ಬಾಗಲಕೋಟೆ:ವಿವಾದಿತ ಸ್ಥಳದಲ್ಲಿ ಹೊಳಿ ಮೆರವಣಿಗೆ – ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಹರಸಾಹಸ ಬಾಗಲಕೋಟೆ: ಶಿವಾಜಿ ಮೂರ್ತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ನಗರದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿರುವ ನಡುವೆಯೇ ವಿವಾದಿತ ಸ್ಥಳದ ಸಮೀಪದಿಂದ ಮತ್ತೆ ಹೊಳಿ ಹಬ್ಬದ ಅಂಗವಾಗಿ ಕಾಮದಹನ ಮೆರವಣಿಗೆ ನಡೆಸಲಾಗಿದೆ. ಯುವಕರು ಕಾಮದಹನ ಆಚರಣೆಯ ಮೆರವಣಿಗೆಯನ್ನು ನಡೆಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದರು. ಪಂಕ ಮಸೀದಿ ಸಮೀಪಕ್ಕೆ ಮೆರವಣಿಗೆ ಬಂದಾಗ ಕೆಲವು ಯುವಕರು ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಕೆಲಕಾಲ ಪೊಲೀಸರು ಹಾಗೂ ಹಿಂದು ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಪೊಲೀಸರು ಕಣ್ಣಿಡುತ್ತಿದ್ದಾರೆ. ಘಟನೆ ಬಾಗಲಕೋಟೆ ನಗರದ ಪಂಕ ಮಸೀದಿ ಮುಂಭಾಗದಲ್ಲಿ ನಡೆದಿದೆ.
ಬಾಗಲಕೋಟೆ:ವಿವಾದಿತ ಸ್ಥಳದಲ್ಲಿ ಹೊಳಿ ಮೆರವಣಿಗೆ – ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಹರಸಾಹಸ ಬಾಗಲಕೋಟೆ: ಶಿವಾಜಿ ಮೂರ್ತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ನಗರದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿರುವ ನಡುವೆಯೇ ವಿವಾದಿತ ಸ್ಥಳದ ಸಮೀಪದಿಂದ ಮತ್ತೆ ಹೊಳಿ ಹಬ್ಬದ ಅಂಗವಾಗಿ ಕಾಮದಹನ ಮೆರವಣಿಗೆ ನಡೆಸಲಾಗಿದೆ. ಯುವಕರು ಕಾಮದಹನ ಆಚರಣೆಯ ಮೆರವಣಿಗೆಯನ್ನು ನಡೆಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದರು. ಪಂಕ ಮಸೀದಿ ಸಮೀಪಕ್ಕೆ ಮೆರವಣಿಗೆ ಬಂದಾಗ ಕೆಲವು ಯುವಕರು ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಕೆಲಕಾಲ ಪೊಲೀಸರು ಹಾಗೂ ಹಿಂದು ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಪೊಲೀಸರು ಕಣ್ಣಿಡುತ್ತಿದ್ದಾರೆ. ಘಟನೆ ಬಾಗಲಕೋಟೆ ನಗರದ ಪಂಕ ಮಸೀದಿ ಮುಂಭಾಗದಲ್ಲಿ ನಡೆದಿದೆ.
- ಬಾಗಲಕೋಟೆ: ಶಿವಾಜಿ ಮೂರ್ತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ನಗರದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿರುವ ನಡುವೆಯೇ ವಿವಾದಿತ ಸ್ಥಳದ ಸಮೀಪದಿಂದ ಮತ್ತೆ ಹೊಳಿ ಹಬ್ಬದ ಅಂಗವಾಗಿ ಕಾಮದಹನ ಮೆರವಣಿಗೆ ನಡೆಸಲಾಗಿದೆ. ಯುವಕರು ಕಾಮದಹನ ಆಚರಣೆಯ ಮೆರವಣಿಗೆಯನ್ನು ನಡೆಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದರು. ಪಂಕ ಮಸೀದಿ ಸಮೀಪಕ್ಕೆ ಮೆರವಣಿಗೆ ಬಂದಾಗ ಕೆಲವು ಯುವಕರು ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಕೆಲಕಾಲ ಪೊಲೀಸರು ಹಾಗೂ ಹಿಂದು ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಪೊಲೀಸರು ಕಣ್ಣಿಡುತ್ತಿದ್ದಾರೆ. ಘಟನೆ ಬಾಗಲಕೋಟೆ ನಗರದ ಪಂಕ ಮಸೀದಿ ಮುಂಭಾಗದಲ್ಲಿ ನಡೆದಿದೆ.1
- ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರ ತೋರಿಸುತ್ತಿರುವ ತಾರತಮ್ಯ ಹಾಗೂ ಹಲವು ದಿನಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯರು ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಳ್ಳಾರಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಮಾರ್ಚ್ 11, 2026 ರಿಂದ ಮಾರ್ಚ್ 15, 2026ರವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿಗಳ ವಿಭಾಗವನ್ನು ಹೊರತುಪಡಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ. ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 16, 2026ರಿಂದ ತುರ್ತು ಚಿಕಿತ್ಸೆಯನ್ನೂ ಸ್ಥಗಿತಗೊಳಿಸಿ ಸಂಪೂರ್ಣ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ತೆರಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಹೇಶ್ ಕೋಣಿ ಅವರು, “ನಮ್ಮ ಸಂಘ ಮತ್ತು ಮೇಲಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಜಿಲ್ಲಾಧ್ಯಕ್ಷರು ತಿಳಿಸಿದಂತೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ತುರ್ತು ಚಿಕಿತ್ಸೆಯನ್ನು ಮಾತ್ರ ನೀಡುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ತುರ್ತು ಚಿಕಿತ್ಸೆಯನ್ನೂ ತೊರೆಯುತ್ತೇವೆ,” ಎಂದು ತಿಳಿಸಿದ್ದಾರೆ. ವೈದ್ಯರ ಈ ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರ ಮತ್ತು ವೈದ್ಯರ ಸಂಘದ ನಡುವೆ ಶೀಘ್ರವೇ ಸಮಾಲೋಚನೆ ನಡೆಯುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ಇಂತಹ ಇನ್ನಷ್ಟು ಅಪ್ಡೇಟ್ಗಳಿಗಾಗಿ ನಮ್ಮ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಹಾಗೂ ಸಬ್ಸ್ಕ್ರೈಬ್ ಮಾಡುವುದು ಮರೆಯಬೇಡಿ. ಧನ್ಯವಾದಗಳು.1
- ಗುಳೇದಗುಡ್ಡ: ಹೋಳಿ ಹಬ್ಬದ ಅಂಗವಾಗಿ ಬುಧವಾರ ಗುಳೇದಗುಡ್ಡ ಪಟ್ಟಣದಲ್ಲಿ ಯುವಕರು, ಮಹಿಳೆಯರು, ಮಕ್ಕಳ ಸೇರಿದಂತೆ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ ಸಂಭ್ರಮದಿಂದ ಬಣ್ಣದೋಕುಳಿ ಆಚರಿಸಿ,ಬಣ್ಣದಲ್ಲಿ ಮಿಂದೆದ್ದು ಕುಣಿದು ಕುಪ್ಪಳಿಸಿದರು.1
- ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ ಗೋರಬಾಳ ಗ್ರಾಮದಿಂದ ಆಗಮಿಸಿದ ಶ್ರೀಶೈಲ ಮಲ್ಲಯ್ಯನ ಕಂಬಿಗೆ, ಭಕ್ತಾದಿಗಳಿಗೆ ಭಕ್ತಿ ಭಾವದಿಂದ ಸ್ವಾಗತಿಸಿದರು. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ದೇವಸ್ಥಾನದಲ್ಲಿ ಮಲ್ಲಯ್ಯನ ಕಂಬಿಗೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರಿಂದ ಮಲ್ಲಯ್ಯನ ಪಾದಯಾತ್ರೆಗಳಿಗೆ, ಹಣ್ಣುಗಳನ್ನು ಪಾನಕಗಳನ್ನು ನೀಡಿ ಭಕ್ತಿ ಮೆರೆದರು. ವರದಿಗಾರರು; ಶರಣಗೌಡ ಕಂದಕೂರ2
- Post by @april14news1
- Post by Sharanugouda Patil1
- ವಿಜಯಪುರ: ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ವಿಜಯಪುರ ನಗರದಲ್ಲಿ ಹೋಳಿ ಹಬ್ಬ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕರಿಗೆ ಧೈರ್ಯ ತುಂಬುವ ಉದ್ದೇಶದಿಂದಾಗಿ, ಮಂಗಳವಾರ ರಾತ್ರಿ ಪೊಲೀಸ್ ಅಧಿಕಾರಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.1
- ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಭರ್ಜರಿ ಕಲರ್ಫುಲ್ ಹೋಳಿ ಸಂಭ್ರಮ ಜೋರಾಗಿ ನಡೆಯಿತು. ಎಸ್.ಆರ್.ಎ ಮೈದಾನದಲ್ಲಿ ಆಯೋಜಿಸಿದ್ದ ರಂಗಿನ ಹೋಳಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ಬಣ್ಣದಾಟದಲ್ಲಿ ಮಿಂದೇಳಿದರು. ಅಂತಾರಾಷ್ಟ್ರೀಯ ಮಟ್ಟದ ಹೆಸರಾಂತ ಡಿಜೆ ಆಪರೇಟರ್ಗಳಾದ ರಷ್ಯಾದ ಮೀನಾ ಹಾಗೂ ಭಾರತದ ಆರಿಯಾ ಡಿಜೆ ಸದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಡಿಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿ ಹೋಳಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು. ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ನೇತೃತ್ವದಲ್ಲಿ ಈ ಹೋಳಿ ಉತ್ಸವವನ್ನು ಆಯೋಜಿಸಲಾಗಿದ್ದು, ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.1