Shuru
Apke Nagar Ki App…
ನಾಳೆ ದಿ 20/4/2026 ರಂದು ವಿಶ್ವ ಜ್ಞಾನಿ ಬಸವಣ್ಣನವರ ಜಯಂತಿ ಶುಭಾಶಯಗಳು
ಶಿವಪ್ಪ ಜಿ ಕಂಬಾರ್ ಕೆಂಭಾವಿ
ನಾಳೆ ದಿ 20/4/2026 ರಂದು ವಿಶ್ವ ಜ್ಞಾನಿ ಬಸವಣ್ಣನವರ ಜಯಂತಿ ಶುಭಾಶಯಗಳು
More news from ಕರ್ನಾಟಕ and nearby areas
- ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು. #ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews1
- Post by Jevargi suddi no11
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- Post by ABU NEWS CHANNEL1
- ಈಜಲು ಹೋಗಿ ಬಾವಿಯಲ್ಲಿ ಮುಳುಗಿ ಯುವಕ ಸಾವು.! ತಾಲೂಕಿನ ಕರಜಗಿ ಗ್ರಾಮದ ಕಿರಣ ಎಂಬ ಯುವಕ ಮೃತ ದುರ್ದೈವಿ,ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.!1
- ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.1
- ರೋಣ ಮತಕ್ಷೇತ್ರದ ವ್ಯಾಪ್ತಿಗೆ ಬರುವಂತ ಎಲ್ಲಾ ಗ್ರಾಮಗಳಿಗೂ ಮತ್ತು ಪಟ್ಟಣಗಳಿಗೂ ಬೇಸಿಗೆ ಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ಆಗದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೂ ಜಾನುವಾರು ಗಳಿಗೆ ಕುಡಿಯುವ ನೀರು ಮೇವುನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರೋಣ ಮತಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಹೇಳಿದರು, ಅವರು ರೋಣ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ರವಿವಾರ ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬೇಸಿಗೆ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು ಅದರಲ್ಲೂ ಡಿಬಿ ಓಟಿ ನೀರು ಸರಿಯಾಗಿ ಪೂರೈಕೆ ಆಗುತ್ತಿಲ್ಲ ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಎಲ್ಲಾ ಇಲಾಖೆ ಅಧಿಕಾರಿಗಳು ಕೂಡಿಕೊಂಡು ಬೇಸಿಗೆ ಮುಗಿಯುವವರೆಗೆ ನೀರಿನ ಅಭಾವ ಆಗದಂತೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು,ಬಾಸಲಾಪುರ, ಮುಗಳಿ, ಗುಳಗುಳಿ ಪಂಚಾಯತಿ ಅಮರಗಟ್ಟಿ,ರುದ್ರಾಪುರ,ರಾಂಪುರ, ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು,ಬಾಸಲಾಪುರಲ್ಲಿ ಡಿಬಿಒಟಿ ನೀರು ಪೂರೈಕೆ ಸರಿಯಿಲ್ಲ ಎಂದು ಪಿಡಿಒ ಸಭೆಗೆ ತಿಳಿಸಿದರು, ಚಿಕ್ಕಮನ್ನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಡಿಬಿಒಟಿ ನೀರು ಪೂರೈಕೆ ಸರಿ ಇಲ್ಲ ಎಂದು ಪಿಡಿಒ ಕಲ್ಪನಾ ಕಡಗದ ತಿಳಿಸಿದರು,ಅಧಿಕಾರಿಗಳು ಎಲ್ಲರೂ ಕೂಡಿಕೊಂಡು ನೀರಿನ ಸಮಸ್ಯೆ ಬಗ್ಗೆ ಚರ್ಚಿಸಿ ಸರಿಪಡಿಸಿ ಎಂದು ಶಾಸಕರು ತಿಳಿಸಿದರು ,ವಿದ್ಯುತ್ ವ್ಯತ್ಯಯಗಳಿಂದ ಸಹ ನೀರಿನ ಸರಬರಾಜು ಮಾಡಲು ಸಮಸ್ಯೆ ಉಂಟಾಗುತ್ತದೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ರಶ್ಮಿ ನಡುವಿನಮನಿ ಹೇಳಿದರು,ಸವಡಿ ಪಂಚಾಯತಿ ವ್ಯಾಪ್ತಿಯಲ್ಲಿ ಆರು ದಿನಕ್ಕೊಂದು ಸರಿ ನೀರನ್ನು ಬಿಡಲಾಗುತ್ತದೆ, ಐದು ಲಕ್ಷ ಲೀಟರ ಬದಲು ಕೇವಲ ಎರಡು ಲಕ್ಷ ಲೀಟರ್ ನೀರು ಬರುತ್ತಿದೆ ಎಂದು ಪಿಡಿಒ ಮೆಣಸಗಿ ತಿಳಿಸಿದರು,ಹಿರೇಹಾಳ ಪಂಚಾಯತಿ ವ್ಯಾಪ್ತಿಯ ಯರೇಕುರುಬಾನಾಳ ನೀರಿನ ಸಮಸ್ಯೆ ಇದೆ,ನೈನಾಪುರ ,ಬಸರಕೋಡ ನವಗ್ರಾಮ,ಚಿಕ್ಕಳಗುಂಡಿ ಹಿರೇಅಳಗುಂಡಿ,ಹಾಲಕೆರೆ,ಮಾಟರಂಗಿ, ಗೊಗೇರಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು, ಯಾವ ಯಾವ ಗ್ರಾಮಗಳಲ್ಲಿ ನೀರಿನ ಕೊರತೆ ಇದೆ ಅಧಿಕಾರಿಗಳು ಕೂಡಲೇ ಗ್ರಾಮಗಳಿಗೆ ತೆರಳಿ ಪರಿಶೀಲಿಸಿ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಬೇಕು, ನೀರನ್ನು ಪರೀಕ್ಷೆ ಮಾಡದೇ ಸರಬರಾಜು ಮಾಡಬಾರದು ಶುದ್ಧ ನೀರನ್ನು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಪಂಚಾಯತಿ ಆಡಳಿತ ಅಧಿಕಾರಿಗಳು ಸಹ ಹೆಚ್ಚಿನ ಜವಾಬ್ದಾರರಾಗಿದ್ದಿರಿ ನೀರಿನ ಸಮಸ್ಯೆ ಬಾರದ ಹಾಗೆ ನೀವು ಜಾಗೃತ ವಹಿಸಬೇಕು,ಜಾನುವಾರುಗಳಿಗೆ ಮೇವು ನೀರು ಕೊರತೆಯಾಗದಂತೆ ನೋಡಿಕೊಳ್ಳಿ ಎಂದರು, ಸಭೆಯಲ್ಲಿ ರೋಣ ತಾಲೂಕು ಗಜೇಂದ್ರಗಡ ತಾಲೂಕು ಮುಂಡರಗಿ ತಾಲೂಕು ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯನಿರ್ವಣ ಅಧಿಕಾರಿಗಳು ಪುರಸಭೆ ಮುಖ್ಯ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು1
- ಹುಬ್ಬಳ್ಳಿ, ಏಪ್ರಿಲ್ 20: ಬಸವೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಭಕ್ತಿಭಾವದ ವಾತಾವರಣ ಕಂಡುಬಂತು. ನಗರದ ಇಂದಿರಾ ಗಾಂಧಿ ಗ್ಲಾಸ್ ಹೌಸ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಜಯೋಗೀಂದ್ರ ಮಹಾಸ್ವಾಮಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಅವರು ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ಈ ಪವಿತ್ರ ಭೂಮಿ ಮಹಾನುಭಾವರ ಜನ್ಮಸ್ಥಳವಾಗಿದ್ದು, ಬಸವಣ್ಣರು ಮಹಾನ್ ಚಿಂತಕರಾಗಿ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಅವರ ತತ್ವಜ್ಞಾನ ನಮಗೆ ದೊರೆತಿರುವುದು ನಮ್ಮ ಭಾಗ್ಯ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅನೇಕ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರು ಭಾಗವಹಿಸಿ ಬಸವೇಶ್ವರರ ಆದರ್ಶಗಳನ್ನು ಸ್ಮರಿಸಿದರು.1