Shuru
Apke Nagar Ki App…
ಹಾವೇರಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಹಾವೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಾವೇರಿ ಗ್ರಾಮೀಣ ಮಂಡಲ ಮತ್ತು ಹತ್ತಿಮತ್ತೂರು ಮಂಡಲಗಳಲ್ಲಿ BL ಅ-2 ಗಳ SIR 2026 ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, SIR ಪ್ರಭಾರಿ ಶ್ರೀ ಪಾಲಾಕ್ಷಿ ಗೌಡ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ನೀಲಪ್ಪ ಚಾವಡಿ, BL ಅ-1 ಶ್ರೀ ಪ್ರವೀಣ್ ಶೆಟ್ಟರ್, ಎರಡೂ ಮಂಡಲಗಳ ಅಧ್ಯಕ್ಷರು, BL ಅ-2 ರವರು, ಪಕ್ಷದ ಪದಾಧಿಕಾರಿಗಳು, ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಸೇರಿದಂತೆ ಹಲವರು ಭಾಗವಹಿಸಿದ್ದರು.
ಸುನೀಲ್ ಲ್ ಬೆಟಗೇರಿ
ಹಾವೇರಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಹಾವೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಾವೇರಿ ಗ್ರಾಮೀಣ ಮಂಡಲ ಮತ್ತು ಹತ್ತಿಮತ್ತೂರು ಮಂಡಲಗಳಲ್ಲಿ BL ಅ-2 ಗಳ SIR 2026 ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, SIR ಪ್ರಭಾರಿ ಶ್ರೀ ಪಾಲಾಕ್ಷಿ ಗೌಡ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ನೀಲಪ್ಪ ಚಾವಡಿ, BL ಅ-1 ಶ್ರೀ ಪ್ರವೀಣ್ ಶೆಟ್ಟರ್, ಎರಡೂ ಮಂಡಲಗಳ ಅಧ್ಯಕ್ಷರು, BL ಅ-2 ರವರು, ಪಕ್ಷದ ಪದಾಧಿಕಾರಿಗಳು, ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಸೇರಿದಂತೆ ಹಲವರು ಭಾಗವಹಿಸಿದ್ದರು.
More news from ಕರ್ನಾಟಕ and nearby areas
- ಪೊಲೀಸರ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಖಾಕಿ ಪಡೆ ನೀಟ್ ವಿದ್ಯಾರ್ಥಿಗಳನ್ನು ಅವರ ಸರಿಯಾದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಮೂಲಕ ಅವರ ಭವಿಷ್ಯವನ್ನು ಉಳಿಸಿದೆ. ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ನೀಡಿ, ಅವರಿಗೆ ಪರೀಕ್ಷೆಗೆ ಹಾಜರಾಗಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯ ನಿಜಕ್ಕೂ ಮೆಚ್ಚುವಂಥದ್ದು.1
- ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಸಿದ್ದರಾಮಯ್ಯ ಅವರು ಮನವಿಯೊಂದನ್ನು ಮಾಡಿದ್ದಾರೆ. ತಮ್ಮನ್ನು ಕಾರ್ಯಕ್ರಮಗಳಲ್ಲಿ ಕೊನೆಯ ಭಾಷಣಕಾರರನ್ನಾಗಿ ಮಾಡಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.1
- ಶಿಗ್ಗಾವಿ ಪಟ್ಟಣದಲ್ಲಿ ಪುಟ್ಟರಾಜ ಗವಾಯಿ ಸೌಹಾರ್ದ ಸಹಕಾರಿ ಶಾಖೆಯ ನೂತನ ಬಾಡಿಗೆ ಕಟ್ಟಡ ಸ್ಥಳಾಂತರದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ, ಶಾಖೆಯ ಮೂರನೇ ವರ್ಷದ ವಾರ್ಷಿಕೋತ್ಸವದ ನಿಮಿತ್ತ ಶ್ರೀ ಸತ್ಯನಾರಾಯಣ ಪೂಜಾ ಸಮಾರಂಭವನ್ನೂ ಆಯೋಜಿಸಲಾಗಿತ್ತು. ಶ್ರೀ ರುದ್ರಮುನಿ ಹೀರೆಮಠ ಸ್ವಾಮಿಜಿಗಳು ಹಾಗೂ ಸಹಕಾರಿಯ ಅಧ್ಯಕ್ಷರಾದ ಹನುಮಂತಪ್ಪ ಯು.ವಿ. ತಮ್ಮ ದಂಪತಿಗಳೊಂದಿಗೆ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಕಾರಿಯ ಉಪಾಧ್ಯಕ್ಷ ಸುಭಾಸ್ಗೌಡ ಪಾಟೀಲ, ಕುಮಾರಿ ಪ್ರತಿಕ್ಷಾ ಗೌಳಿ, ನಿರ್ದೇಶಕರಾದ ರಾಜಶೇಖರ ಶೆಟ್ಟರ್, ಬಸಯ್ಯ ಈಳಿಗೇರ, ನಿರ್ಮಲಾ ಈಳಿಗೇರ, ರೇಖಾ ವಡ್ಡರ್, ಸಿ.ಪಿ.ಐ. ಅನಿಲ್ ರಾಠೋಡ, ಶಿವಾನಂದ ಮ್ಯಾಗೇರಿ, ಉಮೇಶ್ ಗೌಳಿ, ಸಿ.ಡಿ. ಯತ್ನಳ್ಳಿ, ನಾಗಪ್ಪ ಬೆಂತೂರ, ವಿನೋದಾ ಪಾಟೀಲ, ಭರಮಜ್ಜ ನವಲಗುಂದ, ರಮೇಶ್ ಹರಿಜನ, ಶಾಖೆಯ ವ್ಯವಸ್ಥಾಪಕರಾದ ಅಶೋಕ್ ಹೋಳಲ ಹಾಗೂ ಎಲ್ಲ ಸಿಬ್ಬಂದಿ ವರ್ಗ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.2
- ಗದಗ ಜಿಲ್ಲೆಯ ಕದಡಿ ಗ್ರಾಮದ ಮಲ್ಲಯ್ಯಜ್ಜನ ಕಟ್ಟೆ ಹತ್ತಿರ ಶನಿವಾರ ಬೆಳಿಗ್ಗೆ ಜನದಟ್ಟಣೆಯಿರುವ ವಸತಿ ಪ್ರದೇಶದಲ್ಲಿ ಬೃಹತ್ ನಾಗರ ಹಾವೊಂದು ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಮೂಡಿಸಿದೆ. ಹಾವು ಸಳ ಸಳನೆ ಬರುತ್ತಿರುವುದನ್ನು ಕಂಡ ಸಾರ್ವಜನಿಕರು ಭಯಭೀತರಾಗಿ ಕೆಲ ಹೊತ್ತು ನಿಂತು ನೋಡುತ್ತಿದ್ದರು. ಈ ವೇಳೆ, ಕೆಲವರು ಇದು ದೇವರ ಹಾವಿರಬಹುದೇ ಎಂದು ಪರಸ್ಪರ ಚರ್ಚಿಸತೊಡಗಿದರು. ತಕ್ಷಣವೇ ಅಲ್ಲಿಯೇ ಇದ್ದವರು ಒಬ್ಬ ಹಾವು ಹಿಡಿಯುವ ವ್ಯಕ್ತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿದು ಧಾವಿಸಿದ ಉರಗ ರಕ್ಷಕರು, ಮಣ್ಣಿನ ಗೋಡೆಯಲ್ಲಿ ಅಡಗಿಕೊಂಡಿದ್ದ ಹಾವನ್ನು ಹೊರಗೆಳೆದು ಜೀವಂತವಾಗಿ ಸೆರೆ ಹಿಡಿದು ನಂತರ ಅದನ್ನು ಹೊರ ವಲಯದಲ್ಲಿ ಬಿಟ್ಟು ಹೋಗಿದ್ದಾರೆ. ಈ ಪ್ರಸಂಗ ಗ್ರಾಮಸ್ಥರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉರಗ ರಕ್ಷಕರು, ಎಲ್ಲಿಯೇ ಹಾವು ಕಂಡರೂ ಯಾರೂ ಅವುಗಳನ್ನು ಬಡಿಯಬಾರದು, ಬದಲಿಗೆ ಉರಗ ರಕ್ಷಕರಿಗೆ ಅಥವಾ ಅರಣ್ಯ ಇಲಾಖೆಯವರಿಗೆ ತಿಳಿಸಿ ಅವುಗಳ ರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ. ಈ ಘಟನೆ ನಡೆದಾಗ ಗ್ರಾಮಸ್ಥರಾದ ಅಜ್ಜು ರಾಜೇಖಾನ್, ಪ್ರಕಾಶ ಕಮ್ಮಾರ, ಪ್ರವೀಣ ಚೋಳಪ್ಪನವರ, ನಬಿಸಾಬ ರಾಜೇಖಾನ ಸೇರಿದಂತೆ ಇತರರು ಉಪಸ್ಥಿತರಿದ್ದರು.2
- ಸೊರಬದ ಜಡೆ ಸಂಸ್ಥಾನ ಮಠದ ಪರಮ ಪೂಜ್ಯ ಡಾ. ಮಹಾಂತ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನ ಮತ್ತು ಸಾನಿಧ್ಯದಲ್ಲಿ ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದಲ್ಲಿ 12ನೇ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧೆ ಮತ್ತು ಉತ್ಸಾಹದಿಂದ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ ವೈ ರಾಘವೇಂದ್ರ ಅವರು, ಯೋಗವು ಕೇವಲ ದೈಹಿಕ ಕಸರತ್ತಲ್ಲದೆ, ದೇಹ, ಮನಸ್ಸು ಮತ್ತು ಅಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮವಾಗಿದೆ ಎಂದು ತಿಳಿಸಿದರು. ಭಾರತೀಯ ಸಂಸ್ಕೃತಿಯ ಈ ಅಮೂಲ್ಯ ಕೊಡುಗೆಯನ್ನು ಇಡೀ ಜಗತ್ತಿಗೆ ತಲುಪಿಸಿದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಪೂಜ್ಯ ಸ್ವಾಮೀಜಿಯವರ ಪ್ರೇರಣೆಯೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಾವಿರಾರು ಯುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅತ್ಯಂತ ಬೃಹತ್ ಪ್ರಮಾಣದಲ್ಲಿ ಪಾಲ್ಗೊಂಡು, ಶಿಸ್ತುಬದ್ಧವಾಗಿ ಯೋಗಾಭ್ಯಾಸ ಮಾಡುವ ಮೂಲಕ ಸದೃಢ ಹಾಗೂ ನಿರೋಗಿ ಭಾರತದ ಸಂಕಲ್ಪಕ್ಕೆ ಅಭೂತಪೂರ್ವ ಶಕ್ತಿಯನ್ನು ತುಂಬಿದರು. ಯುವಶಕ್ತಿಯ ಈ ಅಪಾರ ಉತ್ಸಾಹ ನಿಜಕ್ಕೂ ಪ್ರಶಂಸನೀಯ ಎಂದು ಅವರು ಹೇಳಿದರು. ಅಲ್ಲದೆ, ದೈನಂದಿನ ಜೀವನದಲ್ಲಿ ಯೋಗವನ್ನು ನಿರಂತರ ಹವ್ಯಾಸವಾಗಿಸಿಕೊಂಡು, ಮಾನಸಿಕ ಒತ್ತಡಗಳಿಂದ ಮುಕ್ತರಾಗಿ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಎಲ್ಲರೂ ಪಣ ತೊಡಬೇಕು ಎಂದು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. ಸೊರಬದ ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನ ಹಾಗೂ ಸಾನಿಧ್ಯದಲ್ಲಿ ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದಲ್ಲಿ 12ನೇ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.4
- ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಅನನ್ಯ ಪ್ರೌಢಶಾಲಾ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ. ನಾಗರಾಜ್ ಅವರು ಮಾತನಾಡಿ, ಮಾನವನಿಗೆ ಎಲ್ಲದಕ್ಕಿಂತಲೂ ಆರೋಗ್ಯವೇ ಮುಖ್ಯವಾಗಿದ್ದು, ಆರೋಗ್ಯವೇ ಭಾಗ್ಯವೆಂದು ಬಣ್ಣಿಸಿದರು. ಯೋಗಾಭ್ಯಾಸದಿಂದ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಅವರು ಈ ಸಂದರ್ಭದಲ್ಲಿ ವಿವರಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಕಲ್ಲೇಶ್ ಕುಮಾರ್ ಕೆ ಅವರು ಯೋಗ ದಿನದ ಇತಿಹಾಸ ಮತ್ತು ವಿಶೇಷತೆಗಳನ್ನು ತಿಳಿಸುತ್ತಾ, ಯೋಗವು ಬದುಕಿನ ಒಂದು ಕಲೆ ಎಂದು ಅದರ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದರು. ಈ ದಿನಾಚರಣೆಯ ಭಾಗವಾಗಿ, ದೈಹಿಕ ಶಿಕ್ಷಕ ಕುಮಾರ್ ಆರ್, ನಿಶ್ಚಿತ ಕೆ ಮತ್ತು ಅನನ್ಯ ಯೋಗ ಕೇಂದ್ರದ ಸದಸ್ಯರ ನೇತೃತ್ವದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಅನಿಲ್ ಕುಮಾರ್ ಬಿ.ಎಸ್, ಆಡಳಿತಾಧಿಕಾರಿ ವೇಣುಗೋಪಾಲ್ ಎಸ್, ಮುಖ್ಯೋಪಾಧ್ಯಾಯರಾದ ಸುನಿತಾ ಆರ್, ತನುಜ ಎ ಸೇರಿದಂತೆ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಭಾಗವಹಿಸಿದ್ದರು. ಶಾರದ ಅವರು ಪ್ರಾರ್ಥನೆ ಸಲ್ಲಿಸಿದರೆ, ಕುಮಾರಿ ಸೃಷ್ಟಿ ಎನ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ಲಿಪಿ ಮಿಲನ ಸ್ವಾಗತ ಭಾಷಣ ಮಾಡಿದರು ಹಾಗೂ ಕುಮಾರಿ ಪ್ರಾರ್ಥನಾ ವೈ ವಂದನಾರ್ಪಣೆ ಮಾಡಿದರು.1
- ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ "ಗೃಹಲಕ್ಷ್ಮಿ" ಯೋಜನೆಯ ಫಲಾನುಭವಿಗಳು ಯಾವುದೇ ರೀತಿಯ ಊಹಾ ಪೋಹಗಳಿಗೆ, ಅಂತೆ ಕಂತೆಗಳಿಗೆ, ಅಥವಾ ಗಾಳಿ ಸುದ್ದಿಗಳಗೆ ಕಿವಿಗೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ. ಸರ್ಕಾರದ ಅಥವಾ ಇಲಾಖೆಯ ಅಧಿಕೃತ ಆದೇಶ ಹಾಗೂ ನಿರ್ದೇಶನಗಳು ಹೊರಡಿಸುವವರೆಗೆ ಫಲಾನುಭವಿಗಳು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಿಂದ ಈ ಕುರಿತು ಮಾಹಿತಿ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಧಿಕೃತ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಸಾಕಷ್ಟು ಫಲಾನುಭವಿಗಳು ಕಂಪ್ಯೂಟರ್ ಸೆಂಟರ್ಗಳಿಗೆ ಹಾಗೂ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುತ್ತಿದ್ದಾರೆ. ಇದನ್ನು ಮನಗಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯು ಈ ಸಂಬಂಧ ಸ್ಪಷ್ಟನೆ ನೀಡಿ ಸುತ್ತೋಲೆ ಹೊರಡಿಸಿದೆ. ಅರ್ಹ ಫಲಾನುಭವಿಗಳು ಕಚೇರಿಗಳಿಗೆ ಅಥವಾ ಡಾಟಾ ಎಂಟ್ರಿ ಕಂಪ್ಯೂಟರ್ ಸೆಂಟರ್ಗಳಿಗೆ ಅನಗತ್ಯವಾಗಿ ಅಲೆದಾಡುವುದು ಅಥವಾ ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ತಿಳಿಸಿದೆ. ಯೋಜನೆಯ ಸೌಲಭ್ಯ ಹೊಂದದ ಅರ್ಹರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಪ್ರಸ್ತುತ ಅರ್ಜಿಗಳನ್ನು ಆಹ್ವಾನಿಸಿಲ್ಲ. ಸಂಬಂಧಿಸಿದಂತೆ ಅರ್ಹರಿಂದ ಅರ್ಜಿ ಆಹ್ವಾನಿಸಿ ಪ್ರಕಟಣೆ ಹೊರಡಿಸಿದ ನಂತರವೇ, ಸೌಲಭ್ಯ ಹೊಂದದೇ ಇರುವ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಅರ್ಹ ಫಲಾನುಭವಿಗಳು ಯಾವುದೇ ಗಾಸಿಪ್ಗಳಿಗೆ ಅಥವಾ ಗಾಳಿಸುದ್ದಿಗಳಿಗೆ ಕಿವಿಗೊಡಬಾರದು. ಈ ಉದ್ದೇಶಕ್ಕಾಗಿ ಕಂಪ್ಯೂಟರ್ ಸೆಂಟರ್ಗಳಿಗೆ ಹಾಗೂ ಇಲಾಖಾ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡಬಾರದು ಎಂದು ಇಲಾಖೆ ಹೇಳಿದೆ. ಯಾವುದೇ ರೀತಿಯಲ್ಲಿಯೂ ಆತಂಕಪಡುವ ಅಗತ್ಯವಿಲ್ಲ ಎಂದು ಪುನರುಚ್ಚರಿಸಿದ ಇಲಾಖೆ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯವು ಯಥಾವತ್ತಾಗಿ ಲಭ್ಯವಿರುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.3
- ಬೆಂಗಳೂರಿನಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಹೊರಗೆ ವಿದ್ಯಾರ್ಥಿನಿಯರು ಕಣ್ಣೀರಿಟ್ಟ ಘಟನೆ ವರದಿಯಾಗಿದೆ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಲವಾರು ವಿದ್ಯಾರ್ಥಿನಿಯರು ದುಃಖಿತರಾಗಿ ಕಣ್ಣೀರು ಹಾಕುತ್ತಿರುವುದು ಕಂಡುಬಂದಿದೆ.1