Shuru
Apke Nagar Ki App…
ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಲೋಕಸಭಾ ಸದಸ್ಯರಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಶಿಗ್ಗಾಂವ ಉಪ ವಿಭಾಗ ಅಧಿಕಾರಿಗಳು, ಪ್ರಾಥಮಿಕ ಸಮಿತಿಯ ಪದಾಧಿಕಾರಿಗಳು, ಓಎಸ್ ಸಿಬ್ಬಂದಿ ವರ್ಗದವರು ಹಾಗೂ ವಿದ್ಯುತ್ ಗುತ್ತಿಗೆದಾರರು ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ. ಈ ನಿಯೋಗವು ವಿದ್ಯುತ್ ಕ್ಷೇತ್ರ ಖಾಸಗೀಕರಣವನ್ನು ವಿರೋಧಿಸಿ ಈ ಮನವಿಯನ್ನು ಸಲ್ಲಿಸಿದೆ.
H M ಹರಕುಣಿ
ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಲೋಕಸಭಾ ಸದಸ್ಯರಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಶಿಗ್ಗಾಂವ ಉಪ ವಿಭಾಗ ಅಧಿಕಾರಿಗಳು, ಪ್ರಾಥಮಿಕ ಸಮಿತಿಯ ಪದಾಧಿಕಾರಿಗಳು, ಓಎಸ್ ಸಿಬ್ಬಂದಿ ವರ್ಗದವರು ಹಾಗೂ ವಿದ್ಯುತ್ ಗುತ್ತಿಗೆದಾರರು ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ. ಈ ನಿಯೋಗವು ವಿದ್ಯುತ್ ಕ್ಷೇತ್ರ ಖಾಸಗೀಕರಣವನ್ನು ವಿರೋಧಿಸಿ ಈ ಮನವಿಯನ್ನು ಸಲ್ಲಿಸಿದೆ.
More news from ಕರ್ನಾಟಕ and nearby areas
- ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಅರಬಗೊಂಡ ಗ್ರಾಮದ ಹತ್ತಿರವಿರುವ ಹಾವೇರಿ ಜಿಲ್ಲಾ ಹಾಲು ಒಕ್ಕೂಟದ ಮೇಗಾ ಡೈರಿ ಘಟಕಕ್ಕೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕೆ.ಎಂ.ಎಫ್. ಅಧ್ಯಕ್ಷರಾದ ಶ್ರೀ ಮಂಜನಗೌಡ ಪಾಟೀಲ್, ಉಪಾಧ್ಯಕ್ಷರಾದ ಶ್ರೀ ಉಜ್ಜನಗೌಡ ಮಾವೀನತೋಪ, ಎಂ.ಡಿ. ಶ್ರೀ ಪ್ರದೀಪ ಎಸ್.ಎಂ. ಸೇರಿದಂತೆ ಎಲ್ಲ ನಿರ್ದೇಶಕರು ಉಪಸ್ಥಿತರಿದ್ದರು.4
- ಬಂಕಾಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ 2025-26ನೇ ಸಾಲಿನ ಪಠ್ಯತರ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಿದರು. ದೇಶದ ಸಂಸ್ಕೃತಿ ಹಾಗೂ ಗುಣಮಟ್ಟದ ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಯಾಸೀರ್ ಖಾನ್ ಪಠಾಣ ಒತ್ತಿ ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.1
- ಕಲಘಟಗಿ ತಾಲ್ಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದಲ್ಲಿ ಶುಕ್ರವಾರ ಮಳೆರಾಯನ ಆಗಮನಕ್ಕಾಗಿ ಗ್ರಾಮಸ್ಥರು ವಿಶೇಷವಾಗಿ ಕಪ್ಪೆಗಳ ಮದುವೆ ನೆರವೇರಿಸಿ ಪೂಜೆ ಸಲ್ಲಿಸಿದ್ದು, ಇಡೀ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಮದುವೆಗಾಗಿ ಬೆಳಿಗ್ಗೆ ಅಂಬರೀಷ್ ಕಲಬಾವಿ ಅವರ ಮನೆಯಲ್ಲಿ ಹೆಣ್ಣು ಕಪ್ಪೆಗೆ ಹಣ್ಣು ಇಡಲಾಯಿತು. ನಂತರ ಮಹೇಶ ಹೊಸಮನಿ ಅವರ ಮನೆಯಲ್ಲಿ ಗಂಡು ಕಪ್ಪೆಗೆ ಊಟ ಮಾಡಿ ಬರುವಂತಹ ವಿಶಿಷ್ಟ ಕಾರ್ಯಕ್ರಮವನ್ನು ನಡೆಸಲಾಯಿತು. ಮದುವೆ ಶಾಸ್ತ್ರದ ಭಾಗವಾಗಿ, ಗ್ರಾಮದ ಪ್ರಮುಖ ಓಣಿಗಳಲ್ಲಿ ಹಾಲ ಕಂಬ ತಂದು, ಕರಡಿ ಮಜಲು ನಡೆಸಲಾಯಿತು. ಮಹಿಳೆಯರು ಆರತಿ ಹಿಡಿದು ಕಪ್ಪೆಗಳ ಮೆರವಣಿಗೆ ಮಾಡಿದರು. ನಂತರ ಗ್ರಾಮದ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅರಶಿಣ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಹಿಂದೂ ಸಮಾಜದ ಮದುವೆ ಸಂಪ್ರದಾಯದ ಪ್ರಕಾರ ಕಪ್ಪೆಗಳನ್ನು ವಧು-ವರರಂತೆ ಅಲಂಕರಿಸಲಾಗಿತ್ತು. ಮದುವೆ ಗಂಟು ಕಟ್ಟಿ, ಹೆಣ್ಣು ಹಾಗೂ ಗಂಡು ಕಪ್ಪೆಗಳನ್ನು ಜೊತೆಯಲ್ಲಿ ಇರಿಸಿ ಅರಶಿಣ, ಕುಂಕುಮ ಹಚ್ಚಲಾಯಿತು. ಮಹಿಳೆಯರು, ಮಕ್ಕಳು ಹಾಗೂ ಹಿರಿಯರು ಸೇರಿ ಒಬ್ಬರಿಗೊಬ್ಬರು ಅರಶಿಣ ಎರಚಾಡಿ ಸಂಭ್ರಮಿಸಿದರು. ಐದು ಗಿತ್ತಿಯರು ಆರತಿ ಬೆಳಗಿ ಸುರಿಗಿ ನೀರು ಸುರಿಸಿದರು. ತದನಂತರ ಹೆಣ್ಣು ಕಪ್ಪೆಗೆ ಪತ್ತಲು, ಗಂಡು ಕಪ್ಪೆಗೆ ಬಟ್ಟೆ ತೊಡಿಸಿ, ಬಾಶಿಂಗ್ ಹಾಕಿ ಹೂವು ಮೂಡಿಸಿ, ಬಳೆ ತೊಡಿಸಿ, ಅರಶಿಣ ಬೇರು ಹಾಗೂ ಎಲೆಯಿಂದ ಕಂಕಣ ಭಾಗ್ಯ ಕಟ್ಟಿ ಮದುವೆ ಕಾರ್ಯವನ್ನು ಪೂರ್ಣಗೊಳಿಸಲಾಯಿತು. ಆದಷ್ಟು ಬೇಗನೆ ಮಳೆರಾಯ ಭೂಮಿಗೆ ಆಗಮಿಸಲಿ ಎಂದು ಗ್ರಾಮದ ಎಲ್ಲರೂ ದೇವರಲ್ಲಿ ಪ್ರಾರ್ಥನೆ ಮಾಡಿದರು. ಈ ಕಪ್ಪೆ ಮದುವೆ ಅಂಗವಾಗಿ ಗ್ರಾಮಸ್ಥರು ಅನ್ನಪ್ರಸಾದವನ್ನೂ ಏರ್ಪಡಿಸಿದ್ದರು. ಬ್ರಹ್ಮಲಿಂಗೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ವಿ.ಎಸ್. ಬೆಣ್ಣಿ ಅವರು, ಮಳೆ ಬರುತ್ತದೆ ಎಂಬ ನಂಬಿಕೆಯಿಂದ ಹಿರಿಯರ ಕಾಲದ ಪದ್ಧತಿಯಂತೆ ಗಂಡು ಮತ್ತು ಹೆಣ್ಣು ಕಪ್ಪೆ ಜೋಡಿ ಲಗ್ನ ಕಾರ್ಯವನ್ನು ಭಕ್ತಿಯ ಜೊತೆಗೆ ವಿಜೃಂಭಣೆಯಿಂದ ನೆರವೇರಿಸಲಾಗಿದೆ ಎಂದು ತಿಳಿಸಿದರು.1
- ಗದಗ್ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೊಂಚಿಗೇರಿ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಅಳವಡಿಸಲಾಗಿರುವ ಹೈ ಮಾಸ್ಕ್ ದೀಪ ಇಂದಿಗೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಹೈ ಮಾಸ್ಕ್ ದೀಪ ಸರಿಯಾಗಿ ಆನ್ ಆಗದಿರುವುದು ಮುಖ್ಯ ಸಮಸ್ಯೆಯಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಅವರು 'ನೋಡೋಣ' ಎಂದು ಹೇಳಿ ನಿರ್ಲಕ್ಷ್ಯ ತೋರುತ್ತಿದ್ದಾರೆ.1
- ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಶಾಸಕ ಮಹೇಂದ್ರ ತಮ್ಮಣ್ಣವರ ಅವರ 48ನೇ ವರ್ಷದ ಹುಟ್ಟುಹಬ್ಬವನ್ನು ಮುಗಳಖೋಡ ಪಟ್ಟಣದಲ್ಲಿ ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು. ಈ ಸಂಭ್ರಮದ ಆಚರಣೆಯು ಹಲವು ಕಾರ್ಯಕ್ರಮಗಳನ್ನು ಒಳಗೊಂಡಿತ್ತು. ಆಚರಣೆಯ ಪ್ರಥಮ ಹಂತದಲ್ಲಿ, ಪಟ್ಟಣದ ಆರಾಧ್ಯ ದೇವರಾದ ಶ್ರೀ ಯಲ್ಲಾಲಿಂಗ ಮಹಾರಾಜರ ಕರ್ತೃಗದ್ದಿಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರ ಬಳಿಕ, ಪಟ್ಟಣದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ನಂತರ, ಪಿ.ಎಂ. ಶ್ರೀ ಸರ್ಕಾರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಸಭಾ ಭವನದಲ್ಲಿ ಶಾಸಕರ ಅಭಿಮಾನಿಗಳು ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಅಲ್ಲದೆ, ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳು ಮತ್ತು ಪೆನ್ಗಳನ್ನು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಇನ್ನಷ್ಟು ಅರ್ಥಪೂರ್ಣಗೊಳಿಸಲಾಯಿತು. ಈ ವಿಶೇಷ ಆಚರಣೆಯ ಸಂದರ್ಭದಲ್ಲಿ ಜಗದೀಶ ಮಹಾರಾಜರು, ಪರಪ್ಪ ಖೇತಗೌಡರ, ರಮೇಶ ಯಡವಣ್ಣವರ, ಮಹಾವೀರ ಕುರಾಡೆ, ರಾವಸಾಬ ಗೌಲತ್ತಿನವರ, ಅಶೋಕ ಹಳಿಂಗಳಿ, ಗಂಗಪ್ಪ ಗೋಕಾಕ, ಮುಪ್ಪಯ್ಯಾ ಹಿರೇಮಠ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.1
- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಬೆಳಗಾವಿ ಗಡಿ ಭಾಗದಲ್ಲಿ ಮರಾಠಿ ಭಾಷಿಕರ ಹಕ್ಕುಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಮನವಿ ಸಲ್ಲಿಸಲು ಹೊರಟಿದ್ದ ಎಂಇಎಸ್ ಪುಂಡರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಬೆಳಗಾವಿಯಿಂದ ಕೊಲ್ಹಾಪುರಕ್ಕೆ ರಾಷ್ಟ್ರೀಯ ಹೆದ್ದಾರಿ 48 ಮೂಲಕ ನಿಯೋಗ ಸಮೇತ ತೆರಳುತ್ತಿದ್ದ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸರು, ನಿರ್ದಿಷ್ಟವಾಗಿ ಯಮಕನಮರಡಿ ಪೊಲೀಸರು, ಹತ್ತರಗಿ ಟೋಲ್ ಬಳಿ ತಡೆದಿದ್ದಾರೆ. ಮಹಾರಾಷ್ಟ್ರ ಪೊಲೀಸರ ಸೂಚನೆಯ ಮೇರೆಗೆ ಈ ತಡೆಯನ್ನು ಹಾಕಲಾಗಿದ್ದು, ಮೇಲಾಧಿಕಾರಿಗಳಿಂದ ಪ್ರೋಟೋಕಾಲ್ ಪ್ರಕಾರ ಭೇಟಿಗೆ ಅವಕಾಶ ಕೊಡದಂತೆ ಸಂದೇಶ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಎಂಇಎಸ್ ಮುಖಂಡರು ರಸ್ತೆಯಲ್ಲಿ ಕುಳಿತು ಕರ್ನಾಟಕ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೆ ಬಾಲ ಬಿಚ್ಚಿದ ಎಂಇಎಸ್ ಪುಂಡರಿಗೆ ಪೊಲೀಸರು ಈ ಮೂಲಕ ಬ್ರೇಕ್ ಹಾಕಿದ್ದಾರೆ ಹಾಗೂ ಅವರನ್ನು ಹತ್ತರಗಿ ಟೋಲ್ನಲ್ಲಿ ಬಂಧಿಸಿದ್ದಾರೆ.1
- ಜೂನ್ 22ರಂದು ಬೆಳಗಾವಿಯಲ್ಲಿ ಕನ್ನಡ ಕಡ್ಡಾಯದ ವಿರುದ್ಧ ಎಂಇಎಸ್ ನಾಯಕರು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಅನುಮತಿ ನೀಡಬಾರದೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಚಿಕ್ಕೋಡಿ ಘಟಕವು ಉಪವಿಭಾಗೀಯ ದಂಡಾಧಿಕಾರಿಗಳ ಮೂಲಕ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಕಳೆದ ಐದು ದಶಕಗಳಿಂದ ಗಡಿಭಾಗದ ಬೆಳಗಾವಿಯಲ್ಲಿ ಎಂಇಎಸ್ ನಾಯಕರು ಭಾಷಾ ರಾಜಕಾರಣ ನಡೆಸುತ್ತಾ, ಮರಾಠಿ ಭಾಷಿಕರನ್ನು ಪ್ರಚೋದಿಸಿ ಕರ್ನಾಟಕ ಸರ್ಕಾರ ಹಾಗೂ ಕನ್ನಡಿಗರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಕರವೇ ಆರೋಪಿಸಿದೆ. ನಾಡದ್ರೋಹಿ ಎಂಇಎಸ್ ನಾಯಕರನ್ನು ತಕ್ಷಣವೇ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಗಡಿಪಾರು ಮಾಡಬೇಕೆಂದೂ ಕರವೇ ಆಗ್ರಹಿಸಿದೆ. ಕರವೇ ಚಿಕ್ಕೋಡಿ ತಾಲ್ಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಕಿರೀಟವಾಗಿದ್ದು, ಇಲ್ಲಿ ಕನ್ನಡವೇ ಸಾರ್ವಭೌಮವಾಗಿದೆ. ಕನ್ನಡ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಗೆ ಗೌರವ ನೀಡುವುದು ಇಲ್ಲಿಯ ನಿವಾಸಿಗಳ ಕರ್ತವ್ಯವಾಗಿದೆ. ಜೂನ್ 22 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಎಂಇಎಸ್ ನಾಯಕರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಬೇಕು ಹಾಗೂ ಅವರಿಗೆ ಯಾವುದೇ ಕಾರಣಕ್ಕೂ ಪ್ರತಿಭಟನೆಗೆ ಅನುಮತಿ ನೀಡಬಾರದು ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ಕನ್ನಡ ನೆಲ, ಜಲ ಸಂಪನ್ಮೂಲಗಳನ್ನು ಮತ್ತು ಕರ್ನಾಟಕ ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಕನ್ನಡಕ್ಕೆ ದ್ರೋಹ ಮಾಡುವ ಎಂಇಎಸ್ನ ಕಾರ್ಯ ನಾಡದ್ರೋಹಿಯಾಗಿದೆ. ರಾಜಕೀಯ ಒತ್ತಡಕ್ಕೆ ಮಣಿದು ಬೆಳಗಾವಿ ಜಿಲ್ಲಾಡಳಿತ ಜೂನ್ 22ರಂದು ನಾಡದ್ರೋಹಿ ಎಂಇಎಸ್ಗೆ ಪ್ರತಿಭಟನೆಗೆ ಅನುಮತಿ ನೀಡಿದರೆ, ಅದಕ್ಕೆ ಪ್ರತಿಯಾಗಿ ಕರವೇ ಅಂದೇ ಬೆಳಗಾವಿಯಲ್ಲಿ “ಕನ್ನಡವೇ ಸಾರ್ವಭೌಮ” ಎಂಬ ಕನ್ನಡದ ಸ್ವಾಭಿಮಾನಿ ರ್ಯಾಲಿಯನ್ನು ನಡೆಸಲಿದೆ ಎಂದು ಎಚ್ಚರಿಸಿದರು. ಈ ರ್ಯಾಲಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಲಕ್ಷಾಂತರ ಕರವೇ ಕಾರ್ಯಕರ್ತರು ಬೆಳಗಾವಿಗೆ ಆಗಮಿಸಲಿದ್ದು, ಇದು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಅವರು ವಿವರಿಸಿದರು. ಈ ಸಂದರ್ಭದಲ್ಲಿ ಮೋಹನ ಪಾಟೀಲ, ಲಕ್ಷ್ಮಿಕಾಂತ ಖೋತ, ಅಮೂಲ ನಾವಿ, ರಮೇಶ ಡಂಗೇರ, ಅನೀಲ ನಾವಿ, ಚಿದಾನಂದ ಶಿರೋಳೆ, ಶಂಕರ ಅವಡಖಾನ, ಖಾನಪ್ಪ ಬಾಡಕರ, ದುಂಡಪ್ಪ ಚೌಗಲಾ, ಶುಭಂ ಕದಂ, ಸುರೇಶ ಖದ್ದಿ, ರಫಿಕ್ ಪಠಾಣ, ದುಂಡಪ್ಪ ಬಡಿಗೇರ, ರುದ್ರಯ್ಯ ಹೀರೆಮಠ, ಯಾಸೀನ್ ಜಮಾದಾರ ಸೇರಿದಂತೆ ಹಲವು ಕನ್ನಡಪರ ಕಾರ್ಯಕರ್ತರು ಉಪಸ್ಥಿತರಿದ್ದರು.1
- ಶಿಗ್ಗಾವಿ ತಾಲ್ಲೂಕಿನ ಕ್ಯಾಲಕೊಂಡ ಗ್ರಾಮದಲ್ಲಿ ಇಬ್ಬರು ಯುವ ಅಗ್ನಿವೀರರಿಗೆ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಹಾಗೂ ಗೆಳೆಯರ ಬಳಗದ ವತಿಯಿಂದ ಭವ್ಯ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅಗ್ನಿವೀರರಾಗಿ ಆಯ್ಕೆಯಾದ ಕೃಷ್ಣಪ್ಪ ಮಂಜುನಾಥ ನಡುವಿನಮನಿ ಮತ್ತು ಪ್ರಶಾಂತ ನಾಗಪ್ಪ ಶಿಗ್ಗಾವಿ ಅವರು ಮಹಾರಾಷ್ಟ್ರದ ನಾಸಿಕ್ ಆರ್.ಟಿ. ತರಬೇತಿ ಕೇಂದ್ರದಲ್ಲಿ ತರಬೇತಿಗೆ ಹಾಜರಾಗಲು ಹೊರಡುತ್ತಿರುವ ಹಿನ್ನೆಲೆಯಲ್ಲಿ ಈ ಗೌರವ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ರಾಜಶೇಖರಸ್ವಾಮಿ ಹಿರೇಮಠ ಅವರು ಅಗ್ನಿವೀರರಿಗೆ ಸಿಹಿ ತಿನ್ನಿಸುವ ಮೂಲಕ ಶುಭಾಶಯ ಕೋರಿದರು. ಇಂದಿನ ಯುವಕರು ಯಾವುದೇ ಚಟಗಳಿಗೆ ದಾಸರಾಗದೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕು ಎಂದು ಕಿವಿಮಾತು ಹೇಳಿದರು. ಈ ಇಬ್ಬರು ಯುವಕರು ದೇಶಸೇವೆ ಮಾಡಲು ಆಯ್ಕೆಯಾಗಿರುವುದು ನಮ್ಮ ಕ್ಯಾಲಕೊಂಡ ಗ್ರಾಮಕ್ಕೆ ಹೆಮ್ಮೆಯ ವಿಷಯ ಎಂದು ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಯುವ ಧುರೀಣ ಮನೋಹರ್ ಹಾದಿಮನಿ, ಈ ಇಬ್ಬರು ಯುವಕರು ಅಗ್ನಿವೀರರಾಗಿ ಆಯ್ಕೆಯಾಗಿ ನಮ್ಮೂರಿನ ಮುಂದಿನ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹೇಳಿದರು. ಮುಂದಿನ ಯುವಕರು ಸಹ ಇದೇ ರೀತಿ ದೇಶಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ನಾಗರಿಕ ಸೇವಾ ಕೇಂದ್ರದ ನಿರ್ವಾಹಕ ಮುತ್ತಪ್ಪ ಎಸ್. ಮಾತನಾಡಿ, ಇಬ್ಬರು ಅಗ್ನಿವೀರರ ಶ್ರಮ ಸಾಕಷ್ಟಿದೆ ಹಾಗೂ ಬಡತನದಲ್ಲಿ ಬೆಳೆದು ನಿರಂತರ ಪರಿಶ್ರಮದ ಫಲವಾಗಿ ದೇಶಸೇವೆಗೆ ಹೊರಡುತ್ತಿರುವುದು ಗ್ರಾಮಕ್ಕೆ ಹೆಮ್ಮೆ ಎನಿಸುತ್ತದೆ ಎಂದು ಶ್ಲಾಘಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಜಾಪರ ಬಾಗವಾನ, ಮಾಂತೇಶ ಮುಶಮ್ಮನವರ, ಮಂಜುನಾಥ ಹೊಸಮನಿ, ವೀರುಪಾಕ್ಷರೆಡ್ಡಿ ಅರಳಿಕಟ್ಟಿ, ಮನೋಜ ಹೂಗಾರ, ಬಾಬು ಗೊಣೆಪ್ಪನವರ, ರಿಯಾಜ ಮುಲ್ಲಾ, ಕಾರ್ತಿಕ ಚಿನ್ನಣ್ಣವರ, ಖಲಂದರ ಅಂಚಿ, ಹರೀಶ ಕಳ್ಳಮನಿ, ಹಾಗೂ ಗ್ರಾಮದ ಗುರು ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.1