Shuru
Apke Nagar Ki App…
Arkalgud : ಕೊಡಕಹಳ್ಳಿ ಗ್ರಾಮದಲ್ಲಿ ಫೆ. 19ರಿಂದ 27ರ ತನಕ ದೇವರುಗಳ ಪ್ರತಿಷ್ಠಾಪನೆ, ದೇವಸ್ಥಾನ ಉದ್ಘಾಟನೆ ಅರಕಲಗೂಡು ತಾಲೂಕು ಕೊಡಕಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ, ಶ್ರೀ ಮಾರಮ್ಮ ಮತ್ತು ಶ್ರೀ ಗ್ರಾಮ ದೇವತೆ, ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನಗಳ ಉದ್ಘಾಟನಾ ಸಮಾರಂಭ ಫೆಬ್ರವರಿ 19ರಿಂದ 27ರ ತನಕ ಜರುಗಲಿದೆ ಎಂದು ಗ್ರಾಮದ ಮುಖಂಡ ಕೊಡಕಹಳ್ಳಿ ಅಶೋಕ್ ತಿಳಿಸಿದರು. ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳು, ಉತ್ಸವ ಅದ್ದೂರಿಯಾಗಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಮಂಜು ಸೇರಿದಂತೆ ವಿವಿಧ ಗಣ್ಯರು, ಮಠಾಧೀಶರು, ಮುಖಂಡರು ಭಾಗವಹಿಸುವರು. ಈ ದೇವರ ಕಾರ್ಯದಲ್ಲಿ ಕೊಡಕಹಳ್ಳಿ ಸೇರಿದಂತೆ ಸುತ್ತಾಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು. #templeopening #Kodakahalli #villegevibes❤️ #Arkalgud #temple #News5Kannada
News5Kannada
Arkalgud : ಕೊಡಕಹಳ್ಳಿ ಗ್ರಾಮದಲ್ಲಿ ಫೆ. 19ರಿಂದ 27ರ ತನಕ ದೇವರುಗಳ ಪ್ರತಿಷ್ಠಾಪನೆ, ದೇವಸ್ಥಾನ ಉದ್ಘಾಟನೆ ಅರಕಲಗೂಡು ತಾಲೂಕು ಕೊಡಕಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ, ಶ್ರೀ ಮಾರಮ್ಮ ಮತ್ತು ಶ್ರೀ ಗ್ರಾಮ ದೇವತೆ, ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನಗಳ ಉದ್ಘಾಟನಾ ಸಮಾರಂಭ ಫೆಬ್ರವರಿ 19ರಿಂದ 27ರ ತನಕ ಜರುಗಲಿದೆ ಎಂದು ಗ್ರಾಮದ ಮುಖಂಡ ಕೊಡಕಹಳ್ಳಿ ಅಶೋಕ್ ತಿಳಿಸಿದರು. ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳು, ಉತ್ಸವ ಅದ್ದೂರಿಯಾಗಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಮಂಜು ಸೇರಿದಂತೆ ವಿವಿಧ ಗಣ್ಯರು, ಮಠಾಧೀಶರು, ಮುಖಂಡರು ಭಾಗವಹಿಸುವರು. ಈ ದೇವರ ಕಾರ್ಯದಲ್ಲಿ ಕೊಡಕಹಳ್ಳಿ ಸೇರಿದಂತೆ ಸುತ್ತಾಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು. #templeopening #Kodakahalli #villegevibes❤️ #Arkalgud #temple #News5Kannada
More news from ಕರ್ನಾಟಕ and nearby areas
- ‘ಅಕ್ಕ ಪಡೆ’ ಯೋಜನೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಪೊಲೀಸ್ ಇಲಾಖೆಗೆ ನೀಡಿರುವ ವಾಹನಕ್ಕೆ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೋಮವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಹಾಗೂ ಜಾಗೃತಿ ಮೂಡಿಸಲು ಈ ವಾಹನವನ್ನು ಬಳಸಲಾಗುತ್ತದೆ ಎಂದರು. ಈ ವಾಹನದಲ್ಲಿ ನಾಲ್ವರು ಮಹಿಳಾ ಸಿಬ್ಬಂದಿ ಹಾಗೂ ಹೋಂ ಗಾರ್ಡ್ಗಳನ್ನು ನಿಯೋಜಿಸಲಾಗಿದ್ದು, ಎರಡು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಜೊತೆಗೆ 112 ಹಾಗೂ ಚಾಮುಂಡಿ ಪಡೆ ವಾಹನಗಳೂ ತಮ್ಮ ಕರ್ತವ್ಯ ಮುಂದುವರಿಸಲಿವೆ ಎಂದು ಹೇಳಿದರು.1
- ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ನೇತೃತ್ವದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ರಂಝಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವು ಸಂತ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಕ್ಯಾಸ್ಟಲಿನೋ, ಬಿಎಂ ರೋಹಿಣಿ, ಮಾಜಿ ಮೇಯರ್ ಕೆ. ಅಶ್ರಫ್ ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಸರ್ವಧರ್ಮೀಯರು ಸೇರಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.1
- ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...1
- ಹನೂರು: ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಮಧ್ಯಾಹ್ನ ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು. ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.1
- ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಒಂದಲ್ಲ ಒಂದು ದೂರು ಕೇಳಿ ಬರುತ್ತಲೇ ಇರುವ ನಡುವೆಯೇ ನಡೆದ ಬಾಣಂತಿಯ ಸಾವು.. ಚಿತ್ರದುರ್ಗ :ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪರಶುರಾಮಪುರದ ಶಿಲ್ಪ ಎನ್ನುವ ಮಹಿಳೆಯೋರ್ವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದರು. ಹೆರಿಗೆ ಬಳಿಕ ವೈದ್ಯರು ನಿರ್ಲಕ್ಷ ತೋರಿದ ಪರಿಣಾಮ ಶಿಲ್ಪಾಳ ಸಾವು ಸಂಭವಿಸಿದೆ. ಏಕಾಏಕಿ ಐಸಿಯುಗೆ ಶಿಫ್ಟ್ ಮಾಡಬೇಕೆಂದು ಹೇಳಿ ನೇರವಾಗಿ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ ಎಂಬುದು ಮೃತಳ ತಾಯಿ ದುರ್ಗಮ್ಮ ಅವರ ಆರೋಪ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದು, ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಸೇರಿ ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ..1
- KOLAR KI.AWAAZ KOUSAR NEWS1
- *ಭಾರತ ನಲ್ಲಿ ವೈರಲ್*1
- ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್ ಮೂರು ದಿನಗಳಿಂದ ಇರುವುದಾಗಿ ತಿಳಿದುಬಂದಿದೆ. ಮಾರ್ಚ್ 7 ರಂದು ಸುಬ್ರಹ್ಮಣ್ಯ ಕ್ಕೆ ಆಗಮಿಸಿದ್ದ ಅವರು ಮಾರ್ಚ್ 8 ರಂದು ಸರ್ಪ ಸಂಸ್ಕಾರ ಸೇವೆ ನಡೆಸಿದ್ದಾಗಿ ತಿಳಿದು ಬಂದಿದ್ದು, ಮಾರ್ಚ್ 9 ರಂದು ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಸುಬ್ರಹ್ಮಣ್ಯದ ಔರಮ್ ವಸತಿ ಗೃಹದಲ್ಲಿ ತಂಗಿದ್ದ ಅವರನ್ನು ದೇವಾಲಯ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಗೌರವಿಸಿದರು. ಈ ಸಂದರ್ಭ ಪಿ.ಆರ್.ಒ ಜಯರಾಮ ರಾವ್, ಮನ್ಮಥ ಬಟ್ಟೋಡಿ, ಪೊಲೀಸ್ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.1
- ರಾಜ್ಯಸರ್ಕಾರ ಎಸಿಪಿ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಗಳಿಗೆ ವರ್ಗಾವಣೆ ಅವಧಿಯನ್ನು ondu ವರ್ಷಕ್ಕೆ ನಿಗದಿ ಮಾಡಿ ಆದೇಶ ಹೊರಡಿಸಿದೆ1