ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಕುಳಿತಿದ್ದ ವೇಳೆ ಒಂದನೇ ತರಗತಿ ವಿದ್ಯಾರ್ಥಿನಿ ಸೃಷ್ಠಿಗೆ ನಾಗರಹಾವು ಕಡಿತ ಹುಣಸೇಕಟ್ಟೆ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ ಹೌದು ಇದು ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಕುಳಿತಿದ್ದ ವೇಳೆ ಒಂದನೇ ತರಗತಿ ವಿದ್ಯಾರ್ಥಿನಿ ಸೃಷ್ಠಿಗೆ ನಾಗರಹಾವು ಕಡಿದಿದೆ ಎಂದು ತಿಳಿದುಬಂದಿದೆ. ಶಾಲಾ ಆವರಣದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಹಾವು ಕಡಿದ ಪರಿಣಾಮ ಸೃಷ್ಠಿ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಪರಿಸ್ಥಿತಿಯನ್ನು ಗಮನಿಸಿದ ಶಾಲಾ ಶಿಕ್ಷಕ ರವಿಶಂಕರ್ ಮಾನವೀಯತೆ ತೋರಿಸಿ, ಬಾಯಿಂದ ವಿಷವನ್ನು ತೆಗೆಯಲು ಯತ್ನಿಸಿದ್ದಾರೆ. ಈ ವೇಳೆ ಶಿಕ್ಷಕ ರವಿಶಂಕರ್ ಕೂಡ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣವೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾವು ಕಡಿದ ವಿದ್ಯಾರ್ಥಿನಿ ಸೃಷ್ಠಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಅತಂಕ ಸೃಷ್ಠಿಯಾಗಿದೆ.
ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಕುಳಿತಿದ್ದ ವೇಳೆ ಒಂದನೇ ತರಗತಿ ವಿದ್ಯಾರ್ಥಿನಿ ಸೃಷ್ಠಿಗೆ ನಾಗರಹಾವು ಕಡಿತ ಹುಣಸೇಕಟ್ಟೆ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ ಹೌದು ಇದು ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಕುಳಿತಿದ್ದ ವೇಳೆ ಒಂದನೇ ತರಗತಿ ವಿದ್ಯಾರ್ಥಿನಿ ಸೃಷ್ಠಿಗೆ ನಾಗರಹಾವು ಕಡಿದಿದೆ ಎಂದು ತಿಳಿದುಬಂದಿದೆ. ಶಾಲಾ ಆವರಣದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಹಾವು ಕಡಿದ ಪರಿಣಾಮ ಸೃಷ್ಠಿ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಪರಿಸ್ಥಿತಿಯನ್ನು ಗಮನಿಸಿದ ಶಾಲಾ ಶಿಕ್ಷಕ ರವಿಶಂಕರ್ ಮಾನವೀಯತೆ ತೋರಿಸಿ, ಬಾಯಿಂದ ವಿಷವನ್ನು ತೆಗೆಯಲು ಯತ್ನಿಸಿದ್ದಾರೆ. ಈ ವೇಳೆ ಶಿಕ್ಷಕ ರವಿಶಂಕರ್ ಕೂಡ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣವೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾವು ಕಡಿದ ವಿದ್ಯಾರ್ಥಿನಿ ಸೃಷ್ಠಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಅತಂಕ ಸೃಷ್ಠಿಯಾಗಿದೆ.
- ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ 3 ಸಾವು ಇಬ್ಬರು ಗಂಭೀರ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಭಾನುವಾರ ಬೆಳ್ಳಿಗ್ಗೆ ನಡೆದಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ತೆರಳುತ್ತಿದ್ದ ಕಾರು ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಲ್ಲಿ ಮೂವರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಗಳಾದ ಆರ್ ಎಸ್ಐ ಮಂಜುನಾಥ್ (32), ಆರ್ ಎಸ್ಐ ಅಮರೇಶ್ ಹಾಗೂ ಆರ್ ಎಸ್ಐ ಸಚಿನ್ ಎಂದು ಗುರುತಿಸಲಾಗಿದೆ. ಮೂವರೂ ರಿಸರ್ವ್ ಪೊಲೀಸ್ ಅಧಿಕಾರಿಗಳಾಗಿದ್ದರು. ಇದೇ ವೇಳೆ ಅಪಘಾತದಲ್ಲಿ ಆರ್ ಎಸ್ಐ ಮಹಂತೇಶ್ ಮತ್ತು ಪಿಎಸ್ಐ ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಜಿಲ್ಲಾ ಎಸ್ಪಿ ರಂಜೀತ್ ಕುಮಾರ ಬಂಡಾರು. ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.1
- ಹುಣಸೆಕಟ್ಟೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ನಾಗರಹಾವು ಕಚ್ಚಿದ್ದು ಮುಖ್ಯಶಿಕ್ಷಕ ಪ್ರಾಣವನ್ನೆ ಪಣಕ್ಕಿಟ್ಟು ವಿಧ್ಯಾರ್ಥಿನಿಯನ್ನ ಕಾಪಾಡಿದ್ದಾನೆ. ಚಿತ್ರದುರ್ಗ ತಾಲ್ಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ತಡಮಾಡದೆ ವಿಧ್ಯಾರ್ಥಿನಿಯ ಕಾಲಿಗೆ ತಮ್ಮ ಬಾಯಿಯಿಂದ ವಿಷವನ್ನ ತೆಗೆದು ವಿಧ್ಯಾರ್ಥಿನಿಯನ್ನ ಆಸ್ಪತ್ರೆಗೆ ಧಾಖಲಿಸಿದ್ದು ಶಾಲಾ ಮುಖ್ಯಶಿಕ್ಷಕ ರವಿಶಂಕರ್ ರ ಕಾರ್ಯಕ್ಕೆ ಎಲ್ಲೆಡ ಮೆಚ್ವುಗೆ ವ್ಯಕ್ತವಾಗಿದೆ.1
- ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.8
- ಶಿವಮೊಗ್ಗ-ಜಿಲ್ಲೆಯ ಸಮೀಪದ ಕರಕುಚ್ಚಿಯಲ್ಲಿ ಶ್ರೀ ಗುಳ್ಳಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ಪುನೀತರಾದರು.1
- Post by Mahesh Mahi1
- ಮಾ.15: ಅರಸೀಕೆರೆ ತಾಲೂಕು, ಜಾವಗಲ್ ಹೋಬಳಿ ಗೇರುಮರ ಗ್ರಾಮದ ಶ್ರೀ ಚನ್ನಬಸವೇಶ್ವರ ಇಂಗ್ಲಿಷ್ ಹೈಯರ್ ಪ್ರೈಮರಿ ಸ್ಕೂಲ್ ಇಲ್ಲಿ ದಿನಾಂಕ 11.03.2026ರಂದು ಅದ್ದೂರಿಯಾಗಿ ತಂದೆ ತಾಯಿಯ ಪಾದಪೂಜೆಯೊಂದಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 250 ತಂದೆ ತಾಯಂದಿರಿಗೆ ಅವರ ಮಕ್ಕಳಿಂದ ಪಾದಪೂಜೆ ಮಾಡಿ, ಗುರುಗಳಿಗೆ ಹೂ ಪುಷ್ಪಗಳೊಂದಿಗೆ ವಂದನೆಯನ್ನು ಸಲ್ಲಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಕಾರ್ಯದರ್ಶಿಗಳಾದ ವಿನಯ್ ಪಾಟೀಲ್ ರವರು ವಹಿಸಿದ್ದರು. ಇಂದಿನ ದಿನಮಾನಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಎಲ್ಲವನ್ನು ಮರೆತು ಹೋಗುತ್ತಿದ್ದಾರೆಂದು ಹೇಳಿ ತಂದೆ ತಾಯಿಗಳಾದ ತಾವುಗಳು ಮಕ್ಕಳಿಗೆ ಮೊಬೈಲನ್ನು ಕೊಡದೆ ಕಥೆ ಕದಂಬರಿ, ಚಿತ್ರಕಲೆ ಇತರೆ ಚಟುವಟಿಕೆಗಳಲ್ಲಿ ತಮ್ಮ ಜೊತೆ ತೊಡಗಿಸಿಕೊಳ್ಳಬೇಕೆಂದು ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಅದರ ಜೊತೆ ಪಾಲಕ ಪೋಷಕರ ಜವಾಬ್ದಾರಿಗಳು ಅವರ ಪಾತ್ರಗಳು ಶಾಲೆ ಮತ್ತು ಮಗು, ಪಾಲಕ ಪೋಷಕರು ಇವರ ನಡುವಿನ ಅವಿನಾಭಾವ ಸಂಬಂಧಗಳ ಬಗ್ಗೆ ತಿಳಿಸಿಕೊಟ್ಟರು. ಪಾಲಕ ಪೋಷಕ ಸಲಹಾ ಸಮಿತಿಯ ಅಧ್ಯಕ್ಷರು ಕಾರ್ಯದರ್ಶಿಗಳು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿಸ್ಥಿತರಿದ್ದರು. ಈ ಶಾಲೆಯ ಮುಖ್ಯೋಪಾಧ್ಯಾಯನಿ ಸರೋಜಮ್ಮ, ಶಿಕ್ಷಕಿಯರಾದ ಶುಭ, ಶೋಭಾ, ಗಗನ,ಸುಧಾ, ಸುಪ್ರಿಯಾ ಪಾಟೀಲ್ ಶಿಕ್ಷಕಿಯ ತರ ಸಿಬ್ಬಂದಿಯವರು ರಾಜಣ್ಣ, ರಂಗಸ್ವಾಮಿ ಮತ್ತು ರತ್ನಮ್ಮ ಈ ಕಾರ್ಯಕ್ರಮ ಯಶಸ್ವಿಯಾಗಲಿಕ್ಕೆ ಸಹಕಾರ ನೀಡಿದರು. ಈ ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ಶಿಕ್ಷಕಿಯರಾದ ಸುಪ್ರಿಯಾ ರವರು ಮಾಡಿದರು. ಶಾಲೆಯ ಮಕ್ಕಳು ವಚನಗಳನ್ನು ಹೇಳುವುದರೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.1
- ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7:00 ಗಂಟೆ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಯಲ್ಲಿ ನಡೆಯುವ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಪೊಲೀಸ್ ಸಿಬ್ಬದಿ ಕಾರು ಲಾರಿಯ ಹಿಂದಿನ ಭಾಗಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಹೋಗಿದ್ದು, ಸ್ಥಳದಲ್ಲೇ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ.1
- Post by Suresh Belagere1
- ತುಮಕೂರು ಡ್ರಸ್ ಎಂಬ ಮಾದಕ ಮಾಫಿಯಾದಲ್ಲಿ ಮುಸ್ಲಿಂ ಯುವಕರೇ ಅತಿ ಹೆಚ್ಚು ಯಾಕೆ?!1