Shuru
Apke Nagar Ki App…
ಕೂಡಗಿ ಎನ್ಟಿಪಿಸಿ ನೂತನ ಪಿಎಸ್ಐ ಮಲ್ಲಿಕಾರ್ಜುನ ತಳವಾರಗೆ ಆತ್ಮೀಯ ಸ್ವಾಗತ... ಕೊಲ್ಹಾರ: ಕೂಡಗಿ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿರುವ ಮಲ್ಲಿಕಾರ್ಜುನ ತಳವಾರ ಅವರನ್ನು ಕರುಣಾಸಾಗರ ಅಭಿಮಾನಿಗಳ ಬಳಗದ ರಾಜ್ಯಾಧ್ಯಕ್ಷ ಹಾಗೂ ಪತ್ರಕರ್ತ ಪ್ರಕಾಶ ದೊಡ್ಡಮನಿ ಅವರು ಬುದ್ಧ, ಬಸವಣ್ಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ ದೊಡ್ಡಮನಿ, ಠಾಣಾ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಸಾರ್ವಜನಿಕರಿಗೆ ಉತ್ತಮ ಹಾಗೂ ತ್ವರಿತ ಸೇವೆ ಒದಗಿಸುವ ಮೂಲಕ ನೂತನ ಪಿಎಸ್ಐ ಅವರು ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದು ಆಶಿಸಿದರು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪೊಲೀಸ್ ಇಲಾಖೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಅವರು ಶುಭ ಹಾರೈಸಿದರು.
S L TEGGI
ಕೂಡಗಿ ಎನ್ಟಿಪಿಸಿ ನೂತನ ಪಿಎಸ್ಐ ಮಲ್ಲಿಕಾರ್ಜುನ ತಳವಾರಗೆ ಆತ್ಮೀಯ ಸ್ವಾಗತ... ಕೊಲ್ಹಾರ: ಕೂಡಗಿ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿರುವ ಮಲ್ಲಿಕಾರ್ಜುನ ತಳವಾರ ಅವರನ್ನು ಕರುಣಾಸಾಗರ ಅಭಿಮಾನಿಗಳ ಬಳಗದ ರಾಜ್ಯಾಧ್ಯಕ್ಷ ಹಾಗೂ ಪತ್ರಕರ್ತ ಪ್ರಕಾಶ ದೊಡ್ಡಮನಿ ಅವರು ಬುದ್ಧ, ಬಸವಣ್ಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ ದೊಡ್ಡಮನಿ, ಠಾಣಾ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಸಾರ್ವಜನಿಕರಿಗೆ ಉತ್ತಮ ಹಾಗೂ ತ್ವರಿತ ಸೇವೆ ಒದಗಿಸುವ ಮೂಲಕ ನೂತನ ಪಿಎಸ್ಐ ಅವರು ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದು ಆಶಿಸಿದರು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪೊಲೀಸ್ ಇಲಾಖೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಅವರು ಶುಭ ಹಾರೈಸಿದರು.
More news from ಕರ್ನಾಟಕ and nearby areas
- ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ1
- *ಹಿಂದೂ ಮಹಾಗಣಪತಿ , ತಾಳಿಕೋಟೆ 🕉* *ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ* 🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ. *🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.* ತಾಳಿಕೋಟಿ: ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು. ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು. ಗಣಪತಿ ಬಪ್ಪಾ ಮೋರಯಾ… ಮಂಗಳಮೂರ್ತಿ ಮೋರಯಾ…! ವರದಿ: ಸಂಗನಗೌಡ ಗಬಸಾವಳಗಿ SCN TV NEWS – ತಾಳಿಕೋಟಿ1
- ಬ್ಯಾಂಗಲ್ ಬಂಗಾರಿ #riyagowda @riyagowda #riyamshee_yogeshagowda #MyBangleBangari #BangleBangari #Ekka #EkkaTheFilm #YuvaRajkumar #SanjanaAnand #ಬ್ಯಾಂಗಲ್ಬಂಗಾರಿ #KannadaSongs #TrendingReels #KannadaReels #Sandalwood #ViralReels #DanceReels #NammaKannada ಬ್ಯಾಂಗಲ್ ಬಂಗಾರಿ #riyagowda @riyagowda #riyamshee_yogeshagowda #MyBangleBangari #BangleBangari #Ekka #EkkaTheFilm #YuvaRajkumar #SanjanaAnand #ಬ್ಯಾಂಗಲ್ಬಂಗಾರಿ #KannadaSongs #TrendingReels #KannadaReels #Sandalwood #ViralReels #DanceReels #NammaKannada1
- ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವದ ಮೆರವಣಿಗೆ,ಗಮನ ಸೆಳೆದ ಮಹಿಳೆಯರ ಡೋಲ್ ತಾಶಾ ಫತಕ್ ವಾದನ1
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ಗಣ್ಯರ ಉಪಸ್ಥಿತಿ ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.4
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1
- ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜಕೀಯ ಅಳಿವು ಸನ್ನಿತಃ: ಬಿಜೆಪಿ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ವಾಗ್ದಾಳಿ ವಿಜಯಪುರ: 'ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಟೀಕೆ ಮಾಡುವ ಸಂದರ್ಭದಲ್ಲಿ ಅವರ ಜೊತೆ ಕಾಣಿಸಿಕೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು' ಎಂದು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಎಚ್ಚರಿಕೆ ನೀಡಿದರು.1