Shuru
Apke Nagar Ki App…
ಮುಸ್ಲಿಂ ಯುವಕನಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದ ಕೇಂದ್ರ ಸಚಿವ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಆಡಿಯೋ ವೈರಲ್
Jk ಕನ್ನಡ news
ಮುಸ್ಲಿಂ ಯುವಕನಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದ ಕೇಂದ್ರ ಸಚಿವ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಆಡಿಯೋ ವೈರಲ್
More news from ಕರ್ನಾಟಕ and nearby areas
- ಮುಸ್ಲಿಂ ಯುವಕನಿಗೆ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದ ಕೇಂದ್ರ ಸಚಿವ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಆಡಿಯೋ ವೈರಲ್1
- ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ: ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ಬಸವಕಲ್ಯಾಣ: ತಾಲೂಕಿನ ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ ಮಾಡಲಾಯಿತು. ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ನೀಡಿದರು1
- ಪ್ರವಾದಿಯವರ ಆದರ್ಶಗಳ ಅನುಷ್ಠಾನ: ಈದ್ ಮಿಲಾದ್ ಅಂಗವಾಗಿ ಸೇವಾ ಕಾರ್ಯಗಳು ಚಿಂಚೋಳಿ, ಆ.27: ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರ 1451ನೇ ಈದ್-ಎ-ಮಿಲಾದ್-ಉನ್-ನಬಿ ಪವಿತ್ರ ಹಬ್ಬವನ್ನು ಚಿಂಚೋಳಿಯಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಆಚರಿಸಲಾಯಿತು. ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ, ಜಮಿಯತ್ ಉಲೇಮಾ ಹಾಗೂ ಸ್ಥಳೀಯ ಮುಸ್ಲಿಂ ಬಾಂಧವರ ಸಹಯೋಗದಲ್ಲಿ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರವಾದಿಯವರ ಆದರ್ಶಗಳನ್ನು ಜನರಿಗೆ ಪರಿಚಯಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ ಅಧ್ಯಕ್ಷ ಮಸ್ತಾನ ಅಲಿ ಪಟ್ಟೇದಾರ್, ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರು ಇಡೀ ಮಾನವಕುಲಕ್ಕೆ ಶಾಂತಿ, ಕರುಣೆ, ಸಹೋದರತೆ ಹಾಗೂ ಸಮಾನತೆಯ ಸಂದೇಶ ಸಾರಿದ ಮಹಾನ್ ವ್ಯಕ್ತಿತ್ವವಾಗಿದ್ದು, ಬಡವರು, ಅನಾಥರು ಮತ್ತು ಸಂಕಷ್ಟದಲ್ಲಿರುವವರ ಸೇವೆಯೇ ನಿಜವಾದ ಧರ್ಮ ಎಂಬುದನ್ನು ತಮ್ಮ ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಈದ್ ಮಿಲಾದ್ ಹಬ್ಬವು ಕೇವಲ ಸಂಭ್ರಮದ ಆಚರಣೆಯಾಗಿರದೆ, ಪ್ರವಾದಿಯವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ದಿನವಾಗಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಂಗವಾಗಿ ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು-ಹಂಪಲು ಹಾಗೂ ಉಪಹಾರಗಳನ್ನು ವಿತರಿಸಿ, ಅವರ ಶೀಘ್ರ ಗುಣಮುಖತೆಗಾಗಿ ಶುಭ ಹಾರೈಕೆ ಸಲ್ಲಿಸಲಾಯಿತು. ರೋಗಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಮುಖಂಡರು ಮಾನವೀಯ ಕಾಳಜಿಯನ್ನು ಮೆರೆದರು.2
- ಕಾಳಗಿಯಲ್ಲಿ ಕ್ರಾಪ್ ಕಟಿಂಗ್ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು ಗೆರಾವ್–ಪ್ರತಿಭಟನೆ. ಕ್ರಾಪ್ ಕಟಿಂಗ್ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು. ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ. “ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ ನಿಗದಳಿ, ವಿಠಲ ಸನದಿ, ಪಾಂಡುರಂಗ ರುಮ್ಮನಗೂಡ. ಸೈದಪ್ಪ ಕೊಡಡೂರ, ಸಜೀದಾಪಟೇಲ್ ಬಿರಾದಾರ್, ಸಿದಪ್ಪ ಕಂದಗುಳ, ಶಿವಪ್ಪ ಸನದಿ, ನಾಮದೇವ ರಾಠೋಡ್, ಉದಯ ಸನದಿ, ನಾಗೇಶ್ ಸನದಿ, ವಿಠ್ಠಲ್ ರೂಮನಗುಡ, ಸಂತೋಷ ಮಠಪತಿ, ಪೀರಪ್ಪ ಯಾದವ, ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು1
- ದೇವಲ ಗಾಣಗಾಪುರದಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ ಸದ್ದು: ದೇವಸ್ಥಾನದ ಜಾಗ ಖಾಲಿ ಮಾಡಿದ ಅಂಗಡಿ ಮಾಲೀಕರು1
- ಆಗಸ್ಟ್: 30,31ರಂದು ಶ್ರೀ ಅಭಿನವ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕಿ ಉತ್ಸವ.! ಆಗಸ್ಟ್: 30,31ರಂದು ಶ್ರೀ ಅಭಿನವ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕಿ ಉತ್ಸವ.!1
- ಭಾರತ ಜೋಡೊ ಯುವ ಮಿಷನ್ ಕುರಿತು ಡಿಸಿಎಂ ಜಿ ಪರಮೇಶ್ವರ್ ನಿರೋದ್ಯೋಗಿ ಯುವಕರಿಗೆ ಇದೊಂದು ಉತ್ತಮ ವೇದಿಕೆ ಆಗುತ್ತಾ?1
- ಗಂಗಾ ನದಿಯಲ್ಲಿ ಪ್ರವಾಹ ತಡೆಯಲು ಹೋಗಿ ದುರಂತ: 21 ಕಾರ್ಮಿಕರ ಸಾವು, ವೈರಲ್ ಆಯ್ತು ದೋಣಿ ಮುಳುಗಿದ ದೃಶ್ಯಗಂಗಾ ನದಿಯಲ್ಲಿ ದೋಣಿ ಮಗುಚಿ ಭೀಕರ ದುರಂತ: 21 ಕಾರ್ಮಿಕರು ದುರಂತ ಸಾವು, ಒಬ್ಬ ನಾಪತ್ತೆ ಬಿಹಾರದಲ್ಲಿ ಪಲ್ಟಿಯಾದ ದೋಣಿ: ಗಂಗಾ ನದಿಯಲ್ಲಿ ಮುಳುಗಿ 21 ಮಂದಿ ಸಾವು; 20 ಜನರ ರಕ್ಷಣೆ1