ಪ್ರಧಾನಿ ಮೋದಿ ಶಿಸ್ತಿನ ಸಿಪಾಯಿ, ನಾವೂ ಅವರ ಹಾದಿಯಲ್ಲೇ ಸಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ. ಪ್ರಧಾನಿ ಮೋದಿ ಶಿಸ್ತಿನ ಸಿಪಾಯಿ, ನಾವೂ ಅವರ ಹಾದಿಯಲ್ಲೇ ಸಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ. ಶಿಡ್ಲಘಟ್ಟ: "ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯಲ್ಲಿ ಶಿಸ್ತು ಮತ್ತು ಕಾರ್ಯಕರ್ತನಿಗೆ ಮೊದಲ ಆದ್ಯತೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ, ಇಂದಿಗೂ ತಮ್ಮನ್ನು ಒಬ್ಬ ಸಾಮಾನ್ಯ ಕಾರ್ಯಕರ್ತ ಎಂದು ಕರೆದುಕೊಳ್ಳುತ್ತಾರೆ. ಅವರ ಇದೇ ಸರಳತೆ ಮತ್ತು ಕರ್ತವ್ಯನಿಷ್ಠೆ ನಮಗೆಲ್ಲರಿಗೂ ದಾರಿದೀಪ" ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ತಿಳಿಸಿದರು. ಶಿಡ್ಲಘಟ್ಟ ನಗರದ ಸೇವಾ ಸೌದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಂಘಟನಾ ಪರ್ವ ಮತ್ತು ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘಟನೆಯಲ್ಲಿ ಯುವ ನಾಯಕತ್ವದ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದರು. "ರಾಷ್ಟ್ರ ಮಟ್ಟದಲ್ಲಿ ನಿತಿನ್ ನವೀನ್ ಅವರಂತಹ ಯುವ ನಾಯಕರಿಗೆ ಜವಾಬ್ದಾರಿ ನೀಡಿರುವುದು ಪಕ್ಷಕ್ಕೆ ಹೊಸ ಕಳೆ ತಂದಿದೆ. ಅದೇ ಮಾದರಿಯಲ್ಲಿ ನಮ್ಮ ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಯುವಕರನ್ನು ಪಕ್ಷದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ" ಎಂದರು. "ಸಂಘಟನಾ ಪರ್ವವು ಕೇವಲ ಮೇಲ್ಮಟ್ಟದ ಸಭೆಗಳಿಗೆ ಸೀಮಿತವಾಗಬಾರದು. ನಾವು ಪ್ರತಿ ಮಂಡಲ ಮತ್ತು ಬೂತ್ ಮಟ್ಟಕ್ಕೆ ಹೋಗಿ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕಿದೆ. ಇದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಜನರಂತೆ ಒಟ್ಟು ಒಂಬತ್ತು ತಂಡಗಳನ್ನು ಈಗಾಗಲೇ ಸಜ್ಜುಗೊಳಿಸಲಾಗಿದೆ. ಈ ತಂಡಗಳು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲಿವೆ" ಎಂದು ಸೀಕಲ್ ರಾಮಚಂದ್ರ ಗೌಡ ವಿವರಿಸಿದರು. ಸಭೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದ ಅವರು, "ಬಿಜೆಪಿ ಎಂದರೆ ಕೇವಲ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಇದು ದೇಶ ಕಟ್ಟುವ ಸಂಘಟನೆ. ಬೂತ್ ಮಟ್ಟದಲ್ಲಿ ನಾವು ಎಷ್ಟು ಗಟ್ಟಿಯಾಗುತ್ತೇವೆಯೋ ಅಷ್ಟು ಸುಲಭವಾಗಿ ನಾವು ಜನರ ಸಮಸ್ಯೆಗಳಿಗೆ ಸ್ಪಂದಿಸಬಹುದು. ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸಿ, ಬಿಜೆಪಿಯನ್ನು ಅಜೇಯ ಶಕ್ತಿಯನ್ನಾಗಿ ರೂಪಿಸೋಣ" ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳಿಧರ್, ಜಿಲ್ಲಾ ಕಾರ್ಯದರ್ಶಿ ಅಶೋಕ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಜಿಲ್ಲಾ ಎಲ್ಲಾ ಮಂಡಲ ಅಧ್ಯಕ್ಷರುಗಳು ಪ್ರಧಾನ ಕಾರ್ಯದರ್ಶಿಗಳು ಕಾರ್ಯದರ್ಶಿಗಳು ಇನ್ನು ಮುಂತಾದವರು ಹಾಜರಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ
ಪ್ರಧಾನಿ ಮೋದಿ ಶಿಸ್ತಿನ ಸಿಪಾಯಿ, ನಾವೂ ಅವರ ಹಾದಿಯಲ್ಲೇ ಸಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ. ಪ್ರಧಾನಿ ಮೋದಿ ಶಿಸ್ತಿನ ಸಿಪಾಯಿ, ನಾವೂ ಅವರ ಹಾದಿಯಲ್ಲೇ ಸಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ. ಶಿಡ್ಲಘಟ್ಟ: "ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯಲ್ಲಿ ಶಿಸ್ತು ಮತ್ತು ಕಾರ್ಯಕರ್ತನಿಗೆ ಮೊದಲ ಆದ್ಯತೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ, ಇಂದಿಗೂ ತಮ್ಮನ್ನು ಒಬ್ಬ ಸಾಮಾನ್ಯ ಕಾರ್ಯಕರ್ತ ಎಂದು ಕರೆದುಕೊಳ್ಳುತ್ತಾರೆ. ಅವರ ಇದೇ ಸರಳತೆ ಮತ್ತು ಕರ್ತವ್ಯನಿಷ್ಠೆ ನಮಗೆಲ್ಲರಿಗೂ ದಾರಿದೀಪ" ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ತಿಳಿಸಿದರು. ಶಿಡ್ಲಘಟ್ಟ ನಗರದ ಸೇವಾ ಸೌದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಂಘಟನಾ ಪರ್ವ ಮತ್ತು ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘಟನೆಯಲ್ಲಿ ಯುವ ನಾಯಕತ್ವದ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದರು. "ರಾಷ್ಟ್ರ ಮಟ್ಟದಲ್ಲಿ ನಿತಿನ್ ನವೀನ್ ಅವರಂತಹ ಯುವ ನಾಯಕರಿಗೆ ಜವಾಬ್ದಾರಿ ನೀಡಿರುವುದು ಪಕ್ಷಕ್ಕೆ ಹೊಸ ಕಳೆ ತಂದಿದೆ. ಅದೇ ಮಾದರಿಯಲ್ಲಿ ನಮ್ಮ ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಯುವಕರನ್ನು ಪಕ್ಷದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ" ಎಂದರು. "ಸಂಘಟನಾ ಪರ್ವವು ಕೇವಲ ಮೇಲ್ಮಟ್ಟದ ಸಭೆಗಳಿಗೆ ಸೀಮಿತವಾಗಬಾರದು. ನಾವು ಪ್ರತಿ ಮಂಡಲ ಮತ್ತು ಬೂತ್ ಮಟ್ಟಕ್ಕೆ ಹೋಗಿ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕಿದೆ. ಇದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಜನರಂತೆ ಒಟ್ಟು ಒಂಬತ್ತು ತಂಡಗಳನ್ನು ಈಗಾಗಲೇ ಸಜ್ಜುಗೊಳಿಸಲಾಗಿದೆ. ಈ ತಂಡಗಳು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲಿವೆ" ಎಂದು ಸೀಕಲ್ ರಾಮಚಂದ್ರ ಗೌಡ ವಿವರಿಸಿದರು. ಸಭೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದ ಅವರು, "ಬಿಜೆಪಿ ಎಂದರೆ ಕೇವಲ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಇದು ದೇಶ ಕಟ್ಟುವ ಸಂಘಟನೆ. ಬೂತ್ ಮಟ್ಟದಲ್ಲಿ ನಾವು ಎಷ್ಟು ಗಟ್ಟಿಯಾಗುತ್ತೇವೆಯೋ ಅಷ್ಟು ಸುಲಭವಾಗಿ ನಾವು ಜನರ ಸಮಸ್ಯೆಗಳಿಗೆ ಸ್ಪಂದಿಸಬಹುದು. ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸಿ, ಬಿಜೆಪಿಯನ್ನು ಅಜೇಯ ಶಕ್ತಿಯನ್ನಾಗಿ ರೂಪಿಸೋಣ" ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳಿಧರ್, ಜಿಲ್ಲಾ ಕಾರ್ಯದರ್ಶಿ ಅಶೋಕ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಜಿಲ್ಲಾ ಎಲ್ಲಾ ಮಂಡಲ ಅಧ್ಯಕ್ಷರುಗಳು ಪ್ರಧಾನ ಕಾರ್ಯದರ್ಶಿಗಳು ಕಾರ್ಯದರ್ಶಿಗಳು ಇನ್ನು ಮುಂತಾದವರು ಹಾಜರಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ
- ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಸಮಾಜ ಸೇವಕ ನರಸಿಂಹಮೂರ್ತಿ ಭೇಟಿ: ರೈತರು ಹಾಗೂ ವ್ಯಾಪಾರಸ್ಥರ ಏಳಿಗೆಗಾಗಿ ವಿಶೇಷ ಪ್ರಾರ್ಥನೆ. ಶಿಡ್ಲಘಟ್ಟ : ಈ ಭಾಗದ ಅತ್ಯಂತ ಶ್ರದ್ಧಾ ಕೇಂದ್ರವಾಗಿರುವ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ಪುರಾತನ ಪೂಜಮ್ಮ ದೇವಸ್ಥಾನಕ್ಕೆ ಮೀನಾಕ್ಷಿ ಫೌಂಡೇಶನ್ ಅಧ್ಯಕ್ಷರು ಹಾಗೂ ಸಮಾಜ ಸೇವಕರು ಆದ ಬೀರಪ್ಪನಹಳ್ಳಿ ಗೌಡನವರ ನರಸಿಂಹಮೂರ್ತಿ ಅವರು ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ದೇವಸ್ಥಾನದ ಅಭಿವೃದ್ಧಿ ಹಾಗೂ ಲೋಕ ಕಲ್ಯಾಣಕ್ಕಾಗಿ ತಮ್ಮ ಅಳಿಲು ಸೇವೆಯನ್ನು ಅರ್ಪಿಸುವುದಾಗಿ ಭರವಸೆ ನೀಡಿದರು. ಶಿಡ್ಲಘಟ್ಟ ನಗರದ ಬೈಪಾಸ್ ರಸ್ತೆಯಲ್ಲಿರುವ ಪೂಜಮ್ಮ ದೇವಿಯ ಕರಗ ಮಹೋತ್ಸವ ಅಂಗವಾಗಿ ವಿಶೇಷ ಪೂಜೆಯನ್ನು ಹಮ್ಮಿಕೊಂಡಿದ್ದು ದೇವಾಲಯಕ್ಕೆ ಭೇಟಿ ತಾಯಿಯ ದರ್ಶನ ಪಡೆದು ಕ್ಷೇತ್ರದ ಜನತೆಯ ಒಳತಿಗಾಗಿ ದೇವರಲ್ಲಿ ಪ್ರಾರ್ಥಿಸಿದರು . ಸ್ಥಳೀಯ ಮುಖಂಡರಾದ ಮುನಿಯಪ್ಪಣ್ಣ ಅವರ ವಿಶೇಷ ಆಹ್ವಾನದ ಮೇರೆಗೆ ದೇವಸ್ಥಾನಕ್ಕೆ ಆಗಮಿಸಿದ ನರಸಿಂಹಮೂರ್ತಿ ಅವರಿಗೆ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ದಾರಿಯಲ್ಲಿ ತಾವು ನಿರಂತರವಾಗಿ ಸಂಚರಿಸುತ್ತಿರುವುದಾಗಿ ಮತ್ತು ಈ ಪುರಾತನ ದೇವಸ್ಥಾನದೊಂದಿಗೆ ತಮಗೆ ಮೊದಲಿನಿಂದಲೂ ಭಾವನಾತ್ಮಕ ಸಂಬಂಧವಿದೆ ಎಂದು ಸ್ಮರಿಸಿದರು. ಮುನಿಯಪ್ಪಣ್ಣ ಅವರ ಕರೆಯ ಮೇರೆಗೆ ಇಂದು ಇಲ್ಲಿಗೆ ಬಂದು ದೇವಿಯ ಸೇವೆ ಮಾಡುವ ಸೌಭಾಗ್ಯ ಸಿಕ್ಕಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಪೂಜಮ್ಮ ದೇವಿಯ ಕರಗ ಮಹೋತ್ಸವದಲ್ಲಿ ಭಾಗವಹಿಸಿದ ಅವರು, "ನಮ್ಮ ಕೈಲಾದ ಅಳಿಲು ಸೇವೆಯನ್ನು ಈ ಪುಣ್ಯಕ್ಷೇತ್ರಕ್ಕೆ ಸಲ್ಲಿಸುತ್ತಿದ್ದೇವೆ. ಭಕ್ತಿಯಿಂದ ಮಾಡುವ ಸಣ್ಣ ಸೇವೆಯೂ ದೊಡ್ಡ ಬದಲಾವಣೆಗೆ ಕಾರಣವಾಗುತ್ತದೆ" ಎಂದು ಅಭಿಪ್ರಾಯಪಟ್ಟರು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡುವ ಆಶಯವನ್ನು ಅವರು ವ್ಯಕ್ತಪಡಿಸಿದರು. ಮುಖ್ಯವಾಗಿ ಈ ಭಾಗದ ಶ್ರಮಿಕ ವರ್ಗದವರ ಬಗ್ಗೆ ಮಾತನಾಡಿದ ನರಸಿಂಹಮೂರ್ತಿ ಅವರು, "ಪೂಜಮ್ಮ ತಾಯಿಯ ಆಶೀರ್ವಾದ ಸಮಾಜದ ಪ್ರತಿಯೊಬ್ಬರಿಗೂ ಸಿಗಬೇಕು. ವಿಶೇಷವಾಗಿ ನಮ್ಮ ಬೆನ್ನೆಲುಬಾಗಿರುವ ರೈತರು ಮತ್ತು ಜೀವನೋಪಾಯಕ್ಕಾಗಿ ಶ್ರಮಿಸುವ ವ್ಯಾಪಾರಸ್ಥರಿಗೆ ತಾಯಿ ಒಳ್ಳೆಯದು ಮಾಡಲಿ" ಎಂದು ಹಾರೈಸಿದರು. ಈ ಭಾಗದ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿ ಮತ್ತು ಎಲ್ಲರ ಮನೆಯಲ್ಲಿ ಸುಖ-ಶಾಂತಿ ನೆಲೆಸಲಿ ಎಂದು ಅವರು ದೇವಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಕಮಿಟಿಯವರು ಮಾತನಾಡಿ ಹುಣ್ಣಿಮೆಯ ದಿವಸ ಗ್ರಹಣ ಇರುವುದರಿಂದ ಸಂಜೆ 3 ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ನಿಲ್ಲಿಸಿ ಗ್ರಹಣ ಮುಗಿದ ಬಳಿಕ ದೇವಾಲಯವನ್ನು ಸ್ವಚ್ಛಗೊಳಿಸಿ ರಾತ್ರಿ 11 ಗಂಟೆಗೆ ಕರಗ ಮಹೋತ್ಸವ ಪ್ರಾರಂಭವಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪೂಜಮ್ಮ ದೇವಾಲಯ ಟ್ರಸ್ಟ್ನ ಅಧ್ಯಕ್ಷರಾದ ಚಿಕ್ಕಮುನಿಯಪ್ಪ, ಉಪಾಧ್ಯಕ್ಷರಾದ ಆರ್.ಗಣೇಶ್, ಕೆ. ಮಂಜುನಾಥ್, ಕಾರ್ಯದರ್ಶಿ ನಾರಾಯಣಸ್ವಾಮಿ, ಖಜಾಂಚಿ ಚಿಕ್ಕಮುನಿಯಪ್ಪ, ಬೀರಪ್ಪನಹಳ್ಳಿ ದ್ಯಾವಪ್ಪ,ಬಿ.ಎಂ.ಕೃಷ್ಣ, ಹರಿಕೃಷ್ಣ, ಕುರುಬರಪೇಟೆ ಚಂದ್ರಶೇಖರ್,ವಿಘ್ನೇಶ್,ಸೇರಿದಂತೆ ನಗರದ ಪೂಜ ಮ್ಮ ದೇವಿ ಭಕ್ತರು ಪಾಲ್ಗೊಂಡಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ1
- ಮಳ್ಳೂರು ಗ್ರಾಮದ ಮಲ್ಲಶೆಟ್ಟಿ ಗೌರಮ್ಮ ರವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತ ಕಿಡ್ನಿ ಮೂತ್ರಪಿಂಡ ತಪಾಸಣಾ ಶಿಬಿರ1
- ನೆಲಮಂಗಲ Instagram ವೀಡಿಯೊ ಪ್ರೇರೇಪಣೆ.. ಬಾಲಕರಿಂದ ಮನೆಗಳಿಗೆ ಕನ್ನ! Instagram ನೋಡಿ ಪ್ರೇರಿತಗೊಂಡು ಅಪ್ರಾಪ್ತ ಬಾಲಕರಿಂದ ಕಳ್ಳತನ ಮನೆ ಬೀಗ ಹೊಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೊಬೈಲ್ ಕಳವು ಇತ್ತೀಚಿಗೆ ಮಾದನಾಯಕನಹಳ್ಳಿಯ ಸಿದ್ಧನಹೊಸಹಳ್ಳಿಯಲ್ಲಿ ನಡೆಸಿದ್ದ ಕಳ್ಳತನ ಮೊಬೈಲ್, ನೆಕ್ಲೆಸ್, ಕಿವಿ ಓಲೆ ಸೇರಿದಂತೆ ಬೆಳ್ಳಿ ಆಭರಣ ಕಳವು ಸದ್ಯ ಕಳ್ಳತನ ಮಾಡಿದ್ದ ಅಪ್ರಾಪ್ತ ಬಾಲಕರು, ಆರೋಪಿಗಳು, ಪೊಲೀಸರ ವಶಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.1
- *ಚಿಂತಾಮಣಿ:-ಗುಡಿಸಲು ಮುಕ್ತ ವನ್ನಾಗಿ ಮಾಡುವುದು ನನ್ನ ಗುರಿ ಸಿಎಂ ಬೈರೇಗೌಡ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಅಧ್ಯಕ್ಷರು* ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮಾನವ ಹಕ್ಕುಗಳು ಕಮಿಟಿ ಹಾಗೂ ಕರ್ನಾಟಕ ರಾಜ್ಯ ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಹಾಗೂ ಇತರೆ ಕಾರ್ಮಿಕ ಸಂಘ , ಸಹಯೋಗದಲ್ಲಿ ಇಂದು ಚಿಂತಾಮಣಿ ತಾಲೂಕಿನಲ್ಲಿ ಪತ್ರಿಕಾ ಭವನದಲ್ಲಿ ಮನೆ ಸಾಮಗ್ರಿಗಳು ವಿತರಣಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಇನ್ನು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಸಿ ಎಂ ಬೈರೇಗೌಡ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಸಾವಿರ ಮನೆಗಳ ನಿರ್ಮಾಣ ಮಾಡೋದಾ ಗೆ ಹೇಳಿದ್ದಾರೆ ಅಂತಂತವಾಗಿ ಸಾಮರ್ಥ್ಯವನ್ನು ವಿತರಣೆ ಮಾಡಲಾಗುವುದು 15ಕ್ಕೆ 21 ಅಳತಗೆ ತಕ್ಕಂತೆ ಸಾಮಗ್ರಿಗಳನ್ನು ನೀಡಲಾಗುವುದು ಈ ಜಿಲ್ಲೆಯಲ್ಲಿರುವ ಕಡು ಬಡವರಿಗೆ ಈ ಅವಕಾಶವನ್ನು ಕಲ್ಪಿಸಿದ್ದಾರೆ ಇನ್ನೂ ಇದೇ ಸಂದರ್ಭದಲ್ಲಿ:-ಸ್ವಾಭಿಮಾನಿ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ದೇವರಾಜ್ ಉಪಾಧ್ಯಕ್ಷ ಶಿವಾರೆಡ್ಡಿ ಖಜಾಂಚಿ ರಾಜಣ್ಣ ಪ್ರಧಾನ ಕಾರ್ಯದರ್ಶಿ ವೆಂಕಟೇಶ್,ಗೌರವಾಧ್ಯಕ್ಷರಾದ ರಾಮಕೃಷ್ಣಪ್ಪ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು ವರದಿ:-ಸೀನ.ಟಿ ಚಿಂತಾಮಣಿ2
- ಐದು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಮುನಿಲಕ್ಷ್ಮಮ್ಮ,ಇಂದು ಕಲ್ಲಹಳ್ಳಿ ಗ್ರಾಮದ ದೊಡ್ಡ ಕೆರೆಯಲ್ಲಿ ಶವವಾಗಿ ಪತ್ತೆ..!1
- KOLAR KI.AWAAZ KOUSAR NEWS i request to please help. And city saininagar, Kolar. Call arjalapa hospital. Patient. Request to oppression1
- ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಸದೃಶ್ಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಭದ್ರತಾ ಕಾರಣಗಳಿಂದಾಗಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟದಲ್ಲಿ ಬಳ್ಳಾರಿಯ ಪ್ರವಾಸಿಗರು: ದುಬೈಗೆ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ನಗರದ ಶಾಸಕ ಭರತ್ ರೆಡ್ಡಿ ಸೇರಿದಂತೆ ಬಳ್ಳಾರಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಪ್ರವಾಸಿಗರು ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ವಿಮಾನಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ತಾಯ್ನಾಡಿಗೆ ಮರಳಲು ಸಾಧ್ಯವಾಗದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಶಾಸಕರಿಂದ ವಿಡಿಯೋ ಸಂದೇಶ: ಈ ಪರಿಸ್ಥಿತಿಯ ನಡುವೆಯೇ ಶಾಸಕ ಭರತ್ ರೆಡ್ಡಿ ಅವರು ದುಬೈನಿಂದ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ತಾವು, ತಮ್ಮ ಕುಟುಂಬಸ್ಥರು ಹಾಗೂ ಬಳ್ಳಾರಿಯ ಸುಮಾರು 35ಕ್ಕೂ ಹೆಚ್ಚು ನಿವಾಸಿಗಳು ಸದ್ಯಕ್ಕೆ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಶೀಘ್ರದಲ್ಲೇ ಮರಳುವ ಆಶಯ ವ್ಯಕ್ತಪಡಿಸಿದ್ದಾರೆ.1
- ಪ್ರಧಾನಿ ಮೋದಿ ಶಿಸ್ತಿನ ಸಿಪಾಯಿ, ನಾವೂ ಅವರ ಹಾದಿಯಲ್ಲೇ ಸಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ. ಶಿಡ್ಲಘಟ್ಟ: "ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯಲ್ಲಿ ಶಿಸ್ತು ಮತ್ತು ಕಾರ್ಯಕರ್ತನಿಗೆ ಮೊದಲ ಆದ್ಯತೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ, ಇಂದಿಗೂ ತಮ್ಮನ್ನು ಒಬ್ಬ ಸಾಮಾನ್ಯ ಕಾರ್ಯಕರ್ತ ಎಂದು ಕರೆದುಕೊಳ್ಳುತ್ತಾರೆ. ಅವರ ಇದೇ ಸರಳತೆ ಮತ್ತು ಕರ್ತವ್ಯನಿಷ್ಠೆ ನಮಗೆಲ್ಲರಿಗೂ ದಾರಿದೀಪ" ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ತಿಳಿಸಿದರು. ಶಿಡ್ಲಘಟ್ಟ ನಗರದ ಸೇವಾ ಸೌದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಂಘಟನಾ ಪರ್ವ ಮತ್ತು ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘಟನೆಯಲ್ಲಿ ಯುವ ನಾಯಕತ್ವದ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದರು. "ರಾಷ್ಟ್ರ ಮಟ್ಟದಲ್ಲಿ ನಿತಿನ್ ನವೀನ್ ಅವರಂತಹ ಯುವ ನಾಯಕರಿಗೆ ಜವಾಬ್ದಾರಿ ನೀಡಿರುವುದು ಪಕ್ಷಕ್ಕೆ ಹೊಸ ಕಳೆ ತಂದಿದೆ. ಅದೇ ಮಾದರಿಯಲ್ಲಿ ನಮ್ಮ ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಯುವಕರನ್ನು ಪಕ್ಷದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ" ಎಂದರು. "ಸಂಘಟನಾ ಪರ್ವವು ಕೇವಲ ಮೇಲ್ಮಟ್ಟದ ಸಭೆಗಳಿಗೆ ಸೀಮಿತವಾಗಬಾರದು. ನಾವು ಪ್ರತಿ ಮಂಡಲ ಮತ್ತು ಬೂತ್ ಮಟ್ಟಕ್ಕೆ ಹೋಗಿ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕಿದೆ. ಇದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಜನರಂತೆ ಒಟ್ಟು ಒಂಬತ್ತು ತಂಡಗಳನ್ನು ಈಗಾಗಲೇ ಸಜ್ಜುಗೊಳಿಸಲಾಗಿದೆ. ಈ ತಂಡಗಳು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲಿವೆ" ಎಂದು ಸೀಕಲ್ ರಾಮಚಂದ್ರ ಗೌಡ ವಿವರಿಸಿದರು. ಸಭೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದ ಅವರು, "ಬಿಜೆಪಿ ಎಂದರೆ ಕೇವಲ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಇದು ದೇಶ ಕಟ್ಟುವ ಸಂಘಟನೆ. ಬೂತ್ ಮಟ್ಟದಲ್ಲಿ ನಾವು ಎಷ್ಟು ಗಟ್ಟಿಯಾಗುತ್ತೇವೆಯೋ ಅಷ್ಟು ಸುಲಭವಾಗಿ ನಾವು ಜನರ ಸಮಸ್ಯೆಗಳಿಗೆ ಸ್ಪಂದಿಸಬಹುದು. ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸಿ, ಬಿಜೆಪಿಯನ್ನು ಅಜೇಯ ಶಕ್ತಿಯನ್ನಾಗಿ ರೂಪಿಸೋಣ" ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳಿಧರ್, ಜಿಲ್ಲಾ ಕಾರ್ಯದರ್ಶಿ ಅಶೋಕ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಜಿಲ್ಲಾ ಎಲ್ಲಾ ಮಂಡಲ ಅಧ್ಯಕ್ಷರುಗಳು ಪ್ರಧಾನ ಕಾರ್ಯದರ್ಶಿಗಳು ಕಾರ್ಯದರ್ಶಿಗಳು ಇನ್ನು ಮುಂತಾದವರು ಹಾಜರಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ1