ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬಿಜೆಪಿ ಪ್ರತಿಭಟನೆ: ಬಿ.ಶ್ರೀರಾಮುಲು ಗುಳೇದಗುಡ್ಡ: ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 87 ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಆದರೆ ಈಗಿನ ಮುಖ್ಯಮಂತ್ರಿಗಳು ಸದನದಲ್ಲಿ ಸಚಿವ ನಾಗೇಂದ್ರ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಯಾವುದೇ ಹುದ್ದೆ, ಮಂತ್ರಿಸ್ಥಾನ ಸಿಗಬೇಕಾದರೆ ಭ್ರಷ್ಟಾಚಾರ, ಹಗರಣ ಮಾಡಿರಲೇಬೇಕು ಎಂಬ ಸಂಪ್ರದಾಯ ಹುಟ್ಟುಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಅವರು ಭಾನುವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿ. ವೇಣುಗೋಪಾಲ, ಸಿ.ಎಂ ಡಿಕೆ ಶಿವಕುಮಾರ್ ಎಲ್ಲರಿಗೂ ಪಾಲು ಹೋಗಿದೆ. ಹೈಕಮಾಂಡ್ಗೆ ಬ್ಲಾಕ್ಮೇಲ್ ಮಾಡಿ ಬಿ. ನಾಗೇಂದ್ರ ಅವರು ಸಚಿವ ಸ್ಥಾನ ಪಡೆದಿದ್ದಾರೆ ಎಂದು ಆರೋಪಿಸಿದ ಅವರು, ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ಕೊಡುವವರೆಗೂ ಭಾರತೀಯ ಜನತಾ ಪಾರ್ಟಿಯಿಂದ ಪ್ರತಿಭಟನೆ ನಿರಂತರವಾಗಿ ಮುಂದುವರೆಯುತ್ತದೆ ಎಂದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತ ಆಗಿದ್ದಾರೆ. ಬರಗಾಲ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ, ಕುಡಿಯಲು ನೀರಿಲ್ಲ, ರೈತರು ಸಂಕಷ್ಟದಲ್ಲಿದ್ದಾರೆ ಇದನ್ನು ಸರಿಪಡಿಸಬೇಕಾಗಿತ್ತು. ಈ ಮುಖ್ಯಮಂತ್ರಿಗಳು ಯಾವತ್ತು ರೈತರ ಪರವಾಗಿ ಇಲ್ಲ. ರಿಯಲ್ ಎಸ್ಟೇಟ್ ದಂಧೆ ಮಾಡುವವರಿಗೆ ರೈತರ ಸಂಕಷ್ಟ ಏನು ಗೊತ್ತಾಗುತ್ತದೆ. ಇವರು ರಿಯಲ್ಎಸ್ಟೇಟ್ ಸಿಎಂ ಎಂದರು. ಬಿಡದಿಯಲ್ಲಿ ಟೌನ್ಶಿಪ್ ಮಾಡೋಕೆ ಹೊರಟಿದ್ದಾರೆ. ಬಿಡದಿಯಲ್ಲಿ ಟೌನ್ಶಿಪ್ ಮಾಡುವುದರಿಂದ ಏನು ಪ್ರಯೋಜನ? ಉತ್ತರ ಕರ್ನಾಟಕದಲ್ಲಿ ಬಂದು ಏನಾದರೂ ಟೌನ್ಶಿಪ್ ಮಾಡಿದರೆ ನೀವು ಮುಖ್ಯಮಂತ್ರಿಯಾಗಿದ್ದು ಸಾರ್ಥಕವಾಗುತ್ತಿತ್ತು ಎಂದರು. ಸಿದ್ದರಾಮಯ್ಯನವರಿಗೆ ಅನುಭವ ಇತ್ತು. ಒಳ್ಳೆಯ ಆಡಳಿತ ಮಾಡಿದ್ದಾರೆ. ಅನೇಕ ಬಾರಿ ಆರ್ಥಿಕ ಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ. ಭ್ರಷ್ಟಾಚಾರ ಮಾಡಿದಾಗ ನೇರವಾಗಿ ಹೇಳಿದ್ದಾರೆ. ಅವರ ಆಡಳಿತಕ್ಕೂ ಇವರ ಆಡಳಿತಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದರು. ಈ ಸಂದರ್ಭದಲ್ಲಿ ರಾಜು ನಾಯ್ಕರ, ಭುವನೇಶ ಪೂಜಾರ, ರವಿ ಅಂಗಡಿ ಇದ್ದರು.
ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬಿಜೆಪಿ ಪ್ರತಿಭಟನೆ: ಬಿ.ಶ್ರೀರಾಮುಲು ಗುಳೇದಗುಡ್ಡ: ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 87 ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಆದರೆ ಈಗಿನ ಮುಖ್ಯಮಂತ್ರಿಗಳು ಸದನದಲ್ಲಿ ಸಚಿವ ನಾಗೇಂದ್ರ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಯಾವುದೇ ಹುದ್ದೆ, ಮಂತ್ರಿಸ್ಥಾನ ಸಿಗಬೇಕಾದರೆ ಭ್ರಷ್ಟಾಚಾರ, ಹಗರಣ ಮಾಡಿರಲೇಬೇಕು ಎಂಬ ಸಂಪ್ರದಾಯ ಹುಟ್ಟುಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಅವರು ಭಾನುವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿ. ವೇಣುಗೋಪಾಲ, ಸಿ.ಎಂ ಡಿಕೆ ಶಿವಕುಮಾರ್ ಎಲ್ಲರಿಗೂ ಪಾಲು ಹೋಗಿದೆ. ಹೈಕಮಾಂಡ್ಗೆ ಬ್ಲಾಕ್ಮೇಲ್ ಮಾಡಿ ಬಿ. ನಾಗೇಂದ್ರ ಅವರು ಸಚಿವ ಸ್ಥಾನ ಪಡೆದಿದ್ದಾರೆ ಎಂದು ಆರೋಪಿಸಿದ ಅವರು, ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ಕೊಡುವವರೆಗೂ ಭಾರತೀಯ ಜನತಾ ಪಾರ್ಟಿಯಿಂದ ಪ್ರತಿಭಟನೆ ನಿರಂತರವಾಗಿ ಮುಂದುವರೆಯುತ್ತದೆ ಎಂದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತ ಆಗಿದ್ದಾರೆ. ಬರಗಾಲ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ, ಕುಡಿಯಲು ನೀರಿಲ್ಲ, ರೈತರು ಸಂಕಷ್ಟದಲ್ಲಿದ್ದಾರೆ ಇದನ್ನು ಸರಿಪಡಿಸಬೇಕಾಗಿತ್ತು. ಈ ಮುಖ್ಯಮಂತ್ರಿಗಳು ಯಾವತ್ತು ರೈತರ ಪರವಾಗಿ ಇಲ್ಲ. ರಿಯಲ್ ಎಸ್ಟೇಟ್ ದಂಧೆ ಮಾಡುವವರಿಗೆ ರೈತರ ಸಂಕಷ್ಟ ಏನು ಗೊತ್ತಾಗುತ್ತದೆ. ಇವರು ರಿಯಲ್ಎಸ್ಟೇಟ್ ಸಿಎಂ ಎಂದರು. ಬಿಡದಿಯಲ್ಲಿ ಟೌನ್ಶಿಪ್ ಮಾಡೋಕೆ ಹೊರಟಿದ್ದಾರೆ. ಬಿಡದಿಯಲ್ಲಿ ಟೌನ್ಶಿಪ್ ಮಾಡುವುದರಿಂದ ಏನು ಪ್ರಯೋಜನ? ಉತ್ತರ ಕರ್ನಾಟಕದಲ್ಲಿ ಬಂದು ಏನಾದರೂ ಟೌನ್ಶಿಪ್ ಮಾಡಿದರೆ ನೀವು ಮುಖ್ಯಮಂತ್ರಿಯಾಗಿದ್ದು ಸಾರ್ಥಕವಾಗುತ್ತಿತ್ತು ಎಂದರು. ಸಿದ್ದರಾಮಯ್ಯನವರಿಗೆ ಅನುಭವ ಇತ್ತು. ಒಳ್ಳೆಯ ಆಡಳಿತ ಮಾಡಿದ್ದಾರೆ. ಅನೇಕ ಬಾರಿ ಆರ್ಥಿಕ ಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ. ಭ್ರಷ್ಟಾಚಾರ ಮಾಡಿದಾಗ ನೇರವಾಗಿ ಹೇಳಿದ್ದಾರೆ. ಅವರ ಆಡಳಿತಕ್ಕೂ ಇವರ ಆಡಳಿತಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದರು. ಈ ಸಂದರ್ಭದಲ್ಲಿ ರಾಜು ನಾಯ್ಕರ, ಭುವನೇಶ ಪೂಜಾರ, ರವಿ ಅಂಗಡಿ ಇದ್ದರು.
- ಜಿಲ್ಲೆಯಲ್ಲಿ ಬಾಕಿರುವ ಬಿಲ್ಲನ್ನು ಶೀಘ್ರದಲ್ಲೇ ಪಾವತಿಸಲು ಸೂಚನೆ ನೀಡಲಾಗಿದೆ: ಡಿಸಿ ಸಂಗಪ್ಪ1
- ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ಯರಗಲ್ಲ ಭೇಟಿನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ಯರಗಲ್ಲ ಭೇಟಿ ಮುಧೋಳ : ನಗರದಲ್ಲಿನ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರತೆ ಹಾಗೂ ಅವ್ಯವಸ್ಥೆ ವಿರುದ್ಧ ಭೀಮ್ ಆರ್ಮಿ ಮೂಲ ನಿವಾಸಿ ಏಕತಾ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ರಾಜಕುಮಾರ ಯರಗಲ್ಲ ಅವರು ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು.1
- ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು. ನಗರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.2
- ಇಳಕಲ್ ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2111ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ ಇಳಕಲ್ ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2111ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2111ನೇ ಮಧ್ಯವರ್ಜನ ಶಿಬಿರ ನಗರದ ಅನುಭವ ಮಂಟಪದಲ್ಲಿ ನಡೆಯಿತು. ಈ ಮಧ್ಯವರ್ಜನ ಶಿಬಿರವನ್ನು ನಗರಸಭೆಯ ಅಧ್ಯಕ್ಷರಾದ ಸುಧಾರಣಿ ಸಂಗಮ್, ಸದಸ್ಯರಾದ ರೇಷ್ಮಾ ಮಾರನಬಸರಿ, ಸವಿತಾ ಚಲವಾದಿ, ಯಲ್ಲಪ್ಪ ರಾಜಾಪೂರ,ಹನಮಂತ ತುಂಬದ, ಮಾಹಾಂತೇಶ ಹನಮನಾಳ ಹಾಗೂ ಧರ್ಮಸ್ಥಳ ಸಂಘದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.3
- ಕರ್ನಾಟಕದಲ್ಲಿ ಗಣಪತಿಗೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲಾ ಎಂದ ಗೃಹ ಮಂತ್ರಿ ಪಿಯಾಂಕ :ಖರ್ಗೆ ವಿರುದ್ಧ ಬಿ ಜೆ ಪಿ ಮುಖಂಡರು ಗಣಪತಿಗೆ ಯಾಕೆ ಡಿಜಿ ಇಲ್ಲಾ ಗೃಹ ಮಂತ್ರಿಯ ರೆ ಮುಸಾಲ್ಮಾನರಿಗೆ ನಾಲಕ್ಕು ಐದು ಸಲಾ ಮೈಕ್ ಹಚ್ಚಿ ನಮಾಜ್ ಮಾಡುತ್ತಾರೆ ನಮಗ ಏಕೆ ಇಲ್ಲ ಹೇಳಿ ಗೃಹ ಮಂತ್ರಿ ಯರೆ ನಮಗೂ ಡಿಜಿ ಪರ್ಮಿಷನ್ ಕೊಡಬೇಕು ಇಲ್ಲಾಂದ್ರೆ ನಾವು ಬಿಡುವುದಿಲ್ಲ ಬಿಜೆಪಿ ಮುಖಂಡ ರಾಜ ಹೇಳಿಕೆ1
- ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು. ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯ ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ. ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್, ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.2
- ಈದ್ ಮಿಲಾದ್ ಹಿನ್ನೆಲೆ ಪೊಲೀಸರಿಂದ ಮುಧೋಳ ನಗರದಲ್ಲಿ ಪಥ ಸಂಚಲನ ಮುಧೋಳ : ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು. ನಗರದ ಪೊಲೀಸ್ ಠಾಣೆಯಿಂದ ಆರಂಭಗೊಂಡ ಪಥ ಸಂಚಲನ ಶಿವಾಜಿ ವೃತ್ತ, ಬರಗಿ ಮಸೀದಿ, ಗಾಂಧಿ ಚೌಕ್, ತಂಬಾಕ್ ಚೌಕ್, ಜೈ ಭಾರತ ಸರ್ಕಲ್, ಜಡಗಣ್ಣ-ಬಾಲಣ್ಣ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಲಾಯಿತು.2
- ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಬ್ಯಾರಿಕೇಡ್ ಮುರಿದು ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು.. ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಬ್ಯಾರಿಕೇಡ್ ಮುರಿದು ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು..1