Shuru
Apke Nagar Ki App…
ಚಿಂಚೋಳಿ ತಹಸೀಲ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ಚಿಂಚೋಳಿ: ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಚಿಂಚೋಳಿ ತಹಸೀಲ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.
VISION NEWS KALABURAGI
ಚಿಂಚೋಳಿ ತಹಸೀಲ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ಚಿಂಚೋಳಿ: ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಚಿಂಚೋಳಿ ತಹಸೀಲ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.
More news from Bidar and nearby areas
- ಕಮಲನಗರ ತಾಲೂಕಿನ ರೈತರಿಗೆ ಸಂತಸದ ಸುದ್ದಿ; ನಗರದಲ್ಲಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಮಾಹಿತಿ ಬೀದರ್: ಕಮಲನಗರ ತಾಲೂಕಿನ ರೈತರಿಗೆ ಸಂತಸದ ಸುದ್ದಿ; ನಗರದಲ್ಲಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಮಾಹಿತಿ1
- ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.! ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!1
- ಆಗಸ್ಟ್ 9 ಕ್ಕೆ 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಕಾರ್ಯಕ್ರಮ. ಅಫಜಲಪುರ: ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಇದೆ ಆಗಸ್ಟ್ 9 ರಂದು 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀ ಮಹಾಂತೇಶ್ವರ ವಿದ್ಯಾ ವರ್ದಕ ಶಾಲೆಯ ಹಳೆಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.1
- ಹರಿದಾಸ್ ಹಾರ್ಟ್ ಆಸ್ಪತ್ರೆಯ ಪ್ರಥಮ ವಾರ್ಷಿಕೋತ್ಸ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ1
- ಸಂಪುಟ ವಿಸ್ತರಣೆ ನಂತರ ಆಕಾಂಕ್ಷಿಗಳ ಅಸಮಾಧಾನ ಸಹಜ; ನಗರದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ಬೀದರ್: ಸಂಪುಟ ವಿಸ್ತರಣೆ ನಂತರ ಆಕಾಂಕ್ಷಿಗಳ ಅಸಮಾಧಾನ ಸಹಜ; ನಗರದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ1
- ಸಮಯ ಪ್ರಜ್ಞೆಯಿಂದಲೇ ಗುರಿ ಸಾಧನೆ – ರಾಯಚೂರಿನಲ್ಲಿ ಡಾ. ಜಿ. ಎಸ್. ಬಿರಾದಾರ ಹೇಳಿಕೆ ರಾಯಚೂರು : ಎಲ್ವಿಡಿ ಮಹಾವಿದ್ಯಾಲಯದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಬಿಎ, ಬಿಎಸ್ಸಿ ಹಾಗೂ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಅಭಿವಿನ್ಯಾಸ ಕಾರ್ಯಕ್ರಮವನ್ನು ಕಾಲೇಜು ಸಭಾಂಗಣದಲ್ಲಿ ಮಂಗಳವಾರ 11 ಗಂಟೆಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಉಪಕುಲಸಚಿವರಾದ ಡಾ. ಜಿ. ಎಸ್. ಬಿರಾದಾರ ಉದ್ಘಾಟಿಸಿ ಮಾತನಾಡಿ, "ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಂಡಾಗ ಮಾತ್ರ ತಮ್ಮ ಗುರಿಯನ್ನು ಯಶಸ್ವಿಯಾಗಿ ತಲುಪಲು ಸಾಧ್ಯ. ಯಾವುದೇ ಕ್ಷೇತ್ರದಲ್ಲಿದ್ದರೂ ಪರಿಶ್ರಮ, ಶಿಸ್ತು ಮತ್ತು ಸಕಾರಾತ್ಮಕ ಮನೋಭಾವದಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ. ನಿಮ್ಮ ಸಾಧನೆಯೇ ನಿಮ್ಮ ವ್ಯಕ್ತಿತ್ವವನ್ನು ಗುರುತಿಸುತ್ತದೆ," ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾರಾನಾಥ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಬಾಪತಿ ಪಾಟೀಲ್ (ವಕೀಲರು) ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ಎಲ್ಲಾ ಶೈಕ್ಷಣಿಕ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬೇಕೆಂದು ಕರೆ ನೀಡಿದರು. ತಾರಾನಾಥ ಶಿಕ್ಷಣ ಸಂಸ್ಥೆ ಹಾಗೂ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ವೀರಹನುಮಾನ ಮಾತನಾಡಿ, ಕಾಲೇಜಿನ ಶಿಸ್ತು ಮತ್ತು ಉತ್ತಮ ಫಲಿತಾಂಶಗಳು ಸಂಸ್ಥೆಯ ಹೆಮ್ಮೆ ಹೆಚ್ಚಿಸುತ್ತವೆ. ವಿದ್ಯಾರ್ಥಿಗಳು ಸಮಯಪಾಲನೆ, ಪರಿಶ್ರಮ ಹಾಗೂ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಶರಣಗೌಡ ಬಿ. ಎಚ್. ಮಾತನಾಡಿ, ಕಾಲೇಜಿನಲ್ಲಿ ಉತ್ತಮ ಬೋಧಕ ವೃಂದ, ಸುಸಜ್ಜಿತ ಗ್ರಂಥಾಲಯ, ವಿಶಾಲ ಕ್ರೀಡಾಂಗಣ, ಜಿಮ್ ಸೇರಿದಂತೆ ಅಗತ್ಯ ಸೌಲಭ್ಯಗಳಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗಪಡಿಸಿಕೊಂಡು ಶಿಸ್ತುಬದ್ಧವಾಗಿ ವಿದ್ಯಾಭ್ಯಾಸ ಮಾಡಬೇಕೆಂದರು. ಉಪಪ್ರಾಚಾರ್ಯ ಡಾ. ಆಂಜನೇಯ ಅವರು ಹೊಸ ಕಾಲೇಜು ವಾತಾವರಣಕ್ಕೆ ವಿದ್ಯಾರ್ಥಿಗಳು ಹೊಂದಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳ ಕುರಿತು ವಿವಿಧ ವಿಭಾಗಗಳ ಪ್ರಾಧ್ಯಾಪಕರು ಮಾಹಿತಿ ನೀಡಿದರು. ಕಾರ್ಯಕ್ರಮದ ಸಂಯೋಜಕಿ ಡಾ. ಅರುಣಾ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾರೋಪದಲ್ಲಿ ವರದಿ ಮಂಡಿಸಿದರು. ವೇದಿಕೆಯಲ್ಲಿ ತಾರಾನಾಥ ಶಿಕ್ಷಣ ಸಂಸ್ಥೆಯ ಖಜಾಂಚಿ ಪುರುಷೋತ್ತಮ ದಾಸ್ ಇನ್ನಾಣಿ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬಿಎ, ಬಿಎಸ್ಸಿ ಹಾಗೂ ಬಿಸಿಎ ಪ್ರಥಮ ವರ್ಷದ ಒಟ್ಟು 350 ವಿದ್ಯಾರ್ಥಿಗಳು ಭಾಗವಹಿಸಿ ಅಭಿವಿನ್ಯಾಸ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಬಿಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಕು. ಹರ್ಷಿತಾ ಪ್ರಾರ್ಥನಾ ಗೀತೆ ಹಾಡಿದರು. ಹುಸೇನಪ್ಪ ಉದ್ಘಾಟಕರ ಪರಿಚಯ ಮಾಡಿಕೊಟ್ಟರೆ, ಶ್ರೀಮತಿ ಹೇಮಲತಾ ಹಾಗೂ ಮಾಲತೇಶ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ವೆಂಕಟೇಶ ಮತ್ತು ಡಾ. ಮಂಜುನಾಥ ಸ್ವಾಗತಿಸಿದರು. ಶ್ರೀಮತಿ ಸ್ವಾತಿ ದೀಕ್ಷಿತ್ ಹಾಗೂ ಡಾ. ಹನುಮಂತ ನಾಯಕ ವಂದಿಸಿದರು.1
- ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ ಇಂದು ಮಾನ್ವಿ ಪಟ್ಣಣದ ಬಸವ ವೃತ್ತದಲ್ಲಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ ಮೂಲಕ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹೊಳೆಯಪ್ಪ ಉಟಕನೂರು ಮಾತನಾಡಿ, 'ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬರಗಾಲದ ಪರಿಸ್ಥಿತಿ ಇದ್ದರೂ ಕೂಡ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಿಲ್ಲ' ಎಂದು ದೂರಿದರು. 'ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹40 ಸಾವಿರ ಬರ ಪರಿಹಾರವನ್ನು ನೀಡಬೇಕು. ತುಂಗಭದ್ರಾ ಜಲಾಶಯದಲ್ಲಿ 28 ಟಿಎಂಸಿ ಅಡಿ ನೀರು ಸಂಗ್ರ-ಹವಾಗಿದ್ದು, ಈ ಬಾರಿ ಕಾರ್ಖಾನೆಗಳಿಗೆ ನೀರು ಕೊಡದೇ ರೈತರಿಗೆ ಕಾಲುವೆ ಮೂಲಕ ನೀರನ್ನು ನಿರಂತರವಾಗಿ ಹರಿಸಬೇಕು' ಎಂದು ಒತ್ತಾಯಿಸಿದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವೈ.ಬಸವರಾಜ ನಾಯಕ ಮಾತನಾಡಿ, 'ತಾಲ್ಲೂಕಿನಲ್ಲಿ ಸರ್ಕಾರಕ್ಕೆ ಜೋಳವನ್ನು ಮಾರಾಟ ಮಾಡಿದ ರೈತರಿಗೆ ಐದು ತಿಂಗಳು ಕಳೆದರೂ ಹಣ ಜಮಾ ಆಗಿಲ್ಲ. ಮಳೆ ಇಲ್ಲದೆ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ತಾ.ಪಂ. ವತಿಯಿಂದ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳಲ್ಲಿ ಕೂಡಲೇ ವಿಬಿ- ಜಿ ರಾಮ್ ಜಿ ಯೋಜನೆಯಡಿ ಕಾರ್ಮಿಕರಿಗೆ ಕೂಲಿ ಕೆಲಸ ನೀಡಬೇಕು' ಎಂದು ಒತ್ತಾಯಿಸಿದರು.ರೈತ ಸಂಘದ ಪದಾಧಿಕಾರಿಗಳಾದ ಶ್ಯಾಮ ಸಿಂಗ್ ರಜಪೂತ್, ವೀರೇಶ ನಾಯಕ, ಶ್ರೀಧರ ಕೋಟೆಕಲ್, ಉರುಕುಂದ ನಾಯಕ ಬಜಾರ, ಬುಜ್ಜಿಗೌಡ, ವೆಂಕಟೇಶ ಕರಡಿಗುಡ್ಡ ಉಪಸ್ಥಿತರಿದ್ದರು. .3
- ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆ – ತನಿಖೆ ಆರಂಭ ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆ – ತನಿಖೆ ಆರಂಭ1