Shuru
Apke Nagar Ki App…
ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್.. ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಇಳಕಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಹಾಗೂ ಅವರ ಹುಟ್ಟು ಹಬ್ಬದ ಅಂಗವಾಗಿ ಇಳಕಲ್ ನಗರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳ ಜೊತೆಗೆ ಅನಾಥಾಶ್ರಮದಲ್ಲಿ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಹಣ್ಣು ಹಂಪಲ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ಶರಣಗೌಡ ಕಂದಕೂರ
ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್.. ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಇಳಕಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಹಾಗೂ ಅವರ ಹುಟ್ಟು ಹಬ್ಬದ ಅಂಗವಾಗಿ ಇಳಕಲ್ ನಗರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳ ಜೊತೆಗೆ ಅನಾಥಾಶ್ರಮದಲ್ಲಿ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಹಣ್ಣು ಹಂಪಲ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್.. ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಇಳಕಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಹಾಗೂ ಅವರ ಹುಟ್ಟು ಹಬ್ಬದ ಅಂಗವಾಗಿ ಇಳಕಲ್ ನಗರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳ ಜೊತೆಗೆ ಅನಾಥಾಶ್ರಮದಲ್ಲಿ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಹಣ್ಣು ಹಂಪಲ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.1
- ಕುಷ್ಟಗಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಹೋರಾಟಗಾರರ ತ್ಯಾಗ-ಬಲಿದಾನ ಪಠ್ಯಕ್ಕೆ ಸೇರಿಸಿ - ಶಾಸಕ ದೊಡ್ಡನಗೌಡ ಪಾಟೀಲ ಆಗ್ರಹ* *ಬರದ ನಡುವೆಯೂ ಉತ್ಸವ: ಕೂಡಲೇ ಬರ ಘೋಷಿಸಿ, ಗೋಶಾಲೆ ತೆರೆಯಿರಿ, ಇಲ್ಲದಿದ್ದರೆ ರೈತನ ಶಾಪ ತಟ್ಟುತ್ತದೆ - ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಶಾಸಕ* *ಕುಷ್ಟಗಿ, ಸೆ.17:* ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ 79ನೇ ವರ್ಷದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ *ದೊಡ್ಡನಗೌಡ ಪಾಟೀಲ* ಅವರು ಕಾರ್ಯಕ್ರಮ ಅಧ್ಯಕ್ಷತೆವಹಿಸಿ ಮಾತನಾಡಿ, ಕಲ್ಯಾಣ ಕರ್ನಾಟಕದ ವಿಮೋಚನೆಯ ಇತಿಹಾಸದಿಂದ ಹಿಡಿದು ಇಂದಿನ ಬರದ ಪರಿಸ್ಥಿತಿಯವರೆಗೆ ಎಲ್ಲಾ ವಿಷಯ ಪ್ರಸ್ತಾಪಿಸಿದರು. *ವಿಮೋಚನೆಯ ಇತಿಹಾಸ ಸ್ಮರಣೆ:* "ದೇಶಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಸಿಕ್ಕರೂ ನಮ್ಮ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸಿಗಲಿಲ್ಲ. ನಿಜಾಮನ ದಬ್ಬಾಳಿಕೆ, ರಜಾಕಾರರ ಹಾವಳಿಯ ದುಷ್ಪರಿಣಾಮ ಈ ಭಾಗದ ಮೇಲೆ ಎಷ್ಟಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಸರ್ದಾರ್ ವಲ್ಲಭಭಾಯಿ ಪಟೇಲರ ಆಪರೇಷನ್ ಪೋಲೋ ಕಾರ್ಯಾಚರಣೆಯಿಂದ 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ವಿಮೋಚನೆ ಸಿಕ್ಕಿತು ಸ್ವಾತಂತ್ರ್ಯವಾಯಿತು ಎಂದರು. *ಬರದ ಬವಣೆ - ಸರ್ಕಾರಕ್ಕೆ ಎಚ್ಚರಿಕೆ:* "ಈ ಉತ್ಸವವನ್ನು ನಾವು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದರೂ ಕೂಡ, ಮತ್ತೊಂದು ಕಡೆ ಕಲ್ಯಾಣ ಕರ್ನಾಟಕದಲ್ಲಿ ಬರದ ಪರಿಸ್ಥಿತಿ ನಮ್ಮೆಲ್ಲರಿಗೂ ಕಾಡುತ್ತಿದೆ. ನಿನ್ನೆ, ಮೊನ್ನೆ, ಇವತ್ತು ಹೊರಗಡೆ ಕಾಲಿಡೋದಕ್ಕೂ ಸಾಧ್ಯವಾಗದಷ್ಟು ಬಿಸಿಲು. ಇವತ್ತು ಹೆಚ್ಚಾಗುತ್ತಿದೆ ರೈತನ ಹೊಲದಲ್ಲಿ ಬೆಳೆಯಿಲ್ಲ, ದನಕರುಗಳಿಗೆ ಹಾಕೋದಕ್ಕೆ ಮೇವಿಲ್ಲ, ಕೆಲವೊಂದು ಗ್ರಾಮಗಳಲ್ಲಿ ಕುಡಿಯೋದಕ್ಕೆ ನೀರಿನ ಸಮಸ್ಯೆ ಆಗ್ತಾ ಇದೆ. ರೈತನಿಗೆ ಬೆಳೆ ಇಲ್ಲ, ಬೆಲೆ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು. *ಸ್ಯಾಟಲೈಟ್ ಸಮೀಕ್ಷೆಗೆ ಆಕ್ಷೇಪ:* "ಅಧಿಕಾರಿಗಳು ವೈಮಾನಿಕ ಸಮೀಕ್ಷೆಯಲ್ಲಿ ಸ್ಯಾಟಲೈಟ್ ನಲ್ಲಿ ಹಸಿರು ಕಾಣುತ್ತದೆ ಎಂದು ಹೇಳುತ್ತಾರೆ. ಹಸಿರು ಕಂಡ ಮಾತ್ರಕ್ಕೆ ಬೆಳೆ ಇದೆ ಎಂದಲ್ಲ. ಕೂಡಲೇ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಿಸಿ ವರದಿ ಕೊಡಬೇಕು. ಗೋಶಾಲೆಗಳನ್ನು ಪ್ರಾರಂಭ ಮಾಡಿ ಜಾನುವಾರುಗಳನ್ನು ಉಳಿಸಿ. ಇಲ್ಲದೇ ಹೋದರೆ ರೈತನ ಶಾಪ ನಿಮ್ಮೆಲ್ಲರಿಗೂ ತಟ್ಟುತ್ತದೆ" ಎಂದು ಎಚ್ಚರಿಕೆ ನೀಡಿದರು. *ನಿನ್ನೆ ನಡೆದ ಎತ್ತಿನ ಬಂಡಿ ಹೋರಾಟದ ಉಲ್ಲೇಖ:* "ನಿನ್ನೆ ನೂರಾರು ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದ್ದು ನಿಮ್ಮೆಲ್ಲರಿಗೂ ಗೊತ್ತು. ಮುಂಬರುವ ಬರ ಪಟ್ಟಿಯಲ್ಲಿ ಖಂಡಿತವಾಗಿ ಕುಷ್ಟಗಿ ಇರುತ್ತದೆ ಎಂಬ ಭಾವನೆ ವ್ಯಕ್ತಪಡಿಸುತ್ತೇನೆ" ಎಂದರು. *ಪಠ್ಯಪುಸ್ತಕಕ್ಕೆ ಸೇರಿಸಲು ಆಗ್ರಹ:* "ಈ ಉತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಮುಂದಿನ ಪೀಳಿಗೆಗೆ ನಮ್ಮ ಹಿರಿಯರು ಮಾಡಿರುವ ತ್ಯಾಗ, ಬಲಿದಾನವನ್ನು ಕಲಿಸಿಕೊಡಬೇಕು. ಅದನ್ನು ಮುಂದಿನ ಪಠ್ಯಪುಸ್ತಕಗಳಲ್ಲಿ ಸೇರಿಸುವ ಕೆಲಸ ಆಗಬೇಕು ಎಂದು ಈ ವೇದಿಕೆ ಮೂಲಕ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ" ಎಂದು ಹೇಳಿದರು. *ತಹಶೀಲ್ದಾರ್ ಮಾತು:* ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ *ಅಶೋಕ ಶಿಗ್ಗಾವಿ* ಅವರು ಕಲ್ಯಾಣ ಕರ್ನಾಟಕ ವಿಮೋಚನೆಯ ಇತಿಹಾಸ ಹಾಗೂ 371(J) ಕಲಂನ ಮಹತ್ವದ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ದೇಶ ಭಕ್ತಿ ಗೀತೆಗಳು ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಇಓ ಅಮರೇಶ, ಸಿಡಿಪಿಓ ಯಲ್ಲಮ್ಮ ಹಂಡಿ, ಸಿಪಿಐ ವಿಶ್ವನಾಥ ಹಿರೇಗೌಡರ, ಪ್ರಭಾರಿ ಬಿಇಓ ಯಮನಪ್ಪ ಚೂರಿ, ದೈಹಿಕ ಶಿಕ್ಷಣ ಸಂಯೋಜಕ ನಾಗಪ್ಪ ಬಿಳಿಯಪ್ಪನವರ, ನಜೀರಸಾಬ ಮೂಲಿಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.1
- ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ. ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ. ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.2
- ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಆದ್ಯತೆಗೆ ಯುವ ಕಾಂಗ್ರೆಸ್ ಒತ್ತಾಯ ಲಿಂಗಸುಗೂರು, ಸೆ.17: ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಸೊಪ್ಪಿಮಠ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಕರೆಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ‘ನಿರುದ್ಯೋಗ ದಿನ’ವಾಗಿ ಆಚರಿಸಿ, ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಆಡಳಿತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರಿಗೆ ಅಗತ್ಯ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಯುವಕರ ಭವಿಷ್ಯದ ದೃಷ್ಟಿಯಿಂದ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೌನೇಶ ಪೂಜಾರಿ, ಮುದಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖದೀರ ಪಾನವಾಲೆ, ಮಾಜಿ ಅಧ್ಯಕ್ಷರಾದ ಕುಪ್ಪಣ್ಣ ಕೌತಾಳ, ವಾಸಿಮ್ ಪಾಶಾ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.2
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಮಹೋತ್ಸವ: ಅದ್ಧೂರಿ ಗಣೇಶೋತ್ಸವಕ್ಕೆ ಚಾಲನೆ ಲಿಂಗಸುಗೂರು: ಪಟ್ಟಣದ ವಾಡಿ–7ರ ಏಕದಂತ ಗಣೇಶನ ಮಂಟಪದಲ್ಲಿ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಲಿಂಗಸುಗೂರು ಪಟ್ಟಣದ ವಾಡಿ–7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳು ಹಾಗೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ನಡೆಸಲಾಯಿತು. ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಏಕದಂತ ಗಜಾನನ ಮಂಡಳಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮೂರನೆ ದಿನ ಸಂಜೆ ಬಾಜಾ ಬಜಂತ್ರಿ ಯೊಂದಿಗೆ ನೃತ್ಯದೊಂದಿಗೆ ಅದ್ದೂರಿಯಾಗಿ ವಿಸರ್ಜನೆ ಕೈಗೊಳ್ಳಲಾಯಿತು.4
- ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು.. ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..1
- ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.1
- ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ ವಿಘ್ನನಿವಾರಕನ ವಿಸಜ೯ನೆ ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ ಗಣೇಶನನ್ನ ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.3