logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ಅಧಿಕಾರ ಇರಲಿ, ಇಲ್ಲದಿರಲಿ ಒಳ ಮೀಸಲಾತಿಯ ಪರ, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು – ಸಿದ್ದರಾಮಯ್ಯ ಬೆಂಗಳೂರು – ಆಗಸ್ಟ್‌ 27: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ"ವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ. ಜಾತಿ ವ್ಯವಸ್ಥೆ ಪರಿಣಾಮವಾಗಿ ಶೋಷಣೆಗೆ ಒಳಗಾದವರಿಗೆ, ಅವಕಾಶ ವಂಚಿತರಿಗೆ ಮೀಸಲಾತಿ ಸಿಗಲೇಬೇಕು. ನಾವ್ಯಾರು ದಡ್ಡರಲ್ಲ, ಅವಕಾಶ ವಂಚಿತರು. ನಮ್ಮ ಬುದ್ಧಿವಂತಿಕೆ ಪ್ರದರ್ಶನಕ್ಕೆ ಅವಕಾಶ ಸಿಕ್ಕಿರಲಿಲ್ಲ. ಈ ಅವಕಾಶವನ್ನು ಮೀಸಲಾತಿ ವ್ಯವಸ್ಥೆ ನೀಡುತ್ತಿದೆ. ಎಲ್ಲಿಯವರೆಗೆ ಸಮಾನ ಅವಕಾಶಗಳು ಸಿಗುವುದಿಲ್ಲ, ಅಲ್ಲಿಯವರೆಗೆ ಅಸಮಾನತೆ ಹೋಗುವುದಿಲ್ಲ. ಈ ಅಸಮಾನತೆ ಹೋಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ಶಕ್ತಿ ಬರಬೇಕು ಎಂದು ಬಾಬಾ ಸಾಹೇಬರು ಹೇಳಿದ್ದರು. ಬುದ್ಧನ ಕಾಲದಿಂದಲೂ ಇಲ್ಲಿ ಜಾತಿ ವ್ಯವಸ್ಥೆ ಇದೆ, ಅದರ ವಿರುದ್ಧ ಸುಧಾರಣಾ ಚಳವಳಿಗಳು ನಡೆಯುತ್ತಿದೆ, ಇದು ಹೋಗಬೇಕು ಎಂದು ಎಲ್ಲರೂ ಹೇಳುತ್ತಾರೆ, ಆದರೂ ಇನ್ನೂ ಜಾತಿ ಜೀವಂತವಿದೆ ಎನ್ನುವುದು ವಿಪರ್ಯಾಸ ಎಂದು ಜಾತಿ ವ್ಯವಸ್ಥೆಯೆಡೆಗಿನ ತಮ್ಮ ಬೇಸರ ಹೊರಹಾಕಿದರು. 25 ನವೆಂಬರ್‌ 1949ರಲ್ಲಿ ಸಂವಿಧಾನ ಅಂಗೀಕಾರವಾಗುವ ಹಿಂದಿನ ದಿನ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಹೇಳಿದ್ದ “ನಮಗೆ ಸ್ವಾತಂತ್ರ್ಯ ಸಿಕ್ಕಿದೆ, ಸಮಾನತೆ ಎನ್ನುವುದು ಸಂವಿಧಾನದ ಆಶಯವಾಗಿದೆ. ಸಮಸಮಾಜ ನಿರ್ಮಾಣ ಆಗಲೇಬೇಕು. ನಮಗೆ ಮತದಾನದ ಹಕ್ಕು ಕೊಟ್ಟಿದ್ದಾರೆ, ರಾಷ್ಟ್ರಪತಿಯಿಂದ ಹಿಡಿದು ಸಾಮಾನ್ಯ ಪ್ರಜೆಯ ವರೆಗೆ ಪ್ರತಿಯೊಬ್ಬರ ಮತಕ್ಕೂ ಒಂದೇ ಮೌಲ್ಯ ಇದೆ, ಆದರೆ ಇದೇ ಮಾದರಿಯ ಸಮಾನತೆ ಸಾಮಾಜಿಕವಾಗಿ, ಆರ್ಥಿಕವಾಗಿ ಸಾದ್ಯವಾಗಿಲ್ಲ. ಇದನ್ನು ಸರಿಪಡಿಸದೇ ಹೋದರೆ ಅಸಮಾನತೆ ಮುಂದುವರೆಯುತ್ತದೆ, ಸಮಾನತೆ ಸಾದ್ಯವಾಗದೆ ಹೋದರೆ ಮುಂದೊಂದು ದಿನ ಶೋಷಣೆಗೆ ಒಳಗಾದ ಜನರೇ ಪ್ರಭುತ್ವದ ಸೌಧವನ್ನು ದ್ವಂಸ ಮಾಡುತ್ತಾರೆ” ಎನ್ನುವ ಮಾತನ್ನು ಸ್ಮರಿಸಿದರು. “ಇವನಾರವ, ಇವನಾರವ, ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ಎಂದೆನಿಸಯ್ಯ, ಎನ್ನ ಮನೆ ಮಗನೆಂದೆನಿಸಯ್ಯ ಕೂಡಲಸಂಗಮದೇವ” ಎಂದು 850 ವರ್ಷಗಳ ಹಿಂದೆ ಬಸವಣ್ಣನವರು ಹೇಳಿದ್ದರು, ಇಂದಿಗೂ ಇದು ಸಾಧ್ಯವಾಗಿಲ್ಲ. ಇದು ಸಮಾಜದ ನೈಜ ಚಿತ್ರಣ ಎಂದು ಬೇಸರ ವ್ಯಕ್ತಪಡಿಸಿದರು. ನನಗೆ ಸಮಾಜ ಅರ್ಥಮಾಡಿಕೊಳ್ಳುವ ವಯಸ್ಸು ಆದಾಗಿನಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಲೇ ಇದ್ದೇನೆ. ಮುಂದೆಯೂ ಹೋರಾಟ ಮಾಡುತ್ತೇನೆ. ನಾನು ಬಿ.ಎಸ್.ಸಿ ಓದುವಾಗ ಕಾಲೇಜಿಗೆ ರಜೆ ಸಿಕ್ಕರೆ ಊರಿಗೆ ಹೋಗುತ್ತಿದ್ದೆ. ಮಧ್ಯಾಹ್ನದ ಹೊತ್ತಿಗೆ ನಮ್ಮ ತಂದೆ ನನಗೆ ಮನೇಲಿರುವ ದನ-ಕರುಗಳಿಗೆ ನೀರು ಹಾಕುವ ಕೆಲಸ ಕೊಡುತ್ತಿದ್ದರು. ಆಗ ಬಾವಿಯಿಂದ ನೀರನ್ನು ಮೇಲೆತ್ತಿ ಹಾಕಬೇಕಿತ್ತು, ಬಾವಿಯೊಳಗೆ ಗೂಡುಕಟ್ಟುತ್ತಿದ್ದ ಪಕ್ಷಿಗಳಿಂದಾಗಿ ನೀರಿನಲ್ಲಿ ಸಾಕಷ್ಟು ಕಸ ತುಂಬಿರುತ್ತಿತ್ತು, ನಾನು ಕೊಡವನ್ನು ಮೇಲೆ ಕೆಳಗೆ ಮಾಡಿ ಕಸವನ್ನು ಬದಿಗೆ ಸರಿಸಿ ನೀರು ಸೇದಿಕೊಂಡು ಹೋಗುತ್ತಿದ್ದೆ. ನಾನು ಮನೆಗೆ ಹೋಗಿ ಕೆಲ ಸಮಯ ಬಿಟ್ಟು ವಾಪಾಸು ಬರುವ ಹೊತ್ತಿಗೆ ಕಸ ಮತ್ತೆ ಬಾವಿಯ ಮಧ್ಯದಲ್ಲಿ ಬಂದಿರುತ್ತಿತ್ತು. ಇದೇ ರೀತಿ ಎಷ್ಟೇ ಸುಧಾರಣೆಗಳಾದರೂ ಜಾತಿ ವ್ಯವಸ್ಥೆ ಗಟ್ಟಿಯಾಗಿ ಉಳಿದುಕೊಂಡಿದೆ. ಹೀಗೆ ಸಿದ್ದರಾಮಯ್ಯ ಅವರು ತಮ್ಮ ಬಾಲ್ಯದ ನೆನಪನ್ನು ಜಾತಿ ವ್ಯವಸ್ಥೆಯ ಜಡತ್ವಕ್ಕೆ ಹೋಲಿಸಿ ವಿವರಿಸಿದರು. ಪಟ್ಟಭದ್ರರು ಬಹಳಾ ಮುಂದಾಲೋಚನೆ ಮಾಡಿ ಈ ಜಾತಿ ವ್ಯವಸ್ಥೆಯನ್ನು ಮಾಡಿದ್ದಾರೆ. ವರ್ಣ ವ್ಯವಸ್ಥೆ ನಾಶವಾಗಬೇಕು. ಇದಕ್ಕೆ ಎಲ್ಲಾ ಶೋಷಿತ ಜಾತಿಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಶಕ್ತಿಯನ್ನು ತುಂಬುವುದೇ ಪರಿಹಾರವಾಗಿದೆ. ಭಾರತೀಯ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದು ಲೋಹಿಯಾ ಅವರು ಹೇಳಿದ್ದರು. ಈ ಚಲನೆ ಬರಬೇಕಾದರೆ ತಳಸಮುದಾಯಗಳ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಶಕ್ತಿ ಬರಬೇಕು ಎಂದು ವಾದಿಸಿದರು. ಮಂಡಲ್‌ ಕಮಿಷನ್‌ ವರದಿ ಜಾರಿಗೆ ಬಂದಾಗ ಮೀಸಲಾತಿ ವಿರೋಧಿಗಳು ಅಮಾಯಕ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ, ಅವರು ಬೆಂಕಿಹಚ್ಚಿಕೊಂಡು ಪ್ರಾಣ ಕಳೆದುಕೊಳ್ಳುವಂತೆ ಮಾಡಿದರು. ಒಂದು ವೇಳೆ ವಿ.ಪಿ.ಸಿಂಗ್‌ ಅವರು ಪ್ರಧಾನಿಯಾಗಿರದೇ ಹೋಗಿದ್ದರೆ ಮಂಡಲ್‌ ಕಮಿಷನ್‌ ವರದಿ ಜಾರಿ ಆಗುವುದು ಅನುಮಾನವಿತ್ತು. ಪಿ.ವಿ.ನರಸಿಂಹ್‌ ರಾವ್‌ ಅವರ ಕಾಲದಲ್ಲಿ ವರದಿ ಜಾರಿಗೆ ಬಂತು, ಇದಕ್ಕಾಗಿ ಕಾನ್ಷಿರಾಮ್‌ ಅವರು ಸೇರಿದಂತೆ ಅನೇಕರು ಹೋರಾಟ ಮಾಡಿದ್ದರು ಎನ್ನುವುದನ್ನು ಅವರು ಸ್ಮರಿಸಿದರು. 1992ರಲ್ಲಿ ಇಂದಿರಾ ಸಹಾನಿ ಕೇಸ್‌ನಲ್ಲಿ ಯಾವುದೇ ಕಾರಣಕ್ಕೂ ಮೀಸಲಾತಿಯ ಒಟ್ಟು ಮಿತಿಯು ಶೇ. 50ನ್ನು ಮೀರುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠವು ತೀರ್ಪು ನೀಡಿತು. ಮುಂದುವರಿದ ಜಾತಿಗಳಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವರಿಗೆ 10% ಮೀಸಲಾತಿಯನ್ನು ಕೊಟ್ಟರು. ಅಲ್ಲಿಗೆ 60% ಆಯ್ತು. ಆದರೆ ಮೀಸಲಾತಿ 50% ಕ್ಕಿಂತ ಜಾಸ್ತಿ ಆಗಬಾರದು ಎಂಬ ನಿಯಮವಿದೆ. ಅದಕ್ಕೆ ಮೀಸಲಾತಿ ಸುಪ್ರೀಂ ಕೋರ್ಟ್‌ನಲ್ಲೂ, ಹೈಕೋರ್ಟ್‌ನಲ್ಲೂ, ನ್ಯಾಯಾಲಯಗಳಲ್ಲೂ ಬರಬೇಕು ಎಂದು ಆಗ್ರಹಿಸಿದರು. ಮುಂದುವರೆದು, ಮೀಸಲಾತಿಗಾಗಿ ನಾವು ಹೋರಾಟವನ್ನೇ ಮಾಡಿಲ್ಲ.ನಮ್ಮ ಮೀಸಲಾತಿ ಹೋರಾಟ ನಿರಂತರವಾಗಿ ನಡೆಯುತ್ತಲೇ ಇರಬೇಕು. ಸುಪ್ರೀಂ ಕೋರ್ಟ್‌ ಕೂಡ ಒಳಮೀಸಲಾತಿ ಬಗ್ಗೆ ಒಪ್ಪಿಕೊಂಡಿದೆ. ಕಾಂಗ್ರೆಸ್‌ ಪಕ್ಷ, ನಮ್ಮ ಸರ್ಕಾರ ಯಾವಾಗಲೂ ಒಳ ಮೀಸಲಾತಿ ಪರವಾಗಿದೆ. ಮೀಸಲಾತಿಗೆ ಯಾವತ್ತೂ ಕೂಡ ಭಿನ್ನಾಭಿಪ್ರಾಯಗಳು ಬರಬಾರದು ಎಂದರು. ಕೆಲವರು ಸ್ವಾರ್ಥಕ್ಕಾಗಿ ಮೀಸಲಾತಿ ವಿರುದ್ಧವಾಗಿರುವ ಜನರ ಜೊತೆಗೆ ಸೇರಿಕೊಳ್ಳುತ್ತಾರೆ. ಅದು ಆಗಬಾರದು. ಯಾವ ಪಕ್ಷ ಮೀಸಲಾತಿಗೆ ವಿರೋಧ ಇದೆಯೋ ಅವರ ಪರವಾಗಿ ನಿಲ್ಲುವುದು, ಆ ಪಕ್ಷದ ಸಿದ್ಧಾಂತಕ್ಕೆ ಜೈ ಅನ್ನುವುದು. ಇದು ಸ್ವಾರ್ಥ ಅಲ್ಲವೇ? ಎಂದು ಪ್ರಶ್ನಿಸಿದರು. ಯಾವುದೇ ಕಾರಣಕ್ಕೂ ಮೀಸಲಾತಿ ಹೋರಾಟಗಾರರಲ್ಲಿ ಭಿನ್ನಾಭಿಪ್ರಾಯಗಳು ಬರಬಾರದು. ಒಳ ಮೀಸಲಾತಿಗಾಗಿ 3 ದಶಕಗಳಿಂದ ಹೋರಾಟ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ ನಿರ್ಧಾರ ಬಂದ ಮೇಲೆ ಎಲ್ಲಾ ಕಡೆಯೂ ಇದಕ್ಕೆ ಚಾಲನೆ ಸಿಕ್ಕಿತು. ನಮ್ಮ ಸರ್ಕಾರ ಒಳಮೀಸಲಾತಿಯನ್ನು ಜಾರಿ ಮಾಡುತ್ತದೆ ಎಂದು ಅವತ್ತೇ ಹೇಳಿದ್ದೆ. ಅದರಂತೆ, ನಾಗಮೋಹನ್‌ದಾಸ್‌ ಕಮಿಟಿ ಮಾಡಿದೆವು. ಅವರು ಹಳ್ಳಿಗಳಿಗೆ ಭೇಟಿ ನೀಡಿ, ಜನರ ಜೊತೆಗೆ ಮಾತನಾಡಿ ಒಂದು ವರದಿಯನ್ನು ಕೊಟ್ಟರು. ಅದರ ಪ್ರಕಾರ, 5 ಗುಂಪುಗಳನ್ನು ಮಾಡಿ ಒಳ ಮೀಸಲಾತಿ ಹಂಚಿಕೆ ಮಾಡಿದೆವು ಎಂದು ವಿವರಿಸಿದರು. ಮುಂದುವರೆದು, ಆ 5 ಗುಂಪುಗಳನ್ನು ಮತ್ತೆ 3 ಮಾಡಿದೆವು. 6:6:5 ಸೂತ್ರದಡಿ ವಿಭಜಿಸಿದೆವು. ಅಲೆಮಾರಿಗಳನ್ನು ಭೋವಿ, ಬಂಜಾರ ಸಮುದಾಯಗಳ ಜೊತೆ ಸೇರಿಸಿದೆವು. ಅದು ಸರಿ ಇಲ್ಲ ಎಂದಾಯಿತು. ಈ ಮರು-ವರ್ಗೀಕರಣದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾದವು. ಆಮೇಲೆ ತಾತ್ಕಾಲಿಕವಾಗಿ 15% ಮಾಡೋಣ ಎಂದಾಯಿತು. ಚರ್ಚೆಗಳು ನಡೆದು ಐದು ಕಾಲು, ಐದು ಕಾಲು, ನಾಲ್ಕೂವರೆ ನೀಡಲು ಸಚಿವ ಸಂಪುಟವೂ ಒಪ್ಪಿಕೊಂಡಿತು. ಇಷ್ಟೆಲ್ಲಾ ಆದರೂ ಕೂಡ ಇನ್ನೂ ಗೊಂದಲಗಳಿವೆ. ಏನೇ ಆದರೂ ಒಳ ಮೀಸಲಾತಿ ಜಾರಿ ಆಗಲೇಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯನವರು ಹೇಳಿದ್ದನ್ನು ಕೇಳುತ್ತೇನೆ ಅಂತಾರೆ. ಒಳಮೀಸಲಾತಿಯಲ್ಲಿ ಇರುವ ಎಲ್ಲಾ ಗೊಂದಲಗಳನ್ನು ನಿವಾರಣೆ ಮಾಡಿ ಜಾರಿ ಮಾಡುವಂತೆ ನಾನು ಅವರ ಬಳಿ ಮಾತನಾಡುತ್ತೇನೆ. ಅಂತಿಮವಾಗಿ ಸಚಿವ ಸಂಪುಟ ತೀರ್ಮಾನ ತೆಗೆದುಕೊಳ್ಳುತ್ತದೆ. ನನ್ನ ಮಾತು ಕೇಳುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು. ದೇಶದಲ್ಲಿರುವ ಅಸಮಾನತೆ ಹೋಗುವವರೆಗೂ ಮೀಸಲಾತಿ ಇರಲೇಬೇಕು. ಎಲ್ಲರಿಗೂ ಸಮಾನ ಅವಕಾಶಗಳು ಸಿಗಲೇಬೇಕು. ಓದಿದವರೆ ಜಾತಿ ವ್ಯವಸ್ಥೆಯನ್ನು ಹೆಚ್ಚು ಪಾಲಿಸುವುದು. ಅಂಬೇಡ್ಕರ್‌ ಅವರು ಒಂದು ಮಾತು ಹೇಳಿದ್ದಾರೆ, ನಾನು ಇಲ್ಲಿಯವರೆಗೂ ಸಾಮಾಜಿಕ ನ್ಯಾಯದ ರಥವನ್ನು ಎಳೆದುಕೊಂಡು ಬಂದಿದ್ದೇನೆ. ಸಾಧ್ಯವಾದರೆ ಅದನ್ನು ಮುಂದಕ್ಕೆ ಕೊಂಡೊಯ್ಯಿರಿ, ಹಿಂದಕ್ಕೆ ಮಾತ್ರ ತಳ್ಳಬೇಡಿ ಎಂದಿದ್ದಾರೆ. ಅದರಂತೆ ನಾವು ನಡೆದುಕೊಳ್ಳಬೇಕು ಎಂದರು. ಈ ಹಿಂದೆ ಮೌಢ್ಯ ನಿವಾರಣಾ ಕಾಯ್ದೆ ಜಾರಿ ತಂದಿದ್ದೆವು. ಆದರೆ, ಯಾರು ಅದನ್ನು ಪಾಲಿಸುತ್ತಿಲ್ಲ. ಮೌಢ್ಯಗಳನ್ನು ನಂಬಬೇಡಿ ಎಂದು ಬಸವಣ್ಣನವರೇ ಹೇಳಿದ್ದರು. 2013ರಲ್ಲಿ ನಾನು ಮುಖ್ಯಮಂತ್ರಿಯಾದೆ. ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಎಸ್‌ಪಿ / ಟಿಎಸ್‌ಪಿ ಕಾಯ್ದೆ ಜಾರಿಗೆ ತಂದೆ. ಅದಕ್ಕೂ ಮೊದಲು ಅಧಿಕಾರಿದಲ್ಲಿದ್ದ ಬಿಜೆಪಿ, ಜೆಡಿಎಸ್‌ ಪಕ್ಷದ ಯಾರೂ ಕೂಡ ಈ ಕಾಯ್ದೆಯನ್ನು ಜಾರಿ ಮಾಡಿಲ್ಲ ಎನ್ನುವ ವಿಚಾರವನ್ನು ಸಭೆಯ ಗಮನಕ್ಕೆ ತಂದರು. ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನ ಬಳಕೆ ಮಾಡಬೇಕು ಎಂಬ ಕಾನೂನನ್ನು ಮಾಡಿದ್ದು ನಮ್ಮ ಸರ್ಕಾರ. 2013ಕ್ಕಿಂತ ಮೊದಲು ಈ ವರ್ಗಗಳ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆಯಾಗುವ ಅನುದಾನ ಸರಿಸುಮಾರು 8,000 ಕೋಟಿ ರೂಪಾಯಿ ಇತ್ತು, ನಾನು ಈ ಕಾನೂನು ಜಾರಿ ಮಾಡಿದ ಮೇಲೆ ರೂ.15,000 ಕೋಟಿಯನ್ನು ಮೀರಿತು. ಈ ವರ್ಷ ಎಸ್.ಸಿ.ಪಿ/ಟಿ.ಎಸ್.ಪಿ ಗೆ ರೂ.44,636 ಕೋಟಿ ಇದೆ. ಇದೇ ಕೆಲಸವನ್ನು ಬೇರೆ ಸರ್ಕಾರಗಳು ಯಾಕೆ ಮಾಡಿಲ್ಲ? ಎನ್ನುವ ಪ್ರಶ್ನೆಯನ್ನು ಅವರು ಸಭಿಕರ ಮುಂದಿಟ್ಟರು. ಈ ಕಾಯ್ದೆಯ ಭಾಗವಾಗಿದ್ದ 7ಡಿ ಅನ್ನು ರದ್ದು ಮಾಡಿದ್ದು ನಾನು. 4% ಬಡ್ಡಿಗೆ ಕೆಎಸ್‌ಎಫ್‌ಸಿ ಯಲ್ಲಿ 10 ಕೋಟಿ ರೂಪಾಯಿ ವರೆಗೆ ಸಾಲ ಸೌಲಭ್ಯ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಬದ್ಧತೆ ಇದ್ದಾಗ ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ ಎನ್ನುವುದಕ್ಕೆ ಇದು ಉದಾಹರಣೆ. 2011ರ ಜನಗಣತಿ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರು 24.1% ಇದ್ದಾರೆ. 6.95% ಎಸ್.ಟಿ ಹಾಗೂ 17.15% ಎಸ್.ಸಿ ಸಮುದಾಯದ ಜನರಿದ್ದಾರೆ. ಈಗಿನ ಸರ್ಕಾರದಲ್ಲಿ ಪರಮೇಶ್ವರ್‌ ಅವರನ್ನು ಉಪಮುಖ್ಯಮಂತ್ರಿ ಮಾಡಿದ್ದು ಯಾರು ಗೊತ್ತಾ? ನಾಲ್ಕೈದು ಜನರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರು, ಒಬ್ಬರಿಗೆ ಅವಕಾಶ ಕೊಡಬೇಕು ಎಂದು ಹೇಳಿದ್ದು ಯಾರು ಗೊತ್ತ? ಬಡ್ತಿಯಲ್ಲಿ ಮೀಸಲಾತಿ ಬೇರೆ ಯಾವುದಾದರೂ ರಾಜ್ಯದಲ್ಲಿ ಇದೆಯಾ? ರತ್ನಪ್ರಭಾ ಅವರು ಮುಖ್ಯಕಾರ್ಯದರ್ಶಿಯಾಗಿರುವಾಗ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ, ವರದಿ ತರಿಸಿಕೊಂಡು, ವರದಿಯನ್ನು ಕಾನೂನಿನ ರೂಪದಲ್ಲಿ ಜಾರಿ ಮಾಡಿದ್ದು ನಮ್ಮ ಸರ್ಕಾರ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ರು, ಆದರೆ ತೀರ್ಪು ನಮ್ಮ ಪರವಾಗಿ ಬಂತು. ಕರ್ನಾಟಕದಲ್ಲಿ ಮಾತ್ರ ಬಡ್ತಿಯಲ್ಲಿ ಮೀಸಲಾತಿ ಇದೆ. ಇದೆಲ್ಲಾ ಸಾದ್ಯವಾಗಿದ್ದು ಹೇಗೆ? ಎನ್ನುವ ಪ್ರಶ್ನೆಯನ್ನು ಸಭೆಯ ಮುಂದಿಟ್ಟರು. ನಾನು ಇಷ್ಟೆಲ್ಲಾ ಮಾಡಿದ್ರೂ ಒಳಮೀಸಲಾತಿ ಜಾರಿಗೆ ತರುವ ಮೊದಲು ಇಲ್ಲಿ ಸಭೆಯಲ್ಲೇ ಇರುವ ಹಲವರು ನನ್ನ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಅದಕ್ಕಾಗಿಯೇ ನಾನು ಅನೇಕ ಬಾರಿ “ಯಾರು ನಿಮ್ಮ ಪರ ಇರುವವರು, ಯಾರು ವಿರೋಧಿಗಳು ಎನ್ನುವುದನ್ನು ಗುರುತಿಸುವ ಕೆಲಸ ಮಾಡಬೇಕು” ಎಂದು ಹೇಳಿದ್ದೇನೆ. ನಾನು ಮಾಡಿರುವ ಕೆಲಸವನ್ನು ನರೇಂದ್ರ ಮೋದಿ ಅವರು ಯಾಕೆ ಮಾಡಿಲ್ಲ? ಸಾಮಾಜಿಕ ಪರಿಸ್ಥಿತಿ ಹೀಗೆ ಮುಂದುವರೆದರೆ ಜನರನ್ನು ಶೋಷಣೆ ಮಾಡಲು ಅವಕಾಶ ಇರುತ್ತದೆ ಎಂದು ಅವರು ಬದಲಾವಣೆ ಮಾಡಲ್ಲ. ಸಂವಿಧಾನ ಅಂಗೀಕಾರ ಮಾಡಿದ ಮೇಲೆ ಅದನ್ನು ವಿರೋಧ ಮಾಡಿದವರು ಯಾರು? ಇದೇ ಮನುವಾದಿಗಳಲ್ಲವೇ? ಆರ್.ಎಸ್.ಎಸ್‌ ಮುಖವಾಣಿ ಆರ್ಗನೈಸರ್‌ ನಲ್ಲಿ ಸಂವಿಧಾನವನ್ನು ವಿರೋಧ ಮಾಡಿಲ್ಲವೇ? ಎಂದು ಇತಿಹಾಸವನ್ನು ಸ್ಮರಿಸಿದರು. ನಾನು ಎಂದಿಗೂ ನಿಮ್ಮ ಜೊತೆ ಇರುತ್ತೇನೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎನ್ನುವ ತಮ್ಮ ನಿರ್ಧಾರವನ್ನು ಪುನರುಚ್ಛರಿಸಿದ ಸಿದ್ದರಾಮಯ್ಯ ಅವರು, ತಮ್ಮ ಈ ನಿರ್ಧಾರಕ್ಕೆ ವಯಸ್ಸಿನ ಕಾರಣವನ್ನು ನೀಡಿದರು. ಒಳ ಮೀಸಲಾತಿ ಹೋರಾಟ ಮುಂದುವರೆಯಬೇಕು, ಗುರಿ ತಲುಪುವ ವರೆಗೆ ನಿಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಮರೆತು ಜೊತೆಯಾಗಿ ಹೋರಾಟ ನಡೆಸಬೇಕು. ನಿಮ್ಮ ಸುತ್ತ ನಿಮ್ಮ ನಿಮ್ಮೊಳಗೆ ಬೆಂಕಿ ಹಚ್ಚುವ ಜನರಿದ್ದಾರೆ, ಜಾಗೃತೆಯಾಗಿರಿ ಎನ್ನುವ ಕಿವಿಮಾತನ್ನು ಅವರು ಹೋರಾಟಗಾರರಿಗೆ ಹೇಳಿದರು. ಒಳಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಮಂತ್ರಿಗಳ ಜೊತೆ ಮಾತನಾಡುವುದಾಗಿಯೂ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

1 hr ago
user_Lavanya
Lavanya
Local News Reporter ಪಾವಗಡ, ತುಮಕೂರು, ಕರ್ನಾಟಕ•
1 hr ago
d2765e29-d0e5-4e78-9d77-eb28c2c0b65d

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ಅಧಿಕಾರ ಇರಲಿ, ಇಲ್ಲದಿರಲಿ ಒಳ ಮೀಸಲಾತಿಯ ಪರ, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು – ಸಿದ್ದರಾಮಯ್ಯ ಬೆಂಗಳೂರು – ಆಗಸ್ಟ್‌ 27: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ"ವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ. ಜಾತಿ ವ್ಯವಸ್ಥೆ ಪರಿಣಾಮವಾಗಿ ಶೋಷಣೆಗೆ ಒಳಗಾದವರಿಗೆ, ಅವಕಾಶ ವಂಚಿತರಿಗೆ ಮೀಸಲಾತಿ ಸಿಗಲೇಬೇಕು. ನಾವ್ಯಾರು ದಡ್ಡರಲ್ಲ, ಅವಕಾಶ ವಂಚಿತರು. ನಮ್ಮ ಬುದ್ಧಿವಂತಿಕೆ ಪ್ರದರ್ಶನಕ್ಕೆ ಅವಕಾಶ ಸಿಕ್ಕಿರಲಿಲ್ಲ. ಈ ಅವಕಾಶವನ್ನು ಮೀಸಲಾತಿ ವ್ಯವಸ್ಥೆ ನೀಡುತ್ತಿದೆ. ಎಲ್ಲಿಯವರೆಗೆ ಸಮಾನ ಅವಕಾಶಗಳು ಸಿಗುವುದಿಲ್ಲ, ಅಲ್ಲಿಯವರೆಗೆ ಅಸಮಾನತೆ ಹೋಗುವುದಿಲ್ಲ. ಈ ಅಸಮಾನತೆ ಹೋಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ಶಕ್ತಿ ಬರಬೇಕು ಎಂದು ಬಾಬಾ ಸಾಹೇಬರು ಹೇಳಿದ್ದರು. ಬುದ್ಧನ ಕಾಲದಿಂದಲೂ ಇಲ್ಲಿ ಜಾತಿ ವ್ಯವಸ್ಥೆ ಇದೆ, ಅದರ ವಿರುದ್ಧ ಸುಧಾರಣಾ ಚಳವಳಿಗಳು ನಡೆಯುತ್ತಿದೆ, ಇದು ಹೋಗಬೇಕು ಎಂದು ಎಲ್ಲರೂ ಹೇಳುತ್ತಾರೆ, ಆದರೂ ಇನ್ನೂ ಜಾತಿ ಜೀವಂತವಿದೆ ಎನ್ನುವುದು ವಿಪರ್ಯಾಸ ಎಂದು ಜಾತಿ ವ್ಯವಸ್ಥೆಯೆಡೆಗಿನ ತಮ್ಮ ಬೇಸರ ಹೊರಹಾಕಿದರು. 25 ನವೆಂಬರ್‌ 1949ರಲ್ಲಿ ಸಂವಿಧಾನ ಅಂಗೀಕಾರವಾಗುವ ಹಿಂದಿನ ದಿನ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಹೇಳಿದ್ದ “ನಮಗೆ ಸ್ವಾತಂತ್ರ್ಯ ಸಿಕ್ಕಿದೆ, ಸಮಾನತೆ ಎನ್ನುವುದು ಸಂವಿಧಾನದ ಆಶಯವಾಗಿದೆ. ಸಮಸಮಾಜ ನಿರ್ಮಾಣ ಆಗಲೇಬೇಕು. ನಮಗೆ ಮತದಾನದ ಹಕ್ಕು ಕೊಟ್ಟಿದ್ದಾರೆ, ರಾಷ್ಟ್ರಪತಿಯಿಂದ ಹಿಡಿದು ಸಾಮಾನ್ಯ ಪ್ರಜೆಯ ವರೆಗೆ ಪ್ರತಿಯೊಬ್ಬರ ಮತಕ್ಕೂ ಒಂದೇ ಮೌಲ್ಯ ಇದೆ, ಆದರೆ ಇದೇ ಮಾದರಿಯ ಸಮಾನತೆ ಸಾಮಾಜಿಕವಾಗಿ, ಆರ್ಥಿಕವಾಗಿ ಸಾದ್ಯವಾಗಿಲ್ಲ. ಇದನ್ನು ಸರಿಪಡಿಸದೇ ಹೋದರೆ ಅಸಮಾನತೆ ಮುಂದುವರೆಯುತ್ತದೆ, ಸಮಾನತೆ ಸಾದ್ಯವಾಗದೆ ಹೋದರೆ ಮುಂದೊಂದು ದಿನ ಶೋಷಣೆಗೆ ಒಳಗಾದ ಜನರೇ ಪ್ರಭುತ್ವದ ಸೌಧವನ್ನು ದ್ವಂಸ ಮಾಡುತ್ತಾರೆ” ಎನ್ನುವ ಮಾತನ್ನು ಸ್ಮರಿಸಿದರು. “ಇವನಾರವ, ಇವನಾರವ, ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ಎಂದೆನಿಸಯ್ಯ, ಎನ್ನ ಮನೆ ಮಗನೆಂದೆನಿಸಯ್ಯ ಕೂಡಲಸಂಗಮದೇವ” ಎಂದು 850 ವರ್ಷಗಳ ಹಿಂದೆ ಬಸವಣ್ಣನವರು ಹೇಳಿದ್ದರು, ಇಂದಿಗೂ ಇದು ಸಾಧ್ಯವಾಗಿಲ್ಲ. ಇದು ಸಮಾಜದ ನೈಜ ಚಿತ್ರಣ ಎಂದು ಬೇಸರ ವ್ಯಕ್ತಪಡಿಸಿದರು. ನನಗೆ ಸಮಾಜ ಅರ್ಥಮಾಡಿಕೊಳ್ಳುವ ವಯಸ್ಸು ಆದಾಗಿನಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಲೇ ಇದ್ದೇನೆ. ಮುಂದೆಯೂ ಹೋರಾಟ ಮಾಡುತ್ತೇನೆ. ನಾನು ಬಿ.ಎಸ್.ಸಿ ಓದುವಾಗ ಕಾಲೇಜಿಗೆ ರಜೆ ಸಿಕ್ಕರೆ ಊರಿಗೆ ಹೋಗುತ್ತಿದ್ದೆ. ಮಧ್ಯಾಹ್ನದ ಹೊತ್ತಿಗೆ ನಮ್ಮ ತಂದೆ ನನಗೆ ಮನೇಲಿರುವ ದನ-ಕರುಗಳಿಗೆ ನೀರು ಹಾಕುವ ಕೆಲಸ ಕೊಡುತ್ತಿದ್ದರು. ಆಗ ಬಾವಿಯಿಂದ ನೀರನ್ನು ಮೇಲೆತ್ತಿ ಹಾಕಬೇಕಿತ್ತು, ಬಾವಿಯೊಳಗೆ ಗೂಡುಕಟ್ಟುತ್ತಿದ್ದ ಪಕ್ಷಿಗಳಿಂದಾಗಿ ನೀರಿನಲ್ಲಿ ಸಾಕಷ್ಟು ಕಸ ತುಂಬಿರುತ್ತಿತ್ತು, ನಾನು ಕೊಡವನ್ನು ಮೇಲೆ ಕೆಳಗೆ ಮಾಡಿ ಕಸವನ್ನು ಬದಿಗೆ ಸರಿಸಿ ನೀರು ಸೇದಿಕೊಂಡು ಹೋಗುತ್ತಿದ್ದೆ. ನಾನು ಮನೆಗೆ ಹೋಗಿ ಕೆಲ ಸಮಯ ಬಿಟ್ಟು ವಾಪಾಸು ಬರುವ ಹೊತ್ತಿಗೆ ಕಸ ಮತ್ತೆ ಬಾವಿಯ ಮಧ್ಯದಲ್ಲಿ ಬಂದಿರುತ್ತಿತ್ತು. ಇದೇ ರೀತಿ ಎಷ್ಟೇ ಸುಧಾರಣೆಗಳಾದರೂ ಜಾತಿ ವ್ಯವಸ್ಥೆ ಗಟ್ಟಿಯಾಗಿ ಉಳಿದುಕೊಂಡಿದೆ. ಹೀಗೆ ಸಿದ್ದರಾಮಯ್ಯ ಅವರು ತಮ್ಮ ಬಾಲ್ಯದ ನೆನಪನ್ನು ಜಾತಿ ವ್ಯವಸ್ಥೆಯ ಜಡತ್ವಕ್ಕೆ ಹೋಲಿಸಿ ವಿವರಿಸಿದರು. ಪಟ್ಟಭದ್ರರು ಬಹಳಾ ಮುಂದಾಲೋಚನೆ ಮಾಡಿ ಈ ಜಾತಿ ವ್ಯವಸ್ಥೆಯನ್ನು ಮಾಡಿದ್ದಾರೆ. ವರ್ಣ ವ್ಯವಸ್ಥೆ ನಾಶವಾಗಬೇಕು. ಇದಕ್ಕೆ ಎಲ್ಲಾ ಶೋಷಿತ ಜಾತಿಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಶಕ್ತಿಯನ್ನು ತುಂಬುವುದೇ ಪರಿಹಾರವಾಗಿದೆ. ಭಾರತೀಯ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದು ಲೋಹಿಯಾ ಅವರು ಹೇಳಿದ್ದರು. ಈ ಚಲನೆ ಬರಬೇಕಾದರೆ ತಳಸಮುದಾಯಗಳ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಶಕ್ತಿ ಬರಬೇಕು ಎಂದು ವಾದಿಸಿದರು. ಮಂಡಲ್‌ ಕಮಿಷನ್‌ ವರದಿ ಜಾರಿಗೆ ಬಂದಾಗ ಮೀಸಲಾತಿ ವಿರೋಧಿಗಳು ಅಮಾಯಕ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ, ಅವರು ಬೆಂಕಿಹಚ್ಚಿಕೊಂಡು ಪ್ರಾಣ ಕಳೆದುಕೊಳ್ಳುವಂತೆ ಮಾಡಿದರು. ಒಂದು ವೇಳೆ ವಿ.ಪಿ.ಸಿಂಗ್‌ ಅವರು ಪ್ರಧಾನಿಯಾಗಿರದೇ ಹೋಗಿದ್ದರೆ ಮಂಡಲ್‌ ಕಮಿಷನ್‌ ವರದಿ ಜಾರಿ ಆಗುವುದು ಅನುಮಾನವಿತ್ತು. ಪಿ.ವಿ.ನರಸಿಂಹ್‌ ರಾವ್‌ ಅವರ ಕಾಲದಲ್ಲಿ ವರದಿ ಜಾರಿಗೆ ಬಂತು, ಇದಕ್ಕಾಗಿ ಕಾನ್ಷಿರಾಮ್‌ ಅವರು ಸೇರಿದಂತೆ ಅನೇಕರು ಹೋರಾಟ ಮಾಡಿದ್ದರು ಎನ್ನುವುದನ್ನು ಅವರು ಸ್ಮರಿಸಿದರು. 1992ರಲ್ಲಿ ಇಂದಿರಾ ಸಹಾನಿ ಕೇಸ್‌ನಲ್ಲಿ ಯಾವುದೇ ಕಾರಣಕ್ಕೂ ಮೀಸಲಾತಿಯ ಒಟ್ಟು ಮಿತಿಯು ಶೇ. 50ನ್ನು ಮೀರುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠವು ತೀರ್ಪು ನೀಡಿತು. ಮುಂದುವರಿದ ಜಾತಿಗಳಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವರಿಗೆ 10% ಮೀಸಲಾತಿಯನ್ನು ಕೊಟ್ಟರು. ಅಲ್ಲಿಗೆ 60% ಆಯ್ತು. ಆದರೆ ಮೀಸಲಾತಿ 50% ಕ್ಕಿಂತ ಜಾಸ್ತಿ ಆಗಬಾರದು ಎಂಬ ನಿಯಮವಿದೆ. ಅದಕ್ಕೆ ಮೀಸಲಾತಿ ಸುಪ್ರೀಂ ಕೋರ್ಟ್‌ನಲ್ಲೂ, ಹೈಕೋರ್ಟ್‌ನಲ್ಲೂ, ನ್ಯಾಯಾಲಯಗಳಲ್ಲೂ ಬರಬೇಕು ಎಂದು ಆಗ್ರಹಿಸಿದರು. ಮುಂದುವರೆದು, ಮೀಸಲಾತಿಗಾಗಿ ನಾವು ಹೋರಾಟವನ್ನೇ ಮಾಡಿಲ್ಲ.ನಮ್ಮ ಮೀಸಲಾತಿ ಹೋರಾಟ ನಿರಂತರವಾಗಿ ನಡೆಯುತ್ತಲೇ ಇರಬೇಕು. ಸುಪ್ರೀಂ ಕೋರ್ಟ್‌ ಕೂಡ ಒಳಮೀಸಲಾತಿ ಬಗ್ಗೆ ಒಪ್ಪಿಕೊಂಡಿದೆ. ಕಾಂಗ್ರೆಸ್‌ ಪಕ್ಷ, ನಮ್ಮ ಸರ್ಕಾರ ಯಾವಾಗಲೂ ಒಳ ಮೀಸಲಾತಿ ಪರವಾಗಿದೆ. ಮೀಸಲಾತಿಗೆ ಯಾವತ್ತೂ ಕೂಡ ಭಿನ್ನಾಭಿಪ್ರಾಯಗಳು ಬರಬಾರದು ಎಂದರು. ಕೆಲವರು ಸ್ವಾರ್ಥಕ್ಕಾಗಿ ಮೀಸಲಾತಿ ವಿರುದ್ಧವಾಗಿರುವ ಜನರ ಜೊತೆಗೆ ಸೇರಿಕೊಳ್ಳುತ್ತಾರೆ. ಅದು ಆಗಬಾರದು. ಯಾವ ಪಕ್ಷ ಮೀಸಲಾತಿಗೆ ವಿರೋಧ ಇದೆಯೋ ಅವರ ಪರವಾಗಿ ನಿಲ್ಲುವುದು, ಆ ಪಕ್ಷದ ಸಿದ್ಧಾಂತಕ್ಕೆ ಜೈ ಅನ್ನುವುದು. ಇದು ಸ್ವಾರ್ಥ ಅಲ್ಲವೇ? ಎಂದು ಪ್ರಶ್ನಿಸಿದರು. ಯಾವುದೇ ಕಾರಣಕ್ಕೂ ಮೀಸಲಾತಿ ಹೋರಾಟಗಾರರಲ್ಲಿ ಭಿನ್ನಾಭಿಪ್ರಾಯಗಳು ಬರಬಾರದು. ಒಳ ಮೀಸಲಾತಿಗಾಗಿ 3 ದಶಕಗಳಿಂದ ಹೋರಾಟ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ ನಿರ್ಧಾರ ಬಂದ ಮೇಲೆ ಎಲ್ಲಾ ಕಡೆಯೂ ಇದಕ್ಕೆ ಚಾಲನೆ ಸಿಕ್ಕಿತು. ನಮ್ಮ ಸರ್ಕಾರ ಒಳಮೀಸಲಾತಿಯನ್ನು ಜಾರಿ ಮಾಡುತ್ತದೆ ಎಂದು ಅವತ್ತೇ ಹೇಳಿದ್ದೆ. ಅದರಂತೆ, ನಾಗಮೋಹನ್‌ದಾಸ್‌ ಕಮಿಟಿ ಮಾಡಿದೆವು. ಅವರು ಹಳ್ಳಿಗಳಿಗೆ ಭೇಟಿ ನೀಡಿ, ಜನರ ಜೊತೆಗೆ ಮಾತನಾಡಿ ಒಂದು ವರದಿಯನ್ನು ಕೊಟ್ಟರು. ಅದರ ಪ್ರಕಾರ, 5 ಗುಂಪುಗಳನ್ನು ಮಾಡಿ ಒಳ ಮೀಸಲಾತಿ ಹಂಚಿಕೆ ಮಾಡಿದೆವು ಎಂದು ವಿವರಿಸಿದರು. ಮುಂದುವರೆದು, ಆ 5 ಗುಂಪುಗಳನ್ನು ಮತ್ತೆ 3 ಮಾಡಿದೆವು. 6:6:5 ಸೂತ್ರದಡಿ ವಿಭಜಿಸಿದೆವು. ಅಲೆಮಾರಿಗಳನ್ನು ಭೋವಿ, ಬಂಜಾರ ಸಮುದಾಯಗಳ ಜೊತೆ ಸೇರಿಸಿದೆವು. ಅದು ಸರಿ ಇಲ್ಲ ಎಂದಾಯಿತು. ಈ ಮರು-ವರ್ಗೀಕರಣದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾದವು. ಆಮೇಲೆ ತಾತ್ಕಾಲಿಕವಾಗಿ 15% ಮಾಡೋಣ ಎಂದಾಯಿತು. ಚರ್ಚೆಗಳು ನಡೆದು ಐದು ಕಾಲು, ಐದು ಕಾಲು, ನಾಲ್ಕೂವರೆ ನೀಡಲು ಸಚಿವ ಸಂಪುಟವೂ ಒಪ್ಪಿಕೊಂಡಿತು. ಇಷ್ಟೆಲ್ಲಾ ಆದರೂ ಕೂಡ ಇನ್ನೂ ಗೊಂದಲಗಳಿವೆ. ಏನೇ ಆದರೂ ಒಳ ಮೀಸಲಾತಿ ಜಾರಿ ಆಗಲೇಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯನವರು ಹೇಳಿದ್ದನ್ನು ಕೇಳುತ್ತೇನೆ ಅಂತಾರೆ. ಒಳಮೀಸಲಾತಿಯಲ್ಲಿ ಇರುವ ಎಲ್ಲಾ ಗೊಂದಲಗಳನ್ನು ನಿವಾರಣೆ ಮಾಡಿ ಜಾರಿ ಮಾಡುವಂತೆ ನಾನು ಅವರ ಬಳಿ ಮಾತನಾಡುತ್ತೇನೆ. ಅಂತಿಮವಾಗಿ ಸಚಿವ ಸಂಪುಟ ತೀರ್ಮಾನ ತೆಗೆದುಕೊಳ್ಳುತ್ತದೆ. ನನ್ನ ಮಾತು ಕೇಳುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು. ದೇಶದಲ್ಲಿರುವ ಅಸಮಾನತೆ ಹೋಗುವವರೆಗೂ ಮೀಸಲಾತಿ ಇರಲೇಬೇಕು. ಎಲ್ಲರಿಗೂ ಸಮಾನ ಅವಕಾಶಗಳು ಸಿಗಲೇಬೇಕು. ಓದಿದವರೆ ಜಾತಿ ವ್ಯವಸ್ಥೆಯನ್ನು ಹೆಚ್ಚು ಪಾಲಿಸುವುದು. ಅಂಬೇಡ್ಕರ್‌ ಅವರು ಒಂದು ಮಾತು ಹೇಳಿದ್ದಾರೆ, ನಾನು ಇಲ್ಲಿಯವರೆಗೂ ಸಾಮಾಜಿಕ ನ್ಯಾಯದ ರಥವನ್ನು ಎಳೆದುಕೊಂಡು ಬಂದಿದ್ದೇನೆ. ಸಾಧ್ಯವಾದರೆ ಅದನ್ನು ಮುಂದಕ್ಕೆ ಕೊಂಡೊಯ್ಯಿರಿ, ಹಿಂದಕ್ಕೆ ಮಾತ್ರ ತಳ್ಳಬೇಡಿ ಎಂದಿದ್ದಾರೆ. ಅದರಂತೆ ನಾವು ನಡೆದುಕೊಳ್ಳಬೇಕು ಎಂದರು. ಈ ಹಿಂದೆ ಮೌಢ್ಯ ನಿವಾರಣಾ ಕಾಯ್ದೆ ಜಾರಿ ತಂದಿದ್ದೆವು. ಆದರೆ, ಯಾರು ಅದನ್ನು ಪಾಲಿಸುತ್ತಿಲ್ಲ. ಮೌಢ್ಯಗಳನ್ನು ನಂಬಬೇಡಿ ಎಂದು ಬಸವಣ್ಣನವರೇ ಹೇಳಿದ್ದರು. 2013ರಲ್ಲಿ ನಾನು ಮುಖ್ಯಮಂತ್ರಿಯಾದೆ. ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಎಸ್‌ಪಿ / ಟಿಎಸ್‌ಪಿ ಕಾಯ್ದೆ ಜಾರಿಗೆ ತಂದೆ. ಅದಕ್ಕೂ ಮೊದಲು ಅಧಿಕಾರಿದಲ್ಲಿದ್ದ ಬಿಜೆಪಿ, ಜೆಡಿಎಸ್‌ ಪಕ್ಷದ ಯಾರೂ ಕೂಡ ಈ ಕಾಯ್ದೆಯನ್ನು ಜಾರಿ ಮಾಡಿಲ್ಲ ಎನ್ನುವ ವಿಚಾರವನ್ನು ಸಭೆಯ ಗಮನಕ್ಕೆ ತಂದರು. ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನ ಬಳಕೆ ಮಾಡಬೇಕು ಎಂಬ ಕಾನೂನನ್ನು ಮಾಡಿದ್ದು ನಮ್ಮ ಸರ್ಕಾರ. 2013ಕ್ಕಿಂತ ಮೊದಲು ಈ ವರ್ಗಗಳ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆಯಾಗುವ ಅನುದಾನ ಸರಿಸುಮಾರು 8,000 ಕೋಟಿ ರೂಪಾಯಿ ಇತ್ತು, ನಾನು ಈ ಕಾನೂನು ಜಾರಿ ಮಾಡಿದ ಮೇಲೆ ರೂ.15,000 ಕೋಟಿಯನ್ನು ಮೀರಿತು. ಈ ವರ್ಷ ಎಸ್.ಸಿ.ಪಿ/ಟಿ.ಎಸ್.ಪಿ ಗೆ ರೂ.44,636 ಕೋಟಿ ಇದೆ. ಇದೇ ಕೆಲಸವನ್ನು ಬೇರೆ ಸರ್ಕಾರಗಳು ಯಾಕೆ ಮಾಡಿಲ್ಲ? ಎನ್ನುವ ಪ್ರಶ್ನೆಯನ್ನು ಅವರು ಸಭಿಕರ ಮುಂದಿಟ್ಟರು. ಈ ಕಾಯ್ದೆಯ ಭಾಗವಾಗಿದ್ದ 7ಡಿ ಅನ್ನು ರದ್ದು ಮಾಡಿದ್ದು ನಾನು. 4% ಬಡ್ಡಿಗೆ ಕೆಎಸ್‌ಎಫ್‌ಸಿ ಯಲ್ಲಿ 10 ಕೋಟಿ ರೂಪಾಯಿ ವರೆಗೆ ಸಾಲ ಸೌಲಭ್ಯ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಬದ್ಧತೆ ಇದ್ದಾಗ ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ ಎನ್ನುವುದಕ್ಕೆ ಇದು ಉದಾಹರಣೆ. 2011ರ ಜನಗಣತಿ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರು 24.1% ಇದ್ದಾರೆ. 6.95% ಎಸ್.ಟಿ ಹಾಗೂ 17.15% ಎಸ್.ಸಿ ಸಮುದಾಯದ ಜನರಿದ್ದಾರೆ. ಈಗಿನ ಸರ್ಕಾರದಲ್ಲಿ ಪರಮೇಶ್ವರ್‌ ಅವರನ್ನು ಉಪಮುಖ್ಯಮಂತ್ರಿ ಮಾಡಿದ್ದು ಯಾರು ಗೊತ್ತಾ? ನಾಲ್ಕೈದು ಜನರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರು, ಒಬ್ಬರಿಗೆ ಅವಕಾಶ ಕೊಡಬೇಕು ಎಂದು ಹೇಳಿದ್ದು ಯಾರು ಗೊತ್ತ? ಬಡ್ತಿಯಲ್ಲಿ ಮೀಸಲಾತಿ ಬೇರೆ ಯಾವುದಾದರೂ ರಾಜ್ಯದಲ್ಲಿ ಇದೆಯಾ? ರತ್ನಪ್ರಭಾ ಅವರು ಮುಖ್ಯಕಾರ್ಯದರ್ಶಿಯಾಗಿರುವಾಗ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ, ವರದಿ ತರಿಸಿಕೊಂಡು, ವರದಿಯನ್ನು ಕಾನೂನಿನ ರೂಪದಲ್ಲಿ ಜಾರಿ ಮಾಡಿದ್ದು ನಮ್ಮ ಸರ್ಕಾರ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ರು, ಆದರೆ ತೀರ್ಪು ನಮ್ಮ ಪರವಾಗಿ ಬಂತು. ಕರ್ನಾಟಕದಲ್ಲಿ ಮಾತ್ರ ಬಡ್ತಿಯಲ್ಲಿ ಮೀಸಲಾತಿ ಇದೆ. ಇದೆಲ್ಲಾ ಸಾದ್ಯವಾಗಿದ್ದು ಹೇಗೆ? ಎನ್ನುವ ಪ್ರಶ್ನೆಯನ್ನು ಸಭೆಯ ಮುಂದಿಟ್ಟರು. ನಾನು ಇಷ್ಟೆಲ್ಲಾ ಮಾಡಿದ್ರೂ ಒಳಮೀಸಲಾತಿ ಜಾರಿಗೆ ತರುವ ಮೊದಲು ಇಲ್ಲಿ ಸಭೆಯಲ್ಲೇ ಇರುವ ಹಲವರು ನನ್ನ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಅದಕ್ಕಾಗಿಯೇ ನಾನು ಅನೇಕ ಬಾರಿ “ಯಾರು ನಿಮ್ಮ ಪರ ಇರುವವರು, ಯಾರು ವಿರೋಧಿಗಳು ಎನ್ನುವುದನ್ನು ಗುರುತಿಸುವ ಕೆಲಸ ಮಾಡಬೇಕು” ಎಂದು ಹೇಳಿದ್ದೇನೆ. ನಾನು ಮಾಡಿರುವ ಕೆಲಸವನ್ನು ನರೇಂದ್ರ ಮೋದಿ ಅವರು ಯಾಕೆ ಮಾಡಿಲ್ಲ? ಸಾಮಾಜಿಕ ಪರಿಸ್ಥಿತಿ ಹೀಗೆ ಮುಂದುವರೆದರೆ ಜನರನ್ನು ಶೋಷಣೆ ಮಾಡಲು ಅವಕಾಶ ಇರುತ್ತದೆ ಎಂದು ಅವರು ಬದಲಾವಣೆ ಮಾಡಲ್ಲ. ಸಂವಿಧಾನ ಅಂಗೀಕಾರ ಮಾಡಿದ ಮೇಲೆ ಅದನ್ನು ವಿರೋಧ ಮಾಡಿದವರು ಯಾರು? ಇದೇ ಮನುವಾದಿಗಳಲ್ಲವೇ? ಆರ್.ಎಸ್.ಎಸ್‌ ಮುಖವಾಣಿ ಆರ್ಗನೈಸರ್‌ ನಲ್ಲಿ ಸಂವಿಧಾನವನ್ನು ವಿರೋಧ ಮಾಡಿಲ್ಲವೇ? ಎಂದು ಇತಿಹಾಸವನ್ನು ಸ್ಮರಿಸಿದರು. ನಾನು ಎಂದಿಗೂ ನಿಮ್ಮ ಜೊತೆ ಇರುತ್ತೇನೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎನ್ನುವ ತಮ್ಮ ನಿರ್ಧಾರವನ್ನು ಪುನರುಚ್ಛರಿಸಿದ ಸಿದ್ದರಾಮಯ್ಯ ಅವರು, ತಮ್ಮ ಈ ನಿರ್ಧಾರಕ್ಕೆ ವಯಸ್ಸಿನ ಕಾರಣವನ್ನು ನೀಡಿದರು. ಒಳ ಮೀಸಲಾತಿ ಹೋರಾಟ ಮುಂದುವರೆಯಬೇಕು, ಗುರಿ ತಲುಪುವ ವರೆಗೆ ನಿಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಮರೆತು ಜೊತೆಯಾಗಿ ಹೋರಾಟ ನಡೆಸಬೇಕು. ನಿಮ್ಮ ಸುತ್ತ ನಿಮ್ಮ ನಿಮ್ಮೊಳಗೆ ಬೆಂಕಿ ಹಚ್ಚುವ ಜನರಿದ್ದಾರೆ, ಜಾಗೃತೆಯಾಗಿರಿ ಎನ್ನುವ ಕಿವಿಮಾತನ್ನು ಅವರು ಹೋರಾಟಗಾರರಿಗೆ ಹೇಳಿದರು. ಒಳಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಮಂತ್ರಿಗಳ ಜೊತೆ ಮಾತನಾಡುವುದಾಗಿಯೂ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

More news from ಕರ್ನಾಟಕ and nearby areas
  • ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ  ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ  ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ 9 ವರ್ಷಗಳ ಕಾಲ ಗ್ರಾಮಸ್ಥರು ಕಂಡಿದ್ದ ಕನಸು ಇದೀಗ ನನಸಾಗಿದೆ. ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ನೂತನ ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮಠಾಧೀಶರು, ಗಣ್ಯರು ಹಾಗೂ ಸಹಸ್ರಾರು ಭಕ್ತರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಾಯ್ಸ್ ಓವರ್: ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ಗ್ರಾಮಸ್ಥರ ಸುಮಾರು 9 ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿರುವ ನೂತನ ದೇವಸ್ಥಾನವು ಗ್ರಾಮಸ್ಥರ ಭಕ್ತಿ ಮತ್ತು ಒಗ್ಗಟ್ಟಿಗೆ ಸಾಕ್ಷಿಯಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ಎಲೆರಾಂಪುರ ಮಠದ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಹಾಗೂ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಿ ಕುಬೇರ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ದೇವಸ್ಥಾನವನ್ನು ಉದ್ಘಾಟಿಸಿದರು. ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ: ಪ್ರತಿಯೊಂದು ಹಳ್ಳಿಯಲ್ಲೂ ಸಿರಿವಂತರು ಹಾಗೂ ಅನುಕೂಲಸ್ಥರು ತಮ್ಮ ಒಳ್ಳೆಯ ಮನಸ್ಸಿನಿಂದ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ದೇವಸ್ಥಾನಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿದ್ದು, ಇದೇ ರೀತಿ ಪ್ರತಿಯೊಂದು ಗ್ರಾಮದಲ್ಲೂ ಉತ್ತಮ ಶಾಲೆಗಳಿರಬೇಕು. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಆಚಾರ-ವಿಚಾರಗಳ ಅರಿವು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಸಮಾಜದ ಮೇಲಿದೆ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸುಸ್ಥಿರ ಬದಲಾವಣೆ ಸಾಧ್ಯ ಎಂದರು. ಉದ್ಯಮಿ ನೀಲೇಶ್ ಮಾತನಾಡಿ: ನಾವು ಎಲ್ಲೇ ಇದ್ದರೂ, ಹೇಗೆ ಇದ್ದರೂ, ನಾವು ಹುಟ್ಟಿದ ಗ್ರಾಮವನ್ನು ಮರೆಯಬಾರದು. ನಮ್ಮ ಗ್ರಾಮಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮಗಳ ಅಭಿವೃದ್ಧಿಗೆ ಆರ್ಥಿಕ ಸಹಾಯದ ಜೊತೆಗೆ ಸಮಯ, ಶ್ರಮ ಹಾಗೂ ಮಾರ್ಗದರ್ಶನ ನೀಡುವ ಮೂಲಕವೂ ಸೇವೆ ಸಲ್ಲಿಸಬಹುದು. ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಡಾ. ಹನುಮಂತನಾಥ ಸ್ವಾಮೀಜಿ ಆಶೀರ್ವಚನ ನೀಡಿ: 48 ದಿನಗಳ ಕಾಲ ನಿಷ್ಠೆ, ಭಕ್ತಿ ಮತ್ತು ಶ್ರದ್ಧೆಯಿಂದ ಗಣೇಶನ ಪೂಜೆ ಮಾಡಿದರೆ ಭಗವಂತನ ಅನುಗ್ರಹ ದೊರೆಯುತ್ತದೆ. ಆದರೆ ದೇವರ ಅನುಗ್ರಹ ಪಡೆಯುವ ಜೊತೆಗೆ ತಂದೆ-ತಾಯಿಯ ಸೇವೆ ಮಾಡುವುದು ಅತ್ಯಂತ ಮುಖ್ಯ. ಹಿರಿಯರನ್ನು ಗೌರವಿಸಿ, ಸತ್ಯ, ಧರ್ಮ ಹಾಗೂ ನೀತಿಯ ಮಾರ್ಗದಲ್ಲಿ ಜೀವನ ನಡೆಸಬೇಕು. ಭಕ್ತಿ ನಮ್ಮ ಬದುಕಿಗೆ ದಾರಿ ತೋರಿಸುವ ಶಕ್ತಿಯಾಗಬೇಕು ಎಂದು ತಿಳಿಸಿದರು. ಶ್ರೀ ವೀರ ಬಸವಲಿಂಗ ಸ್ವಾಮೀಜಿ ಮಾತನಾಡಿ: ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲ, ಸಂಸ್ಕಾರವಂತರನ್ನಾಗಿಯೂ ಬೆಳೆಸಬೇಕು. ಮೊಬೈಲ್ ಮತ್ತು ಟಿವಿಯ ಬಳಕೆಯನ್ನು ಕಡಿಮೆ ಮಾಡಿ, ಮಕ್ಕಳಿಗೆ ಕುಟುಂಬದ ಮೌಲ್ಯಗಳನ್ನು ಕಲಿಸಬೇಕು. ‘ಎ’ ಎಂದರೆ ಅಪ್ಪ-ಅಮ್ಮ, ‘ಬಿ’ ಎಂದರೆ ಬಂಧು-ಬಳಗ ಎಂಬಂತೆ ಸಂಬಂಧಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ತಂದೆ-ತಾಯಿ, ಗುರುಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಬೆಳೆಸಬೇಕು ಎಂದು ಕರೆ ನೀಡಿದರು. ಉದ್ಯಮಿ ಶ್ರೀನಾಗ್ ಮಾತನಾಡಿ: ಸಂಕೇನಹಳ್ಳಿ ಗ್ರಾಮದಲ್ಲಿ ‘ಕುಬೇರ ಗಣಪತಿ’ ಎಂಬ ಹೆಸರು ಬರಲು ಪ್ರಮುಖ ಕಾರಣ ಗ್ರಾಮಸ್ಥರ ಭಕ್ತಿ, ಒಗ್ಗಟ್ಟು ಮತ್ತು ಸಂಕಲ್ಪ. ಗ್ರಾಮಸ್ಥರೆಲ್ಲರೂ ಒಂದಾಗಿ ನಿಂತು ದೇವಸ್ಥಾನದ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಇದು ಕೇವಲ ದೇವಸ್ಥಾನವಲ್ಲ, ಗ್ರಾಮದ ಜನರ ಒಗ್ಗಟ್ಟಿನ ಪ್ರತೀಕವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗೆ ಶ್ರಮಿಸೋಣ ಎಂದರು. ವಾಯ್ಸ್ ಓವರ್: ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಕೇನಹಳ್ಳಿ, ಗೋಕುಲ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕುಬೇರ ಗಣಪತಿಯ ದರ್ಶನ ಪಡೆದು ಪುನೀತರಾದರು. ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರಿಂದ ಇಡೀ ಸಂಕೇನಹಳ್ಳಿ ಗ್ರಾಮವು ಹಬ್ಬದ ವಾತಾವರಣದಲ್ಲಿ ಕಂಗೊಳಿಸಿತು. ಆಂಕರ್ ಔಟ್ರೋ: ಒಂಬತ್ತು ವರ್ಷಗಳ ಗ್ರಾಮಸ್ಥರ ಕನಸು ನನಸಾಗಿದ್ದು, ನೂತನ ಕುಬೇರ ಗಣಪತಿ ದೇವಸ್ಥಾನ ಇದೀಗ ಭಕ್ತರ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಿದೆ. ಗ್ರಾಮಸ್ಥರ ಒಗ್ಗಟ್ಟು ಮತ್ತು ಭಕ್ತಿಗೆ ಈ ದೇವಸ್ಥಾನ ಸಾಕ್ಷಿಯಾಗಿದೆ.
    3
    ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ  ದೇವಸ್ಥಾನ ಉದ್ಘಾಟನೆ..
ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ  ದೇವಸ್ಥಾನ ಉದ್ಘಾಟನೆ..
ಕೊರಟಗೆರೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ 9 ವರ್ಷಗಳ ಕಾಲ ಗ್ರಾಮಸ್ಥರು ಕಂಡಿದ್ದ ಕನಸು ಇದೀಗ ನನಸಾಗಿದೆ. ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ನೂತನ ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಮಠಾಧೀಶರು, ಗಣ್ಯರು ಹಾಗೂ ಸಹಸ್ರಾರು ಭಕ್ತರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.
ವಾಯ್ಸ್ ಓವರ್:
ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು.
ಗ್ರಾಮಸ್ಥರ ಸುಮಾರು 9 ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿರುವ ನೂತನ ದೇವಸ್ಥಾನವು ಗ್ರಾಮಸ್ಥರ ಭಕ್ತಿ ಮತ್ತು ಒಗ್ಗಟ್ಟಿಗೆ ಸಾಕ್ಷಿಯಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ಎಲೆರಾಂಪುರ ಮಠದ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಹಾಗೂ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಿ ಕುಬೇರ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ದೇವಸ್ಥಾನವನ್ನು ಉದ್ಘಾಟಿಸಿದರು.
ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ:
ಪ್ರತಿಯೊಂದು ಹಳ್ಳಿಯಲ್ಲೂ ಸಿರಿವಂತರು ಹಾಗೂ ಅನುಕೂಲಸ್ಥರು ತಮ್ಮ ಒಳ್ಳೆಯ ಮನಸ್ಸಿನಿಂದ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ದೇವಸ್ಥಾನಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿದ್ದು, ಇದೇ ರೀತಿ ಪ್ರತಿಯೊಂದು ಗ್ರಾಮದಲ್ಲೂ ಉತ್ತಮ ಶಾಲೆಗಳಿರಬೇಕು. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಆಚಾರ-ವಿಚಾರಗಳ ಅರಿವು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಸಮಾಜದ ಮೇಲಿದೆ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸುಸ್ಥಿರ ಬದಲಾವಣೆ ಸಾಧ್ಯ ಎಂದರು.
ಉದ್ಯಮಿ ನೀಲೇಶ್ ಮಾತನಾಡಿ:
ನಾವು ಎಲ್ಲೇ ಇದ್ದರೂ, ಹೇಗೆ ಇದ್ದರೂ, ನಾವು ಹುಟ್ಟಿದ ಗ್ರಾಮವನ್ನು ಮರೆಯಬಾರದು. ನಮ್ಮ ಗ್ರಾಮಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮಗಳ ಅಭಿವೃದ್ಧಿಗೆ ಆರ್ಥಿಕ ಸಹಾಯದ ಜೊತೆಗೆ ಸಮಯ, ಶ್ರಮ ಹಾಗೂ ಮಾರ್ಗದರ್ಶನ ನೀಡುವ ಮೂಲಕವೂ ಸೇವೆ ಸಲ್ಲಿಸಬಹುದು. ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಡಾ. ಹನುಮಂತನಾಥ ಸ್ವಾಮೀಜಿ ಆಶೀರ್ವಚನ ನೀಡಿ:
48 ದಿನಗಳ ಕಾಲ ನಿಷ್ಠೆ, ಭಕ್ತಿ ಮತ್ತು ಶ್ರದ್ಧೆಯಿಂದ ಗಣೇಶನ ಪೂಜೆ ಮಾಡಿದರೆ ಭಗವಂತನ ಅನುಗ್ರಹ ದೊರೆಯುತ್ತದೆ. ಆದರೆ ದೇವರ ಅನುಗ್ರಹ ಪಡೆಯುವ ಜೊತೆಗೆ ತಂದೆ-ತಾಯಿಯ ಸೇವೆ ಮಾಡುವುದು ಅತ್ಯಂತ ಮುಖ್ಯ. ಹಿರಿಯರನ್ನು ಗೌರವಿಸಿ, ಸತ್ಯ, ಧರ್ಮ ಹಾಗೂ ನೀತಿಯ ಮಾರ್ಗದಲ್ಲಿ ಜೀವನ ನಡೆಸಬೇಕು. ಭಕ್ತಿ ನಮ್ಮ ಬದುಕಿಗೆ ದಾರಿ ತೋರಿಸುವ ಶಕ್ತಿಯಾಗಬೇಕು ಎಂದು ತಿಳಿಸಿದರು.
ಶ್ರೀ ವೀರ ಬಸವಲಿಂಗ ಸ್ವಾಮೀಜಿ ಮಾತನಾಡಿ:
ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲ, ಸಂಸ್ಕಾರವಂತರನ್ನಾಗಿಯೂ ಬೆಳೆಸಬೇಕು. ಮೊಬೈಲ್ ಮತ್ತು ಟಿವಿಯ ಬಳಕೆಯನ್ನು ಕಡಿಮೆ ಮಾಡಿ, ಮಕ್ಕಳಿಗೆ ಕುಟುಂಬದ ಮೌಲ್ಯಗಳನ್ನು ಕಲಿಸಬೇಕು. ‘ಎ’ ಎಂದರೆ ಅಪ್ಪ-ಅಮ್ಮ, ‘ಬಿ’ ಎಂದರೆ ಬಂಧು-ಬಳಗ ಎಂಬಂತೆ ಸಂಬಂಧಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ತಂದೆ-ತಾಯಿ, ಗುರುಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಬೆಳೆಸಬೇಕು ಎಂದು ಕರೆ ನೀಡಿದರು.
ಉದ್ಯಮಿ ಶ್ರೀನಾಗ್ ಮಾತನಾಡಿ:
ಸಂಕೇನಹಳ್ಳಿ ಗ್ರಾಮದಲ್ಲಿ ‘ಕುಬೇರ ಗಣಪತಿ’ ಎಂಬ ಹೆಸರು ಬರಲು ಪ್ರಮುಖ ಕಾರಣ ಗ್ರಾಮಸ್ಥರ ಭಕ್ತಿ, ಒಗ್ಗಟ್ಟು ಮತ್ತು ಸಂಕಲ್ಪ. ಗ್ರಾಮಸ್ಥರೆಲ್ಲರೂ ಒಂದಾಗಿ ನಿಂತು ದೇವಸ್ಥಾನದ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಇದು ಕೇವಲ ದೇವಸ್ಥಾನವಲ್ಲ, ಗ್ರಾಮದ ಜನರ ಒಗ್ಗಟ್ಟಿನ ಪ್ರತೀಕವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗೆ ಶ್ರಮಿಸೋಣ ಎಂದರು.
ವಾಯ್ಸ್ ಓವರ್:
ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಕೇನಹಳ್ಳಿ, ಗೋಕುಲ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕುಬೇರ ಗಣಪತಿಯ ದರ್ಶನ ಪಡೆದು ಪುನೀತರಾದರು.
ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರಿಂದ ಇಡೀ ಸಂಕೇನಹಳ್ಳಿ ಗ್ರಾಮವು ಹಬ್ಬದ ವಾತಾವರಣದಲ್ಲಿ ಕಂಗೊಳಿಸಿತು.
ಆಂಕರ್ ಔಟ್ರೋ:
ಒಂಬತ್ತು ವರ್ಷಗಳ ಗ್ರಾಮಸ್ಥರ ಕನಸು ನನಸಾಗಿದ್ದು, ನೂತನ ಕುಬೇರ ಗಣಪತಿ ದೇವಸ್ಥಾನ ಇದೀಗ ಭಕ್ತರ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಿದೆ. ಗ್ರಾಮಸ್ಥರ ಒಗ್ಗಟ್ಟು ಮತ್ತು ಭಕ್ತಿಗೆ ಈ ದೇವಸ್ಥಾನ ಸಾಕ್ಷಿಯಾಗಿದೆ.
    user_Mutthuraj Raj
    Mutthuraj Raj
    Photographer ಕೊರಟಗೆರೆ, ತುಮಕೂರು, ಕರ್ನಾಟಕ•
    22 hrs ago
  • ಶೀತ, ಕೆಮ್ಮು, ಜ್ವರ ಹೆಚ್ಚಳ: ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ ಚಿತ್ರದುರ್ಗ:ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ ವಸ್ತುಗಳು ಹಾಗೂ ಗಾಳಿಯಲ್ಲಿನ ಕಣಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಈದ್ ಮಿಲಾದ್, ಗೌರಿ ಗಣೇಶ ಚತುರ್ಥಿ, ಓಣಂ, ದಸರಾ ಹಾಗೂ ದೀಪಾವಳಿ ಮುಂತಾದ ಹಬ್ಬಗಳು ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮೂಹಿಕವಾಗಿ ಸೇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಪ್ರಕರಣಗಳು ಕಂಡುಬರುವ ಅಪಾಯವಿದೆ. ಈ ಸಾಂಕ್ರಾಮಿಕ ರೋಗ ಹತೋಟಿಗಾಗಿ ಸಾರ್ವಜನಿಕರು ರೋಗಲಕ್ಷಣಗಳು ಕಂಡುಬಂದಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಕಡ್ಡಾಯವಾಗಿ ಮಾಸ್ಕ್ ಅಥವಾ ಕರವಸ್ತ್ರ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಹಾಗೂ ರೋಗಲಕ್ಷಣಗಳಿಗೆ ಅನುಸಾರವಾಗಿ ಪರೀಕ್ಷೆಗೆ ಒಳಗಾಗಬೇಕು. ಸರ್ಕಾರಿ ಕಚೇರಿ, ವಸತಿ ಸಮುಚ್ಚಯ, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್, ಬಸ್ ಹಾಗೂ ರೈಲ್ವೆ ನಿಲ್ದಾಣ, ವಿದ್ಯಾ ಸಂಸ್ಥೆಗಳು ಮತ್ತು ಮಾರುಕಟ್ಟೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಅಂತರ ಕಾಯ್ದುಕೊಳ್ಳಬೇಕು ಹಾಗೂ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು. ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಕೋರಿದ್ದಾರೆ. (ಫೋಟೋ ಕಳುಹಿಸಿದೆ) ======== ಆ.28ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ಏರ್ಪಡಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಕೊರಮ ಸಮಾಜ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಹೆಚ್.ಜೀವನ್, ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್, ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಅನುರಾಧ ರವಿಕುಮಾರ್, ಚಿತ್ರದುರ್ಗ ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ, ಆರ್ಯ ಈಡಿಗರ ಸೇವಾ ಸಂಘ ಅಧ್ಯಕ್ಷ ಇ.ಎನ್.ಲಕ್ಷ್ಮೀಕಾಂತ ಭಾಗವಹಿಸುವರು. ಚಿತ್ರದುರ್ಗದ ಉಮೇಶ್ ಪತ್ತಾರ ಮತ್ತು ತಂಡ ಹಾಗೂ ಆಯಿತೋಳು ಯಶವಂತ್ ಕುಮಾರ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ. ===========
    1
    ಶೀತ, ಕೆಮ್ಮು, ಜ್ವರ ಹೆಚ್ಚಳ: ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ

ಚಿತ್ರದುರ್ಗ:ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.
ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ ವಸ್ತುಗಳು ಹಾಗೂ ಗಾಳಿಯಲ್ಲಿನ ಕಣಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಈದ್ ಮಿಲಾದ್, ಗೌರಿ ಗಣೇಶ ಚತುರ್ಥಿ, ಓಣಂ, ದಸರಾ ಹಾಗೂ ದೀಪಾವಳಿ ಮುಂತಾದ ಹಬ್ಬಗಳು ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮೂಹಿಕವಾಗಿ ಸೇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಪ್ರಕರಣಗಳು ಕಂಡುಬರುವ ಅಪಾಯವಿದೆ.
ಈ ಸಾಂಕ್ರಾಮಿಕ ರೋಗ ಹತೋಟಿಗಾಗಿ ಸಾರ್ವಜನಿಕರು ರೋಗಲಕ್ಷಣಗಳು ಕಂಡುಬಂದಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಕಡ್ಡಾಯವಾಗಿ ಮಾಸ್ಕ್ ಅಥವಾ ಕರವಸ್ತ್ರ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಹಾಗೂ ರೋಗಲಕ್ಷಣಗಳಿಗೆ ಅನುಸಾರವಾಗಿ ಪರೀಕ್ಷೆಗೆ ಒಳಗಾಗಬೇಕು.
ಸರ್ಕಾರಿ ಕಚೇರಿ, ವಸತಿ ಸಮುಚ್ಚಯ, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್, ಬಸ್ ಹಾಗೂ ರೈಲ್ವೆ ನಿಲ್ದಾಣ, ವಿದ್ಯಾ ಸಂಸ್ಥೆಗಳು ಮತ್ತು ಮಾರುಕಟ್ಟೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಅಂತರ ಕಾಯ್ದುಕೊಳ್ಳಬೇಕು ಹಾಗೂ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು.
ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಕೋರಿದ್ದಾರೆ.
(ಫೋಟೋ ಕಳುಹಿಸಿದೆ)
========
ಆ.28ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ಏರ್ಪಡಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಕೊರಮ ಸಮಾಜ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಹೆಚ್.ಜೀವನ್, ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್, ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಅನುರಾಧ ರವಿಕುಮಾರ್, ಚಿತ್ರದುರ್ಗ ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ, ಆರ್ಯ ಈಡಿಗರ ಸೇವಾ ಸಂಘ ಅಧ್ಯಕ್ಷ ಇ.ಎನ್.ಲಕ್ಷ್ಮೀಕಾಂತ ಭಾಗವಹಿಸುವರು. ಚಿತ್ರದುರ್ಗದ ಉಮೇಶ್ ಪತ್ತಾರ ಮತ್ತು ತಂಡ ಹಾಗೂ ಆಯಿತೋಳು ಯಶವಂತ್ ಕುಮಾರ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.
===========
    user_ನ್ಯೂಸ್ ಕಿಂಗ್
    ನ್ಯೂಸ್ ಕಿಂಗ್
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು  ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    1
    ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು
ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ  ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ  ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು 
ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ
ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು.
ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು.
ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು.
ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    5 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗ ಸಂಘ ಉದ್ಘಾಟನಾ ಕಾರ್ಯಕ್ರಮ ತುಮಕೂರು ಜಿಲ್ಲಾ ಒಕ್ಕಲಿಗರ ಸಂಘದಲ್ಲಿ ನಡೆಯುತ್ತಿರುವ ವಿವಿಧ ಪ್ರಗತಿಪರ ಕಾರ್ಯಕ್ರಮಗಳ ಕುರಿತಂತೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು ಇದೆ ಸಂದರ್ಭದಲ್ಲಿ ಶಾಸಕ ಸಿ ಬಿ ಸುರೇಶ್ ಬಾಬು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
    1
    ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗ ಸಂಘ ಉದ್ಘಾಟನಾ ಕಾರ್ಯಕ್ರಮ
ತುಮಕೂರು ಜಿಲ್ಲಾ ಒಕ್ಕಲಿಗರ ಸಂಘದಲ್ಲಿ ನಡೆಯುತ್ತಿರುವ ವಿವಿಧ ಪ್ರಗತಿಪರ ಕಾರ್ಯಕ್ರಮಗಳ ಕುರಿತಂತೆ  ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕೆಂಪೇಗೌಡರ ಜಯಂತಿ ಹಾಗೂ ಒಕ್ಕಲಿಗ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ  ಶಾಸಕ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟನೆ ಮಾಡಿ  ಮಾತನಾಡಿದರು ಇದೆ ಸಂದರ್ಭದಲ್ಲಿ ಶಾಸಕ ಸಿ ಬಿ ಸುರೇಶ್ ಬಾಬು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    4 hrs ago
  • ರಸ್ತೆಗೆ ಚಾಚಿದ ಕಳ್ಳೆ ಬೈಕ್ ಸವಾರರು ಸ್ವಲ್ಪ ಯಾಮಾರಿದರೆ ಕಳ್ಳೆಯೋಳಗೆ ಬೈಕ್.
    1
    ರಸ್ತೆಗೆ ಚಾಚಿದ ಕಳ್ಳೆ ಬೈಕ್ ಸವಾರರು ಸ್ವಲ್ಪ ಯಾಮಾರಿದರೆ  ಕಳ್ಳೆಯೋಳಗೆ ಬೈಕ್.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥 ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು! #SeeratUnNabi #ಸೀರತ್_ಅಭಿಯಾನ #ಕ್ರಾಂತಿಯಜ್ಯೋತಿ #ಪ್ರವಾದಿಮುಹಮ್ಮದ್ﷺ #Muhammadﷺ #ProphetMuhammad #SeeratCampaign #JamaatEIslamiHind #ಚಿತ್ರದುರ್ಗ #Chitradurga #ChitradurgaNews #KarnatakaNews #KannadaNews #BreakingNews #ViralNews #LocalNews #CTownNews #CtownNews #NewsUpdate #ಸುದ್ದಿ #ಸುದ್ದಿವಾಹಿನಿ
    1
    ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥
ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು!
#SeeratUnNabi
#ಸೀರತ್_ಅಭಿಯಾನ
#ಕ್ರಾಂತಿಯಜ್ಯೋತಿ
#ಪ್ರವಾದಿಮುಹಮ್ಮದ್ﷺ
#Muhammadﷺ
#ProphetMuhammad
#SeeratCampaign
#JamaatEIslamiHind
#ಚಿತ್ರದುರ್ಗ
#Chitradurga
#ChitradurgaNews
#KarnatakaNews
#KannadaNews
#BreakingNews
#ViralNews
#LocalNews
#CTownNews
#CtownNews
#NewsUpdate
#ಸುದ್ದಿ
#ಸುದ್ದಿವಾಹಿನಿ
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ನಗರದ ಗಾಂಧಿನಗರದ ಮಸೀದಿ ಬಳಿ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈದುಮಿಲಾದ್ ಹಬ್ಬವು ಪ್ರೀತಿ, ಸಹೋದರತೆ, ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಪವಿತ್ರ ದಿನವಾಗಿದೆ. ಸಮಾಜದಲ್ಲಿ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಬೇಕು ಎಂದು ಕರೆ ನೀಡಿದರು. ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು. ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಈ ವೇಳೆ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಂಡಿತ್ತು. ಈದುಮಿಲಾದ್ ಮೂಲಕ ಶಾಂತಿ, ಸಹೋದರತೆ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಮೂಲಕ ಚಳ್ಳಕೆರೆ ನಗರ ಗಮನ ಸೆಳೆಯಿತು.
    1
    ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು.
ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ನಗರದ ಗಾಂಧಿನಗರದ ಮಸೀದಿ ಬಳಿ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈದುಮಿಲಾದ್ ಹಬ್ಬವು ಪ್ರೀತಿ, ಸಹೋದರತೆ, ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಪವಿತ್ರ ದಿನವಾಗಿದೆ. ಸಮಾಜದಲ್ಲಿ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಬೇಕು ಎಂದು ಕರೆ ನೀಡಿದರು.
ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು. ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಈ ವೇಳೆ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಂಡಿತ್ತು.
ಈದುಮಿಲಾದ್ ಮೂಲಕ ಶಾಂತಿ, ಸಹೋದರತೆ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಮೂಲಕ ಚಳ್ಳಕೆರೆ ನಗರ ಗಮನ ಸೆಳೆಯಿತು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಗುಬ್ಬಿ ತಾಲೂಕಿನ ಪತ್ರಾವುತನಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಮಾರಮ್ಮ ದೇವಿಯವರ ಚರಮೂರ್ತ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಗುಬ್ಬಿ ಭಾರತ ಸುಸಂಸ್ಕೃತ ರಾಷ್ಟ್ರ ಇಡೀ ವಿಶ್ವವೇ ಭಾರತದ ಸಂಸ್ಕೃತಿಯನ್ನು ಅನುಸರಿಸುತ್ತಿದೆ ಪ್ರತಿಯೊಬ್ಬರೂ ಧರ್ಮ ದಾರಿತವಾಗಿ ಬದುಕನ್ನು ಸಾಗಿಸುವುದು ಸೂಕ್ತ ಎಂದು ಶಿಡ್ಲೇಕೋಣ ಶ್ರೀ ವಾಲ್ಮೀಕಿ ಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಸಂಜಯ್ ಕುಮಾರ ಮಹಾಸ್ವಾಮಿಗಳು ತಿಳಿಸಿದರು. ಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಪತ್ರಾವುತನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಆದಿಶಕ್ತಿ ಮಾರಮ್ಮ ದೇವಿಯವರ ಚರಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದ ಧಾರ್ಮಿಕ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು ಸುಂದರವಾದ ದೇವಾಲಯಗಳನ್ನು ಕಟ್ಟಿದರೆ ಸಾಲದು ಸುಂದರವಾದ ಬದುಕನ್ನು ಕಟ್ಟಿಕೊಂಡು ಸಂಸ್ಕಾರವಂತರಾಗಿ ಬದುಕಬೇಕೆಂದು ತಿಳಿಸಿದರು. ಮಕ್ಕಳಿಗೆ ಚಿಕ್ಕಂದಿನಿಂದಲೇ ಧಾರ್ಮಿಕ ಪ್ರಜ್ಞೆ ಮೂಡಿಸಿ ಸಾಮಾಜಿಕ ಅರಿವು ಮೂಡಿಸಿ ಉತ್ತಮ ಪ್ರಜೆಗಳನ್ನಾಗಿ ಮಾಡಿ ಎಂದರು. ಶಕ್ತಿ ದೇವತೆ ಮಾರಮ್ಮನವರ ಮೂಲವನ್ನ ತಿಳಿಸಿದ ಶ್ರೀಗಳು ಪೂಜೆ ಆಡಂಬರವಾಗಿರಬಾರದು ಮೌಲ್ಯದಿಂದ ಕೂಡಿರಬೇಕು ಅರಿವಿನಿಂದ ಬದುಕಿದರೆ ದೇವರು ತಾನಾಗಿಯೇ ಒಲಿದು ಬರುತ್ತಾನೆ ಎಂದರು. ಬದುಕಿನಲ್ಲಿ ದುಡಿಯುವುದು ಅರ್ಥಪೂರ್ಣವಾಗಿರಬೇಕು ದುಡಿಮೆಯ ಒಂದು ಅಂಶ ಧರ್ಮಕ್ಕೆ ಮೀಸಲಿಡಬೇಕು, ದುಶ್ಚಟಗಳಿಂದ ದೂರ ಇರಬೇಕು ಎಂದರು. ಗ್ರಾಮಗಳು ಅಭಿವೃದ್ಧಿ ಹೊಂದಬೇಕಾದರೆ ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು ಅಂತಹ ಒಗ್ಗಟ್ಟು ನಿಮ್ಮ ಗ್ರಾಮದಲ್ಲಿ ಎದ್ದು ಕಾಣುತ್ತದೆ ಎಂದರು. ಇದೆ ಸಂದರ್ಭದಲ್ಲಿ ದೇವರುಗಳ ಉತ್ಸವ ಅದ್ದೂರಿಯಾಗಿ ನೆರವೇರಿತು, ಬಂದಿದ್ದ ಭಕ್ತಾದಿಗಳಿಗೆ ಮಹಾದಾಸೋಹ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖಂಡರಾದ ಜಿಎನ್ ಬೆಟ್ಟಸ್ವಾಮಿ, ಪಟ್ಟಿ ಲಕ್ಕಮ್ಮದೇವಿ ಪ್ರಧಾನ ಅರ್ಚಕರಾದ ಗೋವಿಂದರಾಜು, ದಯಾನಂದ ಗೌಡ, ಪಣಗಾರ್ ಮೋಹನ್ ಕುಮಾರ್, ಚಿಕ್ಕ ರಂಗಯ್ಯ, ಗಂಗಾಧರಪ್ಪ ವತ್ಸಲ ಕುಮಾರ್, ಚಿಕ್ಕಮ್ಮ ಶ್ರೀ ರಂಗಯ್ಯ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀ ಪುಟ್ಟರಾಜು, ಸದಸ್ಯರಾದ ಶಿವಣ್ಣ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಾಜಣ್ಣ, ವಕೀಲರಾದ ಜಯ ರಂಗಯ್ಯ ಸಿ ರಮೇಶ್ ಪಿ ಎಸ ಐ ನಾಗರಾಜು, ರಮೇಶ್ ರಾವ್, ಏನ್ ಉಮೇಶ್, ಕಾಂತರಾಜು, ಖಜಾಂಚಿ ಸುರೇಶ್, ಕಮಿಟಿ ಅಧ್ಯಕ್ಷ ಕಿಟ್ಟಿ, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಶ್ರೀ ರಂಗಯ್ಯ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಪಾಲ್ಗೊಂಡಿದ್ದರು.
    1
    ಗುಬ್ಬಿ ತಾಲೂಕಿನ ಪತ್ರಾವುತನಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಮಾರಮ್ಮ ದೇವಿಯವರ ಚರಮೂರ್ತ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ
ಗುಬ್ಬಿ ಭಾರತ ಸುಸಂಸ್ಕೃತ ರಾಷ್ಟ್ರ ಇಡೀ ವಿಶ್ವವೇ ಭಾರತದ ಸಂಸ್ಕೃತಿಯನ್ನು ಅನುಸರಿಸುತ್ತಿದೆ ಪ್ರತಿಯೊಬ್ಬರೂ ಧರ್ಮ ದಾರಿತವಾಗಿ ಬದುಕನ್ನು ಸಾಗಿಸುವುದು ಸೂಕ್ತ ಎಂದು ಶಿಡ್ಲೇಕೋಣ ಶ್ರೀ ವಾಲ್ಮೀಕಿ ಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಸಂಜಯ್ ಕುಮಾರ ಮಹಾಸ್ವಾಮಿಗಳು ತಿಳಿಸಿದರು.     
ಗುಬ್ಬಿ ತಾಲೂಕಿನ  ಚೇಳೂರು ಹೋಬಳಿ ಪತ್ರಾವುತನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಆದಿಶಕ್ತಿ ಮಾರಮ್ಮ ದೇವಿಯವರ ಚರಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದ ಧಾರ್ಮಿಕ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು ಸುಂದರವಾದ ದೇವಾಲಯಗಳನ್ನು ಕಟ್ಟಿದರೆ ಸಾಲದು ಸುಂದರವಾದ ಬದುಕನ್ನು ಕಟ್ಟಿಕೊಂಡು ಸಂಸ್ಕಾರವಂತರಾಗಿ ಬದುಕಬೇಕೆಂದು ತಿಳಿಸಿದರು. ಮಕ್ಕಳಿಗೆ ಚಿಕ್ಕಂದಿನಿಂದಲೇ ಧಾರ್ಮಿಕ ಪ್ರಜ್ಞೆ ಮೂಡಿಸಿ ಸಾಮಾಜಿಕ ಅರಿವು ಮೂಡಿಸಿ ಉತ್ತಮ ಪ್ರಜೆಗಳನ್ನಾಗಿ ಮಾಡಿ ಎಂದರು. ಶಕ್ತಿ ದೇವತೆ ಮಾರಮ್ಮನವರ ಮೂಲವನ್ನ ತಿಳಿಸಿದ ಶ್ರೀಗಳು ಪೂಜೆ ಆಡಂಬರವಾಗಿರಬಾರದು ಮೌಲ್ಯದಿಂದ ಕೂಡಿರಬೇಕು ಅರಿವಿನಿಂದ ಬದುಕಿದರೆ ದೇವರು ತಾನಾಗಿಯೇ ಒಲಿದು ಬರುತ್ತಾನೆ ಎಂದರು.   ಬದುಕಿನಲ್ಲಿ ದುಡಿಯುವುದು ಅರ್ಥಪೂರ್ಣವಾಗಿರಬೇಕು ದುಡಿಮೆಯ ಒಂದು ಅಂಶ ಧರ್ಮಕ್ಕೆ ಮೀಸಲಿಡಬೇಕು, ದುಶ್ಚಟಗಳಿಂದ ದೂರ ಇರಬೇಕು ಎಂದರು. ಗ್ರಾಮಗಳು ಅಭಿವೃದ್ಧಿ ಹೊಂದಬೇಕಾದರೆ ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು ಅಂತಹ ಒಗ್ಗಟ್ಟು ನಿಮ್ಮ ಗ್ರಾಮದಲ್ಲಿ ಎದ್ದು ಕಾಣುತ್ತದೆ ಎಂದರು.                     
ಇದೆ ಸಂದರ್ಭದಲ್ಲಿ   ದೇವರುಗಳ ಉತ್ಸವ ಅದ್ದೂರಿಯಾಗಿ ನೆರವೇರಿತು, ಬಂದಿದ್ದ ಭಕ್ತಾದಿಗಳಿಗೆ ಮಹಾದಾಸೋಹ ಏರ್ಪಡಿಸಲಾಗಿತ್ತು. 
ಕಾರ್ಯಕ್ರಮದಲ್ಲಿ ಮುಖಂಡರಾದ ಜಿಎನ್ ಬೆಟ್ಟಸ್ವಾಮಿ, ಪಟ್ಟಿ ಲಕ್ಕಮ್ಮದೇವಿ ಪ್ರಧಾನ ಅರ್ಚಕರಾದ ಗೋವಿಂದರಾಜು, ದಯಾನಂದ ಗೌಡ, ಪಣಗಾರ್ ಮೋಹನ್ ಕುಮಾರ್, ಚಿಕ್ಕ ರಂಗಯ್ಯ, ಗಂಗಾಧರಪ್ಪ ವತ್ಸಲ ಕುಮಾರ್, ಚಿಕ್ಕಮ್ಮ ಶ್ರೀ ರಂಗಯ್ಯ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀ ಪುಟ್ಟರಾಜು, ಸದಸ್ಯರಾದ ಶಿವಣ್ಣ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಾಜಣ್ಣ, ವಕೀಲರಾದ ಜಯ ರಂಗಯ್ಯ ಸಿ ರಮೇಶ್  ಪಿ ಎಸ ಐ ನಾಗರಾಜು, ರಮೇಶ್ ರಾವ್, ಏನ್ ಉಮೇಶ್, ಕಾಂತರಾಜು, ಖಜಾಂಚಿ ಸುರೇಶ್, ಕಮಿಟಿ ಅಧ್ಯಕ್ಷ ಕಿಟ್ಟಿ, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಶ್ರೀ ರಂಗಯ್ಯ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಪಾಲ್ಗೊಂಡಿದ್ದರು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.