Shuru
Apke Nagar Ki App…
ಸಣ್ಣಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರು ಮತ್ತು ಬಾಗಲಕೋಟೆ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ Vijayanand S Kashappanavar ಸಣ್ಣಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರು ಮತ್ತು ಬಾಗಲಕೋಟೆ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ Vijayanand S Kashappanavar ಇಂದು ನಮ್ಮ ವಾರ್ಡ್ಗೆ ಆಗಮಿಸಿ ಗಣೇಶ ಹಬ್ಬವನ್ನು ನಮ್ಮ ಜನರೊಂದಿಗೆ ಸೇರಿ ಆಚರಿಸಿದ್ದು ನಮಗೆ ಅಪಾರ ಹೆಮ್ಮೆಯ ವಿಷಯ. ಅವರ ಆಗಮನ ಜನರಲ್ಲಿ ಉತ್ಸಾಹ, ಸಂತೋಷ ಮತ್ತು ಒಗ್ಗಟ್ಟನ್ನು ಹೆಚ್ಚಿಸಿದೆ. ಜನಸಾಮಾನ್ಯರೊಂದಿಗೆ ಬೆರೆತು ಹಬ್ಬವನ್ನು ಆಚರಿಸುವ ಅವರ ಈ ನಡೆ ಜನಪ್ರತಿನಿಧಿಗಳ ಜನಸ್ಪಂದನ ಮನೋಭಾವವನ್ನೂ ತೋರಿಸುತ್ತದೆ. ಇಂತಹ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳು ಜನರು ಮತ್ತು ಜನಪ್ರತಿನಿಧಿಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ. ನಮ್ಮ ವಾರ್ಡ್ಗೆ ಆಗಮಿಸಿ ಜನರೊಂದಿಗೆ ಬೆರೆತು ಗಣೇಶ ಹಬ್ಬದ ಸಂಭ್ರಮ ಹಂಚಿಕೊಂಡ ಸನ್ಮಾನ್ಯ ಸಚಿವರಿಗೆ ಹೃತ್ಪೂರ್ವಕ ಧನ್ಯವಾದಗಳು."
Ilahi kaladagi
ಸಣ್ಣಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರು ಮತ್ತು ಬಾಗಲಕೋಟೆ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ Vijayanand S Kashappanavar ಸಣ್ಣಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರು ಮತ್ತು ಬಾಗಲಕೋಟೆ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ Vijayanand S Kashappanavar ಇಂದು ನಮ್ಮ ವಾರ್ಡ್ಗೆ ಆಗಮಿಸಿ ಗಣೇಶ ಹಬ್ಬವನ್ನು ನಮ್ಮ ಜನರೊಂದಿಗೆ ಸೇರಿ ಆಚರಿಸಿದ್ದು ನಮಗೆ ಅಪಾರ ಹೆಮ್ಮೆಯ ವಿಷಯ. ಅವರ ಆಗಮನ ಜನರಲ್ಲಿ ಉತ್ಸಾಹ, ಸಂತೋಷ ಮತ್ತು ಒಗ್ಗಟ್ಟನ್ನು ಹೆಚ್ಚಿಸಿದೆ. ಜನಸಾಮಾನ್ಯರೊಂದಿಗೆ ಬೆರೆತು ಹಬ್ಬವನ್ನು ಆಚರಿಸುವ ಅವರ ಈ ನಡೆ ಜನಪ್ರತಿನಿಧಿಗಳ ಜನಸ್ಪಂದನ ಮನೋಭಾವವನ್ನೂ ತೋರಿಸುತ್ತದೆ. ಇಂತಹ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳು ಜನರು ಮತ್ತು ಜನಪ್ರತಿನಿಧಿಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ. ನಮ್ಮ ವಾರ್ಡ್ಗೆ ಆಗಮಿಸಿ ಜನರೊಂದಿಗೆ ಬೆರೆತು ಗಣೇಶ ಹಬ್ಬದ ಸಂಭ್ರಮ ಹಂಚಿಕೊಂಡ ಸನ್ಮಾನ್ಯ ಸಚಿವರಿಗೆ ಹೃತ್ಪೂರ್ವಕ ಧನ್ಯವಾದಗಳು."
More news from ಕರ್ನಾಟಕ and nearby areas
- ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್ ಎದುರು ಪ್ರತಿಭಟನೆ1
- ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು.4
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು1
- ಗರಸು ತುಂಬಿದ ಟ್ರ್ಯಾಕ್ಟರ್ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್ಗಳ ಗರಸು ತುಂಬಿದ ಟ್ರ್ಯಾಕ್ಟರ್ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.1
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1