ನೆಲಮಂಗಲದ ಬಸವನಹಳ್ಳಿಯಲ್ಲಿ ಪ್ರೇಮ ವಿವಾಹವಾಗಿದ್ದ ನವವಿವಾಹಿತೆ ತನುಜಾ (31) ಎಂಬುವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ತನುಜಾ ಗೌರಿಬಿದನೂರಿನ ಬೀರಮ್ಮನಹಳ್ಳಿಯ ನಿವಾಸಿಯಾಗಿದ್ದು, ಯಲಹಂಕ ಮಾಯಸಂದ್ರ ನಿವಾಸಿ ರವೀಂದ್ರ ಎಂಬುವವರನ್ನು ಧರ್ಮಸ್ಥಳದಲ್ಲಿ ಪ್ರೇಮ ವಿವಾಹವಾಗಿದ್ದರು. ಮದುವೆಯಾದ ಬಳಿಕ ಸ್ವಲ್ಪ ಸಮಯ ಕಳೆದ ನಂತರ ಮನೆಯಲ್ಲಿ ವಿಷಯ ತಿಳಿಸುವುದಾಗಿ ಹೇಳಿದ್ದ ರವೀಂದ್ರ, ತನುಜಾ ಅವರನ್ನು ಪಿಜಿಯಲ್ಲಿ ಇರಿಸಿದ್ದರು. ನಂತರ ಆಕೆ ಯಲಹಂಕದ ಸಿಂಗಾಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ತನುಜಾ ತನ್ನ ಪತಿ ರವೀಂದ್ರನಿಗೆ ಫೋನ್ ಮಾಡಿ ಮನೆಗೆ ಬರುವಂತೆ ಕರೆದಿದ್ದರು. ಆದರೆ ರವೀಂದ್ರ ಅವರು ಈಗ ಬರಲು ಸಾಧ್ಯವಿಲ್ಲ, ಬೆಳಿಗ್ಗೆ ಬರುವುದಾಗಿ ತಿಳಿಸಿದ್ದರು. ಇದರಿಂದ ಕೋಪಗೊಂಡ ತನುಜಾ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಬಳಿಕ ರಾತ್ರಿ 10 ಗಂಟೆಗೆ ತಾನು ವಿಷ ಕುಡಿದಿದ್ದು, ನೆಲಮಂಗಲದ ಬಸವನಹಳ್ಳಿಯಲ್ಲಿ ಕುಳಿತಿರುವುದಾಗಿ ರವೀಂದ್ರನಿಗೆ ಸಂದೇಶ ಕಳುಹಿಸಿದ್ದರು. ರವೀಂದ್ರ ತಕ್ಷಣ ಸ್ಥಳಕ್ಕೆ ಬಂದು ನೋಡಿ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಾಗಲೇ ತನುಜಾ ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲಮಂಗಲದ ಬಸವನಹಳ್ಳಿಯಲ್ಲಿ ಪ್ರೇಮ ವಿವಾಹವಾಗಿದ್ದ ನವವಿವಾಹಿತೆ ತನುಜಾ (31) ಎಂಬುವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ತನುಜಾ ಗೌರಿಬಿದನೂರಿನ ಬೀರಮ್ಮನಹಳ್ಳಿಯ ನಿವಾಸಿಯಾಗಿದ್ದು, ಯಲಹಂಕ ಮಾಯಸಂದ್ರ ನಿವಾಸಿ ರವೀಂದ್ರ ಎಂಬುವವರನ್ನು ಧರ್ಮಸ್ಥಳದಲ್ಲಿ ಪ್ರೇಮ ವಿವಾಹವಾಗಿದ್ದರು. ಮದುವೆಯಾದ ಬಳಿಕ ಸ್ವಲ್ಪ ಸಮಯ ಕಳೆದ ನಂತರ ಮನೆಯಲ್ಲಿ ವಿಷಯ ತಿಳಿಸುವುದಾಗಿ ಹೇಳಿದ್ದ ರವೀಂದ್ರ, ತನುಜಾ ಅವರನ್ನು ಪಿಜಿಯಲ್ಲಿ ಇರಿಸಿದ್ದರು. ನಂತರ ಆಕೆ ಯಲಹಂಕದ ಸಿಂಗಾಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ತನುಜಾ ತನ್ನ ಪತಿ ರವೀಂದ್ರನಿಗೆ ಫೋನ್ ಮಾಡಿ ಮನೆಗೆ
ಬರುವಂತೆ ಕರೆದಿದ್ದರು. ಆದರೆ ರವೀಂದ್ರ ಅವರು ಈಗ ಬರಲು ಸಾಧ್ಯವಿಲ್ಲ, ಬೆಳಿಗ್ಗೆ ಬರುವುದಾಗಿ ತಿಳಿಸಿದ್ದರು. ಇದರಿಂದ ಕೋಪಗೊಂಡ ತನುಜಾ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಬಳಿಕ ರಾತ್ರಿ 10 ಗಂಟೆಗೆ ತಾನು ವಿಷ ಕುಡಿದಿದ್ದು, ನೆಲಮಂಗಲದ ಬಸವನಹಳ್ಳಿಯಲ್ಲಿ ಕುಳಿತಿರುವುದಾಗಿ ರವೀಂದ್ರನಿಗೆ ಸಂದೇಶ ಕಳುಹಿಸಿದ್ದರು. ರವೀಂದ್ರ ತಕ್ಷಣ ಸ್ಥಳಕ್ಕೆ ಬಂದು ನೋಡಿ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಾಗಲೇ ತನುಜಾ ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಸಚಿವ ಬೈರತಿ ಸುರೇಶ್ ಅವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಚಿವರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಆಕ್ರೋಶದ ವಿಡಿಯೋ ಪ್ರಸ್ತುತ ವೈರಲ್ ಆಗಿದೆ.1
- ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಜ್ಜಕದಿರೇನಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ SIR ಪ್ರಕ್ರಿಯೆ ಜಾಗೃತಿ ಅಭಿಯಾನಕ್ಕೆ ಭಾರಿ ಜನಸಾಗರವೇ ಹರಿದುಬಂದಿದೆ. ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಬಂದು ಕಿಕ್ಕಿರಿದು ಸೇರಿದ್ದಾರೆ.1
- ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ನೂತನ ವಿಮಾನ ಗೋಪುರ ಉದ್ಘಾಟನೆ ಹಾಗೂ ದೇವಾಲಯದ ಪ್ರತಿಷ್ಠಾಪನೆ ಕಾರ್ಯಕ್ರಮವು ಭಾನುವಾರ ಅತ್ಯಂತ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ ನೆರವೇರಿತು. ಗ್ರಾಮದ ಪ್ರತಿಯೊಬ್ಬರ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಈ ಪುಣ್ಯ ಕಾರ್ಯಕ್ಕೆ ಸಹಕರಿಸಿದ ಎಲ್ಲಾ ಮಹನೀಯರಿಗೂ ಗ್ರಾಮದ ಮುಖಂಡರು ಧನ್ಯವಾದಗಳನ್ನು ಅರ್ಪಿಸಿದರು. ದೇವಾಲಯದ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಈ ಸಂದರ್ಭದಲ್ಲಿ ಹೋಮ ಹವನಗಳು ನೆರವೇರಿದವು ಹಾಗೂ ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ ಮತ್ತು ಆಕರ್ಷಕ ಹೂವಿನ ಅಲಂಕಾರವನ್ನು ಏರ್ಪಡಿಸಲಾಗಿತ್ತು. ಮಹಾ ಮಂಗಳಾರತಿಯ ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಚುಂಚದೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ದೇವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ಈ ವೈಭವದ ಕಾರ್ಯಕ್ರಮದಲ್ಲಿ ಗ್ರಾಮದ ಪ್ರಮುಖ ಮುಖಂಡರುಗಳಾದ ಡಿ. ರಾಮಚಂದ್ರಪ್ಪ, ಸಿ. ವಿ. ಮುನಿರಾಜು, ಎಸ್. ನಾರಾಯಣ ಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ್, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಮತ್ತು ಚುಂಚದೇನಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.3
- ಕೆ.ಜಿ.ಎಫ್ ತಾಲ್ಲೂಕಿನ ರಾಮಸಾಗರ ಗ್ರಾಪಂ ವ್ಯಾಪ್ತಿಯ ಪಾಪೇನಹಳ್ಳಿ ಗ್ರಾಮದ ಸರ್ಕಾರಿ ರಾಜಕಾಲುವೆಯಲ್ಲಿದ್ದ ಬೆಲೆಬಾಳುವ ಹುಣಸೆ ಮರಗಳನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಟಾವು ಮಾಡಿ ಸಾಗಿಸುತ್ತಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗ್ರಾಮದ ವಿವಿಧ ಸರ್ವೆ ನಂಬರ್ಗಳ ಮಧ್ಯೆ ಹಾದುಹೋಗುವ ರಾಜಕಾಲುವೆಯ ಆಜುಬಾಜು ಬೃಹತ್ ಮರಗಳು ಬೆಳೆದಿದ್ದು, ತಹಶೀಲ್ದಾರ್ ಆದೇಶದನ್ವಯ ಕಂದಾಯ ಅಧಿಕಾರಿಗಳು ಈ ಹಿಂದೆ ಮಹಜರು ನಡೆಸಿ ಒಟ್ಟು 18 ಬೃಹತ್ ಮರಗಳನ್ನು ಗುರುತಿಸಿದ್ದರು. ಸಾರ್ವಜನಿಕ ಆಸ್ತಿಯಾದ ಈ ಮರಗಳನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ವಹಿಸಲಾಗಿತ್ತು ಎನ್ನಲಾಗಿದೆ. ಆದರೆ, ಕಳೆದ 15 ದಿನಗಳಿಂದ ಖಾಸಗಿ ವ್ಯಕ್ತಿಗಳು ಕಾನೂನುಬಾಹಿರವಾಗಿ ಎರಡು ಬೃಹತ್ ಹುಣಸೆ ಮರಗಳನ್ನು ಕಡಿದು ಸಾಗಿಸುತ್ತಿದ್ದರೂ ತಡೆಯದ ಪಂಚಾಯಿತಿ ಅಧಿಕಾರಿಗಳು ಸರ್ಕಾರಿ ಸ್ವತ್ತನ್ನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಆಕ್ರೋಶದ ಸಂದರ್ಭದಲ್ಲಿ ಗ್ರಾಮಸ್ಥರಾದ ರಮೇಶ್, ಮಲ್ಲನ್ನ ಹಾಗೂ ನಾರಾಯಣಪ್ಪ ಉಪಸ್ಥಿತರಿದ್ದರು.1
- ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಸೋಮವಾರ ಜಿಲ್ಲಾಡಳಿತ ಭವನದಲ್ಲಿನ ವಿವಿಧ ಇಲಾಖೆಗಳ ಕಚೇರಿಗಳಿಗೆ ಖುದ್ದು ಭೇಟಿ ನೀಡಿ ಅಧಿಕಾರಿಗಳ ಹಾಜರಾತಿಯ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿರುವ ಕಂದಾಯ ಇಲಾಖೆ, ಭೂ ದಾಖಲೆಗಳ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ಹಲವು ಇಲಾಖೆಗಳಿಗೆ ಜಿಲ್ಲಾಧಿಕಾರಿಗಳು ದಿಢೀರ್ ಭೇಟಿ ನೀಡಿದ್ದಾರೆ. ಸರ್ಕಾರವು ಇತ್ತೀಚೆಗೆ ಎಲ್ಲಾ ಸರ್ಕಾರಿ ನೌಕರರಿಗೆ 'ಕರ್ತವ್ಯ ಆಪ್' ಮೂಲಕ ಆನ್ಲೈನ್ ಡಿಜಿಟಲ್ ಹಾಜರಾತಿ ಕಡ್ಡಾಯಗೊಳಿಸಿದ್ದು, ಅಧಿಕಾರಿಗಳು ಬೆಳಿಗ್ಗೆ 10:00 ಗಂಟೆಗೆ ಲಾಗಿನ್ ಮತ್ತು ಸಂಜೆ 5:30 ಕ್ಕೆ ಲಾಗ್ ಔಟ್ ಆಗಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10.30 ರಿಂದ 11.00 ರ ಸಮಯದಲ್ಲಿ ಕಚೇರಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬಂದು ಕುರ್ಚಿಯಲ್ಲಿ ಕುಳಿತಿದ್ದಾರೆಯೇ, ಸಿಬ್ಬಂದಿಗಳು ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ್ದಾರೆಯೇ ಮತ್ತು ಒಂದು ವೇಳೆ ಅವರು ಕ್ಷೇತ್ರ ಭೇಟಿಗೆ ಹೋಗಿದ್ದರೆ ಅದನ್ನು ಕರ್ತವ್ಯ ಆಪ್ನಲ್ಲಿ ದಾಖಲಿಸಿದ್ದಾರೆಯೇ ಎಂದು ಪರಿಶೀಲಿಸಿ ಪ್ರಶ್ನಿಸಿದ್ದಾರೆ. ಅನೇಕ ಕಚೇರಿಗಳಲ್ಲಿ ಕುರ್ಚಿಗಳು ಖಾಲಿ ಇರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಫುಲ್ ಕ್ಲಾಸ್ ತಗೆದುಕೊಂಡಿದ್ದು, ಗೈರುಹಾಜರಿಗೆ ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ ಕರ್ತವ್ಯ ಆಪ್ನಲ್ಲಿ ಕಡ್ಡಾಯವಾಗಿ ನಿಗದಿತ ಸಮಯಕ್ಕೆ ಹಾಜರಾತಿ ದಾಖಲಿಸದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಮ್ಮ ಕಚೇರಿಗಳಿಗೆ ಭೇಟಿ ನೀಡುತ್ತಾರೆ ಎಂದು ಊಹಿಸದ ಸಿಬ್ಬಂದಿ ಸಂಪೂರ್ಣ ಗಾಬರಿಗೊಂಡಿದ್ದು, ಇಂತಹ ದಿಢೀರ್ ತಪಾಸಣೆಗಳಿಂದ ಅಧಿಕಾರಿಗಳ ಕಾರ್ಯಕ್ಷಮತೆ ಹೆಚ್ಚಿ ಸಾರ್ವಜನಿಕರ ಸಮಸ್ಯೆಗಳು ಶೀಘ್ರವಾಗಿ ಬಗೆಹರಿಯಲಿವೆ ಎಂದು ಸಾರ್ವಜನಿಕರು ಆಶಿಸಿದ್ದಾರೆ.3
- ನೆಲಮಂಗಲದ ಬಸವನಹಳ್ಳಿಯಲ್ಲಿ ಪ್ರೇಮ ವಿವಾಹವಾಗಿದ್ದ ನವವಿವಾಹಿತೆ ತನುಜಾ (31) ಎಂಬುವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ತನುಜಾ ಗೌರಿಬಿದನೂರಿನ ಬೀರಮ್ಮನಹಳ್ಳಿಯ ನಿವಾಸಿಯಾಗಿದ್ದು, ಯಲಹಂಕ ಮಾಯಸಂದ್ರ ನಿವಾಸಿ ರವೀಂದ್ರ ಎಂಬುವವರನ್ನು ಧರ್ಮಸ್ಥಳದಲ್ಲಿ ಪ್ರೇಮ ವಿವಾಹವಾಗಿದ್ದರು. ಮದುವೆಯಾದ ಬಳಿಕ ಸ್ವಲ್ಪ ಸಮಯ ಕಳೆದ ನಂತರ ಮನೆಯಲ್ಲಿ ವಿಷಯ ತಿಳಿಸುವುದಾಗಿ ಹೇಳಿದ್ದ ರವೀಂದ್ರ, ತನುಜಾ ಅವರನ್ನು ಪಿಜಿಯಲ್ಲಿ ಇರಿಸಿದ್ದರು. ನಂತರ ಆಕೆ ಯಲಹಂಕದ ಸಿಂಗಾಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ತನುಜಾ ತನ್ನ ಪತಿ ರವೀಂದ್ರನಿಗೆ ಫೋನ್ ಮಾಡಿ ಮನೆಗೆ ಬರುವಂತೆ ಕರೆದಿದ್ದರು. ಆದರೆ ರವೀಂದ್ರ ಅವರು ಈಗ ಬರಲು ಸಾಧ್ಯವಿಲ್ಲ, ಬೆಳಿಗ್ಗೆ ಬರುವುದಾಗಿ ತಿಳಿಸಿದ್ದರು. ಇದರಿಂದ ಕೋಪಗೊಂಡ ತನುಜಾ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಬಳಿಕ ರಾತ್ರಿ 10 ಗಂಟೆಗೆ ತಾನು ವಿಷ ಕುಡಿದಿದ್ದು, ನೆಲಮಂಗಲದ ಬಸವನಹಳ್ಳಿಯಲ್ಲಿ ಕುಳಿತಿರುವುದಾಗಿ ರವೀಂದ್ರನಿಗೆ ಸಂದೇಶ ಕಳುಹಿಸಿದ್ದರು. ರವೀಂದ್ರ ತಕ್ಷಣ ಸ್ಥಳಕ್ಕೆ ಬಂದು ನೋಡಿ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಾಗಲೇ ತನುಜಾ ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.2
- ಬೆಂಗಳೂರಿನಿಂದ ನೆಲಮಂಗಲದತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬಳೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಸಾರ್ವಜನಿಕರ ಎದುರೇ ಧರ್ಮದೇಟು ಬಿದ್ದ ಘಟನೆ ನಡೆದಿದೆ. ಪ್ರಯಾಣದ ವೇಳೆ ವ್ಯಕ್ತಿಯ ಅನುಚಿತ ವರ್ತನೆಯಿಂದ ತೀವ್ರ ಬೇಸರಗೊಂಡ ಯುವತಿ ಕಣ್ಣೀರು ಹಾಕಿದ್ದು, ಇದನ್ನು ಗಮನಿಸಿದ ಸಹ ಪ್ರಯಾಣಿಕರು ಕಾರಣ ಕೇಳಿದಾಗ ಆಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಸಹ ಪ್ರಯಾಣಿಕರು ಆರೋಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಯುವತಿ ಕೂಡ ಬಸ್ನಲ್ಲೇ ಆರೋಪಿಯ ಕಪಾಳಕ್ಕೆ ಹೊಡೆದು ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಈ ಘಟನೆಯಿಂದಾಗಿ ಬಸ್ನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.1