Shuru
Apke Nagar Ki App…
ji
Mustakim .KUDACHI .news
ji
More news from ಕರ್ನಾಟಕ and nearby areas
- Post by Mustakim .KUDACHI .news1
- ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಧಾರವಾಡ ಶಾರದಾ ಸ್ಕೂಲ್ ಬಳಿಯ ರಸ್ತೆಯಲ್ಲಿ ಭೀಮ ನಡಿಗೆ ಶೀಘ್ರ ನೇಮಕಾತಿ ಕಡೆಗೆ ಹೋರಾಟದ ಭಾಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲು ಆಗಮಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸಂವಿಧಾನ ವಿರೋಧಿ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಲು ಬೀಡುತ್ತಿಲ್ಲ, ನಾವು ಜೈಲಿನಿಂದಲೇ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.1
- Post by Nitin 9071795156 press reporte3
- Post by @april14news1
- ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಥಣಿ :ಈ ನಾಡಿನಲ್ಲಿ ಬಸವಣ್ಣನಂತ ವರು ಮಹಾನ್ ಸಮಾಜ ಪರಿವರ್ತಕರು ಈ ನಾಡಿನಲ್ಲಿ ಜನಿಸಿ ಮೇಲು, ಕೀಳು,ಹೋಗಲಾಡಿಸಲು ಯತ್ನಿಸಿದರು.ಇಂದು ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಂಬೇಡ್ಕರ್ ಚಿಂತನೆಗಳನ್ನು ಇಂದು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಕಳವಳ ವ್ಯಕ್ತಪಡಿಸಿದರು. ಅವರು ಅಥಣಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸಮಸ್ತ ತಾಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ 135 ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.ಶಿಕ್ಷಣವು ಹಾಲಿನಂತೆ, ಅದನ್ನು ಕುಡಿದವನು ಘರ್ಜಿಸಲೇಬೇಕು" ಎಂಬ ಅವರ ಮಾತು ಇಂದಿನ ದಿನ ನಾವು ಎಷ್ಟು ಜನರಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದೇವೆ.ಶಿಕ್ಷಣ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂಬುದನ್ನು ಅಂಬೇಡ್ಕರ್ ಅಂದೇ ಮನಗಂಡಿದ್ದರು. ಇಂದು ಪ್ರತಿಯೊಬ್ಬ ದಲಿತರು ಬಾಬಾಸಾಹೇಬರ ಆಶಯದಂತೆ ಶಿಕ್ಷಣ, ಸಂಘಟನೆ ಗುರಿ ಈಡೇರಿಸಲು ನೀವೆಲ್ಲ ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡಿ.ಶೀಘ್ರ 1 ಕೋಟಿ ರೂ ಗಳ ವೆಚ್ಚದಲ್ಲಿ ಡಿಜಿಟಲ್ ಲೈಬ್ರರಿ ಆರಂಭ ಮಾಡುತ್ತೇವೆ.ಓದುವ ಮಕ್ಕಳು ಕಡಿಮೆ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡಿ ಲೈಬ್ರರಿಯಲ್ಲಿ ಅಭ್ಯಾಸ ಮಾಡಲಿ. ಈಗಾಗಲೇ ನಮ್ಮ ಮಕ್ಕಳಿಗೆ ಪಶು ವೈದ್ಯಕೀಯ ಮಹಾವಿದ್ಯಾಲಯ ಆರಂಭವಾಗಿದೆ , ಕೃಷಿ ಕಾಲೇಜು ಶೀಘ್ರದಲ್ಲಿ ಆರಂಭವಾಗಲಿದೆ. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಾವು ಜಾರಿಗೆ ತರಬೇಕು ಎಂದು ಹೇಳಿದ ಅವರು ಬರುವ ಜೂನ್ ನಲ್ಲಿ ಕೊಟ್ಟಲಗಿ, ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಹಾಗೂ ಬಸವೇಶ್ವರಏತ ನೀರಾವರಿ ಯೋಜನೆ ಮುಖ್ಯಮಂತ್ರಿಗಳ ಮೂಲಕ ಉದ್ಘಾಟನೆ ಹಾಗೂ ಕೃಷಿ ಕಾಲೇಜು ಭೂಮಿ ಪೂಜೆ ನೇರವೆ ರಿಸಲಾಗುವುದು. ಐದು ಕಡೆಯಲ್ಲಿ 110 ಕೆ ವಿ ವಿದ್ಯುತ್ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು, ಪಟ್ಟಣದಲ್ಲಿ 260 ಕಿಮಿ ಕೇಬಲ್ ಮೂಲಕ ವಿದ್ಯುತ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಬರುವ ದಿನಮಾನದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ತರುವ ಕೆಲಸ ಮಾಡೋಣ ಎಂದು ಹೇಳಿದರು. ಈ ವೇಳೆ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ,ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಉಪನ್ಯಾಸಕರಾಗಿ ಆಗಮಿಸಿದ ಸುಭಾಸ ನಾಟಿಕಾರ, ಪಂಚಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಸಿದ್ದಾರ್ಥ ಸಿಂಗೆ ಮಾತನಾಡಿ ದರು. ಈ ವೇಳೆ ದತ್ತಾ ವಾಸ್ಟರ್, ತಹಸೀಲ್ದಾರ್ ಸಿದರಾಯ ಭೋಸಗಿ, ಪ್ರಶಾಂತ ಮುನ್ನೊಳಿ, ಶಿವಾನಂದ ಕಲ್ಲಾಪುರ, ಅಶೋಕ ಗುಡಿಮನಿ,ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ಪರಶುರಾಮ ಪತ್ತಾರ, ಎಂ ಆರ್ ಮುಂಜೆ, ರಾವಸಾಬ ಐಹೊಳೆ, ಕಲ್ಲೇಶ ಮಡ್ಡಿ, ಬಸವರಾಜ ನಾಯಿಕ ಸೇರಿದಂತೆ ತಾಲೂಕಿನ ಸಮಸ್ತ ಜನತೆ ಉಪಸ್ಥಿತರಿದ್ದರು. ಈ ವೇಳೆಯಲ್ಲಿ ಎಸ್ ಎಸ್ ಎಲ್ ಸಿ, ಪಿ ಯು ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಸನ್ಮಾನ ಮಾಡಲಾಯಿತು.4
- Gadag Jilla snake Raheman1
- Post by Mayur TV Hangal YouTube c1
- ಧಾರವಾಡ: ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಧಾರವಾಡ ಹಾಶ್ಮೀ ನಗರದಲ್ಲಿರುವ ಹತ್ಯೆಯಾದ ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ನಿವಾಸಕ್ಕೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಕುರಿತು ಪೊಲೀಸರು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಈ ವೇಳೆ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.1