ಮಹತ್ತರ ಕಾರ್ಯವನ್ನು ಛಾಯಾಗ್ರಹಣ ಮತ್ತು ವಿಡಿಯೋಗ್ರಫಿ ಅವರು ಮಾಡುತ್ತಿದ್ದಾರೆ ಆದರೆ ಅವರಿಗೆ ಸರಕಾರದ ಸೌಲಭ್ಯ ದೊರಕದಿರುವುದು ಶೋಷನೀಯ: ಶ್ರೀಶೈಲಗೌಡ ವಿಷಾದ ಸಿಂದಗಿ: ಕಾಲದ ಓಟಕ್ಕೆ ಬ್ರೇಕ್ ಹಾಕಿ, ಕಳೆದುಹೋಗುವ ಕ್ಷಣಗಳನ್ನು ಶಾಶ್ವತ ನೆನಪುಗಳಾಗಿ ಉಳಿಸುವ ಅದ್ಭುತ ಶಕ್ತಿ ಛಾಯಾಗ್ರಾಹಕ ಮತ್ತು ವಿಡಿಯೋಗ್ರಾಫರ್ಗಳದ್ದು. ನಮ್ಮ ಜೀವನದ ಸುಖ-ದುಃಖ, ಹಬ್ಬ-ಹರಿದಿನಗಳು, ಸಂಭ್ರಮದ ಕ್ಷಣಗಳು ಹಾಗೂ ಐತಿಹಾಸಿಕ ಘಟನೆಗಳಿಗೆ ದೃಶ್ಯರೂಪ ನೀಡಿ, ಅವುಗಳನ್ನು ಮುಂದಿನ ತಲೆಮಾರಿಗೆ ಕನ್ನಡಿಯಂತೆ ತೋರಿಸುವ ಮಹತ್ತರ ಕಾರ್ಯವನ್ನು ಈ ಕಲಾಬಂಧುಗಳು ಮಾಡುತ್ತಿದ್ದಾರೆ ಅವರಿಗೆ ಸರಕಾರದ ಸೌಲಭ್ಯ ದೊರಕದಿರುವುದು ಶೋಷನೀಯ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಹೇಳಿದರು. ನಗರದ ಬಸವ ಮಂಟಪದಲ್ಲಿ ಸಿಂದಗಿ ತಾಲೂಕಿನ ಫೋಟೋ ಮತ್ತು ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಹಾಗೂ ತರಬೇತಿ ಕಾರ್ಯಾಗಾರದ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ, ಸಮಾಜದ ಪ್ರತಿಯೊಂದು ಕಾರ್ಯಕ್ರಮದ ಯಶಸ್ಸಿನ ಹಿಂದೆ ಇವರ ಪರಿಶ್ರಮ, ಸೃಜನಶೀಲತೆ ಹಾಗೂ ವೃತ್ತಿಪರ ಬದ್ಧತೆ ಮಹತ್ವದ ಪಾತ್ರ ವಹಿಸುತ್ತದೆ. ಈ ಸಂದರ್ಭದಲ್ಲಿ ಛಾಯಾಗ್ರಹಣ ಮತ್ತು ವಿಡಿಯೋಗ್ರಫಿ ಕ್ಷೇತ್ರದವರು ಇಂದು ಎದುರಿಸುತ್ತಿರುವ ಸವಾಲುಗಳು, ವೃತ್ತಿಪರ ಅಭಿವೃದ್ಧಿ ಹಾಗೂ ಭವಿಷ್ಯ ಅವಕಾಶಗಳ ಮರಿಚಿಕೆಯಾಗಿದ್ದು, ಸರಕಾರ ಅವಲೋಕನ ಮಾಡಬೇಕು ಸಿಂಧಗಿ ಕ್ಷೇತ್ರದ ಸದಾ ಜಾಗೃತ, ಶ್ರಮಜೀವಿ ಹಾಗೂ ಪ್ರತಿಭಾವಂತ ಫೋಟೋ ಮತ್ತು ವಿಡಿಯೋಗ್ರಾಫರ್ಗಳ ಬೆಂಬಲಕ್ಕೆ ನಮ್ಮ ಬಿಜೆಪಿ ಪಕ್ಷ ಹಾಗೂ ನಾನು ವೈಯಕ್ತಿಕವಾಗಿ ಸದಾ ನಿಲ್ಲುತ್ತೇವೆ ಎಂದು ಭರವಸೆ ನೀಡಿದರು. ಜೋಸೆಫ್ ನೈಸ್ಫೋರ್ ನೀಪ್ಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಿವೃತ್ತ ಪ್ರಾಧ್ಯಾಪಕ ಶಾಂತೂ ಹಿರೇಮಠ ಮಾತನಾಡಿದರು. ಆದಿಶೆಷ ಸಂಸ್ಥಾನ ಹಿರೇಮಠದ ರಾಜಯೋಗಿ ನಾಗರತ್ನ ವೀರರಾಜೇಂದ್ರ ಮಹಾಸ್ವಾಮಿಗಳು ಸಾನಿದ್ಯ ವಹಿಸಿದ್ದರು. ಗಾಣಿಗ ಸಮಾಜದ ಮಾಜಿ ಅಧ್ಯಕ್ಷ ಮಲ್ಲಣ್ಣ ಮನಗೂಳಿ ಮನ್ನಾಪುರ, ಜಿಲ್ಲಾಧ್ಯಕ್ಷ ರಮೇಶ ಚವ್ಹಾಣ, ಅನೀಲ ಕೋಳಕೂರ, ಗಂಗಾಧರ ವಿಶ್ವಕರ್ಮ ಸೇರಿದಂತೆ ಅನೇಕರು ವೇದಿಕೆ ಮೇಲಿದ್ದರು. ಇದೇ ಸಂದರ್ಭದಲ್ಲಿ ಅಂಬರೀಶ ಅಲ್ದಿ, ಗೋಲ್ಲಾಳಪ್ಪ ರುಕುಂಪೂರ, ಹಾಜಿ ಆಲಮೇಲ, ಉಮೇಶ ಪಟ್ಟಣಶೆಟ್ಟಿ, ರಾಜು ಚಳ್ಳಗಿ, ರುಕ್ಮಾನ ಬಳೂಂಡಗಿ, ರಜಾಕ ಕೊರಬು, ನಸರುದ್ದಿನ ಮುಲ್ಲಾ ಹಿರಿಯ ಫೋಟೋಗ್ರಾಮಫರನ್ನು ಸನ್ಮಾನಿಸಲಾಯಿತು. ಛಾಯಾಗ್ರಾಹಕರ ಸಂಘದ ಅದ್ಯಕ್ಷ ಪರಶುರಾಮ ಗೂಳೂರ ಸ್ವಾಗತಿಸಿ ನಿರೂಪಿಸಿದರು. ಬಸಯ್ಯ ಹಿರೇಮಠ ವಂದಿಸಿದರು.
ಮಹತ್ತರ ಕಾರ್ಯವನ್ನು ಛಾಯಾಗ್ರಹಣ ಮತ್ತು ವಿಡಿಯೋಗ್ರಫಿ ಅವರು ಮಾಡುತ್ತಿದ್ದಾರೆ ಆದರೆ ಅವರಿಗೆ ಸರಕಾರದ ಸೌಲಭ್ಯ ದೊರಕದಿರುವುದು ಶೋಷನೀಯ: ಶ್ರೀಶೈಲಗೌಡ ವಿಷಾದ ಸಿಂದಗಿ: ಕಾಲದ ಓಟಕ್ಕೆ ಬ್ರೇಕ್ ಹಾಕಿ, ಕಳೆದುಹೋಗುವ ಕ್ಷಣಗಳನ್ನು ಶಾಶ್ವತ ನೆನಪುಗಳಾಗಿ ಉಳಿಸುವ ಅದ್ಭುತ ಶಕ್ತಿ ಛಾಯಾಗ್ರಾಹಕ ಮತ್ತು ವಿಡಿಯೋಗ್ರಾಫರ್ಗಳದ್ದು. ನಮ್ಮ ಜೀವನದ ಸುಖ-ದುಃಖ, ಹಬ್ಬ-ಹರಿದಿನಗಳು, ಸಂಭ್ರಮದ ಕ್ಷಣಗಳು ಹಾಗೂ ಐತಿಹಾಸಿಕ ಘಟನೆಗಳಿಗೆ ದೃಶ್ಯರೂಪ ನೀಡಿ, ಅವುಗಳನ್ನು ಮುಂದಿನ ತಲೆಮಾರಿಗೆ ಕನ್ನಡಿಯಂತೆ ತೋರಿಸುವ ಮಹತ್ತರ ಕಾರ್ಯವನ್ನು ಈ ಕಲಾಬಂಧುಗಳು ಮಾಡುತ್ತಿದ್ದಾರೆ ಅವರಿಗೆ ಸರಕಾರದ ಸೌಲಭ್ಯ ದೊರಕದಿರುವುದು ಶೋಷನೀಯ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಹೇಳಿದರು. ನಗರದ ಬಸವ ಮಂಟಪದಲ್ಲಿ ಸಿಂದಗಿ ತಾಲೂಕಿನ ಫೋಟೋ ಮತ್ತು ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಹಾಗೂ ತರಬೇತಿ ಕಾರ್ಯಾಗಾರದ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ, ಸಮಾಜದ ಪ್ರತಿಯೊಂದು ಕಾರ್ಯಕ್ರಮದ ಯಶಸ್ಸಿನ ಹಿಂದೆ ಇವರ ಪರಿಶ್ರಮ, ಸೃಜನಶೀಲತೆ ಹಾಗೂ ವೃತ್ತಿಪರ ಬದ್ಧತೆ ಮಹತ್ವದ ಪಾತ್ರ ವಹಿಸುತ್ತದೆ. ಈ ಸಂದರ್ಭದಲ್ಲಿ ಛಾಯಾಗ್ರಹಣ ಮತ್ತು ವಿಡಿಯೋಗ್ರಫಿ ಕ್ಷೇತ್ರದವರು ಇಂದು ಎದುರಿಸುತ್ತಿರುವ ಸವಾಲುಗಳು, ವೃತ್ತಿಪರ ಅಭಿವೃದ್ಧಿ ಹಾಗೂ ಭವಿಷ್ಯ ಅವಕಾಶಗಳ ಮರಿಚಿಕೆಯಾಗಿದ್ದು, ಸರಕಾರ ಅವಲೋಕನ ಮಾಡಬೇಕು ಸಿಂಧಗಿ ಕ್ಷೇತ್ರದ ಸದಾ ಜಾಗೃತ, ಶ್ರಮಜೀವಿ ಹಾಗೂ ಪ್ರತಿಭಾವಂತ ಫೋಟೋ ಮತ್ತು ವಿಡಿಯೋಗ್ರಾಫರ್ಗಳ ಬೆಂಬಲಕ್ಕೆ ನಮ್ಮ ಬಿಜೆಪಿ ಪಕ್ಷ ಹಾಗೂ ನಾನು ವೈಯಕ್ತಿಕವಾಗಿ ಸದಾ ನಿಲ್ಲುತ್ತೇವೆ ಎಂದು ಭರವಸೆ ನೀಡಿದರು. ಜೋಸೆಫ್ ನೈಸ್ಫೋರ್ ನೀಪ್ಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಿವೃತ್ತ ಪ್ರಾಧ್ಯಾಪಕ ಶಾಂತೂ ಹಿರೇಮಠ ಮಾತನಾಡಿದರು. ಆದಿಶೆಷ ಸಂಸ್ಥಾನ ಹಿರೇಮಠದ ರಾಜಯೋಗಿ ನಾಗರತ್ನ ವೀರರಾಜೇಂದ್ರ ಮಹಾಸ್ವಾಮಿಗಳು ಸಾನಿದ್ಯ ವಹಿಸಿದ್ದರು. ಗಾಣಿಗ ಸಮಾಜದ ಮಾಜಿ ಅಧ್ಯಕ್ಷ ಮಲ್ಲಣ್ಣ ಮನಗೂಳಿ ಮನ್ನಾಪುರ, ಜಿಲ್ಲಾಧ್ಯಕ್ಷ ರಮೇಶ ಚವ್ಹಾಣ, ಅನೀಲ ಕೋಳಕೂರ, ಗಂಗಾಧರ ವಿಶ್ವಕರ್ಮ ಸೇರಿದಂತೆ ಅನೇಕರು ವೇದಿಕೆ ಮೇಲಿದ್ದರು. ಇದೇ ಸಂದರ್ಭದಲ್ಲಿ ಅಂಬರೀಶ ಅಲ್ದಿ, ಗೋಲ್ಲಾಳಪ್ಪ ರುಕುಂಪೂರ, ಹಾಜಿ ಆಲಮೇಲ, ಉಮೇಶ ಪಟ್ಟಣಶೆಟ್ಟಿ, ರಾಜು ಚಳ್ಳಗಿ, ರುಕ್ಮಾನ ಬಳೂಂಡಗಿ, ರಜಾಕ ಕೊರಬು, ನಸರುದ್ದಿನ ಮುಲ್ಲಾ ಹಿರಿಯ ಫೋಟೋಗ್ರಾಮಫರನ್ನು ಸನ್ಮಾನಿಸಲಾಯಿತು. ಛಾಯಾಗ್ರಾಹಕರ ಸಂಘದ ಅದ್ಯಕ್ಷ ಪರಶುರಾಮ ಗೂಳೂರ ಸ್ವಾಗತಿಸಿ ನಿರೂಪಿಸಿದರು. ಬಸಯ್ಯ ಹಿರೇಮಠ ವಂದಿಸಿದರು.
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1
- ವಿಜಯಪುರ ನಗರದಲ್ಲಿ ಮಂಗಳವಾರ ಈದ್ ಮಿಲಾದ ಅಂಗವಾಗಿ ಮುಸ್ಲೀಮ ಭಾಂದವರು ಭವ್ಯ ಮೆರೆವಣಿಗೆ ನಡೆಯತು1
- ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ1
- ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು1
- "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*1
- ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ಗುಳೇದಗುಡ್ಡ: ಪಟ್ಟಣದಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ನಿಮಿತ್ತವಾಗಿ ಬುಧವಾರ ಪವಿತ್ರ ಈದ್ ಮಿಲಾದ್ ಹಬ್ಬದ ಅದ್ದೂರಿ ಮೆರವಣಿಗೆ ನಡೆಯಿತು. ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಪಟ್ಟಣದ ಭಾಗವಾನ್ ಪೇಟೆಯಿಂದ ಆರಂಭವಾಗಿ ಪವಾರ್ ಕ್ರಾಸ್, ಪುರಸಭೆ, ಸರಾಫಬಜಾರ್, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ ಮೂಲಕ ಹಾಯ್ದು ಭಾಗವಾನ್ ಪೇಟೆಗೆ ತಲುಪಿತು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಹಾಗೂ ಸಮಾಜದ ಮುಖಂಡರಾದ ಮುಬಾರಕ್ ಮಂಗಳೂರು, ಅಂಜುಮನ್ ಕಮೀಟಿ ಅಧ್ಯಕ್ಷ ರಜಾಕ್ ಕುದರಿ, ಸಾಧನಿ ಭಾಷಾ, ಮಶಾಕ್ ನಲವತ್ತವಾಡ, ಜಾವಿದ್ ಮೊಮಿನ್, ಜಿಲಾನಿ ಮುಜಾಹಿದ್, ರಫಿಕ್ ಕಲ್ಬುರ್ಗಿ, ದೇವರಾಜ ಕಟ್ಟಿಮನಿ, ಗೋವಿಂದ ರಾಠೋಡ, ರಫಿಕ್ ಮಕನದಾರ, ಮೋದಿನಸಾಬ್ ಸದರಿ, ರೀಯಾಜ್ ಚೊಳಚಗುಡ್ಡ, ಗುಲಾಮ್ ಹುಸೇನ್ ಇಲ್ಲಕಲ್, ಅಲ್ಲಾಸಾಬ ದೋಟೆಗಾರ ಸೇರಿದಂತೆ ಸಮಾಜದ ಮುಖಂಡರು ಇದ್ದರು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಮುಖ್ಯಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಅವರಿಗೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಬಾರಕ್ ಮಂಗಳೂರ ಅವರು ಸನ್ಮಾನಿಸಿದರು.2
- ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು. ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು.1