Shuru
Apke Nagar Ki App…
ಸಡಗರ ಸಂಭ್ರಮದಿಂದ ಜರುಗಿದ ಬೆಳಗೆರೆ ಶ್ರೀಲಕ್ಷ್ಮಿರಂಗನಾಥ ಬ್ರಹ್ಮರಥೋತ್ಸವ. ಸಾವಿರಾರು ಭಕ್ತರು ಬ್ರಹ್ಮ ರಥೋತ್ಸವದಲ್ಲಿ ಭಾಗಿ.. ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದಲ್ಲಿ ಇಂದು ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಸಡಗರ ಸಂಭ್ರಮದಿಂದ ಜರಗಿತು. ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾಗಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ದರ್ಶನ ಪಡೆದರು. ಬ್ರಹ್ಮರಥವನ್ನು ಎಳೆಯುವುದರು ಮೂಲಕ ತಮ್ಮ ಭಕ್ತಿಯನ್ನ ಸಮರ್ಪಸಿದರು..
Suresh Belagere
ಸಡಗರ ಸಂಭ್ರಮದಿಂದ ಜರುಗಿದ ಬೆಳಗೆರೆ ಶ್ರೀಲಕ್ಷ್ಮಿರಂಗನಾಥ ಬ್ರಹ್ಮರಥೋತ್ಸವ. ಸಾವಿರಾರು ಭಕ್ತರು ಬ್ರಹ್ಮ ರಥೋತ್ಸವದಲ್ಲಿ ಭಾಗಿ.. ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದಲ್ಲಿ ಇಂದು ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಸಡಗರ ಸಂಭ್ರಮದಿಂದ ಜರಗಿತು. ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾಗಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ದರ್ಶನ ಪಡೆದರು. ಬ್ರಹ್ಮರಥವನ್ನು ಎಳೆಯುವುದರು ಮೂಲಕ ತಮ್ಮ ಭಕ್ತಿಯನ್ನ ಸಮರ್ಪಸಿದರು..
More news from ಕರ್ನಾಟಕ and nearby areas
- ಚಿತ್ರದುರ್ಗ: ಅಂತಿಮ ಬಿಎಂಎಸ್ ಮಾಡ್ತಾ ಇದ್ದಂತ ನಿಖಿತಾ, ಕಾಲೇಜಿನಲ್ಲಿ ಹರಡಿದ್ದ ಅನೈತಿಕ ಸಂಬಂಧದ ವಿಚಾರ ಹಾಗೂ ಪ್ರೊಫೇಸರ್ ರಾಜು ಅವರ ಹೆಂಡತಿಯ ಬೈಗುಳದಿಂದ ನೊಂದು ಸಾವನ್ನಪ್ಪಿದ್ದಳು. ಈ ಸಂಬಂಧ ಚಿತ್ತದುರ್ಗದ ಎಸ್ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದ್ದಾರೆ. ನಿನ್ನೆ ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಗ್ರಾಮದಲ್ಲಿರುವ ರಾಘವೇಂದ್ರ ಬಿ.ಎ.ಎಂ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯಾದ ನಿಖಿತಾ ಎಂ.ಯು ಇವರು ತಮ್ಮ ಕಾಲೇಜಿನ ಉಪನ್ಯಾಸಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರಿಂದ ಇಂಟರ್ಶಿಪ್ ಅವಧಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಚಾರಕ್ಕೆ ಸಲಹೆ ಸೂಚನೆಗಳನ್ನು ಪಡೆದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದರು. ಈಗಿರುವಾಗ್ಗೆ ನಿಖಿತಾಳ ಸಹಪಾಠಿಗಳು ಉಪನ್ಯಾಸಕರೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುತ್ತಾಳೆ ಎಂದು ನಿಖಿತಾಳನ್ನು ಅವಮಾನಿಸಿದ್ದಲ್ಲದೇ ಕಾಲೇಜಿನ ಇತರೆ ಸ್ನೇಹಿತರಿಗೆ ಹಾಗೂ ಬೇರೆಯವರಿಗೆ ಅಪಪ್ರಚಾರ ಮಾಡಿ ಚಾರಿತ್ರಿಕ ವಧೆ ಮಾಡಿರುತ್ತಾರೆ. ಉಪನ್ಯಾಸಕನ ಹೆಂಡತಿಯು ಸಹ ನಿಖಿತಾಳ ಮೇಲೆ ಅನುಮಾನಪಟ್ಟಿರುತ್ತಾರೆ. ಇದರಿಂದ ಮನನೊಂದು ನಿಖಿತಾ ನಿನ್ನೆ ಅಂದ್ರೆ 01.04.2026 ರಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆ ಮಧ್ಯೆ ಅವಧಿಯಲ್ಲಿ ತನ್ನ ರೂಮಿನಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಈ ಬಗ್ಗೆ ಮೃತಳ ತಂದೆಯಾದ ಉಮಾಶಂಕರ್ರವರು ತನ್ನ ಮಗಳ ಸಾವಿಗೆ ಸಹಪಾಠಿಗಳು ಮತ್ತು ಉಪನ್ಯಾಸಕನ ಹೆಂಡತಿಯವರೇ ಕಾರಣರಾಗಿರುತ್ತಾರೆ. ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದೇವೆ. ಮೃತಳ ಬಳಿ ಡೆತ್ನೋಟ್ ದೊರೆತ್ತಿದ್ದು, ಈ ಬಗ್ಗೆ ತನಿಖೆ ಮುಂದುವರೆದಿರುತ್ತದೆ ಎಂದು ಪೊಲೀಸ್ ಅಧೀಕ್ಷಕರು ..1
- ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ ,ಕೈದಾಳ ಗ್ರಾಮದಲ್ಲಿ ಅದ್ದೂರಿ ಪ್ರಚಾರ ಆರಂಭಿಸಿದರು. ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... ಈ ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ, ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು ಇದ್ದರೂ1
- "ಬಳ್ಳಾರಿಯಲ್ಲಿ ಆಟೋ ಡ್ರೈವರ್ ಗಳ ಜೀವನ ಏನಾಗಿದೆ ಗೊತ್ತಾ?" "ನಾವು ಹೇಗೆ ಜೀವನ ಸಾಗಿಸೋದು ಸಾರ್? ಇಷ್ಟು ದರ ವ್ಯತ್ಯಾಸ ಯಾಕೆ?" "ಗಾಂಧಿನಗರದಲ್ಲಿ ಆಟೋ ಗ್ಯಾಸ್ ದರ ₹93.54… MG ರೋಡ್ ನಲ್ಲಿ ₹84.10…" ಬಳ್ಳಾರಿಯಲ್ಲಿ ಒಂದೇ ನಗರದಲ್ಲಿ ಎರಡು ಗ್ಯಾಸ್ ದರ! 😡 ಆಟೋ ಡ್ರೈವರ್ ಗಳ ಬದುಕು ಸಂಕಷ್ಟದಲ್ಲಿದೆ. ಇದಕ್ಕೆ ಯಾರು ಉತ್ತರ ಕೊಡ್ತಾರೆ? "ಇಂಧನ ದರ ಏರಿದ್ರೆ… ಆಟೋ ಭಾಡಿಗೆ ಏರಿಸೋಕೆ ಆಗಲ್ಲ… ಜನ ಬೈತಾರೆ… ಸರ್ಕಾರ ಕೇಳ್ತಾ ಇಲ್ಲ…" "ಈ ವಿಡಿಯೋ share ಮಾಡಿ… ನಮ್ಮ ಧ್ವನಿ ಸರ್ಕಾರದವರೆಗೆ ತಲುಪಿಸೋಣ!"1
- Post by Mayur TV Hangal YouTube c1
- ಶಿಗ್ಗಾವಿ: ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಬೇಕಾದರೆ ಕ್ರೀಡೆಯಲ್ಲಿ ಸೋಲು, ಗೆಲುವುಗಳು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಭಾಜಪ ಯುವ ಮುಖಂಡ ಭರತ್ ಬೊಮ್ಮಾಯಿ ಹೇಳಿದರು ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಭರತ ಬೊಮ್ಮಾಯಿ ಕ್ರಿಕೆಟ್ ಟ್ರೋಫಿ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದ ಅವರು ದುಶ್ಚಟಗಳಿಗೆ ಬಲಿಯಾಗದೇ ಯುವಕರನ್ನು ಕ್ರೀಡೆಗಳತ್ತ ಸೆಳೆದು ಸದೃಢ ಆರೋಗ್ಯ ಹೊಂದಲು ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಲು ನಮ್ಮನ್ನು ನಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಭರತ ಬೊಮ್ಮಾಯಿ ಟ್ರೋಫಿ ಕ್ರಿಕೇಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಸ್ವಸ್ತಿಕ ಕ್ರಿಕೇಟ್ ಕ್ಲಬ್ ಶಿಗ್ಗಾವಿ ತಂಡಕ್ಕೆ ೭೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಹಾಗೂ ದ್ವಿತೀಯ ಸ್ಥಾನ ಪಡೆದ ವನಹಳ್ಳಿ ಅಪ್ಪು ಬಾಯ್ಸ್ ಕ್ರಿಕೆಟ್ ಕ್ಲಬ್ ತಂಡಕ್ಕೆ ೪೦ ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಅಲ್ಲದೇ ವೈಯಕ್ತಿಕ ಬಹುಮಾನ ಮತ್ತು ಪ್ರಶಸ್ತಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ. ಸಂಕನೂರ, ವಿಶ್ವನಾಥ ಹರವಿ, ಅನಿಲ ಸಾತಣ್ಣವರ, ಆನಂದ ಸುಭೇದಾರ, ಮಂಜುನಾಥ ಬ್ಯಾಹಟ್ಟಿ, ಉಮೇಶ ಅಂಗಡಿ, ರೇಣುಕನಗೌಡ ಪಾಟೀಲ, ಸಚಿನ ಮಡಿವಾಳರ, ಚೇತನ ಕಲಾಲ, ಸಂತೋಷ ಸುಭೇದಾರ ಸೇರಿದಂತೆ ಕ್ರೀಡಾಭಿಮಾನಿಗಳು, ಭರತ ಬೊಮ್ಮಾಯಿ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.1
- ಸಡಗರ ಸಂಭ್ರಮದಿಂದ ಶ್ರೀ ಕೋದಂಡ ರಾಮಸ್ವಾಮಿ ಬ್ರಹ್ಮರಥೋತ್ಸವ ಬಾಗೇಪಲ್ಲಿ:- ತಾಲ್ಲೂಕಿನ ಪಾತಪಾಳ್ಯ ಗ್ರಾಮದ ಕೋದಂಡ ರಾಮಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ಸಡಗರ ಸಂಭ್ರಮದಿಂದ ನಡೆಯಿತು. ಪಾತಪಾಳ್ಯ ಗ್ರಾಮದ ಪಿ.ಆರ್.ರಾಧಕೃಷ್ಣ ಹಾಗೂ ಗ್ರಾಮದ ಪ್ರಮುಖರು ಹಾಗೂ ಪ್ರಧಾನ ಅರ್ಚಕರಾದ ಎಂ.ಎಸ್.ಶ್ರೀರಾಮನ್ ರಥೋತ್ಸವಕ್ಕೆ ಚಾಲನೆ ನೀಡಿದರು. ರಥಕ್ಕೆ ಧವನ, ಹೂವು, ಬಾಳೆಹಣ್ಣನ್ನು ಎಸೆದ ಭಕ್ತಾದಿಗಳು ಹರಕೆ ತೀರಿಸಿಕೊಂಡರು. ರಥೋತ್ಸವ ಸಲುವಾಗಿ ಗುರುವಾರ ಬೆಳಿಗ್ಗೆಯಿಂದಲೇ ಕೋದಂಡ ರಾಮಸ್ವಾಮಿ ಗೆ ವಿವಿಧ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಮೂಲ ದೇವರಿಗೆ ಪಂಚಾಮೃತ ಅಭಿಷೇಕ, ಹೋಮ, ವೇದ, ಉಪನಿಷತ್ತುಗಳ ಮಂತ್ರಗಳ ಘೋಷಣೆ ಮೊಳಗಿದವು. ವಿವಿಧ ಹೂವುಗಳಿಂದ ಅಲಂಕಾರಗೊಳಿಸಿದ್ದ ಕೋದಂಡ ರಾಮಸ್ವಾಮಿ ಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿ ರಥಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಕಿಕ್ಕಿರಿದು ನೆರದಿದ್ದ ಭಕ್ತರು ಹೂ, ಬಾಳೆ ಹಣ್ಣನ್ನು ರಥಕ್ಕೆ ಎಸೆದು ಧನ್ಯರಾದರು. ಸ್ಥಳೀಯ ಹಾಗೂ ಸುತ್ತ-ಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತಾದಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ವಿವಿಧ ಸಂಘ–ಸಂಸ್ಥೆಗಳಿಂದ ಭಕ್ತಾದಿಗಳಿಗಾಗಿ ಕೋಸಂಬರಿ, ಮಜ್ಜಿಗೆ, ಪಾನಕ, ನೀರಿನ ಪಾಕೆಟ್, ಪ್ರಸಾದ ಹಾಗೂ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ, ವೆಂಕಟೇಶ, ಎಸ್.ಎನ್.ರಾಮರೆಡ್ಡಿ,ಎಂ.ಗೋಪಾಲ್,ಮದ್ದಿರೆಡ್ಡಿ,ಭೈಯಪ್ಪ ರೆಡ್ಡಿ, ಸಿ.ಎನ್.ಭಾರತಿ,ಹರೀಶ್, ಮಂಜುನಾಥ್, ರಾಮನಾಥ, ಪವನ್ ಕುಮಾರ್, ಹಾಗೂ ವಿವಿಧ ಗ್ರಾಮಗಳ ಮುಖಂಡರು ಹಾಜರಿದ್ದರು.2
- ಮಾಗಡಿ : ಕೆಂಪೇಗೌಡ ಪ್ರತಿಮೆ ಸ್ಥಳಾಂತರ ವಿಚಾರದಲ್ಲಿ ಕುಚೋದ್ಯನೇ, ಗಲಭೆ, ಪ್ರಚೋದನೆ ಸೃಷ್ಠಿಸಬಾರದು ಇದರಿಂದ ಶಾಂತಿ ಹದೆಗೆಡುತ್ತದೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಎಚ್.ಎಂ.ಕೃಷ್ಣಮೂರ್ತಿಗೆ ತಿರುಗೇಟ್ ನೀಡಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರ ಆರೋಗ್ಯ ದೃಷ್ಠಿಯಿಂದ 42 ಕೋಟಿರೂ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲ್ಲಿ ಪೂಜೆ ನೆರವೇರಿಸಲಾಗಿದೆ ಟೆಂಡರ್ ಪ್ರಕ್ರಿಯೆಯೂ ಆಗಿದ್ದು ಜಾಗವನ್ನು ಬಿಟ್ಟುಕೊಡಬೇಕಿದೆ ಆಸ್ಪತ್ರೆ ನಿರ್ಮಾಣದ ಜಾಗದಲ್ಲಿ ಕೆಂಪೇಗೌಡ ಪ್ರತಿಮೆ ಇದ್ದು ಈ ಪ್ರತಿಮೆಯನ್ನು ತೆರವುಗೊಳಿಸದಂತೆ ಎಚ್.ಎಂ.ಕೃಷ್ಣಮೂರ್ತಿ ಹೈಕೋರ್ಟ್ ಮೊರೆಹೊಗಿದ್ದು ಪ್ರತಿಮೆ ಗೆ ಧಕ್ಕೆ ಆಗದಂತೆ ಸ್ಥಳಾಂತರಿಸಲು ಹೈಕೋರ್ಟ್ ಸೂಚಿಸಿದಂತೆ ಸ್ಥಳಾಂತರಿಸಲು ಮೆಟ್ಟಿಲು ತೆರವುಗೊಳಿಸುವುದಕ್ಕೆ ಇಲ್ಲಸಲ್ಲದ ಆರೋಪಮಾಡುವುದು ಸರಿಯಲ್ಲ, ಕಾನೂನಾತ್ಮಕವಾಗಿ ಮರಗಳನ್ನು ತೆರವುಗೊಳಿಸಿ ಎಂದು ಆದೇಶವಿದೆ ಒರೆತು ಸ್ಟೇ ನೀಡಿಲ್ಲ ಎಂದರು. ಈಗಿರುವ ಪ್ರತಿಮೆಗೆ ಯಾವುದೇ ಧಕ್ಕೆ ಬಾರದಂತೆ ಪೂರ್ವಾಭಿಮುಖದಿಂದ ಉತ್ತರಾಭಿ ಮುಖವಾಗಿ ಸ್ಥಾಪಿಸಲಾಗುವುದು ಎಂದರು. ಶ್ರೀಮಂತರು ನಗರ ಪ್ರದೇಶದ ಆಸ್ಪತ್ರೆಗೆ ಹೋಗುತ್ತಾರೆ ಶ್ರೀಸಾಮಾನ್ಯರು ಎಲ್ಲಿಗೆ ಹೋಗಲು ಸಾಧ್ಯ, ಶಾಸಕರು ಮನೆ ನಿರ್ಮಿಸುತ್ತಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಆಸ್ಪತ್ರೆ ನಿರ್ಮಾಣವಾದ ನಂತರ ಶಾಸಕರ ಸಂಬಂಧಿಕರು ಚಿಕಿತ್ಸೆಪಡೆಯಲು ಬರುವುದಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಲಿ ಅಡೆ,ತಡೆಹೊಡ್ಡುವುದು, ಜನರಿಗೆ ಧಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಬೇಡ ಎಂದು ಕೆಂಪೇಗೌಡ ಅಭಿವೃದ್ದಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣನಮೂರ್ತಿಗೆ ಮನವಿ ಮಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಭವನ ಶಿಥಿಲವಾದ ಕಾರಣ ತರವುಗೊಳಿಸಿ ಹೊಸ ಭವನ ನಿರ್ಮಾಣಮಾಡಲಾಗುತ್ತಿದೆ. ಸರಕಾರಿ ಇಲಾಖೆಗಳನ್ನು ತೆರವುಗೊಳಿಸಿ ಶಾಸಕರ ಕಿಸೆಸೇರುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ, 2018ರಲ್ಲಿ ಕೋಟೆ ಜಾಗ ಕೆಶಿಫ್ ರಸ್ತೆಗೆ ಭೂಸ್ವಾಧಿನವಾಗಿದೆ ಈ ಹಣ ಸೋಮೇಶ್ವರ ದೇವಾಲಯದ ಖಾತೆಗೆ 70 ಲಕ್ಷರೂ ಜಮೆಯಾಗಿದೆ ಆ ವೇಳೆ ಎಚ್.ಸಿ.ಬಾಲಕೃಷ್ಣ ಶಾಸಕರಾಗಿರಲಿಲ್ಲ ಈ ಹಣ ಎಲ್ಲಿದೆ ಎಂದು ಖಚಿತಪಡಿಸಿಕೊಳ್ಳುವುದನ್ನು ಬಿಟ್ಟು ಶಾಸಕರ ವಿರುದ್ದ ಆರೋಪಮಾಡುವುದು ಸರಿಯಲ್ಲ ಎಂದು ಲೇವಡಿ ಮಾಡಿದರು. ಆಸ್ಪತ್ರೆ ಕಾಮಗಾರಿ ಇನ್ನೂ ಆರಂಭಿಸಿಲ್ಲ ಈಗಿರುವಾಗ ಎರಡು ವರ್ಷದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ ಎನ್ನುತ್ತಾರೆ ಅವರಿಗೆ ಕಳಕಳಿ ಇದ್ದರೆ ಕಾಮಗಾರಿ ನಡೆಯುವ ವೇಳೆ ವೀಕ್ಷಿಸಲಿ ಅದನ್ನು ಬಿಟ್ಟು ಬಿಟ್ಟು ಇಲ್ಲಸಲ್ಲದ ಆರೋಪಮಾಡುವುದು ಎಷ್ಟು ಸರಿ. ಅಭಿವೃದ್ದಿ ವಿಚಾರದಲ್ಲಿ ಚರ್ಚೆಗೆ ಬರಲಿ ಚರ್ಚೆಗೆ ನಾವು ಸಿದ್ದರಿದ್ದೇವೆ ದಿನಾಂಕ, ಸ್ಥಳ, ಸಮಯ ನಿಗಧಿಪಡಿಸಿ ಎಂದು ಸವಾಲು ಹಾಕಿದರು. ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು ಮಾತನಾಡಿ, ಎಚ್.ಎಂ.ಕೃಷ್ಣಮೂರ್ತಿ ಅಭಿವೃದ್ದಿ ವಿಚಾರದಲ್ಲಿ ಚರ್ಚಿಸಲಿ ಅದನ್ನು ಬಿಟ್ಟು ಶಾಸಕರ ಬಗ್ಗೆ ಅಗುರವಾಗಿ, ಏಕವಚನದಲ್ಲಿ ಮಾತನಾಡಿದರೆ ತಕ್ಕಪಾಠ ಕಲಿಸಲಾಗುವುದು, ಅಭಿವೃದ್ದಿಗೆ ಸಹಕಾರ ನೀಡಲಿ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡದೆ ಆಸ್ಪತ್ರೆ ನಿರ್ಮಾಣಕ್ಕೆ ವಿರೊಧಿಸುವುದು ಸರಿಯಲ್ಲ ಇದು ಸಾರ್ವಜನಿಕರ ಸ್ವತ್ತು. ಕಾನೂನಾತ್ಮಕವಾಗಿಯೇ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕರು ಮುಂದಾಗಿದ್ದಾರೆ ಜೇಡ್ರಹಳ್ಳಿ ಕೃಷ್ಣಪ್ಪ, ಮರೂರು ಸಾಗರ್ ಗೌಡ ಮಾಗಡಿ ಸರಕಾರಿ ಆಸ್ಪತ್ರೆಯಲ್ಲಿ ಎಷ್ಟು ದಿನ ಚಿಕಿತ್ಸೆ ಪಡೆದಿದ್ದಾರೆ ತಿಳಿಸಲಿ ಆಸ್ಪತ್ರೆ ನಿರ್ಮಾಣದ ವಿಚಾರದಲ್ಲಿ ಮಾತನಾಡಲು ಇವರಿಗೆ ಹಕ್ಕಿಲ್ಲ ಎಂದು ಲೇವಡಿ ಮಾಡಿದರು. ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಕೆಂಪೇಗೌಡರ ಬಗ್ಗೆ ಎಲ್ಲರಿಗೂ ಅಭಿಮಾನ, ಗೌರವವಿದೆ ಅದರಂತೆ ಆಸ್ಪತ್ರೆಯೂ ಪ್ರಮುಖವಾಗಿದೆ ಯಾವುದೇ ಧಕ್ಕೆ ಬಾರದಂತೆ ಪ್ರತಿಮೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆ ನಿರ್ಮಾಣಕ್ಕೆ ಯಾರು ಅಡ್ಡಿಪಡಿಸಬಾರದು. 100 ಕೋಟಿರೂ ವೆಚ್ಚದಲ್ಲಿ ಕೋಟೆ ಅಭಿವೃದ್ದಿಪಡಿಸಿ ಮಧ್ಯದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಉದ್ದೇಶವಿದೆ, ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ಯೂನಿವರ್ ಸಿಟಿ ಆಗುತ್ತಿರುವುದರಿಂದ ಮಾಗಡಿಯಲ್ಲಿ ಸುಸರ್ಜಿತ ಆಸ್ಪತ್ರೆ ನಿರ್ಮಾಣವಾಗುವುದರಿಂದ ನುರಿತ ವೈದ್ಯರು ಬರಲಿದ್ದಾರೆ ಇದರಿಂದ ಬಡವರಿಗೆ ಉತ್ತಮ ಆರೋಗ್ಯ ಸೇವೆ ಸಲ್ಲಿಸಬಹುದು ಅಭಿವೃದ್ದಿಗೆ ಕಾಲು ಏಳೆಯದೆ ಕೈಜೋಡಿಸಿ ಎಂದು ಮನವಿ ಮಾಡಿದರು. ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಗ್ರೋಪುರುಷೋತ್ತಮ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಕಲ್ಕೆರೆ ಶಿವಣ್ಣ, ಪುರಸಭೆ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಮಾಜಿ ಸದಸ್ಯರಾದ ರೂಪೇಶ್, ಆಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ರಮೇಶ್, ದೊಡ್ಡಿ ಲೋಕೇಶ್, ತಿರುಮಲೆ ವೆಂಕಟೇಶ್ ಇದ್ದರು.3
- ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದಲ್ಲಿ ಇಂದು ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಸಡಗರ ಸಂಭ್ರಮದಿಂದ ಜರಗಿತು. ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾಗಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ದರ್ಶನ ಪಡೆದರು. ಬ್ರಹ್ಮರಥವನ್ನು ಎಳೆಯುವುದರು ಮೂಲಕ ತಮ್ಮ ಭಕ್ತಿಯನ್ನ ಸಮರ್ಪಸಿದರು..1