logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೆಲಮಂಗಲ ತಾಲೂಕಿನ ತುಮಕೂರು ರಸ್ತೆಯ ಜಾಸ್ ಟೋಲ್ ಬಳಿ ಓವರ್‌ಟೇಕ್ ವಿಚಾರದಲ್ಲಿ ಆರಂಭವಾದ ಮಾತಿನ ಚಕಮಕಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಯುವ ಮಟ್ಟಕ್ಕೆ ತಲುಪಿದೆ. ಸಿಂಧನೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸಿದ್ದಲಿಂಗಯ್ಯ ಅವರ ಮೇಲೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಓವರ್‌ಟೇಕ್ ವಿಚಾರವಾಗಿ ಎರಡೂ ವಾಹನಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದರ ಬೆನ್ನಲ್ಲೇ ಕಾರಿನಲ್ಲಿದ್ದವರು ಚಾಲಕ ಸಿದ್ದಲಿಂಗಯ್ಯ ಅವರನ್ನು ತೀವ್ರವಾಗಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚಾಲಕ ಸಿದ್ದಲಿಂಗಯ್ಯ, 'ನಾವೇ ಕ್ಷಮೆ ಕೇಳಿದ್ದರೂ ಅವರು ಬಿಡದೆ ಹಲ್ಲೆ ನಡೆಸಿದರು' ಎಂದು ಆರೋಪಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಲ್ಲೆಯಿಂದ ಗಾಯಗೊಂಡ ಚಾಲಕನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

1 day ago
user_Bengaluru Rural News
Bengaluru Rural News
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
1 day ago

ನೆಲಮಂಗಲ ತಾಲೂಕಿನ ತುಮಕೂರು ರಸ್ತೆಯ ಜಾಸ್ ಟೋಲ್ ಬಳಿ ಓವರ್‌ಟೇಕ್ ವಿಚಾರದಲ್ಲಿ ಆರಂಭವಾದ ಮಾತಿನ ಚಕಮಕಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಯುವ ಮಟ್ಟಕ್ಕೆ ತಲುಪಿದೆ. ಸಿಂಧನೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸಿದ್ದಲಿಂಗಯ್ಯ ಅವರ ಮೇಲೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಓವರ್‌ಟೇಕ್ ವಿಚಾರವಾಗಿ ಎರಡೂ ವಾಹನಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದರ ಬೆನ್ನಲ್ಲೇ ಕಾರಿನಲ್ಲಿದ್ದವರು ಚಾಲಕ ಸಿದ್ದಲಿಂಗಯ್ಯ ಅವರನ್ನು ತೀವ್ರವಾಗಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚಾಲಕ ಸಿದ್ದಲಿಂಗಯ್ಯ, 'ನಾವೇ ಕ್ಷಮೆ ಕೇಳಿದ್ದರೂ ಅವರು ಬಿಡದೆ ಹಲ್ಲೆ ನಡೆಸಿದರು' ಎಂದು ಆರೋಪಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಲ್ಲೆಯಿಂದ ಗಾಯಗೊಂಡ ಚಾಲಕನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

More news from ಕರ್ನಾಟಕ and nearby areas
  • ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ದೊಡ್ಡಣ್ಣ ಅವರು ತಾವು ಬದುಕಿರುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನಿಧನದ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವಿನ್ನೂ ಸಂಪೂರ್ಣ ಆರೋಗ್ಯವಾಗಿದ್ದೇನೆ ಎಂದು ವಿಡಿಯೋ ಮೂಲಕ ಸ್ಪಷ್ಟಪಡಿಸಿರುವ ಅವರು, ಇಂತಹ ನೀಚ ಕೃತ್ಯ ಎಸಗಿದವರನ್ನು ಸುಮ್ಮನೆ ಬಿಡುವುದಿಲ್ಲ ಹಾಗೂ ಅವರಿಗೆ ತಕ್ಕ ಶಿಕ್ಷೆ ಕೊಡಿಸುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಹರಿದಾಡಿದ ಈ ಸುಳ್ಳು ಸುದ್ದಿಯಿಂದ ಕಂಗಾಲಾಗಿದ್ದ ಅಭಿಮಾನಿಗಳು ಮತ್ತು ಆಪ್ತರಿಗೆ ವಿಡಿಯೋ ಸಂದೇಶದ ಮೂಲಕ ಅವರು ಸ್ಪಷ್ಟನೆ ನೀಡಿದರು. ವಿಡಿಯೋದಲ್ಲಿ ದೊಡ್ಡಣ್ಣ ಅವರು, "ಇಂದು ಬೆಳಿಗ್ಗೆ ನಾನು ನಿದ್ರೆಯಿಂದ ಏಳುವ ಮೊದಲೇ ಯಾರೋ ಅವಿವೇಕಿಗಳು ನಾನು ತೀರಿಹೋಗಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಆದರೆ ಅದು ನೂರಕ್ಕೆ ನೂರರಷ್ಟು ಸುಳ್ಳು. ನಾನು ಪ್ರಸ್ತುತ ಆರೋಗ್ಯವಾಗಿದ್ದೇನೆ ಮತ್ತು ನೆಮ್ಮದಿಯಾಗಿದ್ದೇನೆ. ಬೆಳಿಗ್ಗೆಯಿಂದ ನನ್ನ ಮಕ್ಕಳು, ಮೊಮ್ಮಕ್ಕಳು ಹಾಗೂ ಆಪ್ತರಿಂದ ಆತಂಕದ ಕರೆಗಳು ಬರುತ್ತಿವೆ. ಜನರ ಆಶೀರ್ವಾದ ಇರುವವರೆಗೆ ನಾನು ನೂರು ವರ್ಷ ಚೆನ್ನಾಗಿರುತ್ತೇನೆಂಬ ನಂಬಿಕೆ ನನಗಿದೆ" ಎಂದು ಹೇಳಿಕೊಂಡಿದ್ದಾರೆ. ಬದುಕಿರುವ ವ್ಯಕ್ತಿಯ ಬಗ್ಗೆ ಇಂತಹ ಸೂಕ್ಷ್ಮ ಮತ್ತು ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ದೊಡ್ಡಣ್ಣ ತಿಳಿಸಿದ್ದಾರೆ. "ಈ ರೀತಿ ವಿಕೃತ ಆನಂದ ಪಡೆಯುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಾನೂನುಬದ್ಧವಾಗಿ ತಕ್ಕ ಶಾಸ್ತಿ ನೀಡಿಯೇ ತೀರುತ್ತೇನೆ" ಎಂದು ಆಕ್ರೋಶದಿಂದ ಅವರು ಸವಾಲು ಹಾಕಿದ್ದಾರೆ.
    1
    ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ದೊಡ್ಡಣ್ಣ ಅವರು ತಾವು ಬದುಕಿರುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನಿಧನದ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವಿನ್ನೂ ಸಂಪೂರ್ಣ ಆರೋಗ್ಯವಾಗಿದ್ದೇನೆ ಎಂದು ವಿಡಿಯೋ ಮೂಲಕ ಸ್ಪಷ್ಟಪಡಿಸಿರುವ ಅವರು, ಇಂತಹ ನೀಚ ಕೃತ್ಯ ಎಸಗಿದವರನ್ನು ಸುಮ್ಮನೆ ಬಿಡುವುದಿಲ್ಲ ಹಾಗೂ ಅವರಿಗೆ ತಕ್ಕ ಶಿಕ್ಷೆ ಕೊಡಿಸುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಹರಿದಾಡಿದ ಈ ಸುಳ್ಳು ಸುದ್ದಿಯಿಂದ ಕಂಗಾಲಾಗಿದ್ದ ಅಭಿಮಾನಿಗಳು ಮತ್ತು ಆಪ್ತರಿಗೆ ವಿಡಿಯೋ ಸಂದೇಶದ ಮೂಲಕ ಅವರು ಸ್ಪಷ್ಟನೆ ನೀಡಿದರು. 

ವಿಡಿಯೋದಲ್ಲಿ ದೊಡ್ಡಣ್ಣ ಅವರು, "ಇಂದು ಬೆಳಿಗ್ಗೆ ನಾನು ನಿದ್ರೆಯಿಂದ ಏಳುವ ಮೊದಲೇ ಯಾರೋ ಅವಿವೇಕಿಗಳು ನಾನು ತೀರಿಹೋಗಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಆದರೆ ಅದು ನೂರಕ್ಕೆ ನೂರರಷ್ಟು ಸುಳ್ಳು. ನಾನು ಪ್ರಸ್ತುತ ಆರೋಗ್ಯವಾಗಿದ್ದೇನೆ ಮತ್ತು ನೆಮ್ಮದಿಯಾಗಿದ್ದೇನೆ. ಬೆಳಿಗ್ಗೆಯಿಂದ ನನ್ನ ಮಕ್ಕಳು, ಮೊಮ್ಮಕ್ಕಳು ಹಾಗೂ ಆಪ್ತರಿಂದ ಆತಂಕದ ಕರೆಗಳು ಬರುತ್ತಿವೆ. ಜನರ ಆಶೀರ್ವಾದ ಇರುವವರೆಗೆ ನಾನು ನೂರು ವರ್ಷ ಚೆನ್ನಾಗಿರುತ್ತೇನೆಂಬ ನಂಬಿಕೆ ನನಗಿದೆ" ಎಂದು ಹೇಳಿಕೊಂಡಿದ್ದಾರೆ.

ಬದುಕಿರುವ ವ್ಯಕ್ತಿಯ ಬಗ್ಗೆ ಇಂತಹ ಸೂಕ್ಷ್ಮ ಮತ್ತು ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ದೊಡ್ಡಣ್ಣ ತಿಳಿಸಿದ್ದಾರೆ. "ಈ ರೀತಿ ವಿಕೃತ ಆನಂದ ಪಡೆಯುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಾನೂನುಬದ್ಧವಾಗಿ ತಕ್ಕ ಶಾಸ್ತಿ ನೀಡಿಯೇ ತೀರುತ್ತೇನೆ" ಎಂದು ಆಕ್ರೋಶದಿಂದ ಅವರು ಸವಾಲು ಹಾಕಿದ್ದಾರೆ.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    21 hrs ago
  • ಮಳವಳ್ಳಿ ತಾಲೂಕಿನ ಹಾಡ್ಲಿ ಗ್ರಾಮದ ಸಂತೆಮಾಳದಲ್ಲಿ ಆಯೋಜಿಸಲಾಗಿದ್ದ ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀನಿವಾಸ್, ಯಾವುದೇ ಕುಟುಂಬದ ಅಭಿವೃದ್ಧಿಯಾಗಬೇಕಾದರೆ ಮಹಿಳೆಯರ ಪಾತ್ರ ಅಮೂಲ್ಯವಾದದ್ದು ಎಂದು ತಿಳಿಸಿದರು. ಕುಟುಂಬದಲ್ಲಿ ಹಲವಾರು ಸಮಸ್ಯೆಗಳಿರುವುದು ಸಹಜವಾದರೂ, ಅವುಗಳನ್ನು ನಿವಾರಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುವ ಮಹಿಳೆಯರ ಪಾತ್ರ ಅತಿ ಮುಖ್ಯ ಎಂದು ಅವರು ಒತ್ತಿ ಹೇಳಿದರು. ಸಂತೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿದಾಗ ಯಶಸ್ಸು ಖಂಡಿತ ಎಂಬುದಕ್ಕೆ ಹಾಡ್ಲಿ ಸಂಜೀವಿನಿ ಮಾಸಿಕ ಸಂತೆ ಸಾಕ್ಷಿಯಾಗಿದೆ ಎಂದ ಇಒ ಶ್ರೀನಿವಾಸ್, ಮುಂದಿನ ದಿನಗಳಲ್ಲಿ ಸಮನ್ವಯ ಕೊರತೆಯನ್ನು ಸರಿಪಡಿಸಿ ಇನ್ನಷ್ಟು ಉತ್ತಮಗೊಳಿಸುವುದಾಗಿ ಭರವಸೆ ನೀಡಿದರು. ಒಂದು ಕುಟುಂಬದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಪಾಲು ಇರುತ್ತದೆ. ಇಂತಹ ಮಹಿಳೆಯರಿಗೆ ಸಂಜೀವಿನಿ ಬೆನ್ನೆಲುಬಾಗಿ ನಿಲ್ಲುತ್ತಿದೆ. ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರತಿಯೊಂದು ಕುಟುಂಬದ ಒಬ್ಬ ಮಹಿಳೆ ಸಂಜೀವಿನಿ ಸದಸ್ಯರಾಗಬೇಕು ಎಂದು ಕರೆ ನೀಡಿದರು. ಅಂತಹ ಮಹಿಳೆಯರಿಗೆ ಸರ್ಕಾರದ ಸೂಕ್ತ ಸೌಲಭ್ಯದ ಜೊತೆಗೆ ತರಬೇತಿಯನ್ನು ನೀಡಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ದಲ್ಲಾಳಿಗಳನ್ನು ಹೊರಗಿಟ್ಟು ಸ್ಥಳೀಯವಾಗಿ ನೇರ ಮಾರುಕಟ್ಟೆಯನ್ನು ನಿರ್ಮಿಸಲಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು. ತಾಲ್ಲೂಕಿನ ವಿವಿಧ ಕಡೆಗಳಿಂದ ಆಗಮಿಸಿದ್ದ ಮಹಿಳೆಯರಿಗೆ ಕಲಬೆರಕೆ ಎಣ್ಣೆಗೆ ಮಾರುಹೋಗದೆ, ನಮ್ಮ ಮಹಿಳೆಯರೇ ಉತ್ಪಾದಿಸಿದ ಗಾಣದ ಎಣ್ಣೆಯನ್ನು ಬಳಸಲು ಹಾಗೂ ನಮ್ಮ ಮಹಿಳೆಯರು ಉತ್ಪಾದಿಸುವ ದಿನಬಳಕೆಯ ವಸ್ತುಗಳನ್ನು ಪರಸ್ಪರ ಖರೀದಿಸುವ ಮೂಲಕ ಅಕ್ಕಪಕ್ಕದ ಪರಿಚಿತ ಕುಟುಂಬಗಳಿಗೂ ತಿಳಿಸುವಂತೆ ಅವರು ಮನವಿ ಮಾಡಿದರು. ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ, ಕೃಷಿಯೇತರ ಚಟುವಟಿಕೆಯ ತಾಲ್ಲೂಕು ವ್ಯವಸ್ಥಾಪಕಿ ಸೌಮ್ಯ ಅವರು ಒಂದು ವಾರದಿಂದಲೇ ವಿಶೇಷ ಆಸಕ್ತಿ ವಹಿಸಿ ಪೂರ್ವನಿಯೋಜಿತ ರೂಪರೇಷೆಗಳೊಂದಿಗೆ ಸಂತೆಯ ಸಿದ್ಧತೆಯನ್ನು ನಡೆಸಿದ್ದರು. ಮಳಿಗೆ ಹಂಚಿಕೆ, ವ್ಯಾಪಕ ಪ್ರಚಾರ ಮತ್ತು ಗ್ರಾಹಕರನ್ನು ಸೆಳೆಯುವ ತಂತ್ರಗಳೊಂದಿಗೆ ಸಂತೆಯನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅವರು ಶ್ರಮಿಸಿದರು. ಗುರುವಾರ ಹಾಡ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ 28ಕ್ಕೂ ಹೆಚ್ಚು ಮಳಿಗೆಗಳು ತೆರೆದುಕೊಂಡಿದ್ದವು. ಸಿರಿಧಾನ್ಯ ಖಾದ್ಯಗಳು, ಮಸಾಲೆ ಪುಡಿಗಳು, ಉಪ್ಪಿನಕಾಯಿ, ಕೈಮಗ್ಗ ವಸ್ತ್ರಗಳು, ಟೆರಾಕೋಟಾ ಆಭರಣಗಳು, ಸಾವಯವ ತರಕಾರಿಗಳು ಮತ್ತು ಗೃಹೋಪಯೋಗಿ ವಸ್ತುಗಳು ಮಾರಾಟವಾದವು. ಯತ್ತಂಬಾಡಿ ಸ್ವಸಹಾಯ ಸಂಘದ ಸಾವಯವ ರಾಗಿಹುರಿ ಹಿಟ್ಟಿನ ಜೊತೆಗೆ ಕರಿಬೇವು, ನುಗ್ಗೆಸೊಪ್ಪು ಮತ್ತು ಬೇವಿನಸೊಪ್ಪಿನ ಪುಡಿಗಳು ಮಕ್ಕಳು ಮತ್ತು ಹಿರಿಯರ ಗಮನ ಸೆಳೆದವು. ಆರೋಗ್ಯಕರ ಆಹಾರಕ್ಕೆ ಹೆಚ್ಚಿದ ಬೇಡಿಕೆಯಿಂದಾಗಿ ಈ ಪುಡಿಗಳು ನಿಮಿಷಗಳಲ್ಲಿ ಖಾಲಿಯಾದವು. ಸುಜ್ಜಲೂರು ಚಾಮುಂಡೇಶ್ವರಿ ಸ್ವಸಹಾಯ ಸಂಘದ ಬಜ್ಜಿ, ಬೋಂಡಾ, ವಡೆ ಮತ್ತು ಹಪ್ಪಳಕ್ಕೆ ಜನ ಮುಗಿಬಿದ್ದರು. ಬಿಸಿ ಬಿಸಿ ತಿಂಡಿಗೆ ಭಾರಿ ಬೇಡಿಕೆ ಬಂದಿದ್ದರಿಂದ ಸಂಜೆಯೊಳಗೆ ಎಲ್ಲವೂ ಖಾಲಿಯಾಗಿ ಭರ್ಜರಿ ವಹಿವಾಟು ನಡೆಯಿತು. ಸಂತೆ ಕಾರ್ಯಕ್ರಮಕ್ಕೆ ಆಗಮಿಸಿದ ಇಒ ಶ್ರೀನಿವಾಸ್ ಅವರು ಸ್ಥಳದಲ್ಲಿದ್ದ ಕಸದ ರಾಶಿಯನ್ನು ಕಂಡು, ಕೂಡಲೇ ಅದನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಹಾಡ್ಲಿ ಗ್ರಾ.ಪಂ. ಪಿಡಿಒ ಲಿಂಗರಾಜು, ಒಕ್ಕೂಟದ ಅಧ್ಯಕ್ಷೆ ಸುನಂದಮ್ಮ, ಕಾರ್ಯದರ್ಶಿ ಸವಿತಾ, ಖಜಾಂಚಿ ಲಕ್ಷ್ಮಿ, ವ್ಯವಸ್ಥಾಪಕ ಮಹದೇವಸ್ವಾಮಿ, ಕೃಷಿ ಆಧಾರಿತ ಚಟುವಟಿಕೆ ವ್ಯವಸ್ಥಾಪಕ ಕೃಷ್ಣ, ಶೋಭಾ, ಒಕ್ಕೂಟದ ಮಧುಶ್ರೀ, ಗಿರಿಜಾ, ಪ್ರೇಮಾ, ರತ್ನಮ್ಮ, ಮಮತಾ ಸೇರಿದಂತೆ ಇತರ ಸಿಬ್ಬಂದಿ ಹಾಜರಿದ್ದರು.
    1
    ಮಳವಳ್ಳಿ ತಾಲೂಕಿನ ಹಾಡ್ಲಿ ಗ್ರಾಮದ ಸಂತೆಮಾಳದಲ್ಲಿ ಆಯೋಜಿಸಲಾಗಿದ್ದ ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀನಿವಾಸ್, ಯಾವುದೇ ಕುಟುಂಬದ ಅಭಿವೃದ್ಧಿಯಾಗಬೇಕಾದರೆ ಮಹಿಳೆಯರ ಪಾತ್ರ ಅಮೂಲ್ಯವಾದದ್ದು ಎಂದು ತಿಳಿಸಿದರು. ಕುಟುಂಬದಲ್ಲಿ ಹಲವಾರು ಸಮಸ್ಯೆಗಳಿರುವುದು ಸಹಜವಾದರೂ, ಅವುಗಳನ್ನು ನಿವಾರಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುವ ಮಹಿಳೆಯರ ಪಾತ್ರ ಅತಿ ಮುಖ್ಯ ಎಂದು ಅವರು ಒತ್ತಿ ಹೇಳಿದರು.

ಸಂತೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿದಾಗ ಯಶಸ್ಸು ಖಂಡಿತ ಎಂಬುದಕ್ಕೆ ಹಾಡ್ಲಿ ಸಂಜೀವಿನಿ ಮಾಸಿಕ ಸಂತೆ ಸಾಕ್ಷಿಯಾಗಿದೆ ಎಂದ ಇಒ ಶ್ರೀನಿವಾಸ್, ಮುಂದಿನ ದಿನಗಳಲ್ಲಿ ಸಮನ್ವಯ ಕೊರತೆಯನ್ನು ಸರಿಪಡಿಸಿ ಇನ್ನಷ್ಟು ಉತ್ತಮಗೊಳಿಸುವುದಾಗಿ ಭರವಸೆ ನೀಡಿದರು. ಒಂದು ಕುಟುಂಬದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಪಾಲು ಇರುತ್ತದೆ. ಇಂತಹ ಮಹಿಳೆಯರಿಗೆ ಸಂಜೀವಿನಿ ಬೆನ್ನೆಲುಬಾಗಿ ನಿಲ್ಲುತ್ತಿದೆ. ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರತಿಯೊಂದು ಕುಟುಂಬದ ಒಬ್ಬ ಮಹಿಳೆ ಸಂಜೀವಿನಿ ಸದಸ್ಯರಾಗಬೇಕು ಎಂದು ಕರೆ ನೀಡಿದರು. ಅಂತಹ ಮಹಿಳೆಯರಿಗೆ ಸರ್ಕಾರದ ಸೂಕ್ತ ಸೌಲಭ್ಯದ ಜೊತೆಗೆ ತರಬೇತಿಯನ್ನು ನೀಡಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ದಲ್ಲಾಳಿಗಳನ್ನು ಹೊರಗಿಟ್ಟು ಸ್ಥಳೀಯವಾಗಿ ನೇರ ಮಾರುಕಟ್ಟೆಯನ್ನು ನಿರ್ಮಿಸಲಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು. ತಾಲ್ಲೂಕಿನ ವಿವಿಧ ಕಡೆಗಳಿಂದ ಆಗಮಿಸಿದ್ದ ಮಹಿಳೆಯರಿಗೆ ಕಲಬೆರಕೆ ಎಣ್ಣೆಗೆ ಮಾರುಹೋಗದೆ, ನಮ್ಮ ಮಹಿಳೆಯರೇ ಉತ್ಪಾದಿಸಿದ ಗಾಣದ ಎಣ್ಣೆಯನ್ನು ಬಳಸಲು ಹಾಗೂ ನಮ್ಮ ಮಹಿಳೆಯರು ಉತ್ಪಾದಿಸುವ ದಿನಬಳಕೆಯ ವಸ್ತುಗಳನ್ನು ಪರಸ್ಪರ ಖರೀದಿಸುವ ಮೂಲಕ ಅಕ್ಕಪಕ್ಕದ ಪರಿಚಿತ ಕುಟುಂಬಗಳಿಗೂ ತಿಳಿಸುವಂತೆ ಅವರು ಮನವಿ ಮಾಡಿದರು.

ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ, ಕೃಷಿಯೇತರ ಚಟುವಟಿಕೆಯ ತಾಲ್ಲೂಕು ವ್ಯವಸ್ಥಾಪಕಿ ಸೌಮ್ಯ ಅವರು ಒಂದು ವಾರದಿಂದಲೇ ವಿಶೇಷ ಆಸಕ್ತಿ ವಹಿಸಿ ಪೂರ್ವನಿಯೋಜಿತ ರೂಪರೇಷೆಗಳೊಂದಿಗೆ ಸಂತೆಯ ಸಿದ್ಧತೆಯನ್ನು ನಡೆಸಿದ್ದರು. ಮಳಿಗೆ ಹಂಚಿಕೆ, ವ್ಯಾಪಕ ಪ್ರಚಾರ ಮತ್ತು ಗ್ರಾಹಕರನ್ನು ಸೆಳೆಯುವ ತಂತ್ರಗಳೊಂದಿಗೆ ಸಂತೆಯನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅವರು ಶ್ರಮಿಸಿದರು. ಗುರುವಾರ ಹಾಡ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ 28ಕ್ಕೂ ಹೆಚ್ಚು ಮಳಿಗೆಗಳು ತೆರೆದುಕೊಂಡಿದ್ದವು. ಸಿರಿಧಾನ್ಯ ಖಾದ್ಯಗಳು, ಮಸಾಲೆ ಪುಡಿಗಳು, ಉಪ್ಪಿನಕಾಯಿ, ಕೈಮಗ್ಗ ವಸ್ತ್ರಗಳು, ಟೆರಾಕೋಟಾ ಆಭರಣಗಳು, ಸಾವಯವ ತರಕಾರಿಗಳು ಮತ್ತು ಗೃಹೋಪಯೋಗಿ ವಸ್ತುಗಳು ಮಾರಾಟವಾದವು.

ಯತ್ತಂಬಾಡಿ ಸ್ವಸಹಾಯ ಸಂಘದ ಸಾವಯವ ರಾಗಿಹುರಿ ಹಿಟ್ಟಿನ ಜೊತೆಗೆ ಕರಿಬೇವು, ನುಗ್ಗೆಸೊಪ್ಪು ಮತ್ತು ಬೇವಿನಸೊಪ್ಪಿನ ಪುಡಿಗಳು ಮಕ್ಕಳು ಮತ್ತು ಹಿರಿಯರ ಗಮನ ಸೆಳೆದವು. ಆರೋಗ್ಯಕರ ಆಹಾರಕ್ಕೆ ಹೆಚ್ಚಿದ ಬೇಡಿಕೆಯಿಂದಾಗಿ ಈ ಪುಡಿಗಳು ನಿಮಿಷಗಳಲ್ಲಿ ಖಾಲಿಯಾದವು. ಸುಜ್ಜಲೂರು ಚಾಮುಂಡೇಶ್ವರಿ ಸ್ವಸಹಾಯ ಸಂಘದ ಬಜ್ಜಿ, ಬೋಂಡಾ, ವಡೆ ಮತ್ತು ಹಪ್ಪಳಕ್ಕೆ ಜನ ಮುಗಿಬಿದ್ದರು. ಬಿಸಿ ಬಿಸಿ ತಿಂಡಿಗೆ ಭಾರಿ ಬೇಡಿಕೆ ಬಂದಿದ್ದರಿಂದ ಸಂಜೆಯೊಳಗೆ ಎಲ್ಲವೂ ಖಾಲಿಯಾಗಿ ಭರ್ಜರಿ ವಹಿವಾಟು ನಡೆಯಿತು.

ಸಂತೆ ಕಾರ್ಯಕ್ರಮಕ್ಕೆ ಆಗಮಿಸಿದ ಇಒ ಶ್ರೀನಿವಾಸ್ ಅವರು ಸ್ಥಳದಲ್ಲಿದ್ದ ಕಸದ ರಾಶಿಯನ್ನು ಕಂಡು, ಕೂಡಲೇ ಅದನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಹಾಡ್ಲಿ ಗ್ರಾ.ಪಂ. ಪಿಡಿಒ ಲಿಂಗರಾಜು, ಒಕ್ಕೂಟದ ಅಧ್ಯಕ್ಷೆ ಸುನಂದಮ್ಮ, ಕಾರ್ಯದರ್ಶಿ ಸವಿತಾ, ಖಜಾಂಚಿ ಲಕ್ಷ್ಮಿ, ವ್ಯವಸ್ಥಾಪಕ ಮಹದೇವಸ್ವಾಮಿ, ಕೃಷಿ ಆಧಾರಿತ ಚಟುವಟಿಕೆ ವ್ಯವಸ್ಥಾಪಕ ಕೃಷ್ಣ, ಶೋಭಾ, ಒಕ್ಕೂಟದ ಮಧುಶ್ರೀ, ಗಿರಿಜಾ, ಪ್ರೇಮಾ, ರತ್ನಮ್ಮ, ಮಮತಾ ಸೇರಿದಂತೆ ಇತರ ಸಿಬ್ಬಂದಿ ಹಾಜರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    10 hrs ago
  • ತುರುವೇಕೆರೆ ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಗೀಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿರುವ ಗ್ರಾಮ ಪಂಚಾಯ್ತಿಗೆ ಸೇರಿದ ಕುಡಿಯುವ ನೀರಿನ ಬೋರ್ವೆಲ್‌ನ ಪೈಪ್‌ಲೈನ್ ಹಲವು ತಿಂಗಳುಗಳಿಂದ ಸೋರಿಕೆಯಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಪೈಪ್ ಸೋರಿಕೆಯಿಂದ ಸಾಕಷ್ಟು ನೀರು ವ್ಯರ್ಥವಾಗಿ ಪೋಲಾಗುತ್ತಿದ್ದು, ಇದು ಕೊಡಗೆಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ತಯಾರಿಸಲು ಹಾಗೂ ಮಕ್ಕಳ ದಿನನಿತ್ಯದ ಶೌಚಾಲಯದ ಬಳಕೆಗೆ ಅಗತ್ಯವಿರುವ ನೀರಿಗಾಗಿ ಶಾಲಾ ಸಿಬ್ಬಂದಿ ಪರದಾಡುವ ಸ್ಥಿತಿಯನ್ನು ಸೃಷ್ಟಿಸಿದೆ. ಶಿಕ್ಷಕರೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದು, ಈ ಗಂಭೀರ ಸಮಸ್ಯೆಯ ಬಗ್ಗೆ ಗ್ರಾಮ ಪಂಚಾಯಿತಿಯ ಪಿಡಿಒ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದರಿಂದ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೋರಿಕೆಯಾಗುತ್ತಿರುವ ಪೈಪ್‌ಲೈನ್ ಅನ್ನು ಶೀಘ್ರವಾಗಿ ದುರಸ್ತಿಗೊಳಿಸುವಂತೆ ಹಾಗೂ ಶಾಲೆಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ, ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ. ಕೊಡಗೀಹಳ್ಳಿ ಗ್ರಾ.ಪಂ. ಪಿಡಿಒ ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿಗೆ ಶಾಲಾ ಮಕ್ಕಳ ಊಟಕ್ಕೆ ತೊಂದರೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.
    3
    ತುರುವೇಕೆರೆ ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಗೀಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿರುವ ಗ್ರಾಮ ಪಂಚಾಯ್ತಿಗೆ ಸೇರಿದ ಕುಡಿಯುವ ನೀರಿನ ಬೋರ್ವೆಲ್‌ನ ಪೈಪ್‌ಲೈನ್ ಹಲವು ತಿಂಗಳುಗಳಿಂದ ಸೋರಿಕೆಯಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಪೈಪ್ ಸೋರಿಕೆಯಿಂದ ಸಾಕಷ್ಟು ನೀರು ವ್ಯರ್ಥವಾಗಿ ಪೋಲಾಗುತ್ತಿದ್ದು, ಇದು ಕೊಡಗೆಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ತಯಾರಿಸಲು ಹಾಗೂ ಮಕ್ಕಳ ದಿನನಿತ್ಯದ ಶೌಚಾಲಯದ ಬಳಕೆಗೆ ಅಗತ್ಯವಿರುವ ನೀರಿಗಾಗಿ ಶಾಲಾ ಸಿಬ್ಬಂದಿ ಪರದಾಡುವ ಸ್ಥಿತಿಯನ್ನು ಸೃಷ್ಟಿಸಿದೆ.

ಶಿಕ್ಷಕರೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದು, ಈ ಗಂಭೀರ ಸಮಸ್ಯೆಯ ಬಗ್ಗೆ ಗ್ರಾಮ ಪಂಚಾಯಿತಿಯ ಪಿಡಿಒ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದರಿಂದ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೋರಿಕೆಯಾಗುತ್ತಿರುವ ಪೈಪ್‌ಲೈನ್ ಅನ್ನು ಶೀಘ್ರವಾಗಿ ದುರಸ್ತಿಗೊಳಿಸುವಂತೆ ಹಾಗೂ ಶಾಲೆಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ, ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ. ಕೊಡಗೀಹಳ್ಳಿ ಗ್ರಾ.ಪಂ. ಪಿಡಿಒ ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿಗೆ ಶಾಲಾ ಮಕ್ಕಳ ಊಟಕ್ಕೆ ತೊಂದರೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    11 hrs ago
  • ಮೈಸೂರು ನಗರದಲ್ಲಿರುವ ವಿದ್ವಾಂಸರಿಗೆ ಒಂದು ವಿನಮ್ರ ಮನವಿ ಮಾಡಲಾಗಿದ್ದು, ಸ್ಥಳೀಯ ರಾಜಕಾರಣಿಗಳ ಬಲೆಗೆ ಬೀಳದಂತೆ ಕೇಳಿಕೊಳ್ಳಲಾಗಿದೆ. ಈ ಕ್ರಮವು "ನಮ್ಮ..." (ನಮ್ಮ...) ವಿರುದ್ಧವಾಗಿದೆ ಎಂದು ಮೂಲವು ತಿಳಿಸಿದೆ. "ಭಾರತದಲ್ಲಿ ವೈರಲ್" ಆಗಿರುವ ಈ ಸಂದೇಶದಲ್ಲಿ, ವಿದ್ವಾಂಸರು ರಾಜಕಾರಣಿಗಳಿಂದ ದೂರವಿರಬೇಕೆಂದು ಕೋರಲಾಗಿದೆ.
    1
    ಮೈಸೂರು ನಗರದಲ್ಲಿರುವ ವಿದ್ವಾಂಸರಿಗೆ ಒಂದು ವಿನಮ್ರ ಮನವಿ ಮಾಡಲಾಗಿದ್ದು, ಸ್ಥಳೀಯ ರಾಜಕಾರಣಿಗಳ ಬಲೆಗೆ ಬೀಳದಂತೆ ಕೇಳಿಕೊಳ್ಳಲಾಗಿದೆ. ಈ ಕ್ರಮವು "ನಮ್ಮ..." (ನಮ್ಮ...) ವಿರುದ್ಧವಾಗಿದೆ ಎಂದು ಮೂಲವು ತಿಳಿಸಿದೆ. "ಭಾರತದಲ್ಲಿ ವೈರಲ್" ಆಗಿರುವ ಈ ಸಂದೇಶದಲ್ಲಿ, ವಿದ್ವಾಂಸರು ರಾಜಕಾರಣಿಗಳಿಂದ ದೂರವಿರಬೇಕೆಂದು ಕೋರಲಾಗಿದೆ.
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    43 min ago
  • ಮತದಾರರ ಪಟ್ಟಿಯಲ್ಲಿ ಗೊಂದಲವಿದ್ದರೆ ಅಥವಾ ನಿಮ್ಮ ಹೆಸರು ಇಲ್ಲದಿದ್ದರೆ ಆತಂಕಪಡುವ ಅಗತ್ಯವಿಲ್ಲ ಎಂದು ಈ ಮಾಹಿತಿ ಸ್ಪಷ್ಟಪಡಿಸಿದೆ. ಅಂತಹ ಸಂದರ್ಭಗಳಲ್ಲಿ, ಮತದಾರರ ಪಟ್ಟಿಯನ್ನು ಸರಿಪಡಿಸಿಕೊಳ್ಳಲು ನಿಮ್ಮ BLO (ಬೂತ್ ಮಟ್ಟದ ಅಧಿಕಾರಿ) ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಮತದಾರರ ಪಟ್ಟಿಯನ್ನು ಅಪ್‌ಡೇಟ್ ಮಾಡಲು ಮತ್ತು ವೋಟರ್ ಲಿಸ್ಟ್‌ನಲ್ಲಿ ಹೆಸರು ಇಲ್ಲದಿದ್ದರೆ ಅದನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಒದಗಿಸಲಾಗಿದೆ.
    1
    ಮತದಾರರ ಪಟ್ಟಿಯಲ್ಲಿ ಗೊಂದಲವಿದ್ದರೆ ಅಥವಾ ನಿಮ್ಮ ಹೆಸರು ಇಲ್ಲದಿದ್ದರೆ ಆತಂಕಪಡುವ ಅಗತ್ಯವಿಲ್ಲ ಎಂದು ಈ ಮಾಹಿತಿ ಸ್ಪಷ್ಟಪಡಿಸಿದೆ. ಅಂತಹ ಸಂದರ್ಭಗಳಲ್ಲಿ, ಮತದಾರರ ಪಟ್ಟಿಯನ್ನು ಸರಿಪಡಿಸಿಕೊಳ್ಳಲು ನಿಮ್ಮ BLO (ಬೂತ್ ಮಟ್ಟದ ಅಧಿಕಾರಿ) ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಮತದಾರರ ಪಟ್ಟಿಯನ್ನು ಅಪ್‌ಡೇಟ್ ಮಾಡಲು ಮತ್ತು ವೋಟರ್ ಲಿಸ್ಟ್‌ನಲ್ಲಿ ಹೆಸರು ಇಲ್ಲದಿದ್ದರೆ ಅದನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಒದಗಿಸಲಾಗಿದೆ.
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    7 hrs ago
  • ಕರ್ನಾಟಕದಲ್ಲಿ ಮುಂಬರುವ ಸಂಪುಟ ಸಚಿವರ ರಚನೆಗೆ ಸಂಬಂಧಿಸಿದಂತೆ ಸೈಯದ್ ಅಸೀಮ್ ಸಾಹೇಬ್ ಅವರು ಹೇಳಿಕೆ ನೀಡಿದ್ದಾರೆ.
    1
    ಕರ್ನಾಟಕದಲ್ಲಿ ಮುಂಬರುವ ಸಂಪುಟ ಸಚಿವರ ರಚನೆಗೆ ಸಂಬಂಧಿಸಿದಂತೆ ಸೈಯದ್ ಅಸೀಮ್ ಸಾಹೇಬ್ ಅವರು ಹೇಳಿಕೆ ನೀಡಿದ್ದಾರೆ.
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    13 hrs ago
  • ಕೋಟಕ್ ಮಹೀಂದ್ರಾ ಬ್ಯಾಂಕ್ ವಿರುದ್ಧ ಮಹಿಳೆಯೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಂಕಿನಿಂದ ಪ್ರತಿ ಸಲ 600 ಕಡಿತಗೊಳಿಸುತ್ತಿದ್ದ ಕಾರಣಕ್ಕೆ ಅವರು ಬ್ಯಾಂಕಿನ ಸಿಬ್ಬಂದಿ ಮೇಲೆ ಆಕ್ರೋಶಗೊಂಡಿದ್ದಾರೆ.
    1
    ಕೋಟಕ್ ಮಹೀಂದ್ರಾ ಬ್ಯಾಂಕ್ ವಿರುದ್ಧ ಮಹಿಳೆಯೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಂಕಿನಿಂದ ಪ್ರತಿ ಸಲ 600 ಕಡಿತಗೊಳಿಸುತ್ತಿದ್ದ ಕಾರಣಕ್ಕೆ ಅವರು ಬ್ಯಾಂಕಿನ ಸಿಬ್ಬಂದಿ ಮೇಲೆ ಆಕ್ರೋಶಗೊಂಡಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ಮಳವಳ್ಳಿ ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಇದರ ಬೆನ್ನಲ್ಲೇ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲೇ ಹಲಗೂರು ವೃತ್ತದ ಕಂದಾಯ ನಿರೀಕ್ಷಕ ಮದುಸೂದನ್ ಅವರು ಶುಕ್ರವಾರ ಸಂಜೆ ಖಾತೆ ಮಾಡಿಕೊಡಲು ₹10,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಬಿದ್ದಿದ್ದಾರೆ. ಕೇವಲ ಒಂದು ವಾರದ ಹಿಂದೆ ಗ್ರಾಮಾಂತರ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಘಟನೆ ಮಾಸುವ ಮುನ್ನವೇ ಈ ಹೊಸ ಪ್ರಕರಣ ಬೆಳಕಿಗೆ ಬಂದಿದೆ. ದಳವಾಯಿಕೋಡಿಹಳ್ಳಿ ಗ್ರಾಮದ ನಂಜುಂಡಸ್ವಾಮಿ ಎಂಬುವರು ತಮ್ಮ ತಾಯಿಯ ಹೆಸರಿನಲ್ಲಿದ್ದ 12 ಗುಂಟೆ ಹಾಗೂ ಸ.ನಂ. 72 ರಲ್ಲಿದ್ದ 5.28 ಎಕರೆ ಜಮೀನನ್ನು ಪೋಡಿ ಮಾಡಿ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಕಂದಾಯ ನಿರೀಕ್ಷಕ ಮದುಸೂದನ್ ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದ ಬೇಸತ್ತ ನಂಜುಂಡಸ್ವಾಮಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳ ಪೂರ್ವ ನಿಯೋಜನೆಯಂತೆ, ತಾಲೂಕು ಆಡಳಿತ ಸೌಧದ ಬಳಿ ನಂಜುಂಡಸ್ವಾಮಿಯಿಂದ ಲಂಚ ಸ್ವೀಕರಿಸುತ್ತಿದ್ದ ಮದುಸೂದನ್‌ರನ್ನು ಲೋಕಾಯುಕ್ತ ಇನ್ಸ್‌ಪೆಕ್ಟರ್ ರವಿಕುಮಾರ್ ಮತ್ತು ತಂಡ ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದು, ತಹಸೀಲ್ದಾರ್ ಡಾ. ಎಸ್.ವಿ. ಲೋಕೇಶ್ ಅವರ ಸಮಕ್ಷಮದಲ್ಲಿ ಮಹಜರು ನಡೆಸಿ ವಿಚಾರಣೆ ಮುಂದುವರೆಸಿದ್ದಾರೆ. ಲೋಕಾಯುಕ್ತ ಎಸ್.ಪಿ. ಎಸ್. ಸುರೇಶ್‌ಬಾಬು ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್ ರವಿಕುಮಾರ್, ಬ್ಯಾಟರಾಯಗೌಡ, ಸಿಬ್ಬಂದಿಗಳಾದ ಶಂಕರ್, ಸಿದ್ದಲಿಂಗಸ್ವಾಮಿ, ಶರತ್, ಮಹದೇವ್, ಮಾನಸ ಮತ್ತು ಶ್ರೀದೇವಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಎಂಬುವರು, ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾರಕ್ಕೊಮ್ಮೆ ಇಂತಹ ದಾಳಿಗಳು ನಡೆಯಬೇಕು, ಅಧಿಕಾರಿಗಳು ಲಂಚಕ್ಕೆ ಹೆದರಿ ಜನಸಾಮಾನ್ಯರಿಗೆ ಪ್ರಮಾಣಿಕ ಸೇವೆ ನೀಡಬೇಕು ಎಂದು ಆಗ್ರಹಿಸಿದರು. ತಾವೊಬ್ಬ ಸರ್ಕಾರಿ ಅಧಿಕಾರಿಯಾಗಿದ್ದರೂ ಒಂದು ದಾಖಲಾತಿ ಪಡೆಯಲು ತಿಂಗಳುಗಟ್ಟಲೆ ಕಾಯಬೇಕಾಗುತ್ತದೆ, ಹಣ ನೀಡಿದರೂ ಕೆಲಸ ವಿಳಂಬ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿ, ತಾಲೂಕು ಕಚೇರಿಯ ಸಿಬ್ಬಂದಿಗಳ ಕಾರ್ಯವೈಖರಿಗೆ ಅಸಮಾಧಾನ ಹೊರಹಾಕಿದರು.
    1
    ಮಳವಳ್ಳಿ ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಇದರ ಬೆನ್ನಲ್ಲೇ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲೇ ಹಲಗೂರು ವೃತ್ತದ ಕಂದಾಯ ನಿರೀಕ್ಷಕ ಮದುಸೂದನ್ ಅವರು ಶುಕ್ರವಾರ ಸಂಜೆ ಖಾತೆ ಮಾಡಿಕೊಡಲು ₹10,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಬಿದ್ದಿದ್ದಾರೆ. ಕೇವಲ ಒಂದು ವಾರದ ಹಿಂದೆ ಗ್ರಾಮಾಂತರ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಘಟನೆ ಮಾಸುವ ಮುನ್ನವೇ ಈ ಹೊಸ ಪ್ರಕರಣ ಬೆಳಕಿಗೆ ಬಂದಿದೆ.

ದಳವಾಯಿಕೋಡಿಹಳ್ಳಿ ಗ್ರಾಮದ ನಂಜುಂಡಸ್ವಾಮಿ ಎಂಬುವರು ತಮ್ಮ ತಾಯಿಯ ಹೆಸರಿನಲ್ಲಿದ್ದ 12 ಗುಂಟೆ ಹಾಗೂ ಸ.ನಂ. 72 ರಲ್ಲಿದ್ದ 5.28 ಎಕರೆ ಜಮೀನನ್ನು ಪೋಡಿ ಮಾಡಿ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಕಂದಾಯ ನಿರೀಕ್ಷಕ ಮದುಸೂದನ್ ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದ ಬೇಸತ್ತ ನಂಜುಂಡಸ್ವಾಮಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳ ಪೂರ್ವ ನಿಯೋಜನೆಯಂತೆ, ತಾಲೂಕು ಆಡಳಿತ ಸೌಧದ ಬಳಿ ನಂಜುಂಡಸ್ವಾಮಿಯಿಂದ ಲಂಚ ಸ್ವೀಕರಿಸುತ್ತಿದ್ದ ಮದುಸೂದನ್‌ರನ್ನು ಲೋಕಾಯುಕ್ತ ಇನ್ಸ್‌ಪೆಕ್ಟರ್ ರವಿಕುಮಾರ್ ಮತ್ತು ತಂಡ ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದು, ತಹಸೀಲ್ದಾರ್ ಡಾ. ಎಸ್.ವಿ. ಲೋಕೇಶ್ ಅವರ ಸಮಕ್ಷಮದಲ್ಲಿ ಮಹಜರು ನಡೆಸಿ ವಿಚಾರಣೆ ಮುಂದುವರೆಸಿದ್ದಾರೆ.

ಲೋಕಾಯುಕ್ತ ಎಸ್.ಪಿ. ಎಸ್. ಸುರೇಶ್‌ಬಾಬು ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್ ರವಿಕುಮಾರ್, ಬ್ಯಾಟರಾಯಗೌಡ, ಸಿಬ್ಬಂದಿಗಳಾದ ಶಂಕರ್, ಸಿದ್ದಲಿಂಗಸ್ವಾಮಿ, ಶರತ್, ಮಹದೇವ್, ಮಾನಸ ಮತ್ತು ಶ್ರೀದೇವಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಎಂಬುವರು, ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾರಕ್ಕೊಮ್ಮೆ ಇಂತಹ ದಾಳಿಗಳು ನಡೆಯಬೇಕು, ಅಧಿಕಾರಿಗಳು ಲಂಚಕ್ಕೆ ಹೆದರಿ ಜನಸಾಮಾನ್ಯರಿಗೆ ಪ್ರಮಾಣಿಕ ಸೇವೆ ನೀಡಬೇಕು ಎಂದು ಆಗ್ರಹಿಸಿದರು. ತಾವೊಬ್ಬ ಸರ್ಕಾರಿ ಅಧಿಕಾರಿಯಾಗಿದ್ದರೂ ಒಂದು ದಾಖಲಾತಿ ಪಡೆಯಲು ತಿಂಗಳುಗಟ್ಟಲೆ ಕಾಯಬೇಕಾಗುತ್ತದೆ, ಹಣ ನೀಡಿದರೂ ಕೆಲಸ ವಿಳಂಬ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿ, ತಾಲೂಕು ಕಚೇರಿಯ ಸಿಬ್ಬಂದಿಗಳ ಕಾರ್ಯವೈಖರಿಗೆ ಅಸಮಾಧಾನ ಹೊರಹಾಕಿದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    12 hrs ago
  • ಕರ್ನಾಟಕದ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ, ಮುಂಬೈನ ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯ ಸರ್ಕಾರದ ಸೌಮ್ಯತೆಗೊಳಪಡುವ ಎಲ್ಲಾ ವಿದ್ಯುತ್ ವಿತರಣಾ ಕಂಪನಿಗಳ ವ್ಯಾಪ್ತಿಯಲ್ಲಿ ಸಮಾನಾಂತರ ವಿತರಣಾ ಕಾರ್ಯಕ್ಕೆ ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆಸ್ಕಾಂ ನೌಕರರ ಸಂಘ, ಈ ಖಾಸಗಿ ಅರ್ಜಿಯನ್ನು ರಾಜ್ಯದ ಜನತೆಗೆ ಮಾರಕ ಎಂದು ಕರೆದಿದ್ದು, ಸರ್ಕಾರವು ಕೂಡಲೇ ಅದನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿದೆ. ಸಂಘವು, ರಾಷ್ಟ್ರದ ಸಂವಿಧಾನ ಶಿಲ್ಪಿ ಮತ್ತು ಜನಪರ ಕಾಳಜಿಯ ದೂರದರ್ಶಿತ್ವದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು 1942-43ರಲ್ಲಿಯೇ ವಿದ್ಯುಚ್ಛಕ್ತಿ, ನೀರು ಮತ್ತು ಲೋಕೋಪಯೋಗಿ ಮೊದಲಾದ ಜನಸೇವಾ ಚಟುವಟಿಕೆಗಳು ಸರ್ಕಾರದ ಹಿಡಿತದಲ್ಲಿಯೇ ಇರಬೇಕು, ಲಾಭ ಗಳಿಕೆಯ ಖಾಸಗಿ ಸಂಸ್ಥೆಗಳಿಗೆ ನೀಡಬಾರದು ಎಂದು ತಿಳಿಸಿದ್ದರು ಎಂಬುದನ್ನು ನೆನಪಿಸಿದೆ. ಅವರು ಈ ಉದ್ದೇಶಕ್ಕಾಗಿಯೇ ಕೇಂದ್ರ ವಿದ್ಯುಚ್ಛಕ್ತಿ ಪ್ರಾಧೀಕಾರ ಮತ್ತು ರಾಜ್ಯ ವಿದ್ಯುಚ್ಛಕ್ತಿ ಮಂಡಳಿಗಳ ಸ್ಥಾಪನೆಗೆ ಬುನಾದಿ ಹಾಕಿದ್ದರು. ಇಂತಹ ಅಪೂರ್ವವಾದ ಜನಪರ ಸೇವೆಯನ್ನು ಖಾಸಗಿ ಸಂಸ್ಥೆಗೆ ನೀಡುವುದು ಜನವಿರೋಧಿ ನೀತಿಯಾಗುತ್ತದೆ ಎಂದು ಸಂಘ ಹೇಳಿದೆ. ವಿದ್ಯುತ್ ಕಾಯ್ದೆ 2003ರ ಕಲಂ 14 ಮತ್ತು 15ರ ಅಡಿಯಲ್ಲಿ ಖಾಸಗಿ ಕಂಪನಿಗಳಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡಿದರೆ ಪ್ರಮುಖ ಅನಾನುಕೂಲಗಳು ಸಂಭವಿಸಲಿವೆ ಎಂದು ಮನವಿ ಮಾಡಿದೆ. ಬೆಸ್ಕಾಂ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ನರಸಿಂಹಮೂರ್ತಿ ಮಾತನಾಡಿ, ಖಾಸಗಿ ಕಂಪನಿಗಳು ಲಾಭದ ಉದ್ದೇಶದಿಂದ ಕೆಲಸ ಮಾಡುತ್ತವೆ. ಇದರಿಂದ ಸಾಮಾನ್ಯ ಜನರಿಗೆ ಮತ್ತು ಬಡ ವರ್ಗದವರಿಗೆ ವಿದ್ಯುತ್ ದರ ಹೆಚ್ಚಾಗುತ್ತದೆ. ಇದು ಸಾರ್ವಜನಿಕ ಉದ್ಯೋಗ ಭದ್ರತೆಗೆ ಆತಂಕವನ್ನುಂಟುಮಾಡುತ್ತದೆ ಮತ್ತು ನಿರುದ್ಯೋಗಿ ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಸಿಗುವುದಿಲ್ಲ. ಖಾಸಗಿ ಕಂಪನಿಗಳಿಗೆ ವಹಿಸಿದರೆ, ಬಡ, ಮಧ್ಯಮ ಹಾಗೂ ದೀನ ದಲಿತರಿಗೆ ಮೀಸಲಾತಿ ಇಲ್ಲದೆ ತೊಂದರೆಯಾಗುತ್ತದೆ. ಸಣ್ಣ ಮತ್ತು ಮಧ್ಯಮ ಗುಡಿ ಕೈಗಾರಿಕೆಗಳಿಗೆ ವಿದ್ಯುತ್ ದರ ಹೆಚ್ಚಳವಾದರೆ ಕೈಗಾರಿಕೆಗಳ ಬೆಳವಣಿಗೆ ಕುಂಠಿತವಾಗುತ್ತದೆ. ಹಲವು ವರ್ಷಗಳ ಕಾಲ ಸಾರ್ವಜನಿಕರ ಹಣದಿಂದ ನಿರ್ಮಿಸಿದ ವಿದ್ಯುತ್ ಜಾಲ ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸುವುದು ನ್ಯಾಯಸಮ್ಮತವಲ್ಲ ಎಂದು ಅವರು ಹೇಳಿದರು. ಖಾಸಗಿ ಕಂಪನಿಗಳು ನಗರ ಮತ್ತು ಲಾಭದಾಯಕ ಪ್ರದೇಶಗಳಿಗೆ ಮಾತ್ರ ಸೇವೆ ನೀಡುವ ಸಾಧ್ಯತೆಯಿದ್ದು, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳು ನಿರ್ಲಕ್ಷ್ಯಕ್ಕೊಳಗಾಗಬಹುದು. ಖಾಸಗಿ ಸಂಸ್ಥೆಗಳು ಹೆಚ್ಚಿನ ಲಾಭಕ್ಕಾಗಿ ವಿದ್ಯುತ್ ದರಗಳನ್ನು ಹೆಚ್ಚಿಸುವ ಅಪಾಯವಿದ್ದು, ಇದು ಸಾಮಾನ್ಯ ಜನರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸರ್ಕಾರಿ ಕಂಪನಿಗಳು ಜನರಿಗೆ, ಮಾಧ್ಯಮಕ್ಕೆ, ಕಾನೂನಿಗೆ ಮತ್ತು ಜನ ಪ್ರತಿನಿಧಿಗಳಿಗೆ ಉತ್ತರದಾಯಿತ್ವ ಹೊಂದಿರುತ್ತವೆ. ಆದರೆ, ಖಾಸಗಿ ಕಂಪನಿಗಳಲ್ಲಿ ಸಾರ್ವಜನಿಕ ಉತ್ತರದಾಯಿತ್ವಕ್ಕೆ ಅವಕಾಶವಿರುವುದಿಲ್ಲ. ಗ್ರಾಮೀಣ ಮೂಲಸೌಕರ್ಯದ ನಿರ್ಲಕ್ಷ್ಯ ಮತ್ತು ಮಲೆನಾಡು, ಕರಾವಳಿ ಹಾಗೂ ಹಿಂದುಳಿದ ಗ್ರಾಮೀಣ ಭಾಗಗಳಲ್ಲಿ ಖಾಸಗಿ ಸಂಸ್ಥೆಗಳು ವಿದ್ಯುತ್ ಸೇವೆಗಳನ್ನು ನೀಡುವುದು ಕಷ್ಟವಾಗುತ್ತದೆ. ಸಾರ್ವಜನಿಕ ಹಣದಿಂದ ನಿರ್ಮಿಸಿರುವ ವಿದ್ಯುತ್ ಗ್ರಿಡ್, ಕಂಬಗಳು ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗೆ ನೀಡುವುದು ಜನರ ಹಣದ ದುರುಪಯೋಗವಾಗಲಿದೆ. ಖಾಸಗಿ ಕಂಪನಿಗಳು ಗ್ರಾಹಕರಿಗೆ ಮತ್ತು ರೈತರ ನೀರಾವರಿ ಯೋಜನೆಗಳಿಗೆ ಉಚಿತ ವಿದ್ಯುತ್ ಅಥವಾ ರಿಯಾಯಿತಿ ದರದಲ್ಲಿ ವಿದ್ಯುತ್ ಪೂರೈಸುವುದಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿ ಕೃಷಿಗೆ ಅಪಾಯಕಾರಿಯಾಗುತ್ತದೆ ಮತ್ತು ಅಗತ್ಯ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುತ್ತದೆ ಎಂದು ನರಸಿಂಹಮೂರ್ತಿ ವಿವರಿಸಿದರು. ವಿದ್ಯುತ್ ದೇಶದ ಭದ್ರತೆ ಮತ್ತು ಜನರ ಬದುಕಿಗೆ ಅತ್ಯಗತ್ಯವಾಗಿದೆ, ಇದನ್ನು ಖಾಸಗಿ ಕಂಪನಿಗೆ ಲಾಭದ ಉದ್ದೇಶದ ಅಧೀನಕ್ಕೆ ನೀಡುವುದು ರಾಜ್ಯದ ಮತ್ತು ಒಕ್ಕೂಟ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕೆ ಮಾರಕವಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಎ.ಇ.ಇ. ಎಂ.ಸಿರಾಜಶೇಖರ್ ಅವರು ಕೂಡ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣೆ ನೀಡಿದರೆ ಗ್ರಾಹಕರಿಗೆ ಹೊಡೆತ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ಧರಣೇಶ್, ಕಾರ್ಯದರ್ಶಿ ಅತ್ಯುತ್ ಎಸ್ ಕೆ, ಸಹಾಯಕ ಲೆಕ್ಕಾಧಿಕಾರಿ ನರಸಿಂಹಯ್ಯ ಹಾಗೂ ಎಲ್ಲ ಉಪ ವಿಭಾಗದ ಶಾಖಾಧಿಕಾರಿಗಳು, ಗುತ್ತಿಗೆದಾರರು, ನೌಕರರ ಸಂಘದ ಸದಸ್ಯರುಗಳು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು. ಕರ್ನಾಟಕದ ಜನರ ಹಿತಾಸಕ್ತಿ, ರೈತರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ವಿದ್ಯುತ್ ಕಂಪನಿಗಳನ್ನು ಸರ್ಕಾರದ ಅಧೀನದಲ್ಲಿ ಉಳಿಸಿಕೊಳ್ಳುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು.
    3
    ಕರ್ನಾಟಕದ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ, ಮುಂಬೈನ ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯ ಸರ್ಕಾರದ ಸೌಮ್ಯತೆಗೊಳಪಡುವ ಎಲ್ಲಾ ವಿದ್ಯುತ್ ವಿತರಣಾ ಕಂಪನಿಗಳ ವ್ಯಾಪ್ತಿಯಲ್ಲಿ ಸಮಾನಾಂತರ ವಿತರಣಾ ಕಾರ್ಯಕ್ಕೆ ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆಸ್ಕಾಂ ನೌಕರರ ಸಂಘ, ಈ ಖಾಸಗಿ ಅರ್ಜಿಯನ್ನು ರಾಜ್ಯದ ಜನತೆಗೆ ಮಾರಕ ಎಂದು ಕರೆದಿದ್ದು, ಸರ್ಕಾರವು ಕೂಡಲೇ ಅದನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿದೆ.

ಸಂಘವು, ರಾಷ್ಟ್ರದ ಸಂವಿಧಾನ ಶಿಲ್ಪಿ ಮತ್ತು ಜನಪರ ಕಾಳಜಿಯ ದೂರದರ್ಶಿತ್ವದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು 1942-43ರಲ್ಲಿಯೇ ವಿದ್ಯುಚ್ಛಕ್ತಿ, ನೀರು ಮತ್ತು ಲೋಕೋಪಯೋಗಿ ಮೊದಲಾದ ಜನಸೇವಾ ಚಟುವಟಿಕೆಗಳು ಸರ್ಕಾರದ ಹಿಡಿತದಲ್ಲಿಯೇ ಇರಬೇಕು, ಲಾಭ ಗಳಿಕೆಯ ಖಾಸಗಿ ಸಂಸ್ಥೆಗಳಿಗೆ ನೀಡಬಾರದು ಎಂದು ತಿಳಿಸಿದ್ದರು ಎಂಬುದನ್ನು ನೆನಪಿಸಿದೆ. ಅವರು ಈ ಉದ್ದೇಶಕ್ಕಾಗಿಯೇ ಕೇಂದ್ರ ವಿದ್ಯುಚ್ಛಕ್ತಿ ಪ್ರಾಧೀಕಾರ ಮತ್ತು ರಾಜ್ಯ ವಿದ್ಯುಚ್ಛಕ್ತಿ ಮಂಡಳಿಗಳ ಸ್ಥಾಪನೆಗೆ ಬುನಾದಿ ಹಾಕಿದ್ದರು. ಇಂತಹ ಅಪೂರ್ವವಾದ ಜನಪರ ಸೇವೆಯನ್ನು ಖಾಸಗಿ ಸಂಸ್ಥೆಗೆ ನೀಡುವುದು ಜನವಿರೋಧಿ ನೀತಿಯಾಗುತ್ತದೆ ಎಂದು ಸಂಘ ಹೇಳಿದೆ. ವಿದ್ಯುತ್ ಕಾಯ್ದೆ 2003ರ ಕಲಂ 14 ಮತ್ತು 15ರ ಅಡಿಯಲ್ಲಿ ಖಾಸಗಿ ಕಂಪನಿಗಳಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡಿದರೆ ಪ್ರಮುಖ ಅನಾನುಕೂಲಗಳು ಸಂಭವಿಸಲಿವೆ ಎಂದು ಮನವಿ ಮಾಡಿದೆ.

ಬೆಸ್ಕಾಂ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ನರಸಿಂಹಮೂರ್ತಿ ಮಾತನಾಡಿ, ಖಾಸಗಿ ಕಂಪನಿಗಳು ಲಾಭದ ಉದ್ದೇಶದಿಂದ ಕೆಲಸ ಮಾಡುತ್ತವೆ. ಇದರಿಂದ ಸಾಮಾನ್ಯ ಜನರಿಗೆ ಮತ್ತು ಬಡ ವರ್ಗದವರಿಗೆ ವಿದ್ಯುತ್ ದರ ಹೆಚ್ಚಾಗುತ್ತದೆ. ಇದು ಸಾರ್ವಜನಿಕ ಉದ್ಯೋಗ ಭದ್ರತೆಗೆ ಆತಂಕವನ್ನುಂಟುಮಾಡುತ್ತದೆ ಮತ್ತು ನಿರುದ್ಯೋಗಿ ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಸಿಗುವುದಿಲ್ಲ. ಖಾಸಗಿ ಕಂಪನಿಗಳಿಗೆ ವಹಿಸಿದರೆ, ಬಡ, ಮಧ್ಯಮ ಹಾಗೂ ದೀನ ದಲಿತರಿಗೆ ಮೀಸಲಾತಿ ಇಲ್ಲದೆ ತೊಂದರೆಯಾಗುತ್ತದೆ. ಸಣ್ಣ ಮತ್ತು ಮಧ್ಯಮ ಗುಡಿ ಕೈಗಾರಿಕೆಗಳಿಗೆ ವಿದ್ಯುತ್ ದರ ಹೆಚ್ಚಳವಾದರೆ ಕೈಗಾರಿಕೆಗಳ ಬೆಳವಣಿಗೆ ಕುಂಠಿತವಾಗುತ್ತದೆ. ಹಲವು ವರ್ಷಗಳ ಕಾಲ ಸಾರ್ವಜನಿಕರ ಹಣದಿಂದ ನಿರ್ಮಿಸಿದ ವಿದ್ಯುತ್ ಜಾಲ ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸುವುದು ನ್ಯಾಯಸಮ್ಮತವಲ್ಲ ಎಂದು ಅವರು ಹೇಳಿದರು.

ಖಾಸಗಿ ಕಂಪನಿಗಳು ನಗರ ಮತ್ತು ಲಾಭದಾಯಕ ಪ್ರದೇಶಗಳಿಗೆ ಮಾತ್ರ ಸೇವೆ ನೀಡುವ ಸಾಧ್ಯತೆಯಿದ್ದು, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳು ನಿರ್ಲಕ್ಷ್ಯಕ್ಕೊಳಗಾಗಬಹುದು. ಖಾಸಗಿ ಸಂಸ್ಥೆಗಳು ಹೆಚ್ಚಿನ ಲಾಭಕ್ಕಾಗಿ ವಿದ್ಯುತ್ ದರಗಳನ್ನು ಹೆಚ್ಚಿಸುವ ಅಪಾಯವಿದ್ದು, ಇದು ಸಾಮಾನ್ಯ ಜನರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸರ್ಕಾರಿ ಕಂಪನಿಗಳು ಜನರಿಗೆ, ಮಾಧ್ಯಮಕ್ಕೆ, ಕಾನೂನಿಗೆ ಮತ್ತು ಜನ ಪ್ರತಿನಿಧಿಗಳಿಗೆ ಉತ್ತರದಾಯಿತ್ವ ಹೊಂದಿರುತ್ತವೆ. ಆದರೆ, ಖಾಸಗಿ ಕಂಪನಿಗಳಲ್ಲಿ ಸಾರ್ವಜನಿಕ ಉತ್ತರದಾಯಿತ್ವಕ್ಕೆ ಅವಕಾಶವಿರುವುದಿಲ್ಲ. ಗ್ರಾಮೀಣ ಮೂಲಸೌಕರ್ಯದ ನಿರ್ಲಕ್ಷ್ಯ ಮತ್ತು ಮಲೆನಾಡು, ಕರಾವಳಿ ಹಾಗೂ ಹಿಂದುಳಿದ ಗ್ರಾಮೀಣ ಭಾಗಗಳಲ್ಲಿ ಖಾಸಗಿ ಸಂಸ್ಥೆಗಳು ವಿದ್ಯುತ್ ಸೇವೆಗಳನ್ನು ನೀಡುವುದು ಕಷ್ಟವಾಗುತ್ತದೆ. ಸಾರ್ವಜನಿಕ ಹಣದಿಂದ ನಿರ್ಮಿಸಿರುವ ವಿದ್ಯುತ್ ಗ್ರಿಡ್, ಕಂಬಗಳು ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗೆ ನೀಡುವುದು ಜನರ ಹಣದ ದುರುಪಯೋಗವಾಗಲಿದೆ. ಖಾಸಗಿ ಕಂಪನಿಗಳು ಗ್ರಾಹಕರಿಗೆ ಮತ್ತು ರೈತರ ನೀರಾವರಿ ಯೋಜನೆಗಳಿಗೆ ಉಚಿತ ವಿದ್ಯುತ್ ಅಥವಾ ರಿಯಾಯಿತಿ ದರದಲ್ಲಿ ವಿದ್ಯುತ್ ಪೂರೈಸುವುದಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿ ಕೃಷಿಗೆ ಅಪಾಯಕಾರಿಯಾಗುತ್ತದೆ ಮತ್ತು ಅಗತ್ಯ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುತ್ತದೆ ಎಂದು ನರಸಿಂಹಮೂರ್ತಿ ವಿವರಿಸಿದರು. ವಿದ್ಯುತ್ ದೇಶದ ಭದ್ರತೆ ಮತ್ತು ಜನರ ಬದುಕಿಗೆ ಅತ್ಯಗತ್ಯವಾಗಿದೆ, ಇದನ್ನು ಖಾಸಗಿ ಕಂಪನಿಗೆ ಲಾಭದ ಉದ್ದೇಶದ ಅಧೀನಕ್ಕೆ ನೀಡುವುದು ರಾಜ್ಯದ ಮತ್ತು ಒಕ್ಕೂಟ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕೆ ಮಾರಕವಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಎ.ಇ.ಇ. ಎಂ.ಸಿರಾಜಶೇಖರ್ ಅವರು ಕೂಡ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣೆ ನೀಡಿದರೆ ಗ್ರಾಹಕರಿಗೆ ಹೊಡೆತ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ಧರಣೇಶ್, ಕಾರ್ಯದರ್ಶಿ ಅತ್ಯುತ್ ಎಸ್ ಕೆ, ಸಹಾಯಕ ಲೆಕ್ಕಾಧಿಕಾರಿ ನರಸಿಂಹಯ್ಯ ಹಾಗೂ ಎಲ್ಲ ಉಪ ವಿಭಾಗದ ಶಾಖಾಧಿಕಾರಿಗಳು, ಗುತ್ತಿಗೆದಾರರು, ನೌಕರರ ಸಂಘದ ಸದಸ್ಯರುಗಳು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು. ಕರ್ನಾಟಕದ ಜನರ ಹಿತಾಸಕ್ತಿ, ರೈತರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ವಿದ್ಯುತ್ ಕಂಪನಿಗಳನ್ನು ಸರ್ಕಾರದ ಅಧೀನದಲ್ಲಿ ಉಳಿಸಿಕೊಳ್ಳುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.