logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಊರ ತುಂಬೆಲ್ಲಾ ದೂಳು ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದಲ್ಲಿ ಸೂಳೆಕೆರೆ ಹೂಳು ತೆಗೆಯುವ ಕಾರ್ಯ ನಡೆಯುತ್ತಿದ್ದು ತುಂಬಾ ಒಳ್ಳೆಯ ವಿಷಯ ಆದರೆ ಕೆರೆಯಲ್ಲಿನ ಮಣ್ಣನ್ನು ರೈತರು ಟಿಪ್ಪರ್ ಮತ್ತು ಟ್ರಾಕ್ಟರ್ ಸಹಾಯದಿಂದ ಸಾಗಿಸುತ್ತಿದ್ದಾರೆ ಅದರಿಂದ ತುಂಬಾ ದೂಳು ಬರುತ್ತಿದೆ ಮತ್ತು ಜೆಸಿಬಿ ಯಂತ್ರಗಳು ಮಣ್ಣನ್ನು ತೆಗೆಯುವಾಗ ಬರುವ ವಿಪರೀತವಾದ ದೂಳು ಪಕ್ಕದ ಜಮೀನಿನ ರೇಷ್ಮೆ ಬೆಳೆಗಾರರಿಗೆ ತುಂಬಾ ನಷ್ಟ ಉಂಟಾಗಿದೆ ಮತ್ತು ಉಸಿರಾಡಲು ಸಾಧ್ಯವಾಗುತ್ತಿಲ್ಲ ಆದುದ್ದರಿಂದ ಸಂಬಂದ ಪಟ್ಟ ಇಲಾಖೆಯವರು ವಿಚಾರಿಸಬೇಕಾಗಿ ಕೇಳಿಕೊಳ್ಳುತ್ತೇನೆ

on 12 March
user_ಮಹೇಶ್ ಗೌಡ ಅಂಬರಹಳ್ಳಿ
ಮಹೇಶ್ ಗೌಡ ಅಂಬರಹಳ್ಳಿ
ಮದ್ದೂರು, ಮಂಡ್ಯ, ಕರ್ನಾಟಕ•
on 12 March

ಊರ ತುಂಬೆಲ್ಲಾ ದೂಳು ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದಲ್ಲಿ ಸೂಳೆಕೆರೆ ಹೂಳು ತೆಗೆಯುವ ಕಾರ್ಯ ನಡೆಯುತ್ತಿದ್ದು ತುಂಬಾ ಒಳ್ಳೆಯ ವಿಷಯ ಆದರೆ ಕೆರೆಯಲ್ಲಿನ ಮಣ್ಣನ್ನು ರೈತರು ಟಿಪ್ಪರ್ ಮತ್ತು ಟ್ರಾಕ್ಟರ್ ಸಹಾಯದಿಂದ ಸಾಗಿಸುತ್ತಿದ್ದಾರೆ ಅದರಿಂದ ತುಂಬಾ ದೂಳು ಬರುತ್ತಿದೆ ಮತ್ತು ಜೆಸಿಬಿ ಯಂತ್ರಗಳು ಮಣ್ಣನ್ನು ತೆಗೆಯುವಾಗ ಬರುವ ವಿಪರೀತವಾದ ದೂಳು ಪಕ್ಕದ ಜಮೀನಿನ ರೇಷ್ಮೆ ಬೆಳೆಗಾರರಿಗೆ ತುಂಬಾ ನಷ್ಟ ಉಂಟಾಗಿದೆ ಮತ್ತು ಉಸಿರಾಡಲು ಸಾಧ್ಯವಾಗುತ್ತಿಲ್ಲ ಆದುದ್ದರಿಂದ ಸಂಬಂದ ಪಟ್ಟ ಇಲಾಖೆಯವರು ವಿಚಾರಿಸಬೇಕಾಗಿ ಕೇಳಿಕೊಳ್ಳುತ್ತೇನೆ

More news from Chamarajanagara and nearby areas
  • ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್‌ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.
    1
    ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್‌ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.
    user_ಎನ್. ನಟರಾಜ್
    ಎನ್. ನಟರಾಜ್
    Kollegal, Chamarajanagara•
    9 hrs ago
  • 135 TH BIRTH ANNIVERSARY OF DR. BR AMBEDKAR SAHEB BY KARNATAKA RASHTRA SAMITI PAKSHA
    1
    135 TH BIRTH ANNIVERSARY OF DR. BR AMBEDKAR SAHEB BY KARNATAKA RASHTRA SAMITI PAKSHA
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    6 hrs ago
  • ಮೈಸೂರಿನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ
    1
    ಮೈಸೂರಿನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    17 hrs ago
  • ಬನ್ನೂರು: ತಾಲೂಕಿನ ಬನ್ನೂರು ಹೋಬಳಿಯ ಬಿ.ಸಿ ಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಹುಚ್ಚಮ್ಮ ದೇವಿಯ ದೊಡ್ಡ ಹಬ್ಬ ಭಕ್ತಿಭಾವ, ಸಂಪ್ರದಾಯ ಮತ್ತು ಗ್ರಾಮೀಣ ಸಂಸ್ಕೃತಿಯ ಸೊಬಗಿನೊಂದಿಗೆ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಹಬ್ಬದ ಪ್ರಮುಖ ಅಂಗವಾಗಿ ಗ್ರಾಮದ ಮಹಿಳೆಯರು 70 ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪವಿತ್ರ ನೀರನ್ನು ತಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಚ್ಚಮ್ಮ ದೇವಿಯ ಉತ್ಸವ ಮೂರ್ತಿಗೆ ಗ್ರಾಮ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ನಾದಸ್ವರ, ಪೂಜಾ ಘೋಷಣೆಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮದೆಲ್ಲೆಡೆ ಭಕ್ತಿಮಯ ವಾತಾವರಣ ನಿರ್ಮಾಣವಾಯಿತು. ದೇವಿಗೆ ಹರಕೆ ತೀರಿಸುವ ಸಲುವಾಗಿ ಭಕ್ತರು ಸ್ವಯಂಪ್ರೇರಿತವಾಗಿ ಸುಮಾರು 500 ಕುರಿಗಳನ್ನು ಸಮರ್ಪಿಸಿದರು. ಪ್ರತಿಯೊಂದು ಕುರಿಯ ಅಂದಾಜು ಬೆಲೆ ₹12,000 ಆಗಿದ್ದು, ಒಟ್ಟು ಮೌಲ್ಯ ಸುಮಾರು ₹60 ಲಕ್ಷ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಕ್ತರು ನೀಡಿದ ಈ ಕುರಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು. ಹಬ್ಬದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಯಿತು. ಭಕ್ತರಿಗಾಗಿ ಸುಮಾರು 12 ಟನ್ ಮಟನ್ ಸಾಂಬಾರ್ ಹಾಗೂ ರಾಗಿ ಮುದ್ದೆ ತಯಾರಿಸಿ 1000 ಕ್ಕೂ ಹೆಚ್ಚು ಜನರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಗ್ರಾಮಸ್ಥರು, ಹಾಗೂ ಮಹಿಳಾ ಯಾರು ಸಹ ಅಡುಗೆ ತಯಾರಿ ಭಾಗವಹಿಸಿ ದ್ದರು. ಅಡುಗೆ ವ್ಯವಸ್ಥೆ ಸುಸೂತ್ರವಾಗಿ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಕತೆ, ಸಹಕಾರ ಮತ್ತು ಭಕ್ತಿಯ ಪ್ರತಿರೂಪ ಕಾಣಿಸಿಕೊಂಡಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ದೇವಿಯ ಆಶೀರ್ವಾದ ಪಡೆದು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಹುಚ್ಚಮ್ಮ ದೇವಿ ಹಬ್ಬ ಗ್ರಾಮೀಣ ಬದುಕಿನ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಸಾರಿತು. ಗ್ರಾಮಸ್ಥರ ಒಗ್ಗಟ್ಟು ಹಾಗೂ ಭಕ್ತರ ಅಪಾರ ಭಕ್ತಿ ಈ ವರ್ಷದ ಹುಚ್ಚಮ್ಮ ದೇವಿ ದೊಡ್ಡ ಹಬ್ಬವನ್ನು ವಿಶೇಷವಾಗಿ ಮೆರಗುಗೊಳಿಸಿತು.
    1
    ಬನ್ನೂರು: ತಾಲೂಕಿನ ಬನ್ನೂರು ಹೋಬಳಿಯ ಬಿ.ಸಿ ಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಹುಚ್ಚಮ್ಮ ದೇವಿಯ ದೊಡ್ಡ ಹಬ್ಬ ಭಕ್ತಿಭಾವ, ಸಂಪ್ರದಾಯ ಮತ್ತು ಗ್ರಾಮೀಣ ಸಂಸ್ಕೃತಿಯ ಸೊಬಗಿನೊಂದಿಗೆ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ಹಬ್ಬದ ಪ್ರಮುಖ ಅಂಗವಾಗಿ ಗ್ರಾಮದ ಮಹಿಳೆಯರು 70 ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪವಿತ್ರ ನೀರನ್ನು ತಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಚ್ಚಮ್ಮ ದೇವಿಯ ಉತ್ಸವ ಮೂರ್ತಿಗೆ ಗ್ರಾಮ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ನಾದಸ್ವರ, ಪೂಜಾ ಘೋಷಣೆಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮದೆಲ್ಲೆಡೆ ಭಕ್ತಿಮಯ ವಾತಾವರಣ ನಿರ್ಮಾಣವಾಯಿತು.
ದೇವಿಗೆ ಹರಕೆ ತೀರಿಸುವ ಸಲುವಾಗಿ ಭಕ್ತರು ಸ್ವಯಂಪ್ರೇರಿತವಾಗಿ ಸುಮಾರು 500 ಕುರಿಗಳನ್ನು ಸಮರ್ಪಿಸಿದರು. ಪ್ರತಿಯೊಂದು ಕುರಿಯ ಅಂದಾಜು ಬೆಲೆ ₹12,000 ಆಗಿದ್ದು, ಒಟ್ಟು ಮೌಲ್ಯ ಸುಮಾರು ₹60 ಲಕ್ಷ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಕ್ತರು ನೀಡಿದ ಈ ಕುರಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು.
ಹಬ್ಬದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಯಿತು. ಭಕ್ತರಿಗಾಗಿ ಸುಮಾರು 12 ಟನ್ ಮಟನ್ ಸಾಂಬಾರ್ ಹಾಗೂ ರಾಗಿ ಮುದ್ದೆ ತಯಾರಿಸಿ 1000 ಕ್ಕೂ ಹೆಚ್ಚು ಜನರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಗ್ರಾಮಸ್ಥರು,  ಹಾಗೂ ಮಹಿಳಾ ಯಾರು ಸಹ ಅಡುಗೆ ತಯಾರಿ ಭಾಗವಹಿಸಿ ದ್ದರು. ಅಡುಗೆ ವ್ಯವಸ್ಥೆ ಸುಸೂತ್ರವಾಗಿ ನಡೆಯಿತು.
ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಕತೆ, ಸಹಕಾರ ಮತ್ತು ಭಕ್ತಿಯ ಪ್ರತಿರೂಪ ಕಾಣಿಸಿಕೊಂಡಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ದೇವಿಯ ಆಶೀರ್ವಾದ ಪಡೆದು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಹುಚ್ಚಮ್ಮ ದೇವಿ ಹಬ್ಬ ಗ್ರಾಮೀಣ ಬದುಕಿನ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಸಾರಿತು.
ಗ್ರಾಮಸ್ಥರ ಒಗ್ಗಟ್ಟು ಹಾಗೂ ಭಕ್ತರ ಅಪಾರ ಭಕ್ತಿ ಈ ವರ್ಷದ ಹುಚ್ಚಮ್ಮ ದೇವಿ ದೊಡ್ಡ ಹಬ್ಬವನ್ನು ವಿಶೇಷವಾಗಿ ಮೆರಗುಗೊಳಿಸಿತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    4 hrs ago
  • ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು. “ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.
    1
    ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು.
“ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    6 hrs ago
  • ​ಹನೂರಿನಲ್ಲಿ ಇಂದು ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ​ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ​ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ: ​ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ​ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ. ​ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ​ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ​ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ​ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ​"ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.. ಈ ಸಂದರ್ಭದಲ್ಲಿ ಅವತಾರ್ ಶಿವ ರೈತ ಸಂಘದ ಯುವ ಸದಸ್ಯರು ಮಾತನಾಡಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೂರು ತಿಂಗಳಿಗೆ ಒಮ್ಮೆ ಸಭೆ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಕಾಡಿನ ಪ್ರಾಮುಖ್ಯತೆ ಹಾಗೂ ರೈತರಿಗೆ ಇದರ ಮಹತ್ವ ತಿಳಿಸಿ ಹಾಗೂ ಕಾಡ್ಗಿಚ್ಚು ಇದರ ಬಗ್ಗೆ ಸಭೆಗಳು ಮಾಡಿಸಿ ರೈತರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
    4
    ​ಹನೂರಿನಲ್ಲಿ ಇಂದು ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
​ಹನೂರು: ತಾಲ್ಲೂಕಿನ ರೈತರು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹನೂರು ಶಾಖೆ) ವತಿಯಿಂದ ಇಂದು (ದಿನಾಂಕ: 15-04-2026) ಬೆಳಿಗ್ಗೆ 10 ಗಂಟೆಗೆ ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.
​ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಹಾಗೂ ಮೌನವಾಗಿರುವ ಅಧಿಕಾರಿಗಳನ್ನು ಎಚ್ಚರಿಸಲು ಈ 'ಬೃಹತ್ ಚಳುವಳಿ'ಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಮುಖವಾಗಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ:
​ಜಲಮೂಲಗಳ ಸಂರಕ್ಷಣೆ: ಗುಂಡಾಲ್ ಜಲಾಶಯದಿಂದ ಹನೂರು ತಾಲ್ಲೂಕಿನ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು.
​ಅಧಿಕಾರಿಗಳ ನಿರ್ಲಕ್ಷ್ಯ: ತಹಶೀಲ್ದಾರ್ ಕಚೇರಿಯಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಬೇಕು ಹಾಗೂ ಸಾಗುವಳಿ ಚೀಟಿ ವಿತರಣೆ, ಪೋಡಿ ವಿಳಂಬ ಮತ್ತು ರಸ್ತೆ ಸೌಕರ್ಯಗಳ ಬಗ್ಗೆ ಅಧಿಕಾರಿಗಳು ತೋರುತ್ತಿರುವ ಬೇಜವಾಬ್ದಾರಿಯನ್ನು ಖಂಡಿಸಲಾಗಿದೆ.
​ಮೂಲಸೌಕರ್ಯ: ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
​ಪಶುಸಂಗೋಪನೆ: ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಿರುವ ಕುರಿ, ಮೇಕೆ ಹಾಗೂ ಜಾನುವಾರುಗಳಿಗೆ ಸೂಕ್ತ ಔಷಧ ಮತ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು.
​ವನ್ಯಜೀವಿ ಸಂಘರ್ಷ: ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ರೈತರ ಮೇಲೆ ನಡೆಯುತ್ತಿರುವ ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು.
​ಯೋಜನೆಗಳ ಅನುಷ್ಠಾನ: ಉಡುತೊರೆಹಳ್ಳದ ನೀರಾವರಿ ಯೋಜನೆಯ ವಿಳಂಬ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.
​"ರೈತರು ಇಂದು ಸಂಕಷ್ಟದಲ್ಲಿದ್ದಾರೆ. ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ," ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ರೈತರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ..
ಈ ಸಂದರ್ಭದಲ್ಲಿ ಅವತಾರ್ ಶಿವ ರೈತ ಸಂಘದ ಯುವ ಸದಸ್ಯರು ಮಾತನಾಡಿ 
ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೂರು ತಿಂಗಳಿಗೆ ಒಮ್ಮೆ ಸಭೆ ಮಾಡಿ ರೈತರು ಹಾಗೂ ಸಾರ್ವಜನಿಕರಿಗೆ ಕಾಡಿನ ಪ್ರಾಮುಖ್ಯತೆ ಹಾಗೂ ರೈತರಿಗೆ ಇದರ ಮಹತ್ವ ತಿಳಿಸಿ ಹಾಗೂ ಕಾಡ್ಗಿಚ್ಚು ಇದರ ಬಗ್ಗೆ ಸಭೆಗಳು ಮಾಡಿಸಿ ರೈತರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    13 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.