ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರಕ್ಕೆ ಗಜೇಂದ್ರ ಆನೆ ಸ್ಥಳಾಂತರ ದಸರಾ ಆನೆ ಗಜೇಂದ್ರ ಆನೆಯನ್ನು ಚಾಮರಾಜನಗರ ಬೂದಿಪಡಗ ಆನೆ ಶಿಬಿರದಿಂದ ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರಕ್ಕೆ ಸ್ಥಳಾಂತರ ಮಾಡಲಾಗಿದೆ. ಐತಿಹಾಸಿಕ ಮೈಸೂರು ದಸರಾ ಉತ್ಸವದಲ್ಲಿ 15ಕ್ಕೂ ಹೆಚ್ಚು ಭಾರಿ ಭಾಗಿಯಾಗಿದ್ದ ಗಜೇಂದ್ರ ಆಕರ್ಷಕ ಮೈಕಟ್ಟು, ಗಾಂಭೀರ್ಯದ ನಡಿಗೆ, ನೀಳ ದಂತದಿಂದಲೇ ಆಕರ್ಷಣೀಯವಾಗಿ ಚಾಮರಾಜನಗರ ಜಿಲ್ಲೆಯ ಕೆ.ಗುಡಿಯ ಕೇಂದ್ರಬಿಂದುವಾಗಿದ್ದ 2015, ಮಾರ್ಚ್ 18ರಂದು ಮದವೇರಿ ಶ್ರೀರಾಮ ಆನೆ,ಮಾವುತ ಗಣಪತಿಯನ್ನ ಕೊಂದಿದ್ದ ಘಟನೆಯ ಬಳಿಕ ಗಜೇಂದ್ರನಿಗೆ ದಸರಾ ಮಹೋತ್ಸವಕ್ಕೆ ಕೋಕ್ ನೀಡಲಾಗಿತ್ತು ಹಲವು ವರ್ಷಗಳ ಕಾಲ ಕೆ.ಗುಡಿ ಆನೆಶಿಬಿರದಲ್ಲಿದ್ದ ಏಕಾಂತವಾಸ ಅನುಭವಿಸಿದ್ದ. 2024ರ ನವೆಂಬರ್ನಲ್ಲಿ ಕೆ.ಗುಡಿಯಿಂದ ಬೂದಿಪಡಗದ ಆನೆ ಶಿಬಿರಕ್ಕೆ ಶಿಫ್ಟ್ ಆಗಿದ್ದ ಗಜೇಂದ್ರನ ಗತವೈಭವದ ದಿನಗಳನ್ನು ಕಂಡಿದ್ದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈಚೆಗಷ್ಟೆ ‘ಸೇವ್ ಗಜೇಂದ್ರ’ ಅಭಿಯಾನ ಆರಂಭಿಸಿದ್ದರು ಸಾಮಾನ್ಯವಾಗಿ ಆನೆಗಳು ಗುಂಪಾಗಿ ವಾಸಿಸುವ ಸೂಕ್ಷ್ಮ ಮನಸ್ಸಿನ ಜೀವಿಗಳಾಗಿದ್ದು ಬೂದಿಪಡಗದಲ್ಲಿರುವ ಗಜೇಂದ್ರ ಒಂಟಿತನದಿಂದ ಬಳಲಿದ್ದ ಕಾಡಿಗೆ ಮೇಯಲು ಬಿಟ್ಟರೆ ಇತರೆ ಕಾಡಾನೆಗಳೊಂದಿಗೆ ಕಾದಾಡುವ ಸಾಮರ್ಥ್ಯವನ್ನೂ ಕಳೆದುಕೊಂಡಿದ್ದ ಹೀಗಾಗಿ ಸುರಕ್ಷಿತವಾದ ಶಿಬಿರಕ್ಕೆ ಸ್ಥಳಾಂತರಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರಡಯಲಾಗಿತ್ತು ಪ್ರಾಣಿಪ್ರಿಯರ, ಅಭಿಮಾನಿಗಳ ಒತ್ತಾಸೆಗೆ ಮಣಿದ ಸಚಿವ ಈಶ್ವರ ಖಂಡ್ರೆ ಎರಡು ದಿನಗಳ ಹಿಂದೆಯಷ್ಟೆ ಗಜೇಂದ್ರನನ್ನು ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದರು ಆದರೆಅರಣ್ಯ ಸಚಿವ ಸೂಚನೆ ಹಿನ್ನಲೆ ಗಜೇಂದ್ರ ಸ್ಥಳಾಂತರ ಮಾಡಲಾಗಿದ್ದು ಪ್ರಾಣಿಪ್ರಿಯರ ಸೇವ್ ಗಜೇಂದ್ರ ಅಭಿಯಾನ ಫಲಶೃತಿಯಾಗಿದೆ.
ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರಕ್ಕೆ ಗಜೇಂದ್ರ ಆನೆ ಸ್ಥಳಾಂತರ ದಸರಾ ಆನೆ ಗಜೇಂದ್ರ ಆನೆಯನ್ನು ಚಾಮರಾಜನಗರ ಬೂದಿಪಡಗ ಆನೆ ಶಿಬಿರದಿಂದ ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರಕ್ಕೆ ಸ್ಥಳಾಂತರ ಮಾಡಲಾಗಿದೆ. ಐತಿಹಾಸಿಕ ಮೈಸೂರು ದಸರಾ ಉತ್ಸವದಲ್ಲಿ 15ಕ್ಕೂ ಹೆಚ್ಚು ಭಾರಿ ಭಾಗಿಯಾಗಿದ್ದ ಗಜೇಂದ್ರ ಆಕರ್ಷಕ ಮೈಕಟ್ಟು, ಗಾಂಭೀರ್ಯದ ನಡಿಗೆ, ನೀಳ ದಂತದಿಂದಲೇ ಆಕರ್ಷಣೀಯವಾಗಿ ಚಾಮರಾಜನಗರ ಜಿಲ್ಲೆಯ ಕೆ.ಗುಡಿಯ ಕೇಂದ್ರಬಿಂದುವಾಗಿದ್ದ 2015, ಮಾರ್ಚ್ 18ರಂದು ಮದವೇರಿ ಶ್ರೀರಾಮ ಆನೆ,ಮಾವುತ ಗಣಪತಿಯನ್ನ ಕೊಂದಿದ್ದ ಘಟನೆಯ ಬಳಿಕ ಗಜೇಂದ್ರನಿಗೆ ದಸರಾ ಮಹೋತ್ಸವಕ್ಕೆ ಕೋಕ್ ನೀಡಲಾಗಿತ್ತು ಹಲವು ವರ್ಷಗಳ ಕಾಲ ಕೆ.ಗುಡಿ ಆನೆಶಿಬಿರದಲ್ಲಿದ್ದ ಏಕಾಂತವಾಸ ಅನುಭವಿಸಿದ್ದ. 2024ರ ನವೆಂಬರ್ನಲ್ಲಿ ಕೆ.ಗುಡಿಯಿಂದ ಬೂದಿಪಡಗದ ಆನೆ ಶಿಬಿರಕ್ಕೆ ಶಿಫ್ಟ್ ಆಗಿದ್ದ ಗಜೇಂದ್ರನ ಗತವೈಭವದ ದಿನಗಳನ್ನು ಕಂಡಿದ್ದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈಚೆಗಷ್ಟೆ ‘ಸೇವ್ ಗಜೇಂದ್ರ’ ಅಭಿಯಾನ ಆರಂಭಿಸಿದ್ದರು ಸಾಮಾನ್ಯವಾಗಿ ಆನೆಗಳು ಗುಂಪಾಗಿ ವಾಸಿಸುವ ಸೂಕ್ಷ್ಮ ಮನಸ್ಸಿನ ಜೀವಿಗಳಾಗಿದ್ದು ಬೂದಿಪಡಗದಲ್ಲಿರುವ ಗಜೇಂದ್ರ ಒಂಟಿತನದಿಂದ ಬಳಲಿದ್ದ ಕಾಡಿಗೆ ಮೇಯಲು ಬಿಟ್ಟರೆ ಇತರೆ ಕಾಡಾನೆಗಳೊಂದಿಗೆ ಕಾದಾಡುವ ಸಾಮರ್ಥ್ಯವನ್ನೂ ಕಳೆದುಕೊಂಡಿದ್ದ ಹೀಗಾಗಿ ಸುರಕ್ಷಿತವಾದ ಶಿಬಿರಕ್ಕೆ ಸ್ಥಳಾಂತರಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರಡಯಲಾಗಿತ್ತು ಪ್ರಾಣಿಪ್ರಿಯರ, ಅಭಿಮಾನಿಗಳ ಒತ್ತಾಸೆಗೆ ಮಣಿದ ಸಚಿವ ಈಶ್ವರ ಖಂಡ್ರೆ ಎರಡು ದಿನಗಳ ಹಿಂದೆಯಷ್ಟೆ ಗಜೇಂದ್ರನನ್ನು ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದರು ಆದರೆಅರಣ್ಯ ಸಚಿವ ಸೂಚನೆ ಹಿನ್ನಲೆ ಗಜೇಂದ್ರ ಸ್ಥಳಾಂತರ ಮಾಡಲಾಗಿದ್ದು ಪ್ರಾಣಿಪ್ರಿಯರ ಸೇವ್ ಗಜೇಂದ್ರ ಅಭಿಯಾನ ಫಲಶೃತಿಯಾಗಿದೆ.
- ದಸರಾ ಆನೆ ಗಜೇಂದ್ರ ಆನೆಯನ್ನು ಚಾಮರಾಜನಗರ ಬೂದಿಪಡಗ ಆನೆ ಶಿಬಿರದಿಂದ ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರಕ್ಕೆ ಸ್ಥಳಾಂತರ ಮಾಡಲಾಗಿದೆ. ಐತಿಹಾಸಿಕ ಮೈಸೂರು ದಸರಾ ಉತ್ಸವದಲ್ಲಿ 15ಕ್ಕೂ ಹೆಚ್ಚು ಭಾರಿ ಭಾಗಿಯಾಗಿದ್ದ ಗಜೇಂದ್ರ ಆಕರ್ಷಕ ಮೈಕಟ್ಟು, ಗಾಂಭೀರ್ಯದ ನಡಿಗೆ, ನೀಳ ದಂತದಿಂದಲೇ ಆಕರ್ಷಣೀಯವಾಗಿ ಚಾಮರಾಜನಗರ ಜಿಲ್ಲೆಯ ಕೆ.ಗುಡಿಯ ಕೇಂದ್ರಬಿಂದುವಾಗಿದ್ದ 2015, ಮಾರ್ಚ್ 18ರಂದು ಮದವೇರಿ ಶ್ರೀರಾಮ ಆನೆ,ಮಾವುತ ಗಣಪತಿಯನ್ನ ಕೊಂದಿದ್ದ ಘಟನೆಯ ಬಳಿಕ ಗಜೇಂದ್ರನಿಗೆ ದಸರಾ ಮಹೋತ್ಸವಕ್ಕೆ ಕೋಕ್ ನೀಡಲಾಗಿತ್ತು ಹಲವು ವರ್ಷಗಳ ಕಾಲ ಕೆ.ಗುಡಿ ಆನೆಶಿಬಿರದಲ್ಲಿದ್ದ ಏಕಾಂತವಾಸ ಅನುಭವಿಸಿದ್ದ. 2024ರ ನವೆಂಬರ್ನಲ್ಲಿ ಕೆ.ಗುಡಿಯಿಂದ ಬೂದಿಪಡಗದ ಆನೆ ಶಿಬಿರಕ್ಕೆ ಶಿಫ್ಟ್ ಆಗಿದ್ದ ಗಜೇಂದ್ರನ ಗತವೈಭವದ ದಿನಗಳನ್ನು ಕಂಡಿದ್ದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈಚೆಗಷ್ಟೆ ‘ಸೇವ್ ಗಜೇಂದ್ರ’ ಅಭಿಯಾನ ಆರಂಭಿಸಿದ್ದರು ಸಾಮಾನ್ಯವಾಗಿ ಆನೆಗಳು ಗುಂಪಾಗಿ ವಾಸಿಸುವ ಸೂಕ್ಷ್ಮ ಮನಸ್ಸಿನ ಜೀವಿಗಳಾಗಿದ್ದು ಬೂದಿಪಡಗದಲ್ಲಿರುವ ಗಜೇಂದ್ರ ಒಂಟಿತನದಿಂದ ಬಳಲಿದ್ದ ಕಾಡಿಗೆ ಮೇಯಲು ಬಿಟ್ಟರೆ ಇತರೆ ಕಾಡಾನೆಗಳೊಂದಿಗೆ ಕಾದಾಡುವ ಸಾಮರ್ಥ್ಯವನ್ನೂ ಕಳೆದುಕೊಂಡಿದ್ದ ಹೀಗಾಗಿ ಸುರಕ್ಷಿತವಾದ ಶಿಬಿರಕ್ಕೆ ಸ್ಥಳಾಂತರಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರಡಯಲಾಗಿತ್ತು ಪ್ರಾಣಿಪ್ರಿಯರ, ಅಭಿಮಾನಿಗಳ ಒತ್ತಾಸೆಗೆ ಮಣಿದ ಸಚಿವ ಈಶ್ವರ ಖಂಡ್ರೆ ಎರಡು ದಿನಗಳ ಹಿಂದೆಯಷ್ಟೆ ಗಜೇಂದ್ರನನ್ನು ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದರು ಆದರೆಅರಣ್ಯ ಸಚಿವ ಸೂಚನೆ ಹಿನ್ನಲೆ ಗಜೇಂದ್ರ ಸ್ಥಳಾಂತರ ಮಾಡಲಾಗಿದ್ದು ಪ್ರಾಣಿಪ್ರಿಯರ ಸೇವ್ ಗಜೇಂದ್ರ ಅಭಿಯಾನ ಫಲಶೃತಿಯಾಗಿದೆ.1
- Post by Md Aleemulla Shariff1
- ತುಮಕೂರು: ಸಮಾಜಸೇವೆ ಮತ್ತು ದಾನಧರ್ಮದ ಪ್ರತೀಕವಾಗಿದ್ದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಭಕ್ತಿಭಾವದ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಮೈಸೂರು ಮೂಲದ ಪುನೀತ್ ಕಲಾವಿದ ತಂಡ ವಿಶೇಷವಾಗಿ 8000 ಚದರ ಅಡಿ ವಿಸ್ತೀರ್ಣದ ಬೃಹತ್ ರಂಗೋಲಿ ರಚಿಸಿ ಗಮನ ಸೆಳೆದಿತು. ಸಿದ್ದಗಂಗಾ ಮಠದ ಆವರಣದಲ್ಲಿ ಮೂಡಿಬಂದ ಈ ಅದ್ಭುತ ರಂಗೋಲಿಯಲ್ಲಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಅತ್ಯಂತ ಕಲಾತ್ಮಕವಾಗಿ ರೂಪಿಸಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬಣ್ಣಗಳ ಸಮನ್ವಯ, ವಿನ್ಯಾಸದ ನಿಖರತೆ ಹಾಗೂ ಆಧ್ಯಾತ್ಮಿಕ ಭಾವನೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರಂಗೋಲಿ ಸಿದ್ಧಗೊಂಡಿತ್ತು. ಈ ಮಹತ್ವದ ಕಲಾಕೃತಿಯನ್ನು ಮೈಸೂರು ನಗರದ ಪುನೀತ್ ಕಲಾವಿದ ತಂಡದ ಕಲಾವಿದರು ಶ್ರಮಪಟ್ಟು ರೂಪಿಸಿದ್ದಾರೆ. ತಂಡದ ಪ್ರಮುಖ ಕಲಾವಿದರಾದ ಪುನೀತ್ ಕಲಾವಿದ, ಲಕ್ಷ್ಮಿ ಸಿ, ಆದಿತ್ಯ ಪಿ, ಹರ್ಷಿತ್ ಆರ್, ಹಾಗೂ ಕುಮಾರಸ್ವಾಮಿ ಕೆ.ಬಿ ಅವರು ಹಲವು ದಿನಗಳ ಪರಿಶ್ರಮದಿಂದ ರಂಗೋಲಿಯನ್ನು ಸಿದ್ಧಗೊಳಿಸಿದರು. ಅವರ ಕಲಾತ್ಮಕ ಪ್ರತಿಭೆಗೆ ಮಠದ ಭಕ್ತರು ಹಾಗೂ ಭೇಟಿ ನೀಡಿದವರು ಶ್ಲಾಘನೆ ವ್ಯಕ್ತಪಡಿಸಿದರು. ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿಕ್ಷಣ, ಅನ್ನದಾನ ಮತ್ತು ಮಾನವೀಯ ಸೇವೆಗಳ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಸ್ಮರಣಾರ್ಥವಾಗಿ ಕಲೆಯ ಮೂಲಕ ಗೌರವ ಸಲ್ಲಿಸುವುದು ವಿಶೇಷವಾಗಿದೆ ಎಂದು ಭಕ್ತರು ಅಭಿಪ್ರಾಯಪಟ್ಟರು. ರಂಗೋಲಿ ವೀಕ್ಷಿಸಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ, ಕಲಾವಿದರ ಕಾರ್ಯವನ್ನು ಪ್ರಶಂಸಿಸಿದರು. ಸಿದ್ದಗಂಗಾ ಮಠದ ಆವರಣವು ಆಧ್ಯಾತ್ಮಿಕ ವಾತಾವರಣದೊಂದಿಗೆ ಕಲಾ ಸಂಭ್ರಮದ ಕೇಂದ್ರವಾಗಿತ್ತು. ಶಿವಕುಮಾರ ಸ್ವಾಮೀಜಿಯವರ ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಲಿ ಎಂಬ ಸಂದೇಶದೊಂದಿಗೆ ಪುನೀತ್ ಕಲಾವಿದ ತಂಡ ಈ ಬೃಹತ್ ರಂಗೋಲಿ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದೆ. ಈ ಕಲಾಕೃತಿ ಮಠದ ಕಾರ್ಯಕ್ರಮಗಳಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.1
- ಮಳವಳ್ಳಿ ಸಾರಥಿ ಯೋಜನೆ ಅಡಿಯಲ್ಲಿ 17 ನಿರುದ್ಯೋಗಿ ಯುವಕರಿಗೆ ಕಾರು ವಿತರಣೆ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ 22 ಮಹಿಳೆಯರಿಗೆ ಹೊಲಿಗೆ ಯಂತ್ರ 112 ಮ0ದಿಗೆ ನೇರ ಸಾಲ ಸೌಲಭ್ಯ,58 ಮಂದಿಗೆ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಸೋಮವಾರ ಜರಗಿತು ಕಾರ್ಯಕ್ರಮವನ್ನು ಶಾಸಕರಾದ ನರೇಂದ್ರಸ್ವಾಮಿ ಉದ್ಘಾಟಿಸಿ ಸವಲತ್ತುಗಳು ಗಳನ್ನು ಇತರಿಸಿ ಮಾತನಾಡಿದರು1
- ಅಂದಿನಿಂದ ಇಂದಿ ನವರೆಗೂ ಪ್ರತಿ ವರ್ಷ ಕೂಡ ಯುಗಾದಿ ಹಬ್ಬದ ನಂತರ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ನಡೆದುಕೊಂಡು ಬರುತ್ತಿದೆ. ಬಸವೇಶ್ವರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕವಾಗಿ ಅರ್ಚಕರು ಬೆಳಗ್ಗೆಯಿಂದ ಉಪವಾಸ ಇದ್ದು, ಸ್ವಾಮಿಗೆ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ನೆರವೇರಿಸಿದರು. ದಟ್ಟವಾದ ಅರಣ್ಯ ಪ್ರದೇಶದ ಮಧ್ಯೆ ಇರುವ ಅರಳಿಮರದ ಕೆಳಗೆ ಬಸವೇಶ್ವರ ಸ್ವಾಮಿಯ ಲಿಂಗಕ್ಕೆ ಪೂರ್ವಜರು ಪೂಜೆ ಮಾಡಿಕೊಂಡು ಬರುತ್ತಿದ್ದರು. ಅಲ್ಲಿಂದ ಪಚ್ಚೇದೊಡ್ಡಿ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿಯ ಲಿಂಗಾವನ್ನ ಪ್ರತಿಷ್ಠಾಪನೆ ಮಾಡಿ. ಪ್ರತಿ ವರ್ಷ ಕೂಡ ವಿಶೇಷ ಪೂಜೆ ನೆರವೇರಿಸಿಕೊಂಡು ಬಂದಿರುತ್ತಾರೆ. ಕಾಂಚಳ್ಳಿ ಗ್ರಾಮದಿಂದ ಜಡೆಸ್ವಾಮಿ (ಶಿವನ ಪ್ರತಿರೂಪ ) ದೇವರನ್ನ ಪಚ್ಚೇದೊಡ್ಡಿಗೆ ತಂದು ವಿಶೇಷ ಪೂಜೆ ಪುನಸ್ಕಾರಗಳನ್ನ ಮಾಡುತ್ತಾರೆ. ತಳಿರು ತೋರಣಗಳಿಂದ ಸಿಂಗರಿಸಿ, ದೇವರಿಗೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗುತ್ತದೆ. ಎಸ್. ಎ. ಸೌಂಡ್ಸ್ ಸಿಸ್ಟಮ್ ವತಿಯಿಂದ ಪಚ್ಚೆದೊಡ್ಡಿ ಗ್ರಾಮದ ದೇವಾಲಯದ ಸುತ್ತಮುತ್ತ ವಿದ್ಯುತ್ ದೀಪ ಅಲಂಕಾರಗಳಿಂದ ಅಲಂಕಾರ ಮಾಡಲಾಗಿತ್ತು. ಭಕ್ತರಿಗೆ ಅನ್ನ ದಾನ ವಿಶೇಷ ಪೂಜೆ ನಡೆದ ನಂತರ ರಾತ್ರಿ 8 ಗಂಟೆಗೆ ನೆರೆದಿರುವ ಭಕ್ತರಿಗೆ ಪಾಯಸ, ಮುದ್ದೆ, ದ್ವಿದಳ ದಾನ್ಯದ ಸಾಂಬಾರು, ಪಲ್ಯ, ಹಪ್ಪಳ,ಅನ್ನಸಾಂಬಾರ್ ಅನ್ನು ನೆರೆದಿರುವ ಭಕ್ತರಿಗೆ ಅನ್ನದಾನದ ವ್ಯವಸ್ಥೆಯನ್ನ ಕಲ್ಪಿಸಿದರು. ನಟರಾಜ್ ಮೈಸೂರು ತಂಡದವರಿಂದ ರಾತ್ರಿ 10 ರಿಂದ ಬೆಳಿಗ್ಗೆ 4 ರವರೆಗೆ ಹರಿಕಥೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಬಸವೇಶ್ವರ ಸ್ವಾಮಿಯ ಅರ್ಚಕ ಬಸವರಾಜು, ಅರ್ಚಕರಾದ ಶಿವು, ಶ್ರೀನಿವಾಸ್, ಗೌಡರದ ಮನ್ನಾರ್ ಕೃಷ್ಣೆಗೌಡ, ಕೃಷ್ಣೆಗೌಡ,ನಾಗರಾಜು, ರಾಜು, ಗಣೇಶ್, ಮಾದೇವ, ಜಡೆಸ್ವಾಮಿ,ಕುಮಾರ್, ಗಾವಳಿ ರಾಜು ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಇದ್ದರು.4
- ಗುಂಡ್ಲುಪೇಟೆ: ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ಸುಮಾರು 7:30ರ ವೇಳೆಗೆ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ಸಮೀಪದಲ್ಲೇ ಹುಲಿ ಸಂಚರಿಸಿರುವುದರಿಂದ ಜನರು ರಾತ್ರಿ ವೇಳೆ ಹೊರಗೆ ಬರಲು ಹೆದರಿಕೆ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ಬಗ್ಗೆ ಮಾಹಿತಿ ನೀಡಿದ ನಂತರ ಕೇವಲ ಮೂವರು ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಬಂದಿದ್ದು, ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಲಿ ಚಲನವಲನವನ್ನು ನಿಯಂತ್ರಿಸಲು ಅಗತ್ಯ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ1
- ಅರಕಲಗೂಡು : ಪುಣ್ಯ ಕ್ಷೇತ್ರ ಧರ್ಮಸ್ಥಳ ಹಾಗು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ದರ್ಶನಕ್ಕೆ ಅನುಕೂಲವಾಗುವಂತೆ ಧರ್ಮಸ್ಥಳ ದಿಂದ ಮೈಸೂರಿಗೆ ನೇರ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುವುದನ್ನು ಸ್ವಾಗತಿಸಿ ಸಂತೆಮರೂರು ಗ್ರಾಮಸ್ಥರು ನೂತನ ಬಸ್ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ಇಂದು ಬೆಳಿಗ್ಗೆ 5-20ಕ್ಕೆ ಆಗಮಿಸಿದ ಸಾರಿಗೆ ಬಸ್ನ್ನು ಗ್ರಾಮಸ್ಥರು ತಡೆದು ಹೂವಿನ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿದರು.ಅಲ್ಲದೆ ಕೆಲವರು ಬಸ್ ಏರಿ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣ ಕೂಡ ಆರಂಭಿಸಿದರು. ಈ ನೂತ ಬಸ್ ನಿತ್ಯವೂ ಬಿಸಿಲೆ ಘಾಟ್ ಮೂಲಕ ಅರಕಲಗೂಡು ಸಂತೆಮರೂರು,ಜೋಡಿಗುಬ್ಬಿ,ಹಳ್ಳಿಮೈಸೂರು,ಭೇರ್ಯ,ಕೆ.ಆರ್.ಮಾರ್ಗವಾಗಿ ಮೈಸೂರಿಗೆ ತೆರಳಲಿ ತಂಗಲಿದೆ.ಪುನಃ ಬೆಳಗ್ಗೆ 6ಗಂಟೆಗೆ ಮೈಸೂರಿನಿಂದ ಹೊರಟು ಅದೇ ಮಾರ್ಗವಾಗಿ ಸಂಚರಿಸಿ ಕುಕ್ಕೆ ಸುಬ್ರಹ್ಮಣ್ಯ ಮೂಲಕ ಧರ್ಮಸ್ಥಳಕ್ಕೆ ತೆರಳಲಿದೆ. ನಿತ್ಯವೂ ತಾಲೂಕಿನಿಂದ ಕುಕ್ಕೆ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣಿಕರು ಹೋಗಿಬರುತ್ತಿದ್ದು,ಈ ನೂತನ ಸಾರಿಗೆ ಬಸ್ ಅತೀ ಸಮೀಪ ಮಾರ್ಗದಲ್ಲಿ ಇರುವ ಕಾರಣ ಹೆಚ್ಚಿನ ಪ್ರಯಾಣಿಕರು ಈ ಬಸ್ ಸೌಲಭ್ಯವನ್ನು ಪಡೆಯಲು ಅವಕಾಶ ದೊರೆತಂತೆ ಆಗಿದೆ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು. ಅರಕಲಗೂಡಿನಿಂದ ಸಂತೆಮರೂರು-ಜೋಡಿಗುಬ್ಬಿ,ಹಳ್ಳಿಮೈಸೂರು ಮಾರ್ಗವಾಗಿ ಮೈಸೂರಿಗೆ ತೆರಳಲು ಸಕಾಲಿಕವಾಗಿ ಸಾರಿಗೆ ಬಸ್ ಸೇವೆಯಿಂದ ತ್ಭಾಗದ ಹತ್ತಾರು ಹಳ್ಳಿಗಳ ಜನರು ವಂಚನೆಗೊಂಡಿದ್ದರು.ಈ ಮಾರ್ಗ ಅರಕಲಗೂಡಿನಿಂದ ಮೈಸೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಅತೀ ಸಮೀಪವಾಗಿತ್ತು.ಅಲ್ಲದೆ ಬೆಳಕಿನ ವೇಳೆ ಬಿಸಿಲೆ ಘಾಟ್ ಸೌಂಧರ್ಯವನ್ನು ಸವಿಯಲು ಮತ್ತೊಂದು ಅವಕಾಶ ದೊರೆತಂತ್ತಾಗಿದೆ.ಈ ಅವಕಾಶ ಮತ್ತು ಪ್ರಯಾಣಿಕರ ಸಮಸ್ಯೆಗೆ ಪರಿಹಾರ ಒದಗಿಸಿರುವ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ಇಡೀ ಪ್ರಯಾಣಿಕರ ಪರವಾಗಿ ಸಂತೆಮರೂರು ಗ್ರಾಮಸ್ಥರು ಅಭಿನಂದಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಾಂತರಾಜೇ ಅರಸು,ಮಲ್ಲರಾಜೇ ಅರಸು,ಕಾರ್ತಿಕ ಅರಸು,ಬಾಲರಾಜೇ ಅರಸು ಇತರರು ಇದ್ದರು. #dharmasthala #ksrtc1
- Post by Md Aleemulla Shariff1