ಜಿಲ್ಲಾ ಮಟ್ಟದ ಪತ್ರಿಕಾ ಸಮ್ಮೇಳನದಲ್ಲಿ ಪೃಥ್ವಿರಾಜ್ ವಿರೇಶ ಶಿಂಪಿ ವಿದ್ಯಾರ್ಥಿಗೆ ಸತ್ಕಾರ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ವರದಿಗಾರ ವೀರೇಶ್ ಶಿಂಪಿ ಅವರ ದ್ವಿತೀಯ ಸುಪುತ್ರ ಪ್ರಥ್ವಿರಾಜ್ ವಿ ಶಿಂಪಿ ಸನ್ಮಾನ ಬಾಗಲಕೋಟೆ ಜಿಲ್ಲಾ ಪಂಚಾಯತಿ ನೂತನ ಸಭಾ ಭವನ ನವನಗರದಲ್ಲಿ ಶುಕ್ರವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,(ರಿ)ಬಾಗಲಕೋಟೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಾಗಲಕೋಟೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಸನ್ಮಾನ, ಸಾಧಕರಿಗೆ ಪಶ್ರಸ್ತಿ ಪ್ರಧಾನ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ವರದಿಗಾರರಾದ ವೀರೇಶ ಚ್ ಶಿಂಪಿ ಅವರ ದ್ವಿತೀಯ ಸುಪುತ್ರ ಪ್ರಥ್ವಿರಾಜ್ ವೀರೇಶ ಶಿಂಪಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 98/40 ಉತ್ತಮ ಅಂಕಗಳನ್ನು ಪಡೆದು ಕನ್ನಡದಲ್ಲಿ 125 ಕ್ಕೆ 125 ಅಂಕಗಳನ್ನು ಪಡೆದುದರ ಪ್ರಯುಕ್ತ ಪ್ರತಿಭಾ ಪುರಸ್ಕಾರ ಅಭಿನಂದನಾ ಪತ್ರ ನೀಡಿ ಗೌರವಿಸಿ ಸನ್ಮಾಸಿದರು. ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕರಾದ ಪಿ ಎಚ್ ಪೂಜಾರ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಉಮೇಶ ಮೇಟಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಅದ್ಯಕ್ಷರಾದ ಪ್ರಕಾಶ ತಪಶೆಟ್ಟಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಹಾಗೂ ವಾರ್ತಾ ಇಲಾಖೆ ಅಧಿಕಾರಿಗಳು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು, ರಾಜ್ಯ ಪತ್ರಕರ್ತರು, ಹಾಗೂ ಜಿಲ್ಲಾ ಪತ್ರಕರ್ತರು , ವರದಿಗಾರರು , ವಿತರಕರು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ಪತ್ರಿಕಾ ಸಮ್ಮೇಳನದಲ್ಲಿ ಪೃಥ್ವಿರಾಜ್ ವಿರೇಶ ಶಿಂಪಿ ವಿದ್ಯಾರ್ಥಿಗೆ ಸತ್ಕಾರ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ವರದಿಗಾರ ವೀರೇಶ್ ಶಿಂಪಿ ಅವರ ದ್ವಿತೀಯ ಸುಪುತ್ರ ಪ್ರಥ್ವಿರಾಜ್ ವಿ ಶಿಂಪಿ ಸನ್ಮಾನ ಬಾಗಲಕೋಟೆ ಜಿಲ್ಲಾ ಪಂಚಾಯತಿ ನೂತನ ಸಭಾ ಭವನ ನವನಗರದಲ್ಲಿ ಶುಕ್ರವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,(ರಿ)ಬಾಗಲಕೋಟೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಾಗಲಕೋಟೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಸನ್ಮಾನ, ಸಾಧಕರಿಗೆ ಪಶ್ರಸ್ತಿ ಪ್ರಧಾನ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ವರದಿಗಾರರಾದ ವೀರೇಶ ಚ್ ಶಿಂಪಿ ಅವರ ದ್ವಿತೀಯ ಸುಪುತ್ರ ಪ್ರಥ್ವಿರಾಜ್ ವೀರೇಶ ಶಿಂಪಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 98/40 ಉತ್ತಮ ಅಂಕಗಳನ್ನು ಪಡೆದು ಕನ್ನಡದಲ್ಲಿ 125 ಕ್ಕೆ 125 ಅಂಕಗಳನ್ನು ಪಡೆದುದರ ಪ್ರಯುಕ್ತ ಪ್ರತಿಭಾ ಪುರಸ್ಕಾರ ಅಭಿನಂದನಾ ಪತ್ರ ನೀಡಿ ಗೌರವಿಸಿ ಸನ್ಮಾಸಿದರು. ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕರಾದ ಪಿ ಎಚ್ ಪೂಜಾರ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಉಮೇಶ ಮೇಟಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಅದ್ಯಕ್ಷರಾದ ಪ್ರಕಾಶ ತಪಶೆಟ್ಟಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಹಾಗೂ ವಾರ್ತಾ ಇಲಾಖೆ ಅಧಿಕಾರಿಗಳು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು, ರಾಜ್ಯ ಪತ್ರಕರ್ತರು, ಹಾಗೂ ಜಿಲ್ಲಾ ಪತ್ರಕರ್ತರು , ವರದಿಗಾರರು , ವಿತರಕರು ಉಪಸ್ಥಿತರಿದ್ದರು.
- ಸೂಮವಾರ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಶಿವಲಿಂಗೇಗೌಡ ಹೇಳಿಕೆ1
- ಯಡಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ಬುಕ್, ಲೇಖನಿ ವಿತರಣೆ ಬೀಳಗಿ: ತಾಲೂಕಿನ ಯಡಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಸಮಾಜಸೇವಕ ಉಮೇಶ್ ಚೆನ್ನಿ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಲೇಖನಿಗಳನ್ನು ವಿತರಿಸಿದರು,ನವಚೇತನ ಚಾರಿಟೇಬಲ್ ಟ್ರಸ್ಟ್ ಪಾರ್ ಡಿಸೆಬಲ್ಡಸ್ (ರಿ)ರಾಮನಗರ (ಬೆಂಗಳೂರು) ಶ್ರೀ ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಂಘ(ರಿ) ಅನಗವಾಡಿ (ಬೀಳಗಿ) ಇವರ ಸಂಯೋಗದಲ್ಲಿ ನಡೆದು ಕಾರ್ಯಕ್ರಮ.ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.4
- ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಬೀಳಗಿ-ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಉಚಿತ ನೋಟ್ಬುಕ್ ಹಾಗೂ ಲೇಖನಿ ವಿತರಣೆ : ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಬೀಳಗಿ ತಾಲೂಕಿನ ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ್ (ರಿ), ರಾಮನಗರ (ಬೆಂಗಳೂರು) ಹಾಗೂ ಶ್ರೀ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ), ಅನಗವಾಡಿ (ಬೀಳಗಿ) ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಹನುಮಂತ ಅಶೋಕ್ ಹನಮರ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸದಾಶಿವ ನಂದಗಾವಿ, ದೊಡ್ಡಣ್ಣ ದೇಸಾಯಿ, ಜಿತೇಂದ್ರ ಪಾಟೀಲ್, ಚಾಂದ್ ಸಾಬ್ ವಿರೋಜಿ, ಮೌಲಾಸಾಬ್ ಜೈನಾಪುರ ಹಾಗೂ ತಾಲೂಕು ವಿಕಲಚೇತನರ ಸಂಸ್ಥೆಯ ಮಾರ್ಗದರ್ಶಕರಾದ ಭೀಮಸಿ ದೇವನಾಳ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಉಮೇಶ್ ಎಂ. ಚನ್ನಿ ಪ್ರಾಸ್ತಾವಿಕವಾಗಿ ಮಾತನಾಡಿ, "ಇಂದಿನ ಮಕ್ಕಳೇ ಮುಂದಿನ ದೇಶದ ಪ್ರಜೆಗಳು. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಅಗತ್ಯ. ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ನೋಟ್ಬುಕ್ಗಳ ಮೇಲೆ ಮಹನೀಯರು ಹಾಗೂ ಇತಿಹಾಸಕಾರರ ಭಾವಚಿತ್ರ ಮತ್ತು ಅವರ ಪರಿಚಯವಿರುವುದರಿಂದ ಮಕ್ಕಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವ್ಯಸನಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು," ಎಂದು ಕಿವಿಮಾತು ಹೇಳಿದರು. ಬಳಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜೊತೆಗೆ ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಹ ಶಿಕ್ಷಕರಾದ ಆನಂದ ಬಿರಾದಾರ್ ಸ್ವಾಗತಿಸಿದರು. ಜಗದೀಶ ಮುಚ್ಛಂಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.4
- ಕೆಎಸ್ಆರ್ಟಿಸಿ ಸಿಬ್ಬಂದಿಯಿಂದ ಅನುಚಿತವರ್ತನೆ ವಿದ್ಯಾರ್ಥಿಗಳ ಪ್ರತಿಭಟನೆ1
- ಹಮ್ಮಿಗಿ ಗ್ರಾಮದಲ್ಲಿ ಸಣ್ಣದೊಂದು ಜನನ ಪ್ರಮಾಣ ಪತ್ರದ ತಿದ್ದುಪಡಿ ಗಾಗಿ ಅಂಗವಿಕಲ ಮಹಿಳೆಯೊಬ್ಬರು ನಾಲ್ಕು ದಿನಗಳಿಂದ ಅಲೆದಾಡುತ್ತಿರುವ ಘಟನೆ... ಹೌದು, ಹಮ್ಮಿಗಿ ಗ್ರಾಮದ ವೀರಮ್ಮ ಬಾಬುಸಾಬ ಮಡಿವಾಳರ ಎಂಬ ವಿಶೇಷ ಚೇತನ ಮಹಿಳೆ, ನವಿನ ಹಾಲಪ್ಪ ಈಟಿ ಅವರ ಜನನ ಪ್ರಮಾಣ ಪತ್ರಕ್ಕಾಗಿ ನಾಲ್ಕು ದಿನಗಳಿಂದ ನಿರಂತರವಾಗಿ ಅಲೆದಾಡುತ್ತಿದ್ದಾರೆ. ಎರಡು ಕಾಲು ಇಲ್ಲದೆ ನಡೆಯಲು ಶಕ್ತಿಯಿಲ್ಲದಿದ್ದರೂ, ಶ್ರಮಪಟ್ಟು ಕಚೇರಿಗೆ ಬಂದರೆ ತಲಾಠಿ ಮಾತ್ರ ಸ್ಥಳದಲ್ಲೇ ಇರುವುದಿಲ್ಲ! ಸಾರ್ವಜನಿಕರ ಕೆಲಸ ಮಾಡಿಕೊಡಬೇಕಾದ ಅಧಿಕಾರಿ ಹೀಗೆ ನಾಪತ್ತೆಯಾಗುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಸಂಬಳ ಪಡೆಯುವ ಅಧಿಕಾರಿಗಳು ಹೀಗೆ ಬಡವರನ್ನು, ಅಂಗವಿಕಲರನ್ನು ಸತಾಹಿಸುವುದು ಎಷ್ಟು ಸರಿ ಎನ್ನುವುದು ಗ್ರಾಮಸ್ಥರ ಖಾರವಾದ ಪ್ರಶ್ನೆ.1
- ಜನಪ್ರತಿನಿಧಿಗಳ ನಿರ್ದೇಶನ ಜಾರಿಗೆ ಒತ್ತಾಯ: ಮಾನ್ವಿ ನಾಗರಿಕ ವೇದಿಕೆ ಒಂದು ವಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಮಾನ್ವಿ ಪಟ್ಟಣದಲ್ಲಿ ವತಿಯಿಂದ ನಡೆಯುತ್ತಿರುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಬಂಧಿತ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಮಾನ್ವಿ ನಾಗರಿಕ ಹಿತ ರಕ್ಷಣಾ ವೇದಿಕೆ ಆರೋಪಿಸಿದೆ. ಸಭೆಯಲ್ಲಿ ನಿರ್ದೇಶನ, ಆದರೆ ಜಾರಿಯಿಲ್ಲ : ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯ ರಾದ ಎನ್. ಎಸ್. ಬೋಸರಾಜು ಮತ್ತು ಮಾನ್ಸಿ ಶಾಸಕರಾದ ಶ್ರೀ ಜಿ. ಹಂಪಯ್ಯ ನಾಯಕ ಸಾಹುಕಾರ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ 8 ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾ ಗಿತ್ತು. ಆದರೆ ಆ ನಿರ್ದೇಶನಗಳು ಇದುವರೆಗೆ ಜಾರಿಯಾಗಿಲ್ಲ ಎಂದು ವೇದಿಕೆ ತಿಳಿಸಿದೆ. ಆಟೋ ನಗರದಿಂದ ಹೌಸಿಂಗ್ ಬೋರ್ಡ್ ವರೆಗೆ 2002ರಲ್ಲಿ ಭೂಸ್ವಾ ಧೀನ ಮಾಡಿಕೊಂಡ ಜಾಗದಲ್ಲಿ ತಕ್ಷಣ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸರ್ವೇ ನಡೆಸಬೇಕು. ರಸ್ತೆ ಮಧ್ಯದಲ್ಲಿರುವ ಅಪಾಯಕಾರಿ ಹಾಗೂ ವಿಷಕಾರಿ ಮರಗಳನ್ನು ತೆರವುಗೊಳಿಸಬೇಕು. ರಸ್ತೆ ಅಗಲೀಕರಣ ಕಡಿಮೆ ಮಾಡಿರುವ ಸ್ಥಳಗಳನ್ನು ಮರುಪರಿಶೀಲಿಸಿ ಸರಿಪಡಿಸಬೇಕು. ಬಸವೇಶ್ವರ, ಅಂಬೇಡ್ಕರ್, ಗಾಂಧಿ ಜಿ, ವಾಲ್ಮೀಕಿ, ಮೇಜರ್ ಶಾನವಾ ಜ್ ಖಾನ್ ವೃತ್ತಗಳ ಅಗಲೀಕರಣ ಮತ್ತು ಸುಂದರೀಕರಣ ಕಾಮಗಾರಿ ಆರಂಭಿಸಬೇಕು. ವೈಜ್ಞಾನಿಕ ಡೈನೇ ಜ್ ವ್ಯವಸ್ಥೆ ನಿರ್ಮಿಸಿ ಮಳೆ ನೀರು ಸರಾಗವಾಗಿ ಮಾಡಬೇಕು. ಹರಿಯುವಂತೆ ಸಿಂಧನೂರು ಮಾದರಿಯಲ್ಲಿ ಭೂಗತ ವಿದ್ಯುತ್ ಕೇಬಲ್ ಅಳವಡಿಸಿ, ತೂಗು ತಂತಿ ತೆರವುಗೊಳಿಸಬೇಕು. ಕಾಮಗಾರಿಯ ಪ್ರತಿ ಹಂತದಲ್ಲೂ ನಾಗರಿಕ ವೇದಿಕೆಯೊಂದಿಗೆ ಸಮನ್ವಯ ಸಾಧಿಸಬೇಕು. 8. ವರದಿ: ನೀಡಿದ ನಿರ್ದೇಶನಗಳ ಅನುಷ್ಠಾನದ ಕುರಿತು ಲಿಖಿತ ಮಾಹಿತಿ ನೀಡಬೇಕು. ಸಭೆಯಲ್ಲಿ ಭರವಸೆಗಳು ಹಾಗೂ ನಿರ್ದೇ ಶನಗಳನ್ನು ನಿಗದಿತ ಕಾಲಮಿತಿಯಲ್ಲಿ ನೀಡಿದ ಅನುಷ್ಠಾನಗೊಳಿಸದಿದ್ದರೆ, ಒಂದು ವಾರದ ನಂತರ ಮಾನ್ವಿ ಜನತೆಯೊಂ ದಿಗೆ ಸೇರಿ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಉಗ್ರ ಹೋರಾಟ ಹಮ್ಮಿ ಕೊಳ್ಳಲಾಗುವುದು ಎಂದು ಮಾನ್ವಿನಾಗರಿಕ ಹಿತ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. ಈ ಕುರಿತು ತಹಸೀಲ್ದಾರರಿಗೆ ಲಿಖಿತ ಮನವಿಯನ್ನು ಸಲ್ಲಿಸಲಾಗಿದೆ. ಈ ವಿಳಂಬದಿಂದ ಉಂಟಾಗುವ ಎಲ್ಲಾ ಬೆಳವಣಿಗೆಗಳಿಗೆ ಆಡಳಿತ ವರ್ಗ ಹಾಗೂ ಸಂಬಂಧಿಸಿದ ಅಧಿಕಾರಿಗಳೇ ಹೊಣೆಗಾರರಾ ಗಿರುತ್ತಾರೆ ಎಂದು ವೇದಿಕೆ ತಿಳಿಸಿದೆ.3
- ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ವಿರೋಧಿಸಿ ಪ್ರತಿಭಟನೆ1
- ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು1
- ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗ: ತಾಲೂಕಿನ ನಗರಗುಂಡ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಇದೀಗ ದೇವದುರ್ಗ ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಗುಡ್ಡ ಪ್ರದೇಶದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ತಾಲೂಕಿನ ವಿವಿಧೆಡೆ ಚಿರತೆಗಳ ಓಡಾಟದ ಕುರಿತು ವರದಿಯಾಗುತ್ತಿದ್ದು, ಇದೀಗ ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಚಿರತೆ ಕಾಣಿಸಿಕೊಂಡಿರುವ ಕುರಿತು ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ವಲಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಚಲನವಲನ ಹಾಗೂ ಜಾಡು ಪತ್ತೆಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ನಿಗಾ ವಹಿಸುತ್ತಿದ್ದು, ಗುಡ್ಡ ಪ್ರದೇಶದಲ್ಲಿ ಚಿರತೆಯ ಇರುವಿಕೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ತಾಲೂಕಿನ ವಿವಿಧೆಡೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು ವಲಸೆ ಬಂದಿರುವ ಚಿರತೆಗಳಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಗುಡ್ಡ ಹಾಗೂ ಅರಣ್ಯ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಚಿರತೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.2