Shuru
Apke Nagar Ki App…
*ಭಾರತ ನಲ್ಲಿ ವೈರಲ್*
Md Aleemulla Shariff
*ಭಾರತ ನಲ್ಲಿ ವೈರಲ್*
More news from Karnataka and nearby areas
- *ಭಾರತ ನಲ್ಲಿ ವೈರಲ್*1
- ಕೆ.ಆರ್.ಪೇಟೆ,ಮಾ.16: ತಾಲ್ಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಗಳಿಗೆ ನೀರಾವರಿ ಸೌಲಭ್ಯ ಸೌಲಭ್ಯವನ್ನು ಒದಗಿಸುವ ಕಟ್ಟಹಳ್ಳಿ ಬಳಿ ನಿರ್ಮಿಸಲಾಗಿರುವ ಸುಮಾರು 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಐಚನಹಳ್ಳಿ ಏತ ನೀರಾವರಿ ಯೋಜನೆಯ ಎರಡನೇ ಹಂತದ ನೀರು ಪೂರೈಸುವ ಪಂಪ್ಹೌಸ್ ಕೇಂದ್ರವನ್ನು ಮೊಸಳೆಕೊಪ್ಪಲು ಬಳಿ ಶಾಸಕ ಹೆಚ್.ಟಿ.ಮಂಜು ವೀಕ್ಷಣೆ ಮಾಡಿ ಆದಷ್ಟು ಬೇಗ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲ್ಲೂಕಿನ ಮೊಸಳೇಕೊಪ್ಪಲು ಗ್ರಾಮದ ಬಳಿ ನಿರ್ಮಿಸಿರುವ ಎರಡನೇ ಹಂತದ ಏತ ನೀರಾವರಿ ಯೋಜನೆಯ ಪಂಪ್ ಹೌಸ್ ಕೇಂದ್ರವನ್ನು ವೀಕ್ಷಣೆ ಮಾಡಿ ನಂತರ ಶೀಳನೆರೆ ಹೋಬಳಿಯ ಭೈರಾಪುರ ಕೆರೆಗೆ ಪ್ರಾಯೋಗಿಕವಾಗಿ ನೀರು ತುಂಬಿಸುವ ಕಾರ್ಯವನ್ನು ಸಣ್ಣ ನೀರಾವರಿ ಅಧಿಕಾರಿಗಳು ಮತ್ತು ಭೈರಾಪುರ ಗ್ರಾಮಸ್ಥರೊಂದಿಗೆ ವೀಕ್ಷಣೆ ಮಾಡಿ ನೀರನ್ನು ಪೋಲು ಮಾಡದಂತೆ ಸಂರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು. ಐಚನಹಳ್ಳಿ ಏತನೀರಾವರಿ ಯೋಜನೆಯನ್ನು ನಮ್ಮ ತಾಲ್ಲೂಕಿನ ಬೂಕನಕೆರೆ ಗ್ರಾಮದ ಸುಪುತ್ರರಾದ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರೂರಿಗೆ ವಿಶೇಷ ಯೋಜನೆ ರೂಪಿಸಬೇಕೆಂಬ ಮಹದಾಸೆಯಿಂದ 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಟ್ಟಹಳ್ಳಿ ಬಳಿ ಏತ ನೀರಾವರಿ ಯೋಜನೆಗೆ ತಮ್ಮ ಅಧಿಕಾರದ ಅವಧಿಯಲ್ಲಿ 2020ರಲ್ಲಿ ಚಾಲನೆ ನೀಡಿದ್ದರು. ಇದರ ಮೊದಲ ಅಂತದ ಕಾಮಗಾರಿಯು ಮುಗಿದು ಬೂಕನಕೆರೆ ಹೋಬಳಿಯ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಕಳೆದ ವರ್ಷ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಮತ್ತು ಕ್ಷೇತ್ರದ ಶಾಸಕನಾದ ನಾನು ಸೇರಿ ಉದ್ಘಾಟನೆ ಮಾಡಿದ್ದೆವು. ಈಗ ಎರಡನೇ ಹಂತದ ಏತನೀರಾವರಿ ಯೋಜನೆಯ ಕಾಮಗಾರಿಯು ಮುಕ್ತಾಯಗೊಂಡಿದ್ದು ಉದ್ಘಾಟನೆಗೆ ಸಿದ್ದವಾಗಿದೆ. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ ಮತ್ತು ಸಂಬAಧಪಟ್ಟ ಸಚಿವರು ಉದ್ಘಾಟನೆಗೆ ಹಸಿರು ನಿಶಾನೆ ತೋರಿದ ಕೂಡಲೇ ದಿನಾಂಕ ನಿಗಧಿಪಡಿಸಿದ ಎರಡನೇ ಹಂತದ ಏತನೀರಾವರಿ ಯೋಜನೆಯನ್ನು ಉದ್ಘಾಟಿಸಲಾಗುವುದು. ಇದರ ಪ್ರಾಯೋಗಿಕ ನೀರು ಹರಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಅಧಿಕೃತ ಉದ್ಘಾಟನೆಯ ನಂತರ ಶೀಳನೆರೆ ಹೋಬಳಿಯ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗುವುದು. ಮಳೆಯಾಶ್ರಿತ ಪ್ರದೇಶವಾಗಿರುವ ಶೀಳನೆರೆ ಮತ್ತು ಬೂಕನಕೆರೆ ಹೋಬಳಿಗಳಿಗೆ ಈ ಏತ ನೀರಾವರಿ ಯೋಜನೆ ವರಧಾನವಾದ ಯೋಜನೆಯಾಗಿದೆ. ಅಂತರ್ಜಲ ಮಟ್ಟ ವೃದ್ದಿಯಾಗಲಿದೆ. ರೈತರ ಕೃಷಿ ಕೊಳವೆ ಬಾವಿಗಳು, ರೈತರ ತೆರೆದ ಬಾವಿಗಳು, ಕುಡಿಯುವ ನೀರಿನ ಮೂಲಗಳಲ್ಲಿ ಅಂತರ್ಜಲ ಮಟ್ಟದ ಹೆಚ್ಚಲಿದೆ. ಕುಡಿಯುವ ನೀರಿಗೆ ಹಾಗೂ ಜನ-ಜಾನುವಾರುಗಳಿಗೆ ಅನುಕೂಲವಾಗಲಿದೆ. ಈ ಏತ ಯೋಜನೆಗೆ ಕಾರಣಕರ್ತರಾದ ಮಾಜಿ ಸಿ.ಎಂ.ಯಡಿಯೂರಪ್ಪ ಹಾಗೂ ಮಾಜಿ ಸಚಿವ ನಾರಾಯಣಗೌಡ ಅವರಿಗೆ ಎರಡೂ ಹೋಬಳಿಯ ಜನತೆಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಶಾಸಕ ಹೆಚ್.ಟಿ.ಮಂಜು ಹೇಳಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಿರ್ಮಲೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭೈರಾಪುರ ಹರೀಶ್, ತಾಲ್ಲೂಕು ಜೆಡಿಎಸ್ ರೈತ ಮೋರ್ಚಾ ಅಧ್ಯಕ್ಷ ಹೆಳವೇಗೌಡ, ಮೊಸಳೇಕೊಪ್ಪಲು ಗ್ರಾಮದ ಯಜಮಾನರುಗಳಾದ ಪಟೇಲ್ ನಿಂಗೇಗೌಡ, ಯಜಮಾನ್ ರಾಮಕೃಷ್ಣೇಗೌಡ, ರಮೇಶ್, ಬಸವೇಗೌಡ, ರಂಗೇಗೌಡ, ಕೆಂಪಣ್ಣ ರವಿ, ಡೇರಿ ತಿಮ್ಮೇಗೌಡ, ನಗುವನಹಳ್ಳಿ ರಾಮಕೃಷ್ಣೇಗೌಡ, ನಾಗೇಗೌಡ, ಅರೆ ರಮೇಶ್, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಮಂಜುನಾಥ್, ಶೀಳನೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಸ್ವಾಮೀಗೌಡ, ಜಿಲ್ಲಾ ಜೆಡಿಎಸ್ ಕರ್ಯಕಾರಣಿ ಸದಸ್ಯ ಕುರುಬಹಳ್ಳಿ ಕೆ.ಬಿ.ನಾಗೇಶ್, ಜೈನ್ನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಧರಣೇಶ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಚಿಕ್ಕಗಾಡಿಗನಹಳ್ಳಿ ಸೋಮಶೇಖರ್, ಗಂಜಿಗೆರೆಕೊಪ್ಪಲು ರಾಮಕೃಷ್ಣೇಗೌಡ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಿತ್ರಶೀರ್ಷಿಕೆ:16.ಕೆ.ಆರ್.ಪಿ-02: ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಗಳಿಗೆ ನೀರಾವರಿ ಸೌಲಭ್ಯ ಸೌಲಭ್ಯವನ್ನು ಒದಗಿಸುವ ಕಟ್ಟಹಳ್ಳಿ ಬಳಿ ನಿರ್ಮಿಸಲಾಗಿರುವ ಸುಮಾರು 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಐಚನಹಳ್ಳಿ ಏತ ನೀರಾವರಿ ಯೋಜನೆಯ ಎರಡನೇ ಹಂತದ ನೀರು ಪೂರೈಸುವ ಪಂಪ್ಹೌಸ್ ಕೇಂದ್ರವನ್ನು ಶಾಸಕ ಹೆಚ್.ಟಿ.ಮಂಜು ವೀಕ್ಷಣೆ ಮಾಡಿ ಆದಷ್ಟು ಬೇಗ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ==================================4
- ಪಟ್ಟಣದಲ್ಲಿರುವ ಮಹದೇಶ್ವರ ಕ್ರೀಡಾಂಗಣದಿಂದ ದಲಿತ ಬಲಗೈ ಹೊಲಯ ಸಮುದಾಯದ ಹನೂರು, ಕೊಳ್ಳೇಗಾಲ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮದ ಮುಖಂಡರುಗಳು ಮಹಿಳೆಯರು ಯುವಕರು ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಗಿ ತಹಸೀಲ್ದಾರ್ ಕಚೇರಿಯ ತನಕ ಪ್ರತಿಭಟನಾ ಚಳುವಳಿ ನಡೆಸಿ ಒಳಮೀಸಲಾತಿ ಹಂಚಿಕೆಯಲ್ಲಿ ಬಲಗೈ ಸಮುದಾಯಕ್ಕೆ ಹಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ತಹಸೀಲ್ದಾರ್ ಚೈತ್ರ ಅವರಿಗೆ ಮನವಿ ನೀಡಲಾಯಿತು. ಬಾಕ್ಸ್ ನಾವು ಒಳ ಮೀಸಲಾತಿ ವಿರೋಧಿಗಳಲ್ಲ ರೋಸ್ಟರ್ ಬಿಂದುವಿನಲ್ಲಿ ಆಗಿರುವ ಪ್ರಮಾದವನ್ನು ಸರಿ ಪಡಿಸಬೇಕು ಹೊಲಯ ಮತ್ತು ಮಾದಿಗ ಸಮುದಾಯದ ಜನರನ್ನು ಒಡೆದು ಆಳುವ ನೀತಿಯನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ. ಸೋದರ ಸಮಾಜದಲ್ಲಿ ಇರುವ ಕಿಡಿಗೇಡಿಗಳಾದ ಭಾಸ್ಕರ್ ಪ್ರಸಾದ್ ಮತ್ತು ಅರುಣ್ ಕುಮಾರ್ ಅವರು ನಮ್ಮ ಎರಡು ಸಮುದಾಯದ ಒಗ್ಗಟ್ಟನ್ನು ಮುರಿದು ಶೋಷಣೆಗೆ ಒಳಪಡಿಸುತ್ತಿದ್ದಾರೆ. ಭಾಸ್ಕರ್ ಪ್ರಸಾದ್ ಹೊಲಯ ಸಮುದಾಯದ ನಾಯಕರ ವಿರುದ್ಧ ತೊಡೆ ತಟ್ಟಿ ನಾವು ಸೋಲಿಸ್ತೀವಿ ಪಾಠ ಕಲಿಸ್ತೀವಿ ಅಂತಿದ್ದಾನೆ 2028 ರಲ್ಲಿ ನಾವು ಏನು ಅಂತ ತೋರುಸುತ್ತೇವೆ. ನಮಗೆ ಅನ್ಯಾಯವಾಗಿದೆ ನಾವು ಪ್ರತಿಭಟಿಸುತ್ತಿದ್ದೇವೆ ಯಾವುದೇ ಕಾರಣಕ್ಕೂ ನಾಗಮೋಹನ್ ದಾಸ್ ವರದಿ ನೀಡಿರುವ ಒಳ ಮೀಸಲಾತಿ ನಮ್ಮ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಪರಿಶಿಷ್ಟ ಸಮುದಾಯದ 101 ಜಾತಿಯ ಜನರಿಗೂ ಒಳ್ಳೆಯದಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಸಿ ಕೆ ಮಂಜುನಾಥ್ ಹೊಲಯ ಸಮಾಜದ ಮುಖಂಡ ಚಾಮರಾಜನಗರ ಬಾಕ್ಸ್ ಸವರ್ಣಿಯ ಸಮುದಾಯದ ನಾಗಮೋಹನ್ ದಾಸ್ ನೀಡಿರುವ ವರದಿಯಿಂದ ನೊಂದ ಸಮುದಾಯ ನ್ಯಾಯ ಕಾಣಲು ಸಾಧ್ಯವಿಲ್ಲ ಅವೈಜ್ಞಾನಿಕವಾಗಿ ಒಳ ಮೀಸಲಾತಿ ವರದಿಯನ್ನು ನೀಡಿದ್ದು ನಮ್ಮ ಬಲಗೈ ಸಮುದಾಯದ ಜನರಿಗೆ ಬಹಳ ಅನ್ಯಾಯವಾಗುತ್ತಿದೆ.ಈ ವರದಿ ಜಾರಿ ಆದರೆ ನಮ್ಮ ಸಮುದಾಯದ ಮಕ್ಕಳು ಉದ್ಯೋಗ ಶಿಕ್ಷಣದಿಂದ ವಂಚಿತರಾಗುತ್ತಾರೆ. ಬದುಕಿರುವ ನಮ್ಮ ಹೊಲಯ ಸಮುದಾಯದ ಜನರನ್ನು ಜೀವಂತವಾಗಿ ಇರುವ ನಮ್ಮ ಬಾಡಿಯನ್ನು ಬಾಕ್ಸ್ ಒಳಗಡೆ ಮುಚ್ಚಿ ಹೂಳಲು ಹೋಗುತ್ತಿದ್ದಾರೆ. ನಾವು ಸತ್ತಿಲ್ಲ ಬದುಕಿದ್ದೇವೆ ಎಂದು ಬಾಕ್ಸ್ ಅನ್ನು ಒಡೆದು ತೋರಿಸಬೇಕಿದೆ. ಒಳ ಮೀಸಲಾತಿ ಜಾರಿಯಾದರೆ ನಮ್ಮ ಮಕ್ಕಳಿಗೆ ಶಿಕ್ಷಣ ಸಿಗುವುದಿಲ್ಲ ಸರ್ಕಾರಿ ನೌಕರಿ ಸಿಗುವುದಿಲ್ಲ ಮೊರಾರ್ಜಿ ಶಾಲೆ ಇಂದಿರಾ ಗಾಂಧಿ ಶಾಲೆಗಲ್ಲಿ ನಮ್ಮ ಮಕ್ಕಳಿಗೆ ಅವಕಾಶ ಸಿಗುವುದಿಲ್ಲ ಆಗಾಗಿ ರೋಸ್ಟರ್ ಬಿಂದುವನ್ನು ಸರಿಪಡಿಸಿ. ಬಲಗೈ ಸಮುದಾಯಕ್ಕೆ ಮರಣ ಶಾಸನವಾಗಿರುವ ನಾಗ ಮೋಹನ್ ದಾಸ್ ಒಳ ಮೀಸಲಾತಿಯನ್ನು ತಿರಸ್ಕರಿಸಬೇಕು.ಇಲ್ಲ ಅದನ್ನು ಸಮಾನವಾಗಿ ಹಂಚಬೇಕು. ಮಲೈ ಮಹದೇಶ್ವರ ಸ್ವಾಮಿ ಮೈಸೂರು ವಿಶ್ವ ವಿದ್ಯಾಲಯದ ಉಪನ್ಯಾಸಕ ಬಾಕ್ಸ್ ನಾಗಮೋಹನ್ ದಾಸ್ ವರದಿಯಿಂದ ನಮ್ಮ ಬಲಗೈ ಸಮುದಾಯದ ಜನರಿಗೆ ಅನ್ಯಾಯವಾಗುತ್ತಿದೆ ಏಳು ವರ್ಷಗಳ ಕಾಲ ಸದಾ ಆಯೋಗ ಸಮೀಕ್ಷೆ ಮಾಡುದ್ರು ಅದು ಮುನ್ನೆಲೆಗೆ ಬರಲಿಲ್ಲ,ಮೂರು ತಿಂಗಳಲ್ಲಿ ನಾಗಮೋಹನ್ ದಾಸ್ ಸಮೀಕ್ಷೆ ಮಾಡಿ ನಮ್ಮ ಬಲಗೈ ಸಮುದಾಯದ ಜನರನ್ನು ಕಡಿಮೆ ಮಾಡಿ ಹುನ್ನಾರ ನಡೆಸಿ ನಮ್ಮನ್ನು ದಮನ ಗೊಳಿಸುತ್ತಿದ್ದಾರೆ. ತರತುರಿಯಲ್ಲಿ ಈ ವರದಿಯನ್ನು ನೀಡಿದ್ದಾರೆ ಈ ವರದಿಯು ಅವೈಜ್ಞಾನಿಕವಾಗಿದೆ. ಸಂವಿಧಾನ ಓದು ಎಂಬ ಪುಸ್ತಕ ಬರೆದ ನಾಗಮೋಹನ್ ದಾಸ್ ರವರನ್ನು ನಾವು ಒತ್ತು ಮೆರೆಸಿದೆವು ಅದರಂತೆ ಅವರನ್ನೇ ಈ ಸಮೀಕ್ಷೆಗೆ ಆಯ್ಕೆ ಮಾಡುತ್ತಾರೆ.ಆದರೆ ಈ ರೀತಿಯಾದ ದ್ರೋಹ ಮಾಡುತ್ತಾರೆ ಎಂದು ತಿಳಿದಿರಲಿಲ್ಲ. ಒಳ ಮೀಸಲಾತಿ ಜಾರಿಯಾದರೆ ನಮ್ಮ ಮಕ್ಕಳಿಗೆ ಶಿಕ್ಷಣ ಸಿಗುವುದಿಲ್ಲ ಸರ್ಕಾರಿ ನೌಕರಿ ಸಿಗುವುದಿಲ್ಲ ಮೊರಾರ್ಜಿ ಶಾಲೆ ಇಂದಿರಾ ಗಾಂಧಿ ಶಾಲೆಗಲ್ಲಿ ನಮ್ಮ ಮಕ್ಕಳಿಗೆ ಅವಕಾಶ ಸಿಗುವುದಿಲ್ಲ ಆಗಾಗಿ ರೋಸ್ಟರ್ ಬಿಂದುವನ್ನು ಸರಿಪಡಿಸಿ. ಬಲಗೈ ಸಮುದಾಯಕ್ಕೆ ಮರಣ ಶಾಸನವಾಗಿರುವ ನಾಗ ಮೋಹನ್ ದಾಸ್ ಒಳ ಮೀಸಲಾತಿಯನ್ನು ತಿರಸ್ಕರಿಸಬೇಕು ಇಲ್ಲ ಅದನ್ನು ಸಮಾನವಾಗಿ ಹಂಚಬೇಕು. ಡಾ ಮಲ್ಲಿಕಾರ್ಜುನ ಮೈಸೂರು ವಿಶ್ವ ವಿದ್ಯಾಲಯದ ಉಪನ್ಯಾಸಕ ಪ್ರತಿಭಟನೆಯಲ್ಲಿ ಸುಮಾರು ಮೂರು ಸಾವಿರ ಜನರು ಭಾಗವಹಿಸಿದ್ದು 30 ನಿಮಿಷಗಳ ಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದರು. ಪ್ರತಿಭಟನೆಯಲ್ಲಿ ಹನೂರು ಪಟ್ಟಣದ ಯಜಮಾನರು, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರುಗಳಾದ ಸಂಪತ್ ಕುಮಾರ್,ಸಿದ್ದರಾಜು, ಬಸವರಾಜು, ಮಹೇಶ್, ಮುಖಂಡರಾದ ಕಿರಣ್, ರವೀಂದ್ರ, ಪುಟ್ಟರಾಜು, ಕೃಷ್ಣ,ಸೇರಿದಂತೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಸಿಂಗಾನಲ್ಲೂರು, ದೊಡ್ಡಿಂದುವಾಡಿ, ಮತ್ತಿಪುರ, ತೆಳ್ಳನೂರು, ಹನೂರು ತಾಲೂಕಿನ ಮಣಗಳ್ಳಿ, ಬಂಡಳ್ಳಿ, ಅಜ್ಜಿಪುರ, ಮಾರ್ಟಳ್ಳಿ, ಲೊಕ್ಕನಹಳ್ಳಿ,ಚಿಕ್ಕಮಾಲಾಪುರ, ಪಿ. ಜಿ ಪಾಳ್ಯ, ರಾಮಾಪುರ ವ್ಯಾಪ್ತಿಯ ವಿವಿಧ ಗ್ರಾಮಗಳು ತಾಲೂಕಿನ ವಿವಿಧ ಗ್ರಾಮಗಳು ಮುಖಂಡರುಗಳು ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.4
- Post by Asme4
- ಚಾಮರಾಜನಗರ: ತಮಿಳುನಾಡು ಕಡೆಯಿಂದ ಕರ್ನಾಟಕದಲ್ಲಿರುವ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಪಾದಯಾತ್ರಿಗಳಿಗೆ ಇದೀಗ ಕಾಡಾನೆಗಳ ಹಾವಳಿ ಅಧಿಕವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಹೋಬಳಿಯ ಕುರಟ್ಟಿ ಹೊಸೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದಂಟಳ್ಳಿ ಸಮೀಪ ಪಾದಯಾತ್ರಿಗಳು ಬರುವಾಗ ಕಾಡಾನೆಗಳ ಹಿಂಡೇ ರಸ್ತೆ ದಾಟುತ್ತಿದ್ದವು. ಇದನ್ನು ಗಮನಿಸಿದ ಸ್ಥಳೀಯ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಪಾದಯಾತ್ರಿಗಳಿಗೆ ಸ್ವಲ್ಪ ಸಮಯ ವಿಶ್ರಾಂತಿ ಪಡೆಯುವಂತೆ ತಿಳಿಸಿ, ಕಾಡಾನೆಗಳು ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳಿ, ಕಾಡಿನತ್ತ ತೆರಳಿದ ಬಳಿಕ ಪಾದಯಾತ್ರಿಗಳು ತೆರಳಲು ಅನುವು ಮಾಡಿಕೊಟ್ಟರು. ಒಂದೆಡೆ ಮಹದೇಶ್ವರನ ಭಕ್ತರಿಗೆ ಚಿರತೆ ಹಾವಳಿ ಎದುರಾದರೆ ಮತ್ತೊಂದೆಡೆ ಕಾಡಾನೆಗಳು ರಸ್ತೆಯಲ್ಲೇ ಸಂಚಾರ ಮಾಡುತ್ತಿರುವುದರಿಂದ ಮಹದೇಶ್ವರ ದರ್ಶನಕ್ಕೆ ಬರುವ ಪಾದಯಾತ್ರಿ ಭಕ್ತರು ಬಹಳ ಎಚ್ಚರಿಕೆಯಿಂದ ಬರಬೇಕಾಗಿದೆ . ಒಂಟಿಯಾಗಿ ಅಥವಾ ಬೈಕ್ ನಲ್ಲಿ ಸವಾರ ಮಾಡುವುದು ಅಷ್ಟು ಸುಲಭದ ಮಾತಲ್ಲ. ಏನಿದ್ದರೂ ಈಗ ಗುಂಪು ಗುಂಪಾಗಿ ಸಾಗಬೇಕಾಗಿರುವ ಪ್ರಸಂಗ ಬಂದಿದೆ. ಪಾದಯಾತ್ರಿಗಳು ಎಚ್ಚರ ತಪ್ಪಿದರೆ ಅನಾಹುತ ಖಚಿತ ಎಂದು ಹೇಳಲಾಗುತ್ತಿದೆ.1
- *ಸಿಲಿಂಡರ್ ಅಭಾವ ವಿರೋಧಿಸಿ ಆಪ್ ಪ್ರತಿಭಟನೆ* ರಾಜ್ಯವು ಸೇರಿದಂತೆ ದೇಶದೆಲ್ಲೆಡೆ ದಿಡೀರನೆ ಉದ್ಭವವಾಗಿರುವ ಅನಿಲ ಸಿಲಿಂಡರ್ ಅಭಾವಕ್ಕೆ ಇಂದು ದೇಶದ ಜನಸಾಮಾನ್ಯ ಸಂಪೂರ್ಣ ತತ್ತರಿಸುತ್ತಿದ್ದಾನೆ. ಕೋಟ್ಯಾಂತರ ಜನ ದಿಡೀರನೆ ನಿರುದ್ಯೋಗಿಗಳಾಗಿ ಬೀದಿಗೆ ಬೀಳುವ ಪರಿಸ್ಥಿತಿಯನ್ನು ಸೃಷ್ಟಿಸಿರುವ ಬಿಜೆಪಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಆಮ್ ಆದ್ಮಿ ಪಕ್ಷ ಇಂದು ತೀವ್ರ ಪ್ರತಿಭಟನೆಯನ್ನು ನಡೆಸಿತು. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಸುದ್ದಿಗಾರರೊಂದಿಗೆ ಮಾತನಾಡುತ್ತಾ " ಪ್ರಧಾನಿ ಮೋದಿ ಅವರ ಅಮೆರಿಕ ಗುಲಾಮಗಿರಿ ವಿದೇಶಾಂಗ ನೀತಿಯಿಂದಾಗಿ ದೇಶದ ಕೋಟ್ಯಾಂತರ ಜನ ದಿಡೀರನೆ ನಿರುದ್ಯೋಗಿಗಳಾಗುತ್ತಿದ್ದಾರೆ. ಈ ಹಿಂದೆ ಕೊರೋನಾ ಸಂದರ್ಭದಲ್ಲಿಯೂ ಸಹ ಇದೇ ರೀತಿಯ ಅವಾಂತರಕ್ಕೆ ತಳ್ಳಿದ್ದ ಬಿಜೆಪಿ ಕೇಂದ್ರ ಸರ್ಕಾರ ಪ್ರತಿ ದಿವಸ ತಪ್ಪು ತಪ್ಪು ಹೆಜ್ಜೆಗಳನ್ನು ಇಡುತ್ತಾ ಜನಸಾಮಾನ್ಯರನ್ನು ದಾರಿ ತಪ್ಪಿಸುತ್ತಿದ್ದಾರೆ. ವಿಶ್ವದಲ್ಲಿ ಎಂತಹ ಸಂಕಷ್ಟ ಪರಿಸ್ಥಿತಿಯಲ್ಲಿಯೂ ಸಹ ಭಾರತವು ತನ್ನ ಅಲಿಪ್ತ ಶೃಂಗ ವಿದೇಶಾಂಗ ನೀತಿಯನ್ನು ಮುಂದುವರಿಸಿತ್ತು. ಆದರೆ ಈಗ ಪ್ರಧಾನಿ ಮೋದಿಯವರು ತಮ್ಮ ರಹಸ್ಯಗಳನ್ನು ಮುಚ್ಚಿಕೊಳ್ಳಲು ಅಮೆರಿಕ - ಇಸ್ರೇಲ್ ಪರವಾದಂತಹ ಶರಣಾಗತಿ ನೀತಿಯನ್ನು ಅನುಸರಿಸುತ್ತಿರುವುದು ದೇಶದ ಜನ ಗಮನಿಸಬೇಕಿದೆ. ಕೂಡಲೇ ರಾಜ್ಯದಲ್ಲಿ ಹಾಗೂ ದೇಶದಲ್ಲಿ ಉದ್ಭವಿಸಿರುವ ಅಡುಗೆ ಅನಿಲ ಪೂರೈಕೆಯನ್ನು ಸರಾಗವಾಗಿ ಮಾಡದಿದ್ದಲ್ಲಿ ಪಕ್ಷವು ಮತ್ತಷ್ಟು ತೀವ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ" ಎಂದು ಎಚ್ಚರಿಸಿದರು. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಮಾತನಾಡಿ " ರಾಜ್ಯದಲ್ಲಿ ಎಲ್ಲೆಡೆ ಅವ್ಯಾಹತವಾಗಿ ಕಾಳಸಂತೆಯಲ್ಲಿ ದುಬಾರಿ ವೆಚ್ಚದಲ್ಲಿ ಮಾರಾಟದಂತೆಯನ್ನು ನಿಲ್ಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವಿಧಾನಸಭೆಯಲ್ಲಿ ಆಹಾರ ಪೂರೈಕೆ ಸಚಿವ ಮುನಿಯಪ್ಪ ಅಸಹಾಯಕರಾಗಿ ಮಾತನಾಡುತ್ತಿರುವುದು ನಿಜಕ್ಕೂ ಬೇಸರ ತರಿಸುತ್ತಿದೆ. ಇಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿರುವುದನ್ನು ಪಕ್ಷವು ಸಹಿಸುವುದಿಲ್ಲ" ಎಂದು ಗುಡುಗಿದರು. ಪ್ರತಿಭಟನೆಯಲ್ಲಿ ರಾಜ್ಯ ಪ್ರಚಾರ ಸಮಿತಿಯ ಉಪಾಧ್ಯಕ್ಷ ಲಕ್ಷ್ಮಿಕಾಂತ ರಾವ್, ರಾಜ್ಯ ಉಪಾಧ್ಯಕ್ಷ ರುದ್ರಯ್ಯ ನವಲಿ ಮಠ ,ಜಗದೀಶ್ ವಿ. ಸದಂ,ಲೋಹಿತ್ ಕುಮಾರ್ , ಉಷಾ ಮೋಹನ್, ಪುಷ್ಪ ಕೇಶವ್, ರವಿಕುಮಾರ್ ಸೇರಿದಂತೆ ಅನೇಕ ಮುಖಂಡರುಗಳು ಕಾರ್ಯಕರ್ತರು ಭಾಗವಹಿಸಿದ್ದರು.1
- ಸಚಿವರ ವರ್ತನೆಯಿಂದ ಬೇಸರಗೊಂಡ ಸ್ಪೀಕರ್ U.T. ಖಾದರ್ ಸದನದಿಂದ ಹೊರ ನಡೆದರು......1
- *ಭಾರತ ನಲ್ಲಿ ವೈರಲ್*1