logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೇರಳಕಟ್ಟೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಗೆ ಕೈಯಿಂದ ತಳ್ಳಿ ಜಾತಿ ನಿಂದನೆ ಆರೋಪ: ಪ್ರಕರಣ ದಾಖಲು ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ನೆಟ್ಲಮುಡ್ನೂಡು ನಿವಾಸಿಯಾದ ಸೇಸಮ್ಮ (47) ರವರು ಪರಿಶಿಷ್ಠ ಜಾತಿಗೆ ಸೇರಿದವರಾಗಿದ್ದು, ಬಂಟ್ವಾಳ ನೇರಳಕಟ್ಟೆಯಲ್ಲಿರುವ ಸಹಕಾರ ಸಂಘದ ಸಿಬ್ಬಂದಿಯಾಗಿರುತ್ತಾರೆ. ದಿನಾಂಕ -02-04-2026 ರಂದು ಸದ್ರಿಯವರು ಕರ್ತವ್ಯದಲ್ಲಿದ್ದಾಗ, ಸದ್ರಿ ಶಾಖೆಯ ಪ್ರಭಾರ ವ್ಯವಸ್ಥಾಪಕನಾದ ಆರೋಪಿ ಯತೀಶ್ ಡಿ ಗೌಡ ಎಂಬವರು ಬಂದು ಏಕಾಏಕಿ ಪಿರ್ಯಾದಿದಾರರಿಗೆ ಕರ್ತವ್ಯ ನಿರ್ವಹಿಸಬಾರದು ಎಂದು ತಿಳಿಸಿದ್ದು, ಅದಕ್ಕೆ ಪಿರ್ಯಾದಿದಾರರು ಆಕ್ಷೇಪಿಸಿದಾಗ, ಆರೋಪಿಯು ಪಿರ್ಯಾದಿದಾರರನ್ನು ಕೈಯಿಂದ ತಳ್ಳಿ ಜಾತಿ ನಿಂದನೆ ಮಾಡಿರುತ್ತಾನೆ. ಆ ಬಳಿಕ ದಿನಾಂಕ:07-04- 2026 ರಂದು ಬೆಳಿಗ್ಗೆ, ಪಿರ್ಯಾದಿದಾರರು ಪುನಃ ಕರ್ತವ್ಯಕ್ಕೆ ಹಾಜರಾದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಇದರಿಂದ ಪಿರ್ಯಾದಿದಾರರು ಮನನೊಂದು ಅಸ್ವಸ್ಥಳಾಗಿ ಕಚೇರಿಯಲ್ಲಿ ಬಿದ್ದವರನ್ನು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಸದ್ರಿ ಸಂಘದ ಪದಾಧಿಕಾರಿಗಳಾದ ಯಶೋಧ, ಪುಷ್ಪರಾಜ್‌ ಚೌಟ ಹಾಗೂ ಯತೀಶ್‌ ಡಿ ಗೌಡ ಎಂಬವರ ವಿರುದ್ಧ ಪಿರ್ಯಾದಿದಾರರು ದಿನಾಂಕ: 11-04-2026 ರಂದು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 88/2026, ಕಲಂ: 74, 49 BNS 2023 ಮತ್ತು ಕಲಂ: 3(1) (r) (s), 3(2)(va) The SC & ST (Prevention of Atrocities) Amendment Act 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

17 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
17 hrs ago

ನೇರಳಕಟ್ಟೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಗೆ ಕೈಯಿಂದ ತಳ್ಳಿ ಜಾತಿ ನಿಂದನೆ ಆರೋಪ: ಪ್ರಕರಣ ದಾಖಲು ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ನೆಟ್ಲಮುಡ್ನೂಡು ನಿವಾಸಿಯಾದ ಸೇಸಮ್ಮ (47) ರವರು ಪರಿಶಿಷ್ಠ ಜಾತಿಗೆ ಸೇರಿದವರಾಗಿದ್ದು, ಬಂಟ್ವಾಳ ನೇರಳಕಟ್ಟೆಯಲ್ಲಿರುವ ಸಹಕಾರ ಸಂಘದ ಸಿಬ್ಬಂದಿಯಾಗಿರುತ್ತಾರೆ. ದಿನಾಂಕ -02-04-2026 ರಂದು ಸದ್ರಿಯವರು ಕರ್ತವ್ಯದಲ್ಲಿದ್ದಾಗ, ಸದ್ರಿ ಶಾಖೆಯ ಪ್ರಭಾರ ವ್ಯವಸ್ಥಾಪಕನಾದ ಆರೋಪಿ ಯತೀಶ್ ಡಿ ಗೌಡ ಎಂಬವರು ಬಂದು ಏಕಾಏಕಿ ಪಿರ್ಯಾದಿದಾರರಿಗೆ ಕರ್ತವ್ಯ ನಿರ್ವಹಿಸಬಾರದು ಎಂದು ತಿಳಿಸಿದ್ದು, ಅದಕ್ಕೆ ಪಿರ್ಯಾದಿದಾರರು ಆಕ್ಷೇಪಿಸಿದಾಗ, ಆರೋಪಿಯು ಪಿರ್ಯಾದಿದಾರರನ್ನು ಕೈಯಿಂದ ತಳ್ಳಿ ಜಾತಿ ನಿಂದನೆ ಮಾಡಿರುತ್ತಾನೆ. ಆ ಬಳಿಕ ದಿನಾಂಕ:07-04- 2026 ರಂದು ಬೆಳಿಗ್ಗೆ, ಪಿರ್ಯಾದಿದಾರರು ಪುನಃ ಕರ್ತವ್ಯಕ್ಕೆ ಹಾಜರಾದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಇದರಿಂದ ಪಿರ್ಯಾದಿದಾರರು ಮನನೊಂದು ಅಸ್ವಸ್ಥಳಾಗಿ ಕಚೇರಿಯಲ್ಲಿ ಬಿದ್ದವರನ್ನು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಸದ್ರಿ ಸಂಘದ ಪದಾಧಿಕಾರಿಗಳಾದ ಯಶೋಧ, ಪುಷ್ಪರಾಜ್‌ ಚೌಟ ಹಾಗೂ ಯತೀಶ್‌ ಡಿ ಗೌಡ ಎಂಬವರ ವಿರುದ್ಧ ಪಿರ್ಯಾದಿದಾರರು ದಿನಾಂಕ: 11-04-2026 ರಂದು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 88/2026, ಕಲಂ: 74, 49 BNS 2023 ಮತ್ತು ಕಲಂ: 3(1) (r) (s), 3(2)(va) The SC & ST (Prevention of Atrocities) Amendment Act 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

More news from ಕರ್ನಾಟಕ and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    19 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ ಕಣ್ಣನ್ನು ತಂಪು ಗೊಳಿಸಿದೆ
    1
    ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ  ಕಣ್ಣನ್ನು ತಂಪು ಗೊಳಿಸಿದೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    14 hrs ago
  • ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    1
    ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ  ಪ್ರಶ್ನೆಗೆ  ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,      ಕಾಂಗ್ರೆಸ್ ಶಾಸಕರು ಈಗಾಗಲೇ  ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ  ಬರಲಿದೆ.   ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ  ಗೊಂದಲಕ್ಕೆ ಇತಿಶ್ರೀ ಹಾಡುವಂತೆ   ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು  ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು.
ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ  ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ  ಪಕ್ಷ ವಿರೋಧಿ ಕೆಲಸಮಾಡಿದರೆ  ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ  ಪಕ್ಷ ವಿರೋಧಿ ಕೆಲಸ  ಮಾಡಿದ್ರೆ ತಲೆದಂಡವಾಗಲಿದೆ ಎಂದರು.
ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್  ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು.
ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. 
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ  ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ  ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ,  ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು,  ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    9 hrs ago
  • . ಹನೂರು :ತಾಲೂಕಿನ ಸುಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಆದಿ ಜಾಂಬವರ ಬೀದಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿಯನ್ನು ಆಚರಿಸಲಾಯಿತು. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕೇಕ್ ಅನ್ನು ಕತ್ತರಿಸಿ ಸಿಹಿ ಹಂಚಿದರು. ನಂತರ ಸಮುದಾಯದ ಮುಖಂಡರಾದ ಮಹದೇವ ಮಾತನಾಡಿ ಜಗಜೀವನ್ ರಾಮ್ ಅವರು ಭಾರತದ ಪ್ರಮುಖ ರಾಜಕೀಯ ನಾಯಕರು ಮತ್ತು ಸಾಮಾಜಿಕ ನ್ಯಾಯದ ಹರಿಕಾರರು. ಅವರನ್ನು ಪ್ರೀತಿಯಿಂದ "ಬಾಬೂಜಿ" ಎಂದು ಕರೆಯಲಾಗುತ್ತಿತ್ತು. ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ವಿದ್ಯಾಭ್ಯಾಸದ ಸಮಯದಲ್ಲಿ ಅವರು ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದರು, ಇದು ಅವರ ಮುಂದಿನ ಹೋರಾಟಕ್ಕೆ ಪ್ರೇರಣೆಯಾಯಿತು. ಕೇಂದ್ರ ಸಚಿವರು ಕೂಡ ಆಗಿದ್ದರು. ಹಸಿರು ಕ್ರಾಂತಿ ಕ್ರಾಂತಿಯ ಹರಿಕಾರ.ಅವರು ದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾತ್ಮರು ಎಂದು ತಿಳಿಸಿದರು. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು (ಏಪ್ರಿಲ್ 14) ನಾವು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಅಂಬೇಡ್ಕರ್ ಅವರ ಪ್ರಮುಖ ಘೋಷಣೆಗಳು ​"ಕಲಿಯಿರಿ, ಸಂಘಟಿತರಾಗಿ, ಹೋರಾಡಿ." ​"ನಾನು ಆರಾಧಿಸುವ ಮೂರು ದೈವಗಳೆಂದರೆ - ಜ್ಞಾನ, ಸ್ವಾಭಿಮಾನ ಮತ್ತು ಚಾರಿತ್ರ್ಯ." ​"ಮನಸ್ಸಿನ ಕೃಷಿಯೇ ಮಾನವನ ಅಂತಿಮ ಗುರಿಯಾಗಿರಬೇಕು ಎಂದು ತಿಳಿಸಿದರು. ಸಮುದಾಯದ ಬೀದಿಗಳಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಯಜಮಾನರ ತಿಮ್ಮಯ್ಯ, ಜಡೆ ಸ್ವಾಮಿ, ಯುವಕರಾದ ಶ್ರೀನಿವಾಸ್, ಮಾದೇಶ್, ನಂಜುಂಡ, ರವಿ,ನಾಗ, ಪ್ರವೀಣ್, ಪ್ರಜ್ವಲ್, ಸೇರಿದಂತೆ ಇನ್ನಿತರ ಯುವಕರು ಮಹಿಳೆಯರು ಹಾರಾಜರಿದ್ದರು.
    4
    . 
ಹನೂರು :ತಾಲೂಕಿನ ಸುಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಆದಿ ಜಾಂಬವರ ಬೀದಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿಯನ್ನು ಆಚರಿಸಲಾಯಿತು.
ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್  ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕೇಕ್ ಅನ್ನು ಕತ್ತರಿಸಿ ಸಿಹಿ ಹಂಚಿದರು.
ನಂತರ ಸಮುದಾಯದ ಮುಖಂಡರಾದ ಮಹದೇವ  ಮಾತನಾಡಿ ಜಗಜೀವನ್ ರಾಮ್  ಅವರು ಭಾರತದ ಪ್ರಮುಖ ರಾಜಕೀಯ ನಾಯಕರು ಮತ್ತು ಸಾಮಾಜಿಕ ನ್ಯಾಯದ ಹರಿಕಾರರು. ಅವರನ್ನು ಪ್ರೀತಿಯಿಂದ "ಬಾಬೂಜಿ" ಎಂದು ಕರೆಯಲಾಗುತ್ತಿತ್ತು.
ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ವಿದ್ಯಾಭ್ಯಾಸದ ಸಮಯದಲ್ಲಿ ಅವರು ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದರು, ಇದು ಅವರ ಮುಂದಿನ ಹೋರಾಟಕ್ಕೆ ಪ್ರೇರಣೆಯಾಯಿತು.
ಕೇಂದ್ರ ಸಚಿವರು ಕೂಡ ಆಗಿದ್ದರು. ಹಸಿರು ಕ್ರಾಂತಿ ಕ್ರಾಂತಿಯ ಹರಿಕಾರ.ಅವರು ದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾತ್ಮರು  ಎಂದು ತಿಳಿಸಿದರು.
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು (ಏಪ್ರಿಲ್ 14) ನಾವು ಅರ್ಥಪೂರ್ಣವಾಗಿ ಆಚರಿಸುತ್ತೇವೆ
ಅಂಬೇಡ್ಕರ್ ಅವರ ಪ್ರಮುಖ ಘೋಷಣೆಗಳು
​"ಕಲಿಯಿರಿ, ಸಂಘಟಿತರಾಗಿ, ಹೋರಾಡಿ."
​"ನಾನು ಆರಾಧಿಸುವ ಮೂರು ದೈವಗಳೆಂದರೆ - ಜ್ಞಾನ, ಸ್ವಾಭಿಮಾನ ಮತ್ತು ಚಾರಿತ್ರ್ಯ."
​"ಮನಸ್ಸಿನ ಕೃಷಿಯೇ ಮಾನವನ ಅಂತಿಮ ಗುರಿಯಾಗಿರಬೇಕು ಎಂದು ತಿಳಿಸಿದರು.
ಸಮುದಾಯದ ಬೀದಿಗಳಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು.
ಇದೇ ಸಂದರ್ಭದಲ್ಲಿ ಯಜಮಾನರ ತಿಮ್ಮಯ್ಯ, ಜಡೆ ಸ್ವಾಮಿ, ಯುವಕರಾದ ಶ್ರೀನಿವಾಸ್, ಮಾದೇಶ್, ನಂಜುಂಡ, ರವಿ,ನಾಗ, ಪ್ರವೀಣ್, ಪ್ರಜ್ವಲ್, ಸೇರಿದಂತೆ ಇನ್ನಿತರ ಯುವಕರು ಮಹಿಳೆಯರು ಹಾರಾಜರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    13 hrs ago
  • Post by Nitin 9071795156 press reporte
    3
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    16 hrs ago
  • ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ನೆಟ್ಲಮುಡ್ನೂಡು ನಿವಾಸಿಯಾದ ಸೇಸಮ್ಮ (47) ರವರು ಪರಿಶಿಷ್ಠ ಜಾತಿಗೆ ಸೇರಿದವರಾಗಿದ್ದು, ಬಂಟ್ವಾಳ ನೇರಳಕಟ್ಟೆಯಲ್ಲಿರುವ ಸಹಕಾರ ಸಂಘದ ಸಿಬ್ಬಂದಿಯಾಗಿರುತ್ತಾರೆ. ದಿನಾಂಕ -02-04-2026 ರಂದು ಸದ್ರಿಯವರು ಕರ್ತವ್ಯದಲ್ಲಿದ್ದಾಗ, ಸದ್ರಿ ಶಾಖೆಯ ಪ್ರಭಾರ ವ್ಯವಸ್ಥಾಪಕನಾದ ಆರೋಪಿ ಯತೀಶ್ ಡಿ ಗೌಡ ಎಂಬವರು ಬಂದು ಏಕಾಏಕಿ ಪಿರ್ಯಾದಿದಾರರಿಗೆ ಕರ್ತವ್ಯ ನಿರ್ವಹಿಸಬಾರದು ಎಂದು ತಿಳಿಸಿದ್ದು, ಅದಕ್ಕೆ ಪಿರ್ಯಾದಿದಾರರು ಆಕ್ಷೇಪಿಸಿದಾಗ, ಆರೋಪಿಯು ಪಿರ್ಯಾದಿದಾರರನ್ನು ಕೈಯಿಂದ ತಳ್ಳಿ ಜಾತಿ ನಿಂದನೆ ಮಾಡಿರುತ್ತಾನೆ. ಆ ಬಳಿಕ ದಿನಾಂಕ:07-04- 2026 ರಂದು ಬೆಳಿಗ್ಗೆ, ಪಿರ್ಯಾದಿದಾರರು ಪುನಃ ಕರ್ತವ್ಯಕ್ಕೆ ಹಾಜರಾದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಇದರಿಂದ ಪಿರ್ಯಾದಿದಾರರು ಮನನೊಂದು ಅಸ್ವಸ್ಥಳಾಗಿ ಕಚೇರಿಯಲ್ಲಿ ಬಿದ್ದವರನ್ನು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಸದ್ರಿ ಸಂಘದ ಪದಾಧಿಕಾರಿಗಳಾದ ಯಶೋಧ, ಪುಷ್ಪರಾಜ್‌ ಚೌಟ ಹಾಗೂ ಯತೀಶ್‌ ಡಿ ಗೌಡ ಎಂಬವರ ವಿರುದ್ಧ ಪಿರ್ಯಾದಿದಾರರು ದಿನಾಂಕ: 11-04-2026 ರಂದು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 88/2026, ಕಲಂ: 74, 49 BNS 2023 ಮತ್ತು ಕಲಂ: 3(1) (r) (s), 3(2)(va) The SC & ST (Prevention of Atrocities) Amendment Act 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    1
    ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ನೆಟ್ಲಮುಡ್ನೂಡು ನಿವಾಸಿಯಾದ ಸೇಸಮ್ಮ (47) ರವರು   ಪರಿಶಿಷ್ಠ ಜಾತಿಗೆ ಸೇರಿದವರಾಗಿದ್ದು, ಬಂಟ್ವಾಳ ನೇರಳಕಟ್ಟೆಯಲ್ಲಿರುವ ಸಹಕಾರ ಸಂಘದ ಸಿಬ್ಬಂದಿಯಾಗಿರುತ್ತಾರೆ. ದಿನಾಂಕ -02-04-2026 ರಂದು ಸದ್ರಿಯವರು ಕರ್ತವ್ಯದಲ್ಲಿದ್ದಾಗ, ಸದ್ರಿ ಶಾಖೆಯ ಪ್ರಭಾರ ವ್ಯವಸ್ಥಾಪಕನಾದ ಆರೋಪಿ ಯತೀಶ್ ಡಿ ಗೌಡ ಎಂಬವರು ಬಂದು ಏಕಾಏಕಿ ಪಿರ್ಯಾದಿದಾರರಿಗೆ ಕರ್ತವ್ಯ ನಿರ್ವಹಿಸಬಾರದು ಎಂದು ತಿಳಿಸಿದ್ದು, ಅದಕ್ಕೆ ಪಿರ್ಯಾದಿದಾರರು ಆಕ್ಷೇಪಿಸಿದಾಗ, ಆರೋಪಿಯು ಪಿರ್ಯಾದಿದಾರರನ್ನು ಕೈಯಿಂದ ತಳ್ಳಿ ಜಾತಿ ನಿಂದನೆ ಮಾಡಿರುತ್ತಾನೆ. ಆ ಬಳಿಕ ದಿನಾಂಕ:07-04- 2026 ರಂದು ಬೆಳಿಗ್ಗೆ, ಪಿರ್ಯಾದಿದಾರರು ಪುನಃ ಕರ್ತವ್ಯಕ್ಕೆ ಹಾಜರಾದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಇದರಿಂದ ಪಿರ್ಯಾದಿದಾರರು ಮನನೊಂದು ಅಸ್ವಸ್ಥಳಾಗಿ ಕಚೇರಿಯಲ್ಲಿ ಬಿದ್ದವರನ್ನು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಸದ್ರಿ ಸಂಘದ ಪದಾಧಿಕಾರಿಗಳಾದ ಯಶೋಧ, ಪುಷ್ಪರಾಜ್‌ ಚೌಟ ಹಾಗೂ ಯತೀಶ್‌ ಡಿ ಗೌಡ ಎಂಬವರ ವಿರುದ್ಧ ಪಿರ್ಯಾದಿದಾರರು ದಿನಾಂಕ: 11-04-2026 ರಂದು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 88/2026,  ಕಲಂ: 74, 49 BNS 2023 ಮತ್ತು ಕಲಂ: 3(1) (r) (s), 3(2)(va)  The SC & ST (Prevention of Atrocities) Amendment Act 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    17 hrs ago
  • ಗ್ಯಾಸ್ ಕಳಸಂತೆಯಲ್ಲಿ ಮಾರಾಟ.ಸಾರ್ವಜನಿಕ ರಿಂದ ಜಿಲ್ಲಾ ಕಚೇರಿ‌ ಮುಂದೆ ಪ್ರತಿಭಟನೆ.. ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು ಆಕ್ರೋಶ ವ್ಯಕ್ತ ಪಡಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನು ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು..
    1
    ಗ್ಯಾಸ್ ಕಳಸಂತೆಯಲ್ಲಿ ಮಾರಾಟ.ಸಾರ್ವಜನಿಕ ರಿಂದ ಜಿಲ್ಲಾ ಕಚೇರಿ‌ ಮುಂದೆ ಪ್ರತಿಭಟನೆ..
ಹೊಳಲ್ಕೆರೆ ಪಟ್ಟಣದ ಗ್ಯಾಸ್ ಏಜೆನ್ಸಿಯೊಂದರ ಮಾಲೀಕರು ಹಾಗೂ ಡೆಲಿವರಿ ಬಾಯ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹೊಳಲ್ಕೆರೆ ಪಟ್ಟಣದ ನಾಗರಿಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಮುಖಂಡರು ಮಹಿಳೆಯರು ಸೇರಿದಂತೆ ನಗರದ ಪ್ರಮುಖ ರಸ್ತೆಯಲ್ಲಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಏಜೆನ್ಸಿಯ ಅವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿದರು ಆಕ್ರೋಶ ವ್ಯಕ್ತ ಪಡಿಸಿದರು.
ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ಸರ್ಕಾರ ನಿಗದಿಪಡಿಸಿದ ದರ 926 ರೂ. ಗಳಾಗಿದ್ದರೆ, ಏಜೆನ್ಸಿಯವರು ಕೃತಕ ಅಭಾವ ಸೃಷ್ಟಿಸಿ 1400 ರೂ.ನಿಂದ 1800 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ. ಒಂದು ತಿಂಗಳಿಂದ ಅಡುಗೆ ಅನಿಲ ಪೂರೈಕೆಯಾಗದೆ ಗ್ರಾಹಕರು ಹೈರಾಣಾಗಿದ್ದಾರೆ. ಗೋದಾಮಿಗೆ ಹೋದರೂ ಸಿಲಿಂಡರ್ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ ಎಂದು ನಾಗರಿಕರು ಅಕ್ರೋಶ ಹೊರ ಹಾಕಿದ್ದರು. ಇನ್ನು ಕಾಳಸಂತೆಯಲ್ಲಿ ತೊಡಗಿರುವವರ ವಿರುದ್ಧ ತಕ್ಷಣವೇ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಸದ್ಯದ ಏಜೆನ್ಸಿಯಿಂದ ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಸುಗಮ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • ತುಮಕೂರು : ರಾಷ್ಟ್ರೀಯ ಹೆದ್ದಾರಿ 4 ರ ಸಮೀಪ ವಿರುವ ಬಾಲಾಜಿ ಟ್ರಾನ್ಸ್ಪೋರ್ಟ್ ಅಲ್ಲಿ ಅಗ್ನಿ ಅವಘಡ ಸಂಭವಿಸಿದೆ ಟೈರ್ಗಳು ಸುಟ್ಟು ಕರಕಲಾಗಿ ದಟ್ಟ ಹೊಗೆ ಕಂಡು ಬಂದಿದೆ
    1
    ತುಮಕೂರು : ರಾಷ್ಟ್ರೀಯ ಹೆದ್ದಾರಿ   4 ರ ಸಮೀಪ ವಿರುವ  ಬಾಲಾಜಿ ಟ್ರಾನ್ಸ್ಪೋರ್ಟ್ ಅಲ್ಲಿ    ಅಗ್ನಿ ಅವಘಡ  ಸಂಭವಿಸಿದೆ  ಟೈರ್ಗಳು  ಸುಟ್ಟು ಕರಕಲಾಗಿ ದಟ್ಟ ಹೊಗೆ ಕಂಡು ಬಂದಿದೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.