸಿಎಂ ಡಿಕೆ ಹೇಳಿಕೆ ಕುರಿತು ಏಕವಚನದಲ್ಲೇ ಮಹಿಳೆ ಟಾಕ್ | Veega News Kannada1
- ಕೆಆರ್ ಪುರದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಬೆಂ,ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ಡಿ ,ಎಸ್ ರಮೇಶ್ ಚಾಲನೆ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ಡಿ ,ಎಸ್ ರಮೇಶ್ ರಿಂದ ಚಾಲನೆ .ಆಯುಕ್ತ ರಮೇಶ್ ಅವರಿಗೆ ಕೆಆರ್ ಪುರ ಜಂಟಿ ಆಯುಕ್ತೆ ಡಾ . ಸುಧಾ ಸ್ವಪ್ನ ಸಾಥ್ .ಕೆಆರ್ ಪುರದ ಐಟಿಐ ಗೇಟ್ ನಿಂದ ಆರಂಭವಾಗಿರುವ ಅಭಿಯಾನ .ಕೆಆರ್ ಪುರ ಹಾಗೂ ಮಹದೇವಪುರ ವಲಯಗಳಲ್ಲಿ ಏಕಕಾಲ ಚಾಲನೆ ನೀಡಿರುವ ಆಯುಕ್ತ ರಮೇಶ್ .ಒಂದು ತಿಂಗಳ ಕಾಲ ನಡೆಯಲಿರುವ ಅಭಿಯಾನ .ಖಾಸಗೀ ಸ್ವತ್ತುಗಳಲ್ಲಿ ತ್ಯಾಜ್ಯ ತೆರವಿಗೆ ಮಾಲೀಕರಿಗೆ ೧೫ದಿನಗಳ ಗಡುವು.೧೫ ದಿನಗಳ ಬಳಿಕವೂ ತೆರವುವಾಗಿಲ್ಲ ಅಂದ್ರೆ ಮಾಲೀಕರೇ ತೆರಿಗೆ ಜೊತೆಗೆ ತ್ಯಾಜ್ಯ ನಿರ್ವಹಣಾ ವೆಚ್ಚ ಭರಿಸಬೇಕು1
- ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ ಸುವರ್ಣ ವಿರುದ್ಧ ಪ್ರತಿಭಟನೆ ಬೆಂಗಳೂರು:ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ ಸುವರ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆ ಮುಂದೆ ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಂದು ಒತ್ತಾಯಿಸಿದ್ದು,ಕಾನೂನು ಕ್ರಮ ತಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಅಲ್ಲದೇ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ.ಇಲ್ಲದೇ ಹೋದರಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.1
- 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ! | ರಾಜ್ಯದಲ್ಲಿ ಹೆಚ್ಚುತ್ತಿರುವ ಸರ್ವಿಕಲ್ ಕ್ಯಾನ್ಸರ್ ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಮಹತ್ವದ ಅಭಿಯಾನ ಆರಂಭಿಸಿದೆ. 14 ವರ್ಷದೊಳಗಿನ ಹೆಣ್ಣುಮಕ್ಕಳು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ HPV ಲಸಿಕೆ ನೀಡಲಾಗುತ್ತಿದೆ. ಈ ಲಸಿಕೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಅಭಿಯಾನದ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದು, ಪೋಷಕರು ಹಾಗೂ ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. #Hashtags #HPVVaccine #CervicalCancer #HealthDepartment #UTKhader #KarnatakaNews #HealthNews #WomenHealth #FreeVaccine #KannadaNews #BreakingNews #ASNNews24Kannada #ViralNews #karnataka1
- *ಕೋಲಾರದ ಜೆ.ಡಿ.ಎಸ್ ಮುಖಂಡರು ಹಾಗೂ ಕಾರ್ಯಕರ್ತರು ದಿವಂಗತ ಚನ್ನಮ್ಮ ದೇವೆಗೌಡರ ಉತ್ತರ ಕ್ರಿಯಾದಿ ಕಾರ್ಯದಲ್ಲಿ ಭಾಗಿ* ಕೋಲಾರ: ದಿವಂಗತ ಚನ್ನಮ್ಮ ದೇವೆಗೌಡರ ಉತ್ತರ ಕ್ರಿಯಾದಿ ಕಾರ್ಯಕ್ರಮಕ್ಕೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಜೆ.ಡಿ.ಎಸ್.ಮುಖಂಡ ಸಿ.ಎಂ.ಆರ್ .ಶ್ರೀನಾಥ್ ರವರ ನೇತೃತ್ವದಲ್ಲಿಸುಮಾರು 150 ಕ್ಕೂ ಹೆಚ್ಚಿನ ವಾಹನಗಳಲ್ಲಿನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಪ್ರಯಾಣ ಬೆಳೆಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮುಖಂಡರುಗಳಾದ ವಕ್ಕಲೇರಿ ರಾಮು, ಬಾಬು ಮೌನಿ, ದೊಡ್ಡವಲ್ಲಬಿ ಲಕ್ಷ್ಮಣಗೌಡರು, ಬಣಕನಹಳ್ಳಿ ನಟರಾಜ್, ಶ್ರೀಮತಿ ಚೌಡೇಶ್ವರಿ ರಾಮು, ವಡಗೂರು ರಾಮು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.4
- *ಗಣಕೀಕರಿಸುವಲ್ಲಿ ಶೇ 100% ಪ್ರಗತಿ ಸಾಧನೆ-ರಾಜ್ಯದಲ್ಲೇ ಚಿಕ್ಕಬಳ್ಳಾಪುರಕ್ಕೆ ಮೊದಲ ಸ್ಥಾನ-ಮತದಾರರ ನೋಂದಣಾಧಿಕಾರಿ ಅತೀಕ್ ಭಾಷ* ಭಾಗ್ಯನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 204413 ಶೇ 100% ನಮೂನೆಗಳನ್ನು ವಿತರಣೆ ಮಾಡಲಾಗಿದೆ. ಹಾಗೂ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು 18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165 ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದು ಮತದಾರರ ನೋಂದಣಾಧಿಕಾರಿ ಅತೀಕ್ ಭಾಷ ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 16 ರವರೆಗೆ 2,04,413 ಮತದಾರಿದ್ದು.ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ SIR ಸಂಬಂಧ ಭಾರತ ಚುನಾವಣಾ ಆಯೋಗದ ದಿನಾಂಕ: 14/05/2026 ರ ವೇಳಾಪಟ್ಟಿಯಂತೆ ದಿನಾಂಕ: 30/06/2026 ರಿಂದ 29/07/2026ರವರೆಗೆ ಬಿ.ಎಲ್.ಓ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ, ಸ್ವೀಕರಿಸುವ ಕಾರ್ಯ ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿದೆ. ತಾಲ್ಲೂಕಿನಲ್ಲಿ ದಿನಾಂಕ 16/06/2026 ರವರೆಗೆ ಒಟ್ಟು 204413 ಮತದಾರರಿದ್ದು, ಈ ಪೈಕಿ 198165 (ಶೇ.96.94%) ಮತದಾರರನ್ನು ಮ್ಯಾಪಿಂಗ್ ಮಾಡಲಾಗಿರುತ್ತದೆ.ತಾಲ್ಲೂಕಿನಲ್ಲಿ ದಿನಾಂಕ: 30/07/2026 ರ ಸಂಜೆ 6.00 ಗಂಟೆಗೆ ಎಲ್ಲಾ ಮತಗಟ್ಟೆಗಳಿಂದ ಒಟ್ಟು 204413 (ಶೇ.100%) ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಮುಗಿದಿದ್ದು,ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು 18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165 ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದರು. ಈ ಸಂಧರ್ಭದಲ್ಲಿ ತಹಶೀಲ್ದಾರ್ ಮನಿಷಾ ಎನ್ ಪತ್ರಿ, ಚೇಳೂರು ತಹಶೀಲ್ದಾರ್ ಬಿ.ಕೆ.ಶ್ವೇತಾ, ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಚಂದ್ರ,ಚುನಾವಣಾ ಶಾಖೆಯ ಅಧಿಕಾರಿಗಳಾದ ಮೂರ್ತಿ,ರಾಘವೇಂದ್ರ,ಕಾಂಗ್ರೆಸ್ ಪಕ್ಷದ ಬಿ ಎಲ್ ಎ2 ಮದ್ದಿಲೇಟಿರೆಡ್ಡಿ,ಕ್ರಿಕೆಟ್ ಮೂರ್ತಿ,ಅಶೋಕ್,ಮಿಲ್ಕ್ ವೀರ,ಪಾತಪಾಳ್ಯ ಚಂದ್ರಣ್ಣ,ನಿಜಾಮ್ ಉದ್ದಿನ್ ಬಾಬು,ಮನ್ಸೂರ್,ದಿವಾಕರ್,ಸಿಪಿ.ಐ.ಎಂ ಪಕ್ಷದ ಬಿ ಎಲ್ ಎ2 ಎಂ. ಎನ್.ರಘುರಾಮರೆಡ್ಡಿ,ಅಶ್ವಥಪ್ಪ, ಜಿ ಕೃಷ್ಣಪ್ಪ, ಇಮ್ರಾನ್, ಬಿಜೆಪಿ ಪಕ್ಷದ ಬಿ ಎಲ್ ಎ2 ಬಿ. ಎಸ್.ಲೋಕೇಶ್,ರವಿಕುಮಾರ್,ಲೋಕೇಶ್,ವನಜಾ, ಗಂಗುಳಮ್ಮ, ಮಂಜುಳಾ,ರೂಪ,ಸೇರಿದಂತೆ ಮತ್ತಿತರರು ಇದ್ದರು.3