ಕಾಂಗ್ರೆಸ್ ಕಚೇರಿಗೆ ನಿವೇಶನ ಮಂಜೂರು... ಗೌರಿಬಿದನೂರು: ಕಾಂಗ್ರೆಸ್ ಪಕ್ಷದ ಕಚೇರಿಗೆ ನಿವೇಶನ ಮಂಜೂರು ಮಾಡಲಾಗಿದ್ದು, ನಗರದ ಬೈಪಾಸ್ ರಸ್ತೆಯ ಪಕ್ಕದಲ್ಲಿರುವ ಹಿರೇಬಿದನೂರು ಬಳಿ ಕಾಂಗ್ರೆಸ್ ಭವನಕ್ಕೆ ಸುಮಾರು ಆರು ಸಾವಿರ ಚದರ ಅಡಿ ವಿಸ್ತೀರ್ಣದ ನಿವೇಶನ ಗುರುತಿಸಲಾಗಿದೆ ಎಂದು ಮಾಜಿ ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ತಿಳಿಸಿದರು. ನಗರದ ಹೊರವಲಯದ ಉಪನೋಂದಣಿ ಕಚೇರಿಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ನಿವೇಶನ ನೊಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ಮಾತನಾಡಿ, ರಾಜ್ಯದಾದ್ಯಂತ ಸುಮಾರು 100 ಕಾಂಗ್ರೆಸ್ ಭವನಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಿರ್ಮಿಸುವ ಯೋಜನೆ ಇದೆ. ಈ ಯೋಜನೆ ಭಾಗವಾಗಿ ಕಾಂಗ್ರೆಸ್ ಭವನ ಟ್ರಸ್ಟ್ನಿಂದ ತಾಲ್ಲೂಕಿನಲ್ಲಿ ಪಕ್ಷದ ಭವನ ನಿರ್ಮಿಸಲು ನಿವೇಶನವನ್ನು ಪಕ್ಷದ ಪರವಾಗಿ ನೋಂದಣಿ ಮಾಡಲಾಗಿದೆ ಎಂದು ತಿಳಿಸಿದರು. ಭವನದ ಭೂಮಿ ಪೂಜೆ ಮೇ ತಿಂಗಳಲ್ಲಿ, ಎಐಸಿಸಿ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಗೌರಿಬಿದನೂರಷ್ಟೇ ಅಲ್ಲದೆ, ರಾಜ್ಯದ ಎಲ್ಲ ಭವನಗಳಿಗೆ ಏಕಕಾಲದಲ್ಲಿ ಶಂಕುಸ್ಥಾಪನೆ ನೆರವೇರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಕೆಪಿಸಿಸಿ ಅಧ್ಯಕ್ಷ ಸೂಚನೆಯಂತೆ ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಭವನ ಹೊಂದಿರಬೇಕು ಎಂಬ ಉದ್ದೇಶದಿಂದ ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ನಿವೇಶನವನ್ನು ನೋಂದಾಯಿಸಲಾಗಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡು, ನಾಗರಿಕ ಸೌಲಭ್ಯ ನಿವೇಶನವನ್ನು ಶೇ 5 ರಷ್ಟು ರಿಯಾಯಿತಿ ದರದಲ್ಲಿ ನೀಡಲು ಅನುಮೋದನೆ ನೀಡಿದ್ದರು. ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವರು ವೈಯಕ್ತಿಕ ಹಣದಿಂದ ಡಿ.ಡಿ. ಮೂಲಕ ಈಗಾಗಲೇ ಪಾವತಿಸಿದ್ದಾರೆ ಎಂದು ತಿಳಿಸಿದರು. ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್ ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಶೀಘ್ರದಲ್ಲೇ ಎನ್.ಎಚ್.ಶಿವಶಂಕರರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ, ಕಟ್ಟಡದ ರೂಪುರೇಷೆ ಮತ್ತು ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಭವನ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಈ ಭವನವನ್ನು ಕೇವಲ ಪಕ್ಷದ ಚಟುವಟಿಕೆಗಳಿಗೆ ಮಾತ್ರವಲ್ಲದೆ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತಹ ವಿವಿಧ ಸಾಮಾಜಿಕ ಚಟುವಟಿಕೆಗಳಿಗೂ ಬಳಸಿಕೊಳ್ಳುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು. ಕೆಪಿಸಿಸಿ ರಾಜ್ಯ ಖಜಾಂಚಿ ವಿನಯ್ ಕಾರ್ತಿಕ್, ಕಚೇರಿ ಕಾರ್ಯದರ್ಶಿ ಎಲ್.ನಾರಾಯಣ್, ಕಾರ್ಯದರ್ಶಿ ಶ್ರೀನಿವಾಸಲು, ಸದಸ್ಯ ಪದ್ಮರಾಜ್ ಜೈನ್ ಮುಖಂಡರಾದ ರಮೇಶ್, ಮಂಜುನಾಥ್, ವಲೀ, ನರಸಿಂಹಮೂರ್ತಿ, ನಾರಾಯಣಸ್ವಾಮಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಕಾಂಗ್ರೆಸ್ ಕಚೇರಿಗೆ ನಿವೇಶನ ಮಂಜೂರು... ಗೌರಿಬಿದನೂರು: ಕಾಂಗ್ರೆಸ್ ಪಕ್ಷದ ಕಚೇರಿಗೆ ನಿವೇಶನ ಮಂಜೂರು ಮಾಡಲಾಗಿದ್ದು, ನಗರದ ಬೈಪಾಸ್ ರಸ್ತೆಯ ಪಕ್ಕದಲ್ಲಿರುವ ಹಿರೇಬಿದನೂರು ಬಳಿ ಕಾಂಗ್ರೆಸ್ ಭವನಕ್ಕೆ ಸುಮಾರು ಆರು ಸಾವಿರ ಚದರ ಅಡಿ ವಿಸ್ತೀರ್ಣದ ನಿವೇಶನ ಗುರುತಿಸಲಾಗಿದೆ ಎಂದು ಮಾಜಿ ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ತಿಳಿಸಿದರು. ನಗರದ ಹೊರವಲಯದ ಉಪನೋಂದಣಿ ಕಚೇರಿಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ನಿವೇಶನ ನೊಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ಮಾತನಾಡಿ, ರಾಜ್ಯದಾದ್ಯಂತ ಸುಮಾರು 100 ಕಾಂಗ್ರೆಸ್ ಭವನಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಿರ್ಮಿಸುವ ಯೋಜನೆ ಇದೆ. ಈ ಯೋಜನೆ ಭಾಗವಾಗಿ ಕಾಂಗ್ರೆಸ್ ಭವನ ಟ್ರಸ್ಟ್ನಿಂದ ತಾಲ್ಲೂಕಿನಲ್ಲಿ ಪಕ್ಷದ ಭವನ ನಿರ್ಮಿಸಲು ನಿವೇಶನವನ್ನು ಪಕ್ಷದ ಪರವಾಗಿ ನೋಂದಣಿ ಮಾಡಲಾಗಿದೆ ಎಂದು
ತಿಳಿಸಿದರು. ಭವನದ ಭೂಮಿ ಪೂಜೆ ಮೇ ತಿಂಗಳಲ್ಲಿ, ಎಐಸಿಸಿ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಗೌರಿಬಿದನೂರಷ್ಟೇ ಅಲ್ಲದೆ, ರಾಜ್ಯದ ಎಲ್ಲ ಭವನಗಳಿಗೆ ಏಕಕಾಲದಲ್ಲಿ ಶಂಕುಸ್ಥಾಪನೆ ನೆರವೇರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಕೆಪಿಸಿಸಿ ಅಧ್ಯಕ್ಷ ಸೂಚನೆಯಂತೆ ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಭವನ ಹೊಂದಿರಬೇಕು ಎಂಬ ಉದ್ದೇಶದಿಂದ ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ನಿವೇಶನವನ್ನು ನೋಂದಾಯಿಸಲಾಗಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡು, ನಾಗರಿಕ ಸೌಲಭ್ಯ ನಿವೇಶನವನ್ನು ಶೇ 5 ರಷ್ಟು ರಿಯಾಯಿತಿ ದರದಲ್ಲಿ ನೀಡಲು ಅನುಮೋದನೆ ನೀಡಿದ್ದರು. ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವರು ವೈಯಕ್ತಿಕ ಹಣದಿಂದ
ಡಿ.ಡಿ. ಮೂಲಕ ಈಗಾಗಲೇ ಪಾವತಿಸಿದ್ದಾರೆ ಎಂದು ತಿಳಿಸಿದರು. ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್ ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಶೀಘ್ರದಲ್ಲೇ ಎನ್.ಎಚ್.ಶಿವಶಂಕರರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ, ಕಟ್ಟಡದ ರೂಪುರೇಷೆ ಮತ್ತು ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಭವನ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಈ ಭವನವನ್ನು ಕೇವಲ ಪಕ್ಷದ ಚಟುವಟಿಕೆಗಳಿಗೆ ಮಾತ್ರವಲ್ಲದೆ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತಹ ವಿವಿಧ ಸಾಮಾಜಿಕ ಚಟುವಟಿಕೆಗಳಿಗೂ ಬಳಸಿಕೊಳ್ಳುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು. ಕೆಪಿಸಿಸಿ ರಾಜ್ಯ ಖಜಾಂಚಿ ವಿನಯ್ ಕಾರ್ತಿಕ್, ಕಚೇರಿ ಕಾರ್ಯದರ್ಶಿ ಎಲ್.ನಾರಾಯಣ್, ಕಾರ್ಯದರ್ಶಿ ಶ್ರೀನಿವಾಸಲು, ಸದಸ್ಯ ಪದ್ಮರಾಜ್ ಜೈನ್ ಮುಖಂಡರಾದ ರಮೇಶ್, ಮಂಜುನಾಥ್, ವಲೀ, ನರಸಿಂಹಮೂರ್ತಿ, ನಾರಾಯಣಸ್ವಾಮಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
- ನೆಲಮಂಗಲ ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.2
- Post by Vv Vv1
- ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ವಿಶೇಷ ಪೂಜೆ:- ಬಾಗೇಪಲ್ಲಿ:-ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಾಗೇಪಲ್ಲಿ ಅವರ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪಟ್ಟಣದ ಪ್ರಸಿದ್ಧ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜನಸೇನಾ ಪಕ್ಷದ ಮುಖಂಡ ಹಾಗೂ ವಕೀಲರಾದ ನರಸಿಂಹ ಮೂರ್ತಿ ಮಾತನಾಡಿ ಪಟ್ಟಣದ ಜಡಲ ಭೈರವೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ತದನಂತರ ದೇವಾಲಯದ ಮುಂದೆ ತೆಂಗಿನಕಾಯಿ ಒಡೆದು ಪವನ್ ಕಲ್ಯಾಣ್ ಅವರು ಬೇಗನೇ ಚೇತರಿಸಿಕೊಂಡು ಸಕ್ರಿಯ ರಾಜಕೀಯಕ್ಕೆ ಮರಳಲಿ ಎಂದು ಅಭಿಮಾನಿಗಳು ಪಟ್ಟಣದ ಭೈರವೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳು ಮತ್ತು ಇತರ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದೀಪಾರಾಧನೆ ಮತ್ತು ಪ್ರಾರ್ಥನೆಗಳನ್ನು ಮಾಡಿದರು. ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು. ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ. ಎಂದು ಹೇಳಿದರು. ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಹೇಳಿದರು. ಆದ್ದರಿಂದ ಇಂದು ಬಾಗೇಪಲ್ಲಿ ಪಟ್ಟಣದಲ್ಲಿ ಪವನ್ ಕಲ್ಯಾಣ್ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಹೋಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಮೃತ ಕುಮಾರ್, ರಾಮು.ವಿ.ಅಜಯ್, ಮಂಜುನಾಥ್,ಅರುಣ್ ಕೆ.ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು.1
- ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ1
- ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿ ಬೃಹತ್ ಪ್ರತಿಭಟನೆ1
- Post by Chand Pasha1
- KOLAR KI.AWAAZ KOUSAR1
- ಜನಸ್ಪಂದನದಲ್ಲಿ ಪಿಡಿಒ ಮೇಲೆ ಶಾಸಕರ ಆಕ್ರೋಶ ಅರ್ಜಿ ಎಸೆದು ವರ್ಗಾವಣೆಗೆ ಸೂಚನೆ1