ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು. ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.
ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು. ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.
- *ಅರ್ಹ ಮತದಾರರು ಹೊರಗುಳಿಯದಂತೆ, ಅನರ್ಹರು ಸೇರ್ಪಡೆಯಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ- ಡಾ. ಕುಮಾರ ಮಂಡ್ಯ, ಜುಲೈ 31: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕಾರ್ಯವನ್ನು ನಿಗದಿತ ವೇಳಾಪಟ್ಟಿಯಂತೆ ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಪಟ್ಟಿಗೆ ಸೇರ್ಪಡೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿಯ ಶುದ್ಧತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವುದು ಚುನಾವಣಾ ಆಯೋಗದ ಪ್ರಮುಖ ಆದ್ಯತೆಯಾಗಿದ್ದು, ಪ್ರತಿಯೊಂದು ಮಾಹಿತಿಯನ್ನು ನಿಖರವಾಗಿ ಪರಿಶೀಲಿಸಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಮನೆ ಮನೆಗೆ ಭೇಟಿ ನೀಡಿ ವಿತರಿಸಲಾದ ಗಣತಿ ನಮೂನೆಗಳನ್ನು ಹಿಂಪಡೆಯುವ ಕಾರ್ಯ ಪ್ರಗತಿಯಲ್ಲಿದ್ದು, ಆಗಸ್ಟ್ 8, 2026 ನಮೂನೆ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮತದಾರರು ಭರ್ತಿ ಮಾಡಿದ ನಮೂನೆಗಳನ್ನು ನಿಗದಿತ ಅವಧಿಯೊಳಗೆ ಹಿಂದಿರುಗಿಸುವ ಮೂಲಕ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಕಸ ವಿಲೇವಾರಿ ವಾಹನಗಳಲ್ಲಿ ಜಿಂಗಲ್ಗಳನ್ನು ಅಳವಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿ ಒಟ್ಟು 15,75,849 ಮತದಾರರ ಪೈಕಿ ಇದುವರೆಗೆ 13,94,203 (88.47%) ಮತದಾರರ ಗಣತಿ ನಮೂನೆಗಳನ್ನು ಗಣಕೀಕರಣ ಮಾಡಲಾಗಿದೆ. ಜೊತೆಗೆ 1,49,347 (9.48%) ಮತದಾರರನ್ನು ASDDO (Absent, Shifted, Death, Duplicate, Others) ವಿಭಾಗದಡಿ ಗುರುತಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು. ಗುರುತಿಸಲಾದವರ ಪೈಕಿ 41,589 ಮಂದಿ ಮೃತ ಮತದಾರರು, 17,240 ಮಂದಿ ಗೈರು ಮತದಾರರು, 76,720 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತದಾರರು, 13,377 ಮಂದಿ ಪುನರಾವರ್ತಿತ ಮತದಾರರು ಹಾಗೂ 421 ಮಂದಿ ಗಣತಿ ನಮೂನೆಯನ್ನು ಹಿಂದಿರುಗಿಸಲು ನಿರಾಕರಿಸಿರುವ ಮತದಾರರಾಗಿದ್ದಾರೆ ಎಂದು ಸಭೆಯಲ್ಲಿ ವಿವರಿಸಿದರು. ಮನೆ ಮನೆ ಸಮೀಕ್ಷೆಯಲ್ಲಿ ಈಗಾಗಲೇ ವಿತರಿಸಲಾದ ನಮೂನೆಗಳ ಪೈಕಿ 32,299 (2.05%) ನಮೂನೆಗಳ ಸಂಗ್ರಹಣೆ ಹಾಗೂ ಗಣಕೀಕರಣ ಬಾಕಿಯಿದ್ದು, ಮುಂದಿನ ಮೂರುರಿಂದ ನಾಲ್ಕು ದಿನಗಳೊಳಗೆ ಈ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರತಿ ದಿನದ ಪ್ರಗತಿ ವಿವರವನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಮಾಧ್ಯಮಗಳಿಗೆ ನಿಯಮಿತವಾಗಿ ನೀಡಲಾಗುತ್ತಿದ್ದು, ಸಂಪೂರ್ಣ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯೊಂದಿಗೆ ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಇದೇ ವೇಳೆ, ASDDO ವಿಭಾಗದಡಿ ಗುರುತಿಸಲಾದ ಮತದಾರರ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಿ ಮರುಪರಿಶೀಲನೆ ನಡೆಸುವಂತೆ ಮೇಲ್ವಿಚಾರಕರಿಗೆ ಸೂಚನೆ ನೀಡಲಾಗುತ್ತದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ತಪ್ಪದೇ ಉಳಿಯುವಂತೆ ಹಾಗೂ ಅನರ್ಹರ ಸೇರ್ಪಡೆಯಾಗದಂತೆ ನಿಖರ ಪರಿಶೀಲನೆಗೆ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಆಗಸ್ಟ್ 17, 2026ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಬಳಿಕ ಆಗಸ್ಟ್ 17ರಿಂದ ಸೆಪ್ಟೆಂಬರ್ 16, 2026ರವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು. ಈ ಅವಧಿಯನ್ನು ಸದುಪಯೋಗಪಡಿಸಿಕೊಂಡು ಮತದಾರರು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ,ಜಿಲ್ಲಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ರಾದ ರವಿಶಂಕರ್ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.1
- ಶಿವಪುರ ಪ್ರೌಢಶಾಲೆ ಕಟ್ಟಡಕ್ಕೆ ಉಚಿತವಾಗಿ ಬಣ್ಣಬಳಿದ ಸಮಾಜಸೇವಕರು ಮದ್ದೂರು 02:- ಹಲವು ವರ್ಷಗಳಿಂದ ಬಣ್ಣ ಕಾಣದೆ ಮಂಕಾಗಿದ್ದ ಶಿವಪುರ ಪ್ರೌಢಶಾಲೆ ವಿಭಾಗ (ಸರ್ಕಾರಿ ಪದವಿ ಪೂರ್ವ ಕಾಲೇಜು) ಕಟ್ಟಡಕ್ಕೆ ಸಮಾಜಸೇವಕರು ಉಚಿತವಾಗಿ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದು, ಗ್ರಾಮಸ್ಥರು ಹಾಗೂ ಶಿಕ್ಷಣಾಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಕಟ್ಟಡಕ್ಕೆ ಬಣ್ಣ ಬಳಿಯದ ಕಾರಣ ಶಾಲೆಯ ಸೌಂದರ್ಯ ಕುಂದಿತ್ತು. ಈ ಹಿನ್ನೆಲೆಯಲ್ಲಿ ಸಮಾಜಸೇವಕರಾದ ಸತೀಶ್ ಬಿಲ್ಡರ್, ಎಚ್.ಎಲ್. ಸತೀಶ್, ರೋಟರಿ ಅಧ್ಯಕ್ಷ ಎ. ಲೋಕೇಶ್, ಕಾರ್ಯದರ್ಶಿ ಪ್ರವೀಣ್ ಕೆ., ಮಾಜಿ ಅಧ್ಯಕ್ಷ ಚನ್ನಂಕೆಗೌಡ, ದೀಪಕ್ ಸೇರಿದಂತೆ ಅವರ ಸಹಕಾರದೊಂದಿಗೆ ಕೆಚ್ಚೆದೆಯ ವೀರ ಕನ್ನಡಿಗ ಯರಗನಹಳ್ಳಿ ಸ್ವಾಮಿ ಹಾಗೂ ಅವರ ತಂಡ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶಾಲೆಗೆ ಉಚಿತವಾಗಿ ಬಣ್ಣ ಬಳಿದು ಮಾದರಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಸರ್ಕಾರಿ ಶಾಲೆಗಳು ಸಮಾಜದ ಆಸ್ತಿಯಾಗಿದ್ದು, ಅವುಗಳ ಅಭಿವೃದ್ಧಿಗೆ ಸಾರ್ವಜನಿಕರು, ದಾನಿಗಳು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟ ಮತ್ತಷ್ಟು ವೃದ್ಧಿಯಾಗಲಿದೆ ಎಂದು ಅವರು ತಿಳಿಸಿದರು. ಶಾಲೆಯ ಅಭಿವೃದ್ಧಿಗೆ ಸ್ಥಳೀಯ ಸಮಾಜಸೇವಕರು ತೋರಿದ ಕಾಳಜಿ ಹಾಗೂ ಸೇವಾ ಮನೋಭಾವ ಇತರರಿಗೂ ಮಾದರಿಯಾಗಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಜನರಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯ ಮಹತ್ವದ್ದಾಗಿದೆ ಎಂದು ಗ್ರಾಮಸ್ಥರು ಪ್ರಶಂಸಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆನಂದ್, ಮುರಳಿ, ರಾಜೇಶ್, ಕನ್ನಡತಿ ಶೀಲಾ, ಕೆಚ್ಚೆದೆಯ ವೀರ ಕನ್ನಡಿಗ ತಂಡದ ವತಿಯಿಂದ ಆಶಾ, ತನುಜಾ, ಇಮ್ರಾನ್, ಮುಸ್ಕಾನ್ , ಸೇರಿದಂತೆ ಹಲವು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.1
- ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.1
- ಕಬಿನಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ನದಿ ದಂಡೆಯ ಜನರಿಗೆ ಎಚ್ಚರಿಕೆ ಮೈಸೂರು, ಆ.1: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಹಿನ್ನೆಲೆ ಕಬಿನಿ ಜಲಾಶಯಕ್ಕೆ 15,500 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕಬಿನಿ ನದಿಯ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ದಂಡೆಯ ನಿವಾಸಿಗಳು ಎಚ್ಚರಿಕೆಯಿಂದ ಇರಲು ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ. ನದಿಗೆ ಇಳಿಯುವುದು, ಮೀನುಗಾರಿಕೆ ಹಾಗೂ ಅನಗತ್ಯವಾಗಿ ನದಿ ದಾಟುವುದನ್ನು ತಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದು, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.1
- ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು4
- ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತ ಕೈಜೋಡಿಸಬೇಕು-ವೆಂಕಟೇಶ್ ಸಮಾಜವನ್ನು ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಯುವಜನತೆ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯವೆಂಕಟೇಶ್ ತಿಳಿಸಿದರು. ಇಂದು ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ. ಪೊಲೀಸ್ ಇಲಾಖೆ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮ.ನಿ.ಪ್ರ.ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ* ವ್ಯಸನ ಮುಕ್ತ ದಿನಾಚರಣೆ ಮಾದಕ (ಡ್ರಗ್ಸ್) ವ್ಯಸನ ವಿರೋಧಿ, ಬಾಲ್ಯವಿವಾಹ, ಪೋಕೋ ಕಾಯ್ದೆ ಬಾಲಗರ್ಭಿಣಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತು ಬಳಕೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳಾಗುತ್ತದೆ. ಇಂದಿನ ಯುವ ಜನತೆ ಭಗತ್ ಸಿಂಗ್.ವಿವೇಕಾನಂದ. ಅಂಬೇಡ್ಕರ್ ರವರ ಆದರ್ಶವನ್ನು ಪಾಲಿಸಬೇಕು ಡ್ರಗ್ಸ್ ಮುಕ್ತ ಭಾರತಕ್ಕೆ ಯುವ ಜನತೆ ಸಂಕಲ್ಪ ಮಾಡಬೇಕು ಎಂದರು ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳಿಗೆ ಬಲಿಯಾಗದೆ ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು. ಡ್ರಗ್ಸ್ ಎಂಬ ಮಾದಕ ವಸ್ತುಗಳು ವಿಶ್ವದಾದ್ಯಂತ ಯುವಜನತೆಯ ಭವಿಷ್ಯವನ್ನು ಹಾಳುಮಾಡುತ್ತಿರುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿವೆ. ಕ್ಷಣಿಕ ಸುಖ ಮತ್ತು ದುಷ್ಟ ಸಹವಾಸದ ಕಾರಣದಿಂದ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಅತ್ಯಂತ ಕಷ್ಟಕರವಾಗಿರುವುದರಿಂದ ಪ್ರತಿಯೊಬ್ಬ ಯುವಕ-ಯುವತಿಯೂ ವ್ಯಸನಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು. ಮಾದಕ ವಸ್ತುಗಳು ಮಾನವನ ಮೆದುಳು, ನರಮಂಡಲ ಹಾಗೂ ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳುಮಾಡುತ್ತವೆ. ಆದ್ದರಿಂದ ಯುವಜನತೆ ವ್ಯಸನದ ದುಷ್ಪರಿಣಾಮಗಳ ಬಗ್ಗೆ ತಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಸಾಮಾಜಿಕ ಜವಾಬ್ದಾರಿಯನ್ನು ವಹಿಸಬೇಕು ಎಂದು ತಿಳಿಸಿದರು. ವ್ಯಸನಮುಕ್ತ ಮನಸ್ಸಿನಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ. ದೈಹಿಕವಾಗಿ ಸದೃಢರಾಗಿದ್ದರೆ ಮಾನಸಿಕವಾಗಿಯೂ ಸದೃಢರಾಗಲು ಸಾಧ್ಯ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಡ್ರಗ್ಸ್ ಹಾಗೂ ಇತರೆ ದುಶ್ಚಟಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಶಾಲಾ-ಕಾಲೇಜುಗಳ ಸುತ್ತಮುತ್ತ ಅಥವಾ ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದರೆ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು. ಹದಿಹರೆಯದ ಮಕ್ಕಳು ವ್ಯಸನದ ಬಲೆಗೆ ಸಿಲುಕದಂತೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಎಂದು ತಿಳಿಸಿದರು. ಯುವಜನತೆ ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಂಡು ದೇಶಪ್ರೇಮ, ಕಾನೂನು ಪಾಲನೆ, ಪೋಷಕರಿಗೆ ಗೌರವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ-ಯುವತಿಯ ಸಂಕಲ್ಪದಿಂದಲೇ ಡ್ರಗ್ಸ್ ಮುಕ್ತ, ಆರೋಗ್ಯವಂತ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ವೆಂಕಟೇಶ್ ಅಭಿಪ್ರಾಯಪಟ್ಟರು. ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಎನ್. ಟಿ. ಯೋಗೇಶ್ ಮಾತನಾಡಿ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಭಿಕ್ಷೆಯ ರೂಪದಲ್ಲಿ ವ್ಯಸನ ಮುಕ್ತ ಮಾಡಲು ಪ್ರತಿಜ್ಞೆಯನ್ನು ಮಾಡಿದವರು ಮಹಾಂತ ಶಿವಯೋಗಿ ಸ್ವಾಮೀಜಿಗಳು ಅವರ ಜಯಂತಿ ಆಚರಣೆ ಆದರ್ಶನಿಯ ಎಂದರು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕ ಮಹದೇವ್ ರವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಸಮಾಜ ಮುಂದೆ ಧೈರ್ಯವಾಗಿ ಎದುರಿಸುವ ಸಾಮರ್ಥ್ಯವನ್ನು ರೂಡಿಸಿಕೊಳ್ಳಬೇಕು. ಹೊರಗೆ ಹೋದ ಹೆಣ್ಣು ಮಕ್ಕಳು ಜಾಗೃತಿಯಿಂದ ಇರುವುದು ಸೂಕ್ತ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಧೂಮಪಾನ, ಮದ್ಯಪಾನ ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಡೋಪಮೀನ್ ಸೇರಿದಂತೆ ಕೆಲವು ರಾಸಾಯನಿಕಗಳ ಉತ್ಪತ್ತಿಯಾಗಿ ತಾತ್ಕಾಲಿಕ ಸಂತೋಷದ ಅನುಭವ ಉಂಟಾಗುತ್ತದೆ. ಆದರೆ ಇದೇ ಕ್ರಮೇಣ ಚಟವಾಗಿ ವ್ಯಕ್ತಿಯನ್ನು ವ್ಯಸನಕ್ಕೆ ದೂಡುತ್ತದೆ. ವ್ಯಸನವು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು. ಇಂದಿನ ಸ್ಪರ್ಧಾತ್ಮಕ ಜೀವನ, ಮಾನಸಿಕ ಒತ್ತಡ, ಆತಂಕ, ಸ್ನೇಹಿತರ ಪ್ರಭಾವ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದ ಕೆಲ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಯಾವುದೇ ಸಮಸ್ಯೆಗೆ ಮಾದಕ ವಸ್ತುಗಳು ಪರಿಹಾರವಲ್ಲ. ಒತ್ತಡ ನಿವಾರಣೆಗೆ ಯೋಗ, ಧ್ಯಾನ, ಕ್ರೀಡೆ, ಸಂಗೀತ, ಪುಸ್ತಕ ಓದು ಹಾಗೂ ಕುಟುಂಬದವರೊಂದಿಗೆ ಮುಕ್ತ ಸಂವಾದ ನಡೆಸುವಂತಹ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿದ್ದು ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದತ್ತ ಗಮನಹರಿಸಬೇಕು. ಪೋಷಕರು ಮಕ್ಕಳ ವರ್ತನೆ, ಸ್ನೇಹ ಬಳಗ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ, ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದರೆ ತಕ್ಷಣ ತಜ್ಞರ ಸಲಹೆ ಪಡೆಯಬೇಕು ಎಂದು ಅವರು ತಿಳಿಸಿದರು. ಇದೆ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸುವುದಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು. ವೇದಿಕೆಯಲ್ಲಿ ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಪುಷ್ಪಲತಾ ಎಂ. ಸಿ.ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳಾದ ತಿಮ್ಮರಾಜು. ಸಿ ಡಬ್ಲ್ಯೂ ಸಿ ಅಧ್ಯಕ್ಷರಾದ ಸುಮಿತ್ರ. ಮುಖಂಡರಾದ ಚಿಕ್ಕಯ್ಯ. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಬಿ. ಎಸ್. ಅನುಪಮಾ. ರಕ್ಷಣಾ ಅಧಿಕಾರಿ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.1
- "ಬಿಜೆಪಿಯವರು ನನ್ನ ಪ್ಯಾಂಟ್-ಅಂಗಿ ಹರಿಯುತ್ತಿದ್ದಾರೆ" : ಡಿಕೆಶಿ ವ್ಯಂಗ್ಯ ರಾಜ್ಯದಲ್ಲಿ ನಿರಂತರ ಮಳೆಯ ಪರಿಣಾಮ ಜಲಾಶಯಗಳು ವೇಗವಾಗಿ ಭರ್ತಿಯಾಗುತ್ತಿದ್ದು, ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಹೋರಾಟಗಾರರು ಜಲಾಶಯಗಳ ಬಳಿ ತೆರಳಬಾರದು ಹಾಗೂ ನೀರು ಬಿಡುವುದಿಲ್ಲ ಎಂದು ನದಿಗಳಿಗೆ ಇಳಿದು ಪ್ರತಿಭಟನೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, “ಆ ರೀತಿ ನದಿಗೆ ಇಳಿದರೆ ಕೊಚ್ಚಿಕೊಂಡು ಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು. ಇದೇ ವೇಳೆ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ರದ್ದಾಗಿದೆ ಎಂದು ತಿಳಿಸಿದರು. “ಪ್ರಸ್ತುತ ಪರಿಸ್ಥಿತಿ ಸೂಕ್ತವಾಗಿಲ್ಲದ ಕಾರಣ ಅವರು ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆ ನಡೆದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ. ಪರಿಸ್ಥಿತಿ ಸಹಜವಾದ ಬಳಿಕ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ” ಎಂದರು. ಬಿಜೆಪಿ ಹೋರಾಟಗಳ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಹೋರಾಟದ ಹೆಸರಿನಲ್ಲಿ ನನ್ನ ಪ್ಯಾಂಟ್, ಅಂಗಿಯನ್ನೇ ಹರಿಯುತ್ತಿದ್ದಾರೆ. ಕರ್ನಾಟಕದ ಸಂಸದರು ರಾಜ್ಯದ ಪರವಾಗಿ ಸಂಸತ್ನಲ್ಲಿ ಧ್ವನಿ ಎತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡ್ಯಾಂಗೆ ಬಾಗಿನ ಅರ್ಪಿಸುವ ಬಗ್ಗೆ ಹೇಗೆ ಮಾತನಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.1
- ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.4
- ಸಿಡಬ್ಲ್ಯೂಆರ್ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು. ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ, ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ ಗೌರವಾಧ್ಯಕ್ಷ ಇದ್ರಿಸ್ಪಾಷ, ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು ಉಪಾಧ್ಯಕ್ಷ ಯೋಗೇಶ್ , ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್ ಉಮೇಶ್ ಎಚ್ .ಎಮ್. ಹೊಸಪುರ ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್, ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್, ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.4