Shuru
Apke Nagar Ki App…
ಬಳ್ಳಾರಿ ಬಿಸಿಲಿನ ನಾಡು ಬಿಸಿಲಿನ ತಾಪಕ್ಕೆ ಜಿಲ್ಲೆಯಲ್ಲಿ ಬಿಸಿಯಾಗಲಿ
Onlinetv24x7
ಬಳ್ಳಾರಿ ಬಿಸಿಲಿನ ನಾಡು ಬಿಸಿಲಿನ ತಾಪಕ್ಕೆ ಜಿಲ್ಲೆಯಲ್ಲಿ ಬಿಸಿಯಾಗಲಿ
More news from ಕರ್ನಾಟಕ and nearby areas
- Post by Onlinetv24x71
- Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 80957823861
- ಶಿಗ್ಗಾಂವಿ ತಾಲೂಕು ಹುಲಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಸಾವನ್ನಪ್ಪಿದ ಕುರಿಗಾಹಿ ದಿ.ಮಾಳಪ್ಪ ಸೋಮಣ್ಣ ಗಡ್ಡೆ ಅವರ ಕುಟುಂಬದ ಸದಸ್ಯರನ್ನು ಶಿಗ್ಗಾಂವ ಸವಣೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭೇಟಿ ಮಾಡಿ ಸಾಂತ್ವಾನ ಹೇಳಿ ₹4,00,000/- ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು. ಈ ವೇಳೆ ಗಾಯಗೊಂಡ ಶ್ರೀ ಆಕಾಶ ಮಾಳಪ್ಪ ಗಡ್ಡೆ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ವೆಚ್ಚ ಸರ್ಕಾರದಿಂದ ಭರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ತಹಶೀಲ್ದಾರ್ ಶ್ರೀ ರವಿ ಕೊರವರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.1
- ಶಿಗ್ಗಾವಿ : ಈ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಘೋಷಿಸಿದ ಮೀಸಲಾತಿಯನ್ನು ಪುನಹ ಪರಿಶಿಷ್ಟ ಜಾತಿಗೆ ಜಾರಿ ಮಾಡಿ ಸುಗ್ರೀವಾಜ್ಞೆಯನ್ನು ಹೊರಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಿಗ್ಗಾವಿ ತಾಲೂಕಾ ಪರಿಶಿಷ್ಠ ಜಾತಿಯ ವಿವಿಧ ಮುಖಂಡರಿAದ ಮನವಿ ಅರ್ಪಿಸಿ ಒತ್ತಾಯಿಲಾಯಿತು. ಇತ್ತೀಚೆಗೆ ಕರ್ನಾಟಕ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೊಳಿಸಲು ಅಂತಿಮ ನಿರ್ಧಾರ ತೆಗೆದುಕೊಂಡಿದ್ದು ಇದು ಈ ಹಿಂದೆ ೨೦೨೨ ರಲ್ಲಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದಲ್ಲಿ ಪರಿಶಿಷ್ಟ ಜಾತಿಗಳಿಗೆ ಶೇಕಡ ೧೭ರಷ್ಟು ಮೀಸಲಾತಿಯನ್ನ ಘೋಷಿಸಿ ಅದರಲ್ಲಿ ಒಳ ಮೀಸಲಾತಿಗಾಗಿ ಅನುಕೂಲ ಮಾಡಿಕೊಟ್ಟಿತ್ತು ಆದರೆ ಪ್ರಸ್ತುತ ಸರ್ಕಾರವು ೧೭% ಘೋಷಣೆ ಮಾಡಿದಂತ ಮೀಸಲಾತಿಯನ್ನು ಶೇಕಡ ೧೫% ಗೆ ಇಳಿಸಿ ಅದರಲ್ಲಿಯೇ ಅವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುತ್ತಿದೆ ಇದರಿಂದಾಗಿ ಶೇಕಡ ಎರಡರನ್ನು ಮೀಸಲಾತಿ ಪ್ರಮಾಣವೂ ಕಡಿಮೆಯಾಗಿದ್ದರಿಂದ ಬಹಳಷ್ಟು ಅನ್ಯಾಯವಾಗುತ್ತಿದ್ದು ಪ್ರಸ್ತುತ ಕರ್ನಾಟಕವು ಒಬಿಸಿಗಳಿಗೆ ೩೨%, ಎಸ್ಸಿ ಗಳಿಗೆ ೧೫% ಮತ್ತು ಎಸ್ಟಿ ಗಳಿಗೆ ೩% ಒಟ್ಟು ೫೦% ಮೀಸಲಾತಿಯನ್ನು ಒದಗಿಸುತ್ತದೆ. ಎಸ್ಸಿ/ಎಸ್ಟಿ ಕೋಟಾವನ್ನು ಹೆಚ್ಚಿಸಲು ಕರ್ನಾಟಕಕ್ಕೆ ಇರುವ ಏಕೈಕ ಮಾರ್ಗವೆಂದರೆ ಸಂವಿಧಾನದ ಶೆಡ್ಯೂಲ್ ೯ ರ ಅಡಿಯಲ್ಲಿ ಲಭ್ಯವಿರುವ ನಿಬಂಧನೆಗಳನ್ನು ಬಳಸಿಕೊಂಡು ಮೀಸಲಾತಿಯನ್ನು ಹೆಚ್ಚಿಸುವುದು. ಶೆಡ್ಯೂಲ್ ೯ ನ್ಯಾಯಾಂಗ ಪರಿಶೀಲನೆಯಿಂದ ರಕ್ಷಿಸಲ್ಪಟ್ಟಿರುವ ಕೇಂದ್ರ ಮತ್ತು ರಾಜ್ಯ ಕಾನೂನುಗಳ ಪಟ್ಟಿಯನ್ನು ಒಳಗೊಂಡಿದೆ. ಶೆಡ್ಯೂಲ್ ೯ ರ ವ್ಯಾಪ್ತಿಯಲ್ಲಿರುವ ಹೆಚ್ಚಿನ ಕಾನೂನುಗಳು ಕೃಷಿ ಅಥವಾ ಭೂಮಿಗೆ ಸಂಬAಧಿಸಿದ್ದರೂ ಸಹ, ಮೀಸಲಾತಿಯಂತಹ ಇತರ ವಿಷಯಗಳು ಪಟ್ಟಿಯಲ್ಲಿವೆ. ಆದ್ದರಿಂದ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದಲ್ಲಿ ಘೋಷಿಸಿದಂತಹ ಶೇಕಡ ೧೭ರ ಮೀಸಲಾತಿಯನ್ನೇ ಪುನಹ ಜಾರಿಗೊಳಿಸಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಈ ಮೂಲಕ ಒತ್ತಾಯಿಸುತ್ತೇವೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ಡಿ ಎಸ್ ಮಾಳಗಿ, ಮಂಜುನಾಥ ಬ್ಯಾಹಟ್ಟಿ, ಕರೆಪ್ಪ ಕಟ್ಟಿಮನಿ, ನೀಲವ್ವ ಕಾಲವಾಡ, ಅಶೋಕ ಕಾಳೆ, ರಾಮಚಂದ್ರ ಧಾರವಾಡ, ಮಲ್ಲೇಶಪ್ಪ ಧಾರವಾಡ, ಲಕ್ಷ್ಮಣ ಬ್ಯಾಹಟ್ಟಿ, ಬಿ ಎಫ್ ಕಟ್ಟಿಮನಿ, ದುರ್ಗಪ್ಪ ಪೂಜಾರ, ಚಂದ್ರಶೇಖರ ಡೊಳ್ಳೆಶ್ವರ, ಮಾಲತೇಶ ಮಾಕಾಪುರ, ಆನಂದ ಬಂಡಿವಡ್ಡರ, ಸಂತೋಷ ಕಟ್ಟಿಮನಿ ಸೇರಿದಂತೆ ಇತರ ಮುಖಂಡರು ಇದ್ದರು.1
- ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಕರ ದೂರಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಣ ಪಡೆದಿರುವ ಆರೋಪ ಹಿನ್ನೆಲೆಯಲ್ಲಿ ಮೂವರ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು. ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಕುರಿತು ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.1
- ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಮಾಹಾಂತ ಸಂಗಮ ನಗರದ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನಾಳೆ ನೆಡೆಯಲಿದೆ. ಈ ಮದುವೆ ಸಮಾರಂಭ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭ ಜೊತೆಗೆ ಸುಮಾರು 51 ಜೋಡಿ ಉಚಿತ ಸರ್ವ ಧರ್ಮಗಳ ಉಚಿತ ಮದುವೆ ಸಮಾರಂಭವನ್ನು ನಾಳೆ ಏರ್ಪಡಿಸಿದ್ದಾರೆ. ಈ ಮದುವೆ ಸಮಾರಂಭದಲ್ಲಿ ಉಚಿತ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆಯಲಿದೆ. ಮದುವೆಗೆ ಬೇಕಾದ ಎಲ್ಲಾ ಸಕಲ ಸಿದ್ಧಂತೆಗಳನ್ನು ಮಾಡಿಕೊಂಡಿದ್ದು ಒಟ್ಟಾರೆಯಾಗಿ ಈ ಮದುವೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಈ ಉಚಿತ ಮದುವೆ ಸಮಾರಂಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಂಗಮ ಸಮಾಜದ ಪಂಚಪೀಠ ಅಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಮಹಾ ಸ್ವಾಮಿಗಳು ಉಜ್ಜನಿ ಪೀಠದ ಮಹಾಸ್ವಾಮಿಗಳು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದು ಮತ್ತು ಕೊಪ್ಪಳ ಜಿಲ್ಲೆಯ ಸ್ಥಳೀಯ ಶಾಸಕರು ಕುಷ್ಟಗಿ ಪಟ್ಟಣದ ಜನತೆ ಪಾಲ್ಗೊಳ್ಳಲಿದ್ದು ಈ ಒಂದು ಮದುವೆಯಲ್ಲಿ ಸರಿ ಸುಮಾರು 20 ರಿಂದ 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಸೇರಲಿದೆ ಎಂದು ಬಲ್ಲ ಮೂಲಗಳು ತಿಳಿಸಿದ್ದಾರೆ.3
- *ತ್ರಿಶಂಕು ಸ್ಥಿತಿಯಲ್ಲಿ ಸುಂಕದಕಲ್ಲು : ಅಭಿವೃದ್ಧಿಗೊಳಿಸುವ ಭಗೀರಥ ಪ್ರಯತ್ನದಲ್ಲಿ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ವಿಜಯನಗರ ಕೂಡ್ಲಿಗಿ : ಈ ಹಿಂದಿನ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿದ್ದು , ಸದ್ಯ ಕೊಟ್ಟೂರು ಹೋಬಳಿಯಲ್ಲಿರುವ. ಹಗರಿಬೊಮ್ಮನಹಳ್ಳಿಯ ರಾಂಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಸುಂಕದಕಲ್ಲು ಗ್ರಾಮ. ಆಡಳಿತಾತ್ಮಕವಾಗಿ ತೀರಾ ನಿರ್ಲಕ್ಷ್ಯಕ್ಕೀಡಾಗಿದ್ದು , ಅಭಿವೃದ್ಧಿ ಕಾಣದ ಕುಗ್ರಾಮವಗಿದೆ. ತ್ರಿಶಂಕು ಸ್ಥಿತಿಯಲ್ಲಿರುವ ಗ್ರಾಮ ಅನಾಧಾರಕ್ಕೀಡಾಗಿದ್ದು , ಗ್ರಾಮವನ್ನು ಸರ್ವತೋಮುಖವಾಗಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ , ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ಶಪಥ ಮಾಡಿದ್ದಾರೆ. ಮತ್ತು ಈ ನಿಟ್ಟಿನಲ್ಲಿ ಅವರು ಕಾರ್ಯಗತರಾಗಿದ್ದು , ಪ್ರಥಮವಾಗಿ ಕೆಕೆ ಆರ್ ಡಿಬಿ ಅನುದಾನದಲ್ಲಿ 1 ಕೋಟಿ ರೂ ವೆಚ್ಚದಲ್ಲಿ , ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಆಡಳಿತಾತ್ಮಕ ಅಸಹಕಾರ , ಹಾಗೂ ತಾಂತ್ರಿಕ ದೋಷಪೂರಿತವಾಗಿ ಅನಾಧಾರಕ್ಕೀಡಾಗಿರುವ. ಕುಗ್ರಾಮ ಸುಂಕದಕಲ್ಲು ಗ್ರಾಮವನ್ನು , ಮಾದರಿ ಗ್ರಾಮವನ್ನಾಗಿಸುವ ನಿಟ್ಟಿನಲ್ಲಿ ಭಗೀರಥ ಪ್ರಯತ್ನ ನಡೆಸಿ ದಾಪುಗಾಲನ್ನಿಟ್ಟಿದ್ದಾರೆ. ಮೂಲಭೂತ ಸೌಕರ್ಯಗಳ ಕೊರತೆ , ಅಧಿಕಾರಿಗಳ ಅಸಹಕಾರ ಹಾಗೂ ನಿರ್ಲಕ್ಷ್ಯ ಧೋರಣೆ ಯಿಂದ , ಹಾಗೂ ಇತರೆ ಕೊರೆತೆಗಳಿಂದ ಮುಕ್ತಗೊಳಿಸುವಲ್ಲಿ ಮೊದಲ ಆಧ್ಯತೆ ನೀಡುವುದಾಗಿ ಶಾಸಕರು ಭರವಸೆ ನೀಡಿದರು. *25ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಟಿಲ ಸಮಸ್ಯೆ ಬಗೆಹರಿಸುವಂತೆ ಶಾಸಕರಿಂದ ಸೂಚನೆ*- ಸುಂಕದಕಲ್ಲು ಗ್ರಾಮದ (ಕ್ಯಾಂಪ್ ) ಗುಂಪು ಮನೆ ಯೋಜನೆಯ ಫಲಾನುಭವಿಗಳು , ಶಾಸಕರಲ್ಲಿ ತಮ್ಮ ಅಳಲು ತೋಡಿಕೊಂಡರು. ತಾವು ಕಳೆದ 25 ವರ್ಷಗಳಿಂದ ವಾಸವಿದ್ದರೂ ಸಹ , ಈವರೆಗೆ ಇಲಾಖೆಗಳಿಂದ ಹಕ್ಕು ಪತ್ರ ನೀಡಿಲ್ಲ. ಮೂಲ ಭೂತ ಸೌಕರ್ಯಗಳು ತಮಗೆ ಗಗನ ಕುಸುಮವಾಗಿದ್ದು , ಕೂಡಲೇ ಹಕ್ಕು ಪತ್ರ ನೀಡಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪುಸಿಕೊಡುವಂತೆ ಶಾಸಕರಲ್ಲಿ ನಿವಾಸಿಗಳು ಕೋರಿದರು. ಕೂಡಲೇ ಸ್ಪಂದಿಸಿದ ಶಾಸಕರು ಸ್ಥಳದಲ್ಲಿಯೇ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದರು , ಮತ್ತು ಶೀಘ್ರವೇ ಹಕ್ಕು ಪತ್ರ ವಿತರಣೆಗೆ ಅಗತ್ಯ ಕ್ರಮಕ್ಕೆ ಸೂಚಿಸಿದರು. *ಗ್ರಾಮಸ್ಥರಿಗೆ ಸ್ಪಂದಿಸದ ಪಿಡಿಓ ಅಮಾನತ್ತುಗೊಳಿಸಿ - ಶಾಸಕ ಡಾ ಎನ್ ಟಿ ಶ್ರೀನಿವಾಸ್ ಶಿಪಾರಸ್ಸು*- ಸುಂಕದಕಲ್ಲು ಗ್ರಾಮದಲ್ಲಿ , ಪಿಡಿಓ ವಿರುದ್ಧ ಇಡೀ ಗ್ರಾಮಸ್ಥರಿಂದ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನಲೆಯಲ್ಲಿ. ಕೂಡಲೇ ಶಾಸಕರು ಸ್ಥಳದಲ್ಲಿಯೇ ಇಲಾಖೆಯ , ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮೊಬೈಲ್ ಮೂಲಕ ಸಂಪರ್ಕಿಸಿದ್ದು. ಇಡೀ ಗ್ರಾಮಕ್ಕೆ ಗ್ರಾಮವೇ ಪಿಡಿಒ ವಿರುದ್ಧ ಗಂಭೀರವಾಗಿ ಆರೋಪಗಳ ಸುರಿಮಳೆಗೈದಿದ್ದಾರೆ. ಪರಿಣಾಮ ಗ್ರಾಮಸ್ಥರ ಹಕ್ಕೊತ್ತಾಯದ ಮೇರೆಗೆ ಪಿಡಿಒ ರನ್ನು ಕೂಡಲೇ ಅಮಾನತ್ತುಗೊಳಿಸಿ ಆದೇಶಿಸುವಂತೆ. ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ , ಗ್ರಾಮಸ್ಥರ ಉಪಸ್ಥಿತಿಯಲ್ಲಿಯೇ ಶಾಸಕರು ಮೌಕಿಕ ಶಿಪಾರಸ್ಸು ನೀಡಿದರು. ಶಾಸಕರಾದ ತಾವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ದಾವಿಸಿದಾಗ ಕೂಡ , ಪಿಡಿಒರವರು ಗೈರು ಹಾಜರಿದ್ದರು ಇದು ಗ್ರಾಮಸ್ಥರ ಆರೋಪಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು. ಅವರು ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ , ಗ್ರಾಮದ ಸಂದುಗೊಂದಲುಗಳಲ್ಲಿ ಸಂಚರಿಸಿದರು. ಗ್ರಾಮದ ಗಲ್ಲಿ ಗಲ್ಲಿಗಳಲ್ಕಿನ ದುಸ್ಥಿತಿ ಖುದ್ದು ವೀಕ್ಷಿಸಿದರು , ಗ್ರಾಮದೆಲ್ಲೆಡೆ ತೆರಳಿ ಗ್ರಾಮಸ್ಥರ ಅಹವಾಲುಗಳನ್ನು ಸ್ವತಃ ಅವರೇ ಆಲಿಸಿದರು. ಈ ಸಂದರ್ಭದಲ್ಲಿ ಪಿಡಿಒ ರವರು ಗ್ರಾಮವನ್ನು , ತೀರಾ ನಿರ್ಲಕ್ಷ್ಯಿಸಿದ್ದು ಗ್ರಾಮಸ್ಥರ ಅಹವಾಲುಗಳನ್ನು ಆಲಿಸುತ್ತಿಲ್ಲ. ಗ್ರಾಮಸ್ಥರೊಂದಿಗೆ ಅಹಿತಕರವಾಗಿ ವರ್ತಿಸುತ್ತಿದ್ದು. ಗ್ರಾಮದಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತಿಲ್ಲ , ಮತ್ತು ಸ್ಪಂದಿಸುತ್ತಿಲ್ಲ ಎಂದು ದೂರಿದರು. ಪಿಡಿಒರವರೇ ಗ್ರಾಮಸ್ಥರೊಂದಿಗೆ ಅನಾಗರೀಕ ರೀತಿಯಲ್ಲಿ ವರ್ತಿಸುತ್ತಿದ್ದು , ತಮ್ಮ ಗ್ರಾಮವನ್ನು ಆನಾಥವನ್ನಾಗಿಸಿದ್ದಾರೆ. ತಾಲೂಕು ಪಂಚಾಯ್ತಿ ಅಧಿಕಾರಿ ಹಾಗೂ ಪಿಡಿಒರವರು , ಗ್ರಾಮವನ್ನು ನಿರ್ಲಕ್ಷ್ಯ ದಿಂದ ಕಾಣುತ್ತಿದ್ದು , ತಮ್ಮನ್ನು ತೀರಾ ಆನಾದಾರಕ್ಕೀಡು ಮಾಡಿದ್ದಾರೆ ಎಂದು ಶಾಸಕರಲ್ಲಿ ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡರು. ಶಾಸಕರು ಗ್ರಾಮಸ್ಥರ ಹಾಗೂ ನೆರೆದಂತಹ ನೂರಾರು ಮಹಿಳೆಯರ , ಗಂಭೀರ ಆರೋಪಗಳ ಸುರಿಮಳೆಯ ಪರಿಣಾಮ. ಮತ್ತು ಗ್ರಾಮದ ಮುಖಂಡರ , ಯುವಕರ ಹೋರಾಟಗಾರರ ಹಕ್ಕೊತ್ತಾಯದ ಮೇರೆಗೆ. ಶಾಸಕರಾದ ತಾವು ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗೆ ಚಾಲನೆ ನೀಡುವಲ್ಲಿ ತೊಡಗಿದ್ದಾಗಿಯೂ ಕೂಡ ಗೈರಾಗಿದ್ದು , ಹಾಗೂ ತಾವೇ ಖುದ್ದಾಗಿ ಗ್ರಾಮಸ್ಥರೆದುರಲ್ಲೇ ಪಿಡಿಒರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಅಲಭ್ಯವಾದ ಪಿಡಿಒರನ್ನು. ಕೂಡಲೇ ಅಮಾನತ್ತು ಮಾಡುವಂತೆ ಇಲಾಖೆಯ ಉನ್ನತಾಧಿಕಾರಿಗೆ , ಶಾಸಕರು ಸ್ಥಳದಲ್ಲಿಯೇ ದೂರವಾಣಿ ಮೂಲಕ ಶಿಪಾರಸ್ಸು ಮಾಡಿದ್ದಾರೆ. ಈ ಸಂದರ್ಭದಲ್ಲಿ ಇಒ ಆನಂದಪ್ಪ ಹಾಜರಿದ್ದರು , ಗ್ರಾಮದ ಮುಖಂಡರು , ಮಹಿಳೆಯರು , ವೃದ್ಧರು , ಯುವಕರು , ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು , ಗ್ರಾಮದ ಹಿರಿಯರು , ವಿವಿದ ಸಮುದಾಯಗಳ ಪ್ರಮುಖರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಪೊಲೀಸರು ವಿದ್ಯಾರ್ಥಿ ಮೇಲೆ ಗಾಂಜಾ ವ್ಯಸನಿಯೆಂದು ಸುಳ್ಳು ಕೇಸ್ ಹಾಕಿದ ಪರಿಣಾಮ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಪೊಲೀಸರ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ವಿದ್ಯಾರ್ಥಿಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಇದರಿಂದ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದ ಸೂಕ್ತ ತನಿಖೆ ನಡೆಸಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾ ನಿರತ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು.1