Shuru
Apke Nagar Ki App…
ಕಾತ್ರಾಳ್ ಕೆರೆ ಬಳಿ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ ಚಾಲಕ ಪ್ರಣಾಪಾಯದಿಂದ ಪಾರು. ಚಿತ್ರದುರ್ಗ ಕಾತ್ರಾಳ್ ಕೆರೆ ಬಳಿ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ.. ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಘಟನೆ ನೀರು ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಟ್ಯಾಂಕರ್ ಲಾರಿಯ ಚಕ್ರಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ಮಿ ಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ . ಅದೃಷ್ಟವಶಾತ್ ಟ್ಯಾಂಕರ್ ನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
Suresh Belagere
ಕಾತ್ರಾಳ್ ಕೆರೆ ಬಳಿ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ ಚಾಲಕ ಪ್ರಣಾಪಾಯದಿಂದ ಪಾರು. ಚಿತ್ರದುರ್ಗ ಕಾತ್ರಾಳ್ ಕೆರೆ ಬಳಿ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ.. ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಘಟನೆ ನೀರು ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಟ್ಯಾಂಕರ್ ಲಾರಿಯ ಚಕ್ರಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ಮಿ ಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ . ಅದೃಷ್ಟವಶಾತ್ ಟ್ಯಾಂಕರ್ ನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
More news from ಕರ್ನಾಟಕ and nearby areas
- ಚಿತ್ರದುರ್ಗ : ದಾವಣಗೆರೆ ಜಿಲ್ಲೆಯ ರಜಾನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ (Valmiki Peeth) ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ..ಮಾಹಿತಿಯ ಪ್ರಕಾರ, ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಸ್ವಾಮೀಜಿಯವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರು ಚಿತ್ರದುರ್ಗ ನಗರದ ಬಸವೇಶ್ವರ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅಗತ್ಯ ಪರೀಕ್ಷೆಗಳನ್ನು ನಡೆಸಿ, ತೀವ್ರ ನಿಗಾದಲ್ಲಿ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಾಲ್ಮೀಕಿ ಗುರುಪೀಠದ ಮೂಲಗಳ ಪ್ರಕಾರ, ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೆಚ್ಚಿನ ಚಿಕಿತ್ಸೆ ಮತ್ತು ಮೇಲ್ವಿಚಾರಣೆ ಮುಂದುವರಿದಿದೆ. ಸ್ವಾಮೀಜಿಗಳ ಆರೋಗ್ಯ ವಿಚಾರ ತಿಳಿಯುತ್ತಿದ್ದಂತೆಯೇ ಭಕ್ತರು ಮತ್ತು ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆ ಆವರಣದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.1
- ಬೆಳೆ ವಿಮೆಗೆ ಆಗ್ರಹಿಸಿ ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ ಟಿ ತಿಪ್ಪೇಸ್ವಾಮಿ ಅವರು ಮಾತನಾಡಿದ್ದಾರೆ1
- ಭಂದುಗಳೇ. 🙏 ದಿನಾಂಕ 18-2-26ರಂದು 5:30 ಸಮಯ ದಂದು ಹೊಳಲ್ಕೆರೆ -ದಾವಣಗೆರೆ ಮುಖ್ಯ ರಸ್ತೆ ಚಿಕ್ಕಜಾಜೂರು ರೈಲ್ವೆ ಗೇಟ್ ಹತ್ತಿರ ಪೊಲೀಸ್ ರವರು ವಾಹನ ನಿಲ್ಲಿಸಿ ಫೈನ್ ಹಾಕುತ್ತಿದ್ದಾರೆ ಆದರೆ ಇಲ್ಲಿ ಗಮನಿಸಬಹುದು ಎಷ್ಟು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಎಷ್ಟು ಇತರೆ ವಾಹನ ಹೋಗುತ್ತಿದವೇ ಪೋಲೀಸ್ ಅಧಿಕಾರಿಗಳು ಕೇವಲ ಹೊರ ಜಿಲ್ಲೆಯ ವಾಹನ ನಿಲ್ಲಿಸಿ ಫೈನ್ ಹಾಕುವುದು ಎಷ್ಟು ಸರಿ. ಜೈ ಕೆ ಆರ್ ಎಸ್4
- ರಾಯಚೂರು - ಲಿಂಗಸುಗೂರು: ತಾಲೂಕಿನ ಗುಲಬರ್ಗಾ ರಸ್ತೆಯ ಪಕ್ಕದಲ್ಲಿರುವ ಹೋಟೆಲ್ವೊಂದಕ್ಕೆ ಅಪ್ರಾಪ್ತರು ಚಲಾಯಿಸುತ್ತಿದ್ದ ಕಾರು ನುಗ್ಗಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತಕ್ಕೀಡಾದ ಕಾರು ದೇವದುರ್ಗ ಎ.ಪಿ.ಎಂ.ಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಅವರ ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿ ವೇಗವಾಗಿ ಕಾರನ್ನು ಚಲಾಯಿಸಿದ ಪರಿಣಾಮ, ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೋಟೆಲ್ ಒಳಕ್ಕೆ ನುಗ್ಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಪಟ್ಟಣ ಪ್ರದೇಶಗಳಲ್ಲಿ ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದು ಮಿತಿಮೀರಿದ್ದು, ಸಾರ್ವಜನಿಕರ ಪ್ರಾಣಕ್ಕೆ ಸಂಚಕಾರ ತರುತ್ತಿದೆ. ಮೋಟಾರು ವಾಹನ ಕಾಯ್ದೆಯ ಪ್ರಕಾರ, ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತಕ್ಕೀಡಾದರೆ ಅದರ ಸಂಪೂರ್ಣ ಹೊಣೆಯನ್ನು ವಾಹನ ಮಾಲೀಕರು ಅಥವಾ ಪೋಷಕರು ಹೊರಬೇಕಾಗುತ್ತದೆ. ಅಪ್ರಾಪ್ತರಿಗೆ ವಾಹನ ನೀಡಿದ ಪೋಷಕರಿಗೆ ₹25,000 ವರೆಗೆ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ವಾಹನದ ನೋಂದಣಿಯನ್ನು 12 ತಿಂಗಳ ಕಾಲ ರದ್ದುಗೊಳಿಸಬಹುದು. ಅಪ್ರಾಪ್ತ ವಯಸ್ಕನಿಗೆ 25 ವರ್ಷ ತುಂಬುವವರೆಗೆ ಡ್ರೈವಿಂಗ್ ಲೈಸೆನ್ಸ್ ಸಿಗದಂತೆ ನಿರ್ಬಂಧ ಹೇರಬಹುದು.1
- ದಾವಣಗೆರೆ : ನಗರ ದೇವತೆ ದುಗ್ಗಮ್ಮ ಜಾತ್ರೆ ಫೆ22 ರಂದು ನಡೆಯಲಿದ್ದು, ರೌಡಿಶೀಟರ್ ಗಳಿಗೆ ಎಸ್ಪಿ ತೆಕ್ಕಣನವರ್ ಎಚ್ಚರಿಕೆ ನೀಡಿದರು. ದುಗ್ಗಮ್ಮ ದೇವಸ್ಥಾನ ಹಳೆ ಭಾಗದಲ್ಲಿ ಇದ್ದು, ಈ ಭಾಗದಲ್ಲಿಯೇ ಕೆಲ ದಿನಗಳ ಹಿಂದೆ ಕೈ ಮುಖಂಡ ಅಯ್ಯೂಬ್ ಪೈಲ್ವಾನ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅಲ್ಲದೇ ಆಜಾದ್ ನಗರ ಭಾಗದಲ್ಲಿ ಗಣಪತಿ ವಿಸರ್ಜನೆ ವೇಳೆ ಘರ್ಷಣೆ ನಡೆದಿತ್ತು..ಈ ಎಲ್ಲ ಕಾರಣಗಳಿಂದ ರೌಡಿ ಶೀಟರ್ ಮನೆಗಳಿಗೆ ಡಿಎಸ್ಪಿ ಹಾಗೂ ಸಿಪಿಐ ಉಮೇಶ್ ಸೇರಿದಂತೆ ಇತರ ಸಿಬ್ಬಂದಿಗಳು ಭೇಟಿ ನೀಡಿ ಎಚ್ಚರಿಕೆ ನೀಡಿದರು.4
- ಕಾರಟಗಿ ಫೆ18: ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 7 ಕೋಟಿ 62 ಲಕ್ಷ ರೂಗಳ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಚಿವ ಶಿವರಾಜ ತಂಗಡಗಿಯವರು ಬುಧವಾರ ಭೂಮಿ ಪೂಜೆ ನಡೆಸಿದರು. ಬಳಿಕ ಸಚಿವ ತಂಗಡಗಿಯವರು ಮಾತನಾಡಿ ಕಾರಟಗಿ ಪಟ್ಟಣದ ಕನಕದಾಸ ವೃತ್ತದಿಂದ ಬೂದಗುಂಪ ಗ್ರಾಮದವರೆಗೆ ಡಾಂಭರಿಕರಣ ರಸ್ತೆ ನಿರ್ಮಿಸಲು ಉದ್ದೇಶಿಸಿದ್ದು ಈ ನಿಟ್ಟಿ ರಸ್ತೆಯ ಇಕ್ಕೆಲಗಳಲ್ಲಿ ಒತ್ತುಮೆಯಾದ ರಸ್ತೆಯನ್ನು ತೆರವುಗೊಳಿಸಿ 5 ಕೋಟಿ ರೂಗಳಲ್ಲಿ ಸೂಕ್ತ ರಸ್ತೆ ನಿರ್ಮಿಸಲಾಗುವುದು. ಬೂದಗುಂಪ ರಸ್ತೆ ನಿತ್ಯ ಜನದಟ್ಟೆಯಿಂದ ಕೂಡಿರುತ್ತಿದೆ. ಆದ್ದರಿಂದ ಒತ್ತುವರಿ ಜಾಗವನ್ನು ಮೊದಲು ತೆರವುಗೊಳಿಸಿ ಡಾಂಬರ ರಸ್ತೆ ನಿರ್ಮಾಣವಾಗಲಿದೆ. ಅಲ್ಲದೆ ಈ ರಸ್ತೆಯ ಆಸುಪಾಸಿನಲ್ಲಿ ಕನಕದಾಸ ವೃತ್ತದಿಂದ ರೈಲ್ವೆ ಬ್ರಿಡ್ಜ್ ನ ಬಳಿಯವರೆಗೂ ಬೀದಿ ದೀಪಗಳನ್ನು ಅಳವಡಿಸಲಾಗುವುದು. ಈ ನಿಟ್ಟಿನಲ್ಲಿ ರಸ್ತೆ ಕಾಮಗಾರಿವೇಳೆ ಸಾರ್ವಜನಿಕರು, ವರ್ತಕರು ಕಾಮಗಾರಿ ನಡೆಯುವಾಗ ಸಹಕಾರ ನೀಡಿ ಸುಸಜ್ಜಿತ ರೈತೆ ನಿರ್ಮಾಣಕ್ಕೆ ಅನುವು ಮಾಡಿ ಕೊಡಬೇಕು. ಹಾಗೂ ಕ್ಷೇತ್ರದ ಬೇವಿನಾಳ ಗ್ರಾಮದಿಂದ ಮೈಲಾಪೂರ ಹಳೆ ರಸ್ತೆವರೆಗೆ ಡಾಂಬರೀಕರಣಕ್ಕೆ. ಬೂದಗುಂಪ ಗ್ರಾಮದ ಸ.ಹಿ.ಪ್ರಾ.ಶಾಲೆಯ ಒಂದು ಕೊಠಡಿ ನಿರ್ಮಾಣಕ್ಕೆ ಕಕ್ಕರಗೋಳ ಗ್ರಾಮದ ಅಂಬಣ್ಣ ನವರ ಮನೆಯಿಂದ ಉದ್ಯಾನಪ್ಪ ನವರ ಮನೆಯವರೆಗೆ ಸಿಸಿ ರಸ್ತೆ, ಮರಳಿ ಗ್ರಾಮದ ಆರ್.ಜಿ.ಮು.ಬೈ ರಸ್ತೆಯಿಂದ ಸರಕಾರಿ ಪ್ರೌಢಶಾಲೆ ವರೆಗೆ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಲಾಗಿದೆ. ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ತಂಗಡಗಿ ಬಿಜೆಪಿ ಯವರು ತಂದಿರುವ ಯಾವ ಕಾಮಗಾರಿಗೂ ನಾನು ಇವರೆಗೂ ಒಂದು ಕೆಲಸಕ್ಕೂ ಭೂಮಿ ಪೂಜೆ ನಡೆಸಿಲ್ಲಾ, ಮುಂದೆಯೂ ನಡೆಸುವುದಿಲ್ಲಾ. ನನ್ನ ಅಧಿಕಾರವಧಿಯಲ್ಲಿ ಮಂಜೂರಾದ ಕೆಲಸಗಳಿಗೆ ಗ್ರಾಂಟ್ ತಂದು ಬಹಳಷ್ಟು ಕೆಲಸಗಳಿಗೆ ನಾನೆ ಭೂಮಿ ಪೂಜೆ ನಡೆಸಿದ್ದೆನೆ. ಅವರು ತಂದ ಕೆಲಗಳನ್ನು ಅವರೇ ಮಾಡಲಿ.ಆರ್ಜಿ ರಸ್ತೆಯ ಆಗಲಿಕರಣಹಾಗೂಡಿವೈಡರ್ನಿರ್ಮಾಣ ಕಾಮಗಾರಿಗೆ ಗ್ರಾಂಟ್ ತೆಗೆದಿಟ್ಟ ಬಳಿಕ ಒತ್ತುವರಿ ತೆರವುಗೊಳಿಸಿ ರಸ್ತೆ ಅಗಲೀ ಕರಣ ಕಾಮಗಾರಿ ನಡೆಸಲಾಗುವುದು. ನಾವು ಯಾವಾಗಲೂ ಪೂಜಾ ಮಾಡಿ ಹೋಗೊ ಗಿರಾಕಿಯಲ್ಲಾ, ಫೆ. 28 ಕ್ಕೆ ಪುರಸಭೆ ಸಾಮಾನ್ಯ ಸಭೆ ನಡೆಯಲಿದ್ದು ಅಂದು ಪುರಸಭೆ ಸದಸ್ಯರು ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಕುರಿತು ಚರ್ಚೆಇಸಿ ನಿರ್ಧರಿಸುತ್ತಾರೆ ಬಳಿಕ ಸ್ಥಾಯಿ ಸಮಿತಿ ಅಧ್ಯಕ್ಷ ಘೋಷಣೆ ಮಾಡಲಾಗುವುದು ಎಂದರು. ಇದಕ್ಕೂ ಮುಂಚೆ ಸಚಿವರು ಬೂದಗುಂಪ ರಸ್ತೆ ಅಗಲಿಕರಣಕ್ಕೆ ತಾವೇ ಖುದ್ದು ರಸ್ತೆಯದ್ದಕ್ಕೂ ಅಧಿಕಾರಿಗಳೊಂದಿಗೆ ಸಂಚರಿಸಿ ವೀಕ್ಷಣೆ ಮಾಡಿ ಆಕ್ರಮಿತ ರಸ್ತೆ ತೆರವುಗೊಳಿಸಲು ಅಧಿಕಾರಿಗಳಿಗೆ ಖಡಕ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಶರಣೆಗೌಡ ಪೊ.ಪಾಟೀಲ್, ರುದ್ರಗೌಡ ನಂದಿಹಳ್ಳಿ, ಕೆ.ಶಿದ್ಧನಗೌಡ, ಶೀಧರಗೌಡ ಮಾ.ಪಾ. ಶಿವರೆಡ್ಡಿ ನಾಯಕ, ಶರಣೆ ಗೌಡ ಕೊಂತನೂರ, ವಿಜಯಕುಮಾರ ಕೊಲ್ಕಾರ, ರೆಡ್ಡಿಶ್ರೀನಿವಾಸ್, ನಾಗರಾಜ ಅರಳಿ, ಶರಣಪ್ಪ ಪರಕಿ, ಅಯ್ಯಪ್ಪ ಉಪ್ಪಾರ, ಉದಯ ಈಡಿಗೇರ, ಲೋಕೋಪಯೋಗಿ ಇಲಾಖೆ ಅಭಿಯಂತರ ವಿಶ್ವನಾಥ ಜೆ, ಈಶಪ್ಪ ಇಟ್ಟಂಗಿ, ದೊಡ್ಡಬಸಮಾಜ ಬೂದಿ. ಶರಣಪ್ಪ ಸಂಗಟಿ, ಚಂದ್ರು ನಾಗೇನಹಳ್ಳಿ ಶರಣಪ್ಪ ಹೂಗಾರ, ನಾಗರಾಜ ಈಡಿಗೇರ, ಅರ್ಚಕ ನಾಗಭೂಷಣ ಸ್ವಾಮಿ, ಶಿವಕುಮಾರ ಭಜಾರ್, ಸಾಗರ್ ಕುಲಕರ್ಣಿ, ಸೇರಿದಂತೆ ಪಕ್ಷದ ಮತ್ತಿತರರು ಇದ್ದರು.4
- Post by User52941
- ಚಿತ್ರದುರ್ಗ ಕಾತ್ರಾಳ್ ಕೆರೆ ಬಳಿ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ.. ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಘಟನೆ ನೀರು ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಟ್ಯಾಂಕರ್ ಲಾರಿಯ ಚಕ್ರಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ಮಿ ಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ . ಅದೃಷ್ಟವಶಾತ್ ಟ್ಯಾಂಕರ್ ನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..1