ಕರ್ನಾಟಕದ ರಾಜಕಾರಣದಲ್ಲಿ ದೇಶಕ್ಕೆ ಮಾದರಿಯಾಗುವ ಬೆಳವಣಿಗೆಗಳು ಶ್ಲಾಘನೀಯವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನುಡಿದಂತೆ ನಡೆದು, ಪಕ್ಷದ ಹಿತಕ್ಕಾಗಿ ಹಗಲಿರಳು ಶ್ರಮಿಸಿದ್ದ ಡಿಕೆ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯೆಂದು ಘೋಷಿಸಿ ನಂತರ ರಾಜೀನಾಮೆ ಸಲ್ಲಿಸಿರುವುದು ಅವರ ಉನ್ನತ ಮಟ್ಟದ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ಈ ನಡುವೆ, ಸಂಪುಟ ರಚನಾ ಕಸರತ್ತಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕತ್ವಕ್ಕೆ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ. ಈ ಸಂಪುಟ ರಚನೆಯಲ್ಲಿ ಪರಿಶಿಷ್ಟ ಜಾತಿಯ ಮಂತ್ರಿಗಳ ಪೈಕಿ, ಕಳೆದ ಬಾರಿ ಮಂತ್ರಿಯಾಗಿದ್ದ ಹಿರಿಯ ರಾಜಕಾರಣಿ ಕೆ ಹೆಚ್ ಮುನಿಯಪ್ಪನವರನ್ನು ನಡೆಸಿಕೊಂಡ ರೀತಿ ರಾಜ್ಯದ ಇಡೀ ಎಡಪಂಗಡದ ಪರಿಶಿಷ್ಟ ಜಾತಿಯವರಿಗೆ ನೋವು ತಂದಿದೆ. ಏಳು ಬಾರಿ ಸಂಸತ್ ಸದಸ್ಯರಾಗಿ ಮತ್ತು ಎರಡು ಬಾರಿ ಕೇಂದ್ರ ಸಚಿವರಾಗಿದ್ದ ಮುನಿಯಪ್ಪನವರಿಗೆ ಆಹಾರ ಖಾತೆ ನೀಡಿ, ಅವರಿಗಿಂತ ಕಿರಿಯರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ ಮತ್ತು ಹೆಚ್ ಸಿ ಮಹಾದೇವಪ್ಪನವರಿಗೆ ಪ್ರಬಲ ಖಾತೆಗಳನ್ನು ನೀಡಿರುವುದು ಯಾವ ಸಾಮಾಜಿಕ ನ್ಯಾಯ ಎಂದು ಇಡೀ ಸಮಾಜ ಪ್ರಶ್ನಿಸುತ್ತಿದೆ. ಈಗ ಪ್ರಿಯಾಂಕ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಮಾಡುವ ಯೋಜನೆಗಳು ಸಹ ಇವೆ ಎಂಬ ಸುದ್ದಿ ಪ್ರಚಲಿತದಲ್ಲಿದೆ. ಅತ್ಯಂತ ಹಿರಿಯರಾದ ಕೆ ಎಚ್ ಮುನಿಯಪ್ಪನವರನ್ನು ತಪ್ಪಿಸಿ ಕಿರಿಯರಾದ ಇನ್ನೊಬ್ಬರನ್ನು ಉಪಮುಖ್ಯಮಂತ್ರಿ ಮಾಡುವುದಾದರೆ, ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಪ್ರಬಲವಾಗಿರುವ ಒಂದು ಸಮಾಜಕ್ಕೆ ಕಾಂಗ್ರೆಸ್ ಪಕ್ಷ ಯಾವ ರೀತಿಯ ಸಂದೇಶವನ್ನು ಕಳಿಸುತ್ತಿದೆ ಎಂಬುದನ್ನು ಯೋಚಿಸಬೇಕಾಗಿದೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಬಹುತೇಕ ಎಡಪಂಗಡ ಪರಿಶಿಷ್ಟ ಜಾತಿಯವರು ಕಾಂಗ್ರೆಸ್ ಪಕ್ಷವನ್ನು ಸದಾ ಬೆಂಬಲಿಸುತ್ತಲೇ ಬಂದಿದ್ದಾರೆ. ಡಿಕೆ ಶಿವಕುಮಾರ್ ಅವರ ನಾಯಕತ್ವ ಬಲಿಷ್ಠವಾಗಿ ಬೆಳೆಯಬೇಕಾದರೆ ಎಡಪಂಗಡ ಪರಿಶಿಷ್ಟ ಜಾತಿಯವರು ಅವರೊಟ್ಟಿಗೆ ಬಲವಾಗಿ ನಿಲ್ಲಬೇಕಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಈ ಸಮಾಜದ ಪ್ರಶ್ನಾರ್ತಿತ ನಾಯಕರಾದ ಕೆ ಎಚ್ ಮುನಿಯಪ್ಪನವರಿಗೆ ನ್ಯಾಯ ಒದಗಿಸಬೇಕು ಎಂಬ ಮನವಿಯನ್ನು ಸಮಾಜ ಮಾಡಿದೆ. ಡಾ. ಬಾಬು ಜಗಜೀವನ್ ರಾಮ್ ಆದಿಜಾಂಭವ ಯುವ ಬ್ರಿಗೇಡ್ (ರಿ) ಜಿಲ್ಲಾ ಘಟಕದ ವತಿಯಿಂದ, ರಾಜ್ಯ ಉಪಾಧ್ಯಕ್ಷರಾದ ಡಿ ಎನ್ ಆಂಜಿನಪ್ಪ ದಿನ್ನೆಹೊಸಹಳ್ಳಿ, ಕೋಲಾರ ಜಿಲ್ಲಾ ಅಧ್ಯಕ್ಷರಾದ ಪಿಳ್ಳಪ್ಪ ಎಸ್ ಮತ್ತು ಸುಗಟೂರು ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಎಸ್ ಎನ್ ಅವರು ಕೆ ಎಚ್ ಮುನಿಯಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.
ಕರ್ನಾಟಕದ ರಾಜಕಾರಣದಲ್ಲಿ ದೇಶಕ್ಕೆ ಮಾದರಿಯಾಗುವ ಬೆಳವಣಿಗೆಗಳು ಶ್ಲಾಘನೀಯವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನುಡಿದಂತೆ ನಡೆದು, ಪಕ್ಷದ ಹಿತಕ್ಕಾಗಿ ಹಗಲಿರಳು ಶ್ರಮಿಸಿದ್ದ ಡಿಕೆ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯೆಂದು ಘೋಷಿಸಿ ನಂತರ ರಾಜೀನಾಮೆ ಸಲ್ಲಿಸಿರುವುದು ಅವರ ಉನ್ನತ ಮಟ್ಟದ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ಈ ನಡುವೆ, ಸಂಪುಟ ರಚನಾ ಕಸರತ್ತಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕತ್ವಕ್ಕೆ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ. ಈ ಸಂಪುಟ ರಚನೆಯಲ್ಲಿ ಪರಿಶಿಷ್ಟ ಜಾತಿಯ ಮಂತ್ರಿಗಳ ಪೈಕಿ, ಕಳೆದ ಬಾರಿ ಮಂತ್ರಿಯಾಗಿದ್ದ ಹಿರಿಯ ರಾಜಕಾರಣಿ ಕೆ ಹೆಚ್ ಮುನಿಯಪ್ಪನವರನ್ನು ನಡೆಸಿಕೊಂಡ ರೀತಿ ರಾಜ್ಯದ ಇಡೀ ಎಡಪಂಗಡದ ಪರಿಶಿಷ್ಟ ಜಾತಿಯವರಿಗೆ ನೋವು ತಂದಿದೆ. ಏಳು ಬಾರಿ ಸಂಸತ್ ಸದಸ್ಯರಾಗಿ ಮತ್ತು ಎರಡು ಬಾರಿ ಕೇಂದ್ರ
ಸಚಿವರಾಗಿದ್ದ ಮುನಿಯಪ್ಪನವರಿಗೆ ಆಹಾರ ಖಾತೆ ನೀಡಿ, ಅವರಿಗಿಂತ ಕಿರಿಯರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ ಮತ್ತು ಹೆಚ್ ಸಿ ಮಹಾದೇವಪ್ಪನವರಿಗೆ ಪ್ರಬಲ ಖಾತೆಗಳನ್ನು ನೀಡಿರುವುದು ಯಾವ ಸಾಮಾಜಿಕ ನ್ಯಾಯ ಎಂದು ಇಡೀ ಸಮಾಜ ಪ್ರಶ್ನಿಸುತ್ತಿದೆ. ಈಗ ಪ್ರಿಯಾಂಕ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಮಾಡುವ ಯೋಜನೆಗಳು ಸಹ ಇವೆ ಎಂಬ ಸುದ್ದಿ ಪ್ರಚಲಿತದಲ್ಲಿದೆ. ಅತ್ಯಂತ ಹಿರಿಯರಾದ ಕೆ ಎಚ್ ಮುನಿಯಪ್ಪನವರನ್ನು ತಪ್ಪಿಸಿ ಕಿರಿಯರಾದ ಇನ್ನೊಬ್ಬರನ್ನು ಉಪಮುಖ್ಯಮಂತ್ರಿ ಮಾಡುವುದಾದರೆ, ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಪ್ರಬಲವಾಗಿರುವ ಒಂದು ಸಮಾಜಕ್ಕೆ ಕಾಂಗ್ರೆಸ್ ಪಕ್ಷ ಯಾವ ರೀತಿಯ ಸಂದೇಶವನ್ನು ಕಳಿಸುತ್ತಿದೆ ಎಂಬುದನ್ನು ಯೋಚಿಸಬೇಕಾಗಿದೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಬಹುತೇಕ ಎಡಪಂಗಡ
ಪರಿಶಿಷ್ಟ ಜಾತಿಯವರು ಕಾಂಗ್ರೆಸ್ ಪಕ್ಷವನ್ನು ಸದಾ ಬೆಂಬಲಿಸುತ್ತಲೇ ಬಂದಿದ್ದಾರೆ. ಡಿಕೆ ಶಿವಕುಮಾರ್ ಅವರ ನಾಯಕತ್ವ ಬಲಿಷ್ಠವಾಗಿ ಬೆಳೆಯಬೇಕಾದರೆ ಎಡಪಂಗಡ ಪರಿಶಿಷ್ಟ ಜಾತಿಯವರು ಅವರೊಟ್ಟಿಗೆ ಬಲವಾಗಿ ನಿಲ್ಲಬೇಕಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಈ ಸಮಾಜದ ಪ್ರಶ್ನಾರ್ತಿತ ನಾಯಕರಾದ ಕೆ ಎಚ್ ಮುನಿಯಪ್ಪನವರಿಗೆ ನ್ಯಾಯ ಒದಗಿಸಬೇಕು ಎಂಬ ಮನವಿಯನ್ನು ಸಮಾಜ ಮಾಡಿದೆ. ಡಾ. ಬಾಬು ಜಗಜೀವನ್ ರಾಮ್ ಆದಿಜಾಂಭವ ಯುವ ಬ್ರಿಗೇಡ್ (ರಿ) ಜಿಲ್ಲಾ ಘಟಕದ ವತಿಯಿಂದ, ರಾಜ್ಯ ಉಪಾಧ್ಯಕ್ಷರಾದ ಡಿ ಎನ್ ಆಂಜಿನಪ್ಪ ದಿನ್ನೆಹೊಸಹಳ್ಳಿ, ಕೋಲಾರ ಜಿಲ್ಲಾ ಅಧ್ಯಕ್ಷರಾದ ಪಿಳ್ಳಪ್ಪ ಎಸ್ ಮತ್ತು ಸುಗಟೂರು ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಎಸ್ ಎನ್ ಅವರು ಕೆ ಎಚ್ ಮುನಿಯಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.
- ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ ಯಾದವ ಸಮಾಜದ ಸಾಧಕರಿಗೆ ವ್ಯಾಪಕ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವು ಸಾಧಕರಿಗೆ ಹರಿದುಬಂದ ಗೌರವದ ಮಹಾಪೂರವಾಗಿತ್ತು. ಝೆಡ್ ನ್ಯೂಸ್ನ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಅಹ್ಮದ್ ಅವರು ಚಿಂತಾಮಣಿ ಪಟ್ಟಣದೊಂದಿಗೆ ಸಂಬಂಧ ಹೊಂದಿದ್ದಾರೆ.1
- ಬೆಂಗಳೂರು ಏರ್ಪೋರ್ಟ್ನಲ್ಲಿ ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಅವರ ಬೆಂಬಲಿಗರು ತೀವ್ರವಾಗಿ ಆಗ್ರಹಿಸಿದ್ದಾರೆ. ಏರ್ಪೋರ್ಟ್ನ ಟರ್ಮಿನಲ್ 1ರ ಬಳಿ ಜಮಾಯಿಸಿದ ಬೆಂಬಲಿಗರು, ಕೆ.ಎಚ್. ಮುನಿಯಪ್ಪ ಪರ ಘೋಷಣೆಗಳನ್ನು ಕೂಗುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾದರು. ಕೆಲವೇ ನಿಮಿಷಗಳಲ್ಲಿ ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿಸಲಿರುವ ಸುರ್ಜೆವಾಲಾ ಅವರ ಎದುರು ಈ ಬೇಡಿಕೆಯನ್ನು ಪ್ರಸ್ತುತಪಡಿಸುವುದು ಅವರ ಉದ್ದೇಶವಾಗಿದೆ. ಕೆ.ಎಚ್. ಮುನಿಯಪ್ಪಗೆ ಡಿಸಿಎಂ ಸ್ಥಾನ ನೀಡಬೇಕೆಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.3
- ಗೋವುಗಳ ವಾಸ್ತವಿಕ ಸ್ಥಿತಿಯನ್ನು ಗಮನಿಸಿದ ನಂತರವೇ ಮಾತನಾಡಬೇಕೆಂದು ಸಾರ್ವಜನಿಕರು ಪುನೀತ್ ಕೆರೆಹಳ್ಳಿ ಅವರ ಸಹಾಯಕನಿಗೆ ತೀವ್ರ ತಿರುಗೇಟು ನೀಡಿದ್ದಾರೆ.1
- ಬಿಗ್ಬಾಸ್ ಖ್ಯಾತಿಯ ಜಾನವಿ ಇಂದು ಬೆಳಿಗ್ಗೆ (ಮೇ 30, 2026) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾದ ತಕ್ಷಣ, ಅವರು ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು.1
- ಭಾಲ್ಕಿಯಿಂದ ಬಂದ ವರದಿಯ ಪ್ರಕಾರ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಹಾಗೂ ಪ್ರಸ್ತುತ ಅರಣ್ಯ ಸಚಿವರಾಗಿರುವ ಈಶ್ವರ್ ಖಂಡ್ರೆ ಅವರಿಗೆ ಕರ್ನಾಟಕದ ಉಪಮುಖ್ಯಮಂತ್ರಿ (DyCM) ಹುದ್ದೆಯನ್ನು ನೀಡಬೇಕೆಂದು ಕಾಂಗ್ರೆಸ್ ಮುಖಂಡ ವಿಲಾಸ್ ಮೋರೆ ನೇತೃತ್ವದಲ್ಲಿ ಪಕ್ಷದ ಹೈಕಮಾಂಡ್ಗೆ ಪ್ರಬಲವಾಗಿ ಒತ್ತಾಯಿಸಲಾಗಿದೆ. ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿಲಾಸ್ ಮೋರೆ, ದಶಕಗಳ ರಾಜಕೀಯ ಅನುಭವ ಹೊಂದಿರುವ ಈಶ್ವರ್ ಖಂಡ್ರೆ ಅವರ ಆಡಳಿತಾತ್ಮಕ ಸಾಧನೆ, ಪಕ್ಷದ ಸಂಘಟನಾ ಚಾತುರ್ಯ ಮತ್ತು ನಿಷ್ಠೆಯನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಇದು ಅತ್ಯಂತ ಸೂಕ್ತ ಸಮಯ ಎಂದು ಪ್ರತಿಪಾದಿಸಿದರು. ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎನ್ನುವುದಕ್ಕೆ ಮುಖಂಡರು ಮೂರು ಪ್ರಮುಖ ಕಾರಣಗಳನ್ನು ಮುಂದಿಟ್ಟಿದ್ದಾರೆ. ಮೊದಲನೆಯದಾಗಿ, ಅರಣ್ಯ ಸಚಿವರಾಗಿ ಸಾವಿರಾರು ಎಕರೆ ಅತಿಕ್ರಮಣಗೊಂಡಿದ್ದ ಅರಣ್ಯ ಭೂಮಿಯನ್ನು ಯಶಸ್ವಿಯಾಗಿ ತೆರವುಗೊಳಿಸಿ ಮತ್ತು ಕರ್ನಾಟಕದ ಹಸಿರು ಹೊದಿಕೆಯನ್ನು ವಿಸ್ತರಿಸಲು 12 ಕೋಟಿ ಸಸಿಗಳನ್ನು ನೆಡುವ ಬೃಹತ್ ಅರಣ್ಯೀಕರಣ ಯೋಜನೆಗೆ ಚಾಲನೆ ನೀಡಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಎರಡನೆಯದಾಗಿ, ಅವರು ತಲೆಮಾರುಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸುತ್ತಾ ಬಂದಿರುವ ಕುಟುಂಬದಿಂದ ಬಂದಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮಿಸಿದ್ದಾರೆ ಹಾಗೂ ದಶಕಗಳಿಂದ ಕಾಂಗ್ರೆಸ್ ಸಿದ್ಧಾಂತಕ್ಕೆ ನಿಷ್ಠರಾಗಿದ್ದಾರೆ. ಮೂರನೆಯದಾಗಿ, ಆಡಳಿತಾತ್ಮಕ ಸಾಮರ್ಥ್ಯದ ಜೊತೆಗೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ್ತು ಲಿಂಗಾಯತ ಸಮುದಾಯದಲ್ಲಿ ಖಂಡ್ರೆ ಅವರು ಬಲವಾದ ಸಾರ್ವಜನಿಕ ಸಂಪರ್ಕ ಮತ್ತು ಜನಾಕರ್ಷಣೆ ಹೊಂದಿದ್ದು, ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂದು ತಿಳಿಸಿದ್ದಾರೆ. "ಪಕ್ಷ ಹಾಗೂ ಸಾರ್ವಜನಿಕ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟ ನಾಯಕನನ್ನು ಈಶ್ವರ್ ಖಂಡ್ರೆ ಅವರನ್ನು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಉನ್ನತೀಕರಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಅವರ ಕೊಡುಗೆಗಳನ್ನು ಪುರಸ್ಕರಿಸಬೇಕು" ಎಂದು ವಿಲಾಸ್ ಮೋರೆ ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಮಾರುತಿ ಬಾವಿಕಟ್ಟೆ, ಓಂಕಾರ್ ಮೋರೆ, ಸುನಿಲ್ ವಂಜ್ರೆ, ಚಂದು ಸಂಪಾಂಗೆ, ನಾರಾಯಣರಾವ್ ಮೋರೆ, ರಾಜಕುಮಾರ್ ಬೌದೆ, ಜೈಪಾಲ್ ಬೋರಳೆ, ಕಿಶನ್ ವಾಘಮಾರೆ, ಬಂಟ್ಟಿ ಸೇರಿದಂತೆ ಕಾಂಗ್ರೆಸ್ನ ಹಲವಾರು ಪ್ರಮುಖ ಯುವ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು, ಈ ಬೇಡಿಕೆಗೆ ಪ್ರಬಲ ಬೆಂಬಲ ಸೂಚಿಸಿದರು.1
- ಹಾಂಗ್ ಕಾಂಗ್ನಲ್ಲಿ 2026ರಲ್ಲಿ ನಡೆದ U-20 ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ 19 ವರ್ಷದ ಪೂಜಾ ಅವರು ಹೈಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ವಿಜಯ ಸಾಧಿಸಿದ್ದಾರೆ. ಈ ವಿಜಯದೊಂದಿಗೆ, ಪೂಜಾ 1.93 ಮೀಟರ್ ಜಿಗಿತವನ್ನು ದಾಖಲಿಸಿ, ಹಿರಿಯರ ರಾಷ್ಟ್ರೀಯ ದಾಖಲೆಯನ್ನು ಸಹ ಮುರಿದರು. ಈ ಸಾಧನೆಯು ಭಾರತಕ್ಕೆ ವಿಶ್ವ ವೇದಿಕೆಯಲ್ಲಿ ಹೆಮ್ಮೆ ತಂದಿದ್ದು, ತ್ರಿವರ್ಣ ಧ್ವಜವನ್ನು ಹಾರಿಸುವಂತಹ ಕ್ಷಣವನ್ನು ಸೃಷ್ಟಿಸಿದೆ. ಈ ಹೆಮ್ಮೆಯ ಕ್ಷಣವು ಪ್ರತಿಯೊಬ್ಬ ಭಾರತೀಯರ ಹೃದಯದಲ್ಲಿ ದೇಶಭಕ್ತಿಯ ರೋಮಾಂಚನವನ್ನು ಮೂಡಿಸಿದೆ. ಪೂಜಾ ಅವರ ಈ ಐತಿಹಾಸಿಕ ಗೆಲುವಿಗೆ ಒಂದು ಸಲಾಮ್ ಸಲ್ಲಿಸಲಾಗಿದೆ.2
- ಯಾದವ ಜನಾಂಗದ ಮುಖಂಡರು ಸಚಿವ ಸಂಪುಟದಲ್ಲಿ ಡಿ.ಟಿ. ಶ್ರೀನಿವಾಸ್ಗೆ ಸಚಿವ ಸ್ಥಾನ ನೀಡುವಂತೆ ತೀವ್ರವಾಗಿ ಒತ್ತಾಯಿಸಿದ್ದಾರೆ.1
- ಬ್ಯಾಟರಾಯಣಪುರ ಸಂಚಾರ ಪೊಲೀಸ್ ಠಾಣೆಯ ಪಿಸಿ 18416 ಅನೀಲ್ ಅವರು, ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಸಮಯಪ್ರಜ್ಞೆಯಿಂದ ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಪಾಯವನ್ನು ಅರಿಯದೆ ನೀರಿನ ಸೆಳೆತಕ್ಕೆ ಸಿಲುಕಿದ್ದ ವ್ಯಕ್ತಿಯನ್ನು ಕಂಡು, ಪಿಸಿ ಅನೀಲ್ ಕೂಡಲೇ ಸ್ಪಂದಿಸಿ, ತಮ್ಮ ಪ್ರಾಣದ ಹಂಗು ತೊರೆದು ಆತನನ್ನು ಸುರಕ್ಷಿತವಾಗಿ ದಡಕ್ಕೆ ಎಳೆತಂದರು. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಪೇದೆಯ ಧೈರ್ಯ ಮತ್ತು ಕರ್ತವ್ಯ ಪ್ರಜ್ಞೆಯನ್ನು ಸಾರ್ವಜನಿಕರು ಹಾಗೂ ಮೇಲಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ.1