logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಾಗಲಕೋಟೆ: ಶಿವಾಜಿ ಮಹಾರಾಜರ ಜಯಂತಿ ಹಿನ್ನೆಲೆ: ಬಾಗಲಕೋಟೆ ನಗರದಲ್ಲಿ ಪೊಲೀಸರ ಪಥಸಂಚಲನ ಇಂದು ಫೆಬ್ರವರಿ 19ರಂದು ಜರುಗಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬುಧವಾರ ಮುಂಜಾಗೃತ ಕ್ರಮ ಕೈಗೊಂಡಿದೆ. ಎಸ್‌ಪಿ ಸಿದ್ದಾರ್ಥ ಗೋಯಲ್ ಅವರ ಆದೇಶದ ಮೇರೆಗೆ ಡಿವೈಎಸ್‌ಪಿ ಗಜಾನನ ಸುತಾರ ಅವರ ನೇತೃತ್ವದಲ್ಲಿ, ಪಿಐ ಆನಂದ ವಾಘಮೋಡೆ ಹಾಗೂ ಪಿಎಸ್‌ಐ ಜಯಶ್ರೀ ನಧಾಪ್ ಮತ್ತು ಶಾಂತಾ ಹಳ್ಳಿ ಅವರ ಮುಂದಾಳತ್ವದಲ್ಲಿ ನಗರ ಪ್ರಮುಖ ರಸ್ತೆಗಳಲ್ಲಿಪೊಲೀಸ್ ಪಥಸಂಚಲನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

1 hr ago
user_PKBagalkot
PKBagalkot
ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
1 hr ago

ಬಾಗಲಕೋಟೆ: ಶಿವಾಜಿ ಮಹಾರಾಜರ ಜಯಂತಿ ಹಿನ್ನೆಲೆ: ಬಾಗಲಕೋಟೆ ನಗರದಲ್ಲಿ ಪೊಲೀಸರ ಪಥಸಂಚಲನ ಇಂದು ಫೆಬ್ರವರಿ 19ರಂದು ಜರುಗಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬುಧವಾರ ಮುಂಜಾಗೃತ ಕ್ರಮ ಕೈಗೊಂಡಿದೆ. ಎಸ್‌ಪಿ ಸಿದ್ದಾರ್ಥ ಗೋಯಲ್ ಅವರ ಆದೇಶದ ಮೇರೆಗೆ ಡಿವೈಎಸ್‌ಪಿ ಗಜಾನನ ಸುತಾರ ಅವರ ನೇತೃತ್ವದಲ್ಲಿ, ಪಿಐ ಆನಂದ ವಾಘಮೋಡೆ ಹಾಗೂ ಪಿಎಸ್‌ಐ ಜಯಶ್ರೀ ನಧಾಪ್ ಮತ್ತು ಶಾಂತಾ ಹಳ್ಳಿ ಅವರ ಮುಂದಾಳತ್ವದಲ್ಲಿ ನಗರ ಪ್ರಮುಖ ರಸ್ತೆಗಳಲ್ಲಿಪೊಲೀಸ್ ಪಥಸಂಚಲನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

More news from ಕರ್ನಾಟಕ and nearby areas
  • ಇಂದು ಫೆಬ್ರವರಿ 19ರಂದು ಜರುಗಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬುಧವಾರ ಮುಂಜಾಗೃತ ಕ್ರಮ ಕೈಗೊಂಡಿದೆ. ಎಸ್‌ಪಿ ಸಿದ್ದಾರ್ಥ ಗೋಯಲ್ ಅವರ ಆದೇಶದ ಮೇರೆಗೆ ಡಿವೈಎಸ್‌ಪಿ ಗಜಾನನ ಸುತಾರ ಅವರ ನೇತೃತ್ವದಲ್ಲಿ, ಪಿಐ ಆನಂದ ವಾಘಮೋಡೆ ಹಾಗೂ ಪಿಎಸ್‌ಐ ಜಯಶ್ರೀ ನಧಾಪ್ ಮತ್ತು ಶಾಂತಾ ಹಳ್ಳಿ ಅವರ ಮುಂದಾಳತ್ವದಲ್ಲಿ ನಗರ ಪ್ರಮುಖ ರಸ್ತೆಗಳಲ್ಲಿಪೊಲೀಸ್ ಪಥಸಂಚಲನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
    1
    ಇಂದು ಫೆಬ್ರವರಿ 19ರಂದು ಜರುಗಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬುಧವಾರ ಮುಂಜಾಗೃತ ಕ್ರಮ ಕೈಗೊಂಡಿದೆ.
ಎಸ್‌ಪಿ ಸಿದ್ದಾರ್ಥ ಗೋಯಲ್ ಅವರ ಆದೇಶದ ಮೇರೆಗೆ ಡಿವೈಎಸ್‌ಪಿ ಗಜಾನನ ಸುತಾರ ಅವರ ನೇತೃತ್ವದಲ್ಲಿ, ಪಿಐ ಆನಂದ ವಾಘಮೋಡೆ ಹಾಗೂ ಪಿಎಸ್‌ಐ ಜಯಶ್ರೀ ನಧಾಪ್ ಮತ್ತು ಶಾಂತಾ ಹಳ್ಳಿ ಅವರ ಮುಂದಾಳತ್ವದಲ್ಲಿ ನಗರ ಪ್ರಮುಖ ರಸ್ತೆಗಳಲ್ಲಿಪೊಲೀಸ್ ಪಥಸಂಚಲನ ನಡೆಯಿತು.
ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    1 hr ago
  • ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುವ ಪೊಲೀಸರ ಬಗ್ಗೆ ಸಮಾಜ ಕಾರ್ಯಕರ್ತೆ ಸಹನಾ ಅಂಗಡಿ ಹಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೊಲೀಸರ ಸಂಬಳ ಕಡಿಮೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ, ಯಾವುದೇ ಘಟನೆ ನಡೆದರೂ ಜನಪ್ರತಿನಿಧಿಗಳು ಪೊಲೀಸರನ್ನೇ ಗುರಿಯಾಗಿಸುತ್ತಾರೆ ಎಂಬ ಆಕ್ರೋಶವೂ ವ್ಯಕ್ತವಾಗಿದೆ.ಸಹನಾ ಅಂಗಡಿ ಅವರ ಮಾತಿನಂತೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ದಿನರಾತ್ರಿ ಶ್ರಮಿಸುತ್ತಿದ್ದಾರೆ. ಹಬ್ಬ-ಹರಿದಿನ, ಕುಟುಂಬ ಸಮಾರಂಭಗಳನ್ನೂ ಬದಿಗಿರಿಸಿ ಸಮಾಜದ ಭದ್ರತೆಗೆ ಶ್ರಮಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕ ಗೌರವ ಮತ್ತು ಸಂಬಳ ದೊರೆಯುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಬೇರೆ ರಾಜ್ಯಗಳಲ್ಲಿ ಪೊಲೀಸರಿಗೆ ಹೆಚ್ಚಿನ ವೇತನ ಮತ್ತು ಸೌಲಭ್ಯಗಳಿವೆ ಎಂಬ ಹೋಲಿಕೆ ಮಾಡುತ್ತಾ, ರಾಜ್ಯ ಸರ್ಕಾರ ಗಮನಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.“ರಾಜ್ಯದಲ್ಲಿ ಏನೇ ಸಮಸ್ಯೆ ಆದರೂ ಮೊದಲಿಗೆ ಪೊಲೀಸರನ್ನೇ ದೂರುತ್ತಾರೆ. ಆದರೆ ಜನಪ್ರತಿನಿಧಿಗಳ ಹಿಂದೆ ಮುಂದೆ, ಅವರ ಕುಟುಂಬದ ಭದ್ರತೆಗೆ ಪೊಲೀಸರು ಬೇಕು. ಹಾಗಾದರೆ ಪೊಲೀಸರ ಕುಟುಂಬದ ಭದ್ರತೆ ಯಾರು ನೋಡಿಕೊಳ್ಳಬೇಕು? ಅವರ ಸಂಕಷ್ಟಗಳಿಗೆ ಸ್ಪಂದಿಸುವವರು ಯಾರು?”ಸಹನಾ ಅಂಗಡಿ ಅವರು ಪೊಲೀಸರ ಕೆಲಸದ ಒತ್ತಡ, ಮಾನಸಿಕ ಆರೋಗ್ಯ ಸಮಸ್ಯೆಗಳು ಹಾಗೂ ಕುಟುಂಬ ಜೀವನದ ಮೇಲಿನ ಪರಿಣಾಮಗಳ ಕುರಿತು ಸರ್ಕಾರ ವಿಶೇಷ ಗಮನ ಹರಿಸಬೇಕು ಎಂದು ಹೇಳಿದ್ದಾರೆ.ಅವರ ಪ್ರಕಾರ, ಕೇವಲ ಕರ್ತವ್ಯ ನಿರ್ವಹಣೆ ಮಾತ್ರವಲ್ಲದೆ, ಪೊಲೀಸರ ಕಲ್ಯಾಣಕ್ಕಾಗಿ ಸಮಗ್ರ ಯೋಜನೆಗಳು ಅಗತ್ಯವೆಂದು ಅಭಿಪ್ರಾಯಪಟ್ಟಿದ್ದಾರೆ.ಪೊಲೀಸರ ಸೇವೆ ಮತ್ತು ಅವರ ಕಲ್ಯಾಣದ ಬಗ್ಗೆ ಉದ್ಭವಿಸಿರುವ ಈ ಪ್ರಶ್ನೆಗಳು ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಸರ್ಕಾರ ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ
    1
    ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುವ ಪೊಲೀಸರ ಬಗ್ಗೆ ಸಮಾಜ ಕಾರ್ಯಕರ್ತೆ ಸಹನಾ ಅಂಗಡಿ ಹಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೊಲೀಸರ ಸಂಬಳ ಕಡಿಮೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ, ಯಾವುದೇ ಘಟನೆ ನಡೆದರೂ ಜನಪ್ರತಿನಿಧಿಗಳು ಪೊಲೀಸರನ್ನೇ ಗುರಿಯಾಗಿಸುತ್ತಾರೆ ಎಂಬ ಆಕ್ರೋಶವೂ ವ್ಯಕ್ತವಾಗಿದೆ.ಸಹನಾ ಅಂಗಡಿ ಅವರ ಮಾತಿನಂತೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ದಿನರಾತ್ರಿ ಶ್ರಮಿಸುತ್ತಿದ್ದಾರೆ. ಹಬ್ಬ-ಹರಿದಿನ, ಕುಟುಂಬ ಸಮಾರಂಭಗಳನ್ನೂ ಬದಿಗಿರಿಸಿ ಸಮಾಜದ ಭದ್ರತೆಗೆ ಶ್ರಮಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕ ಗೌರವ ಮತ್ತು ಸಂಬಳ ದೊರೆಯುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
ಬೇರೆ ರಾಜ್ಯಗಳಲ್ಲಿ ಪೊಲೀಸರಿಗೆ ಹೆಚ್ಚಿನ ವೇತನ ಮತ್ತು ಸೌಲಭ್ಯಗಳಿವೆ ಎಂಬ ಹೋಲಿಕೆ ಮಾಡುತ್ತಾ, ರಾಜ್ಯ ಸರ್ಕಾರ ಗಮನಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.“ರಾಜ್ಯದಲ್ಲಿ ಏನೇ ಸಮಸ್ಯೆ ಆದರೂ ಮೊದಲಿಗೆ ಪೊಲೀಸರನ್ನೇ ದೂರುತ್ತಾರೆ. ಆದರೆ ಜನಪ್ರತಿನಿಧಿಗಳ ಹಿಂದೆ ಮುಂದೆ, ಅವರ ಕುಟುಂಬದ ಭದ್ರತೆಗೆ ಪೊಲೀಸರು ಬೇಕು. ಹಾಗಾದರೆ ಪೊಲೀಸರ ಕುಟುಂಬದ ಭದ್ರತೆ ಯಾರು ನೋಡಿಕೊಳ್ಳಬೇಕು? ಅವರ ಸಂಕಷ್ಟಗಳಿಗೆ ಸ್ಪಂದಿಸುವವರು ಯಾರು?”ಸಹನಾ ಅಂಗಡಿ ಅವರು ಪೊಲೀಸರ ಕೆಲಸದ ಒತ್ತಡ, ಮಾನಸಿಕ ಆರೋಗ್ಯ ಸಮಸ್ಯೆಗಳು ಹಾಗೂ ಕುಟುಂಬ ಜೀವನದ ಮೇಲಿನ ಪರಿಣಾಮಗಳ ಕುರಿತು ಸರ್ಕಾರ ವಿಶೇಷ ಗಮನ ಹರಿಸಬೇಕು ಎಂದು ಹೇಳಿದ್ದಾರೆ.ಅವರ ಪ್ರಕಾರ, ಕೇವಲ ಕರ್ತವ್ಯ ನಿರ್ವಹಣೆ ಮಾತ್ರವಲ್ಲದೆ, ಪೊಲೀಸರ ಕಲ್ಯಾಣಕ್ಕಾಗಿ ಸಮಗ್ರ ಯೋಜನೆಗಳು ಅಗತ್ಯವೆಂದು ಅಭಿಪ್ರಾಯಪಟ್ಟಿದ್ದಾರೆ.ಪೊಲೀಸರ ಸೇವೆ ಮತ್ತು ಅವರ ಕಲ್ಯಾಣದ ಬಗ್ಗೆ ಉದ್ಭವಿಸಿರುವ ಈ ಪ್ರಶ್ನೆಗಳು ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಸರ್ಕಾರ ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    22 hrs ago
  • ಮುಧೋಳ : ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕೊಡುಗೈ ದಾನಿಗಳ ನೆರವಿನಿಂದ ಸಿದ್ದಗೊಂಡಿರುವ ವೇಮನ ಅಕ್ಯಾಡೆಮಿಯ ಶಾಲಾ ಕಟ್ಟಡ ಪೂರ್ಣಗೊಂಡಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಆರಂಭಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಭಕ್ತಿ ಶಿರೋಮಣಿ ಹೇಮರಡ್ಡಿ ಮಲ್ಲಮ್ಮ ಶೈಕ್ಷಣಿಕ ಹಾಗೂ ಧಾರ್ಮಿಕ ಸಂಸ್ಥೆ ಅಧ್ಯಕ್ಷ ದಯಾನಂದ ಪಾಟೀಲ ಅವರು, ಒಟ್ಟು 31ಕೊಠಡಿ ಹೊಂದಿರುವ ಸುಸಜ್ಜಿತ ಕಟ್ಟಡದಲ್ಲಿ ಮುಂದಿನ ತಲೆಮಾರಿನ ವಿದ್ಯಾರ್ಥಿಗಳ ಏಳಿಗೆ ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಂಸ್ಥೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು. ಈ ವೇಳೆ ಸಮಾಜದ ಮುಖಂಡರಾದ ಕೆ.ಆರ್.ಮಾಚಪ್ಪನವರ, ಶ್ರೀಕಾಂತ ಗುಜ್ಜನ್ನವರ, ಉದಯ ಸಾರವಾಡ, ವಿ.ಡಿ. ನಾಗನೂರ, ಎ.ಜಿ.ಪಾಟೀಲ, ಡಾ.ಸತೀಶ ಮಲಘಾಣ, ಪ್ರಾಚಾರ್ಯೆ ನೀಲಕಂಠೇಶ್ವರಿ ಸೇರಿದಂತೆ ಇತರರು ಇದ್ದರು.
    1
    ಮುಧೋಳ : ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕೊಡುಗೈ ದಾನಿಗಳ ನೆರವಿನಿಂದ ಸಿದ್ದಗೊಂಡಿರುವ ವೇಮನ ಅಕ್ಯಾಡೆಮಿಯ ಶಾಲಾ ಕಟ್ಟಡ ಪೂರ್ಣಗೊಂಡಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಆರಂಭಿಸಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಭಕ್ತಿ ಶಿರೋಮಣಿ ಹೇಮರಡ್ಡಿ ಮಲ್ಲಮ್ಮ ಶೈಕ್ಷಣಿಕ ಹಾಗೂ ಧಾರ್ಮಿಕ ಸಂಸ್ಥೆ ಅಧ್ಯಕ್ಷ ದಯಾನಂದ ಪಾಟೀಲ ಅವರು, ಒಟ್ಟು 31ಕೊಠಡಿ ಹೊಂದಿರುವ ಸುಸಜ್ಜಿತ ಕಟ್ಟಡದಲ್ಲಿ ಮುಂದಿನ ತಲೆಮಾರಿನ ವಿದ್ಯಾರ್ಥಿಗಳ ಏಳಿಗೆ ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಂಸ್ಥೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು.
ಈ ವೇಳೆ ಸಮಾಜದ ಮುಖಂಡರಾದ ಕೆ.ಆರ್.ಮಾಚಪ್ಪನವರ, ಶ್ರೀಕಾಂತ ಗುಜ್ಜನ್ನವರ, ಉದಯ ಸಾರವಾಡ, ವಿ.ಡಿ. ನಾಗನೂರ, ಎ.ಜಿ.ಪಾಟೀಲ, ಡಾ.ಸತೀಶ ಮಲಘಾಣ, ಪ್ರಾಚಾರ್ಯೆ ನೀಲಕಂಠೇಶ್ವರಿ ಸೇರಿದಂತೆ ಇತರರು ಇದ್ದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    15 hrs ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತೊಂಡಿಹಾಳ ಸಮೀಪದ ಮಾಗ೯ದಶ೯ನ ಶಿಕ್ಷಣ ಸಂಸ್ಥೆಯ ಹತ್ತಿರದ ಅಡವಿಯೊಳಗೆ ರುಂಡ ಇಲ್ಲದ ಪುರುಷನ ಶವವೊಂದು ಫೆ.೧೮ ಬುಧವಾರ ರಾತ್ರಿ ಸಮಯದಲ್ಲಿ ಕಂಡು ಬಂದಿದೆ. ಮೃತನ ಗುರುತು ಸಿಗದ ಹಾಗೆ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್,ಡಿವಾಯ್‌ಎಸ್‌ಪಿ, ಸಿಪಿಐ, ಪಿಎಸ್‌ಐ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೈಯಾದ ವ್ಯಕ್ತಿಯ ರುಂಡ್ ಇನ್ನೂ ಪತ್ತೆಯಾಗಿಲ್ಲ ಪೋಲಿಸರ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
    3
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತೊಂಡಿಹಾಳ ಸಮೀಪದ ಮಾಗ೯ದಶ೯ನ ಶಿಕ್ಷಣ ಸಂಸ್ಥೆಯ ಹತ್ತಿರದ ಅಡವಿಯೊಳಗೆ ರುಂಡ ಇಲ್ಲದ ಪುರುಷನ ಶವವೊಂದು ಫೆ.೧೮ ಬುಧವಾರ ರಾತ್ರಿ ಸಮಯದಲ್ಲಿ ಕಂಡು ಬಂದಿದೆ. 
ಮೃತನ ಗುರುತು ಸಿಗದ ಹಾಗೆ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್,ಡಿವಾಯ್‌ಎಸ್‌ಪಿ, ಸಿಪಿಐ, ಪಿಎಸ್‌ಐ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 
ಕೊಲೈಯಾದ ವ್ಯಕ್ತಿಯ ರುಂಡ್ ಇನ್ನೂ ಪತ್ತೆಯಾಗಿಲ್ಲ ಪೋಲಿಸರ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
    user_Aaryan Ganiger
    Aaryan Ganiger
    Photographer ಇಳಕಲ್, ಬಾಗಲಕೋಟೆ, ಕರ್ನಾಟಕ•
    39 min ago
  • ಹೊಸ ಬಬಲಾದಿ ಮಠದಲ್ಲಿ 2026ರ ಕಾಲ ಜ್ಞಾನ ಸಾರಿದ ಸದಾಶಿವ ಅಜ್ಜನ್ನವರು ಹಾಗೂ ಶಿವರುದ್ರಯ್ಯ ಮುತ್ಯಾ
    1
    ಹೊಸ ಬಬಲಾದಿ ಮಠದಲ್ಲಿ 2026ರ ಕಾಲ ಜ್ಞಾನ ಸಾರಿದ ಸದಾಶಿವ ಅಜ್ಜನ್ನವರು ಹಾಗೂ ಶಿವರುದ್ರಯ್ಯ ಮುತ್ಯಾ
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    17 hrs ago
  • ವಿಜಯಪುರ: ಬಾಲಕಿ ಮೇಲೆ ನಾಯಿಗಳ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆ ವಿಜಯಪುರದಲ್ಲಿ ಬೀದಿ ನಾಯಿಗಳ ದಾಳಿಗೆ 6 ವರ್ಷದ ಅನ್ವಿತಾ ಮಲ್ಲಿಕಾರ್ಜುನ ಶೆಟ್ಟಿ ಎಂಬ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಕೆ ಎಸ್ ಆರ್ ಟಿ ಸಿ ಕಾಲೋನಿಯಲ್ಲಿ ಅಂಗಡಿಗೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿಗಳ ದಾಳಿಯಿಂದ ಬಾಲಕಿಯ ಕಣ್ಣು, ಕೈ-ಕಾಲು, ಬೆನ್ನಿಗೆ ಗಾಯಗಳಾಗಿದ್ದು, ಕಣ್ಣಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಮತ್ತು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
    1
    ವಿಜಯಪುರ: ಬಾಲಕಿ ಮೇಲೆ ನಾಯಿಗಳ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆ
ವಿಜಯಪುರದಲ್ಲಿ ಬೀದಿ ನಾಯಿಗಳ ದಾಳಿಗೆ 6 ವರ್ಷದ ಅನ್ವಿತಾ ಮಲ್ಲಿಕಾರ್ಜುನ ಶೆಟ್ಟಿ ಎಂಬ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಕೆ ಎಸ್ ಆರ್ ಟಿ ಸಿ ಕಾಲೋನಿಯಲ್ಲಿ ಅಂಗಡಿಗೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿಗಳ ದಾಳಿಯಿಂದ ಬಾಲಕಿಯ ಕಣ್ಣು, ಕೈ-ಕಾಲು, ಬೆನ್ನಿಗೆ ಗಾಯಗಳಾಗಿದ್ದು, ಕಣ್ಣಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಮತ್ತು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    13 hrs ago
  • ​ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಿದರು.​ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡುರಾವ್ ಅವರ ಅಮೃತ ಹಸ್ತದಿಂದ ಈ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಅವರೊಂದಿಗೆ ಶಾಸಕ ಶ್ರೀ ವಿಶ್ವಾಸ ವೈದ್ಯ ಅವರು ಸೇರಿ ಚಾಲನೆ ನೀಡಿದರು.​ಈ ಸಂದರ್ಭದಲ್ಲಿ ಮಾತನಾಡಿ ಸವದತ್ತಿ ತಾಲೂಕಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಉತ್ತಮ ಚಿಕಿತ್ಸೆ ಸ್ಥಳೀಯವಾಗಿಯೇ ಸಿಗಬೇಕು ಎನ್ನುವುದು ನಮ್ಮ ಗುರಿ. ಈ 100 ಹಾಸಿಗೆಗಳ ಆಸ್ಪತ್ರೆಯ ವಿಸ್ತರಣೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.ಆಸ್ಪತ್ರೆಯ ನವೀಕರಣದೊಂದಿಗೆ ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ರೂಪಿಸಲಾಗುವುದು.​ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರಿಯಲಿದೆ.ಅಂದಾಜು ವೆಚ್ಚ ರೂ. 31 ಕೋಟಿ.​ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ​ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಿದರು.​ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡುರಾವ್ ಅವರ ಅಮೃತ ಹಸ್ತದಿಂದ ಈ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಅವರೊಂದಿಗೆ ಶಾಸಕ ಶ್ರೀ ವಿಶ್ವಾಸ ವೈದ್ಯ ಅವರು ಸೇರಿ ಚಾಲನೆ ನೀಡಿದರು.​ಈ ಸಂದರ್ಭದಲ್ಲಿ ಮಾತನಾಡಿ ಸವದತ್ತಿ ತಾಲೂಕಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಉತ್ತಮ ಚಿಕಿತ್ಸೆ ಸ್ಥಳೀಯವಾಗಿಯೇ ಸಿಗಬೇಕು ಎನ್ನುವುದು ನಮ್ಮ ಗುರಿ. ಈ 100 ಹಾಸಿಗೆಗಳ ಆಸ್ಪತ್ರೆಯ ವಿಸ್ತರಣೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.ಆಸ್ಪತ್ರೆಯ ನವೀಕರಣದೊಂದಿಗೆ ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ರೂಪಿಸಲಾಗುವುದು.​ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರಿಯಲಿದೆ.ಅಂದಾಜು ವೆಚ್ಚ ರೂ. 31 ಕೋಟಿ.​ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ  ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    user_Arun
    Arun
    Savadatti, Belagavi•
    22 hrs ago
  • ಬಾಗಲಕೋಟೆ: ಜಿಲ್ಲೆಯ ತೇರದಾಳ ಪಟ್ಟಣದ ಲಿವಿಂಗ್ ಜೋಡಿಯೊಂದು ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆತಂಕ ಮೂಡಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಜೋಡಿಯನ್ನು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಜೋಡಿ ಸಾವು-ಬದುಕಿನ ನಡುವೆ ನರಳಾಡುತ್ತಿದೆ. 25 ವರ್ಷದ ಅಕ್ಷತಾ ಶ್ರೀಶೈಲ ಸತ್ತಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 45 ವರ್ಷದ ಗುರುಪಾದಯ್ಯ ಮಠಪತಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲು ಗಾಯಾಳುಗಳನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಕ್ಷತಾ ಅವರ ದೇಹದ ಸುಮಾರು 90 ಶೇಕಡಾ ಭಾಗ ಸುಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
    1
    ಬಾಗಲಕೋಟೆ: ಜಿಲ್ಲೆಯ ತೇರದಾಳ ಪಟ್ಟಣದ ಲಿವಿಂಗ್ ಜೋಡಿಯೊಂದು ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆತಂಕ ಮೂಡಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಜೋಡಿಯನ್ನು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಯಲ್ಲಿ ಜೋಡಿ ಸಾವು-ಬದುಕಿನ ನಡುವೆ ನರಳಾಡುತ್ತಿದೆ. 25 ವರ್ಷದ ಅಕ್ಷತಾ ಶ್ರೀಶೈಲ ಸತ್ತಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 45 ವರ್ಷದ ಗುರುಪಾದಯ್ಯ ಮಠಪತಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊದಲು ಗಾಯಾಳುಗಳನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಕ್ಷತಾ ಅವರ ದೇಹದ ಸುಮಾರು 90 ಶೇಕಡಾ ಭಾಗ ಸುಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.