Shuru
Apke Nagar Ki App…
ಶಾಸಕ ಶ್ರೀ ರಘು ಕೌಟಿಲ್ಯ ಅವರು ಇಂದು ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಘು ಕೌಟಿಲ್ಯ ಅವರು ಯಡಿಯೂರಪ್ಪ ಅವರಿಗೆ ಗೌರವ ಸಮರ್ಪಿಸಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ, ಶ್ರೀ ರಘು ಕೌಟಿಲ್ಯ ಅವರು ಶಿವಮೊಗ್ಗದಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ಅವರನ್ನು ಸಹ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಸುನೀಲ್ ಲ್ ಬೆಟಗೇರಿ
ಶಾಸಕ ಶ್ರೀ ರಘು ಕೌಟಿಲ್ಯ ಅವರು ಇಂದು ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಘು ಕೌಟಿಲ್ಯ ಅವರು ಯಡಿಯೂರಪ್ಪ ಅವರಿಗೆ ಗೌರವ ಸಮರ್ಪಿಸಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ, ಶ್ರೀ ರಘು ಕೌಟಿಲ್ಯ ಅವರು ಶಿವಮೊಗ್ಗದಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ಅವರನ್ನು ಸಹ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
More news from ಕರ್ನಾಟಕ and nearby areas
- ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಅರಬಗೊಂಡ ಗ್ರಾಮದ ಹತ್ತಿರವಿರುವ ಹಾವೇರಿ ಜಿಲ್ಲಾ ಹಾಲು ಒಕ್ಕೂಟದ ಮೇಗಾ ಡೈರಿ ಘಟಕಕ್ಕೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕೆ.ಎಂ.ಎಫ್. ಅಧ್ಯಕ್ಷರಾದ ಶ್ರೀ ಮಂಜನಗೌಡ ಪಾಟೀಲ್, ಉಪಾಧ್ಯಕ್ಷರಾದ ಶ್ರೀ ಉಜ್ಜನಗೌಡ ಮಾವೀನತೋಪ, ಎಂ.ಡಿ. ಶ್ರೀ ಪ್ರದೀಪ ಎಸ್.ಎಂ. ಸೇರಿದಂತೆ ಎಲ್ಲ ನಿರ್ದೇಶಕರು ಉಪಸ್ಥಿತರಿದ್ದರು.4
- ಬಂಕಾಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ 2025-26ನೇ ಸಾಲಿನ ಪಠ್ಯತರ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಿದರು. ದೇಶದ ಸಂಸ್ಕೃತಿ ಹಾಗೂ ಗುಣಮಟ್ಟದ ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಯಾಸೀರ್ ಖಾನ್ ಪಠಾಣ ಒತ್ತಿ ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.1
- ಗದಗ್ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೊಂಚಿಗೇರಿ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಅಳವಡಿಸಲಾಗಿರುವ ಹೈ ಮಾಸ್ಕ್ ದೀಪ ಇಂದಿಗೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಹೈ ಮಾಸ್ಕ್ ದೀಪ ಸರಿಯಾಗಿ ಆನ್ ಆಗದಿರುವುದು ಮುಖ್ಯ ಸಮಸ್ಯೆಯಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಅವರು 'ನೋಡೋಣ' ಎಂದು ಹೇಳಿ ನಿರ್ಲಕ್ಷ್ಯ ತೋರುತ್ತಿದ್ದಾರೆ.1
- ಕಲಘಟಗಿ ತಾಲ್ಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದಲ್ಲಿ ಶುಕ್ರವಾರ ಮಳೆರಾಯನ ಆಗಮನಕ್ಕಾಗಿ ಗ್ರಾಮಸ್ಥರು ವಿಶೇಷವಾಗಿ ಕಪ್ಪೆಗಳ ಮದುವೆ ನೆರವೇರಿಸಿ ಪೂಜೆ ಸಲ್ಲಿಸಿದ್ದು, ಇಡೀ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಮದುವೆಗಾಗಿ ಬೆಳಿಗ್ಗೆ ಅಂಬರೀಷ್ ಕಲಬಾವಿ ಅವರ ಮನೆಯಲ್ಲಿ ಹೆಣ್ಣು ಕಪ್ಪೆಗೆ ಹಣ್ಣು ಇಡಲಾಯಿತು. ನಂತರ ಮಹೇಶ ಹೊಸಮನಿ ಅವರ ಮನೆಯಲ್ಲಿ ಗಂಡು ಕಪ್ಪೆಗೆ ಊಟ ಮಾಡಿ ಬರುವಂತಹ ವಿಶಿಷ್ಟ ಕಾರ್ಯಕ್ರಮವನ್ನು ನಡೆಸಲಾಯಿತು. ಮದುವೆ ಶಾಸ್ತ್ರದ ಭಾಗವಾಗಿ, ಗ್ರಾಮದ ಪ್ರಮುಖ ಓಣಿಗಳಲ್ಲಿ ಹಾಲ ಕಂಬ ತಂದು, ಕರಡಿ ಮಜಲು ನಡೆಸಲಾಯಿತು. ಮಹಿಳೆಯರು ಆರತಿ ಹಿಡಿದು ಕಪ್ಪೆಗಳ ಮೆರವಣಿಗೆ ಮಾಡಿದರು. ನಂತರ ಗ್ರಾಮದ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅರಶಿಣ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಹಿಂದೂ ಸಮಾಜದ ಮದುವೆ ಸಂಪ್ರದಾಯದ ಪ್ರಕಾರ ಕಪ್ಪೆಗಳನ್ನು ವಧು-ವರರಂತೆ ಅಲಂಕರಿಸಲಾಗಿತ್ತು. ಮದುವೆ ಗಂಟು ಕಟ್ಟಿ, ಹೆಣ್ಣು ಹಾಗೂ ಗಂಡು ಕಪ್ಪೆಗಳನ್ನು ಜೊತೆಯಲ್ಲಿ ಇರಿಸಿ ಅರಶಿಣ, ಕುಂಕುಮ ಹಚ್ಚಲಾಯಿತು. ಮಹಿಳೆಯರು, ಮಕ್ಕಳು ಹಾಗೂ ಹಿರಿಯರು ಸೇರಿ ಒಬ್ಬರಿಗೊಬ್ಬರು ಅರಶಿಣ ಎರಚಾಡಿ ಸಂಭ್ರಮಿಸಿದರು. ಐದು ಗಿತ್ತಿಯರು ಆರತಿ ಬೆಳಗಿ ಸುರಿಗಿ ನೀರು ಸುರಿಸಿದರು. ತದನಂತರ ಹೆಣ್ಣು ಕಪ್ಪೆಗೆ ಪತ್ತಲು, ಗಂಡು ಕಪ್ಪೆಗೆ ಬಟ್ಟೆ ತೊಡಿಸಿ, ಬಾಶಿಂಗ್ ಹಾಕಿ ಹೂವು ಮೂಡಿಸಿ, ಬಳೆ ತೊಡಿಸಿ, ಅರಶಿಣ ಬೇರು ಹಾಗೂ ಎಲೆಯಿಂದ ಕಂಕಣ ಭಾಗ್ಯ ಕಟ್ಟಿ ಮದುವೆ ಕಾರ್ಯವನ್ನು ಪೂರ್ಣಗೊಳಿಸಲಾಯಿತು. ಆದಷ್ಟು ಬೇಗನೆ ಮಳೆರಾಯ ಭೂಮಿಗೆ ಆಗಮಿಸಲಿ ಎಂದು ಗ್ರಾಮದ ಎಲ್ಲರೂ ದೇವರಲ್ಲಿ ಪ್ರಾರ್ಥನೆ ಮಾಡಿದರು. ಈ ಕಪ್ಪೆ ಮದುವೆ ಅಂಗವಾಗಿ ಗ್ರಾಮಸ್ಥರು ಅನ್ನಪ್ರಸಾದವನ್ನೂ ಏರ್ಪಡಿಸಿದ್ದರು. ಬ್ರಹ್ಮಲಿಂಗೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ವಿ.ಎಸ್. ಬೆಣ್ಣಿ ಅವರು, ಮಳೆ ಬರುತ್ತದೆ ಎಂಬ ನಂಬಿಕೆಯಿಂದ ಹಿರಿಯರ ಕಾಲದ ಪದ್ಧತಿಯಂತೆ ಗಂಡು ಮತ್ತು ಹೆಣ್ಣು ಕಪ್ಪೆ ಜೋಡಿ ಲಗ್ನ ಕಾರ್ಯವನ್ನು ಭಕ್ತಿಯ ಜೊತೆಗೆ ವಿಜೃಂಭಣೆಯಿಂದ ನೆರವೇರಿಸಲಾಗಿದೆ ಎಂದು ತಿಳಿಸಿದರು.1
- ಭಾರತೀಯ ಜನತಾ ಯುವ ಮೋರ್ಚಾ ಶಿವಮೊಗ್ಗ ವತಿಯಿಂದ ಆಯೋಜಿಸಲಾಗಿದ್ದ ಅತ್ಯಂತ ವಿಶಿಷ್ಟವಾದ "ಮೋದಿ @12 ಯುವ ಸಂವಾದ" ಕಾರ್ಯಕ್ರಮವು ಶಿವಮೊಗ್ಗ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂವಾದದಲ್ಲಿ ಜಿಲ್ಲೆಯ ನೂರಾರು ಉತ್ಸಾಹಿ ಯುವಜನತೆ ಸಕ್ರಿಯವಾಗಿ ಭಾಗವಹಿಸಿ, ಅರ್ಥಪೂರ್ಣ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ, ದೇಶದ ಸರ್ವತೋಮುಖ ಪ್ರಗತಿಗಾಗಿ ಜಾರಿಗೆ ತಂದ ಕ್ರಾಂತಿಕಾರಿ ಯೋಜನೆಗಳು ಹಾಗೂ ವಿಕಸಿತ ಭಾರತದ ನಿರ್ಮಾಣದಲ್ಲಿ ಮಲೆನಾಡಿನ ಯುವಶಕ್ತಿಯ ಪಾತ್ರದ ಕುರಿತು ಮುಕ್ತವಾಗಿ ಚರ್ಚಿಸಲಾಯಿತು. ದೇಶದ ಪ್ರಗತಿಗೆ ಹೊಸ ವೇಗ ನೀಡುತ್ತಿರುವ ಯುವಕರ ಆಲೋಚನೆಗಳು, ನವೀನ ಕಲ್ಪನೆಗಳು ಮತ್ತು ಅಮೂಲ್ಯವಾದ ಸಲಹೆಗಳನ್ನು ಆಲಿಸಲು ಈ ವೇದಿಕೆ ಅತ್ಯಂತ ಯಶಸ್ವಿ ಮಾಧ್ಯಮವಾಗಿ ಮೂಡಿಬಂದಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್ ಮತ್ತು ಡಾ. ಧನಂಜಯ್ ಸರ್ಜಿ, ಹಾಗೂ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ ಸೇರಿದಂತೆ ಪ್ರಮುಖ ಗಣ್ಯರಾದ ಶ್ರೀ ಟಿ.ಡಿ. ಮೇಘರಾಜ್ ಉಪಸ್ಥಿತರಿದ್ದರು. ಶಿವಮೊಗ್ಗ ಜಿಲ್ಲೆಯ ಯುವ ಸಬಲೀಕರಣಕ್ಕೆ ಮತ್ತು ದೇಶದ ವಿಕಸಿತ ಸಂಕಲ್ಪಕ್ಕೆ ಶಕ್ತಿ ತುಂಬಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಂದು ಪಾಲ್ಗೊಂಡ ಪ್ರತಿಯೊಬ್ಬ ಯುವ ಮಿತ್ರರಿಗೂ ಹಾಗೂ ಯುವ ಮೋರ್ಚಾದ ಸಮಸ್ತ ಪದಾಧಿಕಾರಿಗಳಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಸಮರ್ಪಿಸಲಾಯಿತು.1
- ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿನ ವಿಐಎಸ್ಎಲ್ ಹಾಗೂ ಎಂಪಿಎಂ ಅವಳಿ ಕಾರ್ಖಾನೆಗಳ ಅಭಿವೃದ್ಧಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್. ರಾಜು ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯು ಕಾರ್ಮಿಕ ನಾಯಕ ಕಾಮ್ರೇಡ್ ಡಿಸಿ ಮಾಯಣ್ಣನವರ 92ನೇ ಜನ್ಮದಿನಾಚರಣೆಯ ಅಂಗವಾಗಿ, ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಲು ಆಯೋಜಿಸಲಾಗಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಯಾವುದೇ ಶ್ರಮ ವಹಿಸಿಲ್ಲ ಎಂದು ಪ್ರತಿಭಟನಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಎರಡೂ ಸರ್ಕಾರಗಳು ಅಭಿವೃದ್ಧಿ ಮಾಡುವುದಾಗಿ ಹೇಳಿ ಕಾರ್ಮಿಕರಿಗೆ ಅನ್ಯಾಯ ಮಾಡಿವೆ ಎಂದು ಆರೋಪಿಸಲಾಯಿತು. ಎಂಪಿಎಂ ಕಾರ್ಖಾನೆಯನ್ನು ಅಭಿವೃದ್ಧಿಪಡಿಸಬೇಕು, ಇಲ್ಲವೇ ಕಾರ್ಖಾನೆಗೆ ನೀಡಲಾದ 72 ಸಾವಿರ ಎಕರೆ ಜಮೀನನ್ನು ಕಾರ್ಮಿಕರಿಗೆ ಹಾಗೂ ಬಡಜನರಿಗೆ ನೀಡಬೇಕು ಎಂದು ಆಗ್ರಹಿಸಲಾಯಿತು. ರೈತರು ಮತ್ತು ಕಾರ್ಮಿಕರ ಸಮಸ್ಯೆಗಳೂ ಸೇರಿದಂತೆ ಸುಮಾರು 15 ಬೇಡಿಕೆಗಳನ್ನು ಈಡೇರಿಸುವಂತೆ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಗೆ ಮುನ್ನ ನಗರದ ಡಾ:ಬಿ ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಹೊರಟ ಮೆರವಣಿಗೆಯು ಮುಖ್ಯರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿ ತಲುಪಿ, ಅಲ್ಲಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಪದಾಧಿಕಾರಿಗಳಾದ ಬ್ರಹ್ಮಲಿಂಗಯ್ಯ, ಬಸವರಾಜಪ್ಪ, ಎಂ.ವಿ.ಚಂದ್ರಶೇಖರ್, ಶ್ರೀನಿವಾಸ್, ಏಕಾಂತ್, ಶೇಖರ್ ಮುಂತಾದವರು ಈ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.1
- ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೂನ್ 20 ರಂದು ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಕೂಡ್ಲಿಗಿ ಪೊಲೀಸ್ ಉಪವಿಭಾಗ, ಪೊಲೀಸ್ ಠಾಣೆ, ತಾಲೂಕಾಡಳಿತ ಹಾಗೂ ವಿವಿಧ ಸಮುದಾಯಗಳ ಮುಖಂಡರು ಮತ್ತು ನಾಗರಿಕರ ಸಹಯೋಗದಲ್ಲಿ ಈ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಡಿ.ವೈ.ಎಸ್ಪಿ ಮಲ್ಲೇಶಪ್ಪ ದೊಡ್ಡಮನೆ ಅವರು, ಹಬ್ಬವು ಸಂಭ್ರಮದ ಸಂಕೇತವಾಗಿದ್ದು, ಯಾವುದೇ ಕಾರಣಕ್ಕೂ ಶಾಂತಿ ಭಂಗವಾಗಬಾರದು ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ ಎಂದು ಸೂಚಿಸಿದರು. ಸರ್ವಜನಾಂಗದವರು ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕಿದ್ದು, ಮೊಹರಂ ಸುಲಲಿತವಾಗಿ ನಡೆಯಲು ಇಲಾಖೆಯು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಿದ್ಧತೆ ನಡೆಸಿದೆ ಎಂದು ತಿಳಿಸಿದರು. ಸಮುದಾಯಗಳ ಹಿರಿಯರು, ಪ್ರಭಾವಿಗಳು, ಪೋಷಕರು, ಮುಖಂಡರು, ಜನಪ್ರತಿನಿಧಿಗಳು ಮತ್ತು ಎಲ್ಲಾ ಸಮುದಾಯಗಳ ಪ್ರಮುಖರು ಇಲಾಖೆಯೊಂದಿಗೆ ಸಹಕರಿಸಬೇಕು ಹಾಗೂ ತಮ್ಮ ಯುವಕರನ್ನು ಹದ್ದುಬಸ್ತಿನಲ್ಲಿಟ್ಟು, ಹಬ್ಬದಲ್ಲಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ತಿಳಿಹೇಳಬೇಕು ಎಂದು ಅವರು ಕರೆ ನೀಡಿದರು. ಶಾಂತಿ ಭಂಗ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಲ್ಲಿ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿ.ವೈ.ಎಸ್ಪಿ ಕಠಿಣ ಎಚ್ಚರಿಕೆ ನೀಡಿದರು. ಹಬ್ಬದ ಸಂದರ್ಭದಲ್ಲಿ ಕೋಮುಗಲಭೆ, ದಂಗೆ, ದೊಂಬಿ, ಗುಂಪು ಘರ್ಷಣೆ, ಹೊಡೆದಾಟ, ಹಲ್ಲೆಗಳಂತಹ ದುಷ್ಕೃತ್ಯಗಳಲ್ಲಿ ಭಾಗಿಯಾದವರಿಗೆ ಮತ್ತು ಘಟನೆಗಳಿಗೆ ಕುಮ್ಮಕ್ಕು ನೀಡಿದವರಿಗೆ, ಉತ್ತೇಜಿಸಿದವರಿಗೆ ಅಥವಾ ಸಹಕರಿಸಿದವರಿಗೆ ಕಾನೂನಿನಲ್ಲಿ ಯಾವುದೇ ಕ್ಷಮೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಬ್ಬದ ಸಂದರ್ಭದಲ್ಲಿ ಯಾರೂ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಮತ್ತು ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಬೇಕು ಎಂದರು. ಶಾಂತಿ ಸೌಹಾರ್ದತೆಗೆ ಹೆಚ್ಚು ಆದ್ಯತೆ ನೀಡಬೇಕು ಮತ್ತು ನಾಗರಿಕರು, ಸರ್ವಧರ್ಮೀಯರು ಇಲಾಖೆಯೊಂದಿಗೆ ಎಲ್ಲಾ ರೀತಿಯಲ್ಲಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಹಬ್ಬದ ಸಂದರ್ಭದಲ್ಲಿ ಎಲ್ಲರ ನೆಮ್ಮದಿ ಕಾಪಾಡುವ ನಿಟ್ಟಿನಲ್ಲಿ, ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಕಾನೂನಿನ ಗಾಂಭೀರ್ಯ ಮತ್ತು ಪ್ರಭಾವದ ಬಗ್ಗೆ ಅರಿವು ಮೂಡಿಸಿ, ಸಂಯಮ, ಶಾಂತಿ ಹಾಗೂ ಸೌಹಾರ್ದತೆಯಿಂದ ವರ್ತಿಸುವಂತೆ ಜಾಗೃತಿ ಮೂಡಿಸಬೇಕು. ಪ್ರಭಾವಿಗಳು, ಸಂಘ ಸಂಸ್ಥೆಗಳ ಪ್ರಮುಖರು, ರಾಜಕಾರಣಿಗಳು, ಹಿರಿಯರು ಮತ್ತು ಮುಖಂಡರು ತಮ್ಮ ಯುವಕರನ್ನು ನಿಯಂತ್ರಣದಲ್ಲಿಟ್ಟು, ಇಲಾಖೆಯೊಂದಿಗೆ ಸಹಕರಿಸಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ವಹಿಸಬೇಕು ಎಂದರು. ಮೊಹರಂ ಹಬ್ಬ ಆಚರಣೆ ಹಾಗೂ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಭದ್ರತೆಯನ್ನು ಜರುಗಿಸಲಾಗಿದೆ. ಪ್ರಮುಖ ಬೀದಿಗಳು, ಧಾರ್ಮಿಕ ಕೇಂದ್ರಗಳ ಬಳಿ ಮತ್ತು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಅಗತ್ಯವಿರುವ ಕಡೆ ಮೀಸಲು ಪೊಲೀಸ್ ಪಡೆಯನ್ನು ನೇಮಿಸಿ ಸೂಕ್ತ ಬಿಗಿ ಭದ್ರತೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ ತೀವ್ರ ನಿಗಾ ವಹಿಸಲಾಗಿರುತ್ತದೆ ಎಂದು ಡಿ.ವೈ.ಎಸ್ಪಿ ತಿಳಿಸಿದರು. ಈ ಶಾಂತಿ ಸಭೆಯಲ್ಲಿ ತಹಶಿಲ್ದಾರರಾದ ವಿ.ಕೆ. ನೇತ್ರಾವತಿ ಹಾಗೂ ಸಿಪಿಐ ಪ್ರಹ್ಲಾದ್ ಆರ್ ಚನ್ನಗಿರಿ ಅವರು ಮಾತನಾಡಿದರು. ಹಲವು ಮುಖಂಡರು ತಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಪಿಎಸ್ಐ ಸಿ ಪ್ರಕಾಶ ಸೇರಿದಂತೆ ಮುಸ್ಲಿಂ ಧರ್ಮದ ಪ್ರಮುಖರು, ವಿವಿಧ ಧರ್ಮಗಳ ಗುರುಗಳು, ವಿವಿಧ ಸಮುದಾಯಗಳ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಟ್ಟಣದ ಹಿರಿಯರು, ನಾಗರಿಕರು, ವಿವಿಧ ಪಕ್ಷಗಳ ಪ್ರಮುಖರು ಮತ್ತು ಯುವಕರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.4
- ಶಿಗ್ಗಾವಿ ತಾಲ್ಲೂಕಿನ ಕ್ಯಾಲಕೊಂಡ ಗ್ರಾಮದಲ್ಲಿ ಇಬ್ಬರು ಯುವ ಅಗ್ನಿವೀರರಿಗೆ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಹಾಗೂ ಗೆಳೆಯರ ಬಳಗದ ವತಿಯಿಂದ ಭವ್ಯ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅಗ್ನಿವೀರರಾಗಿ ಆಯ್ಕೆಯಾದ ಕೃಷ್ಣಪ್ಪ ಮಂಜುನಾಥ ನಡುವಿನಮನಿ ಮತ್ತು ಪ್ರಶಾಂತ ನಾಗಪ್ಪ ಶಿಗ್ಗಾವಿ ಅವರು ಮಹಾರಾಷ್ಟ್ರದ ನಾಸಿಕ್ ಆರ್.ಟಿ. ತರಬೇತಿ ಕೇಂದ್ರದಲ್ಲಿ ತರಬೇತಿಗೆ ಹಾಜರಾಗಲು ಹೊರಡುತ್ತಿರುವ ಹಿನ್ನೆಲೆಯಲ್ಲಿ ಈ ಗೌರವ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ರಾಜಶೇಖರಸ್ವಾಮಿ ಹಿರೇಮಠ ಅವರು ಅಗ್ನಿವೀರರಿಗೆ ಸಿಹಿ ತಿನ್ನಿಸುವ ಮೂಲಕ ಶುಭಾಶಯ ಕೋರಿದರು. ಇಂದಿನ ಯುವಕರು ಯಾವುದೇ ಚಟಗಳಿಗೆ ದಾಸರಾಗದೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕು ಎಂದು ಕಿವಿಮಾತು ಹೇಳಿದರು. ಈ ಇಬ್ಬರು ಯುವಕರು ದೇಶಸೇವೆ ಮಾಡಲು ಆಯ್ಕೆಯಾಗಿರುವುದು ನಮ್ಮ ಕ್ಯಾಲಕೊಂಡ ಗ್ರಾಮಕ್ಕೆ ಹೆಮ್ಮೆಯ ವಿಷಯ ಎಂದು ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಯುವ ಧುರೀಣ ಮನೋಹರ್ ಹಾದಿಮನಿ, ಈ ಇಬ್ಬರು ಯುವಕರು ಅಗ್ನಿವೀರರಾಗಿ ಆಯ್ಕೆಯಾಗಿ ನಮ್ಮೂರಿನ ಮುಂದಿನ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹೇಳಿದರು. ಮುಂದಿನ ಯುವಕರು ಸಹ ಇದೇ ರೀತಿ ದೇಶಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ನಾಗರಿಕ ಸೇವಾ ಕೇಂದ್ರದ ನಿರ್ವಾಹಕ ಮುತ್ತಪ್ಪ ಎಸ್. ಮಾತನಾಡಿ, ಇಬ್ಬರು ಅಗ್ನಿವೀರರ ಶ್ರಮ ಸಾಕಷ್ಟಿದೆ ಹಾಗೂ ಬಡತನದಲ್ಲಿ ಬೆಳೆದು ನಿರಂತರ ಪರಿಶ್ರಮದ ಫಲವಾಗಿ ದೇಶಸೇವೆಗೆ ಹೊರಡುತ್ತಿರುವುದು ಗ್ರಾಮಕ್ಕೆ ಹೆಮ್ಮೆ ಎನಿಸುತ್ತದೆ ಎಂದು ಶ್ಲಾಘಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಜಾಪರ ಬಾಗವಾನ, ಮಾಂತೇಶ ಮುಶಮ್ಮನವರ, ಮಂಜುನಾಥ ಹೊಸಮನಿ, ವೀರುಪಾಕ್ಷರೆಡ್ಡಿ ಅರಳಿಕಟ್ಟಿ, ಮನೋಜ ಹೂಗಾರ, ಬಾಬು ಗೊಣೆಪ್ಪನವರ, ರಿಯಾಜ ಮುಲ್ಲಾ, ಕಾರ್ತಿಕ ಚಿನ್ನಣ್ಣವರ, ಖಲಂದರ ಅಂಚಿ, ಹರೀಶ ಕಳ್ಳಮನಿ, ಹಾಗೂ ಗ್ರಾಮದ ಗುರು ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.1