logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಂಗಳೂರಿನಲ್ಲಿ ಕರ್ನಾಟಕ ಜನತಾ ಸೇನಾ ದಳ ಆಯೋಜಿಸಿದ್ದ ಸಂಗಮ ಸಮಾವೇಶ ಕಾರ್ಯಕ್ರಮದಲ್ಲಿ ಸಮಾಜಸೇವಕ ಹಾಗೂ ಪತ್ರಕರ್ತ ನಜೀರ್ ಅಹ್ಮದ್ ಚೋರಗಸ್ತಿ ಅವರಿಗೆ 'ಭಾರತ ಬುದ್ಧ ಶ್ರೀ ರಾಷ್ಟ್ರೀಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಅವರ ಸಮಾಜಮುಖಿ ಸೇವೆ, ಪತ್ರಿಕೋದ್ಯಮ ಕ್ಷೇತ್ರದ ಕೊಡುಗೆ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಸಾನ್ನಿಧ್ಯವನ್ನು ಬೆಂಗಳೂರಿನ ಶ್ರೀ ಬೇಲಿ ಮಠ ಮಹಾಸಂಸ್ಥಾನದ ಶ್ರೀ ಶ್ರೀ ಪರಮಪೂಜ್ಯ ಶ್ರೀ ನಿ.ಪ್ರ. ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ವಹಿಸಿದ್ದರು. ಸನ್ಮಾನ್ಯ ಶ್ರೀ ಪುರುಷೋತ್ತಮ ಬಿಳಿಮಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಹಾಗೂ ಬೆಂಗಳೂರು ಉಪ ಪೊಲೀಸ್ ಆಯುಕ್ತರಾದ ಶ್ರೀ ಮಂಜುನಾಥ ಬಾಬು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜನತಾ ಸೇನಾ ದಳದ ಗೌರವಾಧ್ಯಕ್ಷರು, ಖ್ಯಾತ ಪತ್ರಕರ್ತರು, ನಾಟಕಕಾರರು, ಲೇಖಕರು, ನಿರ್ದೇಶಕರು, ಚಲನಚಿತ್ರ ತಂತ್ರಜ್ಞರು, ಪರಿಸರ ಪ್ರೇಮಿಗಳು, ಚಿಂತಕರು, ಸಾಹಿತಿಗಳು, ಸಮಾಜಸೇವಕರು ಹಾಗೂ ವಾಸ್ತು-ಜ್ಯೋತಿಷ್ಯ ತಜ್ಞರಾದ ಡಾ. ಕೆಂಚನೂರ್ ಶಂಕರ್ ಸ್ವಾಗತ ಭಾಷಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಜನತಾ ಸೇನಾ ದಳದ ರಾಜ್ಯಾಧ್ಯಕ್ಷರಾದ ಶ್ರೀ ಎಚ್. ಸದಾಶಿವ, ಜಿಲ್ಲಾ ಕಾರ್ಮಿಕ ಅಧ್ಯಕ್ಷರಾದ ಡಾ. ಸಿದ್ದು ಕಲ್ಲೂರ್, ಶ್ರೀ ಆನಂದ ಜಾದವ್ ಸೇರಿದಂತೆ ಹಲವು ಗಣ್ಯರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಹಾಗೂ ಸಮಾಜಸೇವಕರು ಉಪಸ್ಥಿತರಿದ್ದರು.

11 hrs ago
user_ಸಮೃದ್ಧ ಕರ್ನಾಟಕ ನ್ಯೂಸ್
ಸಮೃದ್ಧ ಕರ್ನಾಟಕ ನ್ಯೂಸ್
Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
11 hrs ago

ಬೆಂಗಳೂರಿನಲ್ಲಿ ಕರ್ನಾಟಕ ಜನತಾ ಸೇನಾ ದಳ ಆಯೋಜಿಸಿದ್ದ ಸಂಗಮ ಸಮಾವೇಶ ಕಾರ್ಯಕ್ರಮದಲ್ಲಿ ಸಮಾಜಸೇವಕ ಹಾಗೂ ಪತ್ರಕರ್ತ ನಜೀರ್ ಅಹ್ಮದ್ ಚೋರಗಸ್ತಿ ಅವರಿಗೆ 'ಭಾರತ ಬುದ್ಧ ಶ್ರೀ ರಾಷ್ಟ್ರೀಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಅವರ ಸಮಾಜಮುಖಿ ಸೇವೆ, ಪತ್ರಿಕೋದ್ಯಮ ಕ್ಷೇತ್ರದ ಕೊಡುಗೆ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಸಾನ್ನಿಧ್ಯವನ್ನು ಬೆಂಗಳೂರಿನ ಶ್ರೀ ಬೇಲಿ ಮಠ ಮಹಾಸಂಸ್ಥಾನದ ಶ್ರೀ ಶ್ರೀ ಪರಮಪೂಜ್ಯ ಶ್ರೀ ನಿ.ಪ್ರ. ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ವಹಿಸಿದ್ದರು. ಸನ್ಮಾನ್ಯ ಶ್ರೀ ಪುರುಷೋತ್ತಮ ಬಿಳಿಮಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಹಾಗೂ ಬೆಂಗಳೂರು ಉಪ ಪೊಲೀಸ್ ಆಯುಕ್ತರಾದ ಶ್ರೀ ಮಂಜುನಾಥ ಬಾಬು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜನತಾ ಸೇನಾ ದಳದ ಗೌರವಾಧ್ಯಕ್ಷರು, ಖ್ಯಾತ ಪತ್ರಕರ್ತರು, ನಾಟಕಕಾರರು, ಲೇಖಕರು, ನಿರ್ದೇಶಕರು, ಚಲನಚಿತ್ರ ತಂತ್ರಜ್ಞರು, ಪರಿಸರ ಪ್ರೇಮಿಗಳು, ಚಿಂತಕರು, ಸಾಹಿತಿಗಳು, ಸಮಾಜಸೇವಕರು ಹಾಗೂ ವಾಸ್ತು-ಜ್ಯೋತಿಷ್ಯ ತಜ್ಞರಾದ ಡಾ. ಕೆಂಚನೂರ್ ಶಂಕರ್ ಸ್ವಾಗತ ಭಾಷಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಜನತಾ ಸೇನಾ ದಳದ ರಾಜ್ಯಾಧ್ಯಕ್ಷರಾದ ಶ್ರೀ ಎಚ್. ಸದಾಶಿವ, ಜಿಲ್ಲಾ ಕಾರ್ಮಿಕ ಅಧ್ಯಕ್ಷರಾದ ಡಾ. ಸಿದ್ದು ಕಲ್ಲೂರ್, ಶ್ರೀ ಆನಂದ ಜಾದವ್ ಸೇರಿದಂತೆ ಹಲವು ಗಣ್ಯರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಹಾಗೂ ಸಮಾಜಸೇವಕರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ವಿಶೇಷ ಚೇತನ ಮಕ್ಕಳ ಅಭಿವೃದ್ಧಿಗೆ ಪೋಷಕರು ಮತ್ತು ಸಮಾಜದ ಪಾತ್ರ ಅತ್ಯಂತ ಮಹತ್ವದ್ದು ಎಂದು ಎ.ಎಸ್. ಯತ್ನಾಳ ಹೇಳಿದ್ದಾರೆ.
    1
    ವಿಶೇಷ ಚೇತನ ಮಕ್ಕಳ ಅಭಿವೃದ್ಧಿಗೆ ಪೋಷಕರು ಮತ್ತು ಸಮಾಜದ ಪಾತ್ರ ಅತ್ಯಂತ ಮಹತ್ವದ್ದು ಎಂದು ಎ.ಎಸ್. ಯತ್ನಾಳ ಹೇಳಿದ್ದಾರೆ.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    4 hrs ago
  • ವಿಜಯಪುರದಲ್ಲಿ ಗಾಣಿಗ ಸಮಾಜದ ಮುಖಂಡ ಮಲ್ಲಿಕಾರ್ಜುನ್ ಲೋನಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಗಾಣಿಗ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 80 ವರ್ಷಗಳಾದರೂ ಕಾಂಗ್ರೆಸ್ ಪಕ್ಷವು ಗಾಣಿಗ ಸಮಾಜಕ್ಕೆ ಸಚಿವ ಸ್ಥಾನ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಪ್ರಭಾವಿ ಗಾಣಿಗ ಸಮಾಜದ ಶಾಸಕ ಲಕ್ಷ್ಮಣ ಸವದಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ. ಒಂದು ವೇಳೆ ಈ ಬೇಡಿಕೆಯನ್ನು ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವುದಾಗಿ ಲೋನಿ ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ.
    1
    ವಿಜಯಪುರದಲ್ಲಿ ಗಾಣಿಗ ಸಮಾಜದ ಮುಖಂಡ ಮಲ್ಲಿಕಾರ್ಜುನ್ ಲೋನಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಗಾಣಿಗ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 80 ವರ್ಷಗಳಾದರೂ ಕಾಂಗ್ರೆಸ್ ಪಕ್ಷವು ಗಾಣಿಗ ಸಮಾಜಕ್ಕೆ ಸಚಿವ ಸ್ಥಾನ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಪ್ರಭಾವಿ ಗಾಣಿಗ ಸಮಾಜದ ಶಾಸಕ ಲಕ್ಷ್ಮಣ ಸವದಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ. ಒಂದು ವೇಳೆ ಈ ಬೇಡಿಕೆಯನ್ನು ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವುದಾಗಿ ಲೋನಿ ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • ಯಾದಗಿರಿ ಜಿಲ್ಲೆಯಲ್ಲಿ ಕೆಲವು ಬಸ್‌ಗಳನ್ನು ರಸ್ತೆಯಲ್ಲಿ ಅಡ್ಡವಾಗಿ ನಿಲ್ಲಿಸಲಾಗುತ್ತಿದ್ದು, ಇದನ್ನು ಪ್ರಶ್ನಿಸಲು ಹೋದರೆ ಬೆದರಿಕೆ ಹಾಕುವ ಘಟನೆಗಳು ನಡೆಯುತ್ತಿವೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳು ತಕ್ಷಣ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
    1
    ಯಾದಗಿರಿ ಜಿಲ್ಲೆಯಲ್ಲಿ ಕೆಲವು ಬಸ್‌ಗಳನ್ನು ರಸ್ತೆಯಲ್ಲಿ ಅಡ್ಡವಾಗಿ ನಿಲ್ಲಿಸಲಾಗುತ್ತಿದ್ದು, ಇದನ್ನು ಪ್ರಶ್ನಿಸಲು ಹೋದರೆ ಬೆದರಿಕೆ ಹಾಕುವ ಘಟನೆಗಳು ನಡೆಯುತ್ತಿವೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳು ತಕ್ಷಣ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
    user_Shankar
    Shankar
    ಯಾದಗಿರಿ, ಯಾದಗಿರಿ, ಕರ್ನಾಟಕ•
    2 hrs ago
  • ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟವು 1500 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ, ಯುವಕರು ರಕ್ತದಾನ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಈ ವಿಶಿಷ್ಟ ಪ್ರತಿಭಟನೆಯ ಭಾಗವಾಗಿ, ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರಿಗೆ ರಾಯಚೂರು ಜಿಲ್ಲಾಧಿಕಾರಿ (DC) ಅವರ ಮೂಲಕ ಮನವಿ ಪತ್ರವನ್ನು ರವಾನಿಸಲಾಯಿತು. ಈ ಸಂದರ್ಭದಲ್ಲಿ ಏಮ್ಸ್ ಹೋರಾಟ ಸಮಿತಿ, ಕೊಪ್ಪಳದ ಹಿರಿಯ ಹೋರಾಟಗಾರರು, ರಿಮ್ಸ್ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ, ಪತ್ರಕರ್ತರು, ಯುವಕರು ಮತ್ತು ಮಹಿಳಾ ನಾಯಕಿಯರೂ ಸೇರಿದಂತೆ ಹಲವರು ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    1
    ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟವು 1500 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ, ಯುವಕರು ರಕ್ತದಾನ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಈ ವಿಶಿಷ್ಟ ಪ್ರತಿಭಟನೆಯ ಭಾಗವಾಗಿ, ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರಿಗೆ ರಾಯಚೂರು ಜಿಲ್ಲಾಧಿಕಾರಿ (DC) ಅವರ ಮೂಲಕ ಮನವಿ ಪತ್ರವನ್ನು ರವಾನಿಸಲಾಯಿತು.

ಈ ಸಂದರ್ಭದಲ್ಲಿ ಏಮ್ಸ್ ಹೋರಾಟ ಸಮಿತಿ, ಕೊಪ್ಪಳದ ಹಿರಿಯ ಹೋರಾಟಗಾರರು, ರಿಮ್ಸ್ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ, ಪತ್ರಕರ್ತರು, ಯುವಕರು ಮತ್ತು ಮಹಿಳಾ ನಾಯಕಿಯರೂ ಸೇರಿದಂತೆ ಹಲವರು ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    user_Nizamuddin
    Nizamuddin
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • ಯಾದಗಿರಿ ತಾಲ್ಲೂಕಿನ ಮುದ್ನಾಳ್ ಉಮ್ಲನಾಯಕ ತಾಂಡದಲ್ಲಿ ಕಲುಷಿತ ನೀರು ಮತ್ತು ವಿಷ ಜಂತುಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಭಯದ ವಾತಾವರಣದಲ್ಲಿ ತಿರುಗಾಡುವಂತಾಗಿದೆ. ಸೂಕ್ತ ಚರಂಡಿ ಮತ್ತು ಸಿಸಿ ರಸ್ತೆಗಳ ಕೊರತೆಯಿಂದಾಗಿ ನೀರು ಹೊಂಡಗಳಲ್ಲಿ ನಿಂತು ಗಬ್ಬೆದ್ದು ನಾರುತ್ತಿದೆ, ಇದರಿಂದ ತಾಂಡಾದ ನಿವಾಸಿಗಳು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ. ತಾಂಡಾದ ನಿವಾಸಿಗಳು ಉಮೇಶ ಕೆ. ಮುದ್ನಾಳ್ ಅವರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ, ಅವರು ಬೆಳಗ್ಗೆ ತಾಂಡಕ್ಕೆ ಭೇಟಿ ನೀಡಿ ನಿವಾಸಿಗಳು ಮತ್ತು ಮಕ್ಕಳೊಂದಿಗೆ ಮೂಲಸೌಲಭ್ಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ನಂತರ ತಾಂಡದಾದ್ಯಂತ ಕಾಲ್ನಡಿಗೆಯಲ್ಲಿ ಪರಿಶೀಲನೆ ನಡೆಸಿದ ಉಮೇಶ ಕೆ. ಮುದ್ನಾಳ್ ಅವರು, ಇದರಿಂದ ತಾಂಡಾದಲ್ಲಿ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಸೊಳ್ಳೆಗಳ ಹಾವಳಿಗೆ ಜನ ಜಾನುವಾರುಗಳು ತತ್ತರಿಸಿವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಿವಾಸಿಗಳು ಕುಡಿಯುವ ನೀರು, ಚರಂಡಿ, ಸಿಸಿ ರಸ್ತೆ ನಿರ್ಮಾಣ, ಚರಂಡಿ ಸ್ವಚ್ಛತೆ ಮತ್ತು ಬ್ಲಿಚಿಂಗ್ ಪೌಡರ್ ಸಿಂಪಡಣೆ, ಕಸದ ವಾಹನ ವ್ಯವಸ್ಥೆ, ಮಳೆ ನೀರು ಕೆರೆಗೆ ಹೋಗಲು ಮಾರ್ಗ ಸರಿಪಡಿಸುವುದು, ಮನೆಯ ಮೇಲೆ ಹಾದುಹೋಗಿರುವ ಮತ್ತು ಜೋತುಬಿದ್ದಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸುವುದು, ಹಾಗೂ ಶಾಲಾ ಮಕ್ಕಳಿಗೆ ಬಸ್ಸು ಸೌಲಭ್ಯ ಒದಗಿಸುವುದು ಸೇರಿದಂತೆ ಎಂಟು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು. ಈ ವೇಳೆ ಗೋಪಾಲ, ರಾಜು, ಅರವಿಂದ, ಭೋಜು, ಪ್ರಕಾಶ, ಶಂಕರ, ಮನ್ನು ನಂದು, ವಿಜಯಕುಮಾರ, ಚಂದ್ರು ಪೋಮ್ಯಾ, ಸುರೇಶ ಪೂಮ್ಯಾ, ಪುರಿಬಾಯಿ, ಶಾಂತಿಬಾಯಿ, ಗನ್ನಿಬಾಯಿ, ಜಮಿನಿಬಾಯಿ, ಚಾಂದಿಬಾಯಿ ಸೇರಿದಂತೆ ಅನೇಕ ನಿವಾಸಿಗಳು, ಹಿರಿಯರು, ಯುವಕರು ಮತ್ತು ಮಹಿಳೆಯರು ಉಪಸ್ಥಿತರಿದ್ದರು. ಉಮೇಶ ಕೆ. ಮುದ್ನಾಳ್ ಅವರು ಈ ಎಲ್ಲಾ ಬೇಡಿಕೆಗಳನ್ನು ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಹಿಂದಿನ ಮುದ್ನಾಳ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೀಲಕಂಠ ಅವರು ತಾಂಡಾ ಅಭಿವೃದ್ಧಿ ಮಾಡುವುದನ್ನು ಬಿಟ್ಟು ಸ್ವತಃ ತಾವೇ ಅಭಿವೃದ್ಧಿ ಹೊಂದಿದ್ದಾರೆ ಎಂದು ಆರೋಪಿಸಿದ ಅವರು, ಅವರ ೫ ವರ್ಷಗಳ ಅವಧಿಯಲ್ಲಿ ಪಂಚಾಯತಿಗೆ ಬಂದ ಅನುದಾನದ ಸಂಪೂರ್ಣ ತನಿಖೆಗೆ ಜಿಲ್ಲಾಡಳಿತ ಮುಂದಾಗಬೇಕು, ಆಗಲೇ ಸತ್ಯಾಂಶ ಬಯಲಿಗೆ ಬರಲಿದೆ ಎಂದು ಒತ್ತಿ ಹೇಳಿದ್ದಾರೆ.
    1
    ಯಾದಗಿರಿ ತಾಲ್ಲೂಕಿನ ಮುದ್ನಾಳ್ ಉಮ್ಲನಾಯಕ ತಾಂಡದಲ್ಲಿ ಕಲುಷಿತ ನೀರು ಮತ್ತು ವಿಷ ಜಂತುಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಭಯದ ವಾತಾವರಣದಲ್ಲಿ ತಿರುಗಾಡುವಂತಾಗಿದೆ. ಸೂಕ್ತ ಚರಂಡಿ ಮತ್ತು ಸಿಸಿ ರಸ್ತೆಗಳ ಕೊರತೆಯಿಂದಾಗಿ ನೀರು ಹೊಂಡಗಳಲ್ಲಿ ನಿಂತು ಗಬ್ಬೆದ್ದು ನಾರುತ್ತಿದೆ, ಇದರಿಂದ ತಾಂಡಾದ ನಿವಾಸಿಗಳು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ತಾಂಡಾದ ನಿವಾಸಿಗಳು ಉಮೇಶ ಕೆ. ಮುದ್ನಾಳ್ ಅವರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ, ಅವರು ಬೆಳಗ್ಗೆ ತಾಂಡಕ್ಕೆ ಭೇಟಿ ನೀಡಿ ನಿವಾಸಿಗಳು ಮತ್ತು ಮಕ್ಕಳೊಂದಿಗೆ ಮೂಲಸೌಲಭ್ಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ನಂತರ ತಾಂಡದಾದ್ಯಂತ ಕಾಲ್ನಡಿಗೆಯಲ್ಲಿ ಪರಿಶೀಲನೆ ನಡೆಸಿದ ಉಮೇಶ ಕೆ. ಮುದ್ನಾಳ್ ಅವರು, ಇದರಿಂದ ತಾಂಡಾದಲ್ಲಿ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಸೊಳ್ಳೆಗಳ ಹಾವಳಿಗೆ ಜನ ಜಾನುವಾರುಗಳು ತತ್ತರಿಸಿವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಿವಾಸಿಗಳು ಕುಡಿಯುವ ನೀರು, ಚರಂಡಿ, ಸಿಸಿ ರಸ್ತೆ ನಿರ್ಮಾಣ, ಚರಂಡಿ ಸ್ವಚ್ಛತೆ ಮತ್ತು ಬ್ಲಿಚಿಂಗ್ ಪೌಡರ್ ಸಿಂಪಡಣೆ, ಕಸದ ವಾಹನ ವ್ಯವಸ್ಥೆ, ಮಳೆ ನೀರು ಕೆರೆಗೆ ಹೋಗಲು ಮಾರ್ಗ ಸರಿಪಡಿಸುವುದು, ಮನೆಯ ಮೇಲೆ ಹಾದುಹೋಗಿರುವ ಮತ್ತು ಜೋತುಬಿದ್ದಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸುವುದು, ಹಾಗೂ ಶಾಲಾ ಮಕ್ಕಳಿಗೆ ಬಸ್ಸು ಸೌಲಭ್ಯ ಒದಗಿಸುವುದು ಸೇರಿದಂತೆ ಎಂಟು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು. ಈ ವೇಳೆ ಗೋಪಾಲ, ರಾಜು, ಅರವಿಂದ, ಭೋಜು, ಪ್ರಕಾಶ, ಶಂಕರ, ಮನ್ನು ನಂದು, ವಿಜಯಕುಮಾರ, ಚಂದ್ರು ಪೋಮ್ಯಾ, ಸುರೇಶ ಪೂಮ್ಯಾ, ಪುರಿಬಾಯಿ, ಶಾಂತಿಬಾಯಿ, ಗನ್ನಿಬಾಯಿ, ಜಮಿನಿಬಾಯಿ, ಚಾಂದಿಬಾಯಿ ಸೇರಿದಂತೆ ಅನೇಕ ನಿವಾಸಿಗಳು, ಹಿರಿಯರು, ಯುವಕರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.

ಉಮೇಶ ಕೆ. ಮುದ್ನಾಳ್ ಅವರು ಈ ಎಲ್ಲಾ ಬೇಡಿಕೆಗಳನ್ನು ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಹಿಂದಿನ ಮುದ್ನಾಳ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೀಲಕಂಠ ಅವರು ತಾಂಡಾ ಅಭಿವೃದ್ಧಿ ಮಾಡುವುದನ್ನು ಬಿಟ್ಟು ಸ್ವತಃ ತಾವೇ ಅಭಿವೃದ್ಧಿ ಹೊಂದಿದ್ದಾರೆ ಎಂದು ಆರೋಪಿಸಿದ ಅವರು, ಅವರ ೫ ವರ್ಷಗಳ ಅವಧಿಯಲ್ಲಿ ಪಂಚಾಯತಿಗೆ ಬಂದ ಅನುದಾನದ ಸಂಪೂರ್ಣ ತನಿಖೆಗೆ ಜಿಲ್ಲಾಡಳಿತ ಮುಂದಾಗಬೇಕು, ಆಗಲೇ ಸತ್ಯಾಂಶ ಬಯಲಿಗೆ ಬರಲಿದೆ ಎಂದು ಒತ್ತಿ ಹೇಳಿದ್ದಾರೆ.
    user_Girish M Chatterkar
    Girish M Chatterkar
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • ಬೇವಿನ ಮರದ ತೊಗಟೆ ಅಥವಾ ಅದರ ಬಿರುಕುಗಳಲ್ಲಿ ಆಲದ ಮರದ ಬೀಜಗಳು ಮೊಳಕೆಯೊಡೆದು ಬೆಳೆಯುವುದು ಒಂದು ನೈಸರ್ಗಿಕ ಪ್ರಕ್ರಿಯೆಯಾಗಿದೆ. ಹಕ್ಕಿಗಳು ಅಥವಾ ಗಾಳಿಯ ಮೂಲಕ ಬರುವ ಆಲದ ಮರದ ಹಣ್ಣುಗಳ ಬೀಜಗಳು ಬೇವಿನ ಮರದ ಮೇಲಿರುವ ತೇವಾಂಶದಲ್ಲಿ ಮೊಳಕೆಯೊಡೆದು, ಬೇವಿನ ಮರದೊಳಗೇ ತಮ್ಮ ಬೇರುಗಳನ್ನು ಬಿಡುತ್ತವೆ. ಈ ರೀತಿ ಎರಡೂ ಮರಗಳು ಒಂದಾಗಿ ಬೆಳೆಯುತ್ತವೆ. ಕೃತಕವಾಗಿ ಅಂದರೆ ಗ್ರಾಫ್ಟಿಂಗ್ ಮೂಲಕ ಇಂತಹ ಮರಗಳನ್ನು ಬೆಳೆಸುವುದು ಅಷ್ಟು ಸುಲಭವಲ್ಲ, ಏಕೆಂದರೆ ಬೇವಿನ ಮರ ಮತ್ತು ಹಾಲದ ಮರದ (Ficus benghalensis) ಕಾಂಡಗಳು ಬೇರೆ ಬೇರೆ ಸಸ್ಯ ಕುಟುಂಬಗಳಿಗೆ ಸೇರಿವೆ. ಆದಾಗ್ಯೂ, ಬೋನ್ಸೆ ಕಲೆಗಾಗಿ ಕೆಲವರು ಹಾಲದ ಮರದ ಸಸಿಗಳನ್ನು ಬೇವಿನ ಮರದ ಬುಡದ ಬಳಿ ನೆಡುತ್ತಾರೆ. ನಂತರ ಎರಡೂ ಮರಗಳ ತೊಗಟೆಯನ್ನು ಸಣ್ಣದಾಗಿ ಕೆತ್ತಿ ಒಂದಕ್ಕೊಂದು ಬಿಗಿಯಾಗಿ ಕಟ್ಟಿ ಬೆಳೆಸುವ ಪ್ರಯತ್ನ ಮಾಡಲಾಗುತ್ತದೆ. ಇದರ ಜೊತೆಗೆ, ಆಲದ ಮರದ ಗಾಳಿಯ ಬೇರುಗಳನ್ನು ಬೇವಿನ ಮರದ ಕಾಂಡದೊಳಗೆ ಇಳಿಸುವುದರ ಮೂಲಕ ಅವುಗಳನ್ನು ನೈಸರ್ಗಿಕವಾಗಿ ಬೆಳೆಸುವ ವಿಧಾನವನ್ನೂ ಬಳಸಲಾಗುತ್ತದೆ. ಇದೇ ರೀತಿಯ ಒಂದು ವಿಶಿಷ್ಟ ಉದಾಹರಣೆಯು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗೋದರಿಹಲ್ ಗ್ರಾಮದಲ್ಲಿ ಕಂಡುಬಂದಿದ್ದು, ಅಲ್ಲಿ ಬೇವಿನ ಮರದ ಮೇಲೆ ಆಲದ ಮರವೊಂದು ಬೆಳೆದಿದೆ.
    1
    ಬೇವಿನ ಮರದ ತೊಗಟೆ ಅಥವಾ ಅದರ ಬಿರುಕುಗಳಲ್ಲಿ ಆಲದ ಮರದ ಬೀಜಗಳು ಮೊಳಕೆಯೊಡೆದು ಬೆಳೆಯುವುದು ಒಂದು ನೈಸರ್ಗಿಕ ಪ್ರಕ್ರಿಯೆಯಾಗಿದೆ. ಹಕ್ಕಿಗಳು ಅಥವಾ ಗಾಳಿಯ ಮೂಲಕ ಬರುವ ಆಲದ ಮರದ ಹಣ್ಣುಗಳ ಬೀಜಗಳು ಬೇವಿನ ಮರದ ಮೇಲಿರುವ ತೇವಾಂಶದಲ್ಲಿ ಮೊಳಕೆಯೊಡೆದು, ಬೇವಿನ ಮರದೊಳಗೇ ತಮ್ಮ ಬೇರುಗಳನ್ನು ಬಿಡುತ್ತವೆ. ಈ ರೀತಿ ಎರಡೂ ಮರಗಳು ಒಂದಾಗಿ ಬೆಳೆಯುತ್ತವೆ.

ಕೃತಕವಾಗಿ ಅಂದರೆ ಗ್ರಾಫ್ಟಿಂಗ್ ಮೂಲಕ ಇಂತಹ ಮರಗಳನ್ನು ಬೆಳೆಸುವುದು ಅಷ್ಟು ಸುಲಭವಲ್ಲ, ಏಕೆಂದರೆ ಬೇವಿನ ಮರ ಮತ್ತು ಹಾಲದ ಮರದ (Ficus benghalensis) ಕಾಂಡಗಳು ಬೇರೆ ಬೇರೆ ಸಸ್ಯ ಕುಟುಂಬಗಳಿಗೆ ಸೇರಿವೆ. ಆದಾಗ್ಯೂ, ಬೋನ್ಸೆ ಕಲೆಗಾಗಿ ಕೆಲವರು ಹಾಲದ ಮರದ ಸಸಿಗಳನ್ನು ಬೇವಿನ ಮರದ ಬುಡದ ಬಳಿ ನೆಡುತ್ತಾರೆ. ನಂತರ ಎರಡೂ ಮರಗಳ ತೊಗಟೆಯನ್ನು ಸಣ್ಣದಾಗಿ ಕೆತ್ತಿ ಒಂದಕ್ಕೊಂದು ಬಿಗಿಯಾಗಿ ಕಟ್ಟಿ ಬೆಳೆಸುವ ಪ್ರಯತ್ನ ಮಾಡಲಾಗುತ್ತದೆ. ಇದರ ಜೊತೆಗೆ, ಆಲದ ಮರದ ಗಾಳಿಯ ಬೇರುಗಳನ್ನು ಬೇವಿನ ಮರದ ಕಾಂಡದೊಳಗೆ ಇಳಿಸುವುದರ ಮೂಲಕ ಅವುಗಳನ್ನು ನೈಸರ್ಗಿಕವಾಗಿ ಬೆಳೆಸುವ ವಿಧಾನವನ್ನೂ ಬಳಸಲಾಗುತ್ತದೆ.

ಇದೇ ರೀತಿಯ ಒಂದು ವಿಶಿಷ್ಟ ಉದಾಹರಣೆಯು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗೋದರಿಹಲ್ ಗ್ರಾಮದಲ್ಲಿ ಕಂಡುಬಂದಿದ್ದು, ಅಲ್ಲಿ ಬೇವಿನ ಮರದ ಮೇಲೆ ಆಲದ ಮರವೊಂದು ಬೆಳೆದಿದೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    15 hrs ago
  • ವಿಜಯಪುರ ನಗರದ ಬಂಜಾರ ಕ್ರಾಸ್ ಸಮೀಪ, ಖಾಜಾ ಅಮೀನ್ ದರ್ಗಾ ನಿವಾಸಿ ಹಾಗೂ ಆಟೋ ಚಾಲಕರಾಗಿದ್ದ 30 ವರ್ಷದ ವಿಲಾಸ ನಡುವಿನಮನಿ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಕುಟುಂಬದ ಜೀವನ ನಿರ್ವಹಣೆಗಾಗಿ ಆಟೋ ಚಾಲನೆ ಮಾಡುತ್ತಿದ್ದ ವಿಲಾಸ, ಮಾರಣಾಂತಿಕ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ವೈಯಕ್ತಿಕ ದ್ವೇಷ, ಹಳೆಯ ವೈಷಮ್ಯ ಅಥವಾ ಇತರೆ ಕಾರಣಗಳ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆ ಮತ್ತು ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
    1
    ವಿಜಯಪುರ ನಗರದ ಬಂಜಾರ ಕ್ರಾಸ್ ಸಮೀಪ, ಖಾಜಾ ಅಮೀನ್ ದರ್ಗಾ ನಿವಾಸಿ ಹಾಗೂ ಆಟೋ ಚಾಲಕರಾಗಿದ್ದ 30 ವರ್ಷದ ವಿಲಾಸ ನಡುವಿನಮನಿ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಕುಟುಂಬದ ಜೀವನ ನಿರ್ವಹಣೆಗಾಗಿ ಆಟೋ ಚಾಲನೆ ಮಾಡುತ್ತಿದ್ದ ವಿಲಾಸ, ಮಾರಣಾಂತಿಕ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ವೈಯಕ್ತಿಕ ದ್ವೇಷ, ಹಳೆಯ ವೈಷಮ್ಯ ಅಥವಾ ಇತರೆ ಕಾರಣಗಳ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆ ಮತ್ತು ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    8 hrs ago
  • ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ನೇತೃತ್ವದಲ್ಲಿ ನರೇಗಾ ಕೂಲಿ ಕಾರ್ಮಿಕರ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಶಿಬಿರವು ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 5:30 ಗಂಟೆಯವರೆಗೆ ನಡೆಯಿತು. ಠಾಣಗುಂದಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಹಳ್ಳಿಯ ರೈತರು ಕೆಲಸದ ಒತ್ತಡದಿಂದ ತಮ್ಮ ಆರೋಗ್ಯವನ್ನು ನಿರ್ಲಕ್ಷಿಸಿ ಕೆಲಸದಲ್ಲಿ ನಿರತರಾಗಿರುತ್ತಾರೆ. ಗಂಭೀರ ಅನಾರೋಗ್ಯ ಪರಿಸ್ಥಿತಿಯಲ್ಲಿ ಮಾತ್ರ ಆಸ್ಪತ್ರೆಗೆ ಹೋಗುವುದರಿಂದ, ಇಂತಹ ಶಿಬಿರಗಳ ಅವಶ್ಯಕತೆ ತುಂಬಾ ಇದೆ ಎಂದು ನುಡಿದರು. ನೇತ್ರ ಚಿಕಿತ್ಸಕರಾದ ಡಾಕ್ಟರ್ ಶುಕುರ್ ಅವರು ಮಾತನಾಡಿ, ನರೇಗಾ ಕೂಲಿ ಕಾರ್ಮಿಕರು ತಮ್ಮ ಮನೆ ಕೆಲಸಗಳ ನಡುವೆಯೂ ಆರೋಗ್ಯದ ಕಡೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಆರೋಗ್ಯ ಇಲಾಖೆಯಿಂದ ಲಭ್ಯವಿರುವ ಎಲ್ಲ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದ ಅವರು, ಇಲಾಖೆಯು ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ ಮಾತ್ರವಲ್ಲದೆ, ನೇತ್ರ ಚಿಕಿತ್ಸೆಯನ್ನೂ ಉಚಿತವಾಗಿ ನೀಡುತ್ತದೆ ಎಂದು ತಿಳಿಸಿದರು. ಅಲ್ಲದೆ, ಗ್ರಾಮದಿಂದ ನೇತ್ರ ಶಸ್ತ್ರಚಿಕಿತ್ಸೆಗೆ ಬರುವವರಿಗೆ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಸಿಕೊಂಡು ಕನ್ನಡಕಗಳನ್ನು ಪಡೆದುಕೊಂಡರು. ಈ ಶಿಬಿರದಲ್ಲಿ ಸುಮಾರು 128 ಕನ್ನಡಕಗಳನ್ನು ವಿತರಿಸಲಾಗಿದ್ದು, 38 ಜನರಿಗೆ ನೇತ್ರ ಶಸ್ತ್ರಚಿಕಿತ್ಸೆಗೆ ದಿನಾಂಕ ನಿಗದಿಪಡಿಸಲಾಯಿತು. 200 ಕ್ಕಿಂತ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆದರು. ಈ ಸಂದರ್ಭದಲ್ಲಿ ಜಮಾಲ್ ಸಾಬ್ ಹೆಡಗಿಮದ್ರಾ, ಭೀಮಣ್ಣ ನಾಯಕ್, ಶಿವಪ್ಪ ಭಜಂತ್ರಿ, ಅಯ್ಯಮ್ಮ ಚೂರಿ, ಅಂಬರೀಶ್ ಧಣಿ, ಮರೆಪ್ಪ ಶಂಕರ ಬಂಡಿ, ಸುರೇಶ್ ತೆಳಿಗೇರಿ, ಮರೆಪ್ಪ ಕೋಟೆಕಲ್, ಮುದಿಯಪ್ಪ ಸುಲಗಿತ್ತಿ, ಬಸ್ಸಮ್ಮ ನಾಯ್ಕಲ್, ಮಲ್ಲಮ್ಮ ಅಂಬಿಗೇರ, ಸುಮಂಗಲ ದಾಸರ್, ಮೆಹಬೂಬಿ ಹುಲ್ಕಲ್, ಸಲಿಮಾ ಮುಲ್ಲಾ, ಸುವರ್ಣ ಕಟಕಟಿ, ನಂದಪ್ಪ ಬೈರಪುರ್, ಈಶಪ್ಪ ಹಬ್ಬಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ನೇತೃತ್ವದಲ್ಲಿ ನರೇಗಾ ಕೂಲಿ ಕಾರ್ಮಿಕರ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಶಿಬಿರವು ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 5:30 ಗಂಟೆಯವರೆಗೆ ನಡೆಯಿತು.

ಠಾಣಗುಂದಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಹಳ್ಳಿಯ ರೈತರು ಕೆಲಸದ ಒತ್ತಡದಿಂದ ತಮ್ಮ ಆರೋಗ್ಯವನ್ನು ನಿರ್ಲಕ್ಷಿಸಿ ಕೆಲಸದಲ್ಲಿ ನಿರತರಾಗಿರುತ್ತಾರೆ. ಗಂಭೀರ ಅನಾರೋಗ್ಯ ಪರಿಸ್ಥಿತಿಯಲ್ಲಿ ಮಾತ್ರ ಆಸ್ಪತ್ರೆಗೆ ಹೋಗುವುದರಿಂದ, ಇಂತಹ ಶಿಬಿರಗಳ ಅವಶ್ಯಕತೆ ತುಂಬಾ ಇದೆ ಎಂದು ನುಡಿದರು. ನೇತ್ರ ಚಿಕಿತ್ಸಕರಾದ ಡಾಕ್ಟರ್ ಶುಕುರ್ ಅವರು ಮಾತನಾಡಿ, ನರೇಗಾ ಕೂಲಿ ಕಾರ್ಮಿಕರು ತಮ್ಮ ಮನೆ ಕೆಲಸಗಳ ನಡುವೆಯೂ ಆರೋಗ್ಯದ ಕಡೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಆರೋಗ್ಯ ಇಲಾಖೆಯಿಂದ ಲಭ್ಯವಿರುವ ಎಲ್ಲ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದ ಅವರು, ಇಲಾಖೆಯು ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ ಮಾತ್ರವಲ್ಲದೆ, ನೇತ್ರ ಚಿಕಿತ್ಸೆಯನ್ನೂ ಉಚಿತವಾಗಿ ನೀಡುತ್ತದೆ ಎಂದು ತಿಳಿಸಿದರು. ಅಲ್ಲದೆ, ಗ್ರಾಮದಿಂದ ನೇತ್ರ ಶಸ್ತ್ರಚಿಕಿತ್ಸೆಗೆ ಬರುವವರಿಗೆ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಸಿಕೊಂಡು ಕನ್ನಡಕಗಳನ್ನು ಪಡೆದುಕೊಂಡರು. ಈ ಶಿಬಿರದಲ್ಲಿ ಸುಮಾರು 128 ಕನ್ನಡಕಗಳನ್ನು ವಿತರಿಸಲಾಗಿದ್ದು, 38 ಜನರಿಗೆ ನೇತ್ರ ಶಸ್ತ್ರಚಿಕಿತ್ಸೆಗೆ ದಿನಾಂಕ ನಿಗದಿಪಡಿಸಲಾಯಿತು. 200 ಕ್ಕಿಂತ ಹೆಚ್ಚು ರೈತರು ಮತ್ತು ರೈತ ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆದರು. ಈ ಸಂದರ್ಭದಲ್ಲಿ ಜಮಾಲ್ ಸಾಬ್ ಹೆಡಗಿಮದ್ರಾ, ಭೀಮಣ್ಣ ನಾಯಕ್, ಶಿವಪ್ಪ ಭಜಂತ್ರಿ, ಅಯ್ಯಮ್ಮ ಚೂರಿ, ಅಂಬರೀಶ್ ಧಣಿ, ಮರೆಪ್ಪ ಶಂಕರ ಬಂಡಿ, ಸುರೇಶ್ ತೆಳಿಗೇರಿ, ಮರೆಪ್ಪ ಕೋಟೆಕಲ್, ಮುದಿಯಪ್ಪ ಸುಲಗಿತ್ತಿ, ಬಸ್ಸಮ್ಮ ನಾಯ್ಕಲ್, ಮಲ್ಲಮ್ಮ ಅಂಬಿಗೇರ, ಸುಮಂಗಲ ದಾಸರ್, ಮೆಹಬೂಬಿ ಹುಲ್ಕಲ್, ಸಲಿಮಾ ಮುಲ್ಲಾ, ಸುವರ್ಣ ಕಟಕಟಿ, ನಂದಪ್ಪ ಬೈರಪುರ್, ಈಶಪ್ಪ ಹಬ್ಬಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_Nizamuddin
    Nizamuddin
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    10 hrs ago
  • ಯಾದಗಿರಿಯ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮಂಗಳವಾರ ಕುಳಿತಿದ್ದ ಪ್ರಯಾಣಿಕರ ಮೇಲೆ ಮೇಲ್ಛಾವಣಿಯ ಕಾಂಕ್ರೀಟ್ ಸಿಮೆಂಟ್ ಉದುರಿ ಬಿದ್ದಿದ್ದು, ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ. ಕಾಂಕ್ರೀಟ್ ಬೀಳುತ್ತಿದ್ದಂತೆ ಪ್ರಾಣಭಯದಿಂದ ಓಡಿದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. 2021 ರಲ್ಲಿ ನಿರ್ಮಾಣಗೊಂಡ ಈ ಬಸ್ ನಿಲ್ದಾಣದ ಕಳಪೆ ಕಾಮಗಾರಿಯೇ ಘಟನೆಗೆ ಕಾರಣ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಿದ ಗುತ್ತಿಗೆದಾರರ ವಿರುದ್ಧ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
    1
    ಯಾದಗಿರಿಯ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮಂಗಳವಾರ ಕುಳಿತಿದ್ದ ಪ್ರಯಾಣಿಕರ ಮೇಲೆ ಮೇಲ್ಛಾವಣಿಯ ಕಾಂಕ್ರೀಟ್ ಸಿಮೆಂಟ್ ಉದುರಿ ಬಿದ್ದಿದ್ದು, ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ. ಕಾಂಕ್ರೀಟ್ ಬೀಳುತ್ತಿದ್ದಂತೆ ಪ್ರಾಣಭಯದಿಂದ ಓಡಿದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

2021 ರಲ್ಲಿ ನಿರ್ಮಾಣಗೊಂಡ ಈ ಬಸ್ ನಿಲ್ದಾಣದ ಕಳಪೆ ಕಾಮಗಾರಿಯೇ ಘಟನೆಗೆ ಕಾರಣ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಿದ ಗುತ್ತಿಗೆದಾರರ ವಿರುದ್ಧ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.