logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದನ ಕಳ್ಳತನಕ್ಕೆ ಸಂಬಂಧಿಸಿದಂತೆ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ವಿಟ್ಲ ಪೊಲೀಸ್‌ ಠಾಣಾ ಸರಹದ್ದಿನ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 4 ದನಗಳು ಕಳ್ಳತನ ಆಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ದಿನಾಂಕ:08-01-2026 ರಂದು ಪ್ರಕರಣದ ಆರೋಪಿಯಾದ ಝುಲ್ಫಾನ್ ಮಾಲಿಕ್ ಉಳ್ಳಾಲ್ ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

2 days ago
user_Shamsheer Budoli
Shamsheer Budoli
Journalist Dakshina Kannada, Karnataka•
2 days ago
260924d6-5a8d-4a94-a935-8f84f2a88c88

ದನ ಕಳ್ಳತನಕ್ಕೆ ಸಂಬಂಧಿಸಿದಂತೆ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ವಿಟ್ಲ ಪೊಲೀಸ್‌ ಠಾಣಾ ಸರಹದ್ದಿನ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 4 ದನಗಳು ಕಳ್ಳತನ ಆಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ದಿನಾಂಕ:08-01-2026 ರಂದು ಪ್ರಕರಣದ ಆರೋಪಿಯಾದ ಝುಲ್ಫಾನ್ ಮಾಲಿಕ್ ಉಳ್ಳಾಲ್ ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

More news from Karnataka and nearby areas
  • Post by AAJ KI DASTAK NEWS KARNATAKA
    1
    Post by AAJ KI DASTAK NEWS KARNATAKA
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    Journalist Mysuru, Karnataka•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..
    1
    ಗದಗ ನ್ಯೂಸ್ 
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ
ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ.
ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ..
ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ.
ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ.
ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ.
ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ..
ನಿಧಿಯನ್ನು ವಶಕ್ಕೆ  ಪೋಲೀಸರು  ವಶಕ್ಕೆ ಪಡೆದಿದ್ದಾರೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    36 min ago
  • "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    1
    "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಯತ್ತಂಬಾಡಿ ಪ್ರಾಥಮಿಕ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆ ಮಾಡುವ ಗುರಿ ನಮ್ಮದು , ಉದ್ಯಮಿ ಹೇಮಂತ್. ಹಲಗೂರು:- ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಿದ್ದೇವೆ .ಯತ್ತಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಜಿಲ್ಲೆ ಯಲ್ಲೇ ಅಲ್ಲ ರಾಜ್ಯದಲ್ಲೇ ನಾನು ಮತ್ತು ನಮ್ಮ ಸ್ನೇಹಿತರು ಸೇರಿ ಮಾದರಿ ಶಾಲೆಯನ್ನಾಗಿ ಮಾಡುವ ಗುರಿಯನ್ನಾಗಿ ಇಟ್ಟುಕೊಂಡಿದ್ದೇವೆ .ಎಂದು ಬೆಂಗಳೂರಿನ ಉದ್ಯಮಿ ಹೇಮಂತ್ ತಿಳಿಸಿದರು. ಸಮೀಪದ ಯತ್ತಂಬಾಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಎಂಬ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಈಗ ಸರ್ಕಾರಿ ಶಾಲೆ ಎಂದರೆ ಅದು ಸರ್ಕಾರಕ್ಕೆ ಸೇರಿದ ಶಾಲೆ, ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರ ,ಜೆಡಿಎಸ್ ಸರ್ಕಾರ ಎಂಬ ಭಾವನೆ ಇದೆ. ಇದನ್ನೆಲ್ಲಾ ಹೊರತುಪಡಿಸಿ ಈ ಶಾಲೆ ನಮ್ಮ ಶಾಲೆ ,ನಮ್ಮೆಲ್ಲರ ಶಾಲೆ ಎಂಬ ಗೌರವ ನಮ್ಮಲ್ಲಿ ಬೆಳೆಯಬೇಕು. ಜಯರಾಮು ರವರ ಮೂಲಕ ನಾವು ಈ ಊರಿಗೆ ಕಾಲಿಟ್ಟಿದ್ದೇವೆ ಈ ಊರಿಗೂ ನಮಗೂ ಒಂದು ಋಣಾನುಬಂಧ ಬೆಳೆದಿದೆ .ಈ ಶಾಲೆಯಲ್ಲಿ ನಮಗೊಂದು ಸ್ಥಾನ ಸಿಕ್ಕಿದೆ ಅದು ಉಳಿಯಬೇಕಿದ್ದರೆ ಈ ಶಾಲೆ ಅತ್ಯುನ್ನತ ಮಟ್ಟಕ್ಕೆ ತಲುಪಬೇಕಾದರೆ ಏನೇನುಅಗತ್ಯವಿದೆ ಅದನ್ನೆಲ್ಲ ನಾವು ಪೂರೈಸಲು ಸಿದ್ಧರಿದ್ದೇವೆ. ನಮ್ಮ ಸಂಪಾದನೆಯ ಒಂದು ಭಾಗವನ್ನು ಮೀಸಲಿಟ್ಟುಈ ಶಾಲೆಯನ್ನು ಜಿಲ್ಲೆಯಲ್ಲಿ ಅತ್ಯುತ್ತಮ ಶಾಲೆಯಾಗಿಮಾಡಲು ನನ್ನ ಸ್ನೇಹಿತರ ಸಹಕಾರ ಇದೆ ಎಂಬ ಭಾವನೆಯಿಂದ ಮಾತು ಕೊಡುತ್ತೇನೆ. ಪೋಷಕರೆ ನಿಮ್ಮ ಸಹಕಾರ ನಿಮ್ಮ ಮಕ್ಕಳಿಗೆ ಇರಲಿ, ಗುರುಗಳಿಗೂ ಇರಲಿ ಈ ಮಕ್ಕಳನ್ನು ಉನ್ನತ ಮಟ್ಟದಲ್ಲಿ ನೋಡಲು ಬಯಸುತ್ತೇವೆ. ಇತರ ಶಾಲೆಗಳಿಗೂ ಇದು ಒಂದು ಮಾದರಿ ಶಾಲೆ ಆಗಬೇಕು ಹಾಗೆ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಮತ್ತೋರ್ವ ಉದ್ದಮಿ, ಜಯ ರಾಮು ಮಾತನಾಡುತ್ತಾ, ಹಳ್ಳಿಯಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿ ಬಂದಿದೆ ,ಅಂತಹ ಸಂದರ್ಭದಲ್ಲಿ ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆ ತುಂಬಿಸಿಕೊಳ್ಳುವ ಸುಗ್ಗಿ ಹಬ್ಬಸಂಕ್ರಾಂತಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ನಮ್ಮ ಕಣ್ಮನ ತುಂಬಿಸಿದ ಇಲ್ಲಿಯ ಶಿಕ್ಷಕ ವೃಂದ ಮತ್ತು ಮಕ್ಕಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಹಳ್ಳಿಯ ಶಾಲೆಗಳಲ್ಲಿ ಓದಿ ವಿದ್ಯಾವಂತರಾಗಿ ಪಟ್ಟಣಗಳಲ್ಲಿ ಉದ್ಯೋಗ ನಿಮಿತ್ತ ಒತ್ತಡದ ಜೀವನ ನಡೆಸುತ್ತಿರುವ ನನ್ನ ಕುಟುಂಬದವರು ಮತ್ತು ಸಹೋದ್ಯೋಗಿಗಳನ್ನು ಕರೆತಂದು ಇಲ್ಲಿ ಸಮಯ ಕಳೆದದ್ದಕ್ಕೆ ಅವರಿಗೂ ಧನ್ಯವಾದಗಳು. ದೂರದ ಬೆಟ್ಟ ನುಣ್ಣಗೆ ಎಂದು ಪೋಷಕರು ತಮ್ಮ ಮಕ್ಕಳನ್ನು ಹಳ್ಳಿ ಶಾಲೆ ಬಿಟ್ಟು ಪಟ್ಟಣದ ಆಂಗ್ಲ ಮಾಧ್ಯಮದ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಹಳ್ಳಿ ಶಾಲೆಗಳು ಮುಚ್ಚಲ್ಪಡುತ್ತಿವೆ ಆದುದರಿಂದ ನಾವು ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೈಜೋಡಿಸೋಣ ಎಂದರು. ಶಾಲೆಯ ಮೈದಾನದಲ್ಲಿ ನಿರ್ಮಿಸಲ್ಪಟ್ಟ ಧಾನ್ಯಗಳ ಒಕ್ಕಣೆಯ ಕಣ, ಹೂವಿನಿಂದ ಅಲಂಕರಿಸಿದಧಾನ್ಯಗಳ ರಾಶಿ, ರಟ್ಟಿನಲ್ಲಿ ನಿರ್ಮಿಸಲಾದ ಹಳ್ಳಿಮನೆ, ನೀರು ಸೇದುವ ಬಾವಿ, ಎತ್ತಿನ ಬಂಡಿ ,ಒಣ ಹುಲ್ಲಿನ ಮೆದೆ, ಮೊರಗಳಲ್ಲಿ ತುಂಬಿಟ್ಟ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು, ಹೆಂಗಸು ಮತ್ತುಗಂಡಸಿನ ಚಿತ್ರವನ್ನು ಬಿಡಿಸಿರುವ ಮಡಿಕೆಗಳು, ಪಕ್ಷಿಗಳಿಂದ ಧಾನ್ಯವನ್ನು ಸಂರಕ್ಷಿಸಲು ಹೊಲಗಳಲ್ಲಿರಿಸುವ ಬೆದರು ಬೊಂಬೆಗಳು,ಎಳ್ಳು ಬೆಲ್ಲ ಕೊಬ್ಬರಿ ಮಿಶ್ರಣ, ಪೂಜಾ ಸಾಮಗ್ರಿಗಳು ಒಟ್ಟಾರೆ ಶಾಲೆಯ ಆವರಣ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುತ್ತಿತ್ತು. ಇದೇ ಸಂದರ್ಭದಲ್ಲಿ ಯತ್ತಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ, ಪುಟ್ಟಸ್ವಾಮಾಚಾರಿ, ಸಿ ಆರ್. ಪಿ .ಶಿಕ್ಷಕ ರೇವಣ್ಣ ಹಾಗೂ ಬೆಂಗಳೂರಿನ ಉದ್ಯಮಿಗಳಾದ ಜಯರಾಮು ಶಿವಕುಮಾರ್, ವೀರಣ್ಣ, ಹೇಮಂತ್ ಮತ್ತು ಇತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಸೇರದಂತೆ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಸೋಮಶೇಖರ್, ಶಿವಲಿಂಗೇಗೌಡ, ಕೆಂಚೇಗೌಡ, ಕೆಂಪೇಗೌಡ, ಕೆಂಪರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು. ಯತ್ತಂಬಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು.
    1
    ಯತ್ತಂಬಾಡಿ ಪ್ರಾಥಮಿಕ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆ ಮಾಡುವ ಗುರಿ ನಮ್ಮದು , ಉದ್ಯಮಿ ಹೇಮಂತ್.
ಹಲಗೂರು:- ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಿದ್ದೇವೆ .ಯತ್ತಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಜಿಲ್ಲೆ ಯಲ್ಲೇ ಅಲ್ಲ ರಾಜ್ಯದಲ್ಲೇ ನಾನು ಮತ್ತು ನಮ್ಮ ಸ್ನೇಹಿತರು ಸೇರಿ
ಮಾದರಿ ಶಾಲೆಯನ್ನಾಗಿ ಮಾಡುವ ಗುರಿಯನ್ನಾಗಿ ಇಟ್ಟುಕೊಂಡಿದ್ದೇವೆ .ಎಂದು ಬೆಂಗಳೂರಿನ ಉದ್ಯಮಿ ಹೇಮಂತ್ ತಿಳಿಸಿದರು.
ಸಮೀಪದ ಯತ್ತಂಬಾಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಎಂಬ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ,
ಈಗ ಸರ್ಕಾರಿ ಶಾಲೆ ಎಂದರೆ ಅದು ಸರ್ಕಾರಕ್ಕೆ ಸೇರಿದ ಶಾಲೆ, ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರ ,ಜೆಡಿಎಸ್ ಸರ್ಕಾರ ಎಂಬ ಭಾವನೆ ಇದೆ. ಇದನ್ನೆಲ್ಲಾ ಹೊರತುಪಡಿಸಿ ಈ ಶಾಲೆ ನಮ್ಮ ಶಾಲೆ ,ನಮ್ಮೆಲ್ಲರ ಶಾಲೆ ಎಂಬ ಗೌರವ ನಮ್ಮಲ್ಲಿ ಬೆಳೆಯಬೇಕು. ಜಯರಾಮು ರವರ ಮೂಲಕ ನಾವು ಈ ಊರಿಗೆ ಕಾಲಿಟ್ಟಿದ್ದೇವೆ ಈ ಊರಿಗೂ ನಮಗೂ ಒಂದು ಋಣಾನುಬಂಧ ಬೆಳೆದಿದೆ .ಈ ಶಾಲೆಯಲ್ಲಿ ನಮಗೊಂದು ಸ್ಥಾನ ಸಿಕ್ಕಿದೆ ಅದು ಉಳಿಯಬೇಕಿದ್ದರೆ ಈ ಶಾಲೆ ಅತ್ಯುನ್ನತ ಮಟ್ಟಕ್ಕೆ ತಲುಪಬೇಕಾದರೆ ಏನೇನುಅಗತ್ಯವಿದೆ ಅದನ್ನೆಲ್ಲ ನಾವು ಪೂರೈಸಲು ಸಿದ್ಧರಿದ್ದೇವೆ. ನಮ್ಮ ಸಂಪಾದನೆಯ ಒಂದು ಭಾಗವನ್ನು ಮೀಸಲಿಟ್ಟುಈ ಶಾಲೆಯನ್ನು ಜಿಲ್ಲೆಯಲ್ಲಿ ಅತ್ಯುತ್ತಮ ಶಾಲೆಯಾಗಿಮಾಡಲು ನನ್ನ ಸ್ನೇಹಿತರ ಸಹಕಾರ ಇದೆ ಎಂಬ ಭಾವನೆಯಿಂದ ಮಾತು ಕೊಡುತ್ತೇನೆ. ಪೋಷಕರೆ ನಿಮ್ಮ ಸಹಕಾರ ನಿಮ್ಮ ಮಕ್ಕಳಿಗೆ ಇರಲಿ, ಗುರುಗಳಿಗೂ ಇರಲಿ ಈ ಮಕ್ಕಳನ್ನು ಉನ್ನತ ಮಟ್ಟದಲ್ಲಿ ನೋಡಲು ಬಯಸುತ್ತೇವೆ. ಇತರ ಶಾಲೆಗಳಿಗೂ ಇದು ಒಂದು ಮಾದರಿ ಶಾಲೆ ಆಗಬೇಕು ಹಾಗೆ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಮತ್ತೋರ್ವ ಉದ್ದಮಿ, ಜಯ ರಾಮು ಮಾತನಾಡುತ್ತಾ,
ಹಳ್ಳಿಯಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿ ಬಂದಿದೆ ,ಅಂತಹ ಸಂದರ್ಭದಲ್ಲಿ ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆ ತುಂಬಿಸಿಕೊಳ್ಳುವ ಸುಗ್ಗಿ ಹಬ್ಬಸಂಕ್ರಾಂತಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ನಮ್ಮ ಕಣ್ಮನ ತುಂಬಿಸಿದ ಇಲ್ಲಿಯ ಶಿಕ್ಷಕ ವೃಂದ ಮತ್ತು ಮಕ್ಕಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಹಳ್ಳಿಯ ಶಾಲೆಗಳಲ್ಲಿ ಓದಿ ವಿದ್ಯಾವಂತರಾಗಿ ಪಟ್ಟಣಗಳಲ್ಲಿ ಉದ್ಯೋಗ ನಿಮಿತ್ತ ಒತ್ತಡದ ಜೀವನ ನಡೆಸುತ್ತಿರುವ ನನ್ನ ಕುಟುಂಬದವರು ಮತ್ತು ಸಹೋದ್ಯೋಗಿಗಳನ್ನು ಕರೆತಂದು ಇಲ್ಲಿ ಸಮಯ ಕಳೆದದ್ದಕ್ಕೆ ಅವರಿಗೂ ಧನ್ಯವಾದಗಳು. ದೂರದ ಬೆಟ್ಟ ನುಣ್ಣಗೆ ಎಂದು ಪೋಷಕರು ತಮ್ಮ ಮಕ್ಕಳನ್ನು ಹಳ್ಳಿ ಶಾಲೆ ಬಿಟ್ಟು ಪಟ್ಟಣದ  ಆಂಗ್ಲ ಮಾಧ್ಯಮದ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಹಳ್ಳಿ ಶಾಲೆಗಳು ಮುಚ್ಚಲ್ಪಡುತ್ತಿವೆ ಆದುದರಿಂದ ನಾವು ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೈಜೋಡಿಸೋಣ ಎಂದರು.
ಶಾಲೆಯ ಮೈದಾನದಲ್ಲಿ ನಿರ್ಮಿಸಲ್ಪಟ್ಟ ಧಾನ್ಯಗಳ ಒಕ್ಕಣೆಯ ಕಣ, ಹೂವಿನಿಂದ ಅಲಂಕರಿಸಿದಧಾನ್ಯಗಳ ರಾಶಿ, ರಟ್ಟಿನಲ್ಲಿ ನಿರ್ಮಿಸಲಾದ ಹಳ್ಳಿಮನೆ, ನೀರು ಸೇದುವ ಬಾವಿ, ಎತ್ತಿನ ಬಂಡಿ ,ಒಣ ಹುಲ್ಲಿನ ಮೆದೆ, ಮೊರಗಳಲ್ಲಿ ತುಂಬಿಟ್ಟ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು, ಹೆಂಗಸು ಮತ್ತುಗಂಡಸಿನ ಚಿತ್ರವನ್ನು ಬಿಡಿಸಿರುವ ಮಡಿಕೆಗಳು, ಪಕ್ಷಿಗಳಿಂದ ಧಾನ್ಯವನ್ನು ಸಂರಕ್ಷಿಸಲು ಹೊಲಗಳಲ್ಲಿರಿಸುವ ಬೆದರು ಬೊಂಬೆಗಳು,ಎಳ್ಳು ಬೆಲ್ಲ ಕೊಬ್ಬರಿ ಮಿಶ್ರಣ, ಪೂಜಾ ಸಾಮಗ್ರಿಗಳು ಒಟ್ಟಾರೆ ಶಾಲೆಯ ಆವರಣ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುತ್ತಿತ್ತು.
ಇದೇ ಸಂದರ್ಭದಲ್ಲಿ ಯತ್ತಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ, ಪುಟ್ಟಸ್ವಾಮಾಚಾರಿ, ಸಿ ಆರ್. ಪಿ .ಶಿಕ್ಷಕ ರೇವಣ್ಣ ಹಾಗೂ ಬೆಂಗಳೂರಿನ ಉದ್ಯಮಿಗಳಾದ ಜಯರಾಮು ಶಿವಕುಮಾರ್, ವೀರಣ್ಣ, ಹೇಮಂತ್ ಮತ್ತು ಇತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಸೇರದಂತೆ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಸೋಮಶೇಖರ್, ಶಿವಲಿಂಗೇಗೌಡ, ಕೆಂಚೇಗೌಡ, ಕೆಂಪೇಗೌಡ, ಕೆಂಪರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಯತ್ತಂಬಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    11 hrs ago
  • ಹನೂರು: ಕರ್ನಾಟಕದ ನಯಾಗರ ಎಂದೇ ಖ್ಯಾತಿ ಪಡೆದಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತಕ್ಕೆ ಭಾನುವಾರ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರ ದಂಡೇ ಹರಿದುಬಂದಿತ್ತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಪ್ರವಾಸಿಗರು ಕಲ್ಲುಬಂಡೆಗಳ ನಡುವೆ ವೇಗವಾಗಿ ಹರಿಯುವ ಕಾವೇರಿ ನದಿಯ ರುದ್ರ–ರಮಣೀಯ ದೃಶ್ಯವನ್ನು ಸವಿದರು. ಜಲಪಾತ ವೀಕ್ಷಣೆ ಬಳಿಕ ಸ್ಥಳೀಯ ಮೀನು ಖಾದ್ಯಗಳನ್ನು ಸವಿಯಲು ಜನಸಂದಣಿ ಕಂಡುಬಂದಿತು. ಈ ವೇಳೆ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್‌ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನದಿಯ ಅಪಾಯಕರ ಪ್ರದೇಶಗಳಿಗೆ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.
    1
    ಹನೂರು: ಕರ್ನಾಟಕದ ನಯಾಗರ ಎಂದೇ ಖ್ಯಾತಿ ಪಡೆದಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತಕ್ಕೆ ಭಾನುವಾರ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರ ದಂಡೇ ಹರಿದುಬಂದಿತ್ತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಪ್ರವಾಸಿಗರು ಕಲ್ಲುಬಂಡೆಗಳ ನಡುವೆ ವೇಗವಾಗಿ ಹರಿಯುವ ಕಾವೇರಿ ನದಿಯ ರುದ್ರ–ರಮಣೀಯ ದೃಶ್ಯವನ್ನು ಸವಿದರು. ಜಲಪಾತ ವೀಕ್ಷಣೆ ಬಳಿಕ ಸ್ಥಳೀಯ ಮೀನು ಖಾದ್ಯಗಳನ್ನು ಸವಿಯಲು ಜನಸಂದಣಿ ಕಂಡುಬಂದಿತು.
ಈ ವೇಳೆ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್‌ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನದಿಯ ಅಪಾಯಕರ ಪ್ರದೇಶಗಳಿಗೆ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist Hanur, Chamarajanagara•
    4 hrs ago
  • ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನ 1. 1 ಮೆಗಾ ವ್ಯಾಟ್ ಸೋಲಾರ್ ಘಟಕವನ್ನು ಶಾಸಕ ಎಂ.ಆರ್ ಮಂಜುನಾಥ್ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ಪ್ರಾಧಿಕಾರಕ್ಕೆ ಅನುಕೂಲವಾಗುವ ನಟ್ಟಿನಲ್ಲಿ ಸುಮಾರು ರೂ 8.50ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ 1.1 ಮೆಗಾ ವ್ಯಾಟ್ ವಿದ್ಯುತ್ ಸಾಮರ್ಥ್ಯವುಳ್ಳ ಸೋಲಾರ್ ಪ್ಲಾಂಟ್ ಗೆ ಇಂದು ಚಾಲನೆಯನ್ನು ನೀಡಿದ್ದು ಇದರಿಂದ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ವ್ಯಾಪ್ತಿಗೆ ದಿನದ 24 ಗಂಟೆಯೂ ಸಹ ವಿದ್ಯುತ್ ಸಂಪರ್ಕ ಸಿಗಲಿದ್ದು ಇದನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಎಂಆರ್ ಮಂಜುನಾಥ್ ರವರು ತಿಳಿಸಿದರು. 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಮತ್ತು ಸಿಸಿ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಇದೇ ತಿಂಗಳ ಅಂತ್ಯದೊಳಗೆ ಈ ಕಾಮಗಾರಿಯನ್ನು ಸಂಪೂರ್ಣ ಮುಗಿಸಿ ಸಾರ್ವಜನಿಕರ ಅನುಕೂಲ ಕಲ್ಪಿಸುವಂತೆ ಸೂಚನೆ ನೀಡಿದರು. ವಜ್ರ ಮಲೆ ಭವನಕ್ಕೆ ಪೀಠೋಪಕರಣಗಳ ಸಾಮಗ್ರಿಗಳನ್ನು ಶಾಸಕ ಎಂಆರ್ ಮಂಜುನಾಥ್ ಪರಿಸರ ನಡೆಸಿ ಗುಣಮಟ್ಟ ಉಳ್ಳಂತಹ ಸಾಮಗ್ರಿಗಳನ್ನು ಅಳವಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು ... ಮಲೆ ಮಹದೆಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿದರು. ಇತ್ತೀಚಿನ ದಿನಗಳಲ್ಲಿ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತಿದ್ದು, ಭಕ್ತರಿಗೆ ಮೂಲಬುತ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ದಿ ಪಡಿಸಬೇಕು. ಇದಲ್ಲದೆ ಬೆಟ್ಟದ ಸುತ್ತಮುತ್ತಲಿನ ವರವಲಯದ ಭಾಗಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ತಾಕಿತು ಮಾಡಿದರು. ಈಗಾಗಲೆ ನಡೆಯುತ್ತಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೆಕು ಎಂದು ಅಧಿಕಾರಿಗಳಿಗೆ ಸೂಚಿಸಿದರು ನಂತರ ದೇವಸ್ಥಾನದ ಒಳ ಪ್ರಾಂಗಣ, ಹೊರ ಪ್ರಾಂಗಣದ ಸುತ್ತಲೂ ಉತ್ಸವ ಕೌಂಟರ್, ರಥಗಳನ್ನು ನಿಲ್ಲಿಸುವ ಸ್ಥಳ, ಆನೆ ಶೆಡ್ಡು, ಲಗ್ಗೇಜ್ ಅಂಡ್ ಸ್ಲಿಪ್ಪರ್ ಕೌಂಟರ್ಗಳ ಸ್ಥಳ ಪರಿಶೀಲನೆ ಮಾಡಿ, ಹಾಗೂ ಭಕ್ತಾದಿಗಳು ಸರಾಗವಾಗಿ ವಾಹನಗಳಲ್ಲಿ ಓಡಾಡಲು ರಸ್ತೆ ಅಗಲೀಕರಣ ರಿಂಗ್ ರೋಡ್ ನಿರ್ಮಾಣ ಹಾಗೂ ಇಂಟರ್ನಲ್ ರೋಡ್ ಗಳ ಸ್ಥಳ ಪರಿಶೀಲನೆ ಹಾಗೂ ನೂತನ ದಾಸೋಹ ಭವನದ ಬಗೆಯೂ ಚರ್ಚಿಸಲಾಯಿತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಈ ನಿಟ್ಟಿನಲ್ಲಿ ಆಧುನಿಕತೆಯಿಂದ ಕುಡಿದ ಸೊಸಜ್ಜಿತ ದಾಸೋಹ ಭವನವನ್ನು ನಿರ್ಮಿಸಲು ಈಗಾಗಲೇ ಉದ್ದೇಶಸಲಾಗಿದ್ದು ಟೆಂಡರ್ ಅಂತದಲ್ಲಿದೆ ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮವಿಸಿ ದಾಸೋಹ ಭವನ ನಿರ್ಮಾಣಕ್ಕೆ ಮುಂದಾಗಬೇಕು. ಅಲ್ಲದೆ ಭಕ್ತರು ಸುಗಮವಾಗಿ ತೆರಳಿ ದೇವರ ದರ್ಶನ ಪಡೆಯಲು ಉದ್ದೇಶಿಸಿರುವ ಸಾರಥಿ ಸಾಲಿನ ಸಂಕೀರ್ಣಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಭಕ್ತರಿಗೆ ಅನುಕೂಲ ಕಲ್ಪಿಸಬೇಕು ಎಂದು ಇದೇ ವೇಳೆ ಶಾಸಕರು ಸೂಚಿಸಿದರು. ಇದೇ ಸಮಯದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ ರಘು ಉಪ ಕಾರ್ಯದರ್ಶಿ ಚಂದ್ರಶೇಖರ್, ಲೋಕೋಪಯೋಗಿ ಎಇಇ ಚಿನ್ನಣ್ಣ, ಇಂಜಿನಿಯರ್ ಸಂತೋಷ್ ಇಂಜಿನಿಯರ್ ಸಂತೋಷ್, ಸೇಲ್ವಗಣಪತಿ,ವಿಸ್ತಾರ ಕನ್ಸಲ್ಟೆಂಟ್ಸ್, ಎಲ್ ಎಲ್ ಪಿ ಗಳಾದ ಶ್ರೀಧರ್,ಮನೋಜ್, ಕೃಷ್ಣನ್,ಮುಖಂಡರುಗಳಾದ ಚಿನ್ನವೆಂಕಟ, ಡಿಕೆ ರಾಜು, ಗೋವಿಂದ ವಿಜಯ್ ಕುಮಾರ್, ಎಸ್.ಆರ್ ಮಹದೇವ್ ಸುರೇಶ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    3
    ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನ 1. 1 ಮೆಗಾ ವ್ಯಾಟ್ ಸೋಲಾರ್ ಘಟಕವನ್ನು ಶಾಸಕ ಎಂ.ಆರ್ ಮಂಜುನಾಥ್ ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ಪ್ರಾಧಿಕಾರಕ್ಕೆ ಅನುಕೂಲವಾಗುವ ನಟ್ಟಿನಲ್ಲಿ ಸುಮಾರು ರೂ 8.50ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ 1.1 ಮೆಗಾ ವ್ಯಾಟ್ ವಿದ್ಯುತ್ ಸಾಮರ್ಥ್ಯವುಳ್ಳ ಸೋಲಾರ್ ಪ್ಲಾಂಟ್ ಗೆ ಇಂದು ಚಾಲನೆಯನ್ನು ನೀಡಿದ್ದು ಇದರಿಂದ  ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ವ್ಯಾಪ್ತಿಗೆ ದಿನದ 24 ಗಂಟೆಯೂ ಸಹ ವಿದ್ಯುತ್ ಸಂಪರ್ಕ ಸಿಗಲಿದ್ದು ಇದನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಎಂಆರ್ ಮಂಜುನಾಥ್ ರವರು ತಿಳಿಸಿದರು.
5  ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಮತ್ತು ಸಿಸಿ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಇದೇ ತಿಂಗಳ ಅಂತ್ಯದೊಳಗೆ ಈ ಕಾಮಗಾರಿಯನ್ನು ಸಂಪೂರ್ಣ ಮುಗಿಸಿ ಸಾರ್ವಜನಿಕರ ಅನುಕೂಲ ಕಲ್ಪಿಸುವಂತೆ ಸೂಚನೆ ನೀಡಿದರು.
ವಜ್ರ ಮಲೆ ಭವನಕ್ಕೆ ಪೀಠೋಪಕರಣಗಳ ಸಾಮಗ್ರಿಗಳನ್ನು ಶಾಸಕ ಎಂಆರ್ ಮಂಜುನಾಥ್ ಪರಿಸರ ನಡೆಸಿ  ಗುಣಮಟ್ಟ ಉಳ್ಳಂತಹ ಸಾಮಗ್ರಿಗಳನ್ನು ಅಳವಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು ...
ಮಲೆ ಮಹದೆಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿದರು. ಇತ್ತೀಚಿನ ದಿನಗಳಲ್ಲಿ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತಿದ್ದು, ಭಕ್ತರಿಗೆ ಮೂಲಬುತ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಮಾಸ್ಟರ್ ಪ್ಲಾನ್ ಆವರಣವನ್ನು ಅಭಿವೃದ್ದಿ ಪಡಿಸಬೇಕು.
ಇದಲ್ಲದೆ ಬೆಟ್ಟದ ಸುತ್ತಮುತ್ತಲಿನ ವರವಲಯದ ಭಾಗಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ತಾಕಿತು ಮಾಡಿದರು. ಈಗಾಗಲೆ ನಡೆಯುತ್ತಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೆಕು ಎಂದು ಅಧಿಕಾರಿಗಳಿಗೆ ಸೂಚಿಸಿದರು ನಂತರ  ದೇವಸ್ಥಾನದ ಒಳ ಪ್ರಾಂಗಣ, ಹೊರ ಪ್ರಾಂಗಣದ  ಸುತ್ತಲೂ ಉತ್ಸವ ಕೌಂಟರ್, ರಥಗಳನ್ನು ನಿಲ್ಲಿಸುವ ಸ್ಥಳ, ಆನೆ ಶೆಡ್ಡು, ಲಗ್ಗೇಜ್ ಅಂಡ್ ಸ್ಲಿಪ್ಪರ್ ಕೌಂಟರ್ಗಳ ಸ್ಥಳ ಪರಿಶೀಲನೆ ಮಾಡಿ,  ಹಾಗೂ  ಭಕ್ತಾದಿಗಳು ಸರಾಗವಾಗಿ ವಾಹನಗಳಲ್ಲಿ ಓಡಾಡಲು ರಸ್ತೆ ಅಗಲೀಕರಣ ರಿಂಗ್ ರೋಡ್ ನಿರ್ಮಾಣ ಹಾಗೂ ಇಂಟರ್ನಲ್ ರೋಡ್ ಗಳ ಸ್ಥಳ ಪರಿಶೀಲನೆ ಹಾಗೂ ನೂತನ ದಾಸೋಹ ಭವನದ ಬಗೆಯೂ ಚರ್ಚಿಸಲಾಯಿತು. 
ಶ್ರೀ ಕ್ಷೇತ್ರ ಮಲೆ  ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಈ ನಿಟ್ಟಿನಲ್ಲಿ  ಆಧುನಿಕತೆಯಿಂದ ಕುಡಿದ ಸೊಸಜ್ಜಿತ ದಾಸೋಹ ಭವನವನ್ನು ನಿರ್ಮಿಸಲು ಈಗಾಗಲೇ ಉದ್ದೇಶಸಲಾಗಿದ್ದು ಟೆಂಡರ್ ಅಂತದಲ್ಲಿದೆ ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮವಿಸಿ ದಾಸೋಹ ಭವನ ನಿರ್ಮಾಣಕ್ಕೆ ಮುಂದಾಗಬೇಕು. ಅಲ್ಲದೆ ಭಕ್ತರು ಸುಗಮವಾಗಿ ತೆರಳಿ ದೇವರ ದರ್ಶನ ಪಡೆಯಲು ಉದ್ದೇಶಿಸಿರುವ ಸಾರಥಿ ಸಾಲಿನ ಸಂಕೀರ್ಣಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಭಕ್ತರಿಗೆ ಅನುಕೂಲ ಕಲ್ಪಿಸಬೇಕು ಎಂದು ಇದೇ ವೇಳೆ ಶಾಸಕರು ಸೂಚಿಸಿದರು. 
ಇದೇ ಸಮಯದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ  ಕಾರ್ಯದರ್ಶಿಗಳಾದ  ಎ.ಇ  ರಘು ಉಪ ಕಾರ್ಯದರ್ಶಿ ಚಂದ್ರಶೇಖರ್, ಲೋಕೋಪಯೋಗಿ ಎಇಇ ಚಿನ್ನಣ್ಣ, ಇಂಜಿನಿಯರ್ ಸಂತೋಷ್ ಇಂಜಿನಿಯರ್ ಸಂತೋಷ್, ಸೇಲ್ವಗಣಪತಿ,ವಿಸ್ತಾರ ಕನ್ಸಲ್ಟೆಂಟ್ಸ್, ಎಲ್ ಎಲ್ ಪಿ ಗಳಾದ ಶ್ರೀಧರ್,ಮನೋಜ್, ಕೃಷ್ಣನ್,ಮುಖಂಡರುಗಳಾದ ಚಿನ್ನವೆಂಕಟ, ಡಿಕೆ ರಾಜು, ಗೋವಿಂದ ವಿಜಯ್ ಕುಮಾರ್, ಎಸ್.ಆರ್ ಮಹದೇವ್ ಸುರೇಶ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Voice of people ಹನೂರು, ಚಾಮರಾಜನಗರ, ಕರ್ನಾಟಕ•
    5 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.