Shuru
Apke Nagar Ki App…
ಪ್ರೆಸ್ ಕ್ಲಬ್ ಕೌನಿ ಸಿಲ್ ರಾಜ್ಯಾಧ್ಯಕ್ಷ ರಾಘವೇಂದ್ರ ಆಚಾರ್ ಹಾಗೂ ಕಾರ್ಯದರ್ಶಿ ಶ್ರೀಮತಿ ಆಶಾ ರವರಿಗೆ ಸನ್ಮಾನ ಯಳಂದೂರು ನ್ಯೂಸ್ ಪ್ರೆಸ್ ಕ್ಲಬ್ ಕೌನಿ ಸಿಲ್ ರಾಜ್ಯಾಧ್ಯಕ್ಷ ರಾಘವೇಂದ್ರ ಆಚಾರ್ ಹಾಗೂ ಕಾರ್ಯದರ್ಶಿ ಶ್ರೀಮತಿ ಆಶಾ ರವರು ಯಳಂದೂರು ಕೆಪಿಎಸ್ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ಡಾ. ನಂಜುಂಡಯ್ಯ ಶಿಕ್ಷಕರು ಹಾಜರಿದರು.
S.Puttaswamyhonnur
ಪ್ರೆಸ್ ಕ್ಲಬ್ ಕೌನಿ ಸಿಲ್ ರಾಜ್ಯಾಧ್ಯಕ್ಷ ರಾಘವೇಂದ್ರ ಆಚಾರ್ ಹಾಗೂ ಕಾರ್ಯದರ್ಶಿ ಶ್ರೀಮತಿ ಆಶಾ ರವರಿಗೆ ಸನ್ಮಾನ ಯಳಂದೂರು ನ್ಯೂಸ್ ಪ್ರೆಸ್ ಕ್ಲಬ್ ಕೌನಿ ಸಿಲ್ ರಾಜ್ಯಾಧ್ಯಕ್ಷ ರಾಘವೇಂದ್ರ ಆಚಾರ್ ಹಾಗೂ ಕಾರ್ಯದರ್ಶಿ ಶ್ರೀಮತಿ ಆಶಾ ರವರು ಯಳಂದೂರು ಕೆಪಿಎಸ್ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ಡಾ. ನಂಜುಂಡಯ್ಯ ಶಿಕ್ಷಕರು ಹಾಜರಿದರು.
More news from ಕರ್ನಾಟಕ and nearby areas
- ಖರ್ಗೆರವರನ್ನು ಅಪಮಾನಿಸಿರುವ ಸಂವಿಧಾನ ವಿರೋಧಿ ಕ್ರಮವನ್ನು ಖಂಡಿಸಿ ಪ್ರತಿಭಟನೆ ಮಳವಳ್ಳಿ: ಉತ್ತರಕಾಂಡ ರಾಜ್ಯದ ಹಲ್ದ್ವಾನಿಯಲ್ಲಿ ಮನುವಾಧಿಗಳು ಆಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರನ್ನು ಅಪಮಾನಿಸಿರುವ ಸಂವಿಧಾನ ವಿರೋಧಿ ಕ್ರಮವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮುಖಂಡರು ಮಳವಳ್ಳಿ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮನುವಾದಿಗಳ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಡಿಪಿ ಸದಸ್ಯ ಶಶಿರಾಜ್ ಮಾತನಾಡಿ,ಬಹುಜನರನ್ನು ಒಡೆಯುವ ಕೆಲಸವನ್ನು ಮನುವಾದಿಗಳು ಮಾಡುತ್ತಿದ್ದಾರೆ. ದಲಿತರು ,ಅಲ್ಪ ಸಂಖ್ಯಾತರು,ಹಿಂದುಳಿದವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಮನುವಾದಿಗಳಿಗೆ ನಾವೆಲ್ಲರೂ ತಕ್ಕಪಾಠ ಕಲಿಸಬೇಕಾಗಿದೆ ಎಂದರು. ಇದೇ ವೇಳೆ ಶಿರಸೇಲ್ದಾರ್ ಗುರುಪ್ರಸಾದರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು ಪ್ರತಿಭಟನೆಯಲ್ಲಿ ಮಾಜಿ ಪುರಸಭಾಧ್ಯಕ್ಷ ದೊಡ್ಡಯ್ಯ, ಕಸಾಪ ಅಧ್ಯಕ್ಷ ಚೇತನಕುಮಾರ್,ಕೆಡಿ ಪಿ ಸದಸ್ಯ ಶಶಿರಾಜ್ ,ಡಾ.ಪ್ರಸಾದ,ಶಂಕರ , ಶೇಖರ , ಕಲ್ಕುಣಿನಂಜುಂಡಸ್ವಾಮಿ, ಚಿನ್ನಸ್ವಾಮಿ, ಶಾಂತರಾಜು ಸೇರಿದಂತೆ ಹಲವರು ಇದ್ದರು.1
- ತೆರಕಣಾಂಬಿ:ದಾಸ ಬಣಜಿಗ ಟ್ರಸ್ಟ್ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ. ಗುಂಡ್ಲುಪೇಟೆ : ಬದಲಾಗುತ್ತಿರುವ ಜೀವನಶೈಲಿ, ಆಹಾರ ಪದ್ಧತಿ ಹಾಗೂ ಅತಿಯಾದ ಮೊಬೈಲ್ ಬಳಕೆಯಿಂದ ಕಣ್ಣಿನ ಸಮಸ್ಯೆಗಳು ಹೆಚ್ಚಾಗುತ್ತಿವೆ. ಸಮಸ್ಯೆ ಕಂಡುಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ಅರವಿಂದ ಕಣ್ಣಾಸ್ಪತ್ರೆಯ ಸಂಪರ್ಕಾಧಿಕಾರಿ ಬಿ. ವಿಜಯಕಾಂತ್ ಸಲಹೆ ನೀಡಿದರು. ತೆರಕಣಾಂಬಿ ಗ್ರಾಮದಲ್ಲಿ ಶ್ರೀ ದಾಸಬಣಜಿಗ ಟ್ರಸ್ಟ್ ಹಾಗೂ ಯುವಕ ಸಂಘದ ಸಹಯೋಗದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಹಾಗೂ ಯುವಕರಲ್ಲಿಯೂ ಕಣ್ಣಿನ ತೊಂದರೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಸಕ್ಕರೆ ಕಾಯಿಲೆಯಿಂದ ಕಣ್ಣಿನ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ನಿರ್ಲಕ್ಷ್ಯ ಮಾಡದೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು. ಶಿಬಿರದಲ್ಲಿ 200 ಮಂದಿಯನ್ನು ತಜ್ಞ ವೈದ್ಯರಾದ ಡಾ. ಕೃತಿನ್ ಷಾ ಹಾಗೂ ಡಾ. ಹರಿಕುಮಾರ್ ಮತ್ತು ಸಿಬ್ಬಂದಿ ತಪಾಸಣೆ ನಡೆಸಿದರು. ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಹತ್ತಿರ-ದೂರದೃಷ್ಟಿ ದೋಷ ಸೇರಿದಂತೆ ವಿವಿಧ ಕಣ್ಣಿನ ಸಮಸ್ಯೆಗಳನ್ನು ಪರಿಶೀಲಿಸಲಾಯಿತು. ಶಸ್ತ್ರಚಿಕಿತ್ಸೆ ಅಗತ್ಯವಿದ್ದ 45 ಮಂದಿಯನ್ನು ಕೊಯಮತ್ತೂರಿಗೆ ಕರೆದೊಯ್ಯಲಾಯಿತು. ಶ್ರೀ ದಾಸಬಣಜಿಗ ಟ್ರಸ್ಟ್ ಅಧ್ಯಕ್ಷ ಟಿ. ನಾಗೇಂದ್ರ, ಉಪಾಧ್ಯಕ್ಷ ಎ. ಗಣೇಶ್, ಕಾರ್ಯದರ್ಶಿ ಟಿ.ಎಸ್. ವಿನೋದ್ ಕುಮಾರ್, ಯುವಕರ ಸಂಘದ ಅಧ್ಯಕ್ಷ ಜೆ. ಶಿವಕುಮಾರ್, ಉಪಾಧ್ಯಕ್ಷ ಟಿ. ಪ್ರಕಾಶ್, ಕಾರ್ಯದರ್ಶಿ ಶ್ರೀನಿವಾಸ್ ಸೇರಿದಂತೆ ಟ್ರಸ್ಟ್ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಈರೋಡ್ ಲಯನ್ಸ್ ಕ್ಲಬ್ನ ಪ್ರತಿನಿಧಿಗಳು ಉಪಸ್ಥಿತರಿದ್ದರು.4
- *"ನೀರಾವರಿ ಯೋಜನೆಗಳಿಗೆ ವೇಗ ನೀಡಿ - ಭೂಸ್ವಾಧೀನ ವ್ಯಾಜ್ಯ ಇತ್ಯರ್ಥಕ್ಕೆ ಮಧ್ಯಸ್ಥಿಕೆ ಮೊರೆ"* *"ಕೆರೆಗಳಿಗೆ ನೀರು ತುಂಬಿಸಿ, ಅಂತರಜಲ ಹೆಚ್ಚಿಸಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ"* *ಬೆಂಗಳೂರು, ಆ, 28:* ರಾಜ್ಯದ ಜಲಸಂಪನ್ಮೂಲ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ *ಎನ್. ಚಲುವರಾಯಸ್ವಾಮಿ* ಇಂದು ವಿಧಾನಸೌಧದ 3ನೇ ಮಹಡಿಯಲ್ಲಿ *ನಾಲ್ಕು ನಿಗಮಗಳ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ* ನಡೆಸಿದರು. ಕೃಷ್ಣಾ, ಕಾವೇರಿ, ವಿಶ್ವೇಶ್ವರಯ್ಯ ಹಾಗೂ ಕರ್ನಾಟಕ ನೀರಾವರಿ ನಿಗಮಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಸುದೀರ್ಘವಾಗಿ ಪರಾಮರ್ಶಿಸಿದ ಸಚಿವರು, ಬಾಕಿ ಯೋಜನೆಗಳಿಗೆ ವೇಗ ನೀಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು. *ಕೆರೆಗಳ ಭರ್ತಿಗೆ ಆದ್ಯತೆ:* ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೀರನ್ನು ಪಂಪ್ ಮಾಡಿ ಕೆರೆ-ಕಟ್ಟೆಗಳನ್ನು ತುಂಬಿಸಬೇಕು. ಅಂತರಜಲ ಹೆಚ್ಚಳಕ್ಕೆ ಸಾಂಪ್ರದಾಯಿಕ ವಿಧಾನದ ಜೊತೆಗೆ ವೈಜ್ಞಾನಿಕ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ಯುಕೆಪಿ-3 ವಿವಾದಗಳಿಗೆ 'ಮಧ್ಯಸ್ಥಿಕೆ' ಮದ್ದು:* ಕೃಷ್ಣಾ ಮೇಲ್ದಂಡೆ ಯೋಜನೆ (UKP-3) ಹಂತ 1 ಮತ್ತು 2ರಲ್ಲಿ 20 ವರ್ಷಗಳ ಹಿಂದಿನ ಸುಮಾರು *1500 ಭೂಸ್ವಾಧೀನ ಪ್ರಕರಣಗಳು* ನ್ಯಾಯಾಲಯದಲ್ಲಿ ಬಾಕಿ ಇವೆ. ಇವುಗಳನ್ನು *'ಮಧ್ಯಸ್ಥಿಕೆ' (Mediation) ಮೂಲಕ* ತ್ವರಿತವಾಗಿ ಇತ್ಯರ್ಥಪಡಿಸಿ 9 ಉಪ-ಯೋಜನೆಗಳ ಭೂಸ್ವಾಧೀನ ಚುರುಕುಗೊಳಿಸುವಂತೆ ತಾಕೀತು ಮಾಡಿದರು. ಇತ್ತೀಚೆಗೆ ಸಚಿವ ಸಂಪುಟ ಘೋಷಿಸಿರುವ ಪರಿಹಾರದ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ದೇಶಿಸಿದರು. *ಮೇಕೆದಾಟು ಯೋಜನೆ:* 67 ಟಿಎಂಸಿ ಸಾಮರ್ಥ್ಯದ ಪರಿಷ್ಕೃತ ಡಿಪಿಆರ್ ಅನ್ನು ಆಗಸ್ಟ್ 13ರಂದು ಕೇಂದ್ರಕ್ಕೆ ಕಳುಹಿಸಲಾಗಿದೆ. ಡ್ಯಾಂ ಸುತ್ತಲೂ ನೀರಾವರಿ ಪ್ರದೇಶವಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ತಮಿಳುನಾಡಿನ ಅನುಮಾನಗಳಿಗೆ ತಾರ್ಕಿಕ ಅಂತ್ಯ ಹಾಡಲಾಗಿದೆ. ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ಸೂಚನೆ. *ಮಹದಾಯಿ (ಕಳಸಾ-ಬಂಡೂರಿ):* ಜಲವಿವಾದ ನ್ಯಾಯಾಧಿಕರಣ ಅಂತಿಮ ತೀರ್ಪು ನೀಡಿದ್ದು, ಕೇಂದ್ರ ಜಲ ಆಯೋಗ (CWC) ಪರಿಷ್ಕೃತ ಡಿಪಿಆರ್ಗೆ ಅನುಮತಿ ನೀಡಿದೆ. ಸುಪ್ರೀಂ ಕೋರ್ಟ್ನಲ್ಲಿ ಯಾವುದೇ ಪ್ರಕರಣ ಇಲ್ಲದಿದ್ದರೂ ಅರಣ್ಯ ಇಲಾಖೆ ಪ್ರಕರಣದ ಬಗ್ಗೆ ಪ್ರಸ್ತಾಪಿಸುತ್ತಿದೆ. ಹೀಗಾಗಿ ಅರಣ್ಯ ಇಲಾಖೆಗೆ ಪತ್ರ ಬರೆದು ವಾಸ್ತವ ತಿಳಿಸಿ, *ನ್ಯಾಷನಲ್ ಬೋರ್ಡ್ ಫಾರ್ ವೈಲ್ಡ್ ಲೈಫ್ (NBWL) ಕ್ಲಿಯರೆನ್ಸ್* ಚುರುಕುಗೊಳಿಸಲು ಸೂಚನೆ. *ಎತ್ತಿನಹೊಳೆ ಯೋಜನೆ:* 256 ಕಿ.ಮೀ ಉದ್ದದ ಗುರುತ್ವಾಕರ್ಷಣಾ ಕಾಲುವೆಯಲ್ಲಿ ಈಗಾಗಲೇ 40 ಕಿ.ಮೀ ವರೆಗೆ ನೀರು ಹರಿದಿದೆ. ಮೊದಲ ಹಂತದಲ್ಲಿ 111 ಹೆಕ್ಟೇರ್ ಅರಣ್ಯ ಬಳಕೆಗೆ ಕೇಂದ್ರದ ಒಪ್ಪಿಗೆ ಸಿಕ್ಕಿದ್ದು, ಸಣ್ಣಪುಟ್ಟ ಸಮಸ್ಯೆ ಬಗೆಹರಿಸಲು ಹಾಸನ ಜಿಲ್ಲಾಧಿಕಾರಿಗೆ ಸೂಚನೆ. *ಭದ್ರಾ ಮೇಲ್ದಂಡೆ:* 2023-24ರ ಬಜೆಟ್ನಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ *5,300 ಕೋಟಿ ರೂ. ನೆರವು* ಇನ್ನೂ ಬಿಡುಗಡೆಯಾಗದ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತ. *ತುಂಗಭದ್ರಾ ಡ್ಯಾಂ:* ಎಲ್ಲಾ ಗೇಟ್ಗಳನ್ನು ಹೊಸದಾಗಿ ಅಳವಡಿಸಲಾಗಿದ್ದು, ನವಲಿ ಸಮತೋಲನಾ ಜಲಾಶಯ ನಿರ್ಮಾಣದ ಬಗ್ಗೆಯೂ ಪ್ರಸ್ತಾಪ. *ಆರ್ಥಿಕ ಸಮಸ್ಯೆಗಳಿಗೆ ಸಿಎಂ ಜೊತೆ ಚರ್ಚೆ:* ಇಲಾಖೆಯ ಬಾಕಿ ಬಿಲ್ಗಳ ಪಾವತಿ ಮತ್ತು ಆರ್ಥಿಕ ಸಮಸ್ಯೆಗಳ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಪ್ರತ್ಯೇಕ ಸಭೆಯಲ್ಲಿ ಪರಿಹಾರ ಕಂಡುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು. ಪ್ರಸ್ತುತ ಇಲಾಖೆಯಲ್ಲಿ *16,000 ಕೋಟಿ ರೂ. ಮೊತ್ತದ ಹೊಸ ಯೋಜನೆಗಳು* ಪ್ರಗತಿಯಲ್ಲಿವೆ. ವಿಶ್ವಬ್ಯಾಂಕ್ ನೆರವಿನ DRIP ಮತ್ತು ಜಲಶಕ್ತಿ ಸಚಿವಾಲಯದ M-CADWM ಯೋಜನೆಗಳ ಕುರಿತೂ ಪರಾಮರ್ಶೆ ನಡೆಯಿತು. ರಾಜ್ಯದಲ್ಲಿ 140.60 ಲಕ್ಷ ಹೆಕ್ಟೇರ್ ಬೇಸಾಯ ಯೋಗ್ಯ ಭೂಮಿ ಇದ್ದು, 107 ಲಕ್ಷ ಹೆಕ್ಟೇರ್ ಬಿತ್ತನೆ ಕ್ಷೇತ್ರದಲ್ಲಿ ಬೃಹತ್ ನೀರಾವರಿ ಯೋಜನೆಯಡಿ 42 ಲಕ್ಷ ಹೆಕ್ಟೇರ್ ಪ್ರದೇಶವನ್ನು ತರಲಾಗಿದೆ. ಸಭೆಯಲ್ಲಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ *ಗೌರವ್ ಗುಪ್ತ* ಸೇರಿದಂತೆ ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.1
- ಮೈಸೂರು : ಅರಣ್ಯ ಭವನದಲ್ಲಿ ನಮ್ಮ ದಸರಾ ಗಜಪಡೆ ಭರ್ಜರಿ ರಿಲ್ಯಾಕ್ಸ್ ನಾಡಹಬ್ಬ ದಸರಾ 2026 ಹಿನ್ನಲೆ ಮೈಸೂರಿಗೆ ಆಗಮಿಸಿದ ಗಜಪಡೆ ಅರಣ್ಯ ಭವನದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿದೆ.ಮೊದಲ ಹಂತದಲ್ಲಿ ಬಂದಿರುವ 9 ಆನೆಗಳ ತಂಡ ಅರಣ್ಯ ಭವನದಲ್ಲಿ ಬೀಡು ಬಿಟ್ಟಿವೆ. ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಆನೆಗಳನ್ನ ಸಂಪ್ರದಾಯವಾಗಿ ಸ್ವಾಗತಿಸಲಾಗುತ್ತದೆ. ಅಕ್ಟೋಬರ್ 21 ರಂದು ನಡೆಯಲಿರುವ ಜಂಬೂಸವಾರಿಗೆ ಗಜಪಡೆ ಸಜ್ಜಾಗಲಿದೆ...1
- News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews1
- All About,Could you please Sir ji, Clear about your statement for "Concrete Road Aane ke Inkamath Hai" *ಭಾರತ ನಲ್ಲಿ ವೈರಲ್*1
- ತಾಲೂಕು ಪಿಡಬ್ಲ್ಯೂಡಿ ಸಿವಿಲ್ ಗುತ್ತಿಗೆದಾರರ ಸಹಕಾರ ಸಂಘದ ಕಚೇರಿಯಲ್ಲಿ ಜಿ ಸೇವಾ ಕೇಂದ್ರ ಉದ್ಘಾಟನೆ ಜಿ ಸೇವಾ ಕೇಂದ್ರದಿಂದ ಗುತ್ತಿಗೆದಾರರಿಗೆ ಅನುಕೂಲ : ಪಿಡಬ್ಲ್ಯೂಡಿ ಇಇ ಕಿರಣ್ ತಾಲೂಕು ಪಿಡಬ್ಲ್ಯೂಡಿ ಸಿವಿಲ್ ಗುತ್ತಿಗೆದಾರರ ಸಹಕಾರ ಸಂಘದ ಕಚೇರಿಯಲ್ಲಿ ಜಿ ಸೇವಾ ಕೇಂದ್ರ ಉದ್ಘಾಟನೆ ಚಾಮರಾಜನಗರ: ತಾಲೂಕು ಲೋಕೋಪಯೋಗಿ ಇಲಾಖೆ ಸಿವಿಲ್ ಗುತ್ತಿಗೆದಾರರ ಸಹಕಾರ ಸಂಘದಲ್ಲಿ ಜಿ ಸೇವಾ ಕೇಂದ್ರ ಆರಂಭವಾಗಿರುವುದು ಗುತ್ತಿಗೆದಾರರಿಗೆ ಅನುಕೂಲವಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಕಿರಣ್ ಹೇಳಿದರು. ನಗರದ ತಾಲೂಕು ಲೋಕೋಪಯೋಗಿ ಇಲಾಖೆ ಸಿವಿಲ್ ಗುತ್ತಿಗೆದಾರರ ಸಹಕಾರ ಸಂಘದ ಕಚೇರಿಯಲ್ಲಿ ನೂತನವಾಗಿ ಆರಂಭಿಸಲಾದ ಜಿ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕು ಲೋಕೋಪಯೋಗಿ ಇಲಾಖೆ ಸಿವಿಲ್ ಗುತ್ತಿಗೆದಾರರ ಸಹಕಾರ ಸಂಘವು ಪ್ರತಿ ವರ್ಷವೂ ಲಾಭಾಂಶದಲ್ಲಿ ನಡೆಯುತ್ತಿರುವುದು ತುಂಬಾ ಸಂತಸವಾಗಿದೆ. ಸಂಘದ ಪ್ರಗತಿ ನೋಡಿದರೆ ಮುಂದಿನ ದಿನಗಳಲ್ಲಿ ಸಂಘವು ಚೆನ್ನಾಗಿ ಬೆಳೆಯಲಿದೆ. ನಮಗೂ ನಿಮಗೂ ಜಿಲ್ಲೆಗೆ ಸಹಕಾರವಾಗಿದೆ. ಸ್ಟ್ಯಾಂಪ್ ಪೇಪರ್ ಲಾಭಾಂಶ ತರುವ ಕಾರ್ಯವಲ್ಲ. ಎಲ್ಲರೂ ಬರಲು, ಒಂದು ಕಡೆ ಸೇರುವ ಒಂದು ಜಾಗವಾಗಿದ್ದು, ಇಲ್ಲೇ ಗುತ್ತಿಗೆದಾರರು ಸ್ಟ್ಯಾಂಪ್ ಪೇಪರ್ ಖರೀದಿಸಿ ವ್ಯವಹಾರ ಮಾಡಲು ಅನುಕೂಲವಾಗುತ್ತದೆ. ಇದರಿಂದ ಚಾಮರಾಜನಗರದಲ್ಲಿ ವ್ಯಾಪಾರ ವಹಿವಾಟು ಜಾಸ್ತಿ ಯಾಗುತ್ತಿದ್ದು. ದಿನದಿನೇ ವ್ಯಾಪಾರ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಸ್ಟ್ಯಾಂಪ್ ಪೇಪರ್ ಹೆಚ್ಚಾಗಿ ಬೇಕಾಗುತ್ತದೆ. ಇದು ಒಂದು ಒಳ್ಳೆಯ ಕೆಲಸವಾಗಿದೆ ಎಂದರು. ಗುತ್ತಿಗೆದಾರರು ಯಂತ್ರೋಪಕರಣಕ್ಕಾಗಿ ಕಾಯುವ ಸ್ಥಿತಿ ಇದೆ. ಒಂದೇ ಸಮಯದಲ್ಲಿ ಕೆಲಸಗಳು ಆಗುವುದರಿಂದ ಯಂತ್ರೋಪಕರಣಗಳಿಗೆ ಡಿಮ್ಯಾಂಡ್ ಆಗುತ್ತದೆ. ಆಗಾಗಿ ಆದ್ಯತೆ ಮೇರೆಗೆ ಯಂತ್ರೋಪಕರಣ ಸಿಗುವಂತಹ ಕೆಲಸ ಆಗಬೇಕಾಗಿದೆ ಹಿಂದೆ ಇಲಾಖೆಯಿಂದ ಯಂತ್ರೋಪಕರಣಗಳನ್ನು ಗುತ್ತಿಗೆದಾರರಿಗೆ ಬಾಡಿಗೆ ರೂಪದಲ್ಲಿ ನೀಡಲಾಗುತ್ತಿತ್ತು ಅದನ್ನು ಈಗ ಕಡಿಮೆ ಮಾಡಲಾಗಿದೆ. ನಿಮಗೆ ಅದು ಅವಕಾಶ ಇದೆ.ಅಂತಹ ಯಂತ್ರೋಪಕರಣಗಳ ಸೇವಾ ಕೇಂದ್ರ ಮಾಡಿದರೆ ಸಂಘಕ್ಕೂ ಗುತ್ತಿಗೆದಾರರಿಗೂ ಹೆಚ್ಚಿನ ಅನುಕೂಲ ಆಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಚಾಮರಾಜನಗರ ತಾಲೂಕು ಲೋಕೋಪಯೋಗಿ ಇಲಾಖೆ ಸಿವಿಲ್ ಗುತ್ತಿಗೆದಾರರ ಸಹಕಾರ ಸಂಘದ ಅಧ್ಯಕ್ಷ ಅಯ್ಯನಪುರ ಶಿವಕುಮಾರ್ ಮಾತನಾಡಿ, ಸಂಘದ ಆಶಯದಂತೆ ಇಂದು ಜಿ ಸೇವಾ ಕೇಂದ್ರ ಆರಂಭಿಸಲಾಗಿದೆ. ಗುತ್ತಿಗೆದಾರರ ಸದಸ್ಯರು, ಸದುಪಯೋಗಪಡಿಸಿಕೊಂಡು ಸಂಘದ ಅಭಿವೃದ್ಧಿಗಾಗಿ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಸಂಘದ ಪದಾಧಿಕಾರಿಗಳು. ಇದರ ಸದುಪಯೋಗ ಪಡಿಸಿಕೊಂಡು ಸಂಘದ ಅಭಿವೃದ್ಧಿ ಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪಿಆರ್ಇಡಿ ಇಇ ರಮೇಶಕುಮಾರ್, ಆರ್ಡಬ್ಲ್ಯೂಎಸ್ ಇಇ ಸಂತೋಷ್ ಕುಮಾರ್, ಪಿಡಬ್ಲ್ಯೂಡಿ ಎಇಇ ಶಾಂತಮ್ಮ, ಟಿಎ ಮಾದೇಶ್, ಕ್ಯೂಸಿ ಎಇಇ ಮಹದೇವಸ್ವಾಮಿ ಎಇಇ ರಮೇಶ್, ಎಇಗಳಾದ ಕೃಷ್ಣಮೂರ್ತಿ, ರಘು, ರೇವಣ್ಣ, ಐಶ್ವರ್ಯ, ಚಾಮರಾಜನಗರ ತಾಲೂಕು ಲೋಕೋಪಯೋಗಿ ಇಲಾಖೆ ಸಿವಿಲ್ ಗುತ್ತಿಗೆದಾರರ ಸಹಕಾರ ಸಂಘದ ಉಪಾಧ್ಯಕ್ಷ ವೈ.ಪಿ.ರಾಜೇಂದ್ರಪ್ರಸಾದ್, ನಿರ್ದೇಶಕರಾದ ಎಂ.ರವಿ, ನಟರಾಜು, ಮಹದೇವಸ್ವಾಮಿ, ಶಿವಬಸವಣ್ಣ, ಎಂ.ಸಿ.ಸುರೇಂದ್ರ, ಎಂ.ಎಂ.ನಾಗರಾಜು, ನಂಜುಂಡಸ್ವಾಮಿ, ದೇವಾಜಮ್ಮಣಿ, ಸುಬ್ಬೇಗೌಡ, ಶಿವಕುಮಾರ್, ನಲ್ಲೂರು ಮಹಾದೇವಸ್ವಾಮಿ, ದೊರೆಸ್ವಾಮಿ, ಗುತ್ತಿಗೆದಾರ ಕೆ.ಎಂ.ಮಹದೇವಸ್ವಾಮಿ, ಹೆಚ್.ಹೆಚ್.ನಾಗರಾಜು, ನಾಗೇಶ್, ಗೋವಿಂದರಾಜು, ಹನುಮಂತು, ವಕೀಲ ಮಂಜು, ಮಹದೇವಸ್ವಾಮಿ, ಸಾಧಿಕ್ ಷರೀಫ್, ಹಾಗೂ ಮೂರು ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಹಾಜರಿದ್ದರು.4
- ಮಕ್ಕಳ ಸರ್ವಾಂಗಣ ಅಭಿವೃದ್ಧಿಗೆ ಶಿಕ್ಷಣದ ಜೊತೆಗೆ ಸಹಪಠ್ಯ ಕಲಿಯಬೇಕಾಗಿದೆ : ಬಿಇಒ ಉಮಾ ಮಳವಳ್ಳಿ: ಮಕ್ಕಳ ಸರ್ವಾಂಗಣ ಅಭಿವೃದ್ಧಿಗೆ ಶಿಕ್ಷಣದ ಜೊತೆಗೆ ಸಹಪಠ್ಯ ಕಲಿಯಬೇಕಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಉಮಾ ತಿಳಿಸಿದರು. ಮಳವಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ 14 ವರ್ಷ ವಯೋಮಾನದೊಳಗಿನ ಮಕ್ಕಳಿಗೆ ನಡೆದ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟ 2026 ಕಾರ್ಯಕ್ರಮವನ್ನು ಗುಂಡು ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡಿ,ಶಿಕ್ಷಣ ಕೇವಲ ಪಠ್ಯಕ್ಕೆ ಸೀಮಿತವಾಗಿಲ್ಲ, ದೈಹಿಕವಾಗಿ, ಮಾನಸಿಕವಾಗಿ ಸದೃಡವಾಗಿ ಮಾಡಲು ಎಲ್ಲಾ ರೀತಿ ಕ್ರೀಡೆಗಳನ್ನು ಕಲಿಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಮಾನ್ವಯಾಧಿಕಾರಿ ಶ್ರೀನಿವಾಸ, ಬಿ ಆರ್ ಸಿ ಪಾಪಣ್ಣ, ರವಿಕುಮಾರ, ದೈಹಿಕ ಶಿಕ್ಷಕ ಶಿವಕುಮಾರ ಮುಖ್ಯಶಿಕ್ಷಕರ ಸಂಘದ ಮರಿಸ್ವಾಮಿ, ನಾಗರಾಜು ಸೇರಿದಂತೆ ಹಲವರು ಇದ್ದರು.1
- *ಸಮ ಸಮಾಜ ನಿರ್ಮಾಣಕ್ಕೆ ನಾರಾಯಣ ಗುರು ಗಳ ಆದರ್ಶ ಪಾಲನೆ ಅಗತ್ಯ ಬಿ.ಪಿ. ಪ್ರಕಾಶ್* ಮಂಡ್ಯ- ಸಮ ಸಮಾಜ ನಿರ್ಮಾಣಕ್ಕೆ ಪಣತೊಟ್ಟ ಮಹನೀಯರಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸಾಧನೆ ಅಪಾರವಾಗಿದೆ. ಅವರ ಆದರ್ಶ, ತತ್ವ ಹಾಗೂ ಸಮಾಜ ಸುಧಾರಣೆಯ ಚಿಂತನೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ. ಪ್ರಕಾಶ್ ರವರು ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಹಾಗೂ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಸಮಾನತೆ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ನಾರಾಯಣಗುರುಗಳು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಸಮಾಜ ಸುಧಾರಣೆಯ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಕರ್ನಾಟಕ ರಾಜ್ಯ ಪ್ರದೇಶ ಆರ್ಯ ಈಡಿಗರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸೌಮ್ಯ ಶ್ರೀನಿವಾಸ್ ಉಪನ್ಯಾಸ ನೀಡಿ, ಬ್ರಹ್ಮಶ್ರೀ ನಾರಾಯಣಗುರುಗಳ ಜೀವನ, ಜನನ ಹಾಗೂ ಸಮಾಜ ಸುಧಾರಣಾ ಕಾರ್ಯಗಳ ಕುರಿತು ವಿವರಿಸಿದರು. ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಅಭಿವೃದ್ಧಿಗಾಗಿ ಸಂಘದ ವತಿಯಿಂದ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಂಗವಾಗಿ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ವಿ. ನಂದೀಶ್, ನಗರಸಭೆ ಮಾಜಿ ಉಪಾಧ್ಯಕ್ಷರಾದ ಎಂ.ಪಿ. ಅರುಣ್ ಕುಮಾರ್, ಜಿಲ್ಲಾ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷರಾದ ದಾಸೇಗೌಡ, ರಾಜಕುಮಾರ, ಅಮ್ಜದ್ ಪಾಶ, ಮಹದೇವು, ಶ್ರೀನಿವಾಸ್, ಸತ್ಯರಾಜು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.1