logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಟ್ಟದರಸಮ್ಮನ ದೊಡ್ಡ ಜಾತ್ರೆ ಸಂಪನ್ನ ದೇವಿಗೆ ಪೂಜೆ ಸಲ್ಲಿಸಿದ ಅಪಾರ ಭಕ್ತರು ಹಲಗೂರು: ಗುಂಡಾಪುರದ ಬೆಟ್ಟ ದರಸಮ್ಮನ ದೊಡ್ಡ ಜಾತ್ರೆ ಮಂಗಳವಾರ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರಿಗೆ ಪೂಜೆ ಸಲ್ಲಿಸಿ ತಮಷ್ಟಾರ್ಥವನ್ನು ನೆರವೇರಿಸುವಂತೆ ಪ್ರಾರ್ಥಿಸಿ ದೇವರಿಗೆ ಪೂಜೆ ಸಲ್ಲಿಸಿದರು. ಮಾ. 4ನೇ ಬುದುವಾರದಿಂದ ಮೊದಲನೇ ಪೂಜೆಯಿಂದ ಪ್ರಾರಂಭಗೊಂಡ ಜಾತ್ರಾ ಮಹೋತ್ಸವ ದಿನನಿತ್ಯ ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಮಂಗಳವಾರ ದೊಡ್ಡ ಜಾತ್ರೆಗೆ ವಿವಿಧ ಜಿಲ್ಲೆಗಳಿಂದ ಹಾಗೂ ರಾಜ್ಯದ್ಯಂತ ಅಪಾರ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಮಂಗಳವಾರ ಸಾಯಂಕಾಲ ಗ್ರಾಮದ ಮಧ್ಯಭಾಗದಲ್ಲಿರುವ ಕರಗದ ಮನೆಯಲ್ಲಿ ದೇವರ ಕರಗಕ್ಕೆ ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆಗಳು ನಡೆಸಿದ ನಂತರ ದೇವರಗುಡ್ಡರು ಹೆಬ್ಬಾರೆಯನ್ನು ಹೊತ್ತು ಗ್ರಾಮದ ಮನೆಗಳಿಗೆ ಹೋದಾಗ ಗೃಹಿಣಿಯರು ಹೆಬ್ಬಾರೆಗೆ ಪೂಜೆ ಸಲ್ಲಿಸಿ, ಅಚ್ಛಂದ ನೀಡುವುದು ವಾಡಿಕೆ ಅದನ್ನು ಪಡೆದ ದೇವರಗುಡ್ಡರು ಮತ್ತೆ ದೇವಸ್ಥಾನಕ್ಕೆ ಹೆಬ್ಬಾರೆಯನ್ನು ಹೊತ್ತು ಬರುತ್ತಾರೆ. ದೇವಿಗೆ ಪರದೇಶಿ ಕುಣಿತ ಎಂದರೆ ಬಹು ಅಚ್ಚುಮೆಚ್ಚು, ಬಾಳೆವನ್ನಿಗ ಗ್ರಾಮಸ್ಥರು ಅರಿದ ಬಟ್ಟೆಗಳನ್ನು ತೊಟ್ಟು ಗೋಣಿಚೀಲದಿಂದ ಬಟ್ಟೆಗಳನ್ನು ಮಾಡಿಕೊಂಡು ಕರಡಿ, ಹುಲಿ, ಹೆಣ್ಣಿನ ವೇಷಗಳನ್ನು ತೊಟ್ಟು ತೆಂಗಿನ ಗುದ್ದಮಟ್ಟೆಯಿಂದ ತಯಾರಿಸಿದ ಬಂದೂಕವನ್ನು ಹಿಡಿದು ಜೊತೆಯಲ್ಲಿ ಬೇವಿನಸೊಪ್ಪನ್ನು ಹಿಡಿದುಕೊಂಡು ಕುಣಿದು ಕುಪ್ಪಳಿಸಿಕೊಂಡು ದೇವಸ್ಥಾನದ ಹತ್ತಿರ ಬಂದಾಗ ಅರ್ಚಕರು ಅವರಿಗೆ ತೀರ್ಥ ಹಾಕಿ ಬರಮಾಡಿಕೊಳ್ಳುತ್ತಾರೆ ನಂತರ ಬೆಟ್ಟದರಸಮ್ಮನ ದೇವರ ಕರಗವನ್ನು ಹೊತ್ತ ಅರ್ಚಕರಾದ ವೀರಭದ್ರಪ್ಪ ಮಡಿವಾಳ ಹಾಸಿದ ಮಡಿಯ ಮೇಲೆ ನಡೆಯುವಾಗ ಜೊತೆಯಲ್ಲಿ ಕಳಸ ಹೊತ್ತ ಮುತ್ತೈದೆಯರು ಹರಕೆ ಹೊತ್ತುಕೊಂಡಿದ್ದ ಬಾಯಿ ಬೀಗದವರು ಬೇವಿನ ಸೊಪ್ಪು, ಗಂಧದಕಡ್ಡಿ ಹಿಡಿದು ದೇವರ ಜೊತೆಯಲ್ಲಿ ಮೂರು ಬಸಪ್ಪಗಳು ನಡುವೆ ಬೆಟ್ಟದ ತಪ್ಪಲಿನಲ್ಲಿರುವ ಬೆಟ್ಟದರಸಮ್ಮನ ಸನ್ನಿಧಿಗೆ ಕರಗವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತಾದಿಗಳ ನಡುವೆ ಸಂಜೆ ಆರು ಗಂಟೆಯ ನಂತರ ದೇವಸ್ಥಾನ ತಲುಪಿತು. ಅಲ್ಲಿ ಮತ್ತೆ ಪೂಜೆ ಪುನಸ್ಕಾರಗಳು ನಡೆಸಿದ ನಂತರ ಅದೇ ದಿನ ರಾತ್ರಿ ಮತ್ತೆ ಕರಗವನ್ನು ಹೊತ್ತು ಗ್ರಾಮದ ಕರಗದ ಮನೆಗೆ ದೇವರ ಕರಗವನ್ನು ತರುವಾಗ ಮುತ್ತೈದೆಯರು ತಂಬಿಟ್ಟಿನ ಆರತಿ ಎತ್ತಿ ಪೂಜೆ ಸಲ್ಲಿಸಿದ ಮೇಲೆ ದೇವರು ಕರಗದ ಮನೆಗೆ ಕರಗವನ್ನು ಕೊಂಡಯಾಲಾಯಿತು. ಈ ಸಂದರ್ಭದಲ್ಲಿ ಭಕ್ತರು ಪಂಜಿನ ಸೇವೆ ಹಾಗೂ ತಮ್ಮ ದನಕರುಗಳನ್ನು ಹಿಡಿದುಕೊಂಡು ಬಂದು ಊರ್ಜಿ ಆಡಿಸುವ ಕಾರ್ಯಕ್ರಮಗಳು ಬಹು ಸೊಗಸಾಗಿ ನಡೆಯಿತು. ಹಲಗೂರು, ಗುಂಡಾಪುರ, ಕೆಂಪಯ್ಯನ ದೊಡ್ಡಿ, ನಂದಿಪುರ, ಹೆಚ್.ಬಸಾಪುರ, ದಳವಾಯಿ ಕೋಡಿಹಳ್ಳಿ, ದೇವಿರಹಳ್ಳಿ, ಬಾಳೆಹೊನ್ನಿಗ, ಹಗಾದೂರು, ಬಸವನಹಳ್ಳಿ, ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹೆಚ್ಚು ಭಕ್ತಾದಿಗಳು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಜಾತ್ರೆಯ ದಿವಸ ಭಕ್ತಾದಿಗಳು ಎತ್ತಿನಗಾಡಿಯಲ್ಲಿ ಬೆಲ್ಲದ ಪಾನಕ, ಮಜ್ಜಿಗೆ ಮಾಡಿಕೊಂಡು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಬಿಸಿಲಿನ ತಾಪವನ್ನು ನೀಗಿಸಲು ಹರಕೆ ಹೊತ್ತುಕೊಂಡ ಭಕ್ತರು ಹಂಚುತ್ತಾರೆ.ಹಾಗೂ ಮುತ್ತೈದೆಯರು ಅರಿಶಿನ ಕುಂಕುಮ ನೀಡಿ ವಿನಿಮಯ ಮಾಡಿಕೊಂಡು ಹೆಸರುಬೇಳೆ, ಪಾನಕ ನೀಡಿದರು. ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಮಂಗಳವಾರ ಗುಂಡಾಪುರದ ಜಾತ್ರೆಯ ದಿನವಾದ ಮಂಗಳವಾರ ದೇವರ ಸನ್ನಿಧಿಗೆ ಬಂದು ಪೂಜೆ ಸಲ್ಲಿಸಿದರು.. ಅರ್ಚಕರಾದ ವೀರತಪ್ಪ ಮಾತನಾಡಿ ನಮ್ಮ ಗ್ರಾಮದ ದೇವತೆಯಾದ ಬೆಟ್ಟದರಸಮ್ಮನ ಜಾತ್ರಾ ಮಹೋತ್ಸವ ಅಂಗವಾಗಿ ಒಂದು ವಾರಗಳ ಕಾಲ ನಡೆದ ಜಾತ್ರೆಯಲ್ಲಿ ಸಹಸ್ರಾರು ಭಕ್ತಾದಿಗಳು ಬಂದು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪುನೀತರಾಗಿದ್ದಾರೆ. ದೊಡ್ಡ ಜಾತ್ರೆಯ ಮಂಗಳವಾರ ಸಾಯಂಕಾಲ ಕರಗದ ಮನೆಯಿಂದ ದೇವರು ಮೂಲ ಸನ್ನಿಧಿಗೆ ದೇವರ ಕರಗವನ್ನು ತರಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳನ್ನು ಸಲ್ಲಿಸಿದರೆ. ಗುಂಡಾಪುರ ಸೇರಿದಂತೆ ಒಂಬತ್ತು ಹಳ್ಳಿಗಳ ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಕಾರದಿಂದ ಯಾವುದೇ ವಿಘ್ನವಿಲ್ಲದೆ ಜಾತ್ರೆ ಮಹೋತ್ಸವ ನಡೆದಿರುತ್ತದೆ ಎಂದು ಅರ್ಚಕರಾದ ವೀರ ತಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಅರ್ಚಕರುಗಳಾದ ರಮೇಶ್, ಮಹಾದೇವಪ್ಪ, ಪುಟ್ಟಮಲ್ಲಪ್ಪ, ಚಂದ್ರು ಸೇರಿದಂತೆ ಇತರರು ದೇವರ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಮುಂಜಾಗ್ರತೆಯ ಕ್ರಮವಾಗಿ ಹಿರಿಯ ಪೊಲೀಸ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್ ಮತ್ತು ಸಬ್ ಇನ್ಸ್ಪೆಕ್ಟರ್ ಲೋಕೇಶ್ ಬಿಗಿ ಬಂದೂಬಸ್ತ್ ಏರ್ಪಡಿಸಿದ್ದರು. 10 hgr1 ಬೆಟ್ಟದ ತಪ್ಪಲ್ಲಿನ ದೇವಸ್ಥಾನಕ್ಕೆ ದೇವರು ಬರುತ್ತಿರುವುದು. 10hgr2 ದೇವರಿಗೆ ಪ್ರಿಯವಾದ ಪರದೇಶಿ ಕುಣಿತದಲ್ಲಿ ಬಾಳೆಹೂನ್ನಿಗ ಗ್ರಾಮಸ್ಥರು ತೊಡಗಿರುವುದು. 10hgr3 ದೇವರ ಮೆರವಣಿಗೆ ಬರುವುದನ್ನು ನೋಡಲು ಕಾದು ಕೋಳಿತ ಭಕ್ತರು. 10hgr4

on 11 March
user_ಮಾಗನೂರು ಎಂ ಶಿವಕುಮಾರ್
ಮಾಗನೂರು ಎಂ ಶಿವಕುಮಾರ್
ಮಳವಳ್ಳಿ, ಮಂಡ್ಯ, ಕರ್ನಾಟಕ•
on 11 March

ಬೆಟ್ಟದರಸಮ್ಮನ ದೊಡ್ಡ ಜಾತ್ರೆ ಸಂಪನ್ನ ದೇವಿಗೆ ಪೂಜೆ ಸಲ್ಲಿಸಿದ ಅಪಾರ ಭಕ್ತರು ಹಲಗೂರು: ಗುಂಡಾಪುರದ ಬೆಟ್ಟ ದರಸಮ್ಮನ ದೊಡ್ಡ ಜಾತ್ರೆ ಮಂಗಳವಾರ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರಿಗೆ ಪೂಜೆ ಸಲ್ಲಿಸಿ ತಮಷ್ಟಾರ್ಥವನ್ನು ನೆರವೇರಿಸುವಂತೆ ಪ್ರಾರ್ಥಿಸಿ ದೇವರಿಗೆ ಪೂಜೆ ಸಲ್ಲಿಸಿದರು. ಮಾ. 4ನೇ ಬುದುವಾರದಿಂದ ಮೊದಲನೇ ಪೂಜೆಯಿಂದ ಪ್ರಾರಂಭಗೊಂಡ ಜಾತ್ರಾ ಮಹೋತ್ಸವ ದಿನನಿತ್ಯ ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಮಂಗಳವಾರ ದೊಡ್ಡ ಜಾತ್ರೆಗೆ ವಿವಿಧ ಜಿಲ್ಲೆಗಳಿಂದ ಹಾಗೂ ರಾಜ್ಯದ್ಯಂತ ಅಪಾರ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಮಂಗಳವಾರ ಸಾಯಂಕಾಲ ಗ್ರಾಮದ ಮಧ್ಯಭಾಗದಲ್ಲಿರುವ ಕರಗದ ಮನೆಯಲ್ಲಿ ದೇವರ ಕರಗಕ್ಕೆ ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆಗಳು ನಡೆಸಿದ ನಂತರ ದೇವರಗುಡ್ಡರು ಹೆಬ್ಬಾರೆಯನ್ನು ಹೊತ್ತು ಗ್ರಾಮದ ಮನೆಗಳಿಗೆ ಹೋದಾಗ ಗೃಹಿಣಿಯರು ಹೆಬ್ಬಾರೆಗೆ ಪೂಜೆ ಸಲ್ಲಿಸಿ, ಅಚ್ಛಂದ ನೀಡುವುದು ವಾಡಿಕೆ ಅದನ್ನು ಪಡೆದ ದೇವರಗುಡ್ಡರು ಮತ್ತೆ ದೇವಸ್ಥಾನಕ್ಕೆ ಹೆಬ್ಬಾರೆಯನ್ನು ಹೊತ್ತು ಬರುತ್ತಾರೆ. ದೇವಿಗೆ ಪರದೇಶಿ ಕುಣಿತ ಎಂದರೆ ಬಹು ಅಚ್ಚುಮೆಚ್ಚು, ಬಾಳೆವನ್ನಿಗ ಗ್ರಾಮಸ್ಥರು ಅರಿದ ಬಟ್ಟೆಗಳನ್ನು ತೊಟ್ಟು ಗೋಣಿಚೀಲದಿಂದ ಬಟ್ಟೆಗಳನ್ನು ಮಾಡಿಕೊಂಡು ಕರಡಿ, ಹುಲಿ, ಹೆಣ್ಣಿನ ವೇಷಗಳನ್ನು ತೊಟ್ಟು ತೆಂಗಿನ ಗುದ್ದಮಟ್ಟೆಯಿಂದ ತಯಾರಿಸಿದ ಬಂದೂಕವನ್ನು ಹಿಡಿದು ಜೊತೆಯಲ್ಲಿ ಬೇವಿನಸೊಪ್ಪನ್ನು ಹಿಡಿದುಕೊಂಡು ಕುಣಿದು ಕುಪ್ಪಳಿಸಿಕೊಂಡು ದೇವಸ್ಥಾನದ ಹತ್ತಿರ ಬಂದಾಗ ಅರ್ಚಕರು ಅವರಿಗೆ ತೀರ್ಥ ಹಾಕಿ ಬರಮಾಡಿಕೊಳ್ಳುತ್ತಾರೆ ನಂತರ ಬೆಟ್ಟದರಸಮ್ಮನ ದೇವರ ಕರಗವನ್ನು ಹೊತ್ತ ಅರ್ಚಕರಾದ ವೀರಭದ್ರಪ್ಪ ಮಡಿವಾಳ ಹಾಸಿದ ಮಡಿಯ ಮೇಲೆ ನಡೆಯುವಾಗ ಜೊತೆಯಲ್ಲಿ ಕಳಸ ಹೊತ್ತ ಮುತ್ತೈದೆಯರು ಹರಕೆ ಹೊತ್ತುಕೊಂಡಿದ್ದ ಬಾಯಿ ಬೀಗದವರು ಬೇವಿನ ಸೊಪ್ಪು, ಗಂಧದಕಡ್ಡಿ ಹಿಡಿದು ದೇವರ ಜೊತೆಯಲ್ಲಿ ಮೂರು ಬಸಪ್ಪಗಳು ನಡುವೆ ಬೆಟ್ಟದ ತಪ್ಪಲಿನಲ್ಲಿರುವ ಬೆಟ್ಟದರಸಮ್ಮನ ಸನ್ನಿಧಿಗೆ ಕರಗವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತಾದಿಗಳ ನಡುವೆ ಸಂಜೆ ಆರು ಗಂಟೆಯ ನಂತರ ದೇವಸ್ಥಾನ ತಲುಪಿತು. ಅಲ್ಲಿ ಮತ್ತೆ ಪೂಜೆ ಪುನಸ್ಕಾರಗಳು ನಡೆಸಿದ ನಂತರ ಅದೇ ದಿನ ರಾತ್ರಿ ಮತ್ತೆ ಕರಗವನ್ನು ಹೊತ್ತು ಗ್ರಾಮದ ಕರಗದ ಮನೆಗೆ ದೇವರ ಕರಗವನ್ನು ತರುವಾಗ ಮುತ್ತೈದೆಯರು ತಂಬಿಟ್ಟಿನ ಆರತಿ ಎತ್ತಿ ಪೂಜೆ ಸಲ್ಲಿಸಿದ ಮೇಲೆ ದೇವರು ಕರಗದ ಮನೆಗೆ ಕರಗವನ್ನು ಕೊಂಡಯಾಲಾಯಿತು. ಈ ಸಂದರ್ಭದಲ್ಲಿ ಭಕ್ತರು ಪಂಜಿನ ಸೇವೆ ಹಾಗೂ ತಮ್ಮ ದನಕರುಗಳನ್ನು ಹಿಡಿದುಕೊಂಡು ಬಂದು ಊರ್ಜಿ ಆಡಿಸುವ ಕಾರ್ಯಕ್ರಮಗಳು ಬಹು ಸೊಗಸಾಗಿ ನಡೆಯಿತು. ಹಲಗೂರು, ಗುಂಡಾಪುರ, ಕೆಂಪಯ್ಯನ ದೊಡ್ಡಿ, ನಂದಿಪುರ, ಹೆಚ್.ಬಸಾಪುರ, ದಳವಾಯಿ ಕೋಡಿಹಳ್ಳಿ, ದೇವಿರಹಳ್ಳಿ, ಬಾಳೆಹೊನ್ನಿಗ, ಹಗಾದೂರು, ಬಸವನಹಳ್ಳಿ, ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹೆಚ್ಚು ಭಕ್ತಾದಿಗಳು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಜಾತ್ರೆಯ ದಿವಸ ಭಕ್ತಾದಿಗಳು ಎತ್ತಿನಗಾಡಿಯಲ್ಲಿ ಬೆಲ್ಲದ ಪಾನಕ, ಮಜ್ಜಿಗೆ ಮಾಡಿಕೊಂಡು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಬಿಸಿಲಿನ ತಾಪವನ್ನು ನೀಗಿಸಲು ಹರಕೆ ಹೊತ್ತುಕೊಂಡ ಭಕ್ತರು ಹಂಚುತ್ತಾರೆ.ಹಾಗೂ ಮುತ್ತೈದೆಯರು ಅರಿಶಿನ ಕುಂಕುಮ ನೀಡಿ ವಿನಿಮಯ ಮಾಡಿಕೊಂಡು ಹೆಸರುಬೇಳೆ, ಪಾನಕ ನೀಡಿದರು. ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಮಂಗಳವಾರ ಗುಂಡಾಪುರದ ಜಾತ್ರೆಯ ದಿನವಾದ ಮಂಗಳವಾರ ದೇವರ ಸನ್ನಿಧಿಗೆ ಬಂದು ಪೂಜೆ ಸಲ್ಲಿಸಿದರು.. ಅರ್ಚಕರಾದ ವೀರತಪ್ಪ ಮಾತನಾಡಿ ನಮ್ಮ ಗ್ರಾಮದ ದೇವತೆಯಾದ ಬೆಟ್ಟದರಸಮ್ಮನ ಜಾತ್ರಾ ಮಹೋತ್ಸವ ಅಂಗವಾಗಿ ಒಂದು ವಾರಗಳ ಕಾಲ ನಡೆದ ಜಾತ್ರೆಯಲ್ಲಿ ಸಹಸ್ರಾರು ಭಕ್ತಾದಿಗಳು ಬಂದು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪುನೀತರಾಗಿದ್ದಾರೆ. ದೊಡ್ಡ ಜಾತ್ರೆಯ ಮಂಗಳವಾರ ಸಾಯಂಕಾಲ ಕರಗದ ಮನೆಯಿಂದ ದೇವರು ಮೂಲ ಸನ್ನಿಧಿಗೆ ದೇವರ ಕರಗವನ್ನು ತರಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳನ್ನು ಸಲ್ಲಿಸಿದರೆ. ಗುಂಡಾಪುರ ಸೇರಿದಂತೆ ಒಂಬತ್ತು ಹಳ್ಳಿಗಳ ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಕಾರದಿಂದ ಯಾವುದೇ ವಿಘ್ನವಿಲ್ಲದೆ ಜಾತ್ರೆ ಮಹೋತ್ಸವ ನಡೆದಿರುತ್ತದೆ ಎಂದು ಅರ್ಚಕರಾದ ವೀರ ತಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಅರ್ಚಕರುಗಳಾದ ರಮೇಶ್, ಮಹಾದೇವಪ್ಪ, ಪುಟ್ಟಮಲ್ಲಪ್ಪ, ಚಂದ್ರು ಸೇರಿದಂತೆ ಇತರರು ದೇವರ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಮುಂಜಾಗ್ರತೆಯ ಕ್ರಮವಾಗಿ ಹಿರಿಯ ಪೊಲೀಸ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್ ಮತ್ತು ಸಬ್ ಇನ್ಸ್ಪೆಕ್ಟರ್ ಲೋಕೇಶ್ ಬಿಗಿ ಬಂದೂಬಸ್ತ್ ಏರ್ಪಡಿಸಿದ್ದರು. 10 hgr1 ಬೆಟ್ಟದ ತಪ್ಪಲ್ಲಿನ ದೇವಸ್ಥಾನಕ್ಕೆ ದೇವರು ಬರುತ್ತಿರುವುದು. 10hgr2 ದೇವರಿಗೆ ಪ್ರಿಯವಾದ ಪರದೇಶಿ ಕುಣಿತದಲ್ಲಿ ಬಾಳೆಹೂನ್ನಿಗ ಗ್ರಾಮಸ್ಥರು ತೊಡಗಿರುವುದು. 10hgr3 ದೇವರ ಮೆರವಣಿಗೆ ಬರುವುದನ್ನು ನೋಡಲು ಕಾದು ಕೋಳಿತ ಭಕ್ತರು. 10hgr4

  • user_Santosh Mangalur
    Santosh Mangalur
    Gajendragad, Gadag
    🙏
    on 13 March
More news from ಕರ್ನಾಟಕ and nearby areas
  • SCARCITY OF LPG IN MYSURU HUNDREDS OF AUTO DRIVER'S ARE WAITING FOR THEIR TERM #kvnews #lpgshortage #autos #driver
    1
    SCARCITY OF LPG IN MYSURU HUNDREDS OF AUTO DRIVER'S ARE WAITING FOR THEIR TERM #kvnews #lpgshortage #autos #driver
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • ನಮ್ಮ ಮೈಸೂರು ನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ ಶ್ರೀ ತನ್ವೀರ್ ಸೇಠ್
    1
    ನಮ್ಮ ಮೈಸೂರು ನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ ಶ್ರೀ ತನ್ವೀರ್ ಸೇಠ್
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.
    1
    ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    12 hrs ago
  • . ಹನೂರು :ತಾಲೂಕಿನ ಸುಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಆದಿ ಜಾಂಬವರ ಬೀದಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿಯನ್ನು ಆಚರಿಸಲಾಯಿತು. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕೇಕ್ ಅನ್ನು ಕತ್ತರಿಸಿ ಸಿಹಿ ಹಂಚಿದರು. ನಂತರ ಸಮುದಾಯದ ಮುಖಂಡರಾದ ಮಹದೇವ ಮಾತನಾಡಿ ಜಗಜೀವನ್ ರಾಮ್ ಅವರು ಭಾರತದ ಪ್ರಮುಖ ರಾಜಕೀಯ ನಾಯಕರು ಮತ್ತು ಸಾಮಾಜಿಕ ನ್ಯಾಯದ ಹರಿಕಾರರು. ಅವರನ್ನು ಪ್ರೀತಿಯಿಂದ "ಬಾಬೂಜಿ" ಎಂದು ಕರೆಯಲಾಗುತ್ತಿತ್ತು. ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ವಿದ್ಯಾಭ್ಯಾಸದ ಸಮಯದಲ್ಲಿ ಅವರು ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದರು, ಇದು ಅವರ ಮುಂದಿನ ಹೋರಾಟಕ್ಕೆ ಪ್ರೇರಣೆಯಾಯಿತು. ಕೇಂದ್ರ ಸಚಿವರು ಕೂಡ ಆಗಿದ್ದರು. ಹಸಿರು ಕ್ರಾಂತಿ ಕ್ರಾಂತಿಯ ಹರಿಕಾರ.ಅವರು ದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾತ್ಮರು ಎಂದು ತಿಳಿಸಿದರು. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು (ಏಪ್ರಿಲ್ 14) ನಾವು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಅಂಬೇಡ್ಕರ್ ಅವರ ಪ್ರಮುಖ ಘೋಷಣೆಗಳು ​"ಕಲಿಯಿರಿ, ಸಂಘಟಿತರಾಗಿ, ಹೋರಾಡಿ." ​"ನಾನು ಆರಾಧಿಸುವ ಮೂರು ದೈವಗಳೆಂದರೆ - ಜ್ಞಾನ, ಸ್ವಾಭಿಮಾನ ಮತ್ತು ಚಾರಿತ್ರ್ಯ." ​"ಮನಸ್ಸಿನ ಕೃಷಿಯೇ ಮಾನವನ ಅಂತಿಮ ಗುರಿಯಾಗಿರಬೇಕು ಎಂದು ತಿಳಿಸಿದರು. ಸಮುದಾಯದ ಬೀದಿಗಳಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಯಜಮಾನರ ತಿಮ್ಮಯ್ಯ, ಜಡೆ ಸ್ವಾಮಿ, ಯುವಕರಾದ ಶ್ರೀನಿವಾಸ್, ಮಾದೇಶ್, ನಂಜುಂಡ, ರವಿ,ನಾಗ, ಪ್ರವೀಣ್, ಪ್ರಜ್ವಲ್, ಸೇರಿದಂತೆ ಇನ್ನಿತರ ಯುವಕರು ಮಹಿಳೆಯರು ಹಾರಾಜರಿದ್ದರು.
    4
    . 
ಹನೂರು :ತಾಲೂಕಿನ ಸುಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಆದಿ ಜಾಂಬವರ ಬೀದಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿಯನ್ನು ಆಚರಿಸಲಾಯಿತು.
ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್  ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕೇಕ್ ಅನ್ನು ಕತ್ತರಿಸಿ ಸಿಹಿ ಹಂಚಿದರು.
ನಂತರ ಸಮುದಾಯದ ಮುಖಂಡರಾದ ಮಹದೇವ  ಮಾತನಾಡಿ ಜಗಜೀವನ್ ರಾಮ್  ಅವರು ಭಾರತದ ಪ್ರಮುಖ ರಾಜಕೀಯ ನಾಯಕರು ಮತ್ತು ಸಾಮಾಜಿಕ ನ್ಯಾಯದ ಹರಿಕಾರರು. ಅವರನ್ನು ಪ್ರೀತಿಯಿಂದ "ಬಾಬೂಜಿ" ಎಂದು ಕರೆಯಲಾಗುತ್ತಿತ್ತು.
ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ವಿದ್ಯಾಭ್ಯಾಸದ ಸಮಯದಲ್ಲಿ ಅವರು ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದರು, ಇದು ಅವರ ಮುಂದಿನ ಹೋರಾಟಕ್ಕೆ ಪ್ರೇರಣೆಯಾಯಿತು.
ಕೇಂದ್ರ ಸಚಿವರು ಕೂಡ ಆಗಿದ್ದರು. ಹಸಿರು ಕ್ರಾಂತಿ ಕ್ರಾಂತಿಯ ಹರಿಕಾರ.ಅವರು ದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾತ್ಮರು  ಎಂದು ತಿಳಿಸಿದರು.
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು (ಏಪ್ರಿಲ್ 14) ನಾವು ಅರ್ಥಪೂರ್ಣವಾಗಿ ಆಚರಿಸುತ್ತೇವೆ
ಅಂಬೇಡ್ಕರ್ ಅವರ ಪ್ರಮುಖ ಘೋಷಣೆಗಳು
​"ಕಲಿಯಿರಿ, ಸಂಘಟಿತರಾಗಿ, ಹೋರಾಡಿ."
​"ನಾನು ಆರಾಧಿಸುವ ಮೂರು ದೈವಗಳೆಂದರೆ - ಜ್ಞಾನ, ಸ್ವಾಭಿಮಾನ ಮತ್ತು ಚಾರಿತ್ರ್ಯ."
​"ಮನಸ್ಸಿನ ಕೃಷಿಯೇ ಮಾನವನ ಅಂತಿಮ ಗುರಿಯಾಗಿರಬೇಕು ಎಂದು ತಿಳಿಸಿದರು.
ಸಮುದಾಯದ ಬೀದಿಗಳಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು.
ಇದೇ ಸಂದರ್ಭದಲ್ಲಿ ಯಜಮಾನರ ತಿಮ್ಮಯ್ಯ, ಜಡೆ ಸ್ವಾಮಿ, ಯುವಕರಾದ ಶ್ರೀನಿವಾಸ್, ಮಾದೇಶ್, ನಂಜುಂಡ, ರವಿ,ನಾಗ, ಪ್ರವೀಣ್, ಪ್ರಜ್ವಲ್, ಸೇರಿದಂತೆ ಇನ್ನಿತರ ಯುವಕರು ಮಹಿಳೆಯರು ಹಾರಾಜರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    9 hrs ago
  • ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    1
    ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ  ಪ್ರಶ್ನೆಗೆ  ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,      ಕಾಂಗ್ರೆಸ್ ಶಾಸಕರು ಈಗಾಗಲೇ  ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ  ಬರಲಿದೆ.   ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ  ಗೊಂದಲಕ್ಕೆ ಇತಿಶ್ರೀ ಹಾಡುವಂತೆ   ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು  ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು.
ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ  ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ  ಪಕ್ಷ ವಿರೋಧಿ ಕೆಲಸಮಾಡಿದರೆ  ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ  ಪಕ್ಷ ವಿರೋಧಿ ಕೆಲಸ  ಮಾಡಿದ್ರೆ ತಲೆದಂಡವಾಗಲಿದೆ ಎಂದರು.
ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್  ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು.
ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. 
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ  ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ  ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ,  ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು,  ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    5 hrs ago
  • ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    1
    ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಹನೂರು: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅವರು ನಂತರ ಮಾತನಾಡಿದರು. "ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ತತ್ವಗಳು ಪ್ರಸ್ತುತ ಸಮಾಜಕ್ಕೆ ಅತ್ಯಗತ್ಯ. ಅವರ ಹೋರಾಟ ಮತ್ತು ಜ್ಞಾನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಲಿ," ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾದ ಬಿ. ಕೇಶವಮೂರ್ತಿ ಅವರು ಅಂಬೇಡ್ಕರ್ ಅವರ ಜೀವನದ ಹಾದಿ ಮತ್ತು ಸಾಮಾಜಿಕ ಕೊಡುಗೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಗಣ್ಯರ ಉಪಸ್ಥಿತಿ: ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ಅಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಚೈತ್ರಾ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ರೇಖಾ, ಶಿಕ್ಷಣಾಧಿಕಾರಿ ಮಹೇಶ್, ತಾಲ್ಲೂಕು ವೈದ್ಯಾಧಿಕಾರಿ ಪ್ರಕಾಶ್, ಆರಕ್ಷಕ ನಿರೀಕ್ಷಕ ಆನಂದ್ ಮೂರ್ತಿ ಉಪಸ್ಥಿತರಿದ್ದರು. ಹಾಗೆಯೇ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸುರೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಸಿದ್ದರಾಜು, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಚಪ್ಪ, ಮುಖಂಡರುಗಳಾದ ಮಹೇಶ್, ಲಿಂಗರಾಜು, ಗುರುಸ್ವಾಮಿ, ಮಹಾದೇವಯ್ಯ, ಮಾದೇಶ್, ಚಂದ್ರು, ಸಿದ್ದಣ್ಣ, ಅಂಕರಾಜು, ನಾಗಣ್ಣ, ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. ವರದಿ ಉಸ್ಮಾನ್ ಖಾನ್
    4
    ಹನೂರು: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅವರು ನಂತರ ಮಾತನಾಡಿದರು. "ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ತತ್ವಗಳು ಪ್ರಸ್ತುತ ಸಮಾಜಕ್ಕೆ ಅತ್ಯಗತ್ಯ. ಅವರ ಹೋರಾಟ ಮತ್ತು ಜ್ಞಾನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಲಿ," ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾದ ಬಿ. ಕೇಶವಮೂರ್ತಿ ಅವರು ಅಂಬೇಡ್ಕರ್ ಅವರ ಜೀವನದ ಹಾದಿ ಮತ್ತು ಸಾಮಾಜಿಕ ಕೊಡುಗೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.
ಗಣ್ಯರ ಉಪಸ್ಥಿತಿ:
ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ಅಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಚೈತ್ರಾ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ರೇಖಾ, ಶಿಕ್ಷಣಾಧಿಕಾರಿ ಮಹೇಶ್, ತಾಲ್ಲೂಕು ವೈದ್ಯಾಧಿಕಾರಿ ಪ್ರಕಾಶ್, ಆರಕ್ಷಕ ನಿರೀಕ್ಷಕ ಆನಂದ್ ಮೂರ್ತಿ ಉಪಸ್ಥಿತರಿದ್ದರು.
ಹಾಗೆಯೇ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸುರೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಸಿದ್ದರಾಜು, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಚಪ್ಪ, ಮುಖಂಡರುಗಳಾದ ಮಹೇಶ್, ಲಿಂಗರಾಜು, ಗುರುಸ್ವಾಮಿ, ಮಹಾದೇವಯ್ಯ, ಮಾದೇಶ್, ಚಂದ್ರು, ಸಿದ್ದಣ್ಣ, ಅಂಕರಾಜು, ನಾಗಣ್ಣ, ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.
ವರದಿ ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.