Shuru
Apke Nagar Ki App…
ದೇವನಹಳ್ಳಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ. ಚಾಲಕನ ಸೀಟ್ ಬೆಂಡ್ ಮಾಡಿ ಮಲಗಿರುವ ಸ್ಥಿತಿಯಲ್ಲಿ ಶವಪತ್ತೆ. ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪ ಬಳಿ ಘಟನೆ. ಬೆಳಗ್ಗೆಯಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಮಲಗಿದ್ದ ವ್ಯಕ್ತಿ. ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಮೇಲೆಳದ ಕಾರಣ ಎಬ್ಬಿಸಲು ಮುಂದಾಗಿದ್ದ ಸ್ಥಳೀಯರು. ಡೋರ್ ಹೊಡೆದರು ಎಚ್ಚರವಾಗದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸ್ಥಳೀಯರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕಾರಿನಲ್ಲೆ ಸಾವನ್ನಪ್ಪಿರುವುದು ಬೆಳಕಿಗೆ. ಮೆಲ್ನೋಟಕ್ಕೆ ಹೃದಯಾಘಾತದಿಂದ ಸಾವನ್ನಪಿರುವ ಶಂಕೆ. ವ್ಯಕ್ತಿಯ ಜೇಬಿನಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ತಾಳಹಳ್ಳಿ ದಾಖಲೆಗಳು ಪತ್ತೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಘಟನೆ.
Gangaraju N Vistara News Reporter
ದೇವನಹಳ್ಳಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ. ಚಾಲಕನ ಸೀಟ್ ಬೆಂಡ್ ಮಾಡಿ ಮಲಗಿರುವ ಸ್ಥಿತಿಯಲ್ಲಿ ಶವಪತ್ತೆ. ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪ ಬಳಿ ಘಟನೆ. ಬೆಳಗ್ಗೆಯಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಮಲಗಿದ್ದ ವ್ಯಕ್ತಿ. ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಮೇಲೆಳದ ಕಾರಣ ಎಬ್ಬಿಸಲು ಮುಂದಾಗಿದ್ದ ಸ್ಥಳೀಯರು. ಡೋರ್ ಹೊಡೆದರು ಎಚ್ಚರವಾಗದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸ್ಥಳೀಯರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕಾರಿನಲ್ಲೆ ಸಾವನ್ನಪ್ಪಿರುವುದು ಬೆಳಕಿಗೆ. ಮೆಲ್ನೋಟಕ್ಕೆ ಹೃದಯಾಘಾತದಿಂದ ಸಾವನ್ನಪಿರುವ ಶಂಕೆ. ವ್ಯಕ್ತಿಯ ಜೇಬಿನಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ತಾಳಹಳ್ಳಿ ದಾಖಲೆಗಳು ಪತ್ತೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಘಟನೆ.
More news from Chikkaballapura and nearby areas
- ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್ಐ ಶ್ಯಾಮಲಾ ರವರಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ1
- ಹನೂರು: ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಉಂಟಾಗಿ, ಪೊಲೀಸ್ ಪೇದೆಯೊಬ್ಬರ ಪುತ್ರನಿಂದ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾದ ಘಟನೆ ಖಂಡಿಸಿ, ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಡಕಟ್ಟು ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಲೋಕನಹಳ್ಳಿ ಹೋಬಳಿಯ ಬೂದಿಪಡಗ ಗ್ರಾಮದಲ್ಲಿ ಕಳೆದ ಎರಡು–ಮೂರು ವರ್ಷಗಳಿಂದ ಅಕ್ರಮವಾಗಿ ಸಾರಾಯಿ ಮಾರಾಟ ನಡೆಯುತ್ತಿದೆ ಎನ್ನಲಾಗಿದ್ದು, ಇದರಿಂದ ಗ್ರಾಮದಲ್ಲಿ ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಹಾಗೂ ವಿವಿಧ ಸಮುದಾಯದ ಯಜಮಾನರು ಸಭೆ ನಡೆಸಿ, ಅಕ್ರಮ ಮದ್ಯ ಮಾರಾಟ ಮಾಡುವವರಿಗೆ ಎಚ್ಚರಿಕೆ ನೀಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ತೀಟೆ ಜಗಳದ ವೇಳೆ, ಬೂದಿಪಡಗ ಗ್ರಾಮದ ಪೊಲೀಸ್ ಪೇದೆಯೊಬ್ಬರ ಪುತ್ರ ಕಿಶೋರ್ ಎಂಬಾತನು, ಗ್ರಾಮದ ಮುಖಂಡ, ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮನೆಗೆ ನುಗ್ಗಿ ಗಲಾಟೆ ನಡೆಸಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ರಂಗೇಗೌಡ ಅವರು ಹನೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದರು. ಆದರೆ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆ ಬೇಸತ್ತ ಬುಡಕಟ್ಟು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಬುಡಕಟ್ಟು ಕಾರ್ಯದರ್ಶಿ ಮಾದೇಗೌಡ, ಆಧಿವಾಡಿ ಪೋಡುಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಿ, ನಮ್ಮ ಅದ್ಯಕ್ಷರ ಮೇಲೆ ಹಲ್ಲೆ ನಡೆಸಿದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರ ಕುಟುಂಬದವರಿಂದಲೇ ಕಾನೂನು ಉಲ್ಲಂಘನೆ ನಡೆಯುತ್ತಿರುವುದು ಖಂಡನೀಯ ಎಂದು ಹೇಳಿದರು.1
- *ಭಾರತ ನಲ್ಲಿ ವೈರಲ್*1
- ಸ್ಮಶಾನಕ್ಕೆ ರಸ್ತೆ ಕಲ್ಪಿಸಿ ಕೊಡದಿದ್ದರೆ ಉಗ್ರ ಹೋರಾಟ - ಗ್ರಾಮರಸ್ಥರು ಎಚ್ಚರಿಕೆ. ಹನೂರು: ತಾಲೂಕಿನ ಭೈರನತ್ತ ಗ್ರಾಮದ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಸ್ಮಶಾನಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವ ರಸ್ತೆ ತೆರವು ಮಾಡದಿದ್ದರೆ ತಾಲೂಕು ಮಾದಿಗ ಸಮುದಾಯದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದರು. ತಾಲ್ಲೂಕಿನ ಭೈರನತ್ತ ಗ್ರಾಮದ ಪರಿಶಿಷ್ಟ ಜಾತಿ ಮಾದಿಗ ಸಮುದಾಯದ ಸ್ಮಶಾನಕ್ಕೆ ತೆರಳುವ ರಸ್ತೆಯನ್ನು ಇದೇ ಗ್ರಾಮದ ಲೋಕೇಶ್ ಎಂಬವರು ಒತ್ತುವರಿ ಮಾಡಿಕೊಂಡಿದ್ದರು. ಈ ಸಂಬಂಧ ಒತ್ತುವರಿಯನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಸಂಬಂಧ ತಹಶೀಲ್ದಾರ್ ಕೆಎಸ್ ಚೈತ್ರ ರವರ ಸಮ್ಮುಖದಲ್ಲಿ ಸರ್ವೆ ಅಧಿಕಾರಿಗಳು ಸ್ಥಳಕ್ಕೆ ಬಂದು ಸರ್ವೆಮಾಡಿದರು. ಆ ಪ್ರಕಾರ ಹಿಂದೆ ಇದ್ದ ರೂಢಿಗತ ದಾರಿಯು ಖಾಸಗಿ ವ್ಯಕ್ತಿಗೆ ಸೇರಿದ ಪಟ್ಟಾ ಭೂಮಿಯಾಗಿದೆ. ಅದರ ಪಕ್ಕದಲ್ಲಿರುವ ಹಳ್ಳದಲ್ಲಿ ನಿಮಗೆ ದಾರಿ ಬಿಡಿಸಬೇಕು ಎಂದು ಭೂಮಾಪನ ಇಲಾಖೆ ಅಧಿಕಾರಿ ನಟರಾಜು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಅರಿತ ತಹಶೀಲ್ದಾರ್ ರವರು ಗ್ರಾಮಸ್ಥರು ಧೃತಿಗೆಡಬೇಡಿ. ನಿಮಗೆ ರಸ್ತೆ ಕಲ್ಪಿಸಿಕೊಡುವ ಜವಾಬ್ದಾರಿ ನಮ್ಮದು. ಒಂದು ವಾರ ಗಡುವು ನೀಡಿ, ಜಮೀನು ಮಾಲೀಕರ ಜೊತೆ ಮಾತನಾಡಿ ರಸ್ತೆಗೆ ಅಗತ್ಯವಾಗಿರುವ ಜಾಗ ಬಿಡಿಸಲು ಮನವೊಲಿಸಲಾಗುವುದು ಎಂದು ಭರವಸೆ ನೀಡಿದರು.4
- ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು ಸ್ವಾಮಿ ಅಯ್ಯಪ್ಪ ಭಕ್ತರು ಸಾವು ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.1
- ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ1
- ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.1
- ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಏಳು ಅಂಗಡಿಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬಿಳಿಗಿರಿರಂಗನ ಬೆಟ್ಟದ ಸರ್ಕಲ್ ಪ್ರದೇಶದಲ್ಲಿರುವ ಅಂಗಡಿಗಳಿಗೆ ಈ ಬೆಂಕಿ ವ್ಯಾಪಿಸಿದ್ದು, ಏಳು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಅಂಗಡಿಗಳಲ್ಲಿ ಅನಿಲ ಸಿಲಿಂಡರ್ಗಳು ಇದ್ದ ಕಾರಣ ಬೆಂಕಿಯನ್ನು ತಕ್ಷಣ ನಂದಿಸಲು ಸಾಧ್ಯವಾಗಲಿಲ್ಲ. ಜೊತೆಗೆ ರಾತ್ರಿ ಸಮಯದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವಿದ್ದರಿಂದ ನೀರು ತರಲು ಸಾಧ್ಯವಾಗದೆ, ಬೆಂಕಿ ಇನ್ನಷ್ಟು ವ್ಯಾಪಿಸಲು ಕಾರಣವಾಯಿತು. ಬೆಂಕಿಯ ಕೆನ್ನಾಲಿಗೆಗೆ ಅಂಗಡಿಗಳಲ್ಲಿದ್ದ ಎಲ್ಲಾ ವಸ್ತುಗಳು ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.2