logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹೆಗ್ಗೆರೆಯ ಸೇವಂತಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಸಂಭ್ರಮ ಮಹಿಳಾ ಸಬಲೀಕರಣ, ಆರೋಗ್ಯ ಜಾಗೃತಿ, ಸಂಸ್ಕೃತಿ-ಸಂಸ್ಕಾರದ ಬಗ್ಗೆ ಮಾತೃಶ್ರೀ ಯೋಜನೆ ಪದಾಧಿಕಾರಿಗಳಿಂದ ಮಾರ್ಗದರ್ಶನ. ತುರುವೇಕೆರೆ, ಆ.27: ತಾಲೂಕಿನ ಯೋಜನಾ ಕಚೇರಿಯ ದಂಡಿನಶಿವರ ವಲಯದ ಹೆಗ್ಗೆರೆ ಕಾರ್ಯಕ್ಷೇತ್ರದ ಸೇವಂತಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಶಿಕ್ಷಕ ರಾಜಶೇಖರ್ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರ ಸಬಲೀಕರಣ ಹಾಗೂ ಜ್ಞಾನದ ಅರಿವು ಮೂಡಿಸಲು ಮಾತೃಶ್ರೀ ಹೇಮಾವತಿ ಅಮ್ಮನವರು ಇಂತಹ ಕಾರ್ಯಕ್ರಮಗಳಲ್ಲಿ ಸದಸ್ಯರುಗಳನ್ನು ವಿವಿಧ ಬಗೆಯ ಕೌಶಲ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಅನುಷ್ಠಾನಗೊಳಿಸಿರುವುದು ಸಂತಸದ ಸಂಗತಿ ಎಂದು ತಿಳಿಸಿದರು. ಕ್ಷೇತ್ರ ಯೋಜನಾಧಿಕಾರಿ ಕುಸುಮಧರ್ ಅವರು ಮಾತನಾಡಿ, ಮಾತೃಶ್ರೀ ಅಮ್ಮನವರ ಪರಿಕಲ್ಪನೆಯಲ್ಲಿ ಮೂಡಿಬಂದ ಜ್ಞಾನವಿಕಾಸ ಮತ್ತು ವಾತ್ಸಲ್ಯ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಕುಟುಂಬ ಸಾಮರಸ್ಯದಿಂದ ಇರಬೇಕಾದರೆ ಆ ಮನೆಯ ಮಹಿಳೆ ಸದಾ ಪ್ರಜ್ವಲಿಸುವ ದೀಪದಂತೆ ಇರಬೇಕು, ಸ್ವಾವಲಂಬಿ ಬದುಕು ಕಟ್ಟಿಕೊಂಡು ಆರ್ಥಿಕವಾಗಿ ಕುಟುಂಬವನ್ನು ಮುನ್ನಡೆಸಲು ಉತ್ಪಾದಕ ಚಟುವಟಿಕೆ ಮತ್ತು ಶಿಸ್ತಿನ ಮಹತ್ವವನ್ನು ಅವರು ವಿವರಿಸಿದರು. ಪ್ರತಿ ತಿಂಗಳು ಆರೋಗ್ಯ ಮತ್ತು ನೈರ್ಮಲ್ಯ, ಸ್ವ ಉದ್ಯೋಗ, ಪೌಷ್ಟಿಕ ಆಹಾರ, ಆರೋಗ್ಯ ತಪಾಸಣಾ ಶಿಬಿರ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದ ಅವರು, ಇತ್ತೀಚಿನ ದಿನಗಳಲ್ಲಿ ದೇವರ ಪೂಜೆಯ ಘಂಟೆಯ ಸದ್ದು ಕ್ಷೀಣಿಸುತ್ತಾ ಸಂಸ್ಕೃತಿ-ಸಂಸ್ಕಾರ ಕಣ್ಮರೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಮಕ್ಕಳಿಗೆ ಹಾಗೂ ಹಿರಿಯರಿಗೆ ಕುಟುಂಬದಲ್ಲಿ ಗೌರವದಿಂದ ನಡೆದುಕೊಳ್ಳುವ ಸಂಸ್ಕೃತಿ-ಸಂಸ್ಕಾರ ರೂಢಿಸುವುದು, ದೇವರ ಪೂಜೆ ಹಾಗೂ ದೇವಸ್ಥಾನಗಳಲ್ಲಿ ಭಜನೆ ಕಲಿಸುವುದು ಪೋಷಕರ ಜವಾಬ್ದಾರಿ ಎಂದು ಅವರು ಅಭಿಪ್ರಾಯಪಟ್ಟರು. ಮಕ್ಕಳ ಶಿಕ್ಷಣದ ಬಗ್ಗೆ ಗಮನಹರಿಸುವುದು ಪೋಷಕರ ಪ್ರಮುಖ ಜವಾಬ್ದಾರಿಯಾಗಿದ್ದು, ಇದಕ್ಕೆ ಪೂರಕವಾಗಿ ಜ್ಞಾನವಿಕಾಸ ಯೂಟ್ಯೂಬ್ ಚಾನಲ್ನಲ್ಲಿ ಬರುವ ಮಾಹಿತಿಗಳನ್ನು ವೀಕ್ಷಿಸುವಂತೆ ಸಲಹೆ ನೀಡಿದ ಅವರು, ಸದಸ್ಯರುಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ಗುರುತಿಸಿಕೊಳ್ಳಲು ಅಂತ್ಯಾಕ್ಷರಿ ಸ್ಪರ್ಧೆ, ಹಾಡುಗಳು, ಸಾಂಸ್ಕೃತಿಕ ಕಾರ್ಯಕ್ರಮ, ಹೊಸ ರುಚಿ, ರಂಗೋಲಿಯಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಪ್ತ ಸಮಾಲೋಚಕಿ ಉಮಾ ಅವರು ಮಾತನಾಡಿ, ಆರೋಗ್ಯವಂತರಾಗಿ ಇರಬೇಕಾದರೆ ಜೀವನ ಶೈಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯಯುತವಾಗಿರಬೇಕು ಎಂದರು. ದಿನನಿತ್ಯ ನಾವು ಬಳಕೆ ಮಾಡುತ್ತಿರುವ ಕೆಲವು ವಸ್ತುಗಳಿಂದಲೂ ಅನಾರೋಗ್ಯದ ಸಮಸ್ಯೆಗಳು ಎದುರಾಗುತ್ತಿರುವುದಾಗಿ ಅವರು ವಿವರಿಸಿದರು. ಆಹಾರ ಪದ್ಧತಿ, ನಿದ್ರೆಯ ಕ್ರಮ ಮತ್ತು ದೈನಂದಿನ ಚಟುವಟಿಕೆಗಳಲ್ಲಿನ ಏರುಪೇರುಗಳು ಕೂಡ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ಅವರು ತಿಳಿಸಿದರು. ಜೊತೆಗೆ, ಅತಿಯಾದ ಮೊಬೈಲ್ ಬಳಕೆ, ಫೇಸ್ಬುಕ್, ಇನ್ಸ್ಟಾಗ್ರಾಮ್ ರೀಲ್ಸ್ ಬಳಕೆಯಿಂದ ಹಲವು ದುಷ್ಪರಿಣಾಮಗಳು ಕಂಡುಬರುತ್ತಿರುವುದಾಗಿ ಅವರು ಗಮನ ಸೆಳೆದರು. ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯ ಚಟ, ಕಣ್ಣಿನ ಸಮಸ್ಯೆ, ಏಕಾಗ್ರತೆಯ ಕೊರತೆ ಹಾಗೂ ಮಾನಸಿಕ ಒತ್ತಡದಂತಹ ಸಮಸ್ಯೆಗಳ ಬಗ್ಗೆಯೂ ಅವರು ಸದಸ್ಯರುಗಳ ಗಮನ ಸೆಳೆದರು. ಈ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಗಮನ ಹರಿಸಿ, ಪೌಷ್ಟಿಕ ಆಹಾರ ಸೇವನೆ, ನಿಯಮಿತ ವ್ಯಾಯಾಮ ಮತ್ತು ಶಿಸ್ತುಬದ್ಧ ಜೀವನ ಕ್ರಮದ ಮೂಲಕ ಉತ್ತಮ ಆರೋಗ್ಯ ಮತ್ತು ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕೆಂದು ಅವರು ಅರಿವಿನ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಭಾಗ್ಯಮ್ಮ, ಸಂಯೋಜಕಿ ಲಕ್ಷ್ಮಿದೇವಮ್ಮ ಸೇರಿದಂತೆ ಸೇವಂತಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

1 hr ago
user_Manohara
Manohara
Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
1 hr ago
927ed844-1ac7-48fb-8bef-ae9025593854

ಹೆಗ್ಗೆರೆಯ ಸೇವಂತಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಸಂಭ್ರಮ ಮಹಿಳಾ ಸಬಲೀಕರಣ, ಆರೋಗ್ಯ ಜಾಗೃತಿ, ಸಂಸ್ಕೃತಿ-ಸಂಸ್ಕಾರದ ಬಗ್ಗೆ ಮಾತೃಶ್ರೀ ಯೋಜನೆ ಪದಾಧಿಕಾರಿಗಳಿಂದ ಮಾರ್ಗದರ್ಶನ. ತುರುವೇಕೆರೆ, ಆ.27: ತಾಲೂಕಿನ ಯೋಜನಾ ಕಚೇರಿಯ ದಂಡಿನಶಿವರ ವಲಯದ ಹೆಗ್ಗೆರೆ ಕಾರ್ಯಕ್ಷೇತ್ರದ ಸೇವಂತಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಶಿಕ್ಷಕ ರಾಜಶೇಖರ್ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರ ಸಬಲೀಕರಣ ಹಾಗೂ ಜ್ಞಾನದ ಅರಿವು ಮೂಡಿಸಲು ಮಾತೃಶ್ರೀ ಹೇಮಾವತಿ ಅಮ್ಮನವರು ಇಂತಹ ಕಾರ್ಯಕ್ರಮಗಳಲ್ಲಿ ಸದಸ್ಯರುಗಳನ್ನು ವಿವಿಧ ಬಗೆಯ ಕೌಶಲ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಅನುಷ್ಠಾನಗೊಳಿಸಿರುವುದು ಸಂತಸದ ಸಂಗತಿ ಎಂದು ತಿಳಿಸಿದರು. ಕ್ಷೇತ್ರ ಯೋಜನಾಧಿಕಾರಿ ಕುಸುಮಧರ್ ಅವರು ಮಾತನಾಡಿ, ಮಾತೃಶ್ರೀ ಅಮ್ಮನವರ ಪರಿಕಲ್ಪನೆಯಲ್ಲಿ ಮೂಡಿಬಂದ ಜ್ಞಾನವಿಕಾಸ ಮತ್ತು ವಾತ್ಸಲ್ಯ ಕಾರ್ಯಕ್ರಮಗಳ ಕುರಿತು

ffe524da-3158-453f-9e1e-4463fa673484

ವಿವರಿಸಿದರು. ಕುಟುಂಬ ಸಾಮರಸ್ಯದಿಂದ ಇರಬೇಕಾದರೆ ಆ ಮನೆಯ ಮಹಿಳೆ ಸದಾ ಪ್ರಜ್ವಲಿಸುವ ದೀಪದಂತೆ ಇರಬೇಕು, ಸ್ವಾವಲಂಬಿ ಬದುಕು ಕಟ್ಟಿಕೊಂಡು ಆರ್ಥಿಕವಾಗಿ ಕುಟುಂಬವನ್ನು ಮುನ್ನಡೆಸಲು ಉತ್ಪಾದಕ ಚಟುವಟಿಕೆ ಮತ್ತು ಶಿಸ್ತಿನ ಮಹತ್ವವನ್ನು ಅವರು ವಿವರಿಸಿದರು. ಪ್ರತಿ ತಿಂಗಳು ಆರೋಗ್ಯ ಮತ್ತು ನೈರ್ಮಲ್ಯ, ಸ್ವ ಉದ್ಯೋಗ, ಪೌಷ್ಟಿಕ ಆಹಾರ, ಆರೋಗ್ಯ ತಪಾಸಣಾ ಶಿಬಿರ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದ ಅವರು, ಇತ್ತೀಚಿನ ದಿನಗಳಲ್ಲಿ ದೇವರ ಪೂಜೆಯ ಘಂಟೆಯ ಸದ್ದು ಕ್ಷೀಣಿಸುತ್ತಾ ಸಂಸ್ಕೃತಿ-ಸಂಸ್ಕಾರ ಕಣ್ಮರೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಮಕ್ಕಳಿಗೆ ಹಾಗೂ ಹಿರಿಯರಿಗೆ ಕುಟುಂಬದಲ್ಲಿ ಗೌರವದಿಂದ ನಡೆದುಕೊಳ್ಳುವ ಸಂಸ್ಕೃತಿ-ಸಂಸ್ಕಾರ ರೂಢಿಸುವುದು, ದೇವರ ಪೂಜೆ ಹಾಗೂ ದೇವಸ್ಥಾನಗಳಲ್ಲಿ ಭಜನೆ ಕಲಿಸುವುದು ಪೋಷಕರ ಜವಾಬ್ದಾರಿ ಎಂದು ಅವರು ಅಭಿಪ್ರಾಯಪಟ್ಟರು. ಮಕ್ಕಳ ಶಿಕ್ಷಣದ ಬಗ್ಗೆ ಗಮನಹರಿಸುವುದು

e1f54a43-4722-4817-93df-419f36af7c48

ಪೋಷಕರ ಪ್ರಮುಖ ಜವಾಬ್ದಾರಿಯಾಗಿದ್ದು, ಇದಕ್ಕೆ ಪೂರಕವಾಗಿ ಜ್ಞಾನವಿಕಾಸ ಯೂಟ್ಯೂಬ್ ಚಾನಲ್ನಲ್ಲಿ ಬರುವ ಮಾಹಿತಿಗಳನ್ನು ವೀಕ್ಷಿಸುವಂತೆ ಸಲಹೆ ನೀಡಿದ ಅವರು, ಸದಸ್ಯರುಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ಗುರುತಿಸಿಕೊಳ್ಳಲು ಅಂತ್ಯಾಕ್ಷರಿ ಸ್ಪರ್ಧೆ, ಹಾಡುಗಳು, ಸಾಂಸ್ಕೃತಿಕ ಕಾರ್ಯಕ್ರಮ, ಹೊಸ ರುಚಿ, ರಂಗೋಲಿಯಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಪ್ತ ಸಮಾಲೋಚಕಿ ಉಮಾ ಅವರು ಮಾತನಾಡಿ, ಆರೋಗ್ಯವಂತರಾಗಿ ಇರಬೇಕಾದರೆ ಜೀವನ ಶೈಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯಯುತವಾಗಿರಬೇಕು ಎಂದರು. ದಿನನಿತ್ಯ ನಾವು ಬಳಕೆ ಮಾಡುತ್ತಿರುವ ಕೆಲವು ವಸ್ತುಗಳಿಂದಲೂ ಅನಾರೋಗ್ಯದ ಸಮಸ್ಯೆಗಳು ಎದುರಾಗುತ್ತಿರುವುದಾಗಿ ಅವರು ವಿವರಿಸಿದರು. ಆಹಾರ ಪದ್ಧತಿ, ನಿದ್ರೆಯ ಕ್ರಮ ಮತ್ತು ದೈನಂದಿನ ಚಟುವಟಿಕೆಗಳಲ್ಲಿನ ಏರುಪೇರುಗಳು ಕೂಡ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ಅವರು ತಿಳಿಸಿದರು. ಜೊತೆಗೆ, ಅತಿಯಾದ ಮೊಬೈಲ್ ಬಳಕೆ, ಫೇಸ್ಬುಕ್, ಇನ್ಸ್ಟಾಗ್ರಾಮ್

90fd96b9-7f1d-4246-8152-5868ceac62b5

ರೀಲ್ಸ್ ಬಳಕೆಯಿಂದ ಹಲವು ದುಷ್ಪರಿಣಾಮಗಳು ಕಂಡುಬರುತ್ತಿರುವುದಾಗಿ ಅವರು ಗಮನ ಸೆಳೆದರು. ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯ ಚಟ, ಕಣ್ಣಿನ ಸಮಸ್ಯೆ, ಏಕಾಗ್ರತೆಯ ಕೊರತೆ ಹಾಗೂ ಮಾನಸಿಕ ಒತ್ತಡದಂತಹ ಸಮಸ್ಯೆಗಳ ಬಗ್ಗೆಯೂ ಅವರು ಸದಸ್ಯರುಗಳ ಗಮನ ಸೆಳೆದರು. ಈ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಗಮನ ಹರಿಸಿ, ಪೌಷ್ಟಿಕ ಆಹಾರ ಸೇವನೆ, ನಿಯಮಿತ ವ್ಯಾಯಾಮ ಮತ್ತು ಶಿಸ್ತುಬದ್ಧ ಜೀವನ ಕ್ರಮದ ಮೂಲಕ ಉತ್ತಮ ಆರೋಗ್ಯ ಮತ್ತು ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕೆಂದು ಅವರು ಅರಿವಿನ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಭಾಗ್ಯಮ್ಮ, ಸಂಯೋಜಕಿ ಲಕ್ಷ್ಮಿದೇವಮ್ಮ ಸೇರಿದಂತೆ ಸೇವಂತಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕೊಡಗೀಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಶ್ರೀ ಕೃಷ್ಣ (ಅಜ್ಜಪ್ಪ) ಅವಿರೋಧ ಅಧ್ಯಕ್ಷರಾಗಿ ಆಯ್ಕೆ ಉಪಾಧ್ಯಕ್ಷೆಯಾಗಿ ಮಂಜಮ್ಮ ಆಯ್ಕೆ; ಬೆಂಬಲಿಗರಿಂದ ಪಟಾಕಿ, ಸಿಹಿ ಹಂಚಿಕೆ. ತುರುವೇಕೆರೆ, ಆ.27: ತಾಲೂಕಿನ ಕೊಡಗೀಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಕೃಷ್ಣ (ಅಜ್ಜಪ್ಪ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಂಘದ ಅಧ್ಯಕ್ಷರಾಗಿದ್ದ ಗುಡ್ಡೇನಹಳ್ಳಿಯ ನಂಜುಂಡಪ್ಪನವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ರೀ ಕೃಷ್ಣ (ಅಜ್ಜಪ್ಪ) ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಅದೇ ರೀತಿ, ಹಿಂದಿನ ಉಪಾಧ್ಯಕ್ಷೆ ಎಂ.ಬಿ. ಜಯಲಕ್ಷ್ಮಮ್ಮನವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜಮ್ಮನವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಉಪಾಧ್ಯಕ್ಷೆಯಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎನ್. ಮಹೇಶ್ವರ್ ಅವರು ಘೋಷಣೆ ಮಾಡಿದರು. ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಶ್ರೀ ಕೃಷ್ಣ (ಅಜ್ಜಪ್ಪ) ಅವರು, ತಮ್ಮನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ, ಸಹಕಾರ ಸಂಘದ ಯಶಸ್ಸಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪ, ಮಂಜಮ್ಮ, ಯದುಕುಮಾರ್, ಪಾಂಡುರಂಗಯ್ಯ, ಚಿಕ್ಕಹನುಮಯ್ಯ, ವೆಂಕಟೇಶ್, ಯೋಗಾನಂದ, ರುದ್ರೇಶ್, ಮೋಹನ್, ಮುನಿರಾಜು, ದೇವರಾಜು, ಯಜಮಾನ್ ಮಹೇಶ್, ಪುಟ್ಟಸ್ವಾಮಿ ಗೌಡ, ಟಿ.ಡಿ.ಸಿ.ಸಿ.ಬಿ ಮೇಲ್ವಿಚಾರಕ ಭರತ್ ಹಾಗೂ ಸಿಬ್ಬಂದಿಗಳಾದ ರಘು, ಸವಿತಾ, ಮಹದೇವಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಕೊಡಗೀಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಶ್ರೀ ಕೃಷ್ಣ (ಅಜ್ಜಪ್ಪ) ಅವಿರೋಧ ಅಧ್ಯಕ್ಷರಾಗಿ ಆಯ್ಕೆ

ಉಪಾಧ್ಯಕ್ಷೆಯಾಗಿ ಮಂಜಮ್ಮ ಆಯ್ಕೆ; ಬೆಂಬಲಿಗರಿಂದ ಪಟಾಕಿ, ಸಿಹಿ ಹಂಚಿಕೆ.


ತುರುವೇಕೆರೆ, ಆ.27: ತಾಲೂಕಿನ ಕೊಡಗೀಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಕೃಷ್ಣ (ಅಜ್ಜಪ್ಪ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಸಂಘದ ಅಧ್ಯಕ್ಷರಾಗಿದ್ದ ಗುಡ್ಡೇನಹಳ್ಳಿಯ ನಂಜುಂಡಪ್ಪನವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ರೀ ಕೃಷ್ಣ (ಅಜ್ಜಪ್ಪ) ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಅದೇ ರೀತಿ, ಹಿಂದಿನ ಉಪಾಧ್ಯಕ್ಷೆ ಎಂ.ಬಿ. ಜಯಲಕ್ಷ್ಮಮ್ಮನವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜಮ್ಮನವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಉಪಾಧ್ಯಕ್ಷೆಯಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎನ್. ಮಹೇಶ್ವರ್ ಅವರು ಘೋಷಣೆ ಮಾಡಿದರು.
ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಶ್ರೀ ಕೃಷ್ಣ (ಅಜ್ಜಪ್ಪ) ಅವರು, ತಮ್ಮನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ, ಸಹಕಾರ ಸಂಘದ ಯಶಸ್ಸಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪ, ಮಂಜಮ್ಮ, ಯದುಕುಮಾರ್, ಪಾಂಡುರಂಗಯ್ಯ, ಚಿಕ್ಕಹನುಮಯ್ಯ, ವೆಂಕಟೇಶ್, ಯೋಗಾನಂದ, ರುದ್ರೇಶ್, ಮೋಹನ್, ಮುನಿರಾಜು, ದೇವರಾಜು, ಯಜಮಾನ್ ಮಹೇಶ್, ಪುಟ್ಟಸ್ವಾಮಿ ಗೌಡ, ಟಿ.ಡಿ.ಸಿ.ಸಿ.ಬಿ ಮೇಲ್ವಿಚಾರಕ ಭರತ್ ಹಾಗೂ ಸಿಬ್ಬಂದಿಗಳಾದ ರಘು, ಸವಿತಾ, ಮಹದೇವಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    1 hr ago
  • ಗಾಣದಾಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರತಿದಿನ ಪಡಿತರ (ರೇಷನ್) ಪಡೆಯಲು ಆಗಮಿಸುವ ಬಡ ರೈತರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ನೈಜ ನರಕಯಾತನೆ. ​ಪ್ರತಿದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಗದ್ದೆ-ಪೊಲಗಳಲ್ಲಿ ಬೆವರು ಹರಿಸಿ ದುಡಿಯುವ ರೈತರು, ರಾತ್ರಿ 8:30 ರಿಂದ 9:00 ಗಂಟೆಯಾದರೂ ಪಡಿತರ ಕೇಂದ್ರದ ಮುಂದೆ ಸರದಿಯಲ್ಲಿ ಕಾಯುತ್ತಾ ನಿಲ್ಲುವಂತಾಗಿದೆ. ಹಗಲಿನಲ್ಲಿ ಸರ್ವರ್ ಸಿಗುವುದಿಲ್ಲ ಎಂಬ ಒಂದೇ ಕಾರಣಕ್ಕೆ ರಾತ್ರಿ ವೇಳೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಆದರೆ, ಈ ಕತ್ತಲಲ್ಲಿ ಪಡಿತರ ವಿತರಿಸುವ ಸ್ಥಳದಲ್ಲಿ ಕನಿಷ್ಠ ಒಂದು ಸರಿಯಾದ ಬೆಳಕಿನ (ಲೈಟ್) ವ್ಯವಸ್ಥೆಯೂ ಇಲ್ಲದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
    1
    ಗಾಣದಾಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರತಿದಿನ ಪಡಿತರ (ರೇಷನ್) ಪಡೆಯಲು ಆಗಮಿಸುವ ಬಡ ರೈತರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ನೈಜ ನರಕಯಾತನೆ.
​ಪ್ರತಿದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಗದ್ದೆ-ಪೊಲಗಳಲ್ಲಿ ಬೆವರು ಹರಿಸಿ ದುಡಿಯುವ ರೈತರು, ರಾತ್ರಿ 8:30 ರಿಂದ 9:00 ಗಂಟೆಯಾದರೂ ಪಡಿತರ ಕೇಂದ್ರದ ಮುಂದೆ ಸರದಿಯಲ್ಲಿ ಕಾಯುತ್ತಾ ನಿಲ್ಲುವಂತಾಗಿದೆ. ಹಗಲಿನಲ್ಲಿ ಸರ್ವರ್ ಸಿಗುವುದಿಲ್ಲ ಎಂಬ ಒಂದೇ ಕಾರಣಕ್ಕೆ ರಾತ್ರಿ ವೇಳೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಆದರೆ, ಈ ಕತ್ತಲಲ್ಲಿ ಪಡಿತರ ವಿತರಿಸುವ ಸ್ಥಳದಲ್ಲಿ ಕನಿಷ್ಠ ಒಂದು ಸರಿಯಾದ ಬೆಳಕಿನ (ಲೈಟ್) ವ್ಯವಸ್ಥೆಯೂ ಇಲ್ಲದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    1 hr ago
  • ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಶಿರಾ : ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ದೇವತಾ ಕಾರ್ಯಗಳಿಗೆ ಅತ್ಯಂತ ಉನ್ನತವಾದ ಸ್ಥಾನವಿದೆ. ಅನಾದಿ ಕಾಲದಿಂದಲೂ ಮಾನವನು ತನ್ನ ದೈನಂದಿನ ಜೀವನದ ಭಾಗವಾಗಿ ದೇವರನ್ನು ಆರಾಧಿಸುತ್ತಾ ಬಂದಿದ್ದಾನೆ. ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ,ಧಾರ್ಮಿಕ ದೇವತಾ ಕಾರ್ಯಗಳು ಮನುಷ್ಯನಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತವೆ. ಇವುಗಳನ್ನು ಕೇವಲ ಮೂಢನಂಬಿಕೆಯಾಗಿ ನೋಡದೆ, ಅವುಗಳ ಹಿಂದಿರುವ ವೈಜ್ಞಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಅರಿತು ಆಚರಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸುಖ-ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು. ಶಿರಾ ತಾಲೂಕಿನ ಗೌಡಗೆರೆ ಹೋಬಳಿ ಕಳವರಹಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಐತಿಹಾಸಿಕ ಪ್ರಸಿದ್ಧ ಶ್ರೀ ಜುಂಜಪ್ಪ ಸ್ವಾಮಿಗೆ ಎಲ್ಲರೂ ಒಗ್ಗೂಡಿ ಭವ್ಯ ದೇಗುಲ ನಿರ್ಮಾಣ ಮಾಡುತ್ತಿರುವುದು, ಕಳವರಹಳ್ಳಿಗೆ ದೊಡ್ಡ ಕಳಸವಿದ್ದಂತೆ. ನಾವು ಎಲ್ಲರೂ ಒಗ್ಗಟ್ಟಾಗಿ ದೇಗುಲ ನಿರ್ಮಾಣ ಮಾಡುವಂತ ಸಂಕಲ್ಪ ಮಾಡಬೇಕು. ರಾಜ್ಯದಲ್ಲಿ ಹಾಗೂ ಸಿರಾ ತಾಲೂಕಿನಲ್ಲಿ ಇನ್ನು ಮುಂದೆ ಯಾದರು ಉತ್ತಮ ಮಳೆಯಾಗಿ ಎಲ್ಲ ರೈತರ ಬದುಕು ಸುಂದರವಾಗಿರಲಿ ಎಂದು ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು. ಶ್ರೀ ಮದ್ದಮ್ಮ ದೇವಿ ದೇವಸ್ಥಾನದ ಪಟ್ಟದ ಪೂಜಾರ್ ದೊಡ್ಡರಾಜಪ್ಪ, ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಣಸೆಹಳ್ಳಿ ಶಶಿಧರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಸಂಕಾಪುರ ಚಿದಾನಂದ, ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮುದ್ದು ಕೃಷ್ಣೆಗೌಡ, ಕಾರ್ಯದರ್ಶಿ ನರಸಿಂಹಮೂರ್ತಿ, ಭೂಕಾಂತೇ ಗೌಡ, ಕೃಷ್ಣಪ್ಪ, ಹೊಸೂರು ಮಂಜೇಗೌಡ, ಸಿದ್ದಣ್ಣ, ದೊಡ್ಡಯ್ಯ, ಸಿದ್ದಾಪುರ ಮಂಜುನಾಥ್, ನಾಗೇಂದ್ರ ಗೌಡ, ಭೂತಣ್ಣ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು, 12 ಜನ ಕೈವಾಡಸ್ತರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.
    1
    ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. 
ಶಿರಾ : ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ.
ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ದೇವತಾ ಕಾರ್ಯಗಳಿಗೆ ಅತ್ಯಂತ ಉನ್ನತವಾದ ಸ್ಥಾನವಿದೆ. ಅನಾದಿ ಕಾಲದಿಂದಲೂ ಮಾನವನು ತನ್ನ ದೈನಂದಿನ ಜೀವನದ ಭಾಗವಾಗಿ ದೇವರನ್ನು ಆರಾಧಿಸುತ್ತಾ ಬಂದಿದ್ದಾನೆ. ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ,ಧಾರ್ಮಿಕ ದೇವತಾ ಕಾರ್ಯಗಳು ಮನುಷ್ಯನಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತವೆ. ಇವುಗಳನ್ನು ಕೇವಲ ಮೂಢನಂಬಿಕೆಯಾಗಿ ನೋಡದೆ, ಅವುಗಳ ಹಿಂದಿರುವ ವೈಜ್ಞಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಅರಿತು ಆಚರಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸುಖ-ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ ಎಂದು
ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು.
ಶಿರಾ ತಾಲೂಕಿನ  ಗೌಡಗೆರೆ ಹೋಬಳಿ ಕಳವರಹಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಐತಿಹಾಸಿಕ ಪ್ರಸಿದ್ಧ ಶ್ರೀ ಜುಂಜಪ್ಪ ಸ್ವಾಮಿಗೆ ಎಲ್ಲರೂ ಒಗ್ಗೂಡಿ ಭವ್ಯ ದೇಗುಲ ನಿರ್ಮಾಣ ಮಾಡುತ್ತಿರುವುದು, ಕಳವರಹಳ್ಳಿಗೆ ದೊಡ್ಡ ಕಳಸವಿದ್ದಂತೆ.   
ನಾವು ಎಲ್ಲರೂ ಒಗ್ಗಟ್ಟಾಗಿ  ದೇಗುಲ ನಿರ್ಮಾಣ ಮಾಡುವಂತ ಸಂಕಲ್ಪ ಮಾಡಬೇಕು.
ರಾಜ್ಯದಲ್ಲಿ ಹಾಗೂ ಸಿರಾ ತಾಲೂಕಿನಲ್ಲಿ ಇನ್ನು ಮುಂದೆ ಯಾದರು ಉತ್ತಮ ಮಳೆಯಾಗಿ ಎಲ್ಲ ರೈತರ ಬದುಕು ಸುಂದರವಾಗಿರಲಿ  ಎಂದು ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು. 
ಶ್ರೀ ಮದ್ದಮ್ಮ ದೇವಿ ದೇವಸ್ಥಾನದ ಪಟ್ಟದ ಪೂಜಾರ್ ದೊಡ್ಡರಾಜಪ್ಪ, ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಣಸೆಹಳ್ಳಿ ಶಶಿಧರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಸಂಕಾಪುರ ಚಿದಾನಂದ, ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮುದ್ದು ಕೃಷ್ಣೆಗೌಡ, ಕಾರ್ಯದರ್ಶಿ ನರಸಿಂಹಮೂರ್ತಿ, ಭೂಕಾಂತೇ ಗೌಡ, ಕೃಷ್ಣಪ್ಪ, ಹೊಸೂರು ಮಂಜೇಗೌಡ, ಸಿದ್ದಣ್ಣ, ದೊಡ್ಡಯ್ಯ, ಸಿದ್ದಾಪುರ ಮಂಜುನಾಥ್, ನಾಗೇಂದ್ರ ಗೌಡ, ಭೂತಣ್ಣ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು, 12 ಜನ ಕೈವಾಡಸ್ತರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    8 hrs ago
  • ಮಂಡ್ಯ ಹುಡುಗಿ ಬಿಗ್ ಬಾಸ್ ಗೆದ್ದು ಬರಲಿ ಒಟ್ ಮಾಡಿ ಪೂರ್ಣಿಮಾ ಪರ‌ ಪ್ರಚಾರ ಮಂಡ್ಯ- ಬಿಗ್ ಬಾಸ್ ಸ್ಪರ್ಧೆಯಲ್ಲಿ ಸದ್ದು ಮಾಡುತ್ತಿರುವ ಮಂಡ್ಯದ ಗೌಡಗೆರೆ ಗ್ರಾಮದ ಪೂರ್ಣಿಮಾ ಮದ್ದೂರು ಕೆಎಸ್ ಆರ್‌ಟಿಸಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಎಲ್ಲರೂ ಜಿಯೋ ಹಾಟ್ ಸ್ಟಾರ್‌ನಲ್ಲಿ ಪೂರ್ಣಿಮಾಗೆ ಒಟುಹಾಕಿ ಅಭಿಯಾನ ಶುರುವಾಗಿದ್ದು ಕನ್ನಡಪರ ಹೋರಾಟಗಾರ ನಾಗಣ್ಣ ಮನವಿ ಮಾಡಿದ್ರು.
    1
    ಮಂಡ್ಯ ಹುಡುಗಿ ಬಿಗ್ ಬಾಸ್ ಗೆದ್ದು ಬರಲಿ ಒಟ್ ಮಾಡಿ ಪೂರ್ಣಿಮಾ ಪರ‌ ಪ್ರಚಾರ
ಮಂಡ್ಯ- ಬಿಗ್ ಬಾಸ್ ಸ್ಪರ್ಧೆಯಲ್ಲಿ ಸದ್ದು ಮಾಡುತ್ತಿರುವ ಮಂಡ್ಯದ ಗೌಡಗೆರೆ ಗ್ರಾಮದ ಪೂರ್ಣಿಮಾ ಮದ್ದೂರು ಕೆಎಸ್ ಆರ್‌ಟಿಸಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಎಲ್ಲರೂ ಜಿಯೋ ಹಾಟ್ ಸ್ಟಾರ್‌ನಲ್ಲಿ ಪೂರ್ಣಿಮಾಗೆ ಒಟುಹಾಕಿ ಅಭಿಯಾನ ಶುರುವಾಗಿದ್ದು ಕನ್ನಡಪರ ಹೋರಾಟಗಾರ ನಾಗಣ್ಣ ಮನವಿ ಮಾಡಿದ್ರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    25 min ago
  • ಸಿಂಪಲ್ ಮ್ಯಾಚ್..
    1
    ಸಿಂಪಲ್ ಮ್ಯಾಚ್..
    user_JAYASIMHA.M.K{JAISEE}
    JAYASIMHA.M.K{JAISEE}
    Farmer Nelamangala, Bengaluru Rural•
    13 hrs ago
  • ವಿಜೃಂಭಣೆಯಿಂದ ಗಡಿಭಾಗದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ KODIGENAHALLI ಮಧುಗಿರಿ ತಾಲೂಕಿನ ಗಡಿಭಾಗವಾದ ಕೊಡಿಗೇನಹಳ್ಳಿ ಜಾಮೀಯ ಮಸ್ಜಿದ್ ಸುನ್ನತ್ ಹುಲ್ ಜಮಾತ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
    1
    ವಿಜೃಂಭಣೆಯಿಂದ ಗಡಿಭಾಗದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ KODIGENAHALLI
ಮಧುಗಿರಿ ತಾಲೂಕಿನ ಗಡಿಭಾಗವಾದ ಕೊಡಿಗೇನಹಳ್ಳಿ ಜಾಮೀಯ ಮಸ್ಜಿದ್ ಸುನ್ನತ್ ಹುಲ್ ಜಮಾತ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
    user_Madhugiri news
    Madhugiri news
    Local News Reporter ಮಧುಗಿರಿ, ತುಮಕೂರು, ಕರ್ನಾಟಕ•
    4 hrs ago
  • ದೇಶದ ನಂಬರ್ ಒನ್ ವಿಐ Vi ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ದೇಶದ ನಂಬರ್ ಒನ್ ಬಿ ಐ ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ರೂ 325 ರಿಚಾರ್ಜ್ ಮಾಡಿಸಿದರೆ ಅನ್ಲಿಮಿಟೆಡ್ ಡಾಟಾ ಅನ್ಲಿಮಿಟೆಡ್ ಕರೆ 100 ಎಸ್ ಎಮ್ ಎಸ್ ಇಂದೇ ವಿಐ ಗ್ರಹಕರಾಗಿ ಕೊಡುಗೆ ತಮ್ಮದಾಗಿಸಿಕೊಳ್ಳಿ ವಿತರಕರ ವಿಶೇಷ ಪ್ರಕಟಣೆ
    1
    ದೇಶದ ನಂಬರ್ ಒನ್ ವಿಐ Vi ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ
ದೇಶದ ನಂಬರ್ ಒನ್ ಬಿ ಐ ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ರೂ 325 ರಿಚಾರ್ಜ್ ಮಾಡಿಸಿದರೆ ಅನ್ಲಿಮಿಟೆಡ್ ಡಾಟಾ ಅನ್ಲಿಮಿಟೆಡ್ ಕರೆ 100 ಎಸ್ ಎಮ್ ಎಸ್ ಇಂದೇ ವಿಐ ಗ್ರಹಕರಾಗಿ ಕೊಡುಗೆ ತಮ್ಮದಾಗಿಸಿಕೊಳ್ಳಿ ವಿತರಕರ ವಿಶೇಷ ಪ್ರಕಟಣೆ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    34 min ago
  • ಹೆಗ್ಗಡಿ ಕಟ್ಟೆ ಕಾಮಗಾರಿ ಪೂರ್ಣಗೊಳಿಸಿ ಹೇಮಾವತಿ ನೀರು ಹರಿಸಲು ಶ್ರಮಿಸಿದ  ತಾಲ್ಲೂಕು ರೈತಸಂಘ.  ರೈತ ಸಂಘ, ಹಸಿರು ಸೇನೆ ನೇತೃತ್ವದ ಒತ್ತಾಯಕ್ಕೆ ಸ್ಪಂದಿಸಿದ ಗ್ರಾಮ ಪಂಚಾಯಿತಿ, ಹೇಮಾವತಿ ಇಲಾಖೆ; 35ಕ್ಕೂ ಹೆಚ್ಚು ಯುವಕರು ಸಂಘಕ್ಕೆ ಸೇರ್ಪಡೆ, ತುರುವೇಕೆರೆ ಆ.26: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ವ್ಯಾಪ್ತಿಯ ಸುತ್ತಮುತ್ತಲ ರೈತರ ಜೀವನಾಡಿಯಾಗಿದ್ದ  ಗೋಣಿ ತುಮಕೂರು-ಹುಲಿಕೆರೆ ರಸ್ತೆಯಲ್ಲಿರುವ  ಹೆಗ್ಗಡಿ ಕಟ್ಟೆಯ ಅಪೂರ್ಣಗೊಂಡಿದ್ದ ದುರಸ್ಥಿ ಕಾಮಗಾರಿಯನ್ನು ಪೂರ್ಣಗೊಳಿಸಿ ಹೇಮಾವತಿ ನೀರು ಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಕಣಕೂರು ಚಂದ್ರಶೇಖರ್ ಅವರ ನೇತೃತ್ವದಲ್ಲಿ ಹೋರಾಟ ಕಾರ್ಯಯೋನ್ಮುಖಗೊಂಡಿತು ರೈತ ಸಂಘದ ಈ ಕರೆಗೆ ಗ್ರಾಮ ಪಂಚಾಯಿತಿ ಹಾಗೂ ಹೇಮಾವತಿ ಇಲಾಖೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ  ನೀರು ಹರಿಸಲು ಅನುವು ಮಾಡಿಕೊಟ್ಟರು,ನೀರು ಹರಿಯದಂತೆ  ಕೆಲವು ಪಕ್ಕದ ಜಮೀನಿನ ರೈತರು ನೀರು ಹರಿಯದಂತೆ ಅಕ್ರಮವಾಗಿ ತಡೆಯೊಡ್ಡಿದ್ದರು ಇದರಿಂದ ಕಟ್ಟೆಗೆ ಹೇಮಾವತಿ  ನೀರುಬಾರದೆ ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ  ಉಂಟಾಗುವ ಆತಂಕವಿತ್ತು ಆದರಿಂದ ತಾಲ್ಲೂಕು ರೈತಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್ ರವರು ಅಧಿಕಾರಿಗಳ ಮತ್ತು ಗ್ರಾಮಸ್ಥರ ನೆರೆವಿನಿಂದ ಹೆಗ್ಗಡಿ ಕಟ್ಟೆಗೆ ನೀರು ಹರಿಸುವ ಕೆಲಸವನ್ನು ಮಾಡಿದರು ಇದರಿಂದ ಸುತ್ತಮುತ್ತಲ ರೈತರು ನಿಟ್ಟುಸಿರು ಬಿಡುವಂತಾಗಿದೆ,  ಇದೇ ವೇಳೆ ಗೋಣಿ ತುಮಕೂರು ಗ್ರಾಮದ ನಿಖಿಲ್, ಪುನೀತ್, ತೇಜಸ್, ಕುಮಾರ್, ಕಾಂತರಾಜು ಸೇರಿದಂತೆ 25 ಮಂದಿ ಹಾಗೂ ಅಕ್ಕಪಕ್ಕದ ಗ್ರಾಮಗಳ ಯುವಕರು ಸೇರಿದಂತೆ ಒಟ್ಟು 35ಕ್ಕೂ ಹೆಚ್ಚು ಮಂದಿ ರೈತ ಸಂಘಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮಾರ್ಗದರ್ಶಕ ವಿಎಂ ಅಶೋಕ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಸುಧಾಮಣಿ, ಪ್ರಧಾನ ಕಾರ್ಯದರ್ಶಿ ವಿನೋದ್, ಪದಾಧಿಕಾರಿಗಳಾದ ಶಿವಸ್ವಾಮಿ, ಶಿವಕುಮಾರ್, ಉಮೇಶ್, ಅಶೋಕ್, ರಾಮು ಕೆಜಿ, ರಾಕೇಶ್ ವಿಎಂ, ಶಿವಕುಮಾರ್ ಸೇರಿದಂತೆ ಹಲವಾರು ರೈತ ಮುಖಂಡರು ಭಾಗವಹಿಸಿದ್ದರು.
    4
    ಹೆಗ್ಗಡಿ ಕಟ್ಟೆ ಕಾಮಗಾರಿ ಪೂರ್ಣಗೊಳಿಸಿ ಹೇಮಾವತಿ ನೀರು ಹರಿಸಲು ಶ್ರಮಿಸಿದ  ತಾಲ್ಲೂಕು ರೈತಸಂಘ. 



ರೈತ ಸಂಘ, ಹಸಿರು ಸೇನೆ ನೇತೃತ್ವದ ಒತ್ತಾಯಕ್ಕೆ ಸ್ಪಂದಿಸಿದ ಗ್ರಾಮ ಪಂಚಾಯಿತಿ, ಹೇಮಾವತಿ ಇಲಾಖೆ; 35ಕ್ಕೂ ಹೆಚ್ಚು ಯುವಕರು ಸಂಘಕ್ಕೆ ಸೇರ್ಪಡೆ,
ತುರುವೇಕೆರೆ ಆ.26: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ವ್ಯಾಪ್ತಿಯ ಸುತ್ತಮುತ್ತಲ ರೈತರ ಜೀವನಾಡಿಯಾಗಿದ್ದ  ಗೋಣಿ ತುಮಕೂರು-ಹುಲಿಕೆರೆ ರಸ್ತೆಯಲ್ಲಿರುವ  ಹೆಗ್ಗಡಿ ಕಟ್ಟೆಯ ಅಪೂರ್ಣಗೊಂಡಿದ್ದ ದುರಸ್ಥಿ ಕಾಮಗಾರಿಯನ್ನು ಪೂರ್ಣಗೊಳಿಸಿ ಹೇಮಾವತಿ ನೀರು ಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಕಣಕೂರು ಚಂದ್ರಶೇಖರ್ ಅವರ ನೇತೃತ್ವದಲ್ಲಿ ಹೋರಾಟ ಕಾರ್ಯಯೋನ್ಮುಖಗೊಂಡಿತು ರೈತ ಸಂಘದ ಈ ಕರೆಗೆ ಗ್ರಾಮ ಪಂಚಾಯಿತಿ ಹಾಗೂ ಹೇಮಾವತಿ ಇಲಾಖೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ  ನೀರು ಹರಿಸಲು ಅನುವು ಮಾಡಿಕೊಟ್ಟರು,ನೀರು ಹರಿಯದಂತೆ  ಕೆಲವು ಪಕ್ಕದ ಜಮೀನಿನ ರೈತರು ನೀರು ಹರಿಯದಂತೆ ಅಕ್ರಮವಾಗಿ ತಡೆಯೊಡ್ಡಿದ್ದರು ಇದರಿಂದ ಕಟ್ಟೆಗೆ ಹೇಮಾವತಿ  ನೀರುಬಾರದೆ ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ  ಉಂಟಾಗುವ ಆತಂಕವಿತ್ತು ಆದರಿಂದ ತಾಲ್ಲೂಕು ರೈತಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್ ರವರು ಅಧಿಕಾರಿಗಳ ಮತ್ತು ಗ್ರಾಮಸ್ಥರ ನೆರೆವಿನಿಂದ ಹೆಗ್ಗಡಿ ಕಟ್ಟೆಗೆ ನೀರು ಹರಿಸುವ ಕೆಲಸವನ್ನು ಮಾಡಿದರು ಇದರಿಂದ ಸುತ್ತಮುತ್ತಲ ರೈತರು ನಿಟ್ಟುಸಿರು ಬಿಡುವಂತಾಗಿದೆ, 
ಇದೇ ವೇಳೆ ಗೋಣಿ ತುಮಕೂರು ಗ್ರಾಮದ ನಿಖಿಲ್, ಪುನೀತ್, ತೇಜಸ್, ಕುಮಾರ್, ಕಾಂತರಾಜು ಸೇರಿದಂತೆ 25 ಮಂದಿ ಹಾಗೂ ಅಕ್ಕಪಕ್ಕದ ಗ್ರಾಮಗಳ ಯುವಕರು ಸೇರಿದಂತೆ ಒಟ್ಟು 35ಕ್ಕೂ ಹೆಚ್ಚು ಮಂದಿ ರೈತ ಸಂಘಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾರ್ಗದರ್ಶಕ ವಿಎಂ ಅಶೋಕ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಸುಧಾಮಣಿ, ಪ್ರಧಾನ ಕಾರ್ಯದರ್ಶಿ ವಿನೋದ್, ಪದಾಧಿಕಾರಿಗಳಾದ ಶಿವಸ್ವಾಮಿ, ಶಿವಕುಮಾರ್, ಉಮೇಶ್, ಅಶೋಕ್, ರಾಮು ಕೆಜಿ, ರಾಕೇಶ್ ವಿಎಂ, ಶಿವಕುಮಾರ್ ಸೇರಿದಂತೆ ಹಲವಾರು ರೈತ ಮುಖಂಡರು ಭಾಗವಹಿಸಿದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.