logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಬ್ಬಳ್ಳಿಗೆ ಪ್ರಥಮ ಬಾರಿಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್: ಕ್ಷೇತ್ರವನ್ನು ಬರಗಾಲ ಪೀಡಿತ ಎಂದು ಘೋಷಿಸಲು ಶಾಸಕ ಎನ್‌.ಎಚ್. ಕೋನರೆಡ್ಡಿ ಮನವಿ​ಹುಬ್ಬಳ್ಳಿ ಮುಖ್ಯಮಂತ್ರಿ ಆದ ಬಳಿಕ ಪ್ರಥಮ ಬಾರಿಗೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್. ಕೋನರೆಡ್ಡಿ ಅವರು ಆತ್ಮೀಯವಾಗಿ ಸ್ವಾಗತ ಕೋರಿದರು. ​ನಗರಕ್ಕೆ ಆಗಮಿಸಿದ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಿದ ಶಾಸಕರು, ತಮ್ಮ ಕ್ಷೇತ್ರದ ಸದ್ಯದ ಪರಿಸ್ಥಿತಿಯ ಕುರಿತು ಸುದೀರ್ಘ ಚರ್ಚೆ ನಡೆಸಿದರು. ​ಶಾಸಕ ಎನ್.ಎಚ್. ಕೋನರೆಡ್ಡಿ ಅವರ ಮನವಿಯನ್ನು ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು, ಕ್ಷೇತ್ರದ ರೈತರ ಸಮಸ್ಯೆಗೆ ಧನಾತ್ಮಕವಾಗಿ ಸ್ಪಂದಿಸುವುದಾಗಿ ಮತ್ತು ಈ ಕುರಿತು ಶೀಘ್ರವೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

15 hrs ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
15 hrs ago

ಹುಬ್ಬಳ್ಳಿಗೆ ಪ್ರಥಮ ಬಾರಿಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್: ಕ್ಷೇತ್ರವನ್ನು ಬರಗಾಲ ಪೀಡಿತ ಎಂದು ಘೋಷಿಸಲು ಶಾಸಕ ಎನ್‌.ಎಚ್. ಕೋನರೆಡ್ಡಿ ಮನವಿ​ಹುಬ್ಬಳ್ಳಿ ಮುಖ್ಯಮಂತ್ರಿ ಆದ ಬಳಿಕ ಪ್ರಥಮ ಬಾರಿಗೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್. ಕೋನರೆಡ್ಡಿ ಅವರು ಆತ್ಮೀಯವಾಗಿ ಸ್ವಾಗತ ಕೋರಿದರು. ​ನಗರಕ್ಕೆ ಆಗಮಿಸಿದ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಿದ ಶಾಸಕರು, ತಮ್ಮ ಕ್ಷೇತ್ರದ ಸದ್ಯದ ಪರಿಸ್ಥಿತಿಯ ಕುರಿತು ಸುದೀರ್ಘ ಚರ್ಚೆ ನಡೆಸಿದರು. ​ಶಾಸಕ ಎನ್.ಎಚ್. ಕೋನರೆಡ್ಡಿ ಅವರ ಮನವಿಯನ್ನು ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು, ಕ್ಷೇತ್ರದ ರೈತರ ಸಮಸ್ಯೆಗೆ ಧನಾತ್ಮಕವಾಗಿ ಸ್ಪಂದಿಸುವುದಾಗಿ ಮತ್ತು ಈ ಕುರಿತು ಶೀಘ್ರವೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

More news from ಕರ್ನಾಟಕ and nearby areas
  • ಗೋಲ್ಡನ್ ಚಿಕನ್ ಫ್ಯಾಕ್ಟರಿ ವಿರುದ್ಧ ಆರೋಪ ಮಾಡಿದ ರೈತನ ಜೊತೆಗೆ ಕೈಜೋಡಿಸಿದ ತಾಲೂಕಿನ ರೈತ ಮುಖಂಡರು. ರಾಣೆಬೆನ್ನೂರು ತಾಲೂಕಿನ ತೆರದಲ್ಲಿ ಬೆಳೆ ಇರುವ ಗೋಲ್ಡನ್ ಚಿಕನ್ ಫ್ಯಾಕ್ಟರಿ ವಿರುದ್ಧ ಆರೋಪ ಮಾಡಿದ ರೈತನ ಜೊತೆಗೆ ಕೈಜೋಡಿಸಿದ ತಾಲೂಕಿನ ರೈತ ಮುಖಂಡ ಶಿವಪುತ್ರಪ್ಪ ಮಲ್ಲಾಡದ ನ್ಯಾಯ ಸಿಗುವವರೆಗೂ ಈ ಕುಟುಂಬದ ಬೆನ್ನೆಲುಬಾಗಿ ನಿಲ್ಲುತ್ತೇವೆ.
    1
    ಗೋಲ್ಡನ್ ಚಿಕನ್ ಫ್ಯಾಕ್ಟರಿ ವಿರುದ್ಧ ಆರೋಪ ಮಾಡಿದ ರೈತನ ಜೊತೆಗೆ ಕೈಜೋಡಿಸಿದ ತಾಲೂಕಿನ ರೈತ ಮುಖಂಡರು.
ರಾಣೆಬೆನ್ನೂರು ತಾಲೂಕಿನ ತೆರದಲ್ಲಿ ಬೆಳೆ ಇರುವ ಗೋಲ್ಡನ್ ಚಿಕನ್ ಫ್ಯಾಕ್ಟರಿ ವಿರುದ್ಧ ಆರೋಪ ಮಾಡಿದ ರೈತನ ಜೊತೆಗೆ ಕೈಜೋಡಿಸಿದ ತಾಲೂಕಿನ ರೈತ ಮುಖಂಡ ಶಿವಪುತ್ರಪ್ಪ ಮಲ್ಲಾಡದ ನ್ಯಾಯ ಸಿಗುವವರೆಗೂ ಈ ಕುಟುಂಬದ ಬೆನ್ನೆಲುಬಾಗಿ ನಿಲ್ಲುತ್ತೇವೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    15 hrs ago
  • ಇಂದು ಬಳ್ಳಾರಿ ಚಲೋ ಯಾತ್ರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಜಿ, ಶ್ರೀ ಎನ್. ರವಿಕುಮಾರ್ ಜಿ, ಶ್ರೀ ಸಿ.ಟಿ. ರವಿ ಜಿ, ಶ್ರೀ ಶ್ರೀರಾಮುಲು ಜಿ ಸೇರಿದಂತೆ ಅನೇಕ ಹಿರಿಯ ನಾಯಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನಕ್ಕೆ ಧ್ವನಿಗೂಡಿಸಿದೆ. ಇಂದು ಬಳ್ಳಾರಿ ಚಲೋ ಯಾತ್ರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಜಿ, ಶ್ರೀ ಎನ್. ರವಿಕುಮಾರ್ ಜಿ, ಶ್ರೀ ಸಿ.ಟಿ. ರವಿ ಜಿ, ಶ್ರೀ ಶ್ರೀರಾಮುಲು ಜಿ ಸೇರಿದಂತೆ ಅನೇಕ ಹಿರಿಯ ನಾಯಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನಕ್ಕೆ ಧ್ವನಿಗೂಡಿಸಿದೆ. ಕರ್ನಾಟಕದ ರೈತರು, ಮಹಿಳೆಯರು, ದಲಿತರು, ಯುವಕರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಕಾಂಗ್ರೆಸ್ ಸರ್ಕಾರ ಇಂದು ಆಡಳಿತ ನಡೆಸುವುದಕ್ಕಿಂತ ಭ್ರಷ್ಟಾಚಾರ ಮತ್ತು ಲೂಟಿಯಲ್ಲಿ ತೊಡಗಿದೆ ಎಂಬುದು ರಾಜ್ಯದ ಜನರ ಆರೋಪವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ, ರೈತರ ಸಮಸ್ಯೆಗಳ ನಿರ್ಲಕ್ಷ್ಯ, ಮಹಿಳಾ ವಿರೋಧಿ ನೀತಿಗಳು, ದಲಿತ ವಿರೋಧಿ ನಡೆ, ಯುವಕರಿಗೆ ಉದ್ಯೋಗದ ಕೊರತೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿನ ವೈಫಲ್ಯ—ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ. ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ರೈತರ ಕಣ್ಣೀರನ್ನು ಒರೆಸಬೇಕಾದ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ. ಇದು ಕೇವಲ ಒಂದು ಯಾತ್ರೆಯಲ್ಲ; ಇದು ರೈತರ ಧ್ವನಿ, ಯುವಕರ ಧ್ವನಿ, ಮಹಿಳೆಯರ ಧ್ವನಿ, ದಲಿತರ ಧ್ವನಿ ಮತ್ತು ಕರ್ನಾಟಕದ ಸಾಮಾನ್ಯ ಜನರ ಧ್ವನಿ! ಜನವಿರೋಧಿ, ರೈತವಿರೋಧಿ ಮತ್ತು ಭ್ರಷ್ಟಾಚಾರದ ಆರೋಪಗಳಿಂದ ಕೂಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರ. ಬಳ್ಳಾರಿ ಚಲೋ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಸಂದೇಶ — ಜನರ ಹಕ್ಕುಗಳಿಗಾಗಿ, ಕರ್ನಾಟಕದ ಅಭಿವೃದ್ಧಿಗಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಸದಾ ಮುಂದುವರಿಯಲಿದೆ! 🚩 ಬಳ್ಳಾರಿ ಚಲೋ — ಜನರಿಗಾಗಿ, ನ್ಯಾಯಕ್ಕಾಗಿ, ಕರ್ನಾಟಕಕ್ಕಾಗಿ! 🚩
    1
    ಇಂದು ಬಳ್ಳಾರಿ ಚಲೋ ಯಾತ್ರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಜಿ, ಶ್ರೀ ಎನ್. ರವಿಕುಮಾರ್ ಜಿ, ಶ್ರೀ ಸಿ.ಟಿ. ರವಿ ಜಿ, ಶ್ರೀ ಶ್ರೀರಾಮುಲು ಜಿ ಸೇರಿದಂತೆ ಅನೇಕ ಹಿರಿಯ ನಾಯಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನಕ್ಕೆ ಧ್ವನಿಗೂಡಿಸಿದೆ.
ಇಂದು ಬಳ್ಳಾರಿ ಚಲೋ ಯಾತ್ರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಜಿ, ಶ್ರೀ ಎನ್. ರವಿಕುಮಾರ್ ಜಿ, ಶ್ರೀ ಸಿ.ಟಿ. ರವಿ ಜಿ, ಶ್ರೀ ಶ್ರೀರಾಮುಲು ಜಿ ಸೇರಿದಂತೆ ಅನೇಕ ಹಿರಿಯ ನಾಯಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನಕ್ಕೆ ಧ್ವನಿಗೂಡಿಸಿದೆ.
ಕರ್ನಾಟಕದ ರೈತರು, ಮಹಿಳೆಯರು, ದಲಿತರು, ಯುವಕರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಕಾಂಗ್ರೆಸ್ ಸರ್ಕಾರ ಇಂದು ಆಡಳಿತ ನಡೆಸುವುದಕ್ಕಿಂತ ಭ್ರಷ್ಟಾಚಾರ ಮತ್ತು ಲೂಟಿಯಲ್ಲಿ ತೊಡಗಿದೆ ಎಂಬುದು ರಾಜ್ಯದ ಜನರ ಆರೋಪವಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ, ರೈತರ ಸಮಸ್ಯೆಗಳ ನಿರ್ಲಕ್ಷ್ಯ, ಮಹಿಳಾ ವಿರೋಧಿ ನೀತಿಗಳು, ದಲಿತ ವಿರೋಧಿ ನಡೆ, ಯುವಕರಿಗೆ ಉದ್ಯೋಗದ ಕೊರತೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿನ ವೈಫಲ್ಯ—ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ.
ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ರೈತರ ಕಣ್ಣೀರನ್ನು ಒರೆಸಬೇಕಾದ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ.
ಇದು ಕೇವಲ ಒಂದು ಯಾತ್ರೆಯಲ್ಲ; ಇದು ರೈತರ ಧ್ವನಿ, ಯುವಕರ ಧ್ವನಿ, ಮಹಿಳೆಯರ ಧ್ವನಿ, ದಲಿತರ ಧ್ವನಿ ಮತ್ತು ಕರ್ನಾಟಕದ ಸಾಮಾನ್ಯ ಜನರ ಧ್ವನಿ!
ಜನವಿರೋಧಿ, ರೈತವಿರೋಧಿ ಮತ್ತು ಭ್ರಷ್ಟಾಚಾರದ ಆರೋಪಗಳಿಂದ ಕೂಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರ.
ಬಳ್ಳಾರಿ ಚಲೋ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಸಂದೇಶ — ಜನರ ಹಕ್ಕುಗಳಿಗಾಗಿ, ಕರ್ನಾಟಕದ ಅಭಿವೃದ್ಧಿಗಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಸದಾ ಮುಂದುವರಿಯಲಿದೆ!
🚩 ಬಳ್ಳಾರಿ ಚಲೋ — ಜನರಿಗಾಗಿ, ನ್ಯಾಯಕ್ಕಾಗಿ, ಕರ್ನಾಟಕಕ್ಕಾಗಿ! 🚩
    user_B Patil B Patil
    B Patil B Patil
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    5 hrs ago
  • ಸರ್ಕಾರಿ ಕಚೇರಿಗಳಲ್ಲಿ ವಿಶ್ವಕರ್ಮ ಜಯಂತಿ ಆಚರಣೆಗೆ ಅಧಿಕೃತ ಆದೇಶಕ್ಕೆ ಆಗ್ರಹ ಖಾನಾಪುರ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆಗಳು, ಪೊಲೀಸ್ ಠಾಣೆಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಯನ್ನು ಅಧಿಕೃತವಾಗಿ ಆಚರಿಸಲು ಸ್ಪಷ್ಟ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ವಿಶ್ವಕರ್ಮ ಸಮಾಜ ವಿಕಾಸ ಸಂಘಟನೆ ವತಿಯಿಂದ ಖಾನಾಪುರ ತಾಲೂಕು ತಹಶೀಲ್ದಾರ್ ಗ್ರೀತು ಸಾಹೇಬ್ ಅವರಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರಿ ಕಚೇರಿಗಳಲ್ಲಿ ವಿಶ್ವಕರ್ಮ ಜಯಂತಿ ಆಚರಣೆಗೆ ಅಧಿಕೃತ ಆದೇಶಕ್ಕೆ ಆಗ್ರಹ ಖಾನಾಪುರ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆಗಳು, ಪೊಲೀಸ್ ಠಾಣೆಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಯನ್ನು ಅಧಿಕೃತವಾಗಿ ಆಚರಿಸಲು ಸ್ಪಷ್ಟ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ವಿಶ್ವಕರ್ಮ ಸಮಾಜ ವಿಕಾಸ ಸಂಘಟನೆ ವತಿಯಿಂದ ಖಾನಾಪುರ ತಾಲೂಕು ತಹಶೀಲ್ದಾರ್ ಗ್ರೀತು ಸಾಹೇಬ್ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಖಾನಾಪುರ ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿವರ್ಷ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಗುತ್ತಿದೆ. ಆದರೆ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳು, ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು, ಪೊಲೀಸ್ ಠಾಣೆಗಳು ಹಾಗೂ ಇತರೆ ಸರ್ಕಾರಿ ಕಚೇರಿಗಳಲ್ಲಿ ಮಾತ್ರ ಆಚರಣೆ ನಡೆಯುತ್ತಿದ್ದು, ಇನ್ನೂ ಕೆಲವು ಕಚೇರಿಗಳಲ್ಲಿ ಆಚರಣೆ ನಡೆಯುತ್ತಿಲ್ಲ ಎಂದು ಸಂಘಟನೆಯ ಪದಾಧಿಕಾರಿಗಳು ಗಮನಕ್ಕೆ ತಂದರು. ಆದ್ದರಿಂದ ಸೆಪ್ಟೆಂಬರ್ 17ರಂದು ತಾಲೂಕಿನಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ವಿಶ್ವಕರ್ಮ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ಸ್ಪಷ್ಟ ಅಧಿಕೃತ ಆದೇಶ ಹೊರಡಿಸಬೇಕು ಎಂದು ಮನವಿ ಪತ್ರದ ಮೂಲಕ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮನ್ಮಂದಿರ ಸೊಸೈಟಿ ಖಾನಾಪುರ ಅಧ್ಯಕ್ಷ ಬರಮನಿ ಪಾಟೀಲ, ವಿಶ್ವಕರ್ಮ ಸಮಾಜ ವಿಕಾಸ ಸಂಘಟನೆ ಖಾನಾಪುರ ತಾಲೂಕಾಧ್ಯಕ್ಷ ಜ್ಯೋತಿಬಾ ಸುತಾರ್, ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮನೋಹರ ಅಣ್ಣಾ ಕದಂ, ಬಿಜೆಪಿ ಮುಖಂಡರಾದ ಸದಾನಂದ ಹೊಸೂರಕರ್, ಪ್ರಕಾಶ ಅಣ್ಣಾ ನೀಲಸಕರ್ ಹಾಗೂ ವಿನಾಯಕ ಅಣ್ಣಾ ನೀಲಾಸಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿಶ್ವಕರ್ಮ ಸಮಾಜ ವಿಕಾಸ ಸಂಘಟನೆಯ ಪದಾಧಿಕಾರಿಗಳಾದ ಭೀಷ್ಟಪ್ಪ ಬಡಿಗೇರ್, ಶ್ರೀರಂಗ ಸುತಾರ್, ಕೃಷ್ಣ ಸುತಾರ್, ವಿನಾಯಕ ಕಂಬಾರ, ಮಹೇಶ ಪಾಟೀಲ್, ಧರ್ಮರಾಜ್ ಪಾಟೀಲ್, ಬಾಬು ಸುತಾರ್, ಸುಶಾಂತ್ ಸುತಾರ್, ವಿಜಯ್ ಸುತಾರ್, ದರ್ಶನ್ ಸುತಾರ್, ವಾಸುದೇವ್ ಲೋಹರ್, ಮಹಾಂತೇಶ ಸುತಾರ್ ಸೇರಿದಂತೆ ಅಪಾರ ಸಂಖ್ಯೆಯ ಸಮಾಜ ಬಾಂಧವರು ಉಪಸ್ಥಿತರಿದ್ದರು.
    1
    ಸರ್ಕಾರಿ ಕಚೇರಿಗಳಲ್ಲಿ ವಿಶ್ವಕರ್ಮ ಜಯಂತಿ ಆಚರಣೆಗೆ ಅಧಿಕೃತ ಆದೇಶಕ್ಕೆ ಆಗ್ರಹ

ಖಾನಾಪುರ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆಗಳು, ಪೊಲೀಸ್ ಠಾಣೆಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಯನ್ನು ಅಧಿಕೃತವಾಗಿ ಆಚರಿಸಲು ಸ್ಪಷ್ಟ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ವಿಶ್ವಕರ್ಮ ಸಮಾಜ ವಿಕಾಸ ಸಂಘಟನೆ ವತಿಯಿಂದ ಖಾನಾಪುರ ತಾಲೂಕು ತಹಶೀಲ್ದಾರ್ ಗ್ರೀತು ಸಾಹೇಬ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರಿ ಕಚೇರಿಗಳಲ್ಲಿ ವಿಶ್ವಕರ್ಮ ಜಯಂತಿ ಆಚರಣೆಗೆ ಅಧಿಕೃತ ಆದೇಶಕ್ಕೆ ಆಗ್ರಹ
ಖಾನಾಪುರ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆಗಳು, ಪೊಲೀಸ್ ಠಾಣೆಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಯನ್ನು ಅಧಿಕೃತವಾಗಿ ಆಚರಿಸಲು ಸ್ಪಷ್ಟ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ವಿಶ್ವಕರ್ಮ ಸಮಾಜ ವಿಕಾಸ ಸಂಘಟನೆ ವತಿಯಿಂದ ಖಾನಾಪುರ ತಾಲೂಕು ತಹಶೀಲ್ದಾರ್ ಗ್ರೀತು ಸಾಹೇಬ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಖಾನಾಪುರ ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿವರ್ಷ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಗುತ್ತಿದೆ. ಆದರೆ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳು, ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು, ಪೊಲೀಸ್ ಠಾಣೆಗಳು ಹಾಗೂ ಇತರೆ ಸರ್ಕಾರಿ ಕಚೇರಿಗಳಲ್ಲಿ ಮಾತ್ರ ಆಚರಣೆ ನಡೆಯುತ್ತಿದ್ದು, ಇನ್ನೂ ಕೆಲವು ಕಚೇರಿಗಳಲ್ಲಿ ಆಚರಣೆ ನಡೆಯುತ್ತಿಲ್ಲ ಎಂದು ಸಂಘಟನೆಯ ಪದಾಧಿಕಾರಿಗಳು ಗಮನಕ್ಕೆ ತಂದರು.
ಆದ್ದರಿಂದ ಸೆಪ್ಟೆಂಬರ್ 17ರಂದು ತಾಲೂಕಿನಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ವಿಶ್ವಕರ್ಮ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ಸ್ಪಷ್ಟ ಅಧಿಕೃತ ಆದೇಶ ಹೊರಡಿಸಬೇಕು ಎಂದು ಮನವಿ ಪತ್ರದ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮನ್ಮಂದಿರ ಸೊಸೈಟಿ ಖಾನಾಪುರ ಅಧ್ಯಕ್ಷ ಬರಮನಿ ಪಾಟೀಲ, ವಿಶ್ವಕರ್ಮ ಸಮಾಜ ವಿಕಾಸ ಸಂಘಟನೆ ಖಾನಾಪುರ ತಾಲೂಕಾಧ್ಯಕ್ಷ ಜ್ಯೋತಿಬಾ ಸುತಾರ್, ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮನೋಹರ ಅಣ್ಣಾ ಕದಂ, ಬಿಜೆಪಿ ಮುಖಂಡರಾದ ಸದಾನಂದ ಹೊಸೂರಕರ್, ಪ್ರಕಾಶ ಅಣ್ಣಾ ನೀಲಸಕರ್ ಹಾಗೂ ವಿನಾಯಕ ಅಣ್ಣಾ ನೀಲಾಸಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಶ್ವಕರ್ಮ ಸಮಾಜ ವಿಕಾಸ ಸಂಘಟನೆಯ ಪದಾಧಿಕಾರಿಗಳಾದ ಭೀಷ್ಟಪ್ಪ ಬಡಿಗೇರ್, ಶ್ರೀರಂಗ ಸುತಾರ್, ಕೃಷ್ಣ ಸುತಾರ್, ವಿನಾಯಕ ಕಂಬಾರ, ಮಹೇಶ ಪಾಟೀಲ್, ಧರ್ಮರಾಜ್ ಪಾಟೀಲ್, ಬಾಬು ಸುತಾರ್, ಸುಶಾಂತ್ ಸುತಾರ್, ವಿಜಯ್ ಸುತಾರ್, ದರ್ಶನ್ ಸುತಾರ್, ವಾಸುದೇವ್ ಲೋಹರ್, ಮಹಾಂತೇಶ ಸುತಾರ್ ಸೇರಿದಂತೆ ಅಪಾರ ಸಂಖ್ಯೆಯ ಸಮಾಜ ಬಾಂಧವರು ಉಪಸ್ಥಿತರಿದ್ದರು.
    user_ನಮ್ಮ ಬೆಳಗಾವಿ  ವಾರ್ತಾ
    ನಮ್ಮ ಬೆಳಗಾವಿ ವಾರ್ತಾ
    Photographer ಬೆಳಗಾವಿ, ಬೆಳಗಾವಿ, ಕರ್ನಾಟಕ•
    4 hrs ago
  • ಶಿವಮೊಗ್ಗ ಫುಡ್ ಕೋರ್ಟ್‌ಗೆ ಎಸಿ ದಿಢೀರ್ ಎಂಟ್ರಿ; ವ್ಯಾಪಾರಸ್ಥರಲ್ಲಿ ಸಂಚಲನ! ಫುಡ್ ಕೋರ್ಟ್‌ನಲ್ಲಿ ಹೈಜೀನ್ ಚೆಕ್; ಅಂಗಡಿ ಮಾಲೀಕರಿಗೆ 15 ದಿನಗಳ ಗಡುವು
    1
    ಶಿವಮೊಗ್ಗ ಫುಡ್ ಕೋರ್ಟ್‌ಗೆ ಎಸಿ ದಿಢೀರ್ ಎಂಟ್ರಿ; ವ್ಯಾಪಾರಸ್ಥರಲ್ಲಿ ಸಂಚಲನ!
ಫುಡ್ ಕೋರ್ಟ್‌ನಲ್ಲಿ ಹೈಜೀನ್ ಚೆಕ್; ಅಂಗಡಿ ಮಾಲೀಕರಿಗೆ 15 ದಿನಗಳ ಗಡುವು
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • ಜನಾರ್ದನ ರೆಡ್ಡಿ ಇತಿಹಾಸ ನನಗೆ 2002ರಿಂದ ಗೊತ್ತು– ಸಂಸದ ಈ. ತುಕಾರಾಂ ಕೂಡ್ಲಿಗಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಮೊದಲು ಏನಾಗಿದ್ದರು, ನಂತರ ಏನಾದರು, ಯಾವ ಕಂಪೌಂಡ್‌ಗೆ ಬಂದು ಏನು ಕೇಳಿದ್ದರು, ಆಗ ನಾನು ಅವರಿಗೆ ಯಾವ ರೀತಿಯ ಸಹಾಯ ಮಾಡಿದ್ದೆ ಎಂಬುದು ನನಗೆ ಗೊತ್ತಿದೆ ಎಂದು ಬಳ್ಳಾರಿ ಸಂಸದ ಈ. ತುಕಾರಾಂ ಹೇಳಿದರು. ಕೂಡ್ಲಿಗಿ ಪಟ್ಟಣದಲ್ಲಿ ಸೆ.5ರಂದು ನಡೆಯಲಿರುವ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “2002ರಿಂದಲೂ ಜನಾರ್ದನ ರೆಡ್ಡಿ ಅವರ ಇತಿಹಾಸ ನನಗೆ ಗೊತ್ತು. ನಾನು ಅಕೌಂಟೆಂಟ್ ಆಗಿದ್ದಾಗಿನಿಂದ ಅವರನ್ನು ನೋಡುತ್ತಿದ್ದೇನೆ” ಎಂದರು. ಜನಾರ್ದನ ರೆಡ್ಡಿ ಅವರು ಯಾವ ಮೈನಿಂಗ್ ವಿಚಾರದಲ್ಲಿ ಏನು ಮಾಡಿದ್ದಾರೆ ಎಂಬುದೂ ನನಗೆ ತಿಳಿದಿದೆ. ಅವರ ರಾಜಕೀಯ ಜೀವನದ ಹಿಂದಿನ ವಿಚಾರಗಳ ಬಗ್ಗೆ ಮಾತನಾಡುವಷ್ಟು ಮಾಹಿತಿ ನನ್ನಲ್ಲಿದೆ. ಆದರೆ ನಾವು ಜನರಿಗೆ ಲೆಕ್ಕ ನೀಡಬೇಕೇ ಹೊರತು, ಜನಾರ್ದನ ರೆಡ್ಡಿ ಹೇಳಿದ ಪ್ರತಿಯೊಂದು ಮಾತಿಗೂ ಉತ್ತರ ನೀಡುತ್ತಾ ಕೂರುವ ಅಗತ್ಯವಿಲ್ಲ ಎಂದು ತುಕಾರಾಂ ತಿರುಗೇಟು ನೀಡಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಕ್ಷೇತ್ರದ ಅಭಿವೃದ್ಧಿ ಮಾಡುವುದು ಹಾಗೂ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದೇ ನಮ್ಮ ಮುಖ್ಯ ಉದ್ದೇಶ. ರಾಜಕೀಯವಾಗಿ ವೈಯಕ್ತಿಕ ಆರೋಪ-ಪ್ರತ್ಯಾರೋಪಗಳಿಗಿಂತ ಜನರ ಮುಂದೆ ನಮ್ಮ ಕೆಲಸದ ಲೆಕ್ಕ ನೀಡುವುದು ಮುಖ್ಯ ಎಂದು ಅವರು ಹೇಳಿದರು.
    1
    ಜನಾರ್ದನ ರೆಡ್ಡಿ ಇತಿಹಾಸ ನನಗೆ 2002ರಿಂದ ಗೊತ್ತು– ಸಂಸದ ಈ. ತುಕಾರಾಂ

ಕೂಡ್ಲಿಗಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಮೊದಲು ಏನಾಗಿದ್ದರು, ನಂತರ ಏನಾದರು, ಯಾವ ಕಂಪೌಂಡ್‌ಗೆ ಬಂದು ಏನು ಕೇಳಿದ್ದರು, ಆಗ ನಾನು ಅವರಿಗೆ ಯಾವ ರೀತಿಯ ಸಹಾಯ ಮಾಡಿದ್ದೆ ಎಂಬುದು ನನಗೆ ಗೊತ್ತಿದೆ ಎಂದು ಬಳ್ಳಾರಿ ಸಂಸದ ಈ. ತುಕಾರಾಂ ಹೇಳಿದರು.
ಕೂಡ್ಲಿಗಿ ಪಟ್ಟಣದಲ್ಲಿ ಸೆ.5ರಂದು ನಡೆಯಲಿರುವ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “2002ರಿಂದಲೂ ಜನಾರ್ದನ ರೆಡ್ಡಿ ಅವರ ಇತಿಹಾಸ ನನಗೆ ಗೊತ್ತು. ನಾನು ಅಕೌಂಟೆಂಟ್ ಆಗಿದ್ದಾಗಿನಿಂದ ಅವರನ್ನು ನೋಡುತ್ತಿದ್ದೇನೆ” ಎಂದರು.
ಜನಾರ್ದನ ರೆಡ್ಡಿ ಅವರು ಯಾವ ಮೈನಿಂಗ್ ವಿಚಾರದಲ್ಲಿ ಏನು ಮಾಡಿದ್ದಾರೆ ಎಂಬುದೂ ನನಗೆ ತಿಳಿದಿದೆ. ಅವರ ರಾಜಕೀಯ ಜೀವನದ ಹಿಂದಿನ ವಿಚಾರಗಳ ಬಗ್ಗೆ ಮಾತನಾಡುವಷ್ಟು ಮಾಹಿತಿ ನನ್ನಲ್ಲಿದೆ. ಆದರೆ ನಾವು ಜನರಿಗೆ ಲೆಕ್ಕ ನೀಡಬೇಕೇ ಹೊರತು, ಜನಾರ್ದನ ರೆಡ್ಡಿ ಹೇಳಿದ ಪ್ರತಿಯೊಂದು ಮಾತಿಗೂ ಉತ್ತರ ನೀಡುತ್ತಾ ಕೂರುವ ಅಗತ್ಯವಿಲ್ಲ ಎಂದು ತುಕಾರಾಂ ತಿರುಗೇಟು ನೀಡಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಕ್ಷೇತ್ರದ ಅಭಿವೃದ್ಧಿ ಮಾಡುವುದು ಹಾಗೂ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದೇ ನಮ್ಮ ಮುಖ್ಯ ಉದ್ದೇಶ. ರಾಜಕೀಯವಾಗಿ ವೈಯಕ್ತಿಕ ಆರೋಪ-ಪ್ರತ್ಯಾರೋಪಗಳಿಗಿಂತ ಜನರ ಮುಂದೆ ನಮ್ಮ ಕೆಲಸದ ಲೆಕ್ಕ ನೀಡುವುದು ಮುಖ್ಯ ಎಂದು ಅವರು ಹೇಳಿದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    6 hrs ago
  • *ಕೂಡ್ಲಿಗಿ : " ಜನ ಸೇವಾ ಆಂದೋಲನ " ಯಶಸ್ವಿಗೊಳಿಸಿ - ಸಚಿವ ಬಸಂತಪ್ಪ ಕರೆ*_ ವಿಜಯನಗರ ಜಿಲ್ಲೆ ಕೂಡ್ಲಿಗಿ : ಮುಖ್ಯಮಂತ್ರಿಗಳ ವಿನೂತನ ಕನಸಿನ ಜನಪರ ಕಾರ್ಯಕ್ರಮ , ಜನಸೇವ‍ಾ ಆಂದೋಲನಕ್ಕೆ ಪಟ್ಟಣದಲ್ಲಿ ಮುಖ್ಯಮಂತ್ರಿಗಳು ಸೆ 5ರಂದು ಚಾಲನೆ ನೀಡಲಿದ್ದಾರೆ. ಪಕ್ಷದ ಮುಖಂಡರು ಕಾರ್ಯಕರ್ತರು ಸಕ್ರೀಯವಾಗಿ ಪಾಲ್ಗೊಂಡು ಯಶಸ್ವೀಗೊಳಿಸಿ ಎಂದು ಉಸ್ತುವಾರಿ ಸಚಿವರಾದ ಬಸಂತಪ್ಪ ಕರೆ ನೀಡಿದರು. ಅವರು ಸೆ 1ರಂದು ಪೂರ್ವಭಾವಿ ಸಭೆಯಲ್ಲಿ ಮಾತನಾಡಿ , ಕ್ಷೇತ್ರದ ಪ್ರತಿಕುಟುಂಬದ ಸಮಸ್ಯೆಗೆ ಸ್ಪಂದಿಸುವ ಉದ್ಧೇಶದಿಂದ ಆಂದೋಲನ ಜರುಗಿಸಲಾಗುತ್ತಿದೆ ಎಂದರು. ರಾಜ್ಯಸರ್ಕಾರದಿಂದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ , ಸರದಿ ಪ್ರಕಾರ ಪ್ರತಿ ತಿಂಗಳೂ ಒಂದೊಂದು ತಾಲೂಕು ಕೇಂದ್ರದಲ್ಲಿ. ರಾಜ್ಯದ ಎಲ್ಲ‍ಾ ತಾಲೂಕು ಕೇಂದ್ರಗಳಲ್ಲಿ , ಜನ ಸೇವ‍ಾ ಆಂದೋಲನ ನಡೆಯಲಿದೆ. ಆಂದೋಲನದಲ್ಲಿ ಮುಖ್ಯಮಂತ್ರಿಗಳೊಂದಿಗೆ ಉಪ ಮುಖ್ಯಮಂತ್ರಿಗಳು ಎಲ್ಲಾ ಮಂತ್ರಿಗಳು , ವಿಧಾನಸೌಧದ ಅಧಿಕಾರಿವರ್ಗ ಜಿಲ್ಲಾ ತಾಲೂಕು ಮಟ್ಟದ ಆಡಳಿತಾಧಿಕಾರಿಗಳು ಹಾಜರಿರುತ್ತಾರೆ. ಜನರಿದ್ದಲ್ಲಿಗೆ ಸರ್ಕಾರ ದಾವಿಸಿ ಖುದ್ದು ಅಹವಾಲು ಆಲಿಸುವ ಉದ್ಧೇಶದಿಂದ , ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗುವ ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮವಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು , ಅಹವ‍ಲುಗಳನ್ನು ನಿಗದಿತ ಅರ್ಜಿನಮೂನೆಯ ಮೂಲಕ ನೀಡಿದ್ದಲ್ಲಿ. ಸಂಬಂಧಿಸಿದ ಇಲಾಖೆಗಳ ಮೂಲಕ , ಆಧ್ಯತೆಯ ಮೇರೆಗೆ ಸಮಸ್ಯೆಗೆ ಸ್ಪಂಧನೆ ನೀಡಲ‌‍ಾಗುತ್ತದೆ ಎಂದು ವಿವರಿಸಿದರು. ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ಮಾತನಾಡಿ , ಜನಸೇವಾ ಆಂದೋಲನ ಮುಖ್ಯಮಂತ್ರಿಗಳ ಕನಸಿನ ಕೂಸಾಗಿದ್ದು , ಇದು ಅವರ ಜನಪರ ಕಾಳಜಿಯ ಪ್ರತಿಕವಾಗಿದೆ. ಮುಖ್ಯಮಂತ್ರಿಗಳ ಮಹತ್ವದ ಕಾರ್ಯಕ್ರಮದಲ್ಲಿ , ಪಕ್ಷದ ಕಾರ್ಯಕರ್ತರು ಸಕ್ರೀಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಮುಖಂಡರಲ್ಲಿ ಕೋರಿದರು. ಶಾಸಕರಾದ ಶ್ರಿಮತಿ ಎಂ.ಪಿ.ಲತ‍ಮಲ್ಲಿಕಾರ್ಜುನ , ಜಿಲ್ಲ‍ಾಧಿಕಾರಿ ಕವಿತಾ ಎಸ್ ಮನ್ನಿಕೇರಿ , ಸೇರಿದಂತೆ ಜಿಲ್ಲ‍ಾ ಮಟ್ಟದ ತಾಲೂಕು ಮಟ್ಟದ ಅಧಿಕ‍ಾರಿಗಳು ಹಾಜರಿದ್ದರು. ಕೂಡ್ಲಿಗಿ ಹೊಸಹಳ್ಳಿ ಗುಡೇಕೋಟೆ ಹೋಬಳಿ ಮುಖಂಡರು , ಕ್ಷೇತ್ರದ ವಿವಿದೆಡೆಯ ಪ್ರಮುಖರು , ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಲಹೆ ಸೂಚನೆ ನೀಡಿದರು , ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    *ಕೂಡ್ಲಿಗಿ : " ಜನ ಸೇವಾ ಆಂದೋಲನ " ಯಶಸ್ವಿಗೊಳಿಸಿ - ಸಚಿವ ಬಸಂತಪ್ಪ ಕರೆ*_ ವಿಜಯನಗರ ಜಿಲ್ಲೆ ಕೂಡ್ಲಿಗಿ : ಮುಖ್ಯಮಂತ್ರಿಗಳ ವಿನೂತನ ಕನಸಿನ ಜನಪರ ಕಾರ್ಯಕ್ರಮ ,  ಜನಸೇವ‍ಾ ಆಂದೋಲನಕ್ಕೆ ಪಟ್ಟಣದಲ್ಲಿ ಮುಖ್ಯಮಂತ್ರಿಗಳು ಸೆ 5ರಂದು ಚಾಲನೆ ನೀಡಲಿದ್ದಾರೆ. ಪಕ್ಷದ ಮುಖಂಡರು ಕಾರ್ಯಕರ್ತರು ಸಕ್ರೀಯವಾಗಿ ಪಾಲ್ಗೊಂಡು ಯಶಸ್ವೀಗೊಳಿಸಿ ಎಂದು ಉಸ್ತುವಾರಿ ಸಚಿವರಾದ ಬಸಂತಪ್ಪ ಕರೆ ನೀಡಿದರು. ಅವರು ಸೆ 1ರಂದು ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ,   ಕ್ಷೇತ್ರದ ಪ್ರತಿಕುಟುಂಬದ  ಸಮಸ್ಯೆಗೆ ಸ್ಪಂದಿಸುವ ಉದ್ಧೇಶದಿಂದ ಆಂದೋಲನ ಜರುಗಿಸಲಾಗುತ್ತಿದೆ ಎಂದರು. ರಾಜ್ಯಸರ್ಕಾರದಿಂದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ , ಸರದಿ ಪ್ರಕಾರ ಪ್ರತಿ ತಿಂಗಳೂ ಒಂದೊಂದು ತಾಲೂಕು ಕೇಂದ್ರದಲ್ಲಿ. ರಾಜ್ಯದ ಎಲ್ಲ‍ಾ ತಾಲೂಕು ಕೇಂದ್ರಗಳಲ್ಲಿ , ಜನ ಸೇವ‍ಾ ಆಂದೋಲನ ನಡೆಯಲಿದೆ. ಆಂದೋಲನದಲ್ಲಿ ಮುಖ್ಯಮಂತ್ರಿಗಳೊಂದಿಗೆ ಉಪ ಮುಖ್ಯಮಂತ್ರಿಗಳು ಎಲ್ಲಾ ಮಂತ್ರಿಗಳು , ವಿಧಾನಸೌಧದ ಅಧಿಕಾರಿವರ್ಗ ಜಿಲ್ಲಾ ತಾಲೂಕು ಮಟ್ಟದ ಆಡಳಿತಾಧಿಕಾರಿಗಳು ಹಾಜರಿರುತ್ತಾರೆ. ಜನರಿದ್ದಲ್ಲಿಗೆ ಸರ್ಕಾರ  ದಾವಿಸಿ ಖುದ್ದು ಅಹವಾಲು ಆಲಿಸುವ ಉದ್ಧೇಶದಿಂದ , ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗುವ ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮವಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು , ಅಹವ‍ಲುಗಳನ್ನು ನಿಗದಿತ ಅರ್ಜಿನಮೂನೆಯ ಮೂಲಕ ನೀಡಿದ್ದಲ್ಲಿ. ಸಂಬಂಧಿಸಿದ ಇಲಾಖೆಗಳ ಮೂಲಕ , ಆಧ್ಯತೆಯ ಮೇರೆಗೆ ಸಮಸ್ಯೆಗೆ ಸ್ಪಂಧನೆ ನೀಡಲ‌‍ಾಗುತ್ತದೆ ಎಂದು ವಿವರಿಸಿದರು. ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ಮಾತನಾಡಿ , ಜನಸೇವಾ ಆಂದೋಲನ ಮುಖ್ಯಮಂತ್ರಿಗಳ ಕನಸಿನ ಕೂಸಾಗಿದ್ದು , ಇದು ಅವರ ಜನಪರ ಕಾಳಜಿಯ ಪ್ರತಿಕವಾಗಿದೆ. ಮುಖ್ಯಮಂತ್ರಿಗಳ ಮಹತ್ವದ ಕಾರ್ಯಕ್ರಮದಲ್ಲಿ ,  ಪಕ್ಷದ ಕಾರ್ಯಕರ್ತರು ಸಕ್ರೀಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಮುಖಂಡರಲ್ಲಿ ಕೋರಿದರು. ಶಾಸಕರಾದ ಶ್ರಿಮತಿ ಎಂ.ಪಿ.ಲತ‍ಮಲ್ಲಿಕಾರ್ಜುನ , ಜಿಲ್ಲ‍ಾಧಿಕಾರಿ ಕವಿತಾ ಎಸ್ ಮನ್ನಿಕೇರಿ , ಸೇರಿದಂತೆ ಜಿಲ್ಲ‍ಾ ಮಟ್ಟದ ತಾಲೂಕು ಮಟ್ಟದ ಅಧಿಕ‍ಾರಿಗಳು ಹಾಜರಿದ್ದರು.
ಕೂಡ್ಲಿಗಿ ಹೊಸಹಳ್ಳಿ ಗುಡೇಕೋಟೆ ಹೋಬಳಿ  ಮುಖಂಡರು , ಕ್ಷೇತ್ರದ ವಿವಿದೆಡೆಯ ಪ್ರಮುಖರು , ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಲಹೆ ಸೂಚನೆ ನೀಡಿದರು , ನೂರಾರು  ಕಾರ್ಯಕರ್ತರು  ಸಭೆಯಲ್ಲಿ ಭಾಗವಹಿಸಿದ್ದರು.
✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    7 hrs ago
  • ಹುಬ್ಬಳ್ಳಿಗೆ ಪ್ರಥಮ ಬಾರಿಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್: ಕ್ಷೇತ್ರವನ್ನು ಬರಗಾಲ ಪೀಡಿತ ಎಂದು ಘೋಷಿಸಲು ಶಾಸಕ ಎನ್‌.ಎಚ್. ಕೋನರೆಡ್ಡಿ ಮನವಿ​ಹುಬ್ಬಳ್ಳಿ ಮುಖ್ಯಮಂತ್ರಿ ಆದ ಬಳಿಕ ಪ್ರಥಮ ಬಾರಿಗೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್. ಕೋನರೆಡ್ಡಿ ಅವರು ಆತ್ಮೀಯವಾಗಿ ಸ್ವಾಗತ ಕೋರಿದರು. ​ನಗರಕ್ಕೆ ಆಗಮಿಸಿದ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಿದ ಶಾಸಕರು, ತಮ್ಮ ಕ್ಷೇತ್ರದ ಸದ್ಯದ ಪರಿಸ್ಥಿತಿಯ ಕುರಿತು ಸುದೀರ್ಘ ಚರ್ಚೆ ನಡೆಸಿದರು. ​ಶಾಸಕ ಎನ್.ಎಚ್. ಕೋನರೆಡ್ಡಿ ಅವರ ಮನವಿಯನ್ನು ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು, ಕ್ಷೇತ್ರದ ರೈತರ ಸಮಸ್ಯೆಗೆ ಧನಾತ್ಮಕವಾಗಿ ಸ್ಪಂದಿಸುವುದಾಗಿ ಮತ್ತು ಈ ಕುರಿತು ಶೀಘ್ರವೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
    1
    ಹುಬ್ಬಳ್ಳಿಗೆ ಪ್ರಥಮ ಬಾರಿಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್: ಕ್ಷೇತ್ರವನ್ನು ಬರಗಾಲ ಪೀಡಿತ ಎಂದು ಘೋಷಿಸಲು ಶಾಸಕ ಎನ್‌.ಎಚ್. ಕೋನರೆಡ್ಡಿ ಮನವಿ​ಹುಬ್ಬಳ್ಳಿ
ಮುಖ್ಯಮಂತ್ರಿ ಆದ ಬಳಿಕ ಪ್ರಥಮ ಬಾರಿಗೆ ವಾಣಿಜ್ಯ ನಗರಿ
ಹುಬ್ಬಳ್ಳಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್. ಕೋನರೆಡ್ಡಿ ಅವರು ಆತ್ಮೀಯವಾಗಿ ಸ್ವಾಗತ ಕೋರಿದರು.
​ನಗರಕ್ಕೆ ಆಗಮಿಸಿದ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಿದ ಶಾಸಕರು, ತಮ್ಮ ಕ್ಷೇತ್ರದ ಸದ್ಯದ ಪರಿಸ್ಥಿತಿಯ ಕುರಿತು ಸುದೀರ್ಘ ಚರ್ಚೆ ನಡೆಸಿದರು.
​ಶಾಸಕ ಎನ್.ಎಚ್. ಕೋನರೆಡ್ಡಿ ಅವರ ಮನವಿಯನ್ನು ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು, ಕ್ಷೇತ್ರದ ರೈತರ ಸಮಸ್ಯೆಗೆ ಧನಾತ್ಮಕವಾಗಿ ಸ್ಪಂದಿಸುವುದಾಗಿ ಮತ್ತು ಈ ಕುರಿತು ಶೀಘ್ರವೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    15 hrs ago
  • ಬೆಳಗಾವಿಯ ಕಣಬರ್ಗಿಯ ಗೋಕಾಕ್ ರಸ್ತೆಯಲ್ಲಿರುವ ಶೆಟ್ಟು ಸಿದ್ರಾಯ ದೇಶನೂರ ಅವರಗೆ ಸೇರಿದ ಮನೆ ಮಳೆಗೆ ಕುಸಿದು ಬಿದ್ದಿದೆ. ಬೆಳಗಾವಿಯ ಕಣಬರ್ಗಿಯ ಗೋಕಾಕ್ ರಸ್ತೆಯಲ್ಲಿರುವ ಶೆಟ್ಟು ಸಿದ್ರಾಯ ದೇಶನೂರ ಅವರಗೆ ಸೇರಿದ ಮನೆ ಮಳೆಗೆ ಕುಸಿದು ಬಿದ್ದಿದ್ದು ಸಂಭದಪಟ್ಟ ಆಧಿಕಾರಿಗಳು ಬೇಟಿ ಸೂಕ್ತ ಪರಿಹಾರ ನೀಡಲು ವಿನಂತಿಸಿದ್ದಾರೆ
    1
    ಬೆಳಗಾವಿಯ ಕಣಬರ್ಗಿಯ ಗೋಕಾಕ್ ರಸ್ತೆಯಲ್ಲಿರುವ ಶೆಟ್ಟು ಸಿದ್ರಾಯ ದೇಶನೂರ ಅವರಗೆ ಸೇರಿದ ಮನೆ ಮಳೆಗೆ ಕುಸಿದು ಬಿದ್ದಿದೆ.
ಬೆಳಗಾವಿಯ ಕಣಬರ್ಗಿಯ ಗೋಕಾಕ್ ರಸ್ತೆಯಲ್ಲಿರುವ ಶೆಟ್ಟು ಸಿದ್ರಾಯ ದೇಶನೂರ ಅವರಗೆ ಸೇರಿದ ಮನೆ ಮಳೆಗೆ ಕುಸಿದು ಬಿದ್ದಿದ್ದು ಸಂಭದಪಟ್ಟ ಆಧಿಕಾರಿಗಳು ಬೇಟಿ ಸೂಕ್ತ ಪರಿಹಾರ ನೀಡಲು ವಿನಂತಿಸಿದ್ದಾರೆ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.