ಭದ್ರಾವತಿ-ತೆರವುಗೊಳಿಸ ದಿರುವ ಒತ್ತುವರಿ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಭದ್ರಾವತಿ: ನಗರದಲ್ಲಿ ಕಳೆದ 8 ವರ್ಷ ಗಳಿಂದ ಡಾ.ರಾಜಕುಮಾರ್ ರಸ್ತೆ (ಬಿ.ಎಚ್. ರಸ್ತೆ) ಅಗಲೀಕರಣ ಕಾರ್ಯಕ್ಕೆ ತೊಡಕಾಗಿ ರುವ 9 ಕಟ್ಟಡಗಳನ್ನು ಇದುವರೆಗೂ ತೆರವುಗೊಳಿಸಿಲ್ಲ. ಇದರಿಂದಾಗಿ ವಾಹನ ಸವಾರರಿಗೆ, ಪಾದಚಾರಿಗಳಿಗೆ ತೊಂದರೆ ಯಾಗುತ್ತಿದ್ದು, ಅಲ್ಲದೆ ಭವಿಷ್ಯದ ದೃಷ್ಟಿ ಯಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಕಟ್ಟಡಗಳನ್ನು ತೆರವುಗೊಳಿಸಬೇಕೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್. ರವಿಕುಮಾರ್ ತಹಸೀಲ್ದಾರ್ ಪರುಸಪ್ಪ ಕುರುಬರ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. 11.10.2017 ರಂದು ತಾಲ್ಲೂಕು ಕಛೇರಿ ಸಭಾಂಗಾಣದಲ್ಲಿ ನಗರಸಭೆ, ಲೋಕೋಪಯೋಗಿ ಹಾಗು ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪದ್ಮ ನಿಲಯ ಹೋಟೇಲ್ ಸೇರಿದಂತೆ ಇತರೆ ಒತ್ತುವರೆಯಾಗಿರುವ 9 ಕಟ್ಟಡಗಳನ್ನು ತೆರವುಗೊಳಿಸುವಂತೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಇದುವರೆಗೂ ತೆರವಾಗದೆ ಉಳಿದಿದ್ದು ತಕ್ಷಣ ತೆರುವು ಕಾರ್ಯ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಪದ್ಮನಿಲಯ ಹೋಟೇಲ್ ಮುಂಭಾಗದಲ್ಲಿ ನಿಲುಗಡೆಗೊಳ್ಳುವ ವಾಹನಗಳಿಂದ ಪಾದಚಾರಿಗಳಿಗೆ, ವಾಹನ ಸವಾರರಿಗೆ ಮತ್ತು ಅದರಲ್ಲೂ ವಿಶೇಷವಾಗಿ ಹಿರಿಯ ನಾಗರೀಕರಿಗೆ ಬಹಳಷ್ಟು ತೊಂದರೆಯಾಗು ತ್ತಿದೆ ಎಂದು ಮನವಿಯಲ್ಲಿ ಅಳಲು ತೋರ್ಪಡಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಿಂದ ತೆರುವು ಕಾರ್ಯಕ್ಕೆ ದೃಢೀಕೃತವಾಗಿರುವ ಪದ್ಮನಿಲಯ ಸೇರಿದಂತೆ 9 ಕಟ್ಟಗಳನ್ನು ತಕ್ಷಣ ತೆರವುಗೊಳಿಸುವ ಮೂಲಕ ಎದುರಾಗಿರುವ ಸಮಸ್ಯೆಗಳನ್ನು ಬಗೆ ಹರಿಸುವಂತೆ ಈ ಹಿಂದೆ ತಹಸೀಲ್ದಾರ್ ಸಮ್ಮುಖದಲ್ಲಿ ನಡೆದಿರುವ ಸಭೆ ಹಾಗು ಕೈಗೊಂಡಿರುವ ಕ್ರಮಗಳ ಕುರಿತ ದಾಖಲೆ ಗಳ ಸಮೇತ ರವಿಕುಮಾರ್ ಕೋರಿದ್ದಾರೆ.
ಭದ್ರಾವತಿ-ತೆರವುಗೊಳಿಸ ದಿರುವ ಒತ್ತುವರಿ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಭದ್ರಾವತಿ: ನಗರದಲ್ಲಿ ಕಳೆದ 8 ವರ್ಷ ಗಳಿಂದ ಡಾ.ರಾಜಕುಮಾರ್ ರಸ್ತೆ (ಬಿ.ಎಚ್. ರಸ್ತೆ) ಅಗಲೀಕರಣ ಕಾರ್ಯಕ್ಕೆ ತೊಡಕಾಗಿ ರುವ 9 ಕಟ್ಟಡಗಳನ್ನು ಇದುವರೆಗೂ ತೆರವುಗೊಳಿಸಿಲ್ಲ. ಇದರಿಂದಾಗಿ ವಾಹನ ಸವಾರರಿಗೆ, ಪಾದಚಾರಿಗಳಿಗೆ ತೊಂದರೆ ಯಾಗುತ್ತಿದ್ದು, ಅಲ್ಲದೆ ಭವಿಷ್ಯದ ದೃಷ್ಟಿ ಯಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಕಟ್ಟಡಗಳನ್ನು ತೆರವುಗೊಳಿಸಬೇಕೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್. ರವಿಕುಮಾರ್ ತಹಸೀಲ್ದಾರ್ ಪರುಸಪ್ಪ ಕುರುಬರ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. 11.10.2017 ರಂದು ತಾಲ್ಲೂಕು ಕಛೇರಿ ಸಭಾಂಗಾಣದಲ್ಲಿ ನಗರಸಭೆ, ಲೋಕೋಪಯೋಗಿ ಹಾಗು ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪದ್ಮ ನಿಲಯ ಹೋಟೇಲ್ ಸೇರಿದಂತೆ ಇತರೆ ಒತ್ತುವರೆಯಾಗಿರುವ 9 ಕಟ್ಟಡಗಳನ್ನು ತೆರವುಗೊಳಿಸುವಂತೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಇದುವರೆಗೂ ತೆರವಾಗದೆ ಉಳಿದಿದ್ದು ತಕ್ಷಣ ತೆರುವು ಕಾರ್ಯ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಪದ್ಮನಿಲಯ ಹೋಟೇಲ್ ಮುಂಭಾಗದಲ್ಲಿ ನಿಲುಗಡೆಗೊಳ್ಳುವ ವಾಹನಗಳಿಂದ ಪಾದಚಾರಿಗಳಿಗೆ, ವಾಹನ ಸವಾರರಿಗೆ ಮತ್ತು ಅದರಲ್ಲೂ ವಿಶೇಷವಾಗಿ ಹಿರಿಯ ನಾಗರೀಕರಿಗೆ ಬಹಳಷ್ಟು ತೊಂದರೆಯಾಗು ತ್ತಿದೆ ಎಂದು ಮನವಿಯಲ್ಲಿ ಅಳಲು ತೋರ್ಪಡಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಿಂದ ತೆರುವು ಕಾರ್ಯಕ್ಕೆ ದೃಢೀಕೃತವಾಗಿರುವ ಪದ್ಮನಿಲಯ ಸೇರಿದಂತೆ 9 ಕಟ್ಟಗಳನ್ನು ತಕ್ಷಣ ತೆರವುಗೊಳಿಸುವ ಮೂಲಕ ಎದುರಾಗಿರುವ ಸಮಸ್ಯೆಗಳನ್ನು ಬಗೆ ಹರಿಸುವಂತೆ ಈ ಹಿಂದೆ ತಹಸೀಲ್ದಾರ್ ಸಮ್ಮುಖದಲ್ಲಿ ನಡೆದಿರುವ ಸಭೆ ಹಾಗು ಕೈಗೊಂಡಿರುವ ಕ್ರಮಗಳ ಕುರಿತ ದಾಖಲೆ ಗಳ ಸಮೇತ ರವಿಕುಮಾರ್ ಕೋರಿದ್ದಾರೆ.
- ಭದ್ರಾವತಿ: ಹಿರಿಯ ಕಾರ್ಮಿಕ ಮುಖಂಡ ರಾದ ಕಾಮ್ರೇಡ್ ಡಿ.ಸಿ ಮಾಯಣ್ಣನವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉನ್ನತ ನಾಗರೀಕ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಮೂಲಕ ಸೂಕ್ತ ಗೌರವ ನೀಡಬೇಕೆಂದು ಕಾಮ್ರೇಡ್ ಡಿ.ಸಿ ಮಾಯಣ್ಣ ಅಭಿಮಾನಿಗಳ ಸಂಘದ ಪ್ರಧಾನ ಸಂಚಾಲಕ ಬಿ.ಎನ್ ರಾಜು ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಪಿಐ ರಾಜ್ಯ ಮಂಡಳಿ ಸದಸ್ಯ ರಾದ ಮಾಯಣ್ಣನವರ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಇವರು ಬದುಕುಳಿಯುವುದೇ ಕಷ್ಟವಾಗಿತ್ತು. ಅಲ್ಲಿಂದ ಇವರನ್ನು ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಕರೆತಂದು ತೀವ್ರ ನಿಗಾ ಘಟಕದಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಕ್ಷೇತ್ರದ ನಾಗರೀಕರ ಪ್ರೀತಿಯ ಹಾರೈಕೆ, ಪ್ರಾರ್ಥನೆ ಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರುವುದು ಸಂತೋಷದ ವಿಚಾರವಾಗಿದೆ ಎಂದರು. ಆಸ್ಪತ್ರೆಯ ಮುಖ್ಯ ಡಾ:ವೈದ್ಯಾಧಿಕಾರಿ ಶಂಕರಪ್ಪ, ತಜ್ಞ ವೈದ್ಯ ಡಾ.ಮಂಜುನಾಥ್, ಸ್ಟಾಫ್ ನರ್ಸ್ ಎಲಿಜಬೆತ್ ಸಾಂಡ್ರರವರು ಮತ್ತು ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಮಾಯಣ್ಣನವರ ಆರೋಗ್ಯದ ಬಗ್ಗೆ, ಹೆಚ್ಚಿನ ಕಾಳಜಿವಹಿಸಿ ಹಗಲು-ರಾತ್ರಿ ಪ್ರೀತಿ, ಗೌರವದಿಂದ ಚಿಕಿತ್ಸೆ ನೀಡುತ್ತಿರುವು ದರಿಂದ ವಿಐಎಸ್ಎಲ್ ಕಾರ್ಮಿಕರ, ನಿವೃತ್ತ ಕಾರ್ಮಿಕರ, ಗುತ್ತಿಗೆ ಕಾರ್ಮಿಕರ ಹಾಗು ಕ್ಷೇತ್ರದ ಸಮಸ್ತ ನಾಗರೀಕರ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇನೆ. ಅಲ್ಲದೆ ಮಾಯಣ್ಣನವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಆಗಮಿಸುತ್ತಿರುವ ಜನಪ್ರತಿನಿಧಿ ಗಳಿಗೆ, ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಮುಖಂಡರಿಗೆ, ಗಣ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಮಾಯಣ್ಣನವರು ಕಳೆದ 60 ವರ್ಷ ಗಳಿಂದಲೂ ನಿರಂತರವಾಗಿ ಕಾರ್ಮಿಕರ ಮತ್ತು ದೀನ-ದಲಿತರ ಪರವಾಗಿ ಪ್ರಾಮಾಣಿಕವಾಗಿ ಹೋರಾಟ ನಡೆಸುತ್ತಾ ಬಂದಿದ್ದು, ಯಾವುದೇ ಫಲಾಪೇಕ್ಷೆ ಪಡೆಯದೆ ನಿರಂತರವಾಗಿ ಸಾರ್ವಜನಿಕರಿಗೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಇದು ಕ್ಷೇತ್ರದ ಎಲ್ಲಾ ನಾಗರೀಕರಿಗೂ ತಿಳಿದ ವಿಚಾರ ವಾಗಿದೆ. ಇವರ ಸೇವೆಯನ್ನು ಗೌರವಿಸಿ ಇಷ್ಟರಲ್ಲಾಗಲೇ ಕೇಂದ್ರ ಸರ್ಕಾರ ಪದ್ಮ ಶ್ರೀ, ಪದ್ಮ ಭೂಷಣ ಪ್ರಶಸ್ತಿಗಳನ್ನು ನೀಡಬೇಕಾ ಗಿತ್ತು. ಅಲ್ಲದೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಹಾಗೂ ವಿಶ್ವವಿದ್ಯಾ ನಿಲಯಗಳು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಬೇಕಾಗಿತ್ತು. ಆದರೆ ಇವರ ಸೇವೆಯನ್ನು ಇದುವರೆಗೂ ಗುರುತಿಸಿ ಗೌರವಿಸದಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಈ ಸಂಬಂಧ ತಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನಹರಿಸಬೇಕೆಂದು ಆಗ್ರಹಿಸಿದರು. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸ ಲಾಗಿದ್ದು, ಜ.9ರ ಸಂಜೆ 4 ಗಂಟೆಗೆ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಸಭೆಯನ್ನು ಕರೆಯಲಾಗಿದ್ದು, ಎಲ್ಲಾ ಸಂಘ ಸಂಸ್ಥೆಗಳ, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಡಿ.ಸಿ ಮಾಯಣ್ಣನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಸೀತಾರಾಮು, ಪಿ.ದೊರೈ, ಟಿ.ಜಿ ಬಸವರಾಜಯ್ಯ, ಲಿಂಗೋಜಿರಾವ್, ಚಂದ್ರಶೇಖರ್, ಸೋಮಣ್ಣ, ವೆಂಕಟೇಶ್ ಮೂರ್ತಿ, ಬಸವರಾಜ ಮತ್ತು ಶೇಖರ್ ಉಪಸ್ಥಿತರಿದ್ದರು.1
- ಜಾಗೃತಿ ಅಕ್ಕ ಪಡೆಗೆ ಗಸ್ತು ವಾಹನ.. ಆ್ಯಂಕರ್: ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಅಕ್ಕ ಮಹಿಳಾ ಪಡೆ ವಾಹನಕ್ಕೆ ಇಂದು ಡಿಸಿ ಟಿ. ವೆಂಕಟೇಶ್ ಚಾಲನೆ ನೀಡಿದ್ರು. ರಾಜ್ಯದಲ್ಲೇ ಮೊದಲ ಬಾರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅಕ್ಕ ಪೊಲೀಸ್ ಪಡೆಗೆ ಗಸ್ತು ವಾಹನ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಈ ಪಡೆ ಜಾಗೃತಿ ಮೂಡಿಸಲಿದೆ. ಹಾಸ್ಟಲ್ ಗಳಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳವಾಗದಂತೆ ತಡೆ, ಪೋಕ್ಸೋ, ಮಕ್ಕಳ ಮೇಲಿನ ದೌರ್ಜನ್ಯ ಸೇರಿದಂತೆ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಮಕ್ಕಳು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೀಡಿಸಲಿದೆ. ಇದರಲ್ಲಿ ಮಹಿಳಾ ಮುಖ್ಯ ಪೆದೆ ಸೇವೆ ಸೇರಿದಂತೆ, ಇಬ್ಬರು ಹೋಮ್ ಗಾರ್ಡ್ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಾರೆ. ಎರಡು ಶಿಫ್ಟಲ್ಲಿ ಕಾರ್ಯ ನಿರ್ವಹಿಸುವ ಈ ಪಡೆಗೆ ನೂತನ ವಾಹನ ನೀಡಿದ್ದು, ಜಿಲ್ಲೆಯಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಲಿದೆ.1
- ರಾಜ್ಯ ಸರ್ಕಾರ ಶಾಸಕ ಭರತ್ ರೆಡ್ಡಿ ಅವರನ್ನ ಬಂಧಿಸಬೇಕು ಎಂದು ಎಂ ಎಲ್ ಸಿ ಕೆ ಎಸ್ ನವೀನ್ ಆಗ್ರಹಿಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಏಲ್ ಸಿ ಕೆ ಎಸ್ ನವೀನ್ ಅವರು ಮಾತನಾಡಿದ್ದು ರಾಜ್ಯ ಸರ್ಕಾರ ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಭರತ್ ರೆಡ್ಡಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ1
- ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜನವರಿ 11ಕ್ಕೆ ಮಂಗಳೂರಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಸಿಎ ಜಗನ್ನಾಥ್ ಕಾಮತ್ ಹೇಳಿದ್ದಾರೆ. ಅವರು ಗುರುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಹೊಟೇಲ್ ಹಾಲ್ ನಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಈ ಕುರಿತು ಮಾಹಿತಿ ನೀಡಿದರು. ಮಂಗಳೋತ್ಸವದ ಪೂರ್ವಭಾವಿಯಾಗಿ ಜನವರಿ ಐದಕ್ಕೆ ಕರ್ನಾಟಕ, ಕೇರಳದಿಂದ ಹೊರೆಕಾಣಿಕಾ ಸೇವಾ ಸಮರ್ಪಣೆ ನಡೆದಿದೆ. ದೇಶದ ವಿವಿಧೆಡೆಗಳಿಂದ ವ್ಯಾಸಧ್ವಜ ಸಂಕೀರ್ತನಾ ಪಾದಯಾತ್ರೆ ಮಂಗಳೂರಿಗೆ ಆಗಮಿಸುತ್ತಿದೆ ಎಂದ ಅವರು, ಬರುವ ಭಾನುವಾರ ಶ್ರೀ ಕಾಶಿಮಠ ಸಂಸ್ಥಾನದ ಕೊಂಚಾಡಿಯಲ್ಲಿರುವ ಶಾಖಾಮಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಅಂದ್ರು. ಭಜನಾ ಸಂಕೀರ್ತನಾ ವ್ಯಾಸಧ್ವಜ ಮತ್ತು ಸ್ವಾಮೀಜಿಯವರ ಪಾದುಕಾ ದಿಗ್ವಿಜಯ ಪಾದಯಾತ್ರೆ ನಡೆಯಲಿದೆ. ಇದೇ ವೇಳೆ ವಿವಿಧ ಊರ ಭಜನಾ ಮಂಡಳಿಗಳು ದೇವರ, ಸ್ವಾಮೀಜಿಯವರ ಭಜನೆಯನ್ನು ಹಾಡುತ್ತಾ ಪಾದಯಾತ್ರೆಯಲ್ಲಿ ಭಾಗವಹಿಸಲಿದೆ ಅಂದ್ರು. ಸುದ್ದಿಗೋಷ್ಟಿಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್, ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ, ಆಲ್ ಟೆಂಪಲ್ ಅಸೋಸಿಯೇಶನ್ ಅಧ್ಯಕ್ಷ ಅತುಲ್ ಕುಡ್ವ, ಪ್ರಮುಖರಾದ ಕೋಟೇಶ್ವರ ದಿನೇಶ್ ಕಾಮತ್, ವಾಸುದೇವ್ ಕಾಮತ್, ರಘುವೀರ್ ಭಂಡಾರಕಾರ್, ಟಿ. ಗಣಪತಿ ಪೈ ಹಾಗೂ ಮುಖಂಡರು ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ4
- ಸಿಎಂ ಸಿದ್ದರಾಮಯ್ಯ ದಾಖಲೆ, ಖಾದ್ರಿಯವರಿಂದ ವಿಜಯೋತ್ಸವ. ಶಿಗ್ಗಾವಿ, : ದೀರ್ಘಾವಧಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ, ಇತಿಹಾಸ ನಿರ್ಮಿಸಿರುವ సిఎం ಸಿದ್ದರಾಮಯ್ಯನವರು ಕಾಲಗರ್ಭದ ರಾಜಕೀಯ ಕೆಲಿಯಾಗಿ ಮನುಷ್ಯನ ಸಭಲೀಕರಣಕ್ಕಾಗಿ ಶ್ರಮಿಸಿದ ಅಪ್ರತಿಮ ಶಕ್ತಿ ಎಂದು ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್. ಖಾದ್ರಿ ಹೇಳಿದರು. ಪಟ್ಟಣದ ಕಿತ್ತೂರಾಣಿ ಚನ್ನಮ್ಮ ಸರ್ಕಲ್ನಲ್ಲಿ ಅವರಅಭಿಮಾನಿಗಳೊಂದಿಗೆ ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಮೇಲಿನ ಪ್ರೀತಿ, ನ್ಯಾಯದ ಬದ್ಧತೆಯಿಂದ ಆಡಳಿತ ನೀಡಿ ಜನಮನ್ನಣೆ ಗಳಿಸಿದ್ದಾರೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಚಿಂತಕರಾಗಿರುವ ಅವರು, ಸಾಮಾಜಿಕ ನ್ಯಾಯದ ಮೂಲಕ ಸಾಮ್ಯತೆ ಕಾಯ್ದುಕೊಂಡಿದ್ದಾರೆ ಎಂದರು. ಕನ್ನಡ ಅಸ್ಥಿತೆಯ ಹಿತರಕ್ಷಕರಾಗಿ ಆರ್ಥಿಕ ಶಿಸ್ತು ವಿಚಾರದಲ್ಲಿ ತೋರಿರುವ ಶಕ್ತಿ ಅಪರೂಪದ್ದು, ಅವರ ಆಡಳಿತದ ಹೊಸತನದೊಂದಿಗೆ ಜನರ ಮುಂದೆ ಬರುತ್ತಾರೆ, ಅವರೊಬ್ಬ ಕ್ರಾಂತಿಕಾರಿ ಯೋಜನೆಗಳ ಜನಕರಾಗಿದ್ದಾರೆ, ರಾಜ್ಯವನ್ನು ಅತಿ ದೀರ್ಘಾವಧಿ ಕಾಲದವರಗೆ ಸಮರ್ಥವಾಗಿ ಮುನ್ನಡಿಸಿದ ಅವರು, ಈ ದಾಖಲೆ ಮಾಡುವ ದಿನವೇ ನಮ್ಮ ಜಿಲ್ಲೆಗೆ ಆಗಮಿಸಿದ್ದು, ನನಗೆ ವಯಕ್ತಿಕವಾಗಿ ಮತ್ತಷ್ಟು ಉತ್ಸಾಹವನ್ನು ನೀಡಿದೆ. ಅವರ ಮಾರ್ಗದರ್ಶನದಲ್ಲಿ ನಮ್ಮ ಹೆಸ್ಕಾಂ ಇಲಾಖೆ ರಾಜ್ಯದ ಜನರ ಸೇವೆ ಮಾಡುತ್ತಿದೆ. ಶೋಷಿತರ ಧ್ವನಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾದ ಅವರು ನುಡಿದಂತೆ ನಡೆದವರಾಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಅಂದರೆ ೧೬ ಬಜೆಟ್ ಮಂಡಿಸಿರುವ ಅಪ್ರತಿಮ ದಾಖಲೆ ಅವರದ್ದಾಗಿದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥಮಣ್ಣವರ, ಅಣ್ಣಪ ಕೋಣಪ್ಪನವರ, ಬಾಬಾ ಹುಸೇನ್ ಗೌಡಗೇರಿ, ಇಸ್ಮಾಯಿಲ್ ಅಕ್ಕಿ, ಅರ್ಜುನ ಕಟಗಿ, ವಿಠಲ್ ಜೀವಾಜಿ, ಮಹಾಂತೇಶ ಕೊಂಡಾಯಿ, ರಹೀಮ್ ಮಲ್ಲೂರ ಸೇರಿದಂತೆ ಅಭಿಮಾನಿಗಳು ಇದ್ದರು.1
- ತುಮಕೂರು-ಗೃಹ ಮಂತ್ರಿ ತವರಲ್ಲಿ ಟ್ರಾಫಿಕ್ ಪಜಿತಿ! ಸಂಚಾರಿ ಪೊಲೀಸ್ ನಿರ್ಲಕ್ಷಕ್ಕೆ ಟ್ರಾಫಿಕ್ ಕಿರಿಕಿರಿ#onlinetv24x71
- ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಬೆಂಗಳೂರಿನ ಕಲಾವಿದರಿಂದ ಸಂಗೀತ ಕಾರ್ಯಕ್ರಮ1
- ಭದ್ರಾವತಿ: ನಗರದ ಹೊಸ ಸೇತುವೆ ರಸ್ತೆ ಯ ಓಲಾ ಸರ್ವಿಸ್ ಸೆಂಟರ್ ಬಂದ್ ಆಗಿರುವುದರಿಂದ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕಳೆದ ಮೂರು ದಿನದಿಂದ ಸಂಸ್ಥೆ ಬಾಗಿಲು ಹಾಕಿದ್ದು ವ್ಯವಸ್ಥಾಪಕರನ್ನ ಸ್ಥಳಕ್ಕೆ ಕರೆಸುವಂತೆ ಗ್ರಾಹಕರು ಆಗ್ರಹಿಸಿದ್ದಾರೆ. ಸರ್ವಿಸ್ ಸೆಂಟರ್ ನಲ್ಲಿ ವಾಹನದ ಬಿಡಿ ಭಾಗಗಳು ದೊರೆಯುತ್ತಿಲ್ಲ. ದುರಸ್ಥಿಗೆ ಬಿಟ್ಟ ವಾಹನಗಳಿಂದ ಹೊಂದಾಣಿಕೆ ಇಲ್ಲದ ಬಿಡಿ ಭಾಗಗಳನ್ನು ತೆಗೆದು ತಾತ್ಕಾಲಿಕವಾಗಿ ವಾಹನಕ್ಕೆ ತೆಗೆದುಹಾಕುತ್ತಾರೆ ಎಂಬ ಆರೋಪವನ್ನ ಸ್ಥಳೀಯರು ಹೊರಹಾಕು ತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಹಕರು ಸಂಸ್ಥೆಯ ಬಳಿ ಹೋದಾಗ ಬಾಗಿಲು ಹಾಕಿದ್ದನು ಕಂಡು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ವ್ಯವಸ್ಥಾಪಕ ಬಾಗಿಲು ಹಾಕಿಕೊಂಡು ಹೋದವರು ವಾಪಾಸಾಗಿಲ್ಲ ವೆಂದು ಸ್ಥಳೀಯ ಸಾರ್ವಜನಿಕರು ಹೇಳುತ್ತಿದ್ದಾರೆ.1