logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಳೇಹೊಸುರು ರಸ್ತೆ ಸರಿಯಿಲ್ಲದೆ ಸಂಪೂರ್ಣವಾಗಿ ಹಾಳಾಗಿದೆ. ಈ ಭಾಗದ ಎಲ್ಲಾ ರಸ್ತೆಗಳೂ ಸಹ ಬಹಳ ವರ್ಷಗಳಿಂದ ಇದೇ ರೀತಿ ಹಾಳಾಗಿ ಬಿದ್ದಿವೆ.

5 hrs ago
user_Mallappa Maykond Mallesh
Mallappa Maykond Mallesh
ಲಕ್ಷ್ಮೇಶ್ವರ, ಗದಗ, ಕರ್ನಾಟಕ•
5 hrs ago
160a3462-6746-4244-a508-cb760e9345e9

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಳೇಹೊಸುರು ರಸ್ತೆ ಸರಿಯಿಲ್ಲದೆ ಸಂಪೂರ್ಣವಾಗಿ ಹಾಳಾಗಿದೆ. ಈ ಭಾಗದ ಎಲ್ಲಾ ರಸ್ತೆಗಳೂ ಸಹ ಬಹಳ ವರ್ಷಗಳಿಂದ ಇದೇ ರೀತಿ ಹಾಳಾಗಿ ಬಿದ್ದಿವೆ.

More news from ಕರ್ನಾಟಕ and nearby areas
  • ಹಾವೇರಿಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸಚಿವ ಪ್ರಲ್ಹಾದ‌ ಜೋಶಿ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ ಮತ್ತು ಶ್ರೀ ಲಿಂಗರಾಜ ಪಾಟೀಲ್ ಉಪಸ್ಥಿತರಿದ್ದರು. ಇವರೊಂದಿಗೆ ಪಕ್ಷದ ಮುಖಂಡರುಗಳಾದ ದತ್ತಾತ್ರೇಯ, ಭರತ ಬೊಮ್ಮಾಯಿ, ಡಾ. ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ, ಡಿ.ಎಸ್ ಮಾಳಗಿ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.
    1
    ಹಾವೇರಿಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸಚಿವ ಪ್ರಲ್ಹಾದ‌ ಜೋಶಿ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ ಮತ್ತು ಶ್ರೀ ಲಿಂಗರಾಜ ಪಾಟೀಲ್ ಉಪಸ್ಥಿತರಿದ್ದರು. ಇವರೊಂದಿಗೆ ಪಕ್ಷದ ಮುಖಂಡರುಗಳಾದ ದತ್ತಾತ್ರೇಯ, ಭರತ ಬೊಮ್ಮಾಯಿ, ಡಾ. ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ, ಡಿ.ಎಸ್ ಮಾಳಗಿ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    2 hrs ago
  • ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮನ್ನು ಬಿಎಲ್‌ಒ (BLO) ಕರ್ತವ್ಯದಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಕಾರ್ಯಕರ್ತೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ತಮಗೆ ವಿಧಿಸಲಾಗುತ್ತಿರುವ ಹೆಚ್ಚುವರಿ ಕೆಲಸದ ಒತ್ತಡ, ಡೇಟಾ ಎಂಟ್ರಿ ಮಾಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ಮೇಲಧಿಕಾರಿಗಳಿಂದ ಬರುತ್ತಿರುವ ನೊಟೀಸ್‌ನ ಭೀತಿಯ ಬಗ್ಗೆ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ತಮ್ಮ ಮೂಲ ಕೆಲಸವಾದ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕಣ್ಣೀರಿಟ್ಟರು.
    1
    ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮನ್ನು ಬಿಎಲ್‌ಒ (BLO) ಕರ್ತವ್ಯದಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಕಾರ್ಯಕರ್ತೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು.

ತಮಗೆ ವಿಧಿಸಲಾಗುತ್ತಿರುವ ಹೆಚ್ಚುವರಿ ಕೆಲಸದ ಒತ್ತಡ, ಡೇಟಾ ಎಂಟ್ರಿ ಮಾಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ಮೇಲಧಿಕಾರಿಗಳಿಂದ ಬರುತ್ತಿರುವ ನೊಟೀಸ್‌ನ ಭೀತಿಯ ಬಗ್ಗೆ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ತಮ್ಮ ಮೂಲ ಕೆಲಸವಾದ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕಣ್ಣೀರಿಟ್ಟರು.
    user_AsnNews24Kannada
    AsnNews24Kannada
    Local News Reporter Koppal, Karnataka•
    12 hrs ago
  • ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಸ್ಪೀಕರ್ ಯು.ಟಿ. ಖಾದರ್ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಮತ್ತು ಆಡಳಿತದ ಬಗ್ಗೆ ಸಾರ್ವಜನಿಕರು ದೂರುಗಳನ್ನು ನೀಡಿದ್ದರ ಬೆನ್ನಲ್ಲೇ ಈ ಭೇಟಿ ನಡೆದಿದೆ.
    1
    ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಸ್ಪೀಕರ್ ಯು.ಟಿ. ಖಾದರ್ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಮತ್ತು ಆಡಳಿತದ ಬಗ್ಗೆ ಸಾರ್ವಜನಿಕರು ದೂರುಗಳನ್ನು ನೀಡಿದ್ದರ ಬೆನ್ನಲ್ಲೇ ಈ ಭೇಟಿ ನಡೆದಿದೆ.
    user_Vv Vv
    Vv Vv
    Interior designer ಕೊಪ್ಪಳ, ಕೊಪ್ಪಳ, ಕರ್ನಾಟಕ•
    23 hrs ago
  • ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ರಾಜ್ಯದ ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಜನಸಾಮಾನ್ಯರ ನೆರವಿಗೆ ಬರಲು ಶಂಬುಲಿಂಗ್ ಹಿರೇಮಠ್ ಮುಂದಾಗಿದ್ದಾರೆ. ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ರೈತರು ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಬರಗಾಲದ ಭವಣೆಯನ್ನು ತಪ್ಪಿಸಲು ಮತ್ತು ರೈತರ ಸಂಕಷ್ಟವನ್ನು ಪಾರು ಮಾಡಲು ತಾವೇ ಸ್ವತಃ ತಪಸ್ಸು ಮಾಡಲು ಸಿದ್ಧವಿರುವುದಾಗಿ ಅವರು ಘೋಷಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉತ್ತಮ ಮಳೆಯಾಗಲೆಂದು ಸಂಪ್ರದಾಯಬದ್ಧ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ನಡೆಸಲು ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿ, ಬೆಳೆಗಳು ಸಮೃದ್ಧಿಯಾಗಿ ಬೆಳೆದು ಜನಜೀವನ ಸುಗಮವಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಹಿರೇಮಠ್ ಹೇಳಿದ್ದಾರೆ. ಪ್ರಕೃತಿಯ ಅನುಗ್ರಹಕ್ಕಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿರುವ ಅವರು, ಕೇವಲ ಪ್ರಾರ್ಥನೆಯಷ್ಟೇ ಅಲ್ಲದೆ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ, ಮರ ನೆಡುವಿಕೆ ಹಾಗೂ ನೀರಿನ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
    1
    ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ರಾಜ್ಯದ ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಜನಸಾಮಾನ್ಯರ ನೆರವಿಗೆ ಬರಲು ಶಂಬುಲಿಂಗ್ ಹಿರೇಮಠ್ ಮುಂದಾಗಿದ್ದಾರೆ. ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ರೈತರು ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಬರಗಾಲದ ಭವಣೆಯನ್ನು ತಪ್ಪಿಸಲು ಮತ್ತು ರೈತರ ಸಂಕಷ್ಟವನ್ನು ಪಾರು ಮಾಡಲು ತಾವೇ ಸ್ವತಃ ತಪಸ್ಸು ಮಾಡಲು ಸಿದ್ಧವಿರುವುದಾಗಿ ಅವರು ಘೋಷಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉತ್ತಮ ಮಳೆಯಾಗಲೆಂದು ಸಂಪ್ರದಾಯಬದ್ಧ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ನಡೆಸಲು ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿ, ಬೆಳೆಗಳು ಸಮೃದ್ಧಿಯಾಗಿ ಬೆಳೆದು ಜನಜೀವನ ಸುಗಮವಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಹಿರೇಮಠ್ ಹೇಳಿದ್ದಾರೆ. ಪ್ರಕೃತಿಯ ಅನುಗ್ರಹಕ್ಕಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿರುವ ಅವರು, ಕೇವಲ ಪ್ರಾರ್ಥನೆಯಷ್ಟೇ ಅಲ್ಲದೆ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ, ಮರ ನೆಡುವಿಕೆ ಹಾಗೂ ನೀರಿನ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
    user_ಮುತ್ತಣ್ಣ ಯರಗೊಪ್ಪ, ಬಾದಾಮಿ
    ಮುತ್ತಣ್ಣ ಯರಗೊಪ್ಪ, ಬಾದಾಮಿ
    Local News Reporter ಬಾದಾಮಿ, ಬಾಗಲಕೋಟೆ, ಕರ್ನಾಟಕ•
    1 hr ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ. ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ.

ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    5 hrs ago
  • ಗುಳೇದಗುಡ್ಡದ ಭಂಡಾರಿ ಮತ್ತು ರಾಠಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಶುಕ್ರವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕೆರೂರದ ಸಾಹಿತಿ ಬಸವರಾಜ ಪ್ಯಾಟಿಶೆಟ್ಟರ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸಮಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ನಿರಂತರ ಅಧ್ಯಯನಶೀಲರಾಗಬೇಕು ಮತ್ತು ರಾಷ್ಟ್ರ ಅಭಿಮಾನವನ್ನು ಬೆಳೆಸಿಕೊಂಡು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು. ಬದುಕು ಮುಳ್ಳಿನ ಹಾಸಿಗೆಯಿದ್ದಂತೆ ಎಂದು ಬಣ್ಣಿಸಿದ ಅವರು, ವಿದ್ಯಾರ್ಥಿಗಳು ದೈಹಿಕ, ಭಾವನಾತ್ಮಕ ಮತ್ತು ಶೈಕ್ಷಣಿಕ ಬೆಳವಣಿಗೆಗಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜಶೇಖರ ಶೀಲವಂತ ಅವರು ವಿದ್ಯಾರ್ಥಿಗಳ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಮತ್ತು ಪಠ್ಯಕ್ಕೆ ನೀಡುವಷ್ಟೇ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಿ ಸದೃಢ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಪೂರ್ವ ವಿಭಾಗದ ಚೇರಮನ್ ಸಿದ್ಲಿಂಗಪ್ಪ ಬರಗುಂಡಿ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ರಾಜು ತಾಪಡಿಯಾ, ಸುನಿಲ್ ಕರಣಿ, ಲಕ್ಷ್ಮಿನಾರಾಯಣ ಕಾಬ್ರಾ, ಅಮಾತೆಪ್ಪ ಕೊಪ್ಪಳ, ರವೀಂದ್ರ ಅಂಗಡಿ, ಶಾಮಸುಂದರ ಮಾಲಪಾಣಿ, ಪುರುಷೋತ್ತಮ ಝಂವರ, ಎಸ್.ಎಸ್.ನಾಯನೇಗಲಿ, ಪ್ರಾಚಾರ್ಯ ಡಾ.ಎನ್.ವೈ.ಬಡನ್ನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
    1
    ಗುಳೇದಗುಡ್ಡದ ಭಂಡಾರಿ ಮತ್ತು ರಾಠಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಶುಕ್ರವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕೆರೂರದ ಸಾಹಿತಿ ಬಸವರಾಜ ಪ್ಯಾಟಿಶೆಟ್ಟರ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸಮಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ನಿರಂತರ ಅಧ್ಯಯನಶೀಲರಾಗಬೇಕು ಮತ್ತು ರಾಷ್ಟ್ರ ಅಭಿಮಾನವನ್ನು ಬೆಳೆಸಿಕೊಂಡು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು. ಬದುಕು ಮುಳ್ಳಿನ ಹಾಸಿಗೆಯಿದ್ದಂತೆ ಎಂದು ಬಣ್ಣಿಸಿದ ಅವರು, ವಿದ್ಯಾರ್ಥಿಗಳು ದೈಹಿಕ, ಭಾವನಾತ್ಮಕ ಮತ್ತು ಶೈಕ್ಷಣಿಕ ಬೆಳವಣಿಗೆಗಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜಶೇಖರ ಶೀಲವಂತ ಅವರು ವಿದ್ಯಾರ್ಥಿಗಳ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಮತ್ತು ಪಠ್ಯಕ್ಕೆ ನೀಡುವಷ್ಟೇ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಿ ಸದೃಢ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಪೂರ್ವ ವಿಭಾಗದ ಚೇರಮನ್ ಸಿದ್ಲಿಂಗಪ್ಪ ಬರಗುಂಡಿ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ರಾಜು ತಾಪಡಿಯಾ, ಸುನಿಲ್ ಕರಣಿ, ಲಕ್ಷ್ಮಿನಾರಾಯಣ ಕಾಬ್ರಾ, ಅಮಾತೆಪ್ಪ ಕೊಪ್ಪಳ, ರವೀಂದ್ರ ಅಂಗಡಿ, ಶಾಮಸುಂದರ ಮಾಲಪಾಣಿ, ಪುರುಷೋತ್ತಮ ಝಂವರ, ಎಸ್.ಎಸ್.ನಾಯನೇಗಲಿ, ಪ್ರಾಚಾರ್ಯ ಡಾ.ಎನ್.ವೈ.ಬಡನ್ನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    13 hrs ago
  • ಶಿಗ್ಗಾವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಕಳೆದ 10 ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತ ಭವನದ ಮುಂದೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ದೀರ್ಘಕಾಲದಿಂದ ಸಂಬಳ ಸಿಗದೆ ಕುಟುಂಬಗಳ ಜೀವನ ನಿರ್ವಹಣೆ ತೀವ್ರ ತೊಂದರೆಗೆ ಸಿಲುಕಿದ್ದು, ಸಂಸಾರಗಳು ಬೀದಿಗೆ ಬರುವಂತಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾ ನಿರತ ಪ್ರಾಧ್ಯಾಪಕರು 2024-25 ಮತ್ತು 2025-26ನೇ ಶೈಕ್ಷಣಿಕ ವರ್ಷಗಳಲ್ಲಿ ವಿಶ್ವವಿದ್ಯಾಲಯದ ನಿಯಮ ಹಾಗೂ ವೇಳಾಪಟ್ಟಿಯಂತೆ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಗೆ ಬೋಧನೆ ಮಾಡಿ ಪರೀಕ್ಷೆಗಳು ಸುಗಮವಾಗಿ ನಡೆಯಲು ಸಹಕರಿಸಿದ್ದಾರೆ. ಇಷ್ಟಿದ್ದರೂ ಹತ್ತು ತಿಂಗಳ ವೇತನ ಮಾತ್ರ ಇನ್ನೂ ಪಾವತಿಯಾಗಿಲ್ಲ. ಈ ಬಗ್ಗೆ ಕುಲಪತಿಗಳು, ಕುಲಸಚಿವರು ಮತ್ತು ಸಿಂಡಿಕೇಟ್ ಸದಸ್ಯರಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬರಲಾಗಿದೆ. ಸಿಂಡಿಕೇಟ್ ಸದಸ್ಯರು ವೇತನ ಬಿಡುಗಡೆ ಮಾಡಲು ಸೂಚಿಸಿದ್ದರೂ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿಳಂಬ ನೀತಿಯಿಂದಾಗಿ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ತಮ್ಮ ನ್ಯಾಯಯುತ ಬೇಡಿಕೆಯಾದ 10 ತಿಂಗಳ ಬಾಕಿ ವೇತನ ಬಿಡುಗಡೆಯಾಗುವವರೆಗೂ ವಿಶ್ವವಿದ್ಯಾಲಯದ ಆಡಳಿತ ಭವನದ ಬಾಗಿಲ ಮುಂದೆ ಹೋರಾಟ ಮುಂದುವರಿಸುವುದಾಗಿ ಪ್ರಾಧ್ಯಾಪಕರು ಸ್ಪಷ್ಟಪಡಿಸಿದ್ದಾರೆ. ಈ ಧರಣಿಯಲ್ಲಿ ಡಾ. ಉತ್ತಮ ಕೆ.ಎಚ್, ಡಾ. ನದಾಫ ಎಚ್, ಡಾ. ಶಂಕರ ಕುಂದಗೋಳ, ಡಾ. ರಾಜಶೇಖರ ಡೊಂಬರಮತ್ತೂರು, ಶ್ರೀಮತಿ ಅಭಿನಯ ಎಚ್, ಡಾ. ಸುವರ್ಣಾ ಶೃಂಗೇರಿ, ಪ್ರೀತಮ್ ಬಾಯರ್, ಲೇಖನ ಎಂ.ಯ, ಡಾ. ಆನಂದಪ್ಪ ಬಿ.ಎಚ್, ಡಾ. ಪೊಲಿನಾ ಕೋಟೆ ಎಸ್, ಡಾ. ರಜೀಯಾ ಬೇಗಂ ನದಾಫ, ಡಾ. ಪ್ರವೀಣ ಕರೆಪ್ಪನವರ, ಡಾ. ಮಂಜುನಾಥ ದೊಡಮನಿ, ಕುಮಾರಿ ಅನ್ನಪೂರ್ಣ ಲಿಂಬಿಕಾಯಿ, ಕುಮಾರಿ ಸೈಯದಾ ಖಾದ್ರಿ, ಶಿವಾನಂದ ದೊಡ್ಡಮನಿ ಹಾಗೂ ಖಾಜಾನವಾಜ ಪಾಲ್ಗೊಂಡಿದ್ದಾರೆ.
    2
    ಶಿಗ್ಗಾವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಕಳೆದ 10 ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತ ಭವನದ ಮುಂದೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ದೀರ್ಘಕಾಲದಿಂದ ಸಂಬಳ ಸಿಗದೆ ಕುಟುಂಬಗಳ ಜೀವನ ನಿರ್ವಹಣೆ ತೀವ್ರ ತೊಂದರೆಗೆ ಸಿಲುಕಿದ್ದು, ಸಂಸಾರಗಳು ಬೀದಿಗೆ ಬರುವಂತಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನಾ ನಿರತ ಪ್ರಾಧ್ಯಾಪಕರು 2024-25 ಮತ್ತು 2025-26ನೇ ಶೈಕ್ಷಣಿಕ ವರ್ಷಗಳಲ್ಲಿ ವಿಶ್ವವಿದ್ಯಾಲಯದ ನಿಯಮ ಹಾಗೂ ವೇಳಾಪಟ್ಟಿಯಂತೆ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಗೆ ಬೋಧನೆ ಮಾಡಿ ಪರೀಕ್ಷೆಗಳು ಸುಗಮವಾಗಿ ನಡೆಯಲು ಸಹಕರಿಸಿದ್ದಾರೆ. ಇಷ್ಟಿದ್ದರೂ ಹತ್ತು ತಿಂಗಳ ವೇತನ ಮಾತ್ರ ಇನ್ನೂ ಪಾವತಿಯಾಗಿಲ್ಲ. ಈ ಬಗ್ಗೆ ಕುಲಪತಿಗಳು, ಕುಲಸಚಿವರು ಮತ್ತು ಸಿಂಡಿಕೇಟ್ ಸದಸ್ಯರಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬರಲಾಗಿದೆ. ಸಿಂಡಿಕೇಟ್ ಸದಸ್ಯರು ವೇತನ ಬಿಡುಗಡೆ ಮಾಡಲು ಸೂಚಿಸಿದ್ದರೂ, ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿಳಂಬ ನೀತಿಯಿಂದಾಗಿ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ತಮ್ಮ ನ್ಯಾಯಯುತ ಬೇಡಿಕೆಯಾದ 10 ತಿಂಗಳ ಬಾಕಿ ವೇತನ ಬಿಡುಗಡೆಯಾಗುವವರೆಗೂ ವಿಶ್ವವಿದ್ಯಾಲಯದ ಆಡಳಿತ ಭವನದ ಬಾಗಿಲ ಮುಂದೆ ಹೋರಾಟ ಮುಂದುವರಿಸುವುದಾಗಿ ಪ್ರಾಧ್ಯಾಪಕರು ಸ್ಪಷ್ಟಪಡಿಸಿದ್ದಾರೆ. ಈ ಧರಣಿಯಲ್ಲಿ ಡಾ. ಉತ್ತಮ ಕೆ.ಎಚ್, ಡಾ. ನದಾಫ ಎಚ್, ಡಾ. ಶಂಕರ ಕುಂದಗೋಳ, ಡಾ. ರಾಜಶೇಖರ ಡೊಂಬರಮತ್ತೂರು, ಶ್ರೀಮತಿ ಅಭಿನಯ ಎಚ್, ಡಾ. ಸುವರ್ಣಾ ಶೃಂಗೇರಿ, ಪ್ರೀತಮ್ ಬಾಯರ್, ಲೇಖನ ಎಂ.ಯ, ಡಾ. ಆನಂದಪ್ಪ ಬಿ.ಎಚ್, ಡಾ. ಪೊಲಿನಾ ಕೋಟೆ ಎಸ್, ಡಾ. ರಜೀಯಾ ಬೇಗಂ ನದಾಫ, ಡಾ. ಪ್ರವೀಣ ಕರೆಪ್ಪನವರ, ಡಾ. ಮಂಜುನಾಥ ದೊಡಮನಿ, ಕುಮಾರಿ ಅನ್ನಪೂರ್ಣ ಲಿಂಬಿಕಾಯಿ, ಕುಮಾರಿ ಸೈಯದಾ ಖಾದ್ರಿ, ಶಿವಾನಂದ ದೊಡ್ಡಮನಿ ಹಾಗೂ ಖಾಜಾನವಾಜ ಪಾಲ್ಗೊಂಡಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    3 hrs ago
  • ಅಮೆರಿಕದಲ್ಲಿ ಭಾರತೀಯ ಮಹಿಳೆಯರ ಮೇಲೆ ಮತ್ತೊಮ್ಮೆ ಜನಾಂಗೀಯ ದ್ವೇಷದ ಘಟನೆ ನಡೆದಿದೆ. ಭಾರತೀಯ ಮಹಿಳೆಯರ ತಂಡದ ಮೇಲೆ ಶ್ವೇತವರ್ಣೀಯ ಮಹಿಳೆಯೊಬ್ಬರು ದರ್ಪ ತೋರುವ ಮೂಲಕ ತಮ್ಮ ದ್ವೇಷವನ್ನು ಪ್ರದರ್ಶಿಸಿದ್ದಾರೆ.
    1
    ಅಮೆರಿಕದಲ್ಲಿ ಭಾರತೀಯ ಮಹಿಳೆಯರ ಮೇಲೆ ಮತ್ತೊಮ್ಮೆ ಜನಾಂಗೀಯ ದ್ವೇಷದ ಘಟನೆ ನಡೆದಿದೆ. ಭಾರತೀಯ ಮಹಿಳೆಯರ ತಂಡದ ಮೇಲೆ ಶ್ವೇತವರ್ಣೀಯ ಮಹಿಳೆಯೊಬ್ಬರು ದರ್ಪ ತೋರುವ ಮೂಲಕ ತಮ್ಮ ದ್ವೇಷವನ್ನು ಪ್ರದರ್ಶಿಸಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.