Shuru
Apke Nagar Ki App…
ವಿದೇಶಿ ರೈಡ್ ಫ಼ಾರ್ ರೋಟರಿ" ಅಂತರ ರಾಷ್ಟ್ರೀಯ ಬೈಕ್ ಯಾತ್ರಾ ತಂಡಕ್ಕೆ ಸ್ವಾಗತ ಶಿವಮೊಗ್ಗ:ಯುರೋಪ್ ಮತ್ತು ಉತ್ತರ ಅಮೆರಿಕ ಖಂಡಗಳ 16 ದೇಶಗಳಿಂದ ಆಗಮಿಸಿದ 22 ವಿದೇಶಿ ರೈಡ್ ಫ಼ಾರ್ ರೋಟರಿ" ಅಂತರ ರಾಷ್ಟ್ರೀಯ ಬೈಕ್ ಯಾತ್ರಾ ತಂಡಕ್ಕೆ ಶಿವಮೊಗ್ಗದಲ್ಲಿ ರೋಟರಿ ಕ್ಲಬ್ ಮಿಡ್ಟೌನ್ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು. ರೋಟರಿ ಕ್ಲಬ್ ಮಿಡ್ಟೌನ್ ಅಧ್ಯಕ್ಷ ಹರ್ಷ ಭಾಸ್ಕರ್ ಕಾಮತ್, ವಿದೇಶಿ ಅತಿಥಿಗಳನ್ನು ಭಾರತೀಯ ಸಂಪ್ರದಾಯ ಹಾಗೂ ಸಂಕ್ರಾಂತಿ ಹಬ್ಬದ ಸಾಂಸ್ಕೃತಿಕ ವೈಭವದಲ್ಲಿ ಸ್ವಾಗತಿಸಿ, ಶಿವಮೊಗ್ಗದ ಇತಿಹಾಸ ಹಾಗೂ ಪರಂಪರೆಯನ್ನು ಪರಿಚಯಿಸುವ ವ್ಯವಸ್ಥೆ ಮಾಡಿದರು. ಫಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಚಂದ್ರಶೇಖರ್, ರವಿ ಸೇರಿದಂತೆ ಹಲವರು ಇದ್ದರು.
SANDEEP U. L
ವಿದೇಶಿ ರೈಡ್ ಫ಼ಾರ್ ರೋಟರಿ" ಅಂತರ ರಾಷ್ಟ್ರೀಯ ಬೈಕ್ ಯಾತ್ರಾ ತಂಡಕ್ಕೆ ಸ್ವಾಗತ ಶಿವಮೊಗ್ಗ:ಯುರೋಪ್ ಮತ್ತು ಉತ್ತರ ಅಮೆರಿಕ ಖಂಡಗಳ 16 ದೇಶಗಳಿಂದ ಆಗಮಿಸಿದ 22 ವಿದೇಶಿ ರೈಡ್ ಫ಼ಾರ್ ರೋಟರಿ" ಅಂತರ ರಾಷ್ಟ್ರೀಯ ಬೈಕ್ ಯಾತ್ರಾ ತಂಡಕ್ಕೆ ಶಿವಮೊಗ್ಗದಲ್ಲಿ ರೋಟರಿ ಕ್ಲಬ್ ಮಿಡ್ಟೌನ್ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು. ರೋಟರಿ ಕ್ಲಬ್ ಮಿಡ್ಟೌನ್ ಅಧ್ಯಕ್ಷ ಹರ್ಷ ಭಾಸ್ಕರ್ ಕಾಮತ್, ವಿದೇಶಿ ಅತಿಥಿಗಳನ್ನು ಭಾರತೀಯ ಸಂಪ್ರದಾಯ ಹಾಗೂ ಸಂಕ್ರಾಂತಿ ಹಬ್ಬದ ಸಾಂಸ್ಕೃತಿಕ ವೈಭವದಲ್ಲಿ ಸ್ವಾಗತಿಸಿ, ಶಿವಮೊಗ್ಗದ ಇತಿಹಾಸ ಹಾಗೂ ಪರಂಪರೆಯನ್ನು ಪರಿಚಯಿಸುವ ವ್ಯವಸ್ಥೆ ಮಾಡಿದರು. ಫಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಚಂದ್ರಶೇಖರ್, ರವಿ ಸೇರಿದಂತೆ ಹಲವರು ಇದ್ದರು.
More news from ಕರ್ನಾಟಕ and nearby areas
- ಚಿನ್ನಾಭರಣ ಖರೀದಿಸುವ ಸೋಗಿನಲ್ಲಿ ಜ್ಯುವೆಲ್ಲರಿ ಮಳಿಗೆಯೊಂದಕ್ಕೆ ಬಂದ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಆಭರಣ ವೀಕ್ಷಿಸಿ ಚಿನ್ನದ ಬಳೆಯೊಂದನ್ನು ಕಳವು ಮಾಡಿದ ಘಟನೆ ವರದಿಯಾಗಿದೆ. ಇಲ್ಲಿನ ಹೆಗ್ಡೆ ಆರ್ಕೆಡ್ನಲ್ಲಿರುವ ಜ್ಯುವೆಲ್ಲರ್ಸ್ ವೊಂದರಲ್ಲಿ ಘಟನೆ ನಡೆದಿದೆ. ಮಾಲಕ ಕೃಷ್ಣತ್ ನಾಮದೇವ್ ಸುರ್ವೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ1
- Post by Nitin 9071795156 press reporte1
- ಶರಣರ ಕಾಲದಲ್ಲಿ ರಾಜ ವೈಭೋಗವನ್ನು ತ್ಯಜಿಸಿ ವೈರಾಗ್ಯ ತಾಳಿದ ವೀರವನಿತೆ ಅಕ್ಕಮಹಾದೇವಿ ಅವರು ಜಗತ್ತಿನ ಮಹಿಳಾ ಸಂಕುಲಕ್ಕೊಂದು ಮಾದರಿಯಾಗಿದ್ದಾರೆ ರೋಣ ತಾಲೂಕು ಬಣಜಿಗ ಸಮುದಾಯದ ಮುಖಂಡ ಎಂದು ವಿರಣ್ಣ ಶೆಟ್ಟರ ಹೇಳಿದರು ಅವರು ರೋಣ ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಿದ ಮಹಾಶರಣೆ ಅಕ್ಕ ಮಹಾದೇವಿ ಯವರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು, ಕನ್ನಡದ ಶ್ರೇಷ್ಠ ವಚನಕಾರ್ತಿ ಮಹಾಶರಣೆ ಅಕ್ಕಮಹಾದೇವಿಯವರು ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಮಹಾನ್ ಶರಣೆಯಾಗಿದ್ದಾರೆ , ಅವರು ಎದುರಿಸಿದ ಪರೀಕ್ಷೆಗಳು ಬಹಳಷ್ಟು, ಸಾಕ್ಷಾತ್ ಶಿವ ಮಲ್ಲಿಕಾರ್ಜುನ ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ಜೀವನ ನಡೆಸಿದರು ಇವರು ಈ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಅವರ ಗುಣಾದರ್ಶಗಳನ್ನು ನಾವೆಲ್ಲ ನಮ್ಮ್ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಸೋಮು ಚರೆದ, ವಿರೇಶ್ ಬಳ್ಳೊಳ್ಳಿ, ರವಿ ಸಂಗನಬಶೆಟ್ಟರ,ಬಸವರಾಜಾ ಕೋಟಗಿ, ಶಿವಣ್ಣ ಯಾವಗಲ್ಲ, ಮುತ್ತಣ್ಣ ಗದಗ, ವಿರೂಪಾಕ್ಷಪ್ಪ ಬೂದಿಹಾಳ, ವೀರಣ್ಣ ನವಲಗುಂದ, ಉಮೇಶ್ ಚವಡಿ, ಶೇಖಣ್ಣ ಐಹೊಳ್ಳಿ,ಪ್ರವೀಣ್ ಅಂಗಡಿ, ಉಪತಹಸಿಲ್ದಾರ್ ಗಣೇಶ್ ಕೊಪ್ಪದ, ಶರೀಫ ನದಾಫ,ಸೇರಿದಂತೆ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು1
- ಮಾಗಡಿ : ಕೆಂಪೇಗೌಡ ಪ್ರತಿಮೆ ಸ್ಥಳಾಂತರ ವಿಚಾರದಲ್ಲಿ ಕುಚೋದ್ಯನೇ, ಗಲಭೆ, ಪ್ರಚೋದನೆ ಸೃಷ್ಠಿಸಬಾರದು ಇದರಿಂದ ಶಾಂತಿ ಹದೆಗೆಡುತ್ತದೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಎಚ್.ಎಂ.ಕೃಷ್ಣಮೂರ್ತಿಗೆ ತಿರುಗೇಟ್ ನೀಡಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರ ಆರೋಗ್ಯ ದೃಷ್ಠಿಯಿಂದ 42 ಕೋಟಿರೂ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲ್ಲಿ ಪೂಜೆ ನೆರವೇರಿಸಲಾಗಿದೆ ಟೆಂಡರ್ ಪ್ರಕ್ರಿಯೆಯೂ ಆಗಿದ್ದು ಜಾಗವನ್ನು ಬಿಟ್ಟುಕೊಡಬೇಕಿದೆ ಆಸ್ಪತ್ರೆ ನಿರ್ಮಾಣದ ಜಾಗದಲ್ಲಿ ಕೆಂಪೇಗೌಡ ಪ್ರತಿಮೆ ಇದ್ದು ಈ ಪ್ರತಿಮೆಯನ್ನು ತೆರವುಗೊಳಿಸದಂತೆ ಎಚ್.ಎಂ.ಕೃಷ್ಣಮೂರ್ತಿ ಹೈಕೋರ್ಟ್ ಮೊರೆಹೊಗಿದ್ದು ಪ್ರತಿಮೆ ಗೆ ಧಕ್ಕೆ ಆಗದಂತೆ ಸ್ಥಳಾಂತರಿಸಲು ಹೈಕೋರ್ಟ್ ಸೂಚಿಸಿದಂತೆ ಸ್ಥಳಾಂತರಿಸಲು ಮೆಟ್ಟಿಲು ತೆರವುಗೊಳಿಸುವುದಕ್ಕೆ ಇಲ್ಲಸಲ್ಲದ ಆರೋಪಮಾಡುವುದು ಸರಿಯಲ್ಲ, ಕಾನೂನಾತ್ಮಕವಾಗಿ ಮರಗಳನ್ನು ತೆರವುಗೊಳಿಸಿ ಎಂದು ಆದೇಶವಿದೆ ಒರೆತು ಸ್ಟೇ ನೀಡಿಲ್ಲ ಎಂದರು. ಈಗಿರುವ ಪ್ರತಿಮೆಗೆ ಯಾವುದೇ ಧಕ್ಕೆ ಬಾರದಂತೆ ಪೂರ್ವಾಭಿಮುಖದಿಂದ ಉತ್ತರಾಭಿ ಮುಖವಾಗಿ ಸ್ಥಾಪಿಸಲಾಗುವುದು ಎಂದರು. ಶ್ರೀಮಂತರು ನಗರ ಪ್ರದೇಶದ ಆಸ್ಪತ್ರೆಗೆ ಹೋಗುತ್ತಾರೆ ಶ್ರೀಸಾಮಾನ್ಯರು ಎಲ್ಲಿಗೆ ಹೋಗಲು ಸಾಧ್ಯ, ಶಾಸಕರು ಮನೆ ನಿರ್ಮಿಸುತ್ತಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಆಸ್ಪತ್ರೆ ನಿರ್ಮಾಣವಾದ ನಂತರ ಶಾಸಕರ ಸಂಬಂಧಿಕರು ಚಿಕಿತ್ಸೆಪಡೆಯಲು ಬರುವುದಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಲಿ ಅಡೆ,ತಡೆಹೊಡ್ಡುವುದು, ಜನರಿಗೆ ಧಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಬೇಡ ಎಂದು ಕೆಂಪೇಗೌಡ ಅಭಿವೃದ್ದಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣನಮೂರ್ತಿಗೆ ಮನವಿ ಮಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಭವನ ಶಿಥಿಲವಾದ ಕಾರಣ ತರವುಗೊಳಿಸಿ ಹೊಸ ಭವನ ನಿರ್ಮಾಣಮಾಡಲಾಗುತ್ತಿದೆ. ಸರಕಾರಿ ಇಲಾಖೆಗಳನ್ನು ತೆರವುಗೊಳಿಸಿ ಶಾಸಕರ ಕಿಸೆಸೇರುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ, 2018ರಲ್ಲಿ ಕೋಟೆ ಜಾಗ ಕೆಶಿಫ್ ರಸ್ತೆಗೆ ಭೂಸ್ವಾಧಿನವಾಗಿದೆ ಈ ಹಣ ಸೋಮೇಶ್ವರ ದೇವಾಲಯದ ಖಾತೆಗೆ 70 ಲಕ್ಷರೂ ಜಮೆಯಾಗಿದೆ ಆ ವೇಳೆ ಎಚ್.ಸಿ.ಬಾಲಕೃಷ್ಣ ಶಾಸಕರಾಗಿರಲಿಲ್ಲ ಈ ಹಣ ಎಲ್ಲಿದೆ ಎಂದು ಖಚಿತಪಡಿಸಿಕೊಳ್ಳುವುದನ್ನು ಬಿಟ್ಟು ಶಾಸಕರ ವಿರುದ್ದ ಆರೋಪಮಾಡುವುದು ಸರಿಯಲ್ಲ ಎಂದು ಲೇವಡಿ ಮಾಡಿದರು. ಆಸ್ಪತ್ರೆ ಕಾಮಗಾರಿ ಇನ್ನೂ ಆರಂಭಿಸಿಲ್ಲ ಈಗಿರುವಾಗ ಎರಡು ವರ್ಷದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ ಎನ್ನುತ್ತಾರೆ ಅವರಿಗೆ ಕಳಕಳಿ ಇದ್ದರೆ ಕಾಮಗಾರಿ ನಡೆಯುವ ವೇಳೆ ವೀಕ್ಷಿಸಲಿ ಅದನ್ನು ಬಿಟ್ಟು ಬಿಟ್ಟು ಇಲ್ಲಸಲ್ಲದ ಆರೋಪಮಾಡುವುದು ಎಷ್ಟು ಸರಿ. ಅಭಿವೃದ್ದಿ ವಿಚಾರದಲ್ಲಿ ಚರ್ಚೆಗೆ ಬರಲಿ ಚರ್ಚೆಗೆ ನಾವು ಸಿದ್ದರಿದ್ದೇವೆ ದಿನಾಂಕ, ಸ್ಥಳ, ಸಮಯ ನಿಗಧಿಪಡಿಸಿ ಎಂದು ಸವಾಲು ಹಾಕಿದರು. ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು ಮಾತನಾಡಿ, ಎಚ್.ಎಂ.ಕೃಷ್ಣಮೂರ್ತಿ ಅಭಿವೃದ್ದಿ ವಿಚಾರದಲ್ಲಿ ಚರ್ಚಿಸಲಿ ಅದನ್ನು ಬಿಟ್ಟು ಶಾಸಕರ ಬಗ್ಗೆ ಅಗುರವಾಗಿ, ಏಕವಚನದಲ್ಲಿ ಮಾತನಾಡಿದರೆ ತಕ್ಕಪಾಠ ಕಲಿಸಲಾಗುವುದು, ಅಭಿವೃದ್ದಿಗೆ ಸಹಕಾರ ನೀಡಲಿ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡದೆ ಆಸ್ಪತ್ರೆ ನಿರ್ಮಾಣಕ್ಕೆ ವಿರೊಧಿಸುವುದು ಸರಿಯಲ್ಲ ಇದು ಸಾರ್ವಜನಿಕರ ಸ್ವತ್ತು. ಕಾನೂನಾತ್ಮಕವಾಗಿಯೇ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕರು ಮುಂದಾಗಿದ್ದಾರೆ ಜೇಡ್ರಹಳ್ಳಿ ಕೃಷ್ಣಪ್ಪ, ಮರೂರು ಸಾಗರ್ ಗೌಡ ಮಾಗಡಿ ಸರಕಾರಿ ಆಸ್ಪತ್ರೆಯಲ್ಲಿ ಎಷ್ಟು ದಿನ ಚಿಕಿತ್ಸೆ ಪಡೆದಿದ್ದಾರೆ ತಿಳಿಸಲಿ ಆಸ್ಪತ್ರೆ ನಿರ್ಮಾಣದ ವಿಚಾರದಲ್ಲಿ ಮಾತನಾಡಲು ಇವರಿಗೆ ಹಕ್ಕಿಲ್ಲ ಎಂದು ಲೇವಡಿ ಮಾಡಿದರು. ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಕೆಂಪೇಗೌಡರ ಬಗ್ಗೆ ಎಲ್ಲರಿಗೂ ಅಭಿಮಾನ, ಗೌರವವಿದೆ ಅದರಂತೆ ಆಸ್ಪತ್ರೆಯೂ ಪ್ರಮುಖವಾಗಿದೆ ಯಾವುದೇ ಧಕ್ಕೆ ಬಾರದಂತೆ ಪ್ರತಿಮೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆ ನಿರ್ಮಾಣಕ್ಕೆ ಯಾರು ಅಡ್ಡಿಪಡಿಸಬಾರದು. 100 ಕೋಟಿರೂ ವೆಚ್ಚದಲ್ಲಿ ಕೋಟೆ ಅಭಿವೃದ್ದಿಪಡಿಸಿ ಮಧ್ಯದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಉದ್ದೇಶವಿದೆ, ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ಯೂನಿವರ್ ಸಿಟಿ ಆಗುತ್ತಿರುವುದರಿಂದ ಮಾಗಡಿಯಲ್ಲಿ ಸುಸರ್ಜಿತ ಆಸ್ಪತ್ರೆ ನಿರ್ಮಾಣವಾಗುವುದರಿಂದ ನುರಿತ ವೈದ್ಯರು ಬರಲಿದ್ದಾರೆ ಇದರಿಂದ ಬಡವರಿಗೆ ಉತ್ತಮ ಆರೋಗ್ಯ ಸೇವೆ ಸಲ್ಲಿಸಬಹುದು ಅಭಿವೃದ್ದಿಗೆ ಕಾಲು ಏಳೆಯದೆ ಕೈಜೋಡಿಸಿ ಎಂದು ಮನವಿ ಮಾಡಿದರು. ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಗ್ರೋಪುರುಷೋತ್ತಮ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಕಲ್ಕೆರೆ ಶಿವಣ್ಣ, ಪುರಸಭೆ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಮಾಜಿ ಸದಸ್ಯರಾದ ರೂಪೇಶ್, ಆಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ರಮೇಶ್, ದೊಡ್ಡಿ ಲೋಕೇಶ್, ತಿರುಮಲೆ ವೆಂಕಟೇಶ್ ಇದ್ದರು.3
- *ಭಾರತ ನಲ್ಲಿ ವೈರಲ್*1
- सहेली के साथ संबंध बनाने का दबाव! बेंगलुरु में थाने पहुंचा पीड़ित पति, बोला- पत्नी की 'एक्स्ट्रा डिमांड' से तंग हूं बेंगलुरु के अमृतहल्ली इलाके से एक चौंकाने वाला कानूनी मामला सामने आया है. आमतौर पर महिलाओं की ओर से दर्ज कराए जाने वाले प्रताड़ना के मामलों के उलट, यहां एक पति ने अपनी पत्नी पर यौन शोषण और गंभीर मानसिक क्रूरता के आरोप लगाते हुए पुलिस का दरवाजा खटखटाया है. बेंगलुरु के अमृतहल्ली पुलिस स्टेशन में एक ऐसा मामला दर्ज हुआ है, जिसे कानूनी जानकार 'रेयर' मान रहे हैं. एक शख्स ने अपनी पत्नी के खिलाफ शिकायत दर्ज कराते हुए आरोप लगाया है कि वह लंबे समय से यौन और मानसिक क्रूरता का शिकार हो रहा है. पति का दावा है कि उसकी पत्नी उसे अप्राकृतिक यौन कृत्यों के लिए मजबूर करती थी और विरोध करने पर उसे प्रताड़ित किया जाता था. अश्लील वीडियो और 'यूनिक' डिमांड्स अमृतहल्ली पुलिस स्टेशन में दर्ज शिकायत के अनुसार, पीड़ित पति ने आरोप लगाया कि उसकी पत्नी उसे अक्सर अश्लील वीडियो भेजती थी और उन वीडियो में दिखाए गए कृत्यों को दोहराने के लिए दबाव डालती थी. इतना ही नहीं, पति का दावा है कि पत्नी उसे अपनी सहेलियों के साथ शारीरिक संबंध बनाने के लिए भी मजबूर करती थी और अपनी 'इंटिमेट यादें' दोस्तों के साथ साझा करने पर जोर देती थी. एक्स्ट्रा-मैरिटल अफेयर का विवाद शिकायतकर्ता ने आरोप लगाया कि उसकी पत्नी ने खुलेआम स्वीकार किया है कि उसके पुराने और वर्तमान में अन्य पुरुषों के साथ संबंध हैं. पत्नी का कहना है कि पति की आर्थिक स्थिति उसकी 'हाई-फाई लाइफस्टाइल' को सपोर्ट नहीं कर सकती. पति ने पत्नी पर शराब की लत और दोस्तों के साथ घंटों समय बिताने का भी आरोप लगाया है.1
- ವರ್ಷದ ಹಿಂದೆ ಬಡಗನ್ನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ಹಲ್ಲೆ ನಡೆಸಿದ ಆರೋಪಿತ ತಪ್ಪಿತಸ್ಥನೆಂದು ಪುತ್ತೂರು ನ್ಯಾಯಾಲಯ ಆದೇಶಿಸಿದೆ. 2025ರ ಜೂ.2ರಂದು ಬಡಗನ್ನೂರು ಗ್ರಾಮದ 15 ವರ್ಷ ಪ್ರಾಯದ ಅಪ್ರಾಪ್ತ ಬಾಲಕನಿಗೆ ಕೈಯಿಂದ ಕೆನ್ನೆಗೆ, ಕುತ್ತಿಗೆಗೆ ಹೊಡೆದು ಅವಾಚ್ಯ ಶಬ್ದದಿಂದ ನಿಂದಿಸಿ, ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಅಬ್ದುಲ್ ರವೂಫ್ (25ವ.)ಎಂಬಾತನ ವಿರುದ್ಧ ಬಾಲರ್ಕ ತಾಯಿ ರಮ್ಲ ಎಂಬವರು ದೂರು ನೀಡಿದ್ದರು.1
- *ಭಾರತ ನಲ್ಲಿ ವೈರಲ್*1
- ಮೈಸೂರು: ನಗರದ ರಾಮಾನುಜ ರಸ್ತೆಯಲ್ಲಿರುವ ಅಕ್ಕಮ್ಮಣ್ಣಿ ಉದ್ಯಾನವನದಲ್ಲಿ ಆಯೋಜಿಸಲಾದ ಉಚಿತ ಬಾಡಿಫೈ ಥೆರಪಿ ಶಿಬಿರಕ್ಕೆ ನಾಗರೀಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಶ್ರೀಮತಿ ಅಕ್ಕಮ್ಮಣ್ಣಿ ಉದ್ಯಾನವನ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಬಾಡಿಫೈ ಥೆರಪಿ ಸಂಸ್ಥೆಯ ಸಹಯೋಗದಲ್ಲಿ 10 ದಿನಗಳ ಉಚಿತ ಥೆರಪಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 27 ರಂದು ಆರಂಭವಾದ ಈ ಶಿಬಿರವು ಏಪ್ರಿಲ್ 5 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗೆ ಸೇವೆ ನೀಡಲಾಗುತ್ತಿದೆ. ಔಷಧಿ ರಹಿತ ವಿಧಾನದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ. ಮಾಂಸಖಂಡಗಳ ಸೆಳೆತ ನಿವಾರಣೆ, ರಕ್ತ ಪರಿಚಲನೆಯನ್ನು ಸುಧಾರಿಸುವುದು ಹಾಗೂ ನರಗಳಿಗೆ ಸಂಬಂಧಿಸಿದ ಸರಳ ಮತ್ತು ದೀರ್ಘಕಾಲಿಕ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಕ್ಕರೆ ಕಾಯಿಲೆ, ಪಾದ ಉರಿ, ಅಧಿಕ ರಕ್ತದೊತ್ತಡ, ಸಂಧಿವಾತ, ಕುತ್ತಿಗೆ ನೋವು, ಮಂಡಿನೋವು, ಸೊಂಟನೋವು, ಭುಜದ ನೋವು, ಸ್ನಾಯು ಸೆಳೆತ, ಸ್ಪಾಂಡಿಲೈಟಿಸ್, ಸಯಾಟಿಕ್, ಪಾರ್ಶ್ವವಾಯು, ಪಾರ್ಕಿನ್ಸನ್, ನಿದ್ರಾಹೀನತೆ, ನರಗಳ ಸಮಸ್ಯೆ ಹಾಗೂ ಥೈರಾಯ್ಡ್ ಸಂಬಂಧಿತ ತೊಂದರೆಗಳಿಗೆ ಈ ಥೆರಪಿ ಪರಿಣಾಮಕಾರಿ ಎಂದು ಆಯೋಜಕರು ತಿಳಿಸಿದ್ದಾರೆ. ಕೆವಲ 25 ನಿಮಿಷಗಳ ಥೆರಪಿಯಿಂದ ಸುಮಾರು 5 ಕಿಲೋಮೀಟರ್ ನಡೆದುಕೊಂಡಷ್ಟು ರಕ್ತಸಂಚಾರ ಹೆಚ್ಚಾಗುತ್ತದೆ ಎಂಬುದು ವಿಶೇಷವಾಗಿದೆ. ಶಿಬಿರ ಆರಂಭವಾದ ಕೆಲವೇ ದಿನಗಳಲ್ಲಿ ನೂರಾರು ನಾಗರಿಕರು ಭಾಗವಹಿಸಿ ಆರೋಗ್ಯ ಪ್ರಯೋಜನ ಪಡೆದುಕೊಂಡಿದ್ದಾರೆ. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತಿರುವ ಸಾರ್ವಜನಿಕರು ಶಿಬಿರವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಶಿಬಿರದಲ್ಲಿ ಭಾಗವಹಿಸದವರು ಏಪ್ರಿಲ್ 5 ರೊಳಗೆ ಅಕ್ಕಮ್ಮಣ್ಣಿ ಉದ್ಯಾನವನಕ್ಕೆ ಭೇಟಿ ನೀಡಿ ಉಚಿತ ಥೆರಪಿ ಸೇವೆಯನ್ನು ಪಡೆಯಬಹುದು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.1