Shuru
Apke Nagar Ki App…
ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಹಿರೂರು
Mayur TV Hangal YouTube c
ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಹಿರೂರು
More news from ಕರ್ನಾಟಕ and nearby areas
- Post by Mayur TV Hangal YouTube c1
- ಧಾರವಾಡ: ಆಶಾಗಳ ಸಂಖ್ಯೆಯನ್ನು ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಸೇವೆಯಿಂದ ವಜಾಗೊಳಿಸುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸಲು ವಿಫಲವಾಗಿದೆ. ಏನೇ ಬರಲಿ ಒಗ್ಗಟ್ಟಿರಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಭುವನಾ ಬಳ್ಳಾರಿ, ಮಂಜುಳಾ ಗಾಡಗೋಳಿ, ರಾಜೇಶ್ವರಿ ಕೋರಿ, ನಂದಾ ದೊಡ್ಡಮನಿ, ರೇಣುಕಾ ಹನಸಿ ಸೇರಿದಂತೆ ಇತರರಿದ್ದರು.1
- ಅಳ್ನಾವರ ತಾಲ್ಲೂಕಿನಲ್ಲಿ ಮಂಗಳವಾರ ಸಂಜೆ ಸುರಿದ ಮಳೆಯಲ್ಲಿ ಆಣಿಕಲ್ಲನ್ನು ಆರಿಸುವ ದೃಶ್ಯ ಅಳ್ನಾವರ ತಾಲ್ಲೂಕಿನಲ್ಲಿ ಉತ್ತಮ ಮಳೆ ಅಳ್ನಾವರ: ತಾಲ್ಲೂಕಿನ ಹೊನ್ನಾಪೂರ, ಬೆಣಚಿ, ಕುಂಬಾರಕೊಪ್ಪ, ಕಂಬಾರಗಣವಿ, ಅರವಟಗಿ, ಡೋರಿ ಮುಂತಾದ ಗ್ರಾಮಗಳಲ್ಲಿ ಮಂಗಳವಾರ ಸAಜೆ ಸುಮಾರು ಒಂದು ಗಂಟೆ ಧಾರಾಕಾರ ಮಳೆ ಸುರಿದು ವಾತಾವರಣ ತಂಪಾಗಿಸುವುದರ ಜೊತೆಗೆ ಯುಗಾದಿ ಹಬ್ಬಕ್ಕೆ ಉತ್ತಮ ಮುನ್ನುಡಿ ಬರೆದಿದೆ. ಪಟ್ಟಣದಲ್ಲಿ ಜೋರಾದ ಗಾಳಿ ಬೀಸಿದ ಪ್ರಯುಕ್ತ ಮಳೆ ಹಾರಿ ಹೋಯಿತು. ಆದರೂ ಒಂದು ತಾಸಿಗಿಂತ ಹೆಚ್ಚು ಸಾಧಾರಣ ಮಳೆ ಬಂತು. ಸಂಜೆ ಹೊತ್ತು ವಿದ್ಯುತ್ ಸಂಪರ್ಕ ಇರಲಿಲ್ಲ. ಮಂಗಳವಾರ ಸಂತೆಗೆ ಆಗಮಿಸಿದ ಜನ ಹಾಗೂ ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ಮನೆ ಸೇರಲು ಪರದಾಡಿದರು. ಸಂತೆಗೆ ಬಂದ ಜನ ಅಲ್ಲಲ್ಲಿ ಆಶ್ರಯ ಪಡೆದರು. ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಸ್ಥಗಿತಗೊಂಡಿತ್ತು. ಅಲ್ಪ ಪ್ರಮಾಣದಲ್ಲಿ ಆಣೆಕಲ್ಲು ಬಿತ್ತು. ಮಕ್ಕಳು ಸೇರಿ ಮೊದಲು ಮಳೆಯಲ್ಲಿ ನೆನೆದು ಸಂತಸ ಪಟ್ಟರು. ಬಸ್ ನಿಲ್ದಾಣದ ಜನ ಮಳೆಯಿಂದ ಹೊರಗೆ ಹೋಗದೆ ನಿಲ್ದಾಣದ ಆವರಣದಲ್ಲಿ ಕಾಲ ಕಳೆದರು. ಗುಡುಗು ಮಿಂಚಿನ ಅರ್ಬಟ ಜೋರಾಗಿತ್ತು. ವಿವಿಧಡೆ ಯುಗಾದಿ ಹಬ್ಬದ ತಯಾರಿ ಬರದಿಂದ ನಡೆದಿದೆ. ಯುಗಾದಿಯಂದು ರೈತರು ತಮ್ಮ ಹೊಲದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ, ನಂತರ ಬಿತ್ತನೆಗೆ ಭೂಮಿ ಹದ ಮಾಡಲು ಈ ಮಳೆ ಸಹಕಾರಿಯಾಯಿತು ಎಂದು ಬೆಣಚಿ ಗ್ರಾಮದ ರೈತ ಮಲ್ಲನಗೌಡ ಪಾಟೀಲ ತಿಳಿಸಿದರು. ಕಬ್ಬು ಬೆಳೆಗೆ ಈ ಮಳೆ ಸಂಜೀವಿನಿಯAತೆ ಎಂದು ಕಂಬಾರಗಣವಿ ರೈತ ಅಶೋಕ ಜೋಡಟ್ಟಿ ಹೇಳಿದರು. ಇನ್ನೂ ಸನಿಹದ ಹೊನ್ನಾಪೂರ ಗ್ರಾಮದ ಹೊರ ವಲಯದ ಹಳ್ಳ ತುಂಬಿ ನೀರು ಹರಿದು ಹೋಗಿದೆ ಎಂದು ಶಂಕರ ಕಲಾಜ ತಿಳಿಸಿದರು.3
- #onlinetv24x7 #tumkur #ಶ್ರೀಶನಿಮಹಾತ್ಮ #ಶ್ರೀಶನಿದೇವ #ಶನಿಮಹಾತ್ಮ #ಶ್ರೀಕ್ಷೇತ್ರದೊಂಬರಟ್ಟಿ #ಕುಣಿಗಲ್ #ಶ್ರೀಶನಿಮಹಾತ್ಮ1
- #ವಿರಾಟ್ ಹಿಂದೂ ಸಮಾಜೋತ್ಸವ.1
- gadag jilla Snake Raheman 99164034485
- ಶಿವಮೊಗ್ಗ: ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವಿಚಾರವಾಗಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಇಂದು ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಈದ್ಗಾ ಮೈದಾನದ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮೈದಾನದ ಸ್ವಚ್ಛತೆಗಾಗಿ ಬ್ಯಾರಿಕೇಡ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಾ: 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡು ವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆ ಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಎಸ್ಪಿ ನಿಖಿಲ್ ಬಿ.ಪಾರ್ಕಿಂಗ್ ಸಮಸ್ಯೆ ಯಾಗದಂತೆ ಪಾಲಿಕೆ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗಿದೆ. ಯುಗಾದಿ ಹಬ್ಬದ ಕಾರಣ ಕೆಲಸ ಗಾರರ ಕೊರತೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂಚಿತವಾಗಿ ಸ್ವಚ್ಛತೆ ಆರಂಭಿಸ ಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಶಾಂತಿಯುತವಾಗಿ ಹಬ್ಬ ಆಚರಿಸಲು ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.1
- ಧಾರವಾಡ ಹೊಸ ಯಲ್ಲಾಪೂರದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ ಹೊತ್ತಿಕೊಂಡು ವಿಷಯುಕ್ತ ಹೊಗೆ ಧಾರವಾಡದಲ್ಲಿ ಆವರಿಸಿಕೊಂಡಿತ್ತು. ಈ ಪ್ರಕರಣ ಖಂಡಿಸಿ ಧಾರವಾಡ ನಗರದಲ್ಲಿ ಪರಿಸರಕ್ಕಾಗಿ ನಾವು ಸಂಘಟನೆ ಸದಸ್ಯರು ಧಾರವಾಡ ಜುಬಲಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾಕಾಶಿ ಧಾರವಾಡದ ಕಸ ವಿಲೇವಾರಿ ಸಮಸ್ಯೆ ನಿವಾರಣೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಬೇಕು. ಧಾರವಾಡ ಮಾಲಿನ್ಯ ಮುಕ್ತ ನಗರವಾಗಿ ನಿರ್ಮಾಣ ಮಾಡಲು ಎಲ್ಲರೂ ಸಹಕಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಧಾರವಾಡ ಹೊಸ ಯಲ್ಲಾಪೂರದ ಕಸ ವಿಲೇವಾರಿ ಘಟಕದಿಂದ ಧಾರವಾಡ ಮಹಾನಗರ ಪಾಲಿಕೆ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪರಿಸರಕ್ಕಾಗಿ ನಾವು ಸಂಘಟನೆ ಸದಸ್ಯರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.1