Shuru
Apke Nagar Ki App…
ಸಿಎಂ ರಾಜ್ಯದ ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ:ಸಚಿವ ಈಶ್ವರ್ ಖಂಡ್ರೆ ಬೆಂಗಳೂರು:ಏರ್ಪೋರ್ಟ್ ನಲ್ಲಿ ಸಚಿವ ಈಶ್ವರ್ ಖಂಡ್ರೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳು ದೆಹಲಿಗೆ ಹೋಗಿದ್ದಾರೆ.ಕೇಂದ್ರ ಸಚಿವರು ಮತ್ತು ನಮ್ಮ ದೆಹಲಿ ನಾಯಕರನ್ನು ಭೇಟಿ ಮಾಡಲಿದ್ದಾರೆ.ರಾತ್ರಿ ವಾಪಸ್ ಆಗಲಿದ್ದಾರೆ.ನೀರಾವರಿ ಸಭೆಯಿದೆ, ನೀರಾವರಿಯ ಹಲವು ವಿಚಾರಗಳಿವೆ.ಮಹದಾಯಿ, ಕೃಷ್ಣಾ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ.ರಾಜ್ಯದ ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ.ರಾಜ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ನಾವು ಎಲ್ಲಾ ಹಗಲಿರುಳು ಶ್ರಮಿಸುತ್ತಿದ್ದೇವೆ.ಪಂಚಾಯತ್ ರಾಜ್ ಚುನಾವಣೆ ಮಾಡಬೇಕಿದೆ.ಇದರ ವಿಚಾರವಾಗಿ ಚರ್ಚೆ ಮಾಡಿದ್ದೇನೆ.ವರ್ಷಾಂತ್ಯದ ಒಳಗೆ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಚುನಾವಣೆ ಮಾಡುತ್ತೇವೆ ಎಂದರು. ಇನ್ನೂ ಸಚಿವ ನಾಗೇಂದ್ರ ವಿಚಾರವಾಗಿ ಇದರ ಬಗ್ಗೆ ಮಾಹಿತಿ ಇಲ್ಲ ಎಂದಷ್ಟೇ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ
ಶಿವನಿ
ಸಿಎಂ ರಾಜ್ಯದ ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ:ಸಚಿವ ಈಶ್ವರ್ ಖಂಡ್ರೆ ಬೆಂಗಳೂರು:ಏರ್ಪೋರ್ಟ್ ನಲ್ಲಿ ಸಚಿವ ಈಶ್ವರ್ ಖಂಡ್ರೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳು ದೆಹಲಿಗೆ ಹೋಗಿದ್ದಾರೆ.ಕೇಂದ್ರ ಸಚಿವರು ಮತ್ತು ನಮ್ಮ ದೆಹಲಿ ನಾಯಕರನ್ನು ಭೇಟಿ ಮಾಡಲಿದ್ದಾರೆ.ರಾತ್ರಿ ವಾಪಸ್ ಆಗಲಿದ್ದಾರೆ.ನೀರಾವರಿ ಸಭೆಯಿದೆ, ನೀರಾವರಿಯ ಹಲವು ವಿಚಾರಗಳಿವೆ.ಮಹದಾಯಿ, ಕೃಷ್ಣಾ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ.ರಾಜ್ಯದ ಅಭಿವೃದ್ಧಿಯ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ.ರಾಜ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ನಾವು ಎಲ್ಲಾ ಹಗಲಿರುಳು ಶ್ರಮಿಸುತ್ತಿದ್ದೇವೆ.ಪಂಚಾಯತ್ ರಾಜ್ ಚುನಾವಣೆ ಮಾಡಬೇಕಿದೆ.ಇದರ ವಿಚಾರವಾಗಿ ಚರ್ಚೆ ಮಾಡಿದ್ದೇನೆ.ವರ್ಷಾಂತ್ಯದ ಒಳಗೆ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಚುನಾವಣೆ ಮಾಡುತ್ತೇವೆ ಎಂದರು. ಇನ್ನೂ ಸಚಿವ ನಾಗೇಂದ್ರ ವಿಚಾರವಾಗಿ ಇದರ ಬಗ್ಗೆ ಮಾಹಿತಿ ಇಲ್ಲ ಎಂದಷ್ಟೇ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ
More news from Bengaluru Urban and nearby areas
- ಬಿಜೆಪಿ ಒತ್ತಡಕ್ಕೆ ಮಣಿದರಾ ನಾಗೇಂದ್ರ? | ರಾಜೀನಾಮೆ ಹಿಂದೆ ಹೈಕಮಾಂಡ್ ನಿರ್ಧಾರ ಎಂದ ಬಸವರಾಜ ಶಿವಣ್ಣನವರ್! ಬಿ.ನಾಗೇಂದ್ರ ಅವರ ರಾಜೀನಾಮೆ ಕುರಿತು ಮುಖಂಡ ಬಸವರಾಜ ಶಿವಣ್ಣನವರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. "ನಾಗೇಂದ್ರ ಅವರ ಮೇಲೆ ಇನ್ನೂ ಆರೋಪ ಮಾತ್ರ ಇದೆ, ನ್ಯಾಯಾಲಯದಲ್ಲಿ ದೋಷ ಸಾಬೀತಾಗಿಲ್ಲ. ಬಿಜೆಪಿ ಒತ್ತಡ ಹಾಗೂ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಹೈಕಮಾಂಡ್ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ" ಎಂದು ಹೇಳಿದ್ದಾರೆ. ಇದಲ್ಲದೆ, ತೆರವಾದ ಸಚಿವ ಸ್ಥಾನ ಕುರಿತು ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ತಿಳಿಸಿದ್ದಾರೆ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ ಸಿಗುವ ಕುರಿತು ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 📺 ASN News24 Kannada 🔔 Subscribe | Like | Share | Comment #BNagendra #BasavarajShivannavar #KarnatakaPolitics #Congress #BJP #Ballari #MinisterResignation #BreakingNews #KarnatakaNews #PoliticalNews #Siddaramaiah #DKShivakumar #ASNNews24Kannada #KannadaNews #trendingnews1
- Toxic| ಟಾಕ್ಸಿಕ್ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದವರ ವಿರುದ್ಧ ಗರಂ ಆದ ವಿದ್ಯಾ ವಿದು | Veega News Kannada Toxic| ಟಾಕ್ಸಿಕ್ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದವರ ವಿರುದ್ಧ ಗರಂ ಆದ ವಿದ್ಯಾ ವಿದು | Veega News Kannada1
- ಸುದ್ದಿಗೊಷ್ಠಿ ಮದ್ಯೆ ಕಣ್ಣೀರಾಕಿದ ಸಚಿವ ನಾಗೇಂದ್ರ... ಕಣ್ಣೀರಾಕಿ ರಾಜೀನಾಮೆ ಘೋಷಿಸಿದ ನಾಗೇಂದ್ರ. ಶಾಸಕ ಸ್ಥಾನಕ್ಕೂ ರಾಜೀನಾಮೆ ನಿಡ್ತಿನಿ...!? ಬೆಂಗಳೂರು, ಆ.28: ವಿಧಾನಸೌಧದಲ್ಲಿ ಸಚಿವರಾದ ಬಿ. ನಾಗೇಂದ್ರ, ಅಜಯ್ ಸಿಂಗ್, ರಿಜ್ವಾನ್ ಅರ್ಷದ್, ನಾಸೀರ್ ಅಹಮದ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರ ಜಂಟಿ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಮಾತನಾಡಿದ ಸಚಿವ ಬಿ. ನಾಗೇಂದ್ರ, ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿತ್ತು. ಆದರೆ ವಿಪಕ್ಷದವರು ಸದನವನ್ನೇ ನಡೆಯಲು ಬಿಡಲಿಲ್ಲ ಎಂದು ಆರೋಪಿಸಿದರು. “ವಿಪಕ್ಷದವರು ಮನುಸ್ಮೃತಿಯನ್ನು ಜಾರಿಗೆ ತರಲು ಹೊರಟಿದ್ದಾರೆ. ಅವರಿಗೆ ಇದು ಯಾವ ಕಾಲ ಎಂಬುದು ಗೊತ್ತಿಲ್ಲ. ಇದು ಸಂವಿಧಾನದ ಕಾಲ, ಬಾಬಾಸಾಹೇಬರ ಕಾಲ” ಎಂದು ಹೇಳಿದರು. ರಾಮಾಯಣದ ಉತ್ತರಕಾಂಡದಲ್ಲಿನ ಶಂಬೂಕನ ಪ್ರಸಂಗವನ್ನು ಉಲ್ಲೇಖಿಸಿದ ನಾಗೇಂದ್ರ, ಇಂದಿನ ಯುಗದಲ್ಲಿ ಶಂಬೂಕನ ಹತ್ಯೆಯಾಗಲು ಸಾಧ್ಯವಿಲ್ಲ. ಸಂವಿಧಾನ ಶೂದ್ರರು, ದಲಿತರು, ಮಹಿಳೆಯರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುತ್ತಿದೆ ಎಂದರು. “ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕೆಪಿಎಸ್ಸಿ ಹಗರಣದ ಕುರಿತು ಚರ್ಚೆ ಮಾಡಬಹುದಿತ್ತು. ಶಾಸಕರು ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಬಹುದಿತ್ತು. ನಾವು ಎಲ್ಲದಕ್ಕೂ ಅವಕಾಶ ನೀಡುತ್ತಿದ್ದೆವು. ಆದರೆ ಯಾವುದೇ ಆಧಾರವಿಲ್ಲದ ವಿಚಾರಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ನಾಗೇಂದ್ರ ಆರೋಪಿಸಿದರು. 2024ರಲ್ಲೇ ರಾಜೀನಾಮೆ ನೀಡಿದ್ದೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ನಾಗೇಂದ್ರ, 2024ರಲ್ಲೇ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ಎಂದು ಹೇಳಿದರು. “ನಂತರ ಎಸ್ಐಟಿ, ಸಿಐಡಿ ತನಿಖೆ ಎದುರಿಸಿದ್ದೇನೆ. ಕೇಂದ್ರದ ಇಡಿಯಿಂದ ನನ್ನನ್ನು ಬಂಧಿಸಲಾಗಿತ್ತು. ಜೈಲಿಗೂ ಹೋಗಿ ಬಂದಿದ್ದೇನೆ. ಎರಡು ಬಾರಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಮೊದಲ ಚಾರ್ಜ್ಶೀಟ್ನಲ್ಲಿ ನನ್ನ ಹೆಸರಿರಲಿಲ್ಲ. ಎರಡನೇ ಚಾರ್ಜ್ಶೀಟ್ನಲ್ಲಿ ನನ್ನ ಹೆಸರು ಸೇರಿಸಲಾಗಿದೆ” ಎಂದು ಹೇಳಿದರು. ತಾವು ಸಂವಿಧಾನಕ್ಕೆ ಗೌರವ ನೀಡುವುದಾಗಿ ತಿಳಿಸಿದ ನಾಗೇಂದ್ರ, ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಪ್ರಾಸಿಕ್ಯೂಷನ್ ವಿಚಾರದಲ್ಲಿ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. “ವಾಲ್ಮೀಕಿ ಹಗರಣದಲ್ಲಿ ನನ್ನ ಪಾತ್ರವಿಲ್ಲ” “ವಾಲ್ಮೀಕಿ ಹಗರಣದಲ್ಲಿ ನನ್ನ ಪಾತ್ರವಿಲ್ಲ. ನಾನು ಕೇವಲ ಸಚಿವನಾಗಿದ್ದೆ. ನಾನು ನೋಟ್ಶೀಟ್ ಹಾಕಿದ್ದೇನಾ? ಎಲ್ಲಾದರೂ ಸಹಿ ಹಾಕಿದ್ದೇನಾ? ನಾನು ಇದರಲ್ಲಿ ಭಾಗಿಯಾಗಿದ್ದೇನಾ?” ಎಂದು ಪ್ರಶ್ನಿಸಿದರು. ಅಕ್ರಮವಾಗಿ ವರ್ಗಾವಣೆಯಾಗಿದ್ದ ಹಣ ವಾಪಸ್ ಆಗಿದೆ ಎಂದು ಹೇಳಿದ ಅವರು, “ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಯಾರ ಅಧೀನದಲ್ಲಿದೆ? ನಿರ್ಮಲಾ ಸೀತಾರಾಮನ್ ಅವರ ಅಧೀನದಲ್ಲಿರುವ ಬ್ಯಾಂಕ್ ಅಲ್ಲವೇ? ಹಾಗಾದರೆ ಅವರ ಮೇಲೆ ಏಕೆ ತನಿಖೆ ನಡೆಯುತ್ತಿಲ್ಲ? ನಾನು ದಲಿತ ಎಂಬ ಕಾರಣಕ್ಕೆ ನನ್ನ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ?” ಎಂದು ಪ್ರಶ್ನಿಸಿದರು. ಈ ವೇಳೆ ನಾಗೇಂದ್ರ ಭಾವುಕರಾಗಿ ಮಾತನಾಡಿದರು. ಕಣ್ಣೀರು ಹಾಕಿದ ಅವರು ಟಿಶ್ಯೂ ಬಳಸಿ ಕಣ್ಣೊರೆಸಿಕೊಂಡರು. ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಘೋಷಣೆ ಮುಖ್ಯಮಂತ್ರಿ, ಪಕ್ಷದ ವರಿಷ್ಠರಿಗೆ ಮುಜುಗರವಾಗಬಾರದು ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನಾಗೇಂದ್ರ ಹೇಳಿದರು. “ಈಗ ನಾನು ನನ್ನ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ನನಗೆ ಆಗಿರುವ ಅನ್ಯಾಯವನ್ನು ನಾನು ಹೇಳುತ್ತೇನೆ. ಬನ್ನಿ ಅಖಾಡಕ್ಕೆ ಹೋಗೋಣ, ಜನತಾ ನ್ಯಾಯಾಲಯಕ್ಕೆ ಹೋಗೋಣ” ಎಂದು ಸವಾಲು ಹಾಕಿದರು. ಬಳ್ಳಾರಿ ಬಿಜೆಪಿ ನಾಯಕರಾದ ಬಿ. ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “ರಾಮುಲಣ್ಣ, ನೀ ಬಾರಣ್ಣ, ನೀನೇ ಬಾ. ನನ್ನ ಸವಾಲು ಸ್ವೀಕರಿಸು. ಜನತಾ ನ್ಯಾಯಾಲಯಕ್ಕೆ ಹೋಗೋಣ” ಎಂದು ಸವಾಲು ಹಾಕಿದರು. “ನನ್ನ ಮೇಲೆ ಇಡಿ, ಸಿಬಿಐ ಬಿಡಬಹುದು. ಆದರೆ ನಿಮ್ಮ ಗೊಡ್ಡು ಬೆದರಿಕೆಗೆ ನಾನು ಬಗ್ಗುವುದಿಲ್ಲ. ನಾನು ಆರೋಪ ಮುಕ್ತನಾಗಿ ಹೊರಬರುವ ವಿಶ್ವಾಸವಿದೆ” ಎಂದು ನಾಗೇಂದ್ರ ಹೇಳಿದರು. ಬಳ್ಳಾರಿ ಜನರು ಈಗಾಗಲೇ ಬಿಜೆಪಿ ನಾಯಕರಿಗೆ ಎರಡು ಬಾರಿ ಛೀಮಾರಿ ಹಾಕಿದ್ದಾರೆ. ನೀವು ಚಲಾವಣೆಯಲ್ಲಿಲ್ಲದ ನಾಣ್ಯಗಳಾಗಿದ್ದೀರಿ ಎಂದು ಟೀಕಿಸಿದ ಅವರು, ತಮ್ಮ ವಿರುದ್ಧದ ಆರೋಪಗಳಿಗೆ ಜನತಾ ನ್ಯಾಯಾಲಯದಲ್ಲೇ ಉತ್ತರ ನೀಡುವುದಾಗಿ ಹೇಳಿದರು. ಕೊನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್, ಹರಿಪ್ರಸಾದ್ ಸೇರಿದಂತೆ ತಮ್ಮ ಪರ ನಿಂತ ಎಲ್ಲ ನಾಯಕರನ್ನು ಸ್ಮರಿಸಿದ ನಾಗೇಂದ್ರ, ಪಕ್ಷದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಅವರಿಗೆ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದರು.1
- ಇಂದು ನಡೆದ ಸರಣಿ ಅಪಘಾತ , ದಿನೇ ದಿನೇ ಹೆಚ್ಚಾಗುತ್ತಿದೆ ಬೆಂಗಳೂರಿನಲ್ಲಿ ಇಂತಹ ಪ್ರಕರಣಗಳು. ಇಂದು ಯಲಹಂಕದ ಏರ್ಪೋರ್ಟ್ ರಸ್ತೆಯ ಬಳಿ ನಡೆದ ಸರಣಿ ಅಪಘಾತ, ಇಂದು ಮಧ್ಯಾಹ್ನ ಸುಮಾರು ನಾಲ್ಕು ಗಂಟೆಗೆ ಈ ಘಟನೆ ನಡೆದಿದ್ದು ಸದ್ಯಕ್ಕೆ ಯಾರ ಪ್ರಾಣಿಗೂ ಹಾನಿಯಾಗಲಿಲ್ಲ ಆದರೆ ಗಾಡಿಗಳು ಮಾತ್ರ ಜಕಮ್ ಗೊಂಡಿವೆ1
- ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಾಗ್ತಿದೆ ರಾತ್ರಿ ವೇಳೆಯ ರಾಬರಿಗಳು ಬೆಂಗಳೂರು:ರಾಬರಿ ಮಾಡಲು ಹೊಂಚು ಹಾಕಿ ಕೂತಿದ್ದ ಕಳ್ಳರಿಂದ ಭೀಕರ ಆಕ್ಸಿಡೆಂಟ್ ದೇವನಹಳ್ಳಿ ಹೊರವಲಯದ ಬೈಚಾಪುರ ಬಳಿ ಇರುವ ಬ್ರಿಗೇಡ್ ಬಳಿ ನಡೆದಿದೆ.ಗಾಡಿಗಳನ್ನ ಅಡ್ಡ ಹಾಕಿ ಕಳ್ಳತನ ಮಾಡುವ ವೇಳೆ ಕಳ್ಳನಿಗೆ ಬೈಕ್ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಕಳ್ಳ ಮತ್ತು ಬೈಕ್ ಸವಾರರು ರಸ್ತೆಗೆ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ತಡರಾತ್ರಿ 1 ಗಂಟೆ ನಂತರ ರಾಬರಿ ಮಾಡಲು ಫೀಲ್ಡ್ ಗೆ ಇಬ್ಬರು ಕಳ್ಳರು ಇಳಿದಿದ್ರು.ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನ ಟಾರ್ಗೆಟ್ ಮಾಡಿ ರಾಬರಿಗೆ ಕಳ್ಳರು ಪ್ಲಾನ್ ನಡೆಸಿದ್ದು,ಬೈಕ್ ಸವಾರರನ್ನ ಅಡ್ಡಗಟ್ಟಿ ಮೊಬೈಲ್ ಮತ್ತು ಹಣವನ್ನ ರಾಬರಿ ಗ್ಯಾಂಗ್ ಪೀಕುತ್ತತ್ತು.ಇದೇ ವೇಳೆ ಬೈಕೊಂದಕ್ಕೆ ಅಡ್ಡ ಹಾಕಲು ಕಳ್ಳರಿಂದ ಪ್ರಯತ್ನ ನಡೆದಿದೆ.ಕಳ್ಳರು ರಸ್ತೆಗೆ ಅಡ್ಡ ಇರುವುದು ನೋಡಿ ಬೈಕ್ ಸವಾರ ಸ್ಪೀಡ್ ಹೆಚ್ಚಿಸಿದ್ದ.ಬೈಕ್ ಗೆ ಅಡ್ಡ ಬಂದ ಕಳ್ಳರಿಗೆ ಡಿಕ್ಕಿಯಾಗಿ ರಸ್ತೆಗೆ ಓರ್ವ ಕಳ್ಳ ಬಿದ್ದ,ಮತ್ತೊಬ್ಬ ಕಳ್ಳ ಬೈಕ್ ಸವಾರರ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.ರಾತ್ರಿ ರಾಬರಿ ಪ್ರಕರಣ ನೋಡಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಕೂಡಲೇ ಪೊಲೀಸರು ಕಳ್ಳರನ್ನ ಮಟ್ಟ ಹಾಕಲು ಸಾರ್ವಜನಿಕರು ಆಗ್ರಹಿಸಿದ್ದಾರೆ.1
- ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಚಿವ ನಾಗೇಂದ್ರ ಬಿಜೆಪಿ ಪಾದಯಾತ್ರೆ ವಿಚಾರ. ಬಿಜೆಪಿಯವರ ಗೊಡ್ಡು ಬೆದರಿಕೆಗೆ ಯಾರೂ ಬೆದರಲ್ಲ. ದೇವನಹಳ್ಲಿ ಏರ್ಪೋರ್ಟ್. ಬಿಜೆಪಿ ಪಾದಯಾತ್ರೆ ವಿಚಾರ. ಬಿಜೆಪಿಯವರ ಗೊಡ್ಡು ಬೆದರಿಕೆಗೆ ಯಾರೂ ಬೆದರಲ್ಲ. ಇದೆಲ್ಲಾ ಒಂದು ಕುತಂತ್ರದಿಂದ ಮಾಡಿರುವತಂದ್ದು. ನಾನು ದಲಿತನೇ ನಾನು. ಈ ಮನುವಾದಿಗಳ ಹತ್ತಿರ ಜಗಳ ಆಡಬೇಕು ಅಂದರೆ ದಲಿತರ ಪರವಾಗಿ ಇವತ್ತಲ್ಲಾ ಅನಾದಿಕಾಲದಿಂದಲೂ ಬಂದಿದೆ. ಏರ್ಪೋರ್ಟ್ ನಲ್ಲಿ ಸಚಿವ ನಾಗೇಂದ್ರ ಹೇಳಿಕೆ2
- KOLAR KI.AWAAZ KOUSAR NEWS1
- ಬನ್ನಿ ಜನತಾ ನ್ಯಾಯಾಲಯಕ್ಕೆ!” | ಬಿಜೆಪಿ ನಾಯಕರಿಗೆ ಬಿ. ನಾಗೇಂದ್ರ ರಾಜೀನಾಮೆ ಸವಾಲು | ರೆಡ್ಡಿ–ಶ್ರೀರಾಮುಲುಗೆ ನೇರ ಟಕ್ಕರ್ ರಾಜಕೀಯ ಬೆಳವಣಿಗೆಗಳ ನಡುವೆ ಸಚಿವ ಬಿ.ನಾಗೇಂದ್ರ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಜನಾರ್ದನ ರೆಡ್ಡಿ ಹಾಗೂ ಬಿ.ಶ್ರೀರಾಮುಲು ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. “ಬನ್ನಿ ಜನತಾ ನ್ಯಾಯಾಲಯಕ್ಕೆ ಹೋಗೋಣ, ನಾನು ಇವತ್ತೇ ರಾಜೀನಾಮೆ ನೀಡಿ ಬರುತ್ತೇನೆ. ಜನರ ಮುಂದೆ ಹೋಗೋಣ” ಎಂದ ನಾಗೇಂದ್ರ...! ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕರ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿರುವ ನಾಗೇಂದ್ರ, ತಮ್ಮ ವಿರುದ್ಧದ ಆರೋಪಗಳಿಗೂ ಪ್ರತಿಕ್ರಿಯಿಸಿದ್ದಾರೆ. ಈ ಸವಾಲಿಗೆ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲು ಅವರ ಪ್ರತಿಕ್ರಿಯೆ ಏನು? ಬಳ್ಳಾರಿ ರಾಜಕೀಯದಲ್ಲಿ ಮುಂದಿನ ಬೆಳವಣಿಗೆ ಏನು? ಸಂಪೂರ್ಣ ವರದಿಗಾಗಿ ವಿಡಿಯೋ ನೋಡಿ ಮತ್ತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ. #BNagendra #Ballari #KarnatakaPolitics #KarnatakaNews #BreakingNews #BallariNews #JanardhanaReddy #Sriramulu #BJP #Congress #PoliticalNews #KannadaNews #KannadaNewsToday #IndiaNews #ಜನತಾನ್ಯಾಯಾಲಯ #ಬಿನಾಗೇಂದ್ರ #ಬಳ್ಳಾರಿ #ಕರ್ನಾಟಕರಾಜಕೀಯ1