ಶರಣರು ಸಮಾಜದ ಉದ್ದಾರಕ್ಕಾಗಿ ಬದುಕಿದವರು. ಬಸವಲಿಂಗ ಮಹಾಸ್ವಾಮಿಗಳು ಶಿಗ್ಗಾವಿ: ಮಹನೀಯರು ತಮಗಾಗಿ ಬದುಕದೆ ಸಮಾಜಕ್ಕಾಗಿ ಬದುಕಿ, ಉದಬತ್ತಿಯಂತೆ ತಮ್ಮನ್ನು ತಾವೇ ಸುಟ್ಟುಕೊಂಡು ಜಗತ್ತಿಗೆ ಸುಗಂಧ ನೀಡಿದರು. ಅಂತಹ ಮಹಾತ್ಮರನ್ನು ಸ್ಮರಿಸುವುದು ನಮ್ಮೆಲ್ಲರ ಭಾಗ್ಯ ಎಂದು ಬಟಕುರ್ಕಿಯ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ದಿ. ಸಂಗನಬಸವ ಮಹಾಸ್ವಾಮಿಗಳು ಮತ್ತು ದಿ. ಬಸವಲಿಂಗ ಮಹಾಸ್ವಾಮಿಗಳ ಪುಣ್ಯ ಸರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ೯ ದಿನಗಳ ಶರಣಸಂಸ್ಕೃತಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಹಾವೇರಿ ಹೊಸಮಠದ ಬಸವ ಶಾಂತಲಿಂಗ ಮಹಾಸ್ವಾಮಿಗಳು ಮಾತನಾಡಿ, ದೇಹಕ್ಕೆ ಸಾವು ಅನಿವಾರ್ಯ, ಆದರೆ ನಾವು ಮಾಡುವ ಸತ್ಕಾರ್ಯಗಳು ಚಿರಂಜೀವಿಯಾಗಿ ಉಳಿಯುತ್ತವೆ. ನಮ್ಮ ಬದುಕಿನ ಆದರ್ಶಗಳೇ ಸಮಾಜದಲ್ಲಿ ನಮ್ಮ ಪರಿಚಯದ ಕಾರ್ಡ್ ಆಗಿರಬೇಕು. ಭಕ್ತರ ಸೇವೆಯ ಬಲದಿಂದಲೇ ಇಂದು ಈ ಮಠವು ಭಕ್ತಿಯ ಶ್ರೀಮಂತಿಕೆಯಿಂದ ಕಂಗೊಳಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರವಚನಕಾರರಾದ ಸದ್ಗುರು ಸಮರ್ಥ ಡಾ| ಎ.ಸಿ.ವಾಲಿ ಮಹಾರಾಜರು ಮಾತನಾಡಿ, ಯಾರು ತನ್ನೊಳಗೆ ತಾನು ಬಾಗುತ್ತಾರೋ ಅವರು ಮಾತ್ರ ಜೀವನದಲ್ಲಿ ಬೆಳೆಯಲು ಸಾಧ್ಯ. ಜ್ಞಾನ ಎಂಬುದು ಕೇವಲ ಓದಿನಿಂದ ಬರುವುದಿಲ್ಲ, ನಮ್ಮನ್ನು ನಾವು ತಿದ್ದಿಕೊಂಡಾಗ ಮಾತ್ರ ಜೀವನ ಓರಣವಾಗುತ್ತದೆ. ವಚನಗಳ ಸಾರ ಮನಸ್ಸಿನೊಳಗೆ ಇಳಿದಾಗ ಮಾತ್ರ ಸಾಕ್ಷಾತ್ಕಾರ ಸಾಧ್ಯ. ಸಂಗನಬಸವ ಮಹಾಸ್ವಾಮಿಗಳ ವ್ಯಕ್ತಿತ್ವವು ಮುಳ್ಳಿನ ಮೇಲಿನ ಗುಲಾಬಿಯಂತೆ ಸಮಾಜಕ್ಕೆ ಪ್ರೇರಣೆಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯವಹಿಸಿದ್ದರು, ಬಸವಲಿಂಗ ದೇವರು, ಶಿವಾನಂದ ಮ್ಯಾಗೇರಿ, ಶಶಿಕಾಂತ ರಾಠೋಡ, ಸಿ.ಡಿ.ಯತ್ತಿನಹಳ್ಳಿ, ನಾಗಪ್ಪ ಬೆಂತೂರ, ವಿಶ್ವನಾಥ ಬಂಡಿವಡ್ಡರ, ಬಸವರಾಜ ಹಡಪದ, ಸುಧಾಕರ ಧೈವಜ್ಞ, ಶಂಬು ಕೇರಿ, ರಮೇಶ ಹರಿಜನ, ಮಾಲತೇಶ ನಾಯ್ಕೋಡಿ, ಡಾ| ಮಲ್ಲೇಶಪ್ಪ ಹರಿಜನ, ಕರಿಯಪ್ಪ ಕಟ್ಟಿಮನಿ, ಈರಣ್ಣ ಅಂಕಲಕೋಟಿ, ಮಾರುತಿ ಕುಂದಗೋಳ, ರವಿ ಕಡಕೋಳ, ಬಸಯ್ಯ ಹಿರೇಮಠ, ಬಸವರಾಜ ಶಿಗ್ಗಾವಿ, ಶರೀಫ ಮಾಕಪ್ಪನವರ, ವಿರೇಶ ಹಿರೇಮಠ, ಹೇಮಂತ ಭಜಂತ್ರಿ, ಪ್ರಭುಗೌಡ ತೆಂಬದಮನಿ, ಶಿವಾನಂದ ಬೆಳಗಲಿ ಇತರರಿದ್ದರು.
ಶರಣರು ಸಮಾಜದ ಉದ್ದಾರಕ್ಕಾಗಿ ಬದುಕಿದವರು. ಬಸವಲಿಂಗ ಮಹಾಸ್ವಾಮಿಗಳು ಶಿಗ್ಗಾವಿ: ಮಹನೀಯರು ತಮಗಾಗಿ ಬದುಕದೆ ಸಮಾಜಕ್ಕಾಗಿ ಬದುಕಿ, ಉದಬತ್ತಿಯಂತೆ ತಮ್ಮನ್ನು ತಾವೇ ಸುಟ್ಟುಕೊಂಡು ಜಗತ್ತಿಗೆ ಸುಗಂಧ ನೀಡಿದರು. ಅಂತಹ ಮಹಾತ್ಮರನ್ನು ಸ್ಮರಿಸುವುದು ನಮ್ಮೆಲ್ಲರ ಭಾಗ್ಯ ಎಂದು ಬಟಕುರ್ಕಿಯ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ದಿ. ಸಂಗನಬಸವ ಮಹಾಸ್ವಾಮಿಗಳು ಮತ್ತು ದಿ. ಬಸವಲಿಂಗ ಮಹಾಸ್ವಾಮಿಗಳ ಪುಣ್ಯ ಸರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ೯ ದಿನಗಳ ಶರಣಸಂಸ್ಕೃತಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಹಾವೇರಿ ಹೊಸಮಠದ ಬಸವ ಶಾಂತಲಿಂಗ ಮಹಾಸ್ವಾಮಿಗಳು ಮಾತನಾಡಿ, ದೇಹಕ್ಕೆ ಸಾವು ಅನಿವಾರ್ಯ, ಆದರೆ ನಾವು
ಮಾಡುವ ಸತ್ಕಾರ್ಯಗಳು ಚಿರಂಜೀವಿಯಾಗಿ ಉಳಿಯುತ್ತವೆ. ನಮ್ಮ ಬದುಕಿನ ಆದರ್ಶಗಳೇ ಸಮಾಜದಲ್ಲಿ ನಮ್ಮ ಪರಿಚಯದ ಕಾರ್ಡ್ ಆಗಿರಬೇಕು. ಭಕ್ತರ ಸೇವೆಯ ಬಲದಿಂದಲೇ ಇಂದು ಈ ಮಠವು ಭಕ್ತಿಯ ಶ್ರೀಮಂತಿಕೆಯಿಂದ ಕಂಗೊಳಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರವಚನಕಾರರಾದ ಸದ್ಗುರು ಸಮರ್ಥ ಡಾ| ಎ.ಸಿ.ವಾಲಿ ಮಹಾರಾಜರು ಮಾತನಾಡಿ, ಯಾರು ತನ್ನೊಳಗೆ ತಾನು ಬಾಗುತ್ತಾರೋ ಅವರು ಮಾತ್ರ ಜೀವನದಲ್ಲಿ ಬೆಳೆಯಲು ಸಾಧ್ಯ. ಜ್ಞಾನ ಎಂಬುದು ಕೇವಲ ಓದಿನಿಂದ ಬರುವುದಿಲ್ಲ, ನಮ್ಮನ್ನು ನಾವು ತಿದ್ದಿಕೊಂಡಾಗ ಮಾತ್ರ ಜೀವನ ಓರಣವಾಗುತ್ತದೆ. ವಚನಗಳ ಸಾರ ಮನಸ್ಸಿನೊಳಗೆ ಇಳಿದಾಗ ಮಾತ್ರ ಸಾಕ್ಷಾತ್ಕಾರ ಸಾಧ್ಯ. ಸಂಗನಬಸವ
ಮಹಾಸ್ವಾಮಿಗಳ ವ್ಯಕ್ತಿತ್ವವು ಮುಳ್ಳಿನ ಮೇಲಿನ ಗುಲಾಬಿಯಂತೆ ಸಮಾಜಕ್ಕೆ ಪ್ರೇರಣೆಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯವಹಿಸಿದ್ದರು, ಬಸವಲಿಂಗ ದೇವರು, ಶಿವಾನಂದ ಮ್ಯಾಗೇರಿ, ಶಶಿಕಾಂತ ರಾಠೋಡ, ಸಿ.ಡಿ.ಯತ್ತಿನಹಳ್ಳಿ, ನಾಗಪ್ಪ ಬೆಂತೂರ, ವಿಶ್ವನಾಥ ಬಂಡಿವಡ್ಡರ, ಬಸವರಾಜ ಹಡಪದ, ಸುಧಾಕರ ಧೈವಜ್ಞ, ಶಂಬು ಕೇರಿ, ರಮೇಶ ಹರಿಜನ, ಮಾಲತೇಶ ನಾಯ್ಕೋಡಿ, ಡಾ| ಮಲ್ಲೇಶಪ್ಪ ಹರಿಜನ, ಕರಿಯಪ್ಪ ಕಟ್ಟಿಮನಿ, ಈರಣ್ಣ ಅಂಕಲಕೋಟಿ, ಮಾರುತಿ ಕುಂದಗೋಳ, ರವಿ ಕಡಕೋಳ, ಬಸಯ್ಯ ಹಿರೇಮಠ, ಬಸವರಾಜ ಶಿಗ್ಗಾವಿ, ಶರೀಫ ಮಾಕಪ್ಪನವರ, ವಿರೇಶ ಹಿರೇಮಠ, ಹೇಮಂತ ಭಜಂತ್ರಿ, ಪ್ರಭುಗೌಡ ತೆಂಬದಮನಿ, ಶಿವಾನಂದ ಬೆಳಗಲಿ ಇತರರಿದ್ದರು.
- ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.1
- ಕುಂದಗೋಳ: ಗ್ರಾಮೀಣ ಭಾಗದ ಜನರಿಗೆ ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುವ ಸಂಚಾರದ ಸಂಕಷ್ಟಗಳನ್ನು ತಪ್ಪಿಸಲು, ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ನನ್ನ ಅಧಿಕಾರ ಅವಧಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಪ್ರತಿಪಾದಿಸಿದರು. ಮಂಗಳವಾರದಂದು ತಾಲ್ಲೂಕಿನ ಕಳಸ-ಸಂಕ್ಲೀಪೂರ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದಾಗ ಉತ್ತಮ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಅದರಂತೆ ಇಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ಅಂದಾಜು 1 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಬೇಡಿಕೆ ಈಗ ಈಡೇರುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಅಲಿ ಚಾಂದಖಾನವರ, ಮಲ್ಲಿಕಾರ್ಜುನ ಪ್ಯಾಟಿ, ಯಲ್ಲರೆಡ್ಡಿ ಯರಗುಪ್ಪಿ, ಅಖಂಡಪ್ಪ ಕಳಸೂರ, ಯಲ್ಲಪ್ಪ ಹೊಸಮನಿ, ಬಸವರಾಜ ಅಂಗಡಿ, ಅಶೋಕ ದೊಡ್ಡಮಲ್ಲಪ್ಪನವರ, ಸತೀಶ್ ಪಾಟೀಲ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು1
- ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ ಎಂದು ತಿಳಿಸಿದರು.1
- Post by Onlinetv24x71
- ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್ಎಸ್ ಪಕ್ಷದ ಸೈನಿಕರು1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.1
- ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್ಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಎರಡೂ ಬೈಕ್ಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡದ ಮೆಹಬೂಬ್ನಗರದಲ್ಲಿ ನಡೆದಿದೆ. ಸಾದಿಕ್ ಶೆರೆವಾಡ ಎಂಬುವವರ ಮನೆ ಎದುರು ನಿಲ್ಲಿಸಿದ್ದ ಎರಡು ಬೈಕ್ಗಳಿಗೆ ಬೆಂಕಿ ಹಚ್ಚಲಾಗಿದೆ. ಮೊದಲು ಮನೆ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು ಆನಂತರ ಎರಡೂ ಬೈಕ್ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ತಡರಾತ್ರಿ ಏಳೆಂಟು ಜನರ ತಂಡದಿಂದ ಈ ಕೃತ್ಯ ನಡೆದಿದೆ. ಸದ್ಯ ಸ್ಥಳಕ್ಕೆ ಎಸಿಪಿ ಪ್ರಶಾಂತ ಸಿದ್ಧನಗೌಡರ, ಸಿಪಿಐ ಪ್ರಭು ಗಂಗೇನಳ್ಳಿ ಅವರು ಭೇಟಿ ನೀಡಿ ಸಿಸಿಟಿವಿ ದೃಶ್ಯ ಸೇರಿದಂತೆ ಇತರ ಸಾಕ್ಷ್ಯಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.1