ದೇವಾಲಯ ಜೀರ್ಣೋದ್ಧಾರಕ್ಕೆ ಪಿ ಎನ್ ಕೆ ₹1 ಲಕ್ಷ ರೂ ಘೋಷಣೆ ಕೊರಟಗೆರೆ: ತಾಲ್ಲೂಕಿನ ಜಂಪೆನಹಳ್ಳಿ ಶಿವಪುರ ಗ್ರಾಮದಲ್ಲಿ ಗಣಪತಿ ಹಬ್ಬದ ಪ್ರಯುಕ್ತ ಗಜಪಡೆ ಗೆಳೆಯರ ಬಳಗದ ವತಿಯಿಂದ ಎರಡನೇ ವರ್ಷದ ಅದ್ದೂರಿ ಆರ್ಕೆಸ್ಟ್ರಾ ರಸ ಸಂಜೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು. ದೇವಾಲಯ ಜೀರ್ಣೋದ್ಧಾರಕ್ಕೆ ಪಿ ಎನ್ ಕೆ ₹1 ಲಕ್ಷ ರೂ ಘೋಷಣೆ ಕೊರಟಗೆರೆ: ತಾಲ್ಲೂಕಿನ ಜಂಪೆನಹಳ್ಳಿ ಶಿವಪುರ ಗ್ರಾಮದಲ್ಲಿ ಗಣಪತಿ ಹಬ್ಬದ ಪ್ರಯುಕ್ತ ಗಜಪಡೆ ಗೆಳೆಯರ ಬಳಗದ ವತಿಯಿಂದ ಎರಡನೇ ವರ್ಷದ ಅದ್ದೂರಿ ಆರ್ಕೆಸ್ಟ್ರಾ ರಸ ಸಂಜೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು. ಗಣಪತಿ ಹಬ್ಬದ ಅಂಗವಾಗಿ ವಿನಾಯಕ ಮೂರ್ತಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿದ ಬಳಿಕ ರಾತ್ರಿ ಆರ್ಕೆಸ್ಟ್ರಾ ಕಾರ್ಯಕ್ರಮ ನಡೆಯಿತು. ಸಂಗೀತ ತಂಡದ ಕಲಾವಿದರು ಕನ್ನಡದ ಜನಪ್ರಿಯ ಚಲನಚಿತ್ರ ಗೀತೆಗಳು, ಭಾವಗೀತೆಗಳು ಹಾಗೂ ವಿವಿಧ ಮನರಂಜನಾ ಗೀತೆಗಳನ್ನು ಹಾಡಿ ರಂಜಿಸಿದರು. ಸಂಗೀತದ ತಾಳಕ್ಕೆ ಯುವಕರು ಹಾಗೂ ಗ್ರಾಮಸ್ಥರು ಕುಣಿದು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಹಾಗೂ ಸಮಾಜ ಸೇವಕ ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ, ಗಣಪತಿ ಹಬ್ಬವು ಭಕ್ತಿ, ಸಂಸ್ಕೃತಿ ಹಾಗೂ ಗ್ರಾಮಸ್ಥರ ಒಗ್ಗಟ್ಟನ್ನು ಸಾರುವ ಹಬ್ಬವಾಗಿದೆ. ಯುವಕರು ಒಗ್ಗೂಡಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕಾಗಿ ₹1 ಲಕ್ಷ ನೆರವು ನೀಡುವುದಾಗಿ ಪಿ.ಎನ್. ಕೃಷ್ಣಮೂರ್ತಿ ಘೋಷಿಸಿದರು. ಸಾಮಾಜಿಕ ಹೋರಾಟಗಾರ ಟೈಗರ್ ನಾಗ್ ಮಾತನಾಡಿ, ಹಬ್ಬಗಳು ಧಾರ್ಮಿಕ ಆಚರಣೆಯ ಜತೆಗೆ ಜನರನ್ನು ಒಗ್ಗೂಡಿಸುವ ಸಾಂಸ್ಕೃತಿಕ ವೇದಿಕೆಗಳಾಗಿವೆ. ಯುವಕರು ಸಂಘಟಿತರಾಗಿ ಗ್ರಾಮದ ಅಭಿವೃದ್ಧಿ ಹಾಗೂ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಮರ ಗ್ರಾಮದ ಹಿರಿಯ ಮುಖಂಡರು ಬುದಾನಿ ಉಮಾಶಂಕರ್, ಅಗ್ರಹಾರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರವಿಕುಮಾರ್, ಪತ್ರಕರ್ತ ಸತೀಶ್,ಲಾರಿ ಬಸವರಾಜಪ್ಪ. ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ರಮೇಶ್, ದಿಯಾ ಸೌಂಡ್ಸ್ ಮಾಲೀಕರಾದ ಸಂಜೀವ್ ಮೂರ್ತಿ, ಬಂಡೆ ಉದ್ಯಮಿ ಮಂಜುನಾಥ್,ಮೋಹನ, ಶ್ರೀಧರ,ಅರ್ಚಕರಾದ ಜಯಸಿಂಹ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗಿಯಾಗಿದ್ದರು.
ದೇವಾಲಯ ಜೀರ್ಣೋದ್ಧಾರಕ್ಕೆ ಪಿ ಎನ್ ಕೆ ₹1 ಲಕ್ಷ ರೂ ಘೋಷಣೆ ಕೊರಟಗೆರೆ: ತಾಲ್ಲೂಕಿನ ಜಂಪೆನಹಳ್ಳಿ ಶಿವಪುರ ಗ್ರಾಮದಲ್ಲಿ ಗಣಪತಿ ಹಬ್ಬದ ಪ್ರಯುಕ್ತ ಗಜಪಡೆ ಗೆಳೆಯರ ಬಳಗದ ವತಿಯಿಂದ ಎರಡನೇ ವರ್ಷದ ಅದ್ದೂರಿ ಆರ್ಕೆಸ್ಟ್ರಾ ರಸ ಸಂಜೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು. ದೇವಾಲಯ ಜೀರ್ಣೋದ್ಧಾರಕ್ಕೆ ಪಿ ಎನ್ ಕೆ ₹1 ಲಕ್ಷ ರೂ ಘೋಷಣೆ ಕೊರಟಗೆರೆ: ತಾಲ್ಲೂಕಿನ ಜಂಪೆನಹಳ್ಳಿ ಶಿವಪುರ ಗ್ರಾಮದಲ್ಲಿ ಗಣಪತಿ ಹಬ್ಬದ ಪ್ರಯುಕ್ತ ಗಜಪಡೆ ಗೆಳೆಯರ ಬಳಗದ ವತಿಯಿಂದ ಎರಡನೇ ವರ್ಷದ ಅದ್ದೂರಿ ಆರ್ಕೆಸ್ಟ್ರಾ ರಸ ಸಂಜೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು. ಗಣಪತಿ ಹಬ್ಬದ ಅಂಗವಾಗಿ ವಿನಾಯಕ ಮೂರ್ತಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿದ ಬಳಿಕ ರಾತ್ರಿ ಆರ್ಕೆಸ್ಟ್ರಾ ಕಾರ್ಯಕ್ರಮ ನಡೆಯಿತು. ಸಂಗೀತ ತಂಡದ ಕಲಾವಿದರು ಕನ್ನಡದ ಜನಪ್ರಿಯ ಚಲನಚಿತ್ರ ಗೀತೆಗಳು, ಭಾವಗೀತೆಗಳು ಹಾಗೂ ವಿವಿಧ ಮನರಂಜನಾ ಗೀತೆಗಳನ್ನು ಹಾಡಿ ರಂಜಿಸಿದರು. ಸಂಗೀತದ ತಾಳಕ್ಕೆ ಯುವಕರು ಹಾಗೂ ಗ್ರಾಮಸ್ಥರು ಕುಣಿದು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ
ಜೆಡಿಎಸ್ ಮುಖಂಡ ಹಾಗೂ ಸಮಾಜ ಸೇವಕ ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ, ಗಣಪತಿ ಹಬ್ಬವು ಭಕ್ತಿ, ಸಂಸ್ಕೃತಿ ಹಾಗೂ ಗ್ರಾಮಸ್ಥರ ಒಗ್ಗಟ್ಟನ್ನು ಸಾರುವ ಹಬ್ಬವಾಗಿದೆ. ಯುವಕರು ಒಗ್ಗೂಡಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕಾಗಿ ₹1 ಲಕ್ಷ ನೆರವು ನೀಡುವುದಾಗಿ ಪಿ.ಎನ್. ಕೃಷ್ಣಮೂರ್ತಿ ಘೋಷಿಸಿದರು. ಸಾಮಾಜಿಕ ಹೋರಾಟಗಾರ ಟೈಗರ್ ನಾಗ್ ಮಾತನಾಡಿ, ಹಬ್ಬಗಳು ಧಾರ್ಮಿಕ ಆಚರಣೆಯ ಜತೆಗೆ ಜನರನ್ನು ಒಗ್ಗೂಡಿಸುವ ಸಾಂಸ್ಕೃತಿಕ ವೇದಿಕೆಗಳಾಗಿವೆ. ಯುವಕರು ಸಂಘಟಿತರಾಗಿ ಗ್ರಾಮದ ಅಭಿವೃದ್ಧಿ ಹಾಗೂ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಮರ ಗ್ರಾಮದ ಹಿರಿಯ ಮುಖಂಡರು ಬುದಾನಿ ಉಮಾಶಂಕರ್, ಅಗ್ರಹಾರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರವಿಕುಮಾರ್, ಪತ್ರಕರ್ತ ಸತೀಶ್,ಲಾರಿ ಬಸವರಾಜಪ್ಪ. ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ರಮೇಶ್, ದಿಯಾ ಸೌಂಡ್ಸ್ ಮಾಲೀಕರಾದ ಸಂಜೀವ್ ಮೂರ್ತಿ, ಬಂಡೆ ಉದ್ಯಮಿ ಮಂಜುನಾಥ್,ಮೋಹನ, ಶ್ರೀಧರ,ಅರ್ಚಕರಾದ ಜಯಸಿಂಹ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗಿಯಾಗಿದ್ದರು.
- ಕೊರಟಗೆರೆ ತಾಲೂಕಿನ ತುಮಕೂರು ಜಿಲ್ಲೆ ನರಸಯ್ಯನಪಾಳ್ಯ ಕುರುಕ್ಷೇತ್ರ ನಾಟಕ1
- ಜಾತ್ಯಾತೀತವಾಗಿ ಕೂಡಿ ಬಾಳಿದರೆ ಸ್ವರ್ಗ ಸುಖ ಈ ವಿಡಿಯೋದಲ್ಲಿ ಕೂಡಿ ಬಾಳಿ ಎಂಬ ಒಳ್ಳೆ ಸಂದೇಶವಿದೆ1
- ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು1
- ಹುಳಿಯಾರು ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಕೆರೆ ಸೂರಗೊಂಡನಹಳ್ಳಿ ಸರ್ವೆ ನಂಬರ್ 32 ರ ಹೊಸಹಳ್ಳಿ ಕೈಮರದ ಬಳಿ ಐದು ಎಕರೆ ಜಾಗ ಮಂಜೂರು1
- ಸೆಪ್ಟೆಂಬರ್ 20: .ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ ಉಡುಪಿ : ಉಡುಪಿ ಮಳಯಾಳಿಗಳ ಹೆಮ್ಮೆಯ ಪ್ರತಿಷ್ಠಿತ ಸಂಸ್ಥೆಯಾದ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ) ಉಡುಪಿ, ಸಂಸ್ಥೆಯು ಕೇರಳದ ಮಣ್ಣಿನಲ್ಲಿ ಹುಟ್ಟಿ ಬೆಳೆದು ಉದ್ಯೋಗವನ್ನರಸುತ್ತಾ ಉಡುಪಿಗೆ ಬಂದು ನೆಲೆಸಿದ ಮಲೆಯಾಳಿಗಳು ಒಟ್ಟು ಸೇರಿ ಕಟ್ಟಿದ ಸಂಘಟನೆಯಾಗಿದೆ . ಕೆಸಿಎಸ್ ಸಿ. ಹಲವಾರು ದಶಕಗಳಿಂದ ಇಲ್ಲಿಯೇ ಇರುವುದರಿಂದ ಅವರ ಮಕ್ಕಳು ಮೊಮ್ಮಕ್ಕಳಿಗೆ ಮಲೆಯಾಳಕ್ಕಿಂತ ಹೆಚ್ಚು ಕನ್ನಡದ ಸಂಸ್ಕೃತಿಯ ಪರಿಚಯವೇ ಹೆಚ್ಚು. ಹುಟ್ಟೂರ ಮಣ್ಣಿನ ಸಂಸ್ಕೃತಿ , ಸಂಪ್ರದಾಯ ಹಾಗೂ ಜೀವನಕ್ರಮದ ಪರಿಚಯವನ್ನು ಮಕ್ಕಳಿಗೆ ಮಾತ್ರವಲ್ಕದೆ ತಾವು ಬದುಕುತ್ತಿರುವ ಪರಿಸರದಲ್ಲಿರುವ ಇತರರಿಗೂ ಪರಿಚಯಿಸುವ ಸದುದ್ದೇಶದಿಂದ ಈ ಸಂಘವು ಓಣಂ ಆಚರಣೆಯಂತಹ ಹಲವಾರು ಕಾರ್ಯಕ್ರಮಗಳನ್ನು ಕಳೆದ ೩೨ ವರ್ಷಗಳಿಂದ ಆಚರಿಸುತ್ತ ಬಂದಿದೆ.. ಈ ಬಾರಿಯೂ ಕೂಡ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್ ನಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ನ 32ನೆ ವಾರ್ಷಿಕೋತ್ಸವ ಹಾಗೂ ಓಣಂ ಆಚರಣೆ ಸೆಪ್ಟೆಂಬರ್ 20 ರಂದು ವಿಜೃಂಭಣೆ ಯಿಂದ ನಡೆಯಲಿದೆ ಎಂದು ಕೆ ಸಿ ಎಸ್ ಸಿ ಕಾರ್ಯಕಾರಿ ಸಮಿತಿ ಸದಸ್ಯೆ ಡಾ ಪಾರ್ವತಿ ಐತಾಳ್ ತಿಳಿಸಿದರು ಉಡುಪಿ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಅರೋಗ್ಯ ಸಚಿವ ಯು ಟಿ ಖಾದರ್ ಪರೀದ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ ಸ್ವರೂಪ ಟಿ ಕೆ. ಐ ಎ ಎಸ್ , ಜಿಲ್ಲಾ ಪೊಲೀಸ್ ವರಿಸ್ಟಾಧಿಕಾರಿ ಹರಿರಾಮ್ ಶಂಕರ್ ಐ ಪಿ ಎಸ್, ಮಾಹೆ ಹೆಲ್ತ್ ಸೈನ್ಸ್ ಪ್ರೊ ವೈಸ್ ಚಾನ್ಸೆಲ್ಲರ್ ಡಾ ಮಾತ್ಯುಸ್ ಜಾಕೋಬ್, ನೋರ್ಕ ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ ಕೆ, ಕೇರಳ ಸಮಾಜo ಮಂಗಳೂರು ಅಧ್ಯಕ್ಷ ಟಿ ಕೆ ರಾಜನ್, ಓಣಂ ಸಮಿತಿ ಅಧ್ಯಕ್ಷ ಶಿನೋದ್ ಟಿ ಆರ್, ಕೆ ಸಿ ಎಸ್ ಸಿ ಕಾರ್ಯದರ್ಶಿ ಬಿನೇಶ್ ವಿ ಸಿ, ಕೋಶಾಧಿಕಾರಿ ಶಾಜಿ ವಿ ಕರುಣ್, ಕೆ ಸಿ ಎಸ್ ಸಿ ನಿಕಟ ಪೂರ್ವ ಅಧ್ಯಕ್ಷ ಸುಗುಣ ಕುಮಾರ್ ಎಂ ಜೆ ಎಫ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಕೆ ಸಿ ಎಸ್ ಸಿ ಅಧ್ಯಕ್ಷ ರಾಜನ್ ಪಿಲಿಪ್ಸ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಡಾ ವಿನೋದ್ ವಿ ತೋಮಸ್, ಅರೋಗ್ಯ ಕ್ಷೇತ್ರದಲ್ಲಿ ಸಾಧನೆಗೈದ ಡಾ ರಾಜೇಶ್ ನಾಯರ್, ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಎಂ ಎಲ್ ಜೋಸೆಫ್, ಕಲೆ ಸಂಸ್ಕೃತಿ ಕ್ಷೇತ್ರದಲ್ಲಿ ಸಿ ಸಾಧನೆಗೈದ ಲಿಯಾಕತ್ ಅಲಿ, ಯುವ ನ್ರತ್ಯಗಾತಿ ಸಾನ್ವಿ ರಾಜೇಶ್ ರವರಿಗೆ 2026ರ ಸಾಲಿನ ಕೆ ಸಿ ಎಸ್ ಸಿ ಪಂಚರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಕೆ ಸಿ ಎಸ್ ಸಿ ಸದಸ್ಯರ ಕುಟುಂಬದ ಪಿ ಯು ಸಿ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡುವ ಮೂಲಕ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದೆ. ಅಶಕ್ತರಿಗೆ ಧನ ಸಹಾಯ, ಕೇರಳದಿಂದ ಇಲ್ಲಿಗೆ ಬಂದು ದಾರಿ ತಪ್ಪಿದವರನ್ನು ಊರಿನವರೊಂದಿಗೆ ಸೇರಿಸುವ ಸಹಾಯ ಮತ್ತು ಅಗತ್ಯ ಬಂದಾಗ ಹಲವಾರು ರೀತಿಯ ಸಹಾಯಗಳನ್ನು ಮಾಡುತ್ತಿದೆ. ಮಲೆಯಾಳಂ ಮಿಶನ್ ಮೂಲಕ ಮಲೆಯಾಳ ಭಾಷೆಯನ್ನು ಕಲಿಸುವ ವ್ಯವಸ್ಥೆ, ಕೇರಳ ಸರಕಾರವು ಪರವೂರಿನಲ್ಲಿ ನೆಲೆಸಿದವರಿಗೆ ನೀಡುವ ನೋರ್ಕಾ ಮೂಲಕ ನೀಡುವ ಹೆಲ್ತ್ ಇನ್ಶುರೆನ್ಸ್ ಅನ್ನು ಈ ಬಾರಿ ಸಂಘದ ಸದಸ್ಯರ ಕುಟುಂಬಗಳಿಗೆ ಪಡೆಯುವ ವ್ಯವಸ್ಥೆಯನ್ನು ಸಂಘದ ಮುಖಂತರ ನೀಡುವ ವ್ಯವಸ್ಥೆ ಮಾಡಲಾಗುವುದು ಎಪ್ಪತ್ತು ಮತ್ತು ಎಪ್ಪತ್ತಕ್ಕಿಂತ ಹೆಚ್ಚು ವಯಸ್ಸಾದ ಜತೆ ಜತೆಯಾಗಿ ಉಲ್ಲಾಸದಿಂದ ಬದುಕುವ ವ್ಯವಸ್ಥೆ ಮಾಡಲು "ಸೂಪರ್ ಸೆವೆಂಟಿ" ಎಂಬ ಒಂದು ಶಾಖೆಯನ್ನೂ ಸಂಘವು ಸದಾ ಕಾಲ ಲವಲವಿಕೆಯಿಂದ ಕೂಡಿರಲು ಹಾಗೂ ನಮ್ಮ ಯುವ ಸಮುದಾಯ ಸಮಾಜ ಸೇವಾ ಚಟುವಟಿಕೆ ತೊಡಗಿಸಿಕೊಳ್ಳಲು ಪೂರಕವಾಗಿ "ಯೂಥ್ ವಿಂಗ" ನ್ನು ಆರಂಭಿಸುತ್ತಿದೆ. ಸಮಾರಂಭದಲ್ಲಿ ವಿಶೇಷ ಆಕರ್ಷಣೆಯಾಗಿ ಸೆಲೆಬ್ರಿಟಿ ಮಲಯಾಳಂ ನಟ ರಾಜೇಶ್ ಹೆಬ್ಬಾರ್ ಭಾಗವಹಿಸಲಿದ್ದು, ಕಲಾ ಭವನ್ ರಾಜೇಶ್ ನೇತೃತ್ವದಲ್ಲಿ ಕಿರುತೆರೆಯ ಪ್ರಸಿದ್ಧ ಗಾಯಕರಿಂದ ಆರ್ಕೆಸ್ಟ್ರಾ ನಡೆಯಲಿದೆ ಕೆ ಸಿ ಎಸ್ ಸಿ ಕುಟುಂಬ ಸದಸ್ಯರಿಂದ ಸ್ವಾಗತ ನ್ರತ್ಯ, ಪುಷ್ಪಾoಜಲಿ, ತಿರುವಾದಿರ ಕಳಿ, ಭರತನಾಟ್ಯ, ಮೋಹಿನಿಯಟ್ಟo, ಫುಷನ್ ಡಾನ್ಸ್, ಕೊಯಿತು ಪಾಟ್ಟು ಡಾನ್ಸ್, ಕೈಕೊಟ್ಟಿಕಲಿ, ಮಹಾಭಾರತ ಥೀಮ್, ಸಿನೆಮಾಟಿಕ್ ಡಾನ್ಸ್ ನಡೆಯಲಿದೆ ಕಾಲೇಜು ವಿದ್ಯಾರ್ಥಿನಿಯರಿಗಾಗಿ "ಅತ್ತಾಪೂಕಲಂ" ಹೂವಿನ ರಂಗೋಲಿ ಸ್ಪರ್ಧೆ ನಡೆಯಲಿದೆ ಬೆಳಿಗ್ಗೆ 10.00ರಿಂದ 12.30 ರವರೆಗೆ ಮಿತ್ರ ಹಾಸ್ಪಿಟಲ್ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ ಮಧ್ಯಾಹ್ನ ಓಣo ಸದ್ಯ-ಅಂದರೆ ಕೇರಳದ ಅಪರೂಪದ ಖಾದ್ಯ ಪದಾರ್ಥಗಳ ಭರ್ಜರಿ ಭೋಜನವಿದೆ ಎಂದರು ಪತ್ರಿಕಾಗೋಷ್ಠಿಯಲ್ಲಿ ಕೆ ಸಿ ಎಸ್ ಸಿ ಅಧ್ಯಕ್ಷ ರಾಜನ್ ಫಿಲಿಪ್ಸ್, ಕೆ ಸಿ ಎಸ್ ಸಿ ಓಣಂ ಸಮಿತಿ ಅಧ್ಯಕ್ಷ ಶಿನೋದ್ ಟಿ ಆರ್, ಕೆ ಸಿ ಎಸ್ ಸಿ ಕಾರ್ಯದರ್ಶಿ ಬಿನೇಶ್ ವಿ ಸಿ,ಕಾರ್ಯಕಾರಿ ಸಮಿತಿ ಅಧ್ಯಕ್ಷ ಮೊಹಮ್ಮದ್ ಶರೀಫ್ ಉಪಸ್ಥಿತರಿದ್ದರು2
- ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ| Veega News Kannada ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ1
- ಮಹದೇವಪುರ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಕ್ಕೆ ಸೇವಾಕಾರ್ಯ ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತ್ರತ್ವದಲ್ಲಿ ಆಯೋಜನೆ ಕ್ಷೇತ್ರ ವ್ಯಾಪ್ತಿ ಸುಮಾರು 134ಕ್ಕೂ ಹೆಚ್ಚು ಕಡೆ ಸೇವಾಕಾರ್ಯ ಕೆರೆ , ದೇವಾಲಯ ,ಶಾಲೆ , ಸ್ಮಶಾನ ಆವರಣ ಸ್ವಚ್ಛತೆ , ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ರಕ್ತದಾನ ಶಿಬಿರ , ಆರೋಗ್ಯ ಶಿಬಿರ , ಗೋಶಾಲೆಗಳಲ್ಲಿ ಸೇವಾಕಾರ್ಯ ಗಿಡ ನೆಡುವ ಜೊತೆ ಶಾಲಾ ಮಕ್ಕಳಿಗೆ ಪುಸ್ತಕ ಸಿಹಿ ವಿತರಣೆ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಹಿನ್ನೆಲೆ ಇಡಿ ತಿಂಗಳು ಸೇವಾಕಾರ್ಯ ಮಾಡಲು ಪಕ್ಷ ಕರೆ ನೀಡಿದೆ ಮಹದೇವಪುರ ಕ್ಷೇತ್ರದಲ್ಲಿ ಒಂದೇ ದಿನ ನೂರಾರು ಸೇವಾಕಾರ್ಯ ಮಾಡಲಾಗಿದೆ ದೇಶದ ಅತ್ಯುತ್ತಮ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಚಿತ್ರಣವನ್ನೇ ಪ್ರಧಾನ ಮಂತ್ರಿಗಳು ಬದಲಾಯಿಸುತ್ತಾರೆ ಎಂದು ಮಾಜಿ ಸಚಿವ ಲಿಂಬಾವಳಿ ಆಡಿ ಹೊಗಳಿದ್ದಾರೆ1
- ಊರ್ಡಿಗೆರೆಯಲ್ಲಿ ನೂತನ ನಂದಿನಿ ಕ್ಷೀರ ಮಳಿಗೆ: ಭೇಟಿ ನೀಡಿ ಚಹಾ ಸವಿದ ಡಾ. ಜಿ. ಪರಮೇಶ್ವರ್! ಊರ್ಡಿಗೆರೆಯಲ್ಲಿ ನೂತನ ನಂದಿನಿ ಕ್ಷೀರ ಮಳಿಗೆ: ಭೇಟಿ ನೀಡಿ ಚಹಾ ಸವಿದ ಡಾ. ಜಿ. ಪರಮೇಶ್ವರ್! ಸಮಾಜ ಸೇವಕ ದುರ್ಗಪ್ಪ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಡಿಸಿಎಂ ಭೇಟಿ ನಂದಿನಿ ಕರ್ನಾಟಕದ ಉತ್ತಮ ಬ್ರಾಂಡ್: ಡಾ. ಜಿ. ಪರಮೇಶ್ವರ್ ರೈತರು ಹಾಗೂ ಗ್ರಾಹಕರಿಗೆ ನಂದಿನಿಯಿಂದ ಉತ್ತಮ ಸೇವೆ: ಡಿಸಿಎಂ ಮೆಚ್ಚುಗೆ ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ನೂತನವಾಗಿ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿ ಚಹಾ ಸವಿದರು. ಸಮಾಜ ಸೇವಕ ಹಾಗೂ ಮುಖಂಡ ದುರ್ಗಪ್ಪ ಅವರು ನೂತನವಾಗಿ ಆರಂಭಿಸಿರುವ ಕ್ಷೀರ ಮಳಿಗೆಗೆ ಭೇಟಿ ನೀಡಿದ ಡಿಸಿಎಂ, ನಂದಿನಿ ಸಂಸ್ಥೆಯ ಕಾರ್ಯವೈಖರಿ ಹಾಗೂ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ಸಮಾಜ ಸೇವಕ ಹಾಗೂ ಮುಖಂಡ ದುರ್ಗಪ್ಪ ಅವರು ನೂತನವಾಗಿ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ಷೀರ ಮಳಿಗೆಯಲ್ಲಿ ಚಹಾ ಸವಿದ ಡಾ. ಜಿ. ಪರಮೇಶ್ವರ್, ನಂದಿನಿ ಕರ್ನಾಟಕ ರಾಜ್ಯದ ಉತ್ತಮ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ ಎಂದು ಹೇಳಿದರು. ರೈತರು ಹಾಗೂ ಗ್ರಾಹಕರಿಗೆ ನಂದಿನಿ ಸಂಸ್ಥೆ ಉತ್ತಮ ಸೇವೆ ನೀಡುತ್ತಿದ್ದು, ಗುಣಮಟ್ಟವನ್ನು ಕಾಪಾಡಿಕೊಂಡು ಸ್ಥಳೀಯ ಬ್ರಾಂಡ್ ಆಗಿ ಉತ್ತಮ ಹೆಸರು ಗಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನೂತನವಾಗಿ ನಂದಿನಿ ಕ್ಷೀರ ಮಳಿಗೆ ಆರಂಭಿಸಿರುವ ದುರ್ಗಪ್ಪ ಅವರಿಗೆ ಶುಭವಾಗಲಿ. ವ್ಯಾಪಾರ ಉತ್ತಮವಾಗಿ ನಡೆಯಲಿ ಹಾಗೂ ಗ್ರಾಹಕರಿಗೆ ಗುಣಮಟ್ಟದ ಸೇವೆ ದೊರೆಯಲಿ ಎಂದು ಡಾ. ಜಿ. ಪರಮೇಶ್ವರ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಜಿಎಂ ಶಿವಾನಂದ್, ನಿರ್ದೇಶಕ ರಾಜಣ್ಣ, ಮುಖಂಡರಾದ ಕಾರ್ ಮಹೇಶ್, ತಿಲಕ್, ಮಲ್ಲಿಕಾರ್ಜುನ್, ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.2