“ಯುವ ಸಂಗಮ”7ನೇ ಹಂತ ಪೋಸ್ಟರ್ ಬಿಡುಗಡೆ ಮಾಡಿದ ಸಿಯುಕೆಯ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ *ಏಕ್ ಭಾರತ್–ಶ್ರೇಷ್ಠ ಭಾರತ್’ ಅಡಿಯಲ್ಲಿ ಸಿಯುಕೆಯ ಜೋಡಿ ಸಂಸ್ಥೆಯಾಗಿ ಮಧ್ಯಪ್ರದೇಶದ ಭೋಪಾಲ್ನ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ ಆಯ್ಕೆ :* ಕೇಂದ್ರದ ಶಿಕ್ಷಣ ಸಚಿವಾಲಯದ, ಉನ್ನತ ಶಿಕ್ಷಣ ಇಲಾಖೆಯ ‘ಏಕ್ ಭಾರತ್–ಶ್ರೇಷ್ಠ ಭಾರತ್’ ಯೋಜನೆಯಡಿ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಉನ್ನತ ಶಿಕ್ಷಣ ಸಂಸ್ಥೆಗಳ ಯುವಕರಿಗಾಗಿ ಆಯೋಜಿಸಲಾಗುವ ‘ಯುವ ಸಂಗಮ’ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದ 7ನೇ ಹಂತದ ಪೋಸ್ಟರ್ನ್ನು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ಇಂದು ವಿಶ್ವವಿದ್ಯಾಲಯದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿಗಳು, ದೇಶದ ಯುವಜನತೆಯ ನಡುವೆ ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿ, ಹಾಗೂ ಪರಸ್ಪರ ತಿಳುವಳಿಕೆ ಬೆಳೆಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಜೋಡಿ ರಾಜ್ಯಗಳು ಮತ್ತು ಜೋಡಿ ಶಿಕ್ಷಣ ಸಂಸ್ಥೆಗಳ ನಡುವೆ ಆಯೋಜಿಸಲಾಗುವ ಪರಸ್ಪರ ಅಧ್ಯಯನ ಹಾಗೂ ಪರಿಚಯ ಭೇಟಿಗಳ ಮೂಲಕ “ವೈವಿಧ್ಯತೆಯಲ್ಲಿ ಏಕತೆ” ಎಂಬ ಭಾರತದ ಮೂಲಭೂತ ಮೌಲ್ಯವನ್ನು ಬಲಪಡಿಸಲಾಗುತ್ತಿದೆ ಎಂದು ತಿಳಿಸಿದರು. ದೇಶದ ಐಐಟಿ, ಐಐಎಂ, ಕೇಂದ್ರೀಯ ವಿ.ವಿ.ಗಳು ಹಾಗೂ ಎನ್ಐಟಿ ಸೇರಿದಂತೆ ಒಟ್ಟು 20 ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಈ ಕಾರ್ಯಕ್ರಮದ ನೋಡಲ್ ಸಂಸ್ಥೆಗಳಾಗಿ ಗುರುತಿಸಲಾಗಿದೆ. ಆಯ್ಕೆಯಾದ ಯುವಕರು ಸುಮಾರು 5 ರಿಂದ 7 ದಿನಗಳ ಶೈಕ್ಷಣಿಕ ಪ್ರವಾಸ ಮಾಡಲಿವೆ. ಸ್ಥಳೀಯ ಸಂಸ್ಕೃತಿ, ಸಂಪ್ರದಾಯಗಳು, ಶಿಕ್ಷಣ ಸಂಸ್ಥೆಗಳು, ಆಡಳಿತ ವ್ಯವಸ್ಥೆ, ನವೋದ್ಯಮಗಳು, ಕೈಗಾರಿಕೆಗಳು, ಪರಿಸರ ವ್ಯವಸ್ಥೆಗಳು, ಐತಿಹಾಸಿಕ ಹಾಗೂ ಪರಂಪರೆಯ ತಾಣಗಳು ಮತ್ತು ಸಮುದಾಯ ಜೀವನವನ್ನು ಅಧ್ಯಯನ ಮಾಡಲಿದ್ದಾರೆ. ಸಿಯುಕೆಯ ಜೋಡಿ ಸಂಸ್ಥೆಯಾಗಿ ಮಧ್ಯಪ್ರದೇಶದ ಭೋಪಾಲ್ನ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ (SPA) ಆಯ್ಕೆಯಾಗಿದೆ. ಶೀಘ್ರದಲ್ಲೇ ಎಸ್ಪಿಎ, ಭೋಪಾಲ್ನ ವಿದ್ಯಾರ್ಥಿಗಳ ತಂಡ ಕರ್ನಾಟಕಕ್ಕೆ ಹಾಗೂ ಸಿಯುಕೆಗೆ ಭೇಟಿ ನೀಡಲಿದ್ದು, ಇದೇ ರೀತಿಯಲ್ಲಿ ಸಿಯುಕೆಯ ವಿದ್ಯಾರ್ಥಿಗಳ ತಂಡ ಮಧ್ಯಪ್ರದೇಶಕ್ಕೆ ತೆರಳಲಿದೆ. ಅಲ್ಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದರು.
“ಯುವ ಸಂಗಮ”7ನೇ ಹಂತ ಪೋಸ್ಟರ್ ಬಿಡುಗಡೆ ಮಾಡಿದ ಸಿಯುಕೆಯ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ *ಏಕ್ ಭಾರತ್–ಶ್ರೇಷ್ಠ ಭಾರತ್’ ಅಡಿಯಲ್ಲಿ ಸಿಯುಕೆಯ ಜೋಡಿ ಸಂಸ್ಥೆಯಾಗಿ ಮಧ್ಯಪ್ರದೇಶದ ಭೋಪಾಲ್ನ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ ಆಯ್ಕೆ :* ಕೇಂದ್ರದ ಶಿಕ್ಷಣ ಸಚಿವಾಲಯದ, ಉನ್ನತ ಶಿಕ್ಷಣ ಇಲಾಖೆಯ ‘ಏಕ್ ಭಾರತ್–ಶ್ರೇಷ್ಠ ಭಾರತ್’ ಯೋಜನೆಯಡಿ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಉನ್ನತ ಶಿಕ್ಷಣ ಸಂಸ್ಥೆಗಳ ಯುವಕರಿಗಾಗಿ ಆಯೋಜಿಸಲಾಗುವ ‘ಯುವ ಸಂಗಮ’ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದ 7ನೇ ಹಂತದ ಪೋಸ್ಟರ್ನ್ನು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ಇಂದು ವಿಶ್ವವಿದ್ಯಾಲಯದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿಗಳು, ದೇಶದ ಯುವಜನತೆಯ ನಡುವೆ ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿ, ಹಾಗೂ ಪರಸ್ಪರ ತಿಳುವಳಿಕೆ ಬೆಳೆಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಜೋಡಿ ರಾಜ್ಯಗಳು ಮತ್ತು ಜೋಡಿ ಶಿಕ್ಷಣ ಸಂಸ್ಥೆಗಳ ನಡುವೆ ಆಯೋಜಿಸಲಾಗುವ ಪರಸ್ಪರ ಅಧ್ಯಯನ ಹಾಗೂ ಪರಿಚಯ ಭೇಟಿಗಳ ಮೂಲಕ “ವೈವಿಧ್ಯತೆಯಲ್ಲಿ ಏಕತೆ” ಎಂಬ ಭಾರತದ ಮೂಲಭೂತ ಮೌಲ್ಯವನ್ನು ಬಲಪಡಿಸಲಾಗುತ್ತಿದೆ ಎಂದು ತಿಳಿಸಿದರು. ದೇಶದ ಐಐಟಿ, ಐಐಎಂ, ಕೇಂದ್ರೀಯ ವಿ.ವಿ.ಗಳು ಹಾಗೂ ಎನ್ಐಟಿ ಸೇರಿದಂತೆ ಒಟ್ಟು 20 ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಈ ಕಾರ್ಯಕ್ರಮದ ನೋಡಲ್ ಸಂಸ್ಥೆಗಳಾಗಿ ಗುರುತಿಸಲಾಗಿದೆ. ಆಯ್ಕೆಯಾದ ಯುವಕರು ಸುಮಾರು 5 ರಿಂದ 7 ದಿನಗಳ ಶೈಕ್ಷಣಿಕ ಪ್ರವಾಸ ಮಾಡಲಿವೆ. ಸ್ಥಳೀಯ ಸಂಸ್ಕೃತಿ, ಸಂಪ್ರದಾಯಗಳು, ಶಿಕ್ಷಣ ಸಂಸ್ಥೆಗಳು, ಆಡಳಿತ ವ್ಯವಸ್ಥೆ, ನವೋದ್ಯಮಗಳು, ಕೈಗಾರಿಕೆಗಳು, ಪರಿಸರ ವ್ಯವಸ್ಥೆಗಳು, ಐತಿಹಾಸಿಕ ಹಾಗೂ ಪರಂಪರೆಯ ತಾಣಗಳು ಮತ್ತು ಸಮುದಾಯ ಜೀವನವನ್ನು ಅಧ್ಯಯನ ಮಾಡಲಿದ್ದಾರೆ. ಸಿಯುಕೆಯ ಜೋಡಿ ಸಂಸ್ಥೆಯಾಗಿ ಮಧ್ಯಪ್ರದೇಶದ ಭೋಪಾಲ್ನ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ (SPA) ಆಯ್ಕೆಯಾಗಿದೆ. ಶೀಘ್ರದಲ್ಲೇ ಎಸ್ಪಿಎ, ಭೋಪಾಲ್ನ ವಿದ್ಯಾರ್ಥಿಗಳ ತಂಡ ಕರ್ನಾಟಕಕ್ಕೆ ಹಾಗೂ ಸಿಯುಕೆಗೆ ಭೇಟಿ ನೀಡಲಿದ್ದು, ಇದೇ ರೀತಿಯಲ್ಲಿ ಸಿಯುಕೆಯ ವಿದ್ಯಾರ್ಥಿಗಳ ತಂಡ ಮಧ್ಯಪ್ರದೇಶಕ್ಕೆ ತೆರಳಲಿದೆ. ಅಲ್ಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದರು.
- #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews1
- ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.! ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!1
- ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ: ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ಬಸವಕಲ್ಯಾಣ: ತಾಲೂಕಿನ ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ ಮಾಡಲಾಯಿತು. ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ನೀಡಿದರು1
- ಭಾರತ ಜೋಡೊ ಯುವ ಮಿಷನ್ ಕುರಿತು ಡಿಸಿಎಂ ಜಿ ಪರಮೇಶ್ವರ್ ನಿರೋದ್ಯೋಗಿ ಯುವಕರಿಗೆ ಇದೊಂದು ಉತ್ತಮ ವೇದಿಕೆ ಆಗುತ್ತಾ?1
- ಕಾಳಗಿಯಲ್ಲಿ ಕ್ರಾಪ್ ಕಟಿಂಗ್ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು ಗೆರಾವ್–ಪ್ರತಿಭಟನೆ. ಕ್ರಾಪ್ ಕಟಿಂಗ್ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು. ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ. “ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ ನಿಗದಳಿ, ವಿಠಲ ಸನದಿ, ಪಾಂಡುರಂಗ ರುಮ್ಮನಗೂಡ. ಸೈದಪ್ಪ ಕೊಡಡೂರ, ಸಜೀದಾಪಟೇಲ್ ಬಿರಾದಾರ್, ಸಿದಪ್ಪ ಕಂದಗುಳ, ಶಿವಪ್ಪ ಸನದಿ, ನಾಮದೇವ ರಾಠೋಡ್, ಉದಯ ಸನದಿ, ನಾಗೇಶ್ ಸನದಿ, ವಿಠ್ಠಲ್ ರೂಮನಗುಡ, ಸಂತೋಷ ಮಠಪತಿ, ಪೀರಪ್ಪ ಯಾದವ, ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು1
- ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.1
- ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.2
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1