ಹನೂರು ತಾಲೂಕಿನ ಬಸಪ್ಪನದೊಡ್ಡಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸಪ್ಪನ ದೊಡ್ಡಿ ಸರಸ್ವತಿ ಪೂಜೆ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿ ಬಸಪ್ಪನ ದೊಡ್ಡಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೀರಪ್ಪ ಪ್ರಸ್ತವಿಕ ನುಡಿಯನ್ನಡಿದರು. ನಂತರ ಪ್ರಾರ್ಥನಾ ಸಂಸ್ಥೆಯ ಕಾರ್ಯದರ್ಶಿ ಪರಮೇಶ್,ಶಿಕ್ಷಣ ಸಂಯೋಜಕ ಮಹೇಶ್ ಮತ್ತು ಬಿ ಆರ್ ಪಿ ವೆಂಕಟರಾಜು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಶಾಲಾ ವತಿಯಿಂದ ಬಹುಮಾನ ವಿತರಣೆ ಕೂಡ ನಡೆಯಿತು. ಇದೇ ಸಂದರ್ಭದಲ್ಲಿ ಮಾರಳ್ಳಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಹಾಲಿ ಶಿಕ್ಷಕ ದೊರೆಸ್ವಾಮಿ, ಎಸ್ ಡಿ ಎಂ ಸಿ ಅಧ್ಯಕ್ಷ ಬೊಮ್ಮಣ್ಣ,ನೇಸರ ಶಾಲೆಯ ಕಾರ್ಯದರ್ಶಿ ಮಾದೇಶ, ನಾಗರಾಜು, ಚನ್ನೇ ಗೌಡ,ಕಲಂದರ್ ಪಾಷ, ಹೋಲಿಕ್ರಾಸ್ ಸಂಸ್ಥೆಯ ಸಂಯೋಜಕ ಸುರೇಶ್, ಹಾಗೂ ಮುಖ್ಯ ಶಿಕ್ಷಕ ವೀರಪ್ಪ, ಸಹ ಶಿಕ್ಷಕರಾದ ಆನಂದ,ಪುಟ್ಟರಾಮು, ಸೋಮಣ್ಣ, ಪ್ರಭುಸ್ವಾಮಿ,ದೈಹಿಕ ಶಿಕ್ಷಣ ಶಿಕ್ಷಕಿ ಮತ್ತು ಮಕ್ಕಳು ಉಪಸ್ಥಿತರಿದ್ದರು. ಸರ್ವರಿಗೂ ಸ್ವಾಗತ ಕೋರುವವರು, ಶಿಕ್ಷಕರು, ಅಧ್ಯಕ್ಷರು ಕಾರ್ಯದರ್ಶಿಗಳು, SDMC ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಗ್ರಾಮಸ್ಥರು ಮತ್ತು ಪೋಷಕರು.
ಹನೂರು ತಾಲೂಕಿನ ಬಸಪ್ಪನದೊಡ್ಡಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸಪ್ಪನ ದೊಡ್ಡಿ ಸರಸ್ವತಿ ಪೂಜೆ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿ ಬಸಪ್ಪನ ದೊಡ್ಡಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ
ವೀರಪ್ಪ ಪ್ರಸ್ತವಿಕ ನುಡಿಯನ್ನಡಿದರು. ನಂತರ ಪ್ರಾರ್ಥನಾ ಸಂಸ್ಥೆಯ ಕಾರ್ಯದರ್ಶಿ ಪರಮೇಶ್,ಶಿಕ್ಷಣ ಸಂಯೋಜಕ ಮಹೇಶ್ ಮತ್ತು ಬಿ ಆರ್ ಪಿ ವೆಂಕಟರಾಜು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಶಾಲಾ ವತಿಯಿಂದ ಬಹುಮಾನ ವಿತರಣೆ ಕೂಡ ನಡೆಯಿತು. ಇದೇ ಸಂದರ್ಭದಲ್ಲಿ ಮಾರಳ್ಳಿ
ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಹಾಲಿ ಶಿಕ್ಷಕ ದೊರೆಸ್ವಾಮಿ, ಎಸ್ ಡಿ ಎಂ ಸಿ ಅಧ್ಯಕ್ಷ ಬೊಮ್ಮಣ್ಣ,ನೇಸರ ಶಾಲೆಯ ಕಾರ್ಯದರ್ಶಿ ಮಾದೇಶ, ನಾಗರಾಜು, ಚನ್ನೇ ಗೌಡ,ಕಲಂದರ್ ಪಾಷ, ಹೋಲಿಕ್ರಾಸ್ ಸಂಸ್ಥೆಯ ಸಂಯೋಜಕ ಸುರೇಶ್, ಹಾಗೂ
ಮುಖ್ಯ ಶಿಕ್ಷಕ ವೀರಪ್ಪ, ಸಹ ಶಿಕ್ಷಕರಾದ ಆನಂದ,ಪುಟ್ಟರಾಮು, ಸೋಮಣ್ಣ, ಪ್ರಭುಸ್ವಾಮಿ,ದೈಹಿಕ ಶಿಕ್ಷಣ ಶಿಕ್ಷಕಿ ಮತ್ತು ಮಕ್ಕಳು ಉಪಸ್ಥಿತರಿದ್ದರು. ಸರ್ವರಿಗೂ ಸ್ವಾಗತ ಕೋರುವವರು, ಶಿಕ್ಷಕರು, ಅಧ್ಯಕ್ಷರು ಕಾರ್ಯದರ್ಶಿಗಳು, SDMC ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಗ್ರಾಮಸ್ಥರು ಮತ್ತು ಪೋಷಕರು.
- ಹನೂರು : ಪಟ್ಟಣದ ಲೋಕಉಪಯೋಗಿ ಅತಿಥಿಗೃಹದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ರೂಪ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿತ್ತು. ನಂತರ ಜಿಲ್ಲಾಧಿಕಾರಿ ಶ್ರೀ ರೂಪ ಅವರು ಮಾಧ್ಯಮದವರ ಜೊತೆ ಮಾತನಾಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ಇಂದು ಹನೂರು ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದು ಜಿಲ್ಲೆಯಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಅದರ ಬಗ್ಗೆ ಯಾವ ರೀತಿ ಕ್ರಮ ತೆಗೆದುಕೊಂಡಿದ್ದೇವೆ, ಮುಂದೆ ಯಾವ ರೀತಿ ಕ್ರಮ ವಹಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು. ನಾಳೆ ಮುಖ್ಯಮಂತ್ರಿಗಳ ನಿರ್ದೇಶನದಂತೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಕರೆದಿದ್ದು, ಹನೂರು ತಾಲೂಕಿನ 21 ಗ್ರಾಮ್ ಪಂಚಾಯತಿ ವ್ಯಾಪ್ತಿಯ 31 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದು, ಆ ಗ್ರಾಮಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಅಪಾರ ಜಿಲ್ಲಾಧಿಕಾರಿ ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಹನೂರು ತಹಸಿಲ್ದಾರ್ ಚೈತ್ರ, ಇ ಓ ಉಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.4
- ಬನ್ನೂರು: ತಾಲೂಕಿನ ಬನ್ನೂರು ಹೋಬಳಿಯ ಬಿ.ಸಿ ಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಹುಚ್ಚಮ್ಮ ದೇವಿಯ ದೊಡ್ಡ ಹಬ್ಬ ಭಕ್ತಿಭಾವ, ಸಂಪ್ರದಾಯ ಮತ್ತು ಗ್ರಾಮೀಣ ಸಂಸ್ಕೃತಿಯ ಸೊಬಗಿನೊಂದಿಗೆ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಹಬ್ಬದ ಪ್ರಮುಖ ಅಂಗವಾಗಿ ಗ್ರಾಮದ ಮಹಿಳೆಯರು 70 ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪವಿತ್ರ ನೀರನ್ನು ತಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಚ್ಚಮ್ಮ ದೇವಿಯ ಉತ್ಸವ ಮೂರ್ತಿಗೆ ಗ್ರಾಮ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ನಾದಸ್ವರ, ಪೂಜಾ ಘೋಷಣೆಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮದೆಲ್ಲೆಡೆ ಭಕ್ತಿಮಯ ವಾತಾವರಣ ನಿರ್ಮಾಣವಾಯಿತು. ದೇವಿಗೆ ಹರಕೆ ತೀರಿಸುವ ಸಲುವಾಗಿ ಭಕ್ತರು ಸ್ವಯಂಪ್ರೇರಿತವಾಗಿ ಸುಮಾರು 500 ಕುರಿಗಳನ್ನು ಸಮರ್ಪಿಸಿದರು. ಪ್ರತಿಯೊಂದು ಕುರಿಯ ಅಂದಾಜು ಬೆಲೆ ₹12,000 ಆಗಿದ್ದು, ಒಟ್ಟು ಮೌಲ್ಯ ಸುಮಾರು ₹60 ಲಕ್ಷ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಕ್ತರು ನೀಡಿದ ಈ ಕುರಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು. ಹಬ್ಬದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಯಿತು. ಭಕ್ತರಿಗಾಗಿ ಸುಮಾರು 12 ಟನ್ ಮಟನ್ ಸಾಂಬಾರ್ ಹಾಗೂ ರಾಗಿ ಮುದ್ದೆ ತಯಾರಿಸಿ 1000 ಕ್ಕೂ ಹೆಚ್ಚು ಜನರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಗ್ರಾಮಸ್ಥರು, ಹಾಗೂ ಮಹಿಳಾ ಯಾರು ಸಹ ಅಡುಗೆ ತಯಾರಿ ಭಾಗವಹಿಸಿ ದ್ದರು. ಅಡುಗೆ ವ್ಯವಸ್ಥೆ ಸುಸೂತ್ರವಾಗಿ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಕತೆ, ಸಹಕಾರ ಮತ್ತು ಭಕ್ತಿಯ ಪ್ರತಿರೂಪ ಕಾಣಿಸಿಕೊಂಡಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ದೇವಿಯ ಆಶೀರ್ವಾದ ಪಡೆದು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಹುಚ್ಚಮ್ಮ ದೇವಿ ಹಬ್ಬ ಗ್ರಾಮೀಣ ಬದುಕಿನ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಸಾರಿತು. ಗ್ರಾಮಸ್ಥರ ಒಗ್ಗಟ್ಟು ಹಾಗೂ ಭಕ್ತರ ಅಪಾರ ಭಕ್ತಿ ಈ ವರ್ಷದ ಹುಚ್ಚಮ್ಮ ದೇವಿ ದೊಡ್ಡ ಹಬ್ಬವನ್ನು ವಿಶೇಷವಾಗಿ ಮೆರಗುಗೊಳಿಸಿತು.1
- ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.1
- ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು. “ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.1
- ಹನೂರಿನಲ್ಲಿ ಇಂದು ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ: ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ. ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. "ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.. ಈ ಸಂದರ್ಭದಲ್ಲಿ ಅವತಾರ್ ಶಿವ ರೈತ ಸಂಘದ ಯುವ ಸದಸ್ಯರು ಮಾತನಾಡಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೂರು ತಿಂಗಳಿಗೆ ಒಮ್ಮೆ ಸಭೆ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಕಾಡಿನ ಪ್ರಾಮುಖ್ಯತೆ ಹಾಗೂ ರೈತರಿಗೆ ಇದರ ಮಹತ್ವ ತಿಳಿಸಿ ಹಾಗೂ ಕಾಡ್ಗಿಚ್ಚು ಇದರ ಬಗ್ಗೆ ಸಭೆಗಳು ಮಾಡಿಸಿ ರೈತರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.4
- 135 TH BIRTH ANNIVERSARY OF DR. BR AMBEDKAR SAHEB BY KARNATAKA RASHTRA SAMITI PAKSHA1
- *ಭಾರತ ನಲ್ಲಿ ವೈರಲ್*1
- ಹನೂರು :ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿ ಆವರಣದಲ್ಲಿ 135 ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿಯನ್ನ ಆಚರಣೆ ಮಾಡಲಾಯಿತು. ಇದಕ್ಕೂ ಮುನ್ನ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮಗೆ ಮಾಲಾರ್ಪಣೆ ಮಾಡಿ, ನಂತರ ಪ್ರಮುಖ ಬೀದಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನ ಮೆರವಣಿಗೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸೆಸ್ಕ್ ಕಚೇರಿಯ ಸಿಬ್ಬಂದಿಗಳು ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಇದೇ ಸಂದರ್ಭದಲ್ಲಿ aee ರಂಗಸ್ವಾಮಿ, ae ಆನಂದ್ ಕುಮಾರ್, ಜೈ ಗಳು,ಲೈನ್ ಮ್ಯಾನಗಳು ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಇದ್ದರು.3