ಸಂಪುಟ ಬದಲಾವಣೆ ವಿಚಾರ: ನನಗೇನೂ ಗೊತ್ತಿಲ್ಲ, ಖರ್ಗೆ ಸ್ಪಷ್ಟನೆ. ಬೆಂಗಳೂರು: ಸಂಪುಟ ಪುನಾರಚನೆ ಅಥವಾ ಬದಲಾವಣೆ ಕುರಿತು ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಈ ಬಗ್ಗೆ ತಮಗೆ ಏನಾದರೂ ತಿಳಿದಿದ್ದರೆ ಹೇಳಿ, ನನಗೇನೂ ಗೊತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಸಂಪುಟ ಬದಲಾವಣೆ ಹಾಗೂ ಮುಖ್ಯಮಂತ್ರಿಗಳ ದೆಹಲಿ ಭೇಟಿಯ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿಗಳ ದೆಹಲಿ ಭೇಟಿಯ ವಿಚಾರವಾಗಿ ಮಾತನಾಡುತ್ತಾ, "ನಾನು ಸದ್ಯ ಕಲಬುರಗಿಯಲ್ಲಿದ್ದೇನೆ. ಯಾರೇ ಆದರೂ ದೆಹಲಿಗೆ ತೆರಳುವುದಕ್ಕೂ ಮುನ್ನ ನನ್ನ ಬಳಿಯೇ ಬರಬೇಕಲ್ಲವೇ?" ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಖರ್ಗೆ, ಸರ್ಕಾರದ ಪ್ರಮುಖ ಕಡತಗಳು ಹಾಗೂ ನಿರ್ಧಾರಗಳ ಕುರಿತು ಪ್ರತಿಕ್ರಿಯಿಸುತ್ತಾ, "ಯಾವುದೇ ಮಹತ್ವದ ಕಡತಗಳು ನನ್ನ ಗಮನಕ್ಕೆ ಬಾರದೆ ಹೋಗುವುದಿಲ್ಲ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಅಥವಾ ಯಾರನ್ನು ಕೈಬಿಡಬೇಕು ಎಂಬ ಪ್ರಕ್ರಿಯೆಗಳು ನನ್ನ ಬಳಿಯೇ ಬರಬೇಕು. ಅಂತಹ ಯಾವುದೇ ಕಡತಗಳು ಅಥವಾ ಪ್ರಸ್ತಾವನೆಗಳು ಅಧಿಕೃತವಾಗಿ ನನ್ನ ಬಳಿಗೆ ಬಂದಾಗ, ಖಂಡಿತವಾಗಿಯೂ ನಿಮಗೆ ತಿಳಿಸುತ್ತೇನೆ" ಎಂದು ತಿಳಿಸಿದರು.
ಸಂಪುಟ ಬದಲಾವಣೆ ವಿಚಾರ: ನನಗೇನೂ ಗೊತ್ತಿಲ್ಲ, ಖರ್ಗೆ ಸ್ಪಷ್ಟನೆ. ಬೆಂಗಳೂರು: ಸಂಪುಟ ಪುನಾರಚನೆ ಅಥವಾ ಬದಲಾವಣೆ ಕುರಿತು ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಈ ಬಗ್ಗೆ ತಮಗೆ ಏನಾದರೂ ತಿಳಿದಿದ್ದರೆ ಹೇಳಿ, ನನಗೇನೂ ಗೊತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಸಂಪುಟ ಬದಲಾವಣೆ ಹಾಗೂ ಮುಖ್ಯಮಂತ್ರಿಗಳ ದೆಹಲಿ ಭೇಟಿಯ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿಗಳ ದೆಹಲಿ ಭೇಟಿಯ ವಿಚಾರವಾಗಿ ಮಾತನಾಡುತ್ತಾ, "ನಾನು ಸದ್ಯ ಕಲಬುರಗಿಯಲ್ಲಿದ್ದೇನೆ. ಯಾರೇ ಆದರೂ ದೆಹಲಿಗೆ ತೆರಳುವುದಕ್ಕೂ ಮುನ್ನ ನನ್ನ ಬಳಿಯೇ ಬರಬೇಕಲ್ಲವೇ?" ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಖರ್ಗೆ, ಸರ್ಕಾರದ ಪ್ರಮುಖ ಕಡತಗಳು ಹಾಗೂ ನಿರ್ಧಾರಗಳ ಕುರಿತು ಪ್ರತಿಕ್ರಿಯಿಸುತ್ತಾ, "ಯಾವುದೇ ಮಹತ್ವದ ಕಡತಗಳು ನನ್ನ ಗಮನಕ್ಕೆ ಬಾರದೆ ಹೋಗುವುದಿಲ್ಲ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಅಥವಾ ಯಾರನ್ನು ಕೈಬಿಡಬೇಕು ಎಂಬ ಪ್ರಕ್ರಿಯೆಗಳು ನನ್ನ ಬಳಿಯೇ ಬರಬೇಕು. ಅಂತಹ ಯಾವುದೇ ಕಡತಗಳು ಅಥವಾ ಪ್ರಸ್ತಾವನೆಗಳು ಅಧಿಕೃತವಾಗಿ ನನ್ನ ಬಳಿಗೆ ಬಂದಾಗ, ಖಂಡಿತವಾಗಿಯೂ ನಿಮಗೆ ತಿಳಿಸುತ್ತೇನೆ" ಎಂದು ತಿಳಿಸಿದರು.
- ದುಬೈನಿಂದ ಇಂಡಿಗೋ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಳ್ಳಸಾಗಣೆಗೆಗೆ ಯತ್ನಿಸಿದ ಆರೋಪಿ ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳ ಕಾರ್ಯಾಚರಣೆ #ದೇವನಹಳ್ಳಿ ಬೆಂಗಳೂರು:ದುಬೈನಿಂದ ಇಂಡಿಗೋ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಳ್ಳಸಾಗಣೆಗೆಗೆ ಯತ್ನಿಸಿದ ಆರೋಪಿಯನ್ನ ಕಾರ್ಯಾಚರಣೆ ನಡೆಸಿ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಮೊಹಮ್ಮದ್ ಸಿರಾಜ್ ಕಳ್ಳಸಾಗಣೆಗೆ ಯತ್ನ ಮಾಡಿದ ಆರೋಪಿಯಾಗಿದ್ದು,ಬಾಯಿಯಲ್ಲಿ ಚಿನ್ನದ 82 ಗ್ರಾಂ ತೂಕದ ಎರಡು ಕ್ಯಾಪ್ಸುಲ್ ಸಾಗಾಟ ಮಾಡಲು ಯತ್ನಿಸಿದ್ದು,ಬೆಂಗಳೂರಿನಿಂದ ಗಾಜಿಯಾಬಾದ್ ಗೆ ಪ್ರಯಾಣ ಬೆಳೆಸಲು ಟಿಕೆಟ್ ಬುಕ್ ಮಾಡಿದ .ಈ ವೇಳೆ ಸ್ಕ್ರೀನಿಂಗ್ ಮಾಡುವಾಗ ಆರೋಪಿ ಸಿಕ್ಕಿಬಿದ್ದಿದ್ದು,ಆರೋಪಿಯನ್ನ ವಶಕ್ಕೆ ಪಡೆದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೋಲೀಸರ ವಶಕ್ಕೆ ಕಸ್ಟಮ್ ಅಧಿಕಾರಿಗಳು ನೀಡಿದ್ದಾರೆ.1
- ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ. ದೇವನಹಳ್ಳಿ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ. 7 ಗಂಟೆಯ ವಿಮಾನದಲ್ಲಿ ಪ್ರಯಾಣ. AI2654 ವಿಮಾನದ ಮೂಲಕ ಪ್ರಯಾಣ. ಕಾಂಗ್ರೆಸ್ ಕಚೇರಿ ಉದ್ಘಾಟನೆ, ನೀರಿನ ಸಮಸ್ತ ಕುರಿತು ಕಾನೂನು ತಜ್ಞರ ಜೊತೆಯಲ್ಲಿ ಚರ್ಚೆಗೆ ದೆಹಲಿ ಪ್ರಯಾಣ. ಸಿಎಂ ಬೀಳ್ಕೊಡಲು ಏರ್ಪೋರ್ಟ್ ಗೆ ಆಗಮಿಸಿದ ಸಚಿವ ಈಶ್ವರ್ ಖಂಡ್ರೆ. ಬೀದರ್ ಶಾಸಕ ರಹೀಂಖಾನ್ ಸಿಎಂ ತೆರಳಿದ ನಂತರ ಬೆಂಗಳೂರಿನತ್ತ ಹೊರಡಲಿರುವ ಈಶ್ವರ್ ಖಂಡ್ರೆ ರಹಿಂಖಾನ್ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ಪ್ರಯಾಣ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ1
- ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆಯಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ; ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಕನಕಪುರ:ನಗರದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಮಳಿಗೆ (ಟಿ.ಎ.ಪಿ.ಸಿ.ಎಂ.ಎಸ್) ನಲ್ಲಿ ಪಡಿತರ ಅಕ್ಕಿ-ರಾಗಿ ಮಾರಾಟ ಹಾಗೂ ಸಾಗಾಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಂಘದ ಅಧ್ಯಕ್ಷ ಚಿಕ್ಕೇನಹಳ್ಳಿ ವೆಂಕಟೇಶ್ ಹೇಳಿದರು. ಬುಧವಾರ ನಗರದ ರೈಸ್ಮಿಲ್ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ಬಡವರಿಗೆ ನೀಡುವ ಪಡಿತರ ಅಕ್ಕಿ ಮತ್ತು ರಾಗಿಯನ್ನು ಅನಧಿಕೃತವಾಗಿ ಸಂಗ್ರಹಿಸುವುದು ಮತ್ತು ಮಾರಾಟ ಮಾಡುವುದು ಸರ್ಕಾರ ನಿಯಮಗಳ ಪ್ರಕಾರವೇ ಪಡಿತರ ಅಕ್ಕಿಯನ್ನು ಮಾರಾಟ ಮಾಡಲಾಗುತ್ತಿದೆ. ಕೆಲವು ಸಂಘಟನೆಯ ವ್ಯಕ್ತಿಗಳು ದುರುದ್ದೇಶ ಪೂರ್ವಕವಾಗಿ ಪಡಿತರ ಪದಾರ್ಥಗಳ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ನಗರದ ಸಹಕಾರಿ ಸಂಘದ ಗೋಡೌನ್ನಿಂದ ಪಡಿತರ ಅಕ್ಕಿ ಹಾಗೂ ರಾಗಿ ಕಳ್ಳ ಸಾಗಣೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಿಕರಣ ನೀಡಿದ ಅವರು, ಪಡಿತರ ಆಹಾರ ಸಾಗಿಸಲು ಸಂಘದ ಸಾಗಾಣಿಕಾ ಲಾರಿಗಳ ಕೊರತೆಯಿಂದ ಪಡಿತರ ಸಾಗಿಸಲು ಸಂಘದ ಆಡಳಿತಾಧಿಕಾರಿಯ ಅನುಮತಿ ಪಡೆದು ಖಾಸಗಿ ಮಿನಿ ಲಾರಿಯಲ್ಲಿ ಪಡಿತರ ಆಹಾರ ಸಾಗಿಸಲಾಗುತ್ತಿತ್ತು, ಈ ಸಂದರ್ಭದಲ್ಲಿ ಆರ್.ಟಿ.ಐ. ಕಾರ್ಯಕರ್ತನೆಂದು ಹೇಳಿಕೊಂಡು ಬಂದ ಕೆ.ಆರ್.ಸುರೇಶ್ ಎಂಬಾತ ಅಕ್ರಮವಾಗಿ ಗೋದಾಮು ಬಳಿ ಬಂದು ಸರಕು ತುಂಬಿದ್ದ ವಾಹನಗಳನ್ನು ತಡೆದು, ಕೆಲ ಸಂಘಟೆನಯ ಮುಖಂಡರುಗಳಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಸುಳ್ಳು ಮಾಹಿತಿ ನೀಡಿ, ಸಂಘಕ್ಕೆ ಹಾಗೂ ಆಡಳಿತ ಮಂಡಳಿಗೆ ಕೆಟ್ಟ ಹೆಸರು ಬರಲಿ ಎಂದು ಸಂಚು ನಡೆಸಿರುವುದಾಗಿ ಆರೋಪಿಸಿದರು. ಉಪಾಧ್ಯಕ್ಷ ಚಿಕ್ಕಣ್ಣ ಮಾತನಾಡಿ, ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವುದಕ್ಕೆ ಸರ್ಕಾರ ಹಲವಾರು ಕಠಿಣ ಕಾನೂನು ತಂದಿದ್ದಾರೆ. ನಮ್ಮ ಸಂಸ್ಥೆಯಿಂದ ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿರುವುದಿಲ್ಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ತರುಲು ನಡೆಸಿರುವ ಹುನ್ನಾರ ಇದಾಗಿದೆ. ಸ್ಥಳೀಯವಾಗಿ ಹಿಂದೂ ಸಂಘಟನೆಯ ಹೆಸರಿನ ಕೆ.ಆರ್.ಸುರೇಶ್ ಹಾಗೂ ಸ್ಥಳೀಯ ಪತ್ರಕರ್ತರಿಬ್ಬರು ಸೇರಿದ ನಮ್ಮ ಸಂಸ್ಥೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಿರಾಕರಿಸಿದ ಹಿನ್ನಲೆಯಲ್ಲಿ ನಮ್ಮ ಸಹಕಾರಿ ಸಂಘದ ತೇಜೋವಧೆ ಮಾಡಲು ಮುಂದಾಗಿದ್ದಾರೆ. ಮುಂದೆ ಇವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು. ನಿರ್ದೇಶಕರಾದ ದೇವರಾಜು, ಶಿವಣ್ಣ ನವರು ಮಾತನಾಡಿ, ನಮ್ಮ ಆಡಳಿತ ಮಂಡಳಿಯ ಅಧಿಕಾರಾವಧಿಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದರು. ನಿರ್ದೇಶಕರಾದ ಶ್ರೀನಿವಾಸ್, ನಾಗರಾಜು, ನಾಗೇಶ್, ಸಿದ್ದರಾಜು, ಪುಟ್ಟಸ್ವಾಮಯ್ಯ ಗೋಷ್ಠಿಯಲ್ಲಿ ಹಾಜರಿದ್ದರು.1
- ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ1
- *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ* ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್ ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು. ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ ಮುಖಂಡರುಗಳಾದ ಕಾಟ್ಮನೂರು ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್, ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.3
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ.1
- ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬೆಂಗಳೂರು:ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರವಹಿಸಲಾಗಿದೆ.ಲಖನೌದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ 6E-231 ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಟರ್ಮಿನಲ್-1ರ ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ BTAC ಸಭೆ ನಡೆದಿದೆ.ಬೆದರಿಕೆ ಆಧರಿಸಿ ಅಗತ್ಯ ಭದ್ರತಾ ಕ್ರಮ ಜಾರಿ ಮಾಡಲಾಗಿದ್ದು,ವಿಮಾನ ಹಾಗೂ ಟರ್ಮಿನಲ್ ಪ್ರದೇಶದಲ್ಲಿ ತೀವ್ರ ಭದ್ರತಾ ಪರಿಶೀಲನೆ ನಡೆಸಲಾಗಿದೆ.ಪ್ರಯಾಣಿಕರ ಸುರಕ್ಷತೆಗಾಗಿ ಏರ್ಪೋರ್ಟ್ನಲ್ಲಿ ಕಟ್ಟೆಚ್ಚರವಹಿಸಲಾಗಿದೆ.1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಉರುಸ್ ಮಹೋತ್ಸವ ಶಾಂತಿ,ಸೌಹಾರ್ದತೆಗೆ ಪ್ರಾರ್ಥಿಸಿದ:ದರ್ಗಾದಲ್ಲಿ ಜೆ.ಕೆ. ಕೃಷ್ಣಾರೆಡ್ಡಿ ವಿಶೇಷ ಪೂಜೆ1
- ನೇಪಾಳದಲ್ಲಿ ಹಠಾತ್ ಪ್ರವಾಹಕ್ಕೆ ಭೂಕಂಪ, ಹಿಮಕುಸಿತ ಕಾರಣ! 95ಕ್ಕೂ ಹೆಚ್ಚು ಸಾವು, ನದಿಗೆ ನುಗ್ಗಿದ ನೀರು-ಕೆಸರು! ನೇಪಾಳದಲ್ಲಿ ಹಠಾತ್ ಪ್ರವಾಹಕ್ಕೆ ಭೂಕಂಪ, ಹಿಮಕುಸಿತ ಕಾರಣ! 95ಕ್ಕೂ ಹೆಚ್ಚು ಸಾವು, ನದಿಗೆ ನುಗ್ಗಿದ ನೀರು-ಕೆಸರು!1